Supreme Court: ಇಡಿ ಬಂಧಿಸಿದ ತಮಿಳುನಾಡು ಸಚಿವರಿಗೆ ವೈದ್ಯಕೀಯ ಜಾಮೀನು ನೀಡದ ಸುಪ್ರೀಂ ಕೋರ್ಟ್‌ - Vistara News

ಕೋರ್ಟ್

Supreme Court: ಇಡಿ ಬಂಧಿಸಿದ ತಮಿಳುನಾಡು ಸಚಿವರಿಗೆ ವೈದ್ಯಕೀಯ ಜಾಮೀನು ನೀಡದ ಸುಪ್ರೀಂ ಕೋರ್ಟ್‌

ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ (V Senthil Balaji) ಅವರಿಗೆ ವೈದ್ಯಕೀಯ ಜಾಮೀನು (Medical bail) ನೀಡಲು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ನಿರಾಕರಿಸಿದೆ.

VISTARANEWS.COM


on

v senthil balaji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement directorate) ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ (V Senthil Balaji) ಅವರಿಗೆ ವೈದ್ಯಕೀಯ ಜಾಮೀನು (Medical bail) ನೀಡಲು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ನಿರಾಕರಿಸಿದೆ.

“ನಿಮ್ಮ ಅನಾರೋಗ್ಯವು ಗಂಭೀರ ಅಥವಾ ಜೀವಕ್ಕೆ ಅಪಾಯಕಾರಿ ಎಂದು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಎಸ್‌.ಸಿ ಶರ್ಮಾ ಅವರಿದ್ದ ಸರ್ವೋಚ್ಚ ನ್ಯಾಯಾಲಯದ ಪೀಠವು ಬಾಲಾಜಿ ಅವರ ವೈದ್ಯಕೀಯ ಸ್ಥಿತಿಯು “ಜೀವ ಬೆದರಿಕೆ” ಅಥವಾ “ಗಂಭೀರ” ಎಂದು ನ್ಯಾಯಾಲಯಕ್ಕೆ ಮನವರಿಕೆಯಾಗದ ಕಾರಣ ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿತು.

ನ್ಯಾಯಾಲಯವು ಸೂಕ್ತ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯಲು ಬಾಲಾಜಿಗೆ ಅನುಮತಿ ನೀಡಿದೆ. ವೈದ್ಯಕೀಯ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್ ಮಾಡಿದ ಅವಲೋಕನಗಳು ಇದರಲ್ಲಿ ಅನ್ವಯವಾಗುವುದಿಲ್ಲ. ಅರ್ಜಿದಾರರ ವಿರುದ್ಧ ಈ ಆದೇಶದಲ್ಲಿ ಮಾಡಿದ ಯಾವುದೇ ಅವಲೋಕನವು ಸಾಮಾನ್ಯ ಜಾಮೀನು ಅರ್ಜಿಯನ್ನು ಸಲ್ಲಿಸುವಲ್ಲಿ ಅರ್ಜಿದಾರರಿಗೆ ಅಡ್ಡಿಯಾಗುವುದಿಲ್ಲ ಎಂದು ಪೀಠ ಹೇಳಿದೆ.

ಈ ಹಿಂದೆ ಬಾಲಾಜಿ ಅವರ ವೈದ್ಯಕೀಯ ವರದಿಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಬಾಲಾಜಿ ಅವರ ಆರೋಗ್ಯ ವರದಿಯಿಂದ ಇದು ಗಂಭೀರ ವೈದ್ಯಕೀಯ ಸ್ಥಿತಿಯಂತೆ ತೋರುತ್ತಿಲ್ಲ. ಜಾಮೀನಿನ ಮೇಲೆ ಬಿಡುಗಡೆಯಾದರೆ ಬೇಕಾದ ಕಾಳಜಿ ವಹಿಸಬಹುದು ಎಂದು ಹೇಳಿತ್ತು. ಹಿಂದಿನ ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದಾಗ, ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣಕ್ಕೆ ಸಂಬಂಧಿಸಿ ಬಾಲಾಜಿ ಅವರನ್ನು ಜೂನ್ 14ರಂದು ಇಡಿ ಬಂಧಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋರ್ಟ್

Fake Complaint : ಹೆಸ್ಕಾಂ ಎಂಜಿನಿಯರ್‌ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್‌; ದೂರುದಾರೆ ಸೇರಿ 13 ಮಂದಿ ಜೈಲುಪಾಲು

Fake Complaint : ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ದೂರು ಕೊಟ್ಟಿದ್ದಾಕೆ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿದ್ದಾರೆ. 10 ವರ್ಷಗಳ ಸುದೀರ್ಘ ವಾದ-ವಿವಾದ ಆಲಿಸಿದ ನ್ಯಾಯಾಧೀಶೆ ಎಲ್.ವಿಜಯಲಕ್ಷ್ಮಿದೇವಿ ಮಹತ್ವದ ತೀರ್ಪು ಹೊರಡಿಸಿದ್ದಾರೆ.

VISTARANEWS.COM


on

By

Fake Complaint
ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ವಿರುದ್ಧ ಸುಳ್ಳು ದೂರು ನೀಡಿದ್ದ ಬಿ.ವಿ ಸಿಂಧೂ
Koo

ಬೆಳಗಾವಿ: ತನ್ನ ಮೇಲೆ ಅತ್ಯಾಚಾರ (Physical Abuse) ನಡೆದಿದೆ ಎಂದು ಸುಳ್ಳು ದೂರು (Fake Complaint) ಕೊಟ್ಟಿದ್ದಕ್ಕೆ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿದ್ದಾರೆ. ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಡಿಸಿದೆ. ಅತ್ಯಾಚಾರದ ದೂರುದಾರೆ ಬಿ.ವಿ ಸಿಂಧೂ ಸೇರಿ 13 ಜನರಿಗೆ 3 ವರ್ಷ ಆರು ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಎಲ್.ವಿಜಯಲಕ್ಷ್ಮಿದೇವಿ ಮಹತ್ವದ ತೀರ್ಪು ಹೊರಡಿಸಿದ್ದಾರೆ.

ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ವಿರುದ್ಧ ಬಿ.ವಿ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್‌ ದಾಖಲಾಗಿತ್ತು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ತನಿಖೆಯಲ್ಲಿ ಅತ್ಯಾಚಾರ, ಜೀವಬೆದರಿಕೆ ಹಾಕಿದ್ದು ಸುಳ್ಳು ಎಂದು ಬಯಲಾಗಿತ್ತು. ಆ ನಂತರ ಇತರೆ ಆರೋಪಗಳಿಂದ ಪ್ರಚೋದನೆಗೆ ಒಳಗಾಗಿ ಸುಳ್ಳು ದೂರು ನೀಡಿದ್ದಾಗಿ ದೂರುದಾರೆ ಸಿಂಧೂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಳು. ಆದರೆ 2017ರಲ್ಲಿ ದೂರುದಾರೆ ಸಿಂಧೂ ಸೇರಿ 13 ಮಂದಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳ ಸಂಗ್ರಹಿಸಿದ್ದರು. ಅಂದಿನಿಂದ ಸುದೀರ್ಘ ವಿಚಾರಣೆ ನಡೆಸಿ ವಾದ-ವಿವಾದ ಆಲಿಸಿದ ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ಮಗಳನ್ನೇ ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

ಮಂಡ್ಯ: ಅಪ್ರಾಪ್ತ ವಯಸ್ಸಿನ ಮಗಳನ್ನು ಅಪ್ಪನೇ ಗರ್ಭಿಣಿ (Physical abuse) ಮಾಡಿರುವ ಆರೋಪ ಮಂಡ್ಯ (Mandya news) ಗುತ್ತಲಿನ ಮುನೀರ್‌ ಎಂಬಾತನ ಮೇಲೆ ಬಂದಿದೆ. ಈ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮುನೀರ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮುನೀರ್‌ನನ್ನು ಪ್ರಶ್ನಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರ ತಿಳಿದ ಮಂಡ್ಯ ಈಸ್ಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರ ಕೈಯಿಂದ ಆರೋಪಿ ಮುನೀರ್‌ನನ್ನು ಬಿಡಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಮಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ತಡೆ ನೀಡಿದ ಹೈಕೋರ್ಟ್

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ತಡೆ ನೀಡಿ ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.

VISTARANEWS.COM


on

Horse Racing
Koo

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶ ನೀಡಿದ್ದು, ಇದರಿಂದ ಸದ್ಯಕ್ಕೆ ರೇಸ್ ಪಂದ್ಯಾವಳಿ (Horse Racing) ಹಾಗೂ ಬೆಟ್ಟಿಂಗ್‌ ಸ್ಥಗಿತಗೊಳ್ಳಲಿದೆ.

ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಇಂದಿನಿಂದ ಆರಂಭವಾಗಬೇಕಿದ್ದ ರೇಸ್‌ ಪಂದ್ಯಾವಳಿಗಳು ತಾತ್ಕಾಲಿಕವಾಗಿ ಅಮಾನತುಗೊಂಡಂತಾಗಿದೆ.

ಕುದುರೆ ರೇಸ್ ಆಯೋಜನೆಗೆ ಅನುಮತಿ ನಿರಾಕರಿಸಿ ರಾಜ್ಯ ಸರ್ಕಾರ 2024ರ ಜೂ.6ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿ), ಕರ್ನಾಟಕ ಟ್ರೈನರ್ಸ್‌ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ಪಂದ್ಯ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿತ್ತು. ಇದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ 2024ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಆನ್‌ ಕೋರ್ಸ್‌-ಆಫ್‌ ಕೋರ್ಸ್‌ ಕುದುರೆ ಪಂದ್ಯಗಳು ಹಾಗೂ ಬೆಟ್ಟಿಂಗ್ ಚಟುವಟಿಕೆ ನಡೆಸಲು ಅನುಮತಿ ನೀಡುವಂತೆ ಕೋರಿ ಬಿಟಿಸಿ 2024ರ ಮಾ.21ರಂದು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಕುದುರೆ ರೇಸ್ ಪಂದ್ಯಾವಳಿ ಆಯೋಜನೆಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬಿಟಿಸಿ ಮತ್ತಿತರರು ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜೂ.6ರವರೆಗೆ ಕಾಲಾವಕಾಶ ನೀಡಿ ಹೈಕೋರ್ಟ್‌ ಮೇ 21 ಹಾಗೂ 23ರಂದು ಆದೇಶಿಸಿತ್ತು. ಅದರಂತೆ, ಬಿಟಿಸಿಯ ಮನವಿ ಪರಿಶೀಲಿಸಿದ್ದ ರಾಜ್ಯ ಸರ್ಕಾರ, ತೆರಿಗೆ ವಂಚನೆ ಹಾಗೂ ಬೆಟ್ಟಿಂಗ್‌ ಅಕ್ರಮ ಸೇರಿ ವಿವಿಧ ಅವ್ಯವಹಾರಗಳನ್ನು ಮುಂದಿಟ್ಟುಕೊಂಡು ಕುದುರೆ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿ ಜೂ.6ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ | Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

ಭೂ ಕಬಳಿಕೆ; ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ದೂರು

Land Grabbing

ಬೆಂಗಳೂರು: ಭೂ ಕಬಳಿಕೆ (Land Grabbing) ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ(Lucky Ali), ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂ ಟೌನ್ ಬಳಿ, ಟ್ರಸ್ಟ್‌ಗೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದು, ಈ ಬಗ್ಗೆ ದೂರಿನ ಪ್ರತಿಯನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ, ಸಹಾಯಕ ಪೊಲೀಸ್‌ ಕಮಿಷನರ್‌ ಮಂಜುನಾಥ್‌, ಯಲಹಂಕ ನ್ಯೂ ಟೌನ್‌ ಪಿಎಸ್‌ಐ, ತಾಲೂಕು ಸರ್ವೇಯರ್‌ ಮನೋಹರ್‌, ಸುಧೀರ್‌ ರೆಡ್ಡಿ ಹಾಗೂ ಮಧಸೂಧನ್‌ ರೆಡ್ಡಿ ಸೇರಿ ಮಂದಿ ವಿರುದ್ಧ ದೂರು ದಾಖಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಯಲಹಂಕ ನ್ಯೂಟೌನ್ ಬಳಿ ಲಕ್ಕಿ ಅಲಿ ಟ್ರಸ್ಟ್ ಇದ್ದು, ಭೂ ಕಬಳಿಕೆಯಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ದೂರು ನೀಡಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತಕ್ಕೆ ಗಾಯಕ ಮನವಿ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

NEET-UG Row: ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

VISTARANEWS.COM


on

NEET UG row Result 2024 supreme court
Koo

ಹೊಸದಿಲ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆಯ (NEET-UG 2024) ನಡಾವಳಿಯ ಅಕ್ರಮಗಳ ಕುರಿತು ಎದ್ದಿರುವ ಕೋಲಾಹಲದ (NEET-UG Row) ನಡುವೆ, NEET-UG 2024 ಕೌನ್ಸೆಲಿಂಗ್‌ಗೆ (NEET-UG 2024 counselling) ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ಮತ್ತೊಮ್ಮೆ ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (NTA) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬಾಕಿ ಉಳಿದಿರುವ ಅರ್ಜಿಗಳ ಜೊತೆಗೆ ಹೊಸ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಟ್ಯಾಗ್ ಮಾಡಿ ಜುಲೈ 8ರಂದು ವಿಚಾರಣೆಗೆ ಮುಂದೂಡಿದೆ. ಗುರುವಾರ, ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ಪದವಿಪೂರ್ವ (NEET-UG) 2024ರ ನಡವಳಿಯನ್ನು ಪ್ರಶ್ನಿಸಿ, ಪೇಪರ್ ಸೋರಿಕೆ ಮತ್ತು ಗ್ರೇಸ್ ಮಾರ್ಕ್‌ಗಳನ್ನು ಒಳಗೊಂಡಿರುವ ಅವ್ಯವಹಾರಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ ಮೂರು ಹೈಕೋರ್ಟ್‌ಗಳಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿಯಿತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ರಜಾಕಾಲದ ಪೀಠವು, ಎನ್‌ಇಇಟಿ-ಯುಜಿ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಲ್ಲಿಸಿದ ವರ್ಗಾವಣೆ ಅರ್ಜಿಗಳು ಮತ್ತು ಇದೇ ರೀತಿಯ ಕುಂದುಕೊರತೆಗಳನ್ನು ಎತ್ತುವ ಇತರ 11 ಅರ್ಜಿಗಳನ್ನೂ ಸೇರಿಸಿ ನೋಟಿಸ್ ಜಾರಿ ಮಾಡಿದೆ. ಜುಲೈ 8 ರಂದು ವಿಚಾರಣೆಗೆ ಬರಲಿರುವ ಇದೇ ವಿಷಯದ ಕುರಿತು ಬಾಕಿ ಉಳಿದಿರುವ ಪ್ರಕರಣಗಳ ಜೊತೆಗೆ ಈ ವಿಷಯವನ್ನು ಸೇರಿಸಲಾಗಿದೆ.

ಕಳೆದ ವಾರ, ನೀಟ್‌ ಪರೀಕ್ಷೆಯಲ್ಲಿ ಆಗಿರಬುದಾದ ಸಣ್ಣ ನಿರ್ಲಕ್ಷ್ಯವನ್ನು ಸಹ ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಗುಡುಗಿತ್ತು. ಆದರೆ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತ್ತು. “ಯಾರದಾದರೂ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ ಸದ ಅದನ್ನು ಸಂಪೂರ್ಣವಾಗಿ ಬಗೆಹರಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ನೀಟ್‌ ಪರೀಕ್ಷೆಯನ್ನು ಮೇ 5ರಂದು ನಡೆಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಫಲಿತಾಂಶಗಳು ಬಂದವು. ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾದ ನೀಟ್ ಪರೀಕ್ಷೆಯಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದರು. ನಂತರ, ಪ್ರವೇಶ ಪರೀಕ್ಷೆಯ ನಡವಳಿಯಲ್ಲಿ ಅಕ್ರಮಗಳಾಗಿವೆ ಎಂದು ವೈದ್ಯಕೀಯ ಆಕಾಂಕ್ಷಿಗಳು ಆರೋಪಿಸಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳ ಬಗ್ಗೆಯೂ ಕೋಲಾಹಲ ಉಂಟಾಗಿತ್ತು. ಪ್ರತಿಭಟನೆಯ ನಂತರ, NTA 1500ಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳಿಗೆ ಪರೀಕ್ಷೆಯನ್ನು ಮರುಪಡೆಯಲು ಕೇಳಿಕೊಂಡಿತು.

ಏತನ್ಮಧ್ಯೆ, ಯುಜಿಸಿ-ನೆಟ್ ಪೇಪರ್ ಇಂಟರ್‌ನೆಟ್‌ನಲ್ಲಿ ಸೋರಿಕೆಯಾದ ನಂತರ ಪರೀಕ್ಷೆ ರದ್ದತಿಗೆ ಕಾರಣವಾಯಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಎನ್‌ಟಿಎಯಲ್ಲಿ ಸುಧಾರಣೆಗಳ ಕುರಿತು ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

“ಎನ್‌ಟಿಎಯಲ್ಲಿನ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ. ಸಮಿತಿಯು ಎನ್‌ಟಿಎ, ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್‌ಗಳನ್ನು ಇನ್ನಷ್ಟು ಸುಧಾರಿಸಲು ಶಿಫಾರಸುಗಳನ್ನು ಮಾಡುವ ನಿರೀಕ್ಷೆಯಿದೆ. ಶೂನ್ಯ-ದೋಷ ಪರೀಕ್ಷೆಯು ನಮ್ಮ ಬದ್ಧತೆ. ಸಮಿತಿಯು ಜಾಗತಿಕ ತಜ್ಞರನ್ನೂ ಹೊಂದಿರುತ್ತದೆ” ಎಂದು ಅವರು ಹೇಳಿದರು.

ಏನಿದು ಹಗರಣ?

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.

Continue Reading

ಕರ್ನಾಟಕ

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Darshan Arrested: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಾತ್ರ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ದರ್ಶನ್‌ ಸೇರಿ ನಾಲ್ವರನ್ನೇ ಕಸ್ಟಡಿಗೆ ಪಡೆದಿರುವ ಪೊಲೀಸರು ಯಾವೆಲ್ಲ ತನಿಖೆ ನಡೆಸಲಿದ್ದಾರೆ. ಕೇಸ್‌ನಲ್ಲಿ ಇನ್ನೂ ಯಾವೆಲ್ಲ ರೀತಿಯ ತನಿಖೆ ಬಾಕಿ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

actor Darshan Arrested
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನು ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನು ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್‌ ಅರ್ಜಿಗಳನ್ನು ಸಲ್ಲಿಸಿತ್ತು. ದರ್ಶನ್‌ ಸೇರಿ ಆರು ಆರೋಪಿಗಳನ್ನು ಮಾತ್ರ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬುದಾಗಿ ಕೋರಿತ್ತು. ಈಗ ಇಷ್ಟೇ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬುದಾಗಿ ಮನವಿ ಮಾಡಿದ್ದು ಏಕೆ ಎಂಬುದೇ ರೋಚಕವಾಗಿದೆ.

ಹೌದು, ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್‌ನನ್ನು ನ್ಯಾಯಾಲಯವು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಹಣ ಪಡೆದಿದ್ದೇ ಎ 14 ಪ್ರದೋಷ್.‌ ದರ್ಶನ್‌ ಪರಮಾಪ್ತನಾಗಿರುವ ಈತನು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾನೆ. ಇನ್ನು, ಎ 10 ವಿನಯ್ ಸ್ಟೋನಿ ಬ್ರೂಕ್‌ ರೆಸ್ಟೋರೆಸ್ಟ್‌ನ ಮಾಲೀಕನಾಗಿದ್ದಾನೆ. ವಿನಯ್‌ ಮಾವ ಪಟ್ಟಣಗೆರೆ ಜಯಣ್ಣ ಅವರ ಮಾಲೀಕತ್ವದ ಶೆಡ್‌ನಲ್ಲೇ ಕೊಲೆ ನಡೆದಿದೆ. ಮತ್ತೊಂದೆಡೆ, ರೇಣುಕಾಸ್ವಾಮಿಯ ಮೊಬೈಲ್‌ಅನ್ನು ಧನರಾಜ್‌ ಬಿಸಾಡಿದ್ದಾನೆ. ಹಾಗಾಗಿ, ಪೊಲೀಸರು ನಾಲ್ವರನ್ನು ಕಸ್ಟಡಿಗೆ ಪಡೆದಿದ್ದಾರೆ.

ಪೊಲೀಸರ ಪರವಾಗಿ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನಕುಮಾರ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ರೇಣುಕಾಸ್ವಾಮಿಯ ಮೊಬೈಲ್‌ ಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಬರಬೇಕು. ಮೃತ ವ್ಯಕ್ತಿಯ ಒಳಾಂಗಗಳ ಎಫ್‌ಎಸ್‌ಎಲ್‌ ವರದಿ, ಆರೋಪಿಗಳ ಎಫ್‌ಎಸ್‌ಎಲ್‌ ವರದಿ ಬರಬೇಕು. ಹಾಗಾಗಿ, ದರ್ಶನ್‌ ಸೇರಿ ಕೆಲ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಧೀಶ ವಿಶ್ವನಾಥ್‌ ಸಿ. ಗೌಡರ್‌ ಅವರು ನಾಲ್ವರನ್ನು ಪೊಲೀಸ್‌ ಕಸ್ಟಡಿಗೆ ವಹಿಸಿದರು. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಕೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲ್‌ಗಳು, ಸ್ಥಳ ಮಹಜರು ವೇಳೆ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ.

ಪವಿತ್ರಾ ಗೌಡ ಸೇರಿ 11 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ , ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಜೂನ್‌ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು. ಅದೇ ದಿನ ಪವಿತ್ರಾ ಗೌಡರನ್ನೂ ಬಂಧಿಸಲಾಗಿತ್ತು.

ಇದನ್ನೂ ಓದಿ: Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

Continue Reading
Advertisement
Congress Protest
ಕರ್ನಾಟಕ16 mins ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ53 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ1 hour ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ1 hour ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ2 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ2 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Kalki 2898AD
ಸಿನಿಮಾ3 hours ago

Kalki 2898AD: ಕಲಿಯುಗದಲ್ಲಿ ʼಕಲ್ಕಿʼಯ ಆಗಮನದ ಚರ್ಚೆ ಹುಟ್ಟು ಹಾಕಿದ ‘ಕಲ್ಕಿ 2898ಎಡಿ’ ಸಿನಿಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು8 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ12 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌