ದೋಸೆ ಸವಿದ ಮಾಸ್ಟರ್‌ಷೆಫ್ ಜಡ್ಜ್, ಮತ್ತೆ ಬೆಂಗಳೂರಿಗೆ ಬರ್ತಿನಿ ಅಂದ್ರು ಗ್ಯಾರಿ! - Vistara News

ಆಹಾರ/ಅಡುಗೆ

ದೋಸೆ ಸವಿದ ಮಾಸ್ಟರ್‌ಷೆಫ್ ಜಡ್ಜ್, ಮತ್ತೆ ಬೆಂಗಳೂರಿಗೆ ಬರ್ತಿನಿ ಅಂದ್ರು ಗ್ಯಾರಿ!

MasterChef: ಮಾಸ್ಟರ್‌ಷೆಫ್ ಆಸ್ಟ್ರೇಲಿಯಾ ಟಿವಿ ಕಾರ್ಯಕ್ರಮದ ತೀರ್ಪುಗಾರ ಗ್ಯಾರಿ ಮೆಹಿಗನ್ ಅವರು ಬೆಂಗಳೂರು ಪ್ರವಾಸದಲ್ಲಿದ್ದಾರೆ.

VISTARANEWS.COM


on

MasterChef Australia judge Gary Mehigan enjoyed Dosa in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಸ್ಟರ್‌ಷೆಫ್ ಆಸ್ಟ್ರೇಲಿಯಾ (MasterChef Australia) ಟಿವಿ ಶೋ ಭಾರೀ ಜನಪ್ರಿಯತೆಯನ್ನು ಪಡೆದುಕೊಂಡಿರುವ ಶೋ. ಈ ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾದ ಗ್ಯಾರಿ ಮೆಹಿಗನ್ (Gary Mehigan) ಅವರು, ಸಿಲಿಕಾನ್ ಸಿಟಿ ಬೆಂಗಳೂರಿಗೆ (Silicon City Bengaluru) ಆಗಮಿಸಿದ್ದು, ಇಲ್ಲಿನ ತಿಂಡಿಗಳಿಗೆ ಮಾರು ಹೋಗಿದ್ದಾರೆ. ಸ್ಥಳೀಯ ಹೊಟೇಲ್‌ವೊಂದರಲ್ಲಿ ಅವರು ಕ್ರಿಸ್ಪಿ ದೋಸೆಯನ್ನು (Dosa) ಸೇವೆಯನ್ನು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಈ ಕುರಿತಾದ ವಿಡಿಯೋವೊಂದನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಕೇವಲ ದೋಸೆ ಮಾತ್ರವಲ್ಲದೇ, ರಾಗಿ ದೋಸೆ(Ragi Dosa), ಬೆಣ್ಣೆ ದೋಸೆ(ghee roast dosa), ಉದ್ದಿನ ವಡೆ, ಬೆಣ್ಣೆ ಇಡ್ಲಿ ಪೋಡಿ, ಕೇಸರಿ ಭಾತ್ (kesari Bhath) ಸೇವಿಸಿ, ರುಚಿಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಇನ್ಸ್‌ಟಾಗ್ರಾಮ್‌ನಲ್ಲಿ ವಿಡಿಯೋ ಷೇರ್ ಮಾಡಿಕೊಂಡಿರುವ ಗ್ಯಾರಿ, ಅದು ‘ಸರಿಯಾದ’ ದೋಸೆಯಾಗಿತ್ತು. ನಾವು ರಾಮೇಶ್ವರ ಕೆಫೆಯಲ್ಲಿ ರಾಗಿ ದೋಸೆ, ತುಪ್ಪದ ಹುರಿದ ದೋಸೆ, ಉದ್ದಿನ ವಡಾ, ತುಪ್ಪದ ಇಡ್ಲಿ ಪೋಡಿ, ಕೇಸರಿ ಭಾತ್ ಮತ್ತು ಅದ್ಭುತ ಫಿಲ್ಟರ್ ಕಾಫಿ ಸೇವಿಸಿದೆವು. ಇದಕ್ಕಾಗಿಯೇ ಮತ್ತೆ ನಾನು ಬೆಂಗಳೂರಿಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಗ್ಯಾರಿ ಅವರು ಬೆಂಗಳೂರಿನ ಎಂಜಿ ರೋಡ್ ತಾಜ್‌ನಲ್ಲಿ ಆಯೋಜಿಸಲಾಗಿರುವ ಪಾಪ್ ಅಪ್ ಡಿನ್ನರ್‌ನಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಆಗಮಿಸಿದ್ದಾರೆ.

ಇನ್‌ಸ್ಟಾಗ್ರಾಮದಲ್ಲಿನ ಗ್ಯಾರಿ ಅವರು ಪೋಸ್ಟ್‌ ಸಾಕಷ್ಟು ಜನರ ಗಮನ ಸೆಳೆದಿದೆ. ಬಹಳಷ್ಟು ಜನರು ಈ ಪೋಸ್ಟ್‌ಗೆ ಕಮೆಂಟ್ ಮಾಡಿದ್ದಾರೆ. ಅಲ್ಲದೇ, ಕೆಲವು ಹೊಟೇಲ್‌ಗಳು, ಸ್ಥಳಗಳನ್ನು ರೆಫರ್ ಮಾಡಿದ್ದಾರೆ. ನೀವು ಖಂಡಿತವಾಗಿಯೂ ಗಾರ್ಲಿಕ್ ರೋಸ್ಟ್ ದೋಸೆಯನ್ನು ಸೇವಿಸಬೇಕು. ಹಾಗೆಯೇ ಬೆಂಗಳೂರಿನ ಅದ್ಭುತ ದೋಸೆಗಾಗಿ ನೀವು ಸಿಟಿಆರ್‌ಗೆ ಭೇಟಿ ನೀಡಿ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.

ಮತ್ತೊಬ್ಬರು, ಓಹೋ ನೀವು ಬೆಂಗಳೂರಿನಲ್ಲಿದ್ದೀರಾ…!, ಜಯನಗರ, ಬಸವನಗುಡಿಯ ಕೆಲವು ಭಾಗಗಳಲ್ಲಿ ಭೇಟಿ ನೀಡಿದ್ದೀರಿ ಎಂದು ಭಾವಿಸುತ್ತೇನೆ. ಅಲ್ಲದೇ, ಡಿಸೆಂಬರ್‌ ಮೊದಲ ವಾರದಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಸಾಕ್ಷಿಯಾಗಬೇಕು ಎಂದು ಕಮೆಂಟ್ ಮಾಡಿದ್ದಾರೆ.

ಬೆಂಗಳೂರಿಗೆ ಆಗಮಿಸುವ ಯಾವುದೇ ಗಣ್ಯರು ಇಲ್ಲಿನ ವಿಶಿಷ್ಟ ತಿಂಡಿಗಳನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಅದರಲ್ಲೂ, ಬೆಂಗಳೂರಿಗರ ನೆಚ್ಚಿನ ಬೆಳಗಿನ ತಿಂಡಿಯಾದ ದೋಸೆ ಮತ್ತು ಇಡ್ಲಿ-ವಡೆ ತಿಂದೇ ತಿನ್ನುತ್ತಾರೆ. ಹಾಗೆಯೇ, ಅದ್ಭುತ ರುಚಿಗೆ ಮಾರುಹೋಗದವರೇ ಇಲ್ಲ. ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಬೆಂಗಳೂರಿನ ಸ್ಥಳೀಯ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದರು. ಅವರು ಬೆಂಗಳೂರಿನ ಉಪಹಾರವನ್ನು ಸವಿಯುತ್ತಿದದ್ದು ಸುದ್ದಿಯಾಗಿತ್ತು. ಹಲವು ವಿದೇಶಿಗರು ಸ್ಥಳೀಯವಾಗಿ ಜನಪ್ರಿಯವಾಗಿರುವ ಸ್ಥಳಗಳಿಗೆ ಭೇಟಿ ನೀಡಿ ತಿಂಡಿಯನ್ನು ಸವಿಯುವ ಸುದ್ದಿಗಳನ್ನು ಆಗಾಗ ಕೇಳಬಹುದು.

ಈ ಸುದ್ದಿಯನ್ನೂ ಓದಿ: IPL 2023: ಮಲ್ಲೇಶ್ವರಂನ ಸಿಟಿಆರ್‌ ಹೋಟೆಲ್​​ನಲ್ಲಿ ಮಸಾಲೆ ದೋಸೆ ಸವಿದ ವಿರುಷ್ಕಾ ದಂಪತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Indian Chutneys: ಅಡುಗೆ ಎಂಬ ಶಬ್ದ ಕಿವಿಯ ಮೇಲೆ ಇದ್ದರೆ ಹೊಟ್ಟೆ ಜಾಗೃತವಾಗುತ್ತದೆ. ರುಚಿಯಾದ ಅಡುಗೆಯನ್ನು ಚಪ್ಪರಿಸಿ ತಿನ್ನುವುದೇ ಒಂದು ಭಾಗ್ಯ. ಇನ್ನು ಮಸಾಲೆ ಸಾಮಗ್ರಿಗಳನ್ನು ಬಳಸಿ ಮಾಡುವ ಭಾರತದ ಅಡುಗೆಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿವೆ. ಭಾರತದ ಅಡುಗೆಗೆ ಈಗ ಇನ್ನೊಂದು ಗರಿ ಮೂಡಿದೆ. ಅದೇನೆಂದರೆ ಊಟದ ಎಲೆಯ ತುದಿಯ ಮೇಲೆ ಬೀಳುವ ಚಟ್ನಿ  ಈಗ ವಿಶ್ವದ 50 ಡಿಪ್‌ ಗಳಲ್ಲಿ ಸ್ಥಾನ ಪಡೆದಿದೆಯೆಂತೆ.  

VISTARANEWS.COM


on

Indian Chutneys
Koo

ಬೆಂಗಳೂರು: ಚಟ್ನಿ ಎಂದಾಗ ಬಾಯಲ್ಲಿ ನೀರು ಬರುವುದು ಸಹಜ. ದೋಸೆ, ಇಡ್ಲಿ ಮಾಡಿದಾಗ ಸಾಂಬಾರಿನ ಹಂಗಿಲ್ಲದೇ ಚಟ್ನಿ ಜೊತೆ ಇವುಗಳನ್ನು ಸವಿಯಬಹುದು. ಇನ್ನು ಬಿಸಿ ಬಿಸಿ ಅನ್ನದ (Rice) ಜೊತೆಗೆ ಈ ಚಟ್ನಿಯ ಕಾಂಬಿನೇಷನ್‌ ಸೂಪರ್‌ ಆಗಿರುತ್ತದೆ. ಹೆಚ್ಚಾಗಿ  ನಾವು ಕೊತ್ತಂಬರಿಸೊಪ್ಪಿನ ಚಟ್ನಿ, ಮಾವಿನಕಾಯಿ ಚಟ್ನಿ (Mango Chutney), ಟೊಮೆಟೊ ಚಟ್ನಿ, ಶೇಂಗಾ ಚಟ್ನಿ ಮಾಡುತ್ತೇವೆ. ಇನ್ನು ಹಲವು ಬಗೆಯ ತರಕಾರಿಗಳನ್ನು ಬಳಸಿ ರುಚಿ ರುಚಿಯಾದ ಚಟ್ನಿಗಳನ್ನು ಮಾಡಬಹುದು. ಚಟ್ನಿಯ ಕುರಿತು ಯಾಕಿಷ್ಟು ಪೀಠಿಕೆಯೆಂದರೆ, ಇದೀಗ ಭಾರತದ ಚಟ್ನಿಗಳಲ್ಲಿ (Indian Chutneys)ಎರಡು ಚಟ್ನಿಗಳು ವಿಶ್ವದ 50 ಡಿಪ್ ಗಳಲ್ಲಿ ಸ್ಥಾನ ಪಡೆದಿವೆಯಂತೆ!

ಟೇಸ್ಟ್ ಅಟ್ಲಾಸ್ ಇತ್ತೀಚೆಗೆ ಜೂನ್ 2024ರ  ಶ್ರೇಯಾಂಕದ ಪ್ರಕಾರ ವಿಶ್ವದ 50 ಅತ್ಯುತ್ತಮ ಡಿಪ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ಮಿಕ್ಸ್ ಚಟ್ನಿ  42ನೇ ಸ್ಥಾನ ಪಡೆದುಕೊಂಡಿದೆ. ಈ ಚಟ್ನಿಯನ್ನು ಬೇಯಿಸಿದ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಲಾಗುತ್ತದೆ. ಹಣ್ಣು ಹಾಗೂ ತರಕಾರಿಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅದಕ್ಕೆ ಜೀರಿಗೆ, ಏಲಕ್ಕಿ, ಹುಣಸೆಹಣ್ಣು, ಶುಂಠಿ ಮತ್ತು ಅರಿಶಿನದಂತಹ ವಿವಿಧ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆಯಂತೆ. ಇದನ್ನು “ಭಾರತದ ರಾಷ್ಟ್ರೀಯ ಕಾಂಡಿಮೆಂಟ್ಸ್”ಎಂದು ಕರೆಯಲಾಗಿದೆ. ಹಾಗೇ ಟೇಸ್ಟ್ ಅಟ್ಲಾಸ್ ನ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿ ನಮಗೆ ಪ್ರಿಯವಾದಂತಹ ಕೊತ್ತಂಬರಿ ಚಟ್ನಿ (ಧನಿಯಾ ಚಟ್ನಿ) ಹಾಗೂ ಕೊನೆಯ ಅಂದರೆ 50 ನೇ ಸ್ಥಾನದಲ್ಲಿ ಮಾವಿನ ಚಟ್ನಿ ಇದೆ. ಇದನ್ನು ಮಾವಿನ ಹಣ್ಣಿನಿಂದ ತಯಾರಿಸಲಾಗುತ್ತದೆ. ಈ ಮಾವಿನ ಚಟ್ನಿ ಹುಳಿ, ಸಿಹಿ ಮತ್ತು ಮಸಾಲೆಯ ಸುವಾಸನೆಯಿಂದ ಕೂಡಿತ್ತು ಎನ್ನಲಾಗಿದೆ.

ಅಲ್ಲದೇ ಈ ಪಟ್ಟಿಯಲ್ಲಿ ಲೆಬನಾನ್ ನಿಂದ ಟೌಮ್ ಮೊದಲ ಸ್ಥಾನದಲ್ಲಿದ್ದರೆ , ಮೆಕ್ಸಿಕನ್ ನ ಜನಪ್ರಿಯ ಡಿಲೈಟ್ ಗ್ವಾಕಮೋಲ್ 4ನೇ ಸ್ಥಾನದಲ್ಲಿದೆ. ಹಮ್ಮಸ್ 10 ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೂ ಮೊದಲು ಹಲವಾರು ಭಾರತೀಯ ಭಕ್ಷ್ಯಗಳು ಟೇಸ್ಟ್ ಅಟ್ಲಾಸ್ ನ ಟಾಪ್ 50 ಪಟ್ಟಿಗಳಲ್ಲಿ ಸ್ಥಾನ ಪಡೆದಿತ್ತು. ವಡಾ ಪಾವ್, ಮಹಾರಾಷ್ಟ್ರದ ಪ್ರಸಿದ್ಧ ಬೀದಿ ಶೈಲಿಯ ತಿಂಡಿ ವಿಶ್ವದ ಅತ್ಯುತ್ತಮ ಸ್ಯಾಂಡ್ ವಿಚ್ ಗಳಲ್ಲಿ ಹೆಸರು ಪಡೆದಿವೆ.  ಅಷ್ಟೇ ಅಲ್ಲದೇ ಮೂರು ಭಾರತೀಯ ಸಿಹಿತಿಂಡಿಗಳು ವಿಶ್ವದ 10 ಅತ್ಯುತ್ತಮ ರೈಸ್ ಪುಡಿಂಗ್ ಗಳಲ್ಲಿ ಸ್ಥಾನ ಪಡೆದಿವೆ.

ಇದೇ ರೀತಿ ಭಾರತೀಯ ಎಲ್ಲಾ ಭಕ್ಷ್ಯಗಳು ವಿಶ್ವದ ಎಲ್ಲಾ ಕಡೆ ಮೆಚ್ಚುಗೆಯನ್ನು ಗಳಿಸುವಂತಾಗಲಿ. ಎಲ್ಲರ ನಾಲಿಗೆಯ ರುಚಿಯನ್ನು ಹೆಚ್ಚಿಸುವಂತಾಗಲಿ.

Continue Reading

ಆಹಾರ/ಅಡುಗೆ

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

ಬೆಳಗ್ಗೆ ಎದ್ದ ಕೂಡಲೇ ಕೆಲವು ಬಗೆಯ ಬೀಜಗಳು ಹಾಗೂ ಒಣ ಹಣ್ಣುಗಳು ತಿನ್ನಲು ಯೋಗ್ಯವಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಎಲ್ಲ ಒಣ ಹಣ್ಣುಗಳೂ (dry fruits) ಕೂಡಾ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಒಣಹಣ್ಣುಗಳಲ್ಲಿ ಸಕ್ಕರೆಯ ಅಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಳಗ್ಗೆ ಎದ್ದ ಕೂಡಲೇ ಅವನ್ನು ತಿನ್ನುವುದರಿಂದ ಇವು ನಮ್ಮ ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರಬಹುದಂತೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಒಡನೆಯೇ ಏರುತ್ತದೆ. ಯಾವೆಲ್ಲ ಒಣಹಣ್ಣುಗಳನ್ನು ನೀವು ಬೆಳಗ್ಗಿನ ಹೊತ್ತಿನಲ್ಲಿ ಎದ್ದ ಕೂಡಲೇ ತಿನ್ನಬಾರದು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

dry fruits
Koo

ಒಣ ಹಣ್ಣುಗಳು ಹಾಗೂ ಬೀಜಗಳು (dry fruits) ಬೆಳಗ್ಗೆ ಎದ್ದ ಕೂಡಲೇ ತಿಂದರೆ ಒಳ್ಳೆಯದು ಎಂಬುದು ಈಗ ಬಹುತೇಕ ಎಲ್ಲರಿಗೂ ತಿಳಿದ ವಿಚಾರವೇ ಆಗಿದೆ. ಹೀಗಾಗಿ ರಾತ್ರಿ ಮಲಗುವ ಸಂದರ್ಭವೇ ಇವನ್ನೆಲ್ಲ ನೆನೆ ಹಾಕಿ ಇಟ್ಟುಕೊಂಡು ಬೆಳಗ್ಗೆ ಎದ್ದ ಕೂಡಲೇ ತಿನ್ನುತ್ತೇವೆ. ನಮ್ಮ ಆರೋಗ್ಯಕ್ಕೆ ಒಳ್ಳೆಯದನ್ನೇ ನಾವು ಮಾಡುತ್ತಿದ್ದೇವೆ ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ, ಬೆಳಗ್ಗೆ ಎದ್ದ ಕೂಡಲೇ ಕೆಲವು ಬಗೆಯ ಬೀಜಗಳು ಹಾಗೂ ಒಣ ಹಣ್ಣುಗಳು ತಿನ್ನಲು ಯೋಗ್ಯವಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಎಲ್ಲ ಒಣ ಹಣ್ಣುಗಳೂ ಕೂಡಾ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಒಣಹಣ್ಣುಗಳಲ್ಲಿ ಸಕ್ಕರೆಯ ಅಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಳಗ್ಗೆ ಎದ್ದ ಕೂಡಲೇ ಅವನ್ನು ತಿನ್ನುವುದರಿಂದ ಇವು ನಮ್ಮ ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರಬಹುದಂತೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಒಡನೆಯೇ ಏರುತ್ತದೆ. ಹೀಗಾಗಿ, ಇವನ್ನು ಬೇರೆ ಹೊತ್ತಿನಲ್ಲಿ ಸೇವಿಸುವುದು ಉಚಿತ. ಬನ್ನಿ, ಯಾವೆಲ್ಲ ಒಣಹಣ್ಣುಗಳನ್ನು ನೀವು ಬೆಳಗ್ಗಿನ ಹೊತ್ತಿನಲ್ಲಿ ಎದ್ದ ಕೂಡಲೇ ತಿನ್ನಬಾರದು ಎಂಬುದನ್ನು ನೋಡೋಣ.

Raisins Weight Loss Dry Fruits

ಒಣದ್ರಾಕ್ಷಿ

ಒಣದ್ರಾಕ್ಷಿ ಅತ್ಯಂತ ಸಿಹಿಯಾದ ಒಣಹಣ್ಣು. ಇದರಲ್ಲಿ ಸಕ್ಕರೆಯ ಪ್ರಮಾಣ ಅಧಿಕವಾಗಿರುತ್ತದೆ. ಇದರ ಸೇವನೆಯಿಂದ ಅನೇಕ ಆರೋಗ್ಯಕರ ಲಾಭಗಳಿರುವುದು ನಿಜವಾದರೂ, ಇದನ್ನು ಖಾಲಿ ಹೊಟ್ಟೆಯಲ್ಲಿ ಎದ್ದ ಕೂಡಲೇ ತಿನ್ನುವುದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟ ದಿಢೀರ್‌ ಏರಿಕೆಯಾಗುವ ಸಾಧ್ಯತೆ ಹೆಚ್ಚು. ಕೆಲವು ಬೀಜಗಳ ಜೊತೆಗೆ ಇದನ್ನು ಸೇರಿಸಿ ತಿನ್ನಬಹುದಾದರೂ, ಬೆಳಗಿನ ಸೇವನೆ ಅಷ್ಟು ಒಳ್ಳೆಯದಲ್ಲ.

Figs Dry Fruits For Hair Fall

ಒಣ ಅಂಜೂರ

ನಾರಿನಂಶ ಅತ್ಯಂತ ಅಧಿಕವಾಗಿರುವ ಒಣ ಅಂಜೂರದ ಹಣ್ಣು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು. ಮಲಬದ್ಧತೆ ಸಮಸ್ಯೆ ಇರುವ ಮಂದಿಗೆ, ಪೋಷಕಾಂಶಗಳ ಕೊರತೆ ಇರುವ ಮಂದಿಗೆ ಇದು ಒಳ್ಳೆಯ ಆಹಾರ. ವಿಟಮಿನ್‌ಗಳು, ಖನಿಜಾಂಶಗಳು ಇದರಲ್ಲಿ ಹೇರಳವಾಗಿ ಇರುವುದರಿಂದ ಇದೊಂದು ಸಂಪೂರ್ಣ ಆಹಾರ ಕೂಡಾ. ಆದರೆ ಸಕ್ಕರೆಯ ಅಂಶ ಇದರಲ್ಲಿ ಹೆಚ್ಚಿರುವುದರಿಂದ ಇದನ್ನು ತಿನ್ನುವುದರಿಂದ ರಕ್ತದಲ್ಲಿ ದಿಢೀರ್‌ ಸಕ್ಕರೆಯ ಮಟ್ಟ ಏರಿಕೆಯಾಗುವ ಸಂಭವವೂ ಇದೆ. ಜೊತೆಗೆ ಗ್ಯಾಸ್‌, ಹೊಟ್ಟೆಯುಬ್ಬರದಂತಹ ಸಮಸ್ಯೆಯನ್ನೂ ತಂದೊಡ್ಡಬಹುದು. ಇದಕ್ಕಾಗಿ, ಒಣ ಅಂಜೂರವನ್ನು ಬೇರೆ ಒಣಬೀಜಗಳ ಜೊತೆಗೆ ಸೇರಿಸಿ ತಿನ್ನಬಹುದು. ಆದರೂ ಎದ್ದ ಕೂಡಲೇ ತಿನ್ನುವ ಅಭ್ಯಾಸದಿಂದ ದೂರವಿಡುವುದು ಒಳ್ಳೆಯದು.

Fresh Medjool Dates

ಖರ್ಜೂರ

ಕಬ್ಬಿಣಾಂಶ ಸೇರಿದಂತೆ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಖರ್ಜೂರ ಕೂಡಾ ಬೆಳಗ್ಗೆ ಎದ್ದ ಕೂಡಲೇ ತಿನ್ನಬಹುದಾದ ಒಣ ಹಣ್ಣಲ್ಲ. ಸಾಕಷ್ಟು ಸಿಹಿಯಾಗಿರುವ ಖರ್ಜೂರವನ್ನು ತಿಂದ ತಕ್ಷಣ ರಕ್ತದಲ್ಲಿ ಸಕ್ಕರೆಯ ಅಂಶ ಏರುವ ಸಾಧ್ಯತೆಗಳೇ ಹೆಚ್ಚು. ಖರ್ಜೂರವನ್ನು ಬೇರೆ ಬೀಜಗಳ ಜೊತೆ ಸೇರಿಸಿ ತಿನ್ನಬಹುದಾದರೂ, ಬೇರೆ ಹೊತ್ತಿನಲ್ಲಿ ತಿನ್ನುವುದು ಉತ್ತಮ.

Dried apricots Weight Loss Dry Fruits

ಒಣ ಆಪ್ರಿಕಾಟ್‌

ಒಣ ಆಪ್ರಿಕಾಟ್‌ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶಗಳೂ, ಖನಿಜಾಂಶಗಳೂ ಇರುವುದರ ಜೊತೆಗೆ ಸಕ್ಕರೆಯ ಅಂಶವೂ ಸಾಕಷ್ಟಿದೆ. ಬೆಳಗ್ಗೆಯೇ ಹೆಚ್ಚಿನ ಪ್ರಮಾಣದಲ್ಲಿ ತಿಂದರೆ ಇದರ ಸಕ್ಕರೆಯ ಅಂಶ ನೇರವಾಗಿ ರಕ್ತಕ್ಕೆ ಸೇರಿ ಸಕ್ಕರೆಯ ಅಂಶ ದಿಢೀರ್‌ ಏರಬಹುದು. ಅಷ್ಟೇ ಅಲ್ಲ, ಜೀರ್ಣದ ಸಮಸ್ಯೆಗಳೂ ಬರಬಹುದು. ಬೇರೆ ಬೀಜಗಳು ಹಾಗೂ ಧಾನ್ಯಗಳ ಜೊತೆಯಲ್ಲಿ ಬೇರೆ ಹೊತ್ತಿನಲ್ಲಿ ತೆಗೆದುಕೊಳ್ಳುವುದು ಒಳ್ಳೆಯದು.

Prunes Dry Fruits for Womens Health

ಪ್ರೂನ್‌

ಈ ಒಣಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾರಿನಂಶವಿದೆ. ಖನಿಜಾಂಶ, ಪೋಷಕಾಂಶಗಳೂ ಇವೆ. ನಾರಿನಂಶವಿರುವುದರಿಂದ ಬೆಳಗಿನ ಹೊತ್ತು ತಿನ್ನುವುದು ಒಳ್ಳೆಯದೇ ಆದರೂ, ಸಕ್ಕರೆ ಹೆಚ್ಚಿರುವುದರಿಂದ ದಿಢೀರ್‌ ಸಕ್ಕರೆಯ ಮಟ್ಟ ಏರುವ ಅಪಾಯವೂ ಇದೆ. ಹಾಗಾಗಿ, ಬೆಳಗಿನ ಹೊತ್ತು ಇದರಿಂದ ದೂರವಿಡಬಹುದು. ಅಥವಾ ಬೇರೆ ಒಣಬೀಜಗಳ ಜೊತೆಗೆ ಸೇರಿಸಿ ಬೇರೆ ಹೊತ್ತಿನಲ್ಲಿ ತಿನ್ನಬಹುದು.

Continue Reading

ಆರೋಗ್ಯ

Super Food For Kids: ನಿಮ್ಮ ಮಕ್ಕಳು ಜಾಣರಾಗಿ ಹೆಚ್ಚು ಅಂಕ ಗಳಿಸಬೇಕೆ? ಈ ಆಹಾರಗಳನ್ನು ಕೊಡಿ

ಮಕ್ಕಳಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯವಿರುತ್ತದೆ. ಹೀಗಾಗಿ ಅವರ ನಿತ್ಯದ ಆಹಾರದಲ್ಲಿ ಕೆಲವೊಂದು ಪದಾರ್ಥಗಳು ಇರಲೇಬೇಕು. ಇದು ಅವರ ದೇಹಾರೋಗ್ಯ ಮಾತ್ರವಲ್ಲ ಮೆದುಳಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಅಂತಹ ಆಹಾರ ಪದಾರ್ಥಗಳು (Super Food For Kids) ಯಾವುದು ಗೊತ್ತೇ? ಇಲ್ಲಿದೆ ಪೋಷಕರಿಗೆ ಉಪಯುಕ್ತ ಮಾಹಿತಿ.

VISTARANEWS.COM


on

By

Super Food For Kids
Koo

ನೆನಪಿನ ಶಕ್ತಿ (memory), ಏಕಾಗ್ರತೆ (concentration) ಮತ್ತು ಮೆದುಳಿನ ಕಾರ್ಯವನ್ನು (brain function) ಸುಧಾರಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿರುವುದರಿಂದ ಮಕ್ಕಳಿಗೆ (childrens) ಸರಿಯಾದ ಆಹಾರವನ್ನು (Super Food For Kids) ಆಯ್ಕೆ ಮಾಡುವುದು ಬಹಳ ಮುಖ್ಯ. ಮಕ್ಕಳು ಮೆದುಳು ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಪೌಷ್ಟಿಕ ಆಹಾರಗಳನ್ನು (nutritious foods) ಸೇವಿಸಬೇಕು. ಮಗುವಿನ ಮೆದುಳನ್ನು ಶಕ್ತಿಯುತವಾಗಿ ಮತ್ತು ಚುರುಕಾಗಿಸಬಲ್ಲ ಕೆಲವು ಆಹಾರ ಪದಾರ್ಥಗಳು ಹೀಗಿವೆ.


ಹಾಲು

ಹೆಚ್ಚಿನ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಇದು ಮಗುವಿನ ಮೆದುಳನ್ನು ಚುರುಕುಗೊಳಿಸುವ ಅತ್ಯಂತ ಪ್ರಮುಖ ಆಹಾರ ಪದಾರ್ಥವಾಗಿದೆ. ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೊಟೀನ್ ಇದ್ದು ಇದು ಮಗುವಿನ ಮೆದುಳಿನ ಕಾರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.


ಮೊಟ್ಟೆ

ಮೊಟ್ಟೆಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಡಿ ಮತ್ತು ಪ್ರೊಟೀನ್ ಇದೆ. ಇದು ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯಕರವಾಗಿ ಮತ್ತು ತೀಕ್ಷ್ಣವಾಗಿಡುವಲ್ಲಿ ಮೊಟ್ಟೆಗಳು ತುಂಬಾ ಪರಿಣಾಮಕಾರಿಯಾಗಿರುವುದರಿಂದ ದೈನಂದಿನ ಆಹಾರದಲ್ಲಿ ಮೊಟ್ಟೆಗಳನ್ನು ಅಳವಡಿಸಿಕೊಳ್ಳಬೇಕು. ಮೊಟ್ಟೆಗಳಲ್ಲಿ ಇರುವ ಕೋಲೀನ್ ಮಕ್ಕಳ ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.


ಗೋಡಂಬಿ

ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ವಿಟಮಿನ್‌ ಮತ್ತು ಖನಿಜಗಳನ್ನು ಒಳಗೊಂಡಿರುವ ಕಾರಣ ವಯಸ್ಸಿನ ಹೊರತಾಗಿಯೂ ಗೋಡಂಬಿ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯವಾಗಿಡಲು ಅವರ ದೈನಂದಿನ ಆಹಾರದಲ್ಲಿ ಗೋಡಂಬಿಯನ್ನು ಸೇರಿಸಲು ಪ್ರಯತ್ನಿಸಿ.


ಧಾನ್ಯಗಳು

ಧಾನ್ಯಗಳು ಮಕ್ಕಳಿಗೆ ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಕಿಡ್ನಿ ಮತ್ತು ಪಿಂಟೋ ಧಾನ್ಯಗಳು ಯಾವುದೇ ರೀತಿಯ ಧಾನ್ಯಗಳು ಹೆಚ್ಚು ಒಮೆಗಾ 3 ಅನ್ನು ಹೊಂದಿರುತ್ತದೆ. ಧಾನ್ಯಗಳು ಅನ್ನು ಸಲಾಡ್‌ನೊಂದಿಗೆ ಬೆರೆಸಿ ಅಥವಾ ಕರಿ ಮಾಡುವ ಮೂಲಕ ಬಡಿಸಬಹುದು. ಧಾನ್ಯಗಳು ಜ್ಞಾಪಕ ಶಕ್ತಿ ಹೆಚ್ಚಿಸಲು ಮತ್ತು ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Benefits Of Cherries: ಚೆರ್ರಿ ಹಣ್ಣು ರುಚಿಗಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ಹಿತಕರ!


ಮೀನು

ಮಕ್ಕಳಿಗೆ ಪ್ರತಿದಿನ ಮೀನನ್ನು ಬಡಿಸಲು ಪ್ರಯತ್ನಿಸಿ. ಯಾಕೆಂದರೆ ಇದು ಆರೋಗ್ಯದ ಒಟ್ಟಾರೆ ಬೆಳವಣಿಗೆಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮೀನಿನಲ್ಲಿ ಹೆಚ್ಚಿನ ಪ್ರಮಾಣದ ಒಮೆಗಾ 3 ಇದ್ದು ಇದು ಜೀವಕೋಶಗಳ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ.


ತರಕಾರಿಗಳು

ತರಕಾರಿಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಮೆದುಳಿನ ಕೋಶಗಳನ್ನು ಆರೋಗ್ಯಕರವಾಗಿಡಲು ತರಕಾರಿಗಳು ಸಹಾಯ ಮಾಡುತ್ತದೆ. ಟೊಮ್ಯಾಟೊ, ಸಿಹಿ ಆಲೂಗಡ್ಡೆ, ಕುಂಬಳಕಾಯಿ, ಕ್ಯಾರೆಟ್ ಮತ್ತು ಪಾಲಕ್ ಮೊದಲಾದ ತರಕಾರಿಗಳನ್ನು ಮಗುವಿನ ನಿಯಮಿತ ಆಹಾರದಲ್ಲಿ ಸೇರಿಸಬೇಕು.

Continue Reading

ಆರೋಗ್ಯ

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಐಸಿಎಂಆರ್ ಮಾರ್ಗಸೂಚಿ (ICMR Guidelines) ಪ್ರಕಾರ ಬೇಸಗೆಯಲ್ಲಿ ಕಬ್ಬಿಣ ರಸದ ಸೇವನೆಯನ್ನುಆದಷ್ಟು ಕಡಿಮೆ ಮಾಡಿದರೆ ಒಳ್ಳೆಯದು.

VISTARANEWS.COM


on

By

ICMR Guidelines
Koo

ಕೆಲವೆಡೆ ಮಳೆ (rain) ಸುರಿದರೂ ಇನ್ನು ಕೆಲವೆಡೆ ಬಿಸಿಲಿನ (summer) ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ಬೇಸಿಗೆಯ ಶಾಖದಿಂದ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಅನೇಕರು ಕಬ್ಬಿನ ರಸ (sugercane juice), ಹಣ್ಣಿನ ರಸ (fruit juice) ಮತ್ತು ಕೋಲ್ಡ್ ಕಾಫಿಗಳಂತಹ (cold coffee) ಪಾನೀಯಗಳನ್ನು ಸೇವಿಸುತ್ತಾರೆ. ಆದರೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR Guidelines) ಜನಪ್ರಿಯ ಬಾಯಾರಿಕೆ ತಣಿಸುವ ಈ ಪಾನೀಯಗಳ ಅತಿಯಾದ ಸೇವನೆಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಆದ್ದರಿಂದ ಇದರ ಸೇವನೆಯನ್ನು ಕಡಿಮೆ ಮಾಡಬೇಕು ಎನ್ನುತ್ತದೆ ಐಸಿಎಂಆರ್. ತಂಪು ಪಾನೀಯಗಳು ನೀರು ಅಥವಾ ತಾಜಾ ಹಣ್ಣುಗಳಿಗೆ ಪರ್ಯಾಯವಲ್ಲ. ಹೀಗಾಗಿ ಆದಷ್ಟು ತಂಪು ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು. ಬದಲಿಗೆ ಮಜ್ಜಿಗೆ, ಸಕ್ಕರೆ ಸೇರಿಸದೆ ನಿಂಬೆ ನೀರು, ಸಂಪೂರ್ಣ ಹಣ್ಣಿನ ರಸ ಮತ್ತು ತೆಂಗಿನ ನೀರು ಸೇವನೆ ಒಳ್ಳೆಯದು ಎಂದು ಹೇಳಿದೆ.

ಕಬ್ಬಿನ ರಸ ಅಪಾಯಕಾರಿ ಏಕೆ?

ಆಹಾರ ತಜ್ಞರ ಪ್ರಕಾರ ಕಬ್ಬಿನ ರಸದಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಸಮೃದ್ಧವಾಗಿದೆ. ಇದು ವಿಶೇಷವಾಗಿ ಬಿಸಿ ವಾತಾವರಣದಲ್ಲಿ ಹಲವಾರು ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ ಎನ್ನುತ್ತಾರೆ.
ನಿರ್ಜಲೀಕರಣ

ಹೆಚ್ಚಿನ ಸಕ್ಕರೆ ಸೇವನೆಯು ದೇಹದಲ್ಲಿ ಹೆಚ್ಚಿನ ನೀರಿನ ನಷ್ಟಕ್ಕೆ ಕಾರಣವಾಗಬಹುದು. ಸಕ್ಕರೆಯು ಚಯಾಪಚಯಗೊಳಿಸಲು ದೇಹಕ್ಕೆ ಹೆಚ್ಚಿನ ನೀರು ಬೇಕಾಗುತ್ತದೆ. ದೇಹವು ಈಗಾಗಲೇ ಬೆವರಿನ ಮೂಲಕ ಗಮನಾರ್ಹವಾದ ನೀರನ್ನು ಕಳೆದುಕೊಂಡಾಗ ಬೇಸಿಗೆಯಲ್ಲಿ ಇದು ವಿಶೇಷವಾಗಿ ಸಮಸ್ಯಾತ್ಮಕವಾಗಿದೆ.

ಮಧುಮೇಹ

ಕಬ್ಬಿನ ರಸದಿಂದ ದೇಹ ಸಕ್ಕರೆಯನ್ನು ತ್ವರಿತವಾಗಿ ಹೀರಿಕೊಳ್ಳುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಏರುಪೇರಾಗುವುದು. ಇನ್ಸುಲಿನ್ ಪ್ರತಿರೋಧ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಇದು ಹೆಚ್ಚಿಸುತ್ತದೆ.

ತೂಕ ಹೆಚ್ಚಳ

ಸಕ್ಕರೆ ಪಾನೀಯಗಳಿಂದ ಹೆಚ್ಚಿನ ಕ್ಯಾಲೋರಿಗಳು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಇದು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಗಳಂತಹ ಆರೋಗ್ಯ ಸಮಸ್ಯೆಗಳನ್ನು ಇನ್ನಷ್ಟು ಸಂಕೀರ್ಣಗೊಳಿಸುತ್ತದೆ.

ಹಣ್ಣು ಮತ್ತು ಹಣ್ಣಿನ ರಸ ಯಾವುದು ಒಳ್ಳೆಯದು?

ಹಣ್ಣುಗಳು ಪೌಷ್ಟಿಕಾಂಶದ ಫೈಬರ್ ಅನ್ನು ಹೊಂದಿರುತ್ತವೆ. ಇದು ಜ್ಯೂಸ್ ಮಾಡುವಾಗ ಹೊರಹಾಕಲ್ಪಡುತ್ತದೆ. ಫೈಬರ್ ನಿಮ್ಮನ್ನು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಕೊಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಸಂಪೂರ್ಣ ಹಣ್ಣುಗಳನ್ನು ಅಗಿಯುವುದರಿಂದ ಲಾಲಾರಸದ ಉತ್ಪಾದನೆ ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಆದರೆ ಸಕ್ಕರೆ ಹೀರಿಕೊಳ್ಳುವಿಕೆಯ ವೇಗವನ್ನು ನಿಯಂತ್ರಿಸುತ್ತದೆ.

ನೀರು ಮತ್ತು ತಂಪು ಪಾನೀಯ

ಹಲವು ಬಾರಿ ನೀರಿಗೆ ಬದಲಾಗಿ ತಂಪು ಪಾನೀಯಗಳನ್ನು ಸೇವಿಸುತ್ತೇವೆ. ಇದು ಆರೋಗ್ಯಕರವಲ್ಲ ಎನ್ನುತ್ತಾರೆ ಆಹಾರ ತಜ್ಞರು. ತಂಪು ಪಾನೀಯಗಳು ಹೆಚ್ಚಿನ ಪ್ರಮಾಣದ ಸಕ್ಕರೆಗಳನ್ನು ಹೊಂದಿರುತ್ತವೆ. ಇದು ಹೆಚ್ಚಿನ ಕ್ಯಾಲೋರಿ ಸೇವನೆ ಮತ್ತು ಸಂಭಾವ್ಯ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅನೇಕ ತಂಪು ಪಾನೀಯಗಳು ಕೃತಕ ಸುವಾಸನೆ, ಬಣ್ಣ ಮತ್ತು ಸಂರಕ್ಷಕಗಳನ್ನು ಒಳಗೊಂಡಿರುತ್ತವೆ. ಇದು ಕಾಲಾನಂತರದಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಉಂಟು ಮಾಡುತ್ತದೆ. ತಂಪು ಪಾನೀಯಗಳಲ್ಲಿನ ಕೆಫೀನ್ ಮತ್ತು ಆಮ್ಲೀಯ ಅಂಶವು ಮೂತ್ರವರ್ಧಕ ಪರಿಣಾಮವನ್ನು ಹೊಂದಿರುತ್ತದೆ. ಇದು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಭಾರತದಂತಹ ಬಿಸಿ ವಾತಾವರಣದಲ್ಲಿ ಇದು ವಿಶೇಷವಾಗಿ ಅಪಾಯಕಾರಿ.

ಬೇಸಿಗೆಯಲ್ಲಿ ಚಹಾ, ಕಾಫಿ

ಪ್ರತಿದಿನ ಎಷ್ಟು ಕಾಫಿ ಮತ್ತು ಚಹಾವನ್ನು ಸೇವಿಸುತ್ತೀರಿ ಎಂಬುದರ ಬಗ್ಗೆ ಗಮನವಿರಲಿ. ಬರಿ ಹೊಟ್ಟೆಗೆ ಚಹಾ, ಕಾಫಿ ಸೇವನೆಯನ್ನು ತಪ್ಪಿಸಿ. ಕುಡಿಯಲೇ ಬೇಕು ಅನಿಸಿದರೆ ಉಪಹಾರ ಮತ್ತು ಮಧ್ಯಾಹ್ನ ಊಟದ ಮಧ್ಯದ ಸಮಯಕ್ಕೆ ಮುಂದೂಡಿ. ಇಲ್ಲವಾದರೆ ದಾಲ್ಚಿನ್ನಿ, ಅರಿಶಿನದಂತಹ ಗಿಡಮೂಲಿಕೆಗಳನ್ನು ಮತ್ತು ಕ್ಯಾಮೊಮೈಲ್, ಮಲ್ಲಿಗೆ, ದಾಸವಾಳದ ಚಹಾದಂತಹ ಹೂವುಗಳನ್ನು ಕುಡಿಯಬಹುದು.

ದೇಹದ ಸಮಸ್ಯೆ ಆಲಿಸಿ

ಬೇಸಿಗೆಯಲ್ಲಿ ನಡುಗುವಿಕೆ, ಆತಂಕ ಅಥವಾ ನಿದ್ರೆಯ ಸಮಸ್ಯೆಗಳನ್ನು ಅನುಭವಿಸಿದರೆ ಆದಷ್ಟು ವಿಶ್ರಾಂತಿ ಪಡೆಯಿರಿ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಿ.

ನಿರ್ಜಲೀಕರಣವಾಗದಂತೆ ತಡೆಯುವುದು ಹೇಗೆ?

ಬೇಸಿಗೆಯಲ್ಲಿ ಆರೋಗ್ಯವಾಗಿರಲು ದೇಹವನ್ನು ಹೈಡ್ರೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಪ್ರತಿದಿನ ಕನಿಷ್ಠ 8- 10 ಗ್ಲಾಸ್ ನೀರನ್ನು ಕುಡಿಯಿರಿ. ದೇಹದಲ್ಲಿ ಬೆವರಿನ ಮೂಲಕ ಕಳೆದುಹೋಗುವ ಲವಣ ಮತ್ತು ಖನಿಜಗಳನ್ನು ಪುನಃ ತುಂಬಿಸಲು ಮನೆಯಲ್ಲಿ ಅಥವಾ ವಾಣಿಜ್ಯಿಕವಾಗಿ ಲಭ್ಯವಿರುವ ಎಲೆಕ್ಟ್ರೋಲೈಟ್ ಪರಿಹಾರಗಳನ್ನು ಬಳಸಿ.

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸಲು ಆಹಾರದಲ್ಲಿ ಕಲ್ಲಂಗಡಿ, ಸೌತೆಕಾಯಿ ಮತ್ತು ಕಿತ್ತಳೆಯಂತಹ ನೀರು-ಭರಿತ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ. ಆಲ್ಕೋಹಾಲ್ ಮತ್ತು ಸಕ್ಕರೆ ಪಾನೀಯಗಳು ನಿರ್ಜಲೀಕರಣದ ಅಪಾಯವನ್ನು ಹೆಚ್ಚಿಸಬಹುದು. ಇದನ್ನು ಮಿತವಾಗಿ ಸೇವಿಸಿ ಅಥವಾ ಸಂಪೂರ್ಣವಾಗಿ ತಪ್ಪಿಸಬೇಕು.

Continue Reading
Advertisement
T20 World Cup 2024
T20 ವಿಶ್ವಕಪ್25 mins ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ2 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ2 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ2 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ2 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು2 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ2 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ2 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Gold Heist
ವಿದೇಶ2 hours ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Petrol Diesel Price
ಕರ್ನಾಟಕ3 hours ago

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ9 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌