Rakshit Shetty: ರಕ್ಷಿತ್‌ ಶೆಟ್ಟಿ ಅಭಿನಯ, ಸಿನಿಮಾವನ್ನು ಹಾಡಿ ಹೊಗಳಿದ ಕಿಚ್ಚ ಸುದೀಪ್‌! - Vistara News

South Cinema

Rakshit Shetty: ರಕ್ಷಿತ್‌ ಶೆಟ್ಟಿ ಅಭಿನಯ, ಸಿನಿಮಾವನ್ನು ಹಾಡಿ ಹೊಗಳಿದ ಕಿಚ್ಚ ಸುದೀಪ್‌!

Rakshit Shetty: ವಿಶೇಷ ಅಂದರೆ ಈ ಬಾರಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಿದೆ. ಕಿಚ್ಚ ಸುದೀಪ್‌ ಕೂಡ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

VISTARANEWS.COM


on

Kichcha Sudeep praised Rakshit Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ (Rakshit Shetty) ಹಾಗೂ ರುಕ್ಮಿಣಿ ವಸಂತ್‌ (rukmini vasanth) ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ (SSE SideB Twitter Review) ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಸಕ್ಸೆಸ್ ಕಂಡಿದೆ. ಪ್ರೇಕ್ಷಕರು ಭಾಗ 2ಕ್ಕೆ ಕಾಯುತ್ತಿದ್ದರು. ಸಿನಿಮಾ ನವೆಂಬರ್‌ 17ರಂದು ರಿಲೀಸ್‌ ಆಗಿದೆ. ವಿಶೇಷ ಅಂದರೆ ಈ ಬಾರಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಿದೆ. ಮಾತ್ರವಲ್ಲ ಸಿನಿಮಾಗೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್‌ ಕೂಡ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

ಕಿಚ್ಚ ಸುದೀಪ್‌ ಅವರು ಟ್ವೀಟ್‌ ಮಾಡಿ ʻʻರಕ್ಷಿತ್‌ ಶೆಟ್ಟಿ ಅವರು ಈ ಸಿನಿಮಾಗೆ ಮಾಡಿದ ಪ್ರಯತ್ನ ಅಮೋಘ. ಇಂತಹ ಒಂದು ಗಮನಾರ್ಹವಾದ ಸಿನಿಮಾವನ್ನು ಅನುಭವಿಸಲು ನಿಜವಾಗಿಯೂ ತುಂಬಾ ಸಂತೋಷವಾಗಿದೆ. ನಿಮ್ಮೆಲ್ಲರಿಗೂ ಶುಭಾಶಯಗಳು. ಅತ್ಯುತ್ತಮ ಪ್ರದರ್ಶನ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಛಾಯಾಗ್ರಹಣ. ಈ ತರಹದ ಸಿನಿಮಾ ಮಾಡುವ ಧೈರ್ಯ ಮಾಡಿದ್ದಕ್ಕಾಗಿ ನಿಮ್ಮ ಮೇಲೆ ಗೌರವ ಹೆಚ್ಚಾಗಿದೆ. ಹೇಮಂತ್ ಒಬ್ಬ ಒಳ್ಳೆಯ ತಂತ್ರಜ್ಞ ಮತ್ತು ಅದ್ಭುತ ದೃಷ್ಟಿಕೋನ ಹೊಂದಿರುವ ವ್ಯಕ್ತಿ. ನಿಮ್ಮ ತಂಡದ ಮೇಲೆ ತುಂಬಾ ಹೆಮ್ಮೆ ಇದೆʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rakshit Shetty: ನ.4ರಂದು ಸಪ್ತ ಸಾಗರದಾಚೆ ಎಲ್ಲೋʼ ಭಾಗ 2 ಟ್ರೈಲರ್‌ ಬಿಡುಗಡೆ!

ರಕ್ಷಿತ್‌ ಶೆಟ್ಟಿ ಟ್ವೀಟ್‌

ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸ್ವತಃ ರಕ್ಷಿತ್ ಶೆಟ್ಟಿ. ಸೈಡ್- A ಬಹಳ ಕಾಡುತ್ತದೆ ಎನ್ನುವವರಿಗೆ ಸೈಡ್- B ಇನ್ನಷ್ಟು ಕಾಡುತ್ತದೆ. ಹೇಮಂತ್ ರಾವ್ ಮೇಕಿಂಗ್, ನಿರೂಪಣೆ ಹಾಗೂ ಅದನ್ನು ಕಟ್ಟಿಕೊಟ್ಟಿರುವ ಬಗೆ ಅದ್ಭುತ. ನೀವು ಸಿನಿಮಾ ಪ್ರೇಮಿಗಳಾಗಿದ್ದರೆ ಸಿನಿಮಾ ನೋಡಿ ಖುಷಿ ಪಡುತ್ತೀರಿ. ಅದು BGM ಆಗಿರಲಿ, ನಟನೆ ಇರಲಿ, ದೃಶ್ಯರೂಪಕ್ಕೆ ಇಳಿಸಿರುವ ಬಗೆ ಇರಲಿ ಪ್ರತಿಯೊಂದರಲ್ಲೂ ಸೈಡ್‌- B ಚೆನ್ನಾಗಿದೆ. ಚೈತ್ರಾ ಆಚಾರ್ ‘ಟೋಬಿ’ ಚಿತ್ರದಲ್ಲಿ ನಿಮ್ಮ ನಟನೆ ಮೆಚ್ಚಿದ್ದೆ. ಈ ಸಿನಿಮಾ ನೋಡಿದ ಮೇಲೆ ನಿಮ್ ಅಭಿಮಾನಿ ಆಗಿಬಿಟ್ಟೆ. ಎಂದಿನಂತೆ ರಕ್ಷಿತ್, ರುಕ್ಮಿಣಿ ತಮ್ಮ ತಮ್ಮ ಪಾತ್ರಗಳನ್ನು ಸೊಗಸಾಗಿ ನಿಭಾಯಿಸಿದ್ದಾರೆ. ಫಸ್ಟ್ ಹಾಫ್ ಎಂಜಾಯ್‌ ಮಾಡುವಂತಿದೆ. ಸೆಕೆಂಡ್ ಹಾಫ್ ಭಾವನಾತ್ಮಕವಾಗಿದೆ” ಎಂದು ಅಭಿಮಾನಿಯೊಬ್ಬರು ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಕ್ಷೀಣಿಸುತ್ತಿರುವ ಬಾಕ್ಸ್ ಆಫೀಸ್ ಆದಾಯದ ನಡುವೆ, ಐಪಿಎಲ್ ಮತ್ತು ಸಾರ್ವತ್ರಿಕ ಚುನಾವಣೆಗಳಿಂದ ಟಾಲಿವುಡ್ ನಲ್ಲಿ ಯಾವುದೇ ಚಲನಚಿತ್ರ ತೆರೆಗೆ ಬಂದಿಲ್ಲ. ಹೀಗಾಗಿ ನಷ್ಟದ ಹಾದಿಯನ್ನು ಸರಿಪಡಿಸಿಕೊಳ್ಳಲು ತೆಲಂಗಾಣದಲ್ಲಿ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು (Single Screen Theaters) ಹತ್ತು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ.

VISTARANEWS.COM


on

By

Single Screen Theaters
Koo

ಪ್ರಮುಖ ಚಲನಚಿತ್ರಗಳ ಬಿಡುಗಡೆ (movie releases) ಕೊರತೆಯಿಂದಾಗಿ ತೆಲಂಗಾಣದಾದ್ಯಂತ (Telangana) ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು (Single Screen Theaters) 10 ದಿನಗಳ ಕಾಲ ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ ಇಲ್ಲದಿರುವ ಪರಿಣಾಮ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಯಾವುದೇ ದೊಡ್ಡ ಬಜೆಟ್ ನ ಚಿತ್ರಗಳು ಬಾರದೇ ಇರುವುದರಿಂದ ಥಿಯೇಟರ್ ಗಳನ್ನು ಮುಚ್ಚುತ್ತಿರುವುದಾಗಿ ಥಿಯೇಟರ್ ಮಾಲೀಕರು ಉಲ್ಲೇಖಿಸಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸಲು ಯಾವುದೇ ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಚಲನಚಿತ್ರ ಪ್ರದರ್ಶನ ಕಾರ್ಯಾಚರಣೆಯ ವೆಚ್ಚ ಮತ್ತು ಕಡಿಮೆಯಾದ ಆದಾಯ ಸೇರಿದಂತೆ ಹಣಕಾಸಿನ ಸವಾಲುಗಳ ನಡುವೆ 2024ರ ಸಂಕ್ರಾಂತಿ ನಂತರ ಯಾವುದೇ ದೊಡ್ಡ ಚಿತ್ರಗಳು ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಲಿಲ್ಲ.

ಏನು ಕಾರಣ?

ಕಳೆದ ಕೆಲವು ವಾರಗಳಲ್ಲಿ ತೆಲಂಗಾಣದಲ್ಲಿ ಚಲನಚಿತ್ರ ವ್ಯಾಪಾರಿಗಳು ಮೇ 17ರಿಂದ ಥಿಯೇಟರ್ ಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡರು. ಒಂದೆಡೆ ಲೋಕ ಸಭಾ ಚುನಾವಣೆ, ಇನ್ನೊಂದೆಡೆ ದೊಡ್ಡ ಚಿತ್ರಗಳ ಬಿಡುಗಡೆಗಳ ಕೊರತೆ, ಇಂಡಿಯನ್ ಪ್ರೀಮಿಯರ್ ಲೀಗ್ ಗಳು ತೆಲಂಗಾಣ ಮತ್ತು ಆಂಧ್ರಪ್ರದೇಶದಾದ್ಯಂತ ಥಿಯೇಟರ್‌ಗಳ ಮೇಲೆ ಭಾರಿ ಪ್ರಭಾವವನ್ನು ಬೀರಿದೆ.

ಮತ್ತೆ ತೆರೆಯುವ ನಿರೀಕ್ಷೆ

ಮೇ 31 ರಂದು ವಿಶ್ವಕ್ ಸೇನ್ ಅವರ ‘ಗ್ಯಾಂಗ್ಸ್ ಆಫ್ ಗೋದಾವರಿ’ಗಾಗಿ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಮತ್ತೆ ತೆರೆಯಲ್ಪಡುತ್ತವೆ. ಅಲ್ಲದೆ ಅನೇಕ ಥಿಯೇಟರ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ‘ಕಲ್ಕಿ’ಯಂತಹ ದೊಡ್ಡ-ಬಜೆಟ್ ಚಿತ್ರಗಳ ಮೇಲೆ ಭರವಸೆ ಇಡುತ್ತಿವೆ. 2898 AD’, ‘ಪುಷ್ಪ: ದಿ ರೂಲ್’, ‘ಗೇಮ್ ಚೇಂಜರ್’, ‘ವಿಶ್ವಂಭರ’ ಮತ್ತು ‘ಇಂಡಿಯನ್ 2’ ಸೇರಿದಂತೆ ಈ ಬಾರಿ ಹಲವು ಚಿತ್ರಗಳು ತೆರೆಗೆ ಬರುವ ನಿರೀಕ್ಷೆಯಲ್ಲಿದೆ.

ಹತ್ತು ದಿನ ಬಂದ್

ತೆಲಂಗಾಣದಲ್ಲಿ ಚಲನಚಿತ್ರ ವ್ಯವಹಾರವು ಕೆಲವು ಅಭೂತಪೂರ್ವ ಸವಾಲುಗಳನ್ನು ಎದುರಿಸುತ್ತಿದೆ. ಇದು ರಾಜ್ಯದ ಮನರಂಜನಾ ವಲಯದಾದ್ಯಂತ ತಲ್ಲಣ ಉಂಟು ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಆದಾಯ ಕಡಿಮೆಯಾಗುತ್ತಿರುವ ಕಾರಣ ತೆಲಂಗಾಣದಾದ್ಯಂತ ಹಲವಾರು ಏಕ-ಪರದೆಯ ಚಿತ್ರಮಂದಿರಗಳು ಮೇ 17ರಿಂದ ಮೇ 26ರವರೆಗೆ ಹತ್ತು ದಿನಗಳ ಕಾಲ ಬಾಗಿಲು ಮುಚ್ಚಲು ಯೋಜಿಸಿದೆ.

ಈ ಬಾರಿ ಬೇಸಿಗೆಯಲ್ಲಿ ಪ್ರಮುಖ ಚಲನಚಿತ್ರ ಬಿಡುಗಡೆಯಾಗಿಲ್ಲ. ಸಾಮಾನ್ಯವಾಗಿ ಈ ಸಂದರ್ಭದಲ್ಲಿ ದೊಡ್ಡ ಜನಸಮೂಹವನ್ನು ಸೆಳೆಯುವ ಬ್ಲಾಕ್‌ಬಸ್ಟರ್ ಹಿಟ್‌ ಚಿತ್ರಗಳು ತೆರೆಗೆ ಬರುತ್ತದೆ. ಆದರೆ ಈ ಬಾರಿ ಯಾವುದೇ ಅಂತಹ ಚಿತ್ರಗಳು ಬಂದಿಲ್ಲ. ಇದು ಸಿಂಗಲ್ ಸ್ಕ್ರೀನ್‌ಗಳ ಮೇಲೆ ಗಂಭೀರ ಪರಿಣಾಮವನ್ನೇ ಬೀರಿದೆ.

ಇದನ್ನೂ ಓದಿ: Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

ಥಿಯೇಟರ್‌ಗಳು ತಮ್ಮ ಆದಾಯವನ್ನು ಸಂಗ್ರಹಿಸಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತದೆ. ಚಲನಚಿತ್ರದ ವೇಳಾಪಟ್ಟಿ ಮತ್ತು ಪ್ರೇಕ್ಷಕರ ಸಂಖ್ಯೆಯಲ್ಲಿನ ಏರಿಳಿತಗಳಿಗೆ ಹೆಚ್ಚು ಗುರಿಯಾಗುತ್ತವೆ. ಕಳೆದ ಎರಡು ತಿಂಗಳುಗಳಲ್ಲಿ ಸಣ್ಣ ಮತ್ತು ಮಧ್ಯಮ-ಬಜೆಟ್ ಚಲನಚಿತ್ರಗಳ ಸರಣಿಯು ಛಾಪು ಮೂಡಿಸುವಲ್ಲಿ ವಿಫಲವಾಗಿದೆ. ಇದರಿಂದ ಚಿತ್ರೋದ್ಯಮ ವ್ಯಾಪಾರವನ್ನು ಮತ್ತಷ್ಟು ತಗ್ಗಿದೆ.

ನಷ್ಟ ತಡೆಗೆ ಕ್ರಮ

ತೆಲಂಗಾಣ ಥಿಯೇಟರ್ಸ್ ಅಸೋಸಿಯೇಷನ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತಷ್ಟು ನಷ್ಟವನ್ನು ತಡೆಯಲು ತಡೆಗಟ್ಟಲು ನಿರ್ಧರಿಸಿದೆ.

Continue Reading

ಪ್ರಮುಖ ಸುದ್ದಿ

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

Pushpa 2: ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

VISTARANEWS.COM


on

Pushpa 2
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪಾ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳ ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೇಟ್ ಸಂಬಂಧಿತ ಸಮಸ್ಯೆಗಳಿಂದಾಗಿ ಎಡಿಟರ್​ ಆಂಟನಿ ರೂಬೆನ್ ಪುಷ್ಪಾ 2 ಬಳಗ ತೊರೆದಿದ್ದಾರೆ ಎಂಬ ಸುದ್ದಿಹರಡಿತ್ತು ಎಂದು ಪೀಪಿಂಗ್ ಮೂನ್ ಇತ್ತೀಚೆಗೆ ವರದಿ ಮಾಡಿದೆ. ಹೀಗಾಗಿ ಚಿತ್ರದ ಸಂಕಲನ ಕಾರ್ಯವನ್ನು ಪೂರ್ಣಗೊಳಿಸಲು ನವೀನ್ ನೂಲಿ ಅವರನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿ ಪುಷ್ಪ 2 ಬಿಡುಗಡೆ ವಿಳಂಬಕ್ಕೆ ಕಾರಣವಾಗಬಹುದೇ ಎಂದು ಅನುಮಾನ ಎದ್ದಿದ್ದವು.

ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ರಶ್ಮಿಕಾ ಅವರು ಬಹುನಿರೀಕ್ಷಿತ ಚಿತ್ರದ ಬಗ್ಗೆ ಮಾತನಾಡುವುದಾದರೆ. ಇದು ಎಂದಿಗಿಂತಲೂ ಭರವಸೆಯ ಸಿನಿಮಾವಾಗಿದೆ. “ಪುಷ್ಪಾ 2 ತುಂಬಾ ದೊಡ್ಡ ಸಿನಿಮಾವಾಗಲಿದೆ. ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ಮೊದಲ ಚಿತ್ರದಲ್ಲಿ ನಾವು ಸ್ವಲ್ಪ ವಿಶೇಷವಾದದನ್ನು ನೀಡಿದ್ದೇವೆ. ಭಾಗ 2 ರಲ್ಲಿ, ನಮಗೆ ಜವಾಬ್ದಾರಿ ಹೆಚ್ಚಿದೆ ಎಂದೂ ನಮಗೆ ತಿಳಿದಿದೆ ಏಕೆಂದರೆ ಜನರು ಚಿತ್ರದ ಬಗ್ಗೆ ತುಂಬಾ ನಿರೀಕ್ಷೆ ಹೊಂದಿದ್ದಾರೆ. ನಾವು ಅದನ್ನು ತಲುಪಿಸಲು ನಿರಂತರವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಪಿಂಕ್​ವಿಲ್ಲಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು. ಇದಕ್ಕೂ ಮೊದಲು, ಸಿಯಾಸತ್​​ನ ಮತ್ತೊಂದು ವರದಿಯು ಎಲ್ಲಾ ಭಾಷೆಗಳ ಹಕ್ಕುಗಳ ಒಪ್ಪಂದಕ್ಕಾಗಿ ತಯಾರಕರು 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬೇಡಿಕೆ ಬಂದಿದೆ. ಈ ಚಿತ್ರವು ಎಸ್.ಎಸ್.ರಾಜಮೌಳಿ ಅವರ ಆರ್​ಆರ್​ಆರ್​ ಮೀರಿಸುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Continue Reading

ಸ್ಯಾಂಡಲ್ ವುಡ್

Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

Kiccha Sudeep ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ ಕಿಚ್ಚ. ಇದೀಗ ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮ್ಯಾಕ್ಸ್‌ನ 10 ತಿಂಗಳ ಸುದೀರ್ಘ ಪ್ರಯಾಣ ಅಂತ್ಯವಾಗಿದೆ ಎಂದು ವಿಡಿಯೊ ಮೂಲಕ ಶೇರ್‌ ಮಾಡಿಕೊಂಡಿದ್ದಾರೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Kiccha Sudeep Max Cinema shooting completed
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ‘ಮ್ಯಾಕ್ಸ್’ ಬಗ್ಗೆ ಏನಾದರೂ ಅಪ್‌ಡೇಟ್ ಕೊಡ್ತಾರ ಎಂದು ಕಿಚ್ಚ ಫ್ಯಾನ್ಸ್‌ ಕಾದಿದ್ದರು. ಇದೀಗ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ ಕಿಚ್ಚ. ಇದೀಗ ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮ್ಯಾಕ್ಸ್‌ನ 10 ತಿಂಗಳ ಸುದೀರ್ಘ ಪ್ರಯಾಣ ಅಂತ್ಯವಾಗಿದೆ ಎಂದು ವಿಡಿಯೊ ಮೂಲಕ ಶೇರ್‌ ಮಾಡಿಕೊಂಡಿದ್ದಾರೆ.

ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

A Movie Re-Release: “A” ಸಿನಿಮಾ ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

VISTARANEWS.COM


on

A Movie Re-ReleaseActress Chandni relives memories
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ. ಉಪೇಂದ್ರ (A Movie Re-Release) ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024ರ ಮೇ 17ರಂದು (ಶುಕ್ರವಾರದಂದು) “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದಿನಿ (Actress Chandini ) ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

ವರ್ಣಿಸಲು ಪದಗಳೇ ಇಲ್ಲ‌

ನಾಯಕಿ ಚಾಂದಿನಿ “A” ಸಿನಿಮಾದಲ್ಲಿ ಹೇಗಿದ್ದರೋ, ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ “GOD IS GREAT” ಅನ್ನುವ ಹಾಗೆ, ಈ ಎರೆಡರ ಆಶೀರ್ವಾದದಿಂದ ನಾನು ಇವತ್ತಿಗೂ “A” ಚಾಂದಿನಿ ರೀತಿಯಲ್ಲೆ ಇದ್ದೀನಿ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಎನ್ನುತ್ತಾರೆ ನಾಯಕಿ.

ಇದನ್ನೂ ಓದಿ: Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

ʻʻನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ‌. ಅಂದಿಗು ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಉಪೇಂದ್ರ ಅವರು. ಗುರುಕಿರಣ್ ಅವರ ಸಂಗೀತದಲ್ಲಿ ಮೂಡಿಬಂದಿರುವ “A” ಚಿತ್ರದ ಹಾಡುಗಳು ಈಗಲೂ ಜನಪ್ರಿಯ. ಕನ್ನಡಿಗರು “A” ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರ ಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಮೇ 17 ಚಿತ್ರ ರೀ ರಿಲೀಸ್ ಆಗುತ್ತಿದೆ. ಈಗಲೂ ಭರ್ಜರಿ ಯಶಸ್ಸು ಕಾಣಲಿದೆ ಎಂದು ತಿಳಿಸಿದ ನಾಯಕಿ ಚಾಂದಿನಿ, ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆʼʼಎಂದಿದ್ದಾರೆ.

ತನ್ನ ವಿಭಿನ್ನ ಶೀರ್ಷಿಕೆಯಿಂದಲೇ ಆ ಕಾಲದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಚಿತ್ರ ʼಎʼ. ಅದುವರೆಗೆ ನಿರ್ದೇಶಕನಾಗಿ ಹಾಗೂ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಪೇಂದ್ರ ಈ ಚಿತ್ರದ ಮೂಲಕ ನಾಯಕನಾಗಿಯೂ ಪರಿಚಿತರಾದರು. ವಿಭಿನ್ನ ಕಥಾ ಹಂದರ, ಮೇಕಿಂಗ್‌ ಶೈಲಿಯಿಂದ ಈ ಚಿತ್ರ ನೋಡುಗರನ್ನು ಆಕರ್ಷಿಸಿತ್ತು. ನಾಯಕಿಯಾಗಿ ಚಾಂದಿನಿ ಕಾಣಿಸಿಕೊಂಡ ಈ ಸಿನಿಮಾ ಸಾಂಪ್ರದಾಯಿಕ ಕಟ್ಟು-ಕಟ್ಟಳೆಗಳನ್ನು ಮುರಿದು ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು.

ಹಿಟ್‌ ಚಿತ್ರ

ಒಬ್ಬ ನಿರ್ದೇಶಕ ಹಾಗೂ ನಾಯಕಿಯ ನಡುವಿನ ಪ್ರೇಮಕಥೆಯನ್ನೆ ಈ ಚಿತ್ರ ಆಧರಿಸಿತ್ತು. ಆದರೆ ಅದನ್ನೇ ಉಪೇಂದ್ರ ವಿಭಿನ್ನವಾಗಿ ತೆರೆ ಮೇಲೆ ತಂದಿದ್ದರು. ಎಲ್ಲವನ್ನೂ ರಿವರ್ಸ್ ಸ್ಕ್ರೀನ್ ಪ್ಲೇಯಲ್ಲಿ ಉಪೇಂದ್ರ ಹೇಳಿದ್ದರು. ಈ ಪ್ರಯೋಗವನ್ನು ವೀಕ್ಷಕರೂ ಮೆಚ್ಚಿಕೊಂಡಿದ್ದರು. ಆ ಮೂಲಕ ಉಪೇಂದ್ರ ಎಂಬ ನಿರ್ದೇಶಕ ಮತ್ತು ನಟ ಗೆಲುವು ಸಾಧಿಸಿದ್ದರು. ಪರಿಣಾಮ ಸೂಪರ್‌ ಚಿತ್ರ ಹಿಟ್‌ ಆಗಿತ್ತು. ಜತೆಗೆ ಸಂಭಾಷಣೆಯೂ ಮೆಚ್ಚುಗೆ ಗಳಿಸಿತ್ತು.

ಮೋಡಿ ಮಾಡಿದ ಸಂಗೀತ

ಚಿತ್ರದ ಯಶಸ್ಸಿನಲ್ಲಿ ಸಂಗೀತದ ಪಾತ್ರವೂ ಮುಖ್ಯವಾಗಿತ್ತು. ಸಿನಿಮಾದ ಹಾಡುಗಳು ಇಂದಿಗೂ ಜನಪ್ರಿಯ. ವಿಶೇಷ ಎಂದರೆ ಗುರು ಕಿರಣ್‌ ʼಎʼ ಸಿನಿಮಾದ ಮೂಲಕ ಮೊದಲ ಬಾರಿ ಸಂಗೀತ ಸಂಯೋಜನೆ ಮಾಡಿದ್ದರು. ಮೊದಲ ಸಿನಿಮಾದಲ್ಲೇ ಸಿಕ್ಸರ್‌ ಭಾರಿಸಿದ್ದರು. ʼಸುಮ್‌ ಸುಮ್ನೆʼ, ʼಚಾಂದಿನಿʼ, ʼಹೇಳ್‌ಕೊಳ್ಳೊಕೆ ಒಂದೂರುʼ, ʼಇದು ಒನ್‌ ಡೇ ಮ್ಯಾಚ್‌ʼ, ʼಮಾರಿ ಕಣ್ಣುʼ ಹೀಗೆ ಸಿನಿಮಾದ ಎಲ್ಲ ಹಾಡುಗಳೂ ಹಿಟ್‌ ಆಗಿದ್ದವು. ಇಂದಿಗೂ ಈ ಹಾಡುಗಳನ್ನು ಸಿನಿ ಪ್ರೇಮಿಗಳು ಗುನುಗುತ್ತಿರುತ್ತಾರೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಸಿನಿಮಾ ಸುಮಾರು 20 ಕೋಟಿ ರೂ. ಗಳಿಸಿತ್ತು ಎನ್ನಲಾಗಿದೆ.

ಈ ಮಧ್ಯೆ ಹಲವು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವ ʼಯುಐʼ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ ʼಟ್ರೋಲ್‌ ಆಗುತ್ತೆʼ ಹಾಡು ಸೂಪರ್‌ ಹಿಟ್‌ ಆಗಿದ್ದು, ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿಯೂ ʼಯುಐʼ ತೆರೆಗೆ ಬರಲಿದೆ.

Continue Reading
Advertisement
Pakistan
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ2 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ2 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ3 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ3 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು3 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ3 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ3 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ3 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ4 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ12 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು15 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌