Israel Palestine War: ಇಸ್ರೇಲ್‌ ಡೆಡ್‌ಲೈನ್‌ಗೆ ಮಣಿದ ಹಮಾಸ್‌; 17 ಒತ್ತೆಯಾಳುಗಳ ಬಿಡುಗಡೆ - Vistara News

ಪ್ರಮುಖ ಸುದ್ದಿ

Israel Palestine War: ಇಸ್ರೇಲ್‌ ಡೆಡ್‌ಲೈನ್‌ಗೆ ಮಣಿದ ಹಮಾಸ್‌; 17 ಒತ್ತೆಯಾಳುಗಳ ಬಿಡುಗಡೆ

Israel Palestine War: ಎರಡನೇ ಹಂತದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಉಗ್ರರು ವಿಳಂಬ ಮಾಡಿದ್ದರು. ಹಾಗಾಗಿ, ಇಸ್ರೇಲ್‌ ಸೇನೆಯು ಹಮಾಸ್‌ ಉಗ್ರರಿಗೆ ಗಡುವು ನೀಡಿದ್ದರು. ಅದರಂತೆ 17 ಜನರನ್ನು ಹಮಾಸ್‌ ಬಿಡುಗಡೆ ಮಾಡಿದೆ.

VISTARANEWS.COM


on

Israel Hostages
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಗೆ ಇಸ್ರೇಲ್‌ ನಡೆಸಿದ ಪ್ರತಿದಾಳಿಗೆ (Israel Palestine War) ನಲುಗಿದ ಹಮಾಸ್‌ ಉಗ್ರರು ಇಸ್ರೇಲ್‌ ಜತೆ ಕದನವಿರಾಮ ಮಾಡಿಕೊಂಡಿದ್ದಾರೆ. ಅದರಂತೆ, ಹಮಾಸ್‌ ಉಗ್ರರು (Hamas Terrorists) ಎರಡನೇ ಹಂತದಲ್ಲಿ 17 ಒತ್ತೆಯಾಳುಗಳನ್ನು (Israel Hostages) ಬಿಡುಗಡೆ ಮಾಡಿದ್ದಾರೆ. ಹಮಾಸ್‌ ಉಗ್ರರು 17 ಒತ್ತೆಯಾಳುಗಳನ್ನು ರೆಡ್‌ ಕ್ರಾಸ್‌ ಸಮಿತಿಗೆ ಹಸ್ತಾಂತರ ಮಾಡಿದ್ದಾರೆ. 13 ಇಸ್ರೇಲ್‌ ನಾಗರಿಕರು ಹಾಗೂ ನಾಲ್ವರು ಥಾಯ್ಲೆಂಡ್‌ ನಾಗರಿಕರು ಸೇರಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದೆ.

ಇಸ್ರೇಲ್‌ ಸೇನೆಯು ಕದನ ವಿರಾಮ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಹಮಾಸ್‌ ಉಗ್ರರು ಆರೋಪಿಸಿದ್ದರು. ಅಲ್ಲದೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡಿದ್ದರು. ಇದರಿಂದ ಕೆರಳಿದ್ದ ಇಸ್ರೇಲ್‌ ಸೇನೆಯು, ಹಮಾಸ್‌ ಉಗ್ರರಿಗೆ ಶನಿವಾರ (ನವೆಂಬರ್‌ 25) ಮಧ್ಯರಾತ್ರಿ ಒಳಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ಗಡುವು ನೀಡಿತ್ತು. ಇಸ್ರೇಲ್‌ ಡೆಡ್‌ಲೈನ್‌ಗೆ ಮಣಿದ ಹಮಾಸ್‌ ಉಗ್ರರು ತಡರಾತ್ರಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ಒತ್ತೆಯಾಳುಗಳಲ್ಲಿ ಒಂಬತ್ತು ವರ್ಷದ ಬಾಲಕಿಯೂ ಇದ್ದಾಳೆ.

ಹಮಾಸ್ ಮತ್ತು ಇಸ್ರೇಲ್‌ ನಡುವಿನ ತಾತ್ಕಾಲಿಕ ಕದನ ವಿರಾಮದ ಒಪ್ಪಂದದ ಪ್ರಕಾರ, ಹಮಾಸ್ ಉಗ್ರರು ನವೆಂಬರ್‌ 24ರಂದು ಮೊದಲ ಹಂತದಲ್ಲಿ 13 ಇಸ್ರೇಲಿ ಪ್ರಜೆಗಳು ಸೇರಿ 25 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದರು. ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಉಗ್ರರು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ್ದರು. ಬಿಡುಗಡೆಯಾದ ಒತ್ತೆಯಾಳುಗಳ ಪೈಕಿ 12 ಥಾಯ್ ಪ್ರಜೆಗಳಿದ್ದರು.

ಹಮಾಸ್‌ ಉಗ್ರರ ದಾಳಿಗೆ ಪ್ರತಿದಾಳಿ ಆರಂಭಿಸಿದ ಇಸ್ರೇಲ್‌ ಸೇನೆಯು ಗಾಜಾ ನಗರದ ಮೇಲೆ ಭಾಗಶಃ ಹಿಡಿತ ಸಾಧಿಸಿದ್ದರು. ನಿರಂತರ ದಾಳಿ ಮೂಲಕ ಸಾವಿರಾರು ಜನರನ್ನು ಹತ್ಯೆಗೈದಿದ್ದರು. ಹಾಗಾಗಿ, ಕತಾರ್‌ ಮಧ್ಯಪ್ರವೇಶಿಸಿ ಕದನವಿರಾಮಕ್ಕೆ ಕರೆ ನೀಡಿದೆ. ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಕೊನೆಗೆ ಒಪ್ಪಿದೆ. ಅದರಂತೆ, ಈಜಿಪ್ತ್‌ ಮೂಲಕ 17 ಒತ್ತೆಯಾಳುಗಳನ್ನು ಇಸ್ರೇಲ್‌ಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: 13 ಇಸ್ರೇಲ್ ಪ್ರಜೆಗಳು ಸೇರಿ 25 ಒತ್ತೆಯಾಳುಗಳನ್ನು ರಿಲೀಸ್ ಮಾಡಿದ ಹಮಾಸ್

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

Hardik Pandya : ರೋಹಿತ್ ಶರ್ಮಾ ನೇತೃತ್ವದ ಮೆನ್ ಇನ್ ಬ್ಲೂ ತಂಡವು ಇದುವರೆಗೆ ಒಂದು ಅತ್ಯುತ್ತಮ ಘಟಕದಂತೆ ಆಡಿದೆ. ಬಹುತೇಕ ಎಲ್ಲರೂ ಗೆಲುವಿಗಾಗಿ ಕೊಡುಗೆ ನೀಡಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಅವರ ಪಾತ್ರವು ವಿಶೇಷವಾಗಿ ನಿರ್ಣಾಯಕವಾಗಿದೆ. ಸೀಮ್-ಬೌಲಿಂಗ್ ಆಲ್ರೌಂಡರ್ ಕೆಲವು ಪ್ರಮುಖ ಓವರ್​ಗಳನ್ನು ಕೂಡ ಮಾಡಿದ್ದಾರೆ

VISTARANEWS.COM


on

Hardik Pandya
Koo

ಬೆಂಗಳೂರು: ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್​​ನಲ್ಲಿ ಭಾರತ ಮತ್ತು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾ ನಡುವಿನ ಟಿ 20 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಡುತ್ತಿದೆ. ದಕ್ಷಿಣ ಆಫ್ರಿಕಾ ತನ್ನ ಮೊದಲ ವಿಶ್ವಕಪ್ ಫೈನಲ್ ಆಡುತ್ತಿದ್ದರೆ, ಭಾರತವು ಒಮ್ಮೆ ಟಿ 20 ವಿಶ್ವಕಪ್ ಗೆದ್ದಿದೆ, ಮತ್ತು ಎರಡೂ ತಂಡಗಳು ಪಂದ್ಯಾವಳಿಯಲ್ಲಿ ಅಜೇಯವಾಗಿವೆ. ಟಾಸ್​ ಗೆದ್ದಿರುವ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂತೆಯ ಮೊದಲು ಬ್ಯಾಟ್ ಮಾಡಿರುವ ಭಾರತ ತಂಡ ಸಾಧಾರಣ ಮೊತ್ತವನ್ನು ಪೇರಿಸುವ ಹಾದಿಯಲ್ಲಿ ಸಾಗಿದೆ.

ರೋಹಿತ್ ಶರ್ಮಾ ನೇತೃತ್ವದ ಮೆನ್ ಇನ್ ಬ್ಲೂ ತಂಡವು ಇದುವರೆಗೆ ಒಂದು ಅತ್ಯುತ್ತಮ ಘಟಕದಂತೆ ಆಡಿದೆ. ಬಹುತೇಕ ಎಲ್ಲರೂ ಗೆಲುವಿಗಾಗಿ ಕೊಡುಗೆ ನೀಡಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಅವರ ಪಾತ್ರವು ವಿಶೇಷವಾಗಿ ನಿರ್ಣಾಯಕವಾಗಿದೆ. ಸೀಮ್-ಬೌಲಿಂಗ್ ಆಲ್ರೌಂಡರ್ ಕೆಲವು ಪ್ರಮುಖ ಓವರ್​ಗಳನ್ನು ಕೂಡ ಮಾಡಿದ್ದಾರೆ. ಮತ್ತು ಕೆಲವು ಉಪಯುಕ್ತ ಬ್ಯಾಟಿಂಗ್​ ಪಾತ್ರಗಳನ್ನು ಹೊಂದಿದ್ದಾರೆ. ಅವರು ಫೈನಲ್​​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಭಾರತ ಆಶಿಸುತ್ತಿದೆ. ಆದರೆ, ವಿಶೇಷ ಅನಿಸಿದ್ದು ಅವರು ಫೈನಲ್​ ಪಂದ್ಯಕ್ಕಾಗಿ ಎಂಟ್ರಿ. ಅವರು ವಿಶೇಷವಾಗಿರುವ ಮೀಸೆ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಹೇಗಿತ್ತು ಎಂದರೆ 1983ರ ಏಕ ದಿನ ವಿಶ್ವ ಕಪ್​ನಲ್ಲಿ ಅಂದಿನ ನಾಯಕ ಕಪಿಲ್ ದೇವ್​ ಕಾಣಿಸಿಕೊಂಡ ರೀತಿಯಲ್ಲಿ.

ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಹಾರ್ದಿಕ್ ಪಾಂಡ್ಯ ನಯವಾಗಿ ಶೇವ್ ಮಾಡಿಕೊಂಡಿದ್ದಾರೆ ತಂಪಾದ ಕಪ್ಪು ಕನ್ನಡಕ ಹಾಕಿಕೊಂಡು ಬಂದಿದ್ದ ಅವರು ತೆಳ್ಳಗಿನ ಮೀಸೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಹಾರ್ದಿಕ್ ಜೊತೆಗೆ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಮತ್ತು ಶಿವಂ ದುಬೆ ಕೂಡ ಮೈದಾನಕ್ಕೆ ಪ್ರವೇಶಿಸುತ್ತಿರುವುದು ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ:T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

ಟಿ 20 ವಿಶ್ವಕಪ್​ಗೆ ಮುಂಚಿತವಾಗಿ ಐಪಿಎಲ್​ನಲ್ಲಿ ಹಾರ್ದಿಕ್ ಪಾಂಡ್ಯ ಟೀಕೆಯ ಕೇಂದ್ರಬಿಂದುವಾಗಿದ್ದರು. ಇದೀಗ ಅವರು ಫೈನಲ್​​ನಲ್ಲಿ ದೊಡ್ಡ ಪ್ರದರ್ಶನದೊಂದಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಮತ್ತು ರಾಷ್ಟ್ರೀಯ ಹೀರೋ ಆಗಲು ಪ್ರಯತ್ನಿಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.

VISTARANEWS.COM


on

CM Siddaramaiah pm narendra modi
ಫೈಲ್‌ ಚಿತ್ರ
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆರ್‌ ಅನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ. 15ನೇ ಹಣಕಾಸು ಆಯೋಗವು 2020-21ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಇದನ್ನೂ ಓದಿ: Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Continue Reading

ಪ್ರಮುಖ ಸುದ್ದಿ

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

IPS officers promoted: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ.

VISTARANEWS.COM


on

IPS officers promoted
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ (IPS officers promoted) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕಂಪ್ಯೂಟರ್ ವಿಂಗ್ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ. ಇನ್ನು ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನಾಳೆ ಡಿಜಿಪಿ ಕಮಲ್ ಪಂತ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರಾದ (ಡಿಜಿ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಡಿಜಿಪಿ ಮತ್ತು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿ, ಹೋಮ್ ಗಾರ್ಡ್ಸ್ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಡಿಜಿ, ನಾಗರಿಕ ರಕ್ಷಣೆ ನಿರ್ದೇಶಕರಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಪೊಲೀಸ್ ಮಹಾನಿರ್ದೇಶಕರ ದರ್ಜೆಗೆ (ಡಿಜಿಪಿ) ಬಡ್ತಿ ಪಡೆದಿದ್ದು, ಅವರು ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯಗಳ ಉನ್ನತೀಕರಿಸಿದ ಡಿಜಿಪಿ ಹುದ್ದೆಯ ಸಮಕಾಲೀನ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ | Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Continue Reading

ಕ್ರಿಕೆಟ್

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

T20 World Cup FInal: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಕಳೆದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಟಾಸ್ ಗೆಲ್ಲಲು ವಿಫಲಗೊಂಡಿದ್ದರು. ಆದರೆ ಈ ಬಾರಿ ಅದೃಷ್ಟ ಮೆನ್ ಇನ್ ಬ್ಲೂ ಪರವಾಗಿದೆ. ಪಿಚ್ ತೇವಗೊಂಡಂತೆ ಕಾಣುತ್ತದೆ, ಅದಕ್ಕಾಗಿಯೇ ಅವರು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆದರೆ ಟಾಸ್ ಗೆದ್ದಿರುವುದು ಭಾರತೀಯ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯಾಗಲು ಮತ್ತೊಂದು ಕಾರಣವಿದೆ.

VISTARANEWS.COM


on

T20 World Cup final
Koo

ಬೆಂಗಳೂರು: ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ 20 ವಿಶ್ವಕಪ್ 2024 ರ ಫೈನಲ್​ನಲ್ಲಿ ಟಾಸ್ ಗೆದ್ದ ಮೆನ್ ಇನ್ ಬ್ಲೂ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದ್ದು ಈ ಆವೃತ್ತಿಯ ಜಿದ್ದಾಜಿದ್ದಿನ ಪಂದ್ಯವಾಗಿದ್ದು ಇತ್ತಂಡಗಳು ಪ್ರಶಸ್ತಿಗಾಗಿ ಹಪಾಹಪಿಸುತ್ತಿವೆ. ಅಂತೆಯೇ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ತೆಗೆದುಕೊಂಡು ಅದೃಷ್ಟ ಪರೀಕ್ಷೆಗೆ ಹೊರಟಿದೆ.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಕಳೆದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಟಾಸ್ ಗೆಲ್ಲಲು ವಿಫಲಗೊಂಡಿದ್ದರು. ಆದರೆ ಈ ಬಾರಿ ಅದೃಷ್ಟ ಮೆನ್ ಇನ್ ಬ್ಲೂ ಪರವಾಗಿದೆ. ಪಿಚ್ ತೇವಗೊಂಡಂತೆ ಕಾಣುತ್ತದೆ, ಅದಕ್ಕಾಗಿಯೇ ಅವರು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆದರೆ ಟಾಸ್ ಗೆದ್ದಿರುವುದು ಭಾರತೀಯ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯಾಗಲು ಮತ್ತೊಂದು ಕಾರಣವಿದೆ. 2010 ರಿಂದ ಟಿ 20 ವಿಶ್ವಕಪ್ ಫೈನಲ್​ನಲ್ಲಿ ಟಾಸ್ ಗೆದ್ದ ತಂಡವು ಟ್ರೋಫಿಯನ್ನು ಗೆದ್ದಿದೆ. 2009ರ ಆವೃತ್ತಿಯಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೈನಲ್​ನಲ್ಲಿ ಸೋತಿತ್ತು. 2007 ರ ಟಿ 20 ವಿಶ್ವಕಪ್ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಆ ಪಂದ್ಯವನ್ನು ಗೆದ್ದಿತು.

ಟಾಸ್ ಗೆದ್ದ ನಂತರ ಟಿ 20 ವಿಶ್ವಕಪ್ ಫೈನಲ್ ಗೆದ್ದ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ

  • 2007 – ಟಾಸ್ ಮತ್ತು ಪಂದ್ಯವನ್ನು ಗೆದ್ದ ಭಾರತ
  • 2009 – ಟಾಸ್ ಗೆದ್ದ ಶ್ರೀಲಂಕಾ ಪಂದ್ಯ ಸೋತಿತು
  • 2010 – ಟಾಸ್ ಮತ್ತು ಪಂದ್ಯವನ್ನು ಗೆದ್ದ ಇಂಗ್ಲೆಂಡ್
  • 2012 – ಟಾಸ್ ಮತ್ತು ಪಂದ್ಯವನ್ನು ಗೆದ್ದ ವಿಂಡೀಸ್
  • 2014 – ಟಾಸ್ ಗೆದ್ದ ಶ್ರೀಲಂಕಾ ಚಾಂಪಿಯನ್​
  • 2016 – ಟಾಸ್ ಮತ್ತು ಪಂದ್ಯವನ್ನು ಗೆದ್ದ ವಿಂಡೀಸ್
  • 2021 – ಟಾಸ್ ಗೆದ್ದ ಆಸ್ಟ್ರೇಲಿಯಾ ಚಾಂಪಿಯನ್​
  • 2022 – ಟಾಸ್ ಗೆದ್ದ ಇಂಗ್ಲೆಂಡ್ ಚಾಂಪಿಯನ್​

ಫೈನಲ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್.

ಇದನ್ನು ಓದಿ: T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

ಫೈನಲ್​ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ

ಕ್ವಿಂಟನ್ ಡಿ ಕಾಕ್ (ವಿಕೆ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಮ್ (ಸಿ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಕ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

Continue Reading
Advertisement
Hardik Pandya
ಪ್ರಮುಖ ಸುದ್ದಿ21 mins ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ22 mins ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ27 mins ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

IPS officers promoted
ಪ್ರಮುಖ ಸುದ್ದಿ48 mins ago

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

maya neelakantan
ವಿದೇಶ1 hour ago

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Back Benchers film in the Censor
ಕರ್ನಾಟಕ1 hour ago

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Producer who gifted an expensive car to the director of Radhika Kumaraswamy starrer Ajagrata
ಕರ್ನಾಟಕ1 hour ago

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

T20 World Cup final
ಕ್ರಿಕೆಟ್2 hours ago

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

Weight Loss Tips
ಆಹಾರ/ಅಡುಗೆ2 hours ago

Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ11 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌