Bollywood Update: ವಿದ್ಯಾ ಬಾಲನ್‌ ಜತೆ ಅಭಿನಯಿಸಿದ್ದ ನಟನ ಪ್ರೇಮ್‌ ʼಕಹಾನಿʼಗೆ ಕಂಕಣಭಾಗ್ಯ - Vistara News

ಬಾಲಿವುಡ್

Bollywood Update: ವಿದ್ಯಾ ಬಾಲನ್‌ ಜತೆ ಅಭಿನಯಿಸಿದ್ದ ನಟನ ಪ್ರೇಮ್‌ ʼಕಹಾನಿʼಗೆ ಕಂಕಣಭಾಗ್ಯ

Bollywood Update: ಕಹಾನಿ ಬಾಲಿವುಡ್‌ ಚಿತ್ರದಲ್ಲಿ ನಟಿ ವಿದ್ಯಾ ಬಾಲನ್‌ ಜತೆ ನಟಿಸಿದ್ದ ಬಂಗಾಳಿ ನಟ ಪರಂಬ್ರತಾ ಚಟರ್ಜಿ ಸಪ್ತಪದಿ ತುಳಿದಿದ್ದಾರೆ.

VISTARANEWS.COM


on

kahaani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: 2012ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ಕಹಾನಿ (Kahaani)ಯಲ್ಲಿ ನಟಿ ವಿದ್ಯಾ ಬಾಲನ್‌ (Vidya Balan) ಜತೆ ಅಭಿನಯಿಸಿದ್ದ ನಟ ಪರಂಬ್ರತಾ ಚಟರ್ಜಿ (Parambrata Chatterjee) ತಮ್ಮ ಗೆಳತಿ, ಮಾನಸಿಕ ಆರೋಗ್ಯ ಕಾರ್ಯಕರ್ತೆ, ಗಾಯಕಿ ಪಿಯಾ ಚಕ್ರವರ್ತಿ (Piya Chakraborty) ಅವರನ್ನು ವಿವಾಹವಾಗಿದ್ದಾರೆ. ಕೋಲ್ಕತ್ತಾದಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು. ಇಬ್ಬರು ಜತೆಗಿರುವ ಫೋಟೊವನ್ನು ನಟ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಶೇರ್‌ ಮಾಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ (Bollywood Update).

ಪರಂಬ್ರತಾ ಚಟರ್ಜಿ ಅವರ ಪೋಸ್ಟ್‌ಗೆ ಅಭಿಮಾನಿಗಳು ಮತ್ತು ಸಹ ಕಲಾವಿದರು ಮೆಚ್ಚುಗೆ ಸೂಚಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಬಂಗಾಳಿ ಸಿನಿಮಾ ನಟಿ ಶುಭಶ್ರೀ ಗಂಗೂಲಿ, ಕಮೆಂಟ್‌ ಮಾಡಿ ʼʼಕಂಗ್ರಾಜುಲೇಷನ್ಸ್‌ʼʼ ಎಂದು ಹೇಳಿದ್ದಾರೆ. ಮತ್ತೊಬ್ಬ ಕಲಾವಿದರಾದ ಮೊನಮಿ ಘೋಷ್‌ ಕೂಡ ʼʼವ್ಹಾಹ್‌…ಅಭಿನಂದನೆಗಳುʼʼ ಎಂದು ಕಮೆಂಟ್‌ ಮಾಡಿದ್ದಾರೆ. ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು, ಆತ್ಮೀಯರು ಸೇರಿ ಕೆಲವರಷ್ಟೇ ಹಾಜರಿದ್ದರು.

ಪ್ರಿಯಾ ಮತ್ತು ಪರಂಬ್ರತಾ ಚಟರ್ಜಿ ಸುಮಾರು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಎನ್‌ಜಿಒ ಒಂದರಲ್ಲಿ ಕೆಲಸ ಮಾಡುತ್ತಿರುವ ಪಿಯಾ ಚಕ್ರವರ್ತಿ ಈ ಹಿಂದೆ ಸಂಗೀತ ಸಂಯೋಜಕ-ಗಾಯಕ ಅನುಪಮ್ ರಾಯ್ ಅವರನ್ನು ವಿವಾಹವಾಗಿದ್ದರು. 2015ರಲ್ಲಿ ವಿವಾಹವಾಗಿದ್ದ ಅವರು ಹೊಂದಿಕೆಯಾಗದ ಕಾರಣ 5 ವರ್ಷಗಳ ಬಳಿಕ ವಿಚ್ಛೇಧನ ಪಡೆದುಕೊಂಡಿದ್ದರು. ಪರಂಬ್ರತಾ ಈ ಹಿಂದೆ ಸ್ವಸ್ತಿಕಾ ಮುಖರ್ಜಿ ಮತ್ತು ಡಚ್ ಪ್ರಜೆ ಐಕೆ ಸ್ಚೌಟೆನ್ ಅವರೊಂದಿಗೆ ಕೆಲವು ವರ್ಷಗಳ ಕಾಲ ಡೇಟಿಂಗ್‌ ನಡೆಸುತ್ತಿದ್ದರು. ಬಳಿಕ ಆ ಸಂಬಂಧ ಮುರಿದು ಬಿದ್ದಿತ್ತು.

ಪರಂಬ್ರತ ಚಟರ್ಜಿ ಮೂಲತಃ ಬಂಗಾಳಿ ಕಲಾವಿದ. ಬಂಗಾಳಿ ಸೀರಿಯಲ್‌, ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿ ಬಳಿಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. 2002ರಲ್ಲಿ ತೆರೆಕಂಡ ರಾಷ್ಟ್ರೀಯ ಚಲನಚಿತ್ರ ಪುರಸ್ಕೃತ ಬಂಗಾಳಿ ಸಿನಿಮಾ ʼಹೇಮಂತರ್‌ ಪಖಿʼ ಮೂಲಕ ಬಣ್ಣ ಚಿತ್ರರಂಗ ಪ್ರವೇಶಿಸಿದ್ದರು.

ಇದನ್ನೂ ಓದಿ: ಆಲಿಯಾ ಭಟ್, ಮನೋಜ್‌ ಬಾಜಪೇಯಿಗೆ ಫಿಲ್ಮ್‌ಫೇರ್ ಒಟಿಟಿ ಅವಾರ್ಡ್, ಮತ್ತೆ ಯಾರೆಲ್ಲ ಪ್ರಶಸ್ತಿ ಪಡೆದರು?

ಬಳಿಕ ಅನೇಕ ಬಂಗಾಳಿ ಚಿತ್ರಗಳಲ್ಲಿ ನಟಿಸಿ 2012ರಲ್ಲಿ ʼಕಹಾನಿʼ ಚಿತ್ರದ ಸತ್ಯಕಿ ಸಿನ್ಹಾ ಪಾತ್ರದ ಮೂಲಕ ಬಾಲಿವುಡ್‌ ಪ್ರವೇಶಿಸಿದರು. ಸುಜೋಯ್‌ ಘೋಷ್‌ ನಿರ್ದೇಶನದ ಈ ಚಿತ್ರದಲ್ಲಿ ವಿದ್ಯಾ ಬಾಲನ್‌ ಗರ್ಭಿಣಿ ಪಾತ್ರದಲ್ಲಿ ಮೋಡಿ ಮಾಡಿದ್ದರು. ಕಡಿಮೆ ಬಜೆಟ್‌ನ ಈ ಚಿತ್ರ 100 ಕೋಟಿ ರೂ.ಗಿಂತ ಹೆಚ್ಚು ಕಲೆಕ್ಷನ್‌ ಮಾಡಿ ಸದ್ದು ಮಾಡಿತ್ತು. ವಿದ್ಯಾ ಬಾಲನ್‌ಗೆ ಸಹಾಯ ಮಾಡುವ ಪೊಲೀಸ್‌ ಪಾತ್ರದಲ್ಲಿ ಪರಂಬ್ರತ ಗಮನ ಸೆಳೆದಿದ್ದರು. ಬಳಿಕ ʼಟ್ರಾಫಿಕ್‌ʼ, ʼಪರಿʼ, ʼಕೌನ್‌ ಪ್ರವೀಣ್‌ ತಂಬೆʼ, ʼಬುಲ್‌ ಬುಲ್‌ʼ ಮುಂತಾದ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ 2014ರಲ್ಲಿ ತೆರೆಕಂಡ ಮಲೆಯಾಳಂನ ʼಭಾಗ್ಯಲಕ್ಷ್ಮೀʼ ಸಿನಿಮಾದಲ್ಲಿ ಅತಿಥಿ ಪಾತ್ರದ ಮೂಲಕ ದಕ್ಷಿಣ ಬಾರತ ಚಿತ್ರರಂಗಕ್ಕೂ ಪ್ರವೇಶಿಸಿದ್ದರು. ಇಂಗ್ಲಿಷ್‌, ಬಾಂಗ್ಲಾ ದೇಶಿ ಭಾಷೆಯ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಜತೆಗೆ ಅನೇಕ ವೆಬ್‌ ಸೀರಿಸ್‌ನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲ ಅನೇಕ ಟೆಲಿಫಿಲಂ, ವೆಬ್‌ ಸೀರಿಸ್‌ಗಳನ್ನು ನಿರ್ದೇಶಿಸಿದ್ದಾರೆ. ಸದ್ಯ ಹಿಂದಿ ಸೇರಿದಂತೆ ವಿವಿಧ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

Deepika Padukone: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

Deepika Padukone
Koo

ಮುಂಬೈ: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಗ್ಲಾಮರ್‌ ಪಾತ್ರದಲ್ಲಿಯೂ, ಡಿಗ್ಲಾಮರ್‌ ಆಗಿ ಸಹಜಾಭಿನದಲ್ಲಿಯೂ ಗಮನ ಸೆಳೆಯುತ್ತಾರೆ. ಇದೇ ಕಾರಣಕ್ಕೆ ಇಂದಿಗೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು ತಾತ್ಕಾಲಿಕವಾಗಿ ಸಿನಿಮಾ ಚಟುವಟಿಕೆಯಿಂದ ದೂರ ಸರಿಯಲಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ (Highest-Paid Actress) ಪೈಕಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ಪ್ರತಿ ಚಿತ್ರಕ್ಕೆ 15-30 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎಂದು ವರದಿ ತಿಳಿಸಿದೆ.

ಟಾಪ್‌ ನಾಯಕಿಯರು

ಇನ್ನು ಎರಡನೇ ಸ್ಥಾನದಲ್ಲಿ ನಟಿ, ರಾಜಕಾರಣಿ ಕಂಗನಾ ರಾಣಾವತ್‌ ಇದ್ದಾರೆ. 4 ಬಾರಿಯ ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ಪ್ರತಿ ಸಿನಿಮಾಕ್ಕೆ 15-27 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಮೂರನೇ ಸ್ಥಾನದಲ್ಲಿರುವ ಪ್ರಿಯಾಂಕಾ ಚೋಪ್ರಾ ಜೋನಸ್‌ 15-25 ಕೋಟಿ ರೂ. ಸಂಭಾವನೆ ಹೊಂದಿದ್ದಾರೆ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಉಳಿದಂತೆ ಕತ್ರಿನಾ ಕೈಫ್‌ (15-25 ಕೋಟಿ ರೂ.), ಆಲಿಯಾ ಭಟ್‌ (15-20 ಕೋಟಿ ರೂ.), ಕರೀನಾ ಕಪೂರ್‌ ಖಾನ್‌ (8-18 ಕೋಟಿ ರೂ.), ಶ್ರದ್ಧಾ ಕಪೂರ್‌ (7- 15 ಕೋಟಿ ರೂ.), ವಿದ್ಯಾ ಬಾಲನ್‌ (8-14 ಕೋಟಿ ರೂ.) ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ ಮತ್ತು ಐಶ್ವರ್ಯಾ ರೈ ಬಚ್ಚನ್‌ ಹೆಸರೂ ಇದೆ. ಅನುಷ್ಕಾ ಶರ್ಮಾ ಪ್ರತಿ ಚಿತ್ರಕ್ಕೆ 8-12 ಕೋಟಿ ರೂ.ಗೆ ಬೇಡಿಕೆ ಇಟ್ಟರೆ, ಐಶ್ವರ್ಯಾ ರೈ ಬಚ್ಚನ್‌ ಸಂಭಾವನೆ 10 ಕೋಟಿ ರೂ. ಎನ್ನಲಾಗಿದೆ. ವಿಶೇಷ ಎಂದರೆ ಟಾಪ್‌ 10 ಪಟ್ಟಿಯಲ್ಲಿ ದಕ್ಷಿಣ ಭಾರತ ಚಿತ್ರರಂಗದ ಯಾವೊಬ್ಬ ನಟಿಯ ಹೆಸರೂ ಇಲ್ಲ.

‘ಕಲ್ಕಿ 2898 ಎಡಿʼ ಚಿತ್ರದ ಮೇಲೆ ನಿರೀಕ್ಷೆ

ಸದ್ಯ ಇಡೀ ಭಾರತೀಯ ಚಿತ್ರರಂಗ ದೀಪಿಕಾ ಅಭಿನಯದ ‘ಕಲ್ಕಿ 2898 ಎಡಿʼ ಸಿನಿಮಾದ ಮೇಲೆ ಕುತೂಹಲದ ಕಣ್ಣು ನೆಟ್ಟಿದೆ. ತೆಲುಗು ಮೂಲದ ಈ ಪ್ಯಾನ್‌ ಇಂಡಿಯಾ ಚಿತ್ರ ಈ ವರ್ಷದ ಅತ್ಯಂತ ದುಬಾರಿ ಸಿನಿಮಾ ಎನಿಸಿಕೊಂಡಿದೆ. ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಜೂನ್‍ 27ರಂದು ಬಿಡುಗಡೆ ಆಗಲಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಮೇಲೆ ಒಂದಾಗಿದ್ದು, ಇತ್ತೀಚೆಗೆ ರಿಲೀಸ್‌ ಆಗಿರುವ ಟ್ರೈಲರ್‌ ಕುತೂಹಲ ಹೆಚ್ಚಿಸಿದೆ. ನಾಗ್‍ ಅಶ್ವಿನ್‍ ನಿರ್ದೇಶನದ ಈ ಸೈನ್ಸ್‌ ಫಿಕ್ಷನ್‌ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Continue Reading

ಬಾಲಿವುಡ್

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha: ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಈ ಮುನಿಸು ಹೆಚ್ಚು ಕಾಲ ಉಳಿಯುವುದಿಲ್ಲ. ಶತ್ರುಘ್ನ ಕೂಡ ಮದುವೆ (Sonakshi Sinha’s Wedding) ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ ತಿಳಿಸಿದ್ದಾರೆ.

VISTARANEWS.COM


on

By

Sonakshi Sinha
Koo

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Continue Reading

ಬಾಲಿವುಡ್

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Shah Rukh Khan: ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

VISTARANEWS.COM


on

Shah Rukh Khan Took ₹1 As Signing Amount For 'Nayak'
Koo

ಬೆಂಗಳೂರು: ಶಂಕರ್ ನಿರ್ದೇಶನದ 2001ರಲ್ಲಿ ಬಿಡುಗಡೆಯಾದ ʻನಾಯಕ್‌ʼ ಸಿನಿಮಾದಲ್ಲಿ (Shah Rukh Khan) ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗೆ (Shah Rukh Khan) ಮೊದಲು ಸಹಿ ಹಾಕಿದ್ದು ಶಾರುಖ್‌. ಜತೆಗೆ ಶಾರುಖ್ ಖಾನ್ ಅವರು ʻನಾಯಕ್ʼ ಚಿತ್ರಕ್ಕೆ ಸಹಿ ಹಾಕುವಾಗ ಮುಂಗಡ ಪಡೆದಿದ್ದು ಕೇವಲ ಒಂದು ರೂ. ಅಂತೆ. ಈ ಘಟನೆ ಬಗ್ಗೆ ಸಂದರ್ಶನವೊಂದರಲ್ಲಿ ಶಾರುಖ್‌ ಹೇಳಿಕೊಂಡಿದ್ದಾರೆ. ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

ಸಂದರ್ಶನದಲ್ಲಿ, ಶಾರುಖ್ ಖಾನ್ ಸಿನಿಮಾ ಬಗ್ಗೆ ಮಾತನಾಡಿ ʻʻಈ ಸಿನಿಮಾಗೆ ನಾನು ಒಪ್ಪಿಗೆ ನೀಡಿ ಸಹಿ ಹಾಕುವಾಗ ಮುಂಗಡ ಸಂಭಾವನೆ ಪಡೆದಿದ್ದು ಕೇವಲ ಒಂದು ರೂ. ಜತೆಗೆ ಡೇಟ್‌ ನೀಡಲು ಸದಾ ಸಿದ್ದ ಎಂದು ಭರವಸೆ ಕೊಟ್ಟೆ. ಆದರೆ ನನಗೆ ನಾಯಕ್‌ ಮೂಲ ಆವೃತ್ತಿ ಇಷ್ಟ ಆಗಿತ್ತು. ಹಿಂದಿ ರಿಮೇಕ್‌ ಮಾಡುವುದು ಸರಿಯೆನಿಸಲಿಲ್ಲʼʼ ಎಂದರು. ಶಾರುಖ್‌ ಮಾತು ಮುಂದುವರಿಸಿ ʻʻನಾನು ಸಹಿ ಮಾಡಿದ್ದು, ದಿನಾಂಕ ನೀಡಿರುವ ಸಾಕ್ಷಿ ಇನ್ನೂ ನನ್ನ ಬಳಿ ಇದೆ. ಶಂಕರ್‌ ಜತೆ ಇನ್ನೂ ಕೂಡ ನನಗೆ ಕೆಲಸ ಮಾಡುವ ಬಯಕೆ ಇದೆ. ಅವರು ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಂತೆ. ಅವರ ಜತೆ ಸಿನಿಮಾ ಮಾಡುವುದು ಅದೃಷ್ಟʼʼ ಎಂದರು.

ಇದನ್ನೂ ಓದಿ: Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

ಸಿನಿಮಾ ವಿಚಾರಕ್ಕೆ ಬಂದರೆ ಶಾರುಖ್ ಅವರ ಮಗಳು ಸುಹಾನಾ ಖಾನ್ ಅವರ ಜತೆ ʻದಿ ಕಿಂಗ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸುಜೋಯ್ ಘೋಷ್ ನಿರ್ದೇಶಿಸಲಿದ್ದಾರೆ. ವರದಿಗಳ ಪ್ರಕಾರ ಚಿತ್ರದ ಬಜೆಟ್ 200 ಕೋಟಿ ರೂ. ಮತ್ತೊಂದೆಡೆ, ಅನಿಲ್ ಕಪೂರ್ ಬಿಗ್ ಬಾಸ್ OTT ಸೀಸನ್ 3 ಅನ್ನು ಹೋಸ್ಟ್‌ ಮಾಡುತ್ತಿದ್ದಾರೆ.

2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ.ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading

ಬಾಲಿವುಡ್

Uorfi Javed: ನೈಟ್‌ ಪಾರ್ಟಿಯ ಕಿಲಾಡಿ ಓರಿ ಮತ್ತು ಉರ್ಫಿ ಮದುವೆ ಆಗ್ತಾರಾ?

Uorfi Javed: ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಯನ್ನು ಕನಿಷ್ಠ 20 ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

VISTARANEWS.COM


on

Uorfi Javed and Orry were spotted outside a restaurant in Mumbai
Koo

ಬೆಂಗಳೂರು: ಬಿಗ್ ಬಾಸ್ (Big Boss) ಮನೆ ಸೇರಿದ್ದ ಓರ್ಹಾನ್ ಅವತ್ರಮಣಿ ಅಲಿಯಾಸ್ ಓರಿ, ಸೆಲಿಬ್ರೆಟಿ ಪಾರ್ಟಿಗಳಿಗೆ ಹೋಗಿ (Uorfi Javed) ಅಲ್ಲಿನ ನಟ, ನಟಿಯರ ಎದೆಯ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಳ್ಳುವುದರಲ್ಲೇ ಫೇಮಸ್‌. ಇದೀಗ ಉರ್ಫಿ ಹಾಗೂ ಓರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜತೆಗೆ ಉರ್ಫಿ ಅವರು ಓರಿ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ.  ಇದೀಗ ಓರಿ ಹಾಗೂ ಉರ್ಫಿ ಫೋಟೊಗಳು ವೈರಲ್‌ ಆಗಿವೆ.

ಡಿನ್ನರ್‌ಗೆ ಉರ್ಫಿ ಹಸಿರು ಉಡುಗೆಯಲ್ಲಿ ಕಂಡು ಬಂದರೆ, ಓರಿ ಮರೂನ್ ಟಿ-ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಮತ್ತು ಸ್ನೀಕರ್ಸ್‌ನಲ್ಲಿ ಕಾಣಿಸಿಕೊಂಡರು. ಪಾಪರಾಜಿಗಳಿಗೆ ಉರ್ಫಿ ಮತ್ತು ಓರಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ. ಮಾಧ್ಯಮದವರೂ ಓರಿಗೆ ಉರ್ಫಿಯನ್ನು ಮದುವೆಯಾಗುತ್ತೀರಾ ಎಂದು ಕೇಳಿದ್ದಾರೆ. ಉರ್ಫಿ ಮದುವೆಯಾಗೋಕೆ ಓಕೆ ಅಂದ್ರೆ ನನಗೂ ಓಕೆ ಎಂದು ಓರಿ ಹೇಳಿದ್ದಾರೆ.  ಇದಕ್ಕೂ ಮುನ್ನ ಉರ್ಫಿಗೂ ಈ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಉರ್ಫಿ ತಮಾಷೆಯಾಗಿಯೇ ಉತ್ತರ ನೀಡಿ, ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ನೀವೆಲ್ಲ ನನ್ನ ಮದುವೆ ಬಗ್ಗೆ ಆತುರದಲ್ಲಿದ್ದೀರಿ ಹೇಳಿದ್ದಾರೆ.

ಈ ಹಿಂದೆ, ಪೋಸ್ಟ್ ಆಗಿದ್ದ ಮತ್ತೊಂದು ವಿಡಿಯೊದಲ್ಲಿ, ಉರ್ಫಿ ಅವರು ಓರಿಯನ್ನು ಮದುವೆಯಾಗಲು ಬಯಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಓರಿ ಯಾರು?

ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಗೆ ಕನಿಷ್ಠ 20ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

ಓರಿಯನ್ನು ಬಾಲಿವುಡ್ ʻಬೆಸ್ಟ್‌ ​​ಫ್ರೆಂಡ್ ಫಾರೆವರ್ʼ ಎಂದೇ ಹೇಳುತ್ತಾರೆ. ಓರಿ ತನ್ನ ಫ್ಯಾಷನ್​ನಿಂದಾಗಿಯೂ ಸುದ್ದಿಯಾಗುತ್ತಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ ಚೇರ್​ ಪರ್ಸನ್ ಆಫೀಸ್​ನಲ್ಲಿ ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದಾರೆ.ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ (anant ambani pre wedding) ರಿಹಾನ್ನಾ ಅವರೊಂದಿಗೆ ಕಾಣಿಸಿಕೊಂಡು ಓರಿ ಸಖತ್‌ ಸುದ್ದಿಯಾಗಿದ್ದರು. ಈ ರೀತಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಓರಿ ಪಡೆಯುವ ಸಂಭಾವನೆ ಕೇಳಿದರೆ ಶಾಕ್‌ ಆಗೋದು ಗ್ಯಾರಂಟಿ.

ಮಾಧ್ಯಮವೊಂದರ ಸಂದರ್ಶನದಲ್ಲಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಪಡೆಯುವ ಸಂಭಾವನೆ ಕುರಿತು ಮಾತನಾಡಿದ್ದರು. ʻʻಕಾರ್ಯಕ್ರಮಗಳಿಗೆ ಹಾಜರಾಗಲು ಮುಖ್ಯ ಕಾರಣ ಎಲ್ಲಿರಿಗೂ ಸಂತೋಷ ನೀಡಬೇಕು ಎಂದು. ಸೆಲೆಬ್ರಿಟಿಗಳು ನನ್ನನ್ನು ಮದುವೆಗೆ ಕರೆಯುತ್ತಾರೆ. 15ರಿಂದ 30 ಲಕ್ಷದವರೆಗೆ ಸಂಭಾವನೆ ನೀಡಿ ಸಂತೋಷಪಡುತ್ತಾರೆ. ನಾನು ಅತಿಥಿಯಾಗಿ ಅಲ್ಲಿ ಭಾಗಿಯಾಗಲ್ಲ. ಒಳ್ಳೆಯ ಸ್ನೇಹಿತನಾಗಿ ಹೋಗುತ್ತೇನೆʼʼ ಎಂದಿದ್ದರು. ಓರಿ ಶಾರುಖ್ ಖಾನ್ ಮಗಳು ಸುಹಾನಾ ಖಾನ್​ಗೂ ಬೆಸ್ಟ್ ಫ್ರೆಂಡ್. ಸುಹಾನಾ ಖಾನ್ ಜತೆ ಓರಿ ಹಲವಾರು ಸಲ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading
Advertisement
Viral Video
ಕ್ರಿಕೆಟ್8 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ15 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ15 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ45 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ48 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ53 mins ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ1 hour ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Reliance Jio Down
ದೇಶ1 hour ago

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌