BBK SEASON 10: ಮತ್ತೊಮ್ಮೆ ರಣಾಂಗಣವಾದ ಬಿಗ್‌ ಬಾಸ್‌ ಮನೆ; ಟಾಸ್ಕ್‌ ನಡುವೆ ಹತ್ತಿಕೊಂಡಿತಾ ಬೆಂಕಿ? - Vistara News

ಕಿರುತೆರೆ

BBK SEASON 10: ಮತ್ತೊಮ್ಮೆ ರಣಾಂಗಣವಾದ ಬಿಗ್‌ ಬಾಸ್‌ ಮನೆ; ಟಾಸ್ಕ್‌ ನಡುವೆ ಹತ್ತಿಕೊಂಡಿತಾ ಬೆಂಕಿ?

BBK SEASON 10: ಬಿಗ್‌ಬಾಸ್‌ ಮನೆಯಲ್ಲಿ ಮತ್ತೊಂದು ಜಗಳ ನಡೆದಿದೆ. ಟಾಸ್ಕ್‌ ನಡುವೆ ಸ್ನೇಹಿತ್‌ ಮತ್ತು ತುಕಾಲಿ ಸಂತೋಷ್‌ ಗುದ್ದಾಡಿಕೊಂಡಿದ್ದಾರೆ.

VISTARANEWS.COM


on

bigg boss 28
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶಸ್ವಿಯಾಗಿ 50 ದಿನ ಪೂರೈಸಿ ಬಿಗ್ ಬಾಸ್ ಕನ್ನಡ ಸೀಸನ್ 10 (BBK SEASON 10) ಶೋ ದಿನದಿಂದ ದಿನಕ್ಕೆ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಸಾಗುತ್ತಿದೆ. ಇದೀಗ ಬಿಗ್‌ ಬಾಸ್‌ ಮನೆಯೊಳಗೆ ಇಬ್ಬರು ಪ್ರಬಲ ಸ್ಪರ್ಧಿಗಳಾದ ಮಾಡೆಲ್ ಪವಿ ಪೂವಪ್ಪ ಮತ್ತು ಕ್ರಿಕೆಟಿಗ, ಮಾಡೆಲ್ ಅವಿನಾಶ್ ಶೆಟ್ಟಿ ವೈಲ್ಡ್‌ ಕಾರ್ಡ್‌ ಮೂಲಕ ಪ್ರವೇಶಿಸಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಈ ಮಧ್ಯೆ ಟಾಸ್ಕ್‌ನಲ್ಲಿ ಕಿರಿಕ್‌ ನಡೆದಿದ್ದು, ಬಿಗ್‌ ಬಾಸ್‌ ಮನೆ ರಣರಂಗವಾಗುವ ಲಕ್ಷಣ ಕಂಡು ಬಂದಿದೆ.

ಅಷ್ಟಕ್ಕೂ ಆಗಿದ್ದೇನು?

ಕಲರ್ಸ್‌ ಕನ್ನಡ ವಾಹಿನಿ ಹೊರ ಬಿಟ್ಟ ಹೊಸ ಪ್ರೋಮೊದಲ್ಲಿ ವಾಗ್ವಾದ ನಡೆದಿರುವುದು ಕಂಡು ಬಂದಿದೆ. ಈ ಬಾರಿ ತುಕಾಲಿ ಸಂತೋಷ್‌, ವಿನಯ್‌ ಮತ್ತು ಸ್ನೇಹಿತ್‌ ನಡುವೆ ಬೆಂಕಿ ಹೊತ್ತಿ ಉರಿದಿದೆ. ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಟಾಸ್ಕ್‌ ನೀಡಿದ್ದರು. ಅದರಂತೆ ಒಂದು ಗುಂಪು ಸ್ವಿಮ್ಮಿಂಗ್‌ ಪೂಲ್‌ನಿಂದ ಬಕೆಟ್‌ನಲ್ಲಿ ನೀರು ತಂದು ಅದನ್ನು ಕೊಳವೆಗೆ ತುಂಬಿಸಬೇಕು. ಹೀಗೆ ನೀರು ತುಂಬಿಕೊಂಡು ಬರುವ ಸ್ಪರ್ಧಿಗಳಿಗೆ ಇನ್ನೊಂದು ಗುಂಪು ಅಡ್ಡಿ ಪಡಿಸಬಹುದು. ಹೀಗೆ ಟಾಸ್ಕ್‌ ನಡುವೆ ವಿರುದ್ಧ ಗುಂಪುಗಳಲ್ಲಿರುವ ಸ್ನೇಹಿತ್‌ ಮತ್ತು ತುಕಾಲಿ ಸಂತೋಷ್‌ ನಡುವೆ ಜಗಳ ಕಾಣಿಸಿಕೊಂಡಿದೆ. ಅವರಿಬ್ಬರು ಪರಸ್ಪರ ಗುದ್ದಾಡುವುದನ್ನು ನೋಡಿ ಉಳಿದ ಸ್ಪರ್ಧಿಗಳು ಶಾಕ್‌ಗೊಳಗಾಗಿರುವುದು ಪ್ರೋಮೊದಲ್ಲಿ ಕಂಡು ಬಂದಿದೆ. ಒಮ್ಮೆ ತುಕಾಲಿ ಸಂತೋಷ್‌ ನೆಲಕ್ಕೆ ಬಿದ್ದರೆ ಇನ್ನೊಮ್ಮೆ ಸ್ನೇಹಿತ್‌ ಬಿದ್ದಿದ್ದಾರೆ. ಕೊನೆಗೆ ತುಕಾಲಿ ಅವರು, ‘ಬೇಕಂತ್ಲೇ ಮಾಡ್ತಿದ್ದಾರೆ. ನಾನು ಆಟ ಆಡಲ್ಲ ಎಂದು ಹೊರಟುಹೋಗಿದ್ದಾರೆ. ವಿನಯ್‌, ‘ಸತ್ಯವಾಗ್ಲೂ ಬೇಕಂತ ಮಾಡಿಲ್ಲ’ ಎಂದರೂ ಅವರು ಕೇಳಿಲ್ಲ. ವಿನಯ್ ಮತ್ತು ತುಕಾಲಿ ನಡುವೆ ಹೊತ್ತಿಕೊಂಡ ಕಿಡಿ ಏರುತ್ತಲೇ ಹೋಗಿದೆ.

ಸದ್ಯ ಬಿಗ್‌ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ. ಕಳೆದ ವಾರ ಕ್ಯಾಪ್ಟನ್‌ ಆಗಿದ್ದರೂ ನೀತು ವನಜಾಕ್ಷಿ ಎಲಿಮಿನೇಟ್‌ ಆಗಿ ಅಚ್ಚರಿ ಮೂಡಿಸಿದ್ದರು. ಈ ವಾರ ಮೈಕಲ್‌ ಕ್ಯಾಪ್ಟನ್‌ ಆಗಿದ್ದಾರೆ. ಈ ವಾರ ಮೈಕಲ್‌, ಸ್ನೇಹಿತ್‌, ವಿನಯ್‌, ತನಿಷಾ, ನಮ್ರತಾ, ಸಂಗೀತಾ ಮತ್ತು ವರ್ತೂರು ಸಂತೋಷ್‌ ಮನೆಯಿಂದ ಹೊರ ಹೋಗಲು ನಾಮಿನೇಟ್‌ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಮತ್ತು ಅವಿನಾಶ್ ಶೆಟ್ಟಿ ಅವರಿಗೆ ಇಬ್ಬರನ್ನು ಸೇಫ್ ಮಾಡುವ ಪರಮಾಧಿಕಾರವನ್ನ ‘ಬಿಗ್ ಬಾಸ್‌’ ನೀಡಿದ್ದರು. ತಮಗೆ ಸಿಕ್ಕ ಅಧಿಕಾರವನ್ನ ಬಳಸಿಕೊಂಡ ಪವಿ ಪೂವಪ್ಪ ಹಾಗೂ ಅವಿನಾಶ್ ಶೆಟ್ಟಿ ಎಲಿಮಿನೇಷನ್‌ ಬೆಂಕಿಯಿಂದ ಸಿರಿ ಹಾಗೂ ತುಕಾಲಿ ಸಂತು ಅವರನ್ನ ಬಚಾವ್‌ ಮಾಡಿದ್ದರು.

ಇದನ್ನೂ ಓದಿ: BBK SEASON 10: ಬಿಗ್ ಬಾಸ್ ಮನೆಗೆ ಮಾಡೆಲ್‌ ಪವಿ ಪೂವಪ್ಪ, ಕ್ರಿಕೆಟಿಗ ಅವಿನಾಶ್ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿ!

ಈ ಮಧ್ಯೆ ನಾಮಿನೇಷನ್​ ಪ್ರಕ್ರಿಯೆ ವೇಳೆ ವಿನಯ್ ಗೌಡ್‌​ ಮತ್ತೆ ಡ್ರೋನ್‌ ಪ್ರತಾಪ್‌ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಎಲಿಮಿನೇಷನ್​ಗೆ ಸ್ಪರ್ಧಿಗಳ ಹೆಸರನ್ನು ನಾಮಿನೇಟ್​ ಮಾಡುವಾಗ ಪ್ರತಾಪ್​ ಅವರ ಹೆಸರನ್ನು ವಿನಯ್​ ಪ್ರಸ್ತಾಪಿಸಿದ್ದಾರೆ. ‘ಪ್ರತಾಪ್​ ಅವರು ಬೇರೆಯವರನ್ನು ಕೀಳಾಗಿ ತೋರಿಸಿ ಇಲ್ಲಿಯವರೆಗೂ ಬಂದಿದ್ದಾರೆ’ ಎಂದು ವಿನಯ್​ ಆರೋಪಿಸಿದ್ದು ಕೂಡ ಚರ್ಚೆಗೆ ಗ್ರಾಸವಾಗಿತ್ತು.  ವೀಕೆಂಡ್‌ ಪಂಚಾಯಿತಿಯಲ್ಲಿ ಪ್ರತಾಪ್‌ಗೆ ಹೆಚ್ಚು ವೋಟ್‌ ಬಂದ ಕಾರಣ ವಿನಯ್‌ ಟಾರ್ಗೆಟ್‌ ಮಾಡಲು ಆರಂಭಿಸಿರುವಂತಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Sujay Hegde: ದೂರದ ಸಂಬಂಧಿ ಆಗಿರುವ ಪ್ರೇರಣಾ ಎನ್ನುವವರನ್ನು ಸುಜಯ್ ಮದುವೆ ಆಗಲಿದ್ದಾರೆ. ಬೆಂಗಳೂರಿನಲ್ಲಿಯೇ ಈ ನಿಶ್ಚಿತಾರ್ಥ ನಡೆದಿದ್ದು, ಕನ್ನಡ ಕಿರುತೆರೆ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

VISTARANEWS.COM


on

Sujay Hegde Manasare actor Engagement with Prerana
Koo

`ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪ್ರೇರಣಾ (Prerana) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್‌ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ. ಈ ಮೂಲಕ ಸುಜಯ್ ಬಾಳಿನಲ್ಲಿ ‘ಬಾಳ ಸಂಗಾತಿ’ ಆಗಮನ ಆಗಿದೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಸುಜಯ್ ಹೆಗಡೆ ಅವರು ‘ಆಕಾಶ ದೀಪ’, ‘ಗೋಕುಲದಲ್ಲಿ ಸೀತೆ’, ‘ಶನಿ’, ‘ಮನಸಾರೆ’, ‘ಮನಸೆಲ್ಲಾ ನೀನೆ’, ಕಥೆಯೊಂದು ಶುರುವಾಗಿದೆ‘’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಾಣಿಕ್ಯ’, ‘ವಜ್ರಕಾಯ’, ‘ಮಿ ಎಲ್‌ಎಲ್‌ ಬಿ’ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ

ಮಾಧ್ಯಮವೊಂದಕ್ಕೆ ಸುಜಯ್ ಹೆಗಡೆ ಮಾಹಿತಿ ನೀಡಿ  ‘ನಮ್ಮದು ಪ್ರೇಮ ವಿವಾಹವಲ್ಲ, ಅರೇಂಜ್ಡ್ ಮ್ಯಾರೇಜ್. ನನ್ನ ಪ್ರೇರಣಾ ನಮ್ಮ ಫ್ಯಾಮಿಲಿ ಫ್ರೆಂಡ್‌ʼʼಎಂದು ಹೇಳಿಕೊಂಡಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಸುಜಯ್ ಹೆಗಡೆ ಸದ್ಯಕ್ಕೆ ಬೆಂಗಳೂರು ನಿವಾಸಿ.

Continue Reading

ಕಿರುತೆರೆ

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Aditi Prabhudeva: ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

VISTARANEWS.COM


on

Aditi Prabhudeva is returning to reality show judge
Koo

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಳ್ಳುತ್ತಿದ್ದಾರೆ .

‘ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. 

Continue Reading

ಕಿರುತೆರೆ

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Netraa Jadhav: ಶ್ರೀರಸ್ತು ಧಾರಾವಾಹಿಯಲ್ಲಿ ಶಾರ್ವರಿ ಪಾತ್ರ ಹೇಗೆಂದರೆ ಮುಂದೆ ಒಳ್ಳೆಯವರಂತೆ ನಟಿಸುತ್ತ, ಒಳಗೊಳಗೆ ಪಿತೂರಿ ಮಾಡುವ ಪಾತ್ರ. ಇಷ್ಟು ದಿನ ಶಾರ್ವರಿ ದೆಹಲಿಯಲ್ಲಿರುವ ತಮ್ಮ ಕಂಪನಿಯಲ್ಲಿ ಸಮಸ್ಯೆ ಆಗಿತ್ತು ಎಂಬ ಕಾರಣಕ್ಕೆ ಮಾಧವ್ ಬದಲು ತಾನು ಹೋಗಿರುತ್ತಾಳೆ. ಇದೀಗ ಮತ್ತೆ ಮನೆಗೆ ವಾಪಸ್‌ ಆಗಿದ್ದಾಳೆ.ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.

VISTARANEWS.COM


on

Netraa Jadhav Out From Serial perform Yakshagana on the special occasion
Koo

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.ಧಾರಾವಾಹಿಯಲ್ಲಿ ದೆಹಲಿಗೆ ಹೋಗಿ ಬರುತ್ತೇನೆ ಎಂದು ಹೊರಟʻ ಶಾರ್ವರಿʼ, ವಾಪಸ್ ಬಂದಿದ್ದು, ಸ್ವಪ್ನಾ ದೀಕ್ಷಿತ್ ಆಗಿ. ಒಳ್ಳೆಯವಳು ಎನಿಸಿಕೊಂಡು ಕುತಂತ್ರ ಬುದ್ಧಿಯ ಶಾರ್ವರಿ ಪಾತ್ರಕ್ಕೆ ನೇತ್ರಾ ಅವರು ನ್ಯಾಯ ಒದಗಿಸಿಕೊಟ್ಟಿದ್ದರು. ಹೆಸರಿಗೆ ತಕ್ಕಂತೆಯೇ ಅಭಿನಯ ಮಾಡುವಲ್ಲಿ ಇವರದ್ದು ಎತ್ತಿದ ಕೈ. ಸೀರಿಯಲ್​ನಿಂದ ನಟಿ ನಿರ್ಗಮಿಸಿರುವುದು ಬಹಳ ಮಂದಿಗೆ ಬೇಸರ ತಂದಿದೆ.

ಧಾರಾವಾಹಿಯಿಂದ ನಟಿ ಹೊರಗೆ ಹೋಗುತ್ತದ್ದಂತೆ ಮತ್ತೆ ಕಂಡು ಬಂದದ್ದು ಯಕ್ಷಗಾನದ ಗೆಟಪ್‌ನಲ್ಲಿ. ತೆಲಂಗಾಣದಲ್ಲಿ ಅಮ್ಮಂದಿರ ದಿನದಂದು ಈ ಯಕ್ಷಗಾನ ಮಾಡಿರುವುದಾಗಿ ಅವರು ಈ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಕರ್ನಾಟಕ ಸಾಂಸ್ಕೃತಿಕ ಪ್ರದರ್ಶನವಾದ ಯಕ್ಷಗಾನವನ್ನು ತೆಲಂಗಾಣದಲ್ಲಿ ತಾಯಂದಿರ ದಿನದ ವಿಶೇಷ ಸಂದರ್ಭದಲ್ಲಿ ʻಸ್ಟಾರ್‌ ಮಾʼದಲ್ಲಿ ಪ್ರದರ್ಶಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡಿದಾಗಲೇ ನಟಿ ಯಕ್ಷಗಾನ ಕಲಾವಿದೆ ಎಂದು ಅಭಿಮಾನಿಗಳಿಗೆ ಗೊತ್ತಾಗಿದ್ದು!

ರಥ ಸಪ್ತಮಿ, ಸುಂದರಿ, ಸಾಗುತ ದೂರ ದೂರ , ಆಕೃತಿ ಹೀಗೆ ಕನ್ನಡ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು ನೇತ್ರಾ.

ಇತ್ತೀಚೆಗೆ ನಡೆದ ʻಜೀ ಕುಟುಂಬ ಅವಾರ್ಡ್ʼ ಕಾರ್ಯಕ್ರಮದಲ್ಲಿ ಜನ ಮೆಚ್ಚಿದ ಖಳ ನಟಿ ಪ್ರಶಸ್ತಿಯನ್ನು ಕೂಡ ನೇತ್ರಾ ಜಾಧವ್ ಪಡೆದುಕೊಂಡಿದ್ದರು.

Continue Reading

ಕಿರುತೆರೆ

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

Comedy Khiladigalu: ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇದ್ದಾರೆ. ನಿರೂಪಕರಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌

VISTARANEWS.COM


on

Comedy Khiladigalu anchor anushree and Jaggesh Remembers Dogs
Koo

ಬೆಂಗಳೂರು: ʻಜೀ ಕನ್ನಡʼ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಅಂದರೆ ಅದುವೇ ʻಕಾಮಿಡಿ ಕಿಲಾಡಿಗಳುʼ ಶೋ. ಈಗಾಗಲೇ ಸೀಸನ್‌ 5 (Comedy Khiladigalu) ಪ್ರೇಕ್ಷಕರ ಮುಂದೆ ಬಂದಾಗಿದೆ. ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇದ್ದಾರೆ. ನಿರೂಪಕರಾದ ಅನುಶ್ರೀ (anchor anushree) , ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ವಾರ ತಮ್ಮ ಮುದ್ದಿನ ಶ್ವಾನ ಅರ್ಜುನನ್ನು ನೆನದು ಗುಣಗಾನ ಮಾಡಿದ್ದಾರೆ ಜಗ್ಗಣ್ಣ. ಮಾತ್ರವಲ್ಲ ಅನುಶ್ರೀ ಕೂಡ ತಮ್ಮ ಮುದ್ದಿನ ʻಚಿನ್ನುʼ ಶ್ವಾನವನ್ನು ನೆನೆದು ಭಾವುಕರಾದರು.

ಜೀ ವಾಹಿನಿ ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿರುವ ಜಗ್ಗೇಶ್‌ ಅವರ ವಿಡಿಯೊವನ್ನು ಹಂಚಿಕೊಂಡಿದೆ . ‘ಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್ ಅವರು ʻಅರ್ಜುನʼ ಎಂಬ ಹೆಸರಿನ ಸಾಕು ನಾಯಿಯ ಜತೆ ಇರುವ ಫೋಟೊವನ್ನು ತೋರಿಸಿದಾಗ, ʻಇವನ ಹೆಸರನ್ನೇ ನಾನು ನನ್ನ ಮೊಮ್ಮಗನಿಗೆ ಇಟ್ಟಿದ್ದೇನೆ. ಕಾರಣವೆನೆಂದರೆ, ಲ್ಯಾಬ್ರೇಡರ್ ನಾಯಿ ಜಾಸ್ತಿ ದಿನ ಬದುಕುವುದಿಲ್ಲ. ಆದರೆ ಅವನು ಹದಿನಾಲ್ಕುವರೆ ವರ್ಷ ನಮ್ಮ ಜತೆ ಬದುಕಿದ್ದʼ ಎಂದರು.

ಈ ಅರ್ಜುನನ ಪೋಟ್ರೆ ಮಾಡಿ ನಮ್ಮ ಮನೆಯಲ್ಲಿ ಹಾಕಿಕೊಂಡಿದ್ದೇನೆ. ಯಾವಾಗಲಾದರೂ ಬೇಜಾರು ಆದರೆ ಅವನ್ನನ್ನೇ ನೋಡಿಕೊಂಡು ಕೂತ್ತಿರುತ್ತೇನೆ. ಬಹಳ ಖುಷಿ ಅವನನ್ನೇ ನೋಡಿದರೆ. ಅವನನ್ನು ಮಿಸ್‌ ಮಾಡಿಕೊಂಡ ಮೇಲೆ ಸುಮಾರು ಒಂದು ವರ್ಷ ಅತ್ತಿದ್ದೇನೆ. ಅದು ನನ್ನ ಮುಖ ಹತ್ತಿರ ಬಂದು ನೆಕ್ಕಿ ಪ್ರೀತಿ ವ್ಯಕ್ತಪಡಿಸುತ್ತಿತ್ತು. ಡೈನಿಂಗ್‌ ಟೇಬಲ್‌ನಲ್ಲಿ ಕೂತ್ಕೊಂಡು ಊಟ ಮಾಡುತ್ತಿದ್ದ ಎಂದರು. ಇದಾದ ಬಳಿಕ ಅನುಶ್ರೀ ಅವರ ಮುದ್ದಿನ ಶ್ವಾನ ಚಿನ್ನು ಫೋಟೊ ಬಂತು. ಅನುಶ್ರೀ ಚಿನ್ನು ಫೋಟೊ ನೋಡಿ ಭಾವುಕರಾದರು.

ʻʻಚಿನ್ನು ಈಗ ನಮ್ಮ ಜತೆ ಇಲ್ಲ. ಎರಡು ವರ್ಷದ ಹಿಂದೆ ಅವನನ್ನು ನಾವು ಕಳೆದುಕೊಂಡೆವು. ಇದೇ ಕೈಯಲ್ಲಿ ಕಳೆದುಕೊಂಡೆ. ಅವನು ನನ್ನ ಮಗ. ಮತ್ತೆ ಈಗ ಚಿನ್ನು ಹುಟ್ಟಿ ಬಂದಿದ್ದಾನೆ. ಏನು ಎಕ್ಸ್‌ಪೆಕ್ಟ್‌ ಮಾಡದೇ ಫ್ಯೂರ್ ಲವ್ ಕೊಡೋ ಏಕೈಕ ಅದು ಡಾಗ್ಸ್ಎಂದು ಅನುಶ್ರೀ ಹೇಳುತ್ತಾರೆ. ನಂತರ ಮಾತನಾಡಿದ ಜಗ್ಗೇಶ್, ಯಾಕೆಂದರೆ ಈ ಶ್ವಾನಗಳಲ್ಲಿ ಭಗವಂತ ಒಂದು ಶಕ್ತಿಯನ್ನಿಟ್ಟಿದ್ದಾನೆ ಎಂದರು.

ಇದನ್ನೂ ಓದಿ: IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

ʻʻಏನು ಅದು ಎಂದರೆ ಪ್ರೀತಿ ಅಕ್ಕರೆ ಊಟ ಕೊಟ್ಟರೆ ಈ ಶ್ವಾನಗಳಿಗೆ ನನ್ನವರು ಎನ್ನುವ ಭಾವನೆ ಬಂದು ಬಿಡತ್ತೆ. ಮನುಷ್ಯ ನಾಯಿ. ದೇವರು ಶ್ವಾನವನ್ನು ಯಾಕಿಟ್ಟ ಅಂದ್ರೆ, ಲೋ ನೋಡು ಅದಕ್ಕೆ ನಾಯಿ ಅಂತ ಕರೀತಾರೆ, ಆದರೆ ಮನುಷ್ಯ ನಾಯಿ ಎಂದು ಹೇಳುತ್ತಾರೆ. ಮನುಷ್ಯನಿಗೆ ನಾವು ಊಟ ಹಾಕು, ದುಡ್ಡುಕೊಡು, ಮನೆ ಮಾಡಿಕೊಡು, ಆಸ್ತಿ ಮಾಡಿಕೊಡು ಎಲ್ಲ ಕೊಡು ನಿಂಗೆ ಹಿಂದೆ ಇಂದ ಚುಚ್ಚಿ ಹೋಗುತ್ತಾನೆ. ಆದರೆ ನಾಯಿಗಳು ಮಾತ್ರ ಹೋಗಲ್ಲ, ಅವು ಮನುಷ್ಯ, ಅದು ಪ್ರೀತಿ, ಪ್ರೀತಿಯ ಸಂಕೇತವೇ ನಾಯಿʼʼ ಎಂದರು.

Continue Reading
Advertisement
Madhu Chopra on Priyanka Chopra-Nick Jonas' age gap
ಬಾಲಿವುಡ್6 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ6 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ22 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್38 mins ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ41 mins ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ47 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ49 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ1 hour ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ1 hour ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Virat Kohli
ಕ್ರೀಡೆ1 hour ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌