Foeticide Case : ತಿಂಗಳಿಗೆ 70 ಅಬಾರ್ಷನ್‌; ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದ ನರ್ಸ್‌ ಮಂಜುಳಾ - Vistara News

ಕರ್ನಾಟಕ

Foeticide Case : ತಿಂಗಳಿಗೆ 70 ಅಬಾರ್ಷನ್‌; ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದ ನರ್ಸ್‌ ಮಂಜುಳಾ

Foeticide Case : ಭ್ರೂಣ ಹತ್ಯೆ ದಂಧೆಯಲ್ಲಿ ನರ್ಸ್‌ವೊಬ್ಬಳು ಸಿಕ್ಕಿಬಿದ್ದಿದ್ದು, ಬಂಧಿತರ ಸಂಖ್ಯೆಯು 10ಕ್ಕೆ ಏರಿಕೆ ಆಗಿದೆ. ಬಂಧಿತಳು ತಿಂಗಳಿಗೆ 70 ಅಬಾರ್ಷನ್‌ ಮಾಡಿಸಿ, ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದಾಗಿ ಬಾಯ್ಬಿಟ್ಟಿದ್ದಾಳೆ.

VISTARANEWS.COM


on

foeticide case Nurse Manjula arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಮೈಸೂರು: ಭ್ರೂಣ ಹತ್ಯೆ (Foeticide Case) ಪ್ರಕರಣದಲ್ಲಿ ದಿನಕ್ಕೊಂದು ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ಮತ್ತೊಬ್ಬ ಮಹಿಳೆ ಅರೆಸ್ಟ್‌ ಆಗಿದ್ದಾಳೆ. ಡಾ ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಆ ಮೂಲಕ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಬಂಧಿತ ಆರೋಪಿ ಆಗಿದ್ದಾಳೆ.

ದಂಧೆ ಬಯಲಾಗುತ್ತಿದ್ದಂತೆ ಕಾಲ್ಕಿತ್ತಿದ್ದ ನರ್ಸ್‌

ಮಂಜುಳಾ ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಪೊಲೀಸರು ಯಾವಾಗ ಚಂದನ್‌ ಬಲ್ಲಾಳ್‌ನನ್ನು ಭ್ರೂಣ ಹತ್ಯೆ ದಂಧೆಯಲ್ಲಿ ಅರೆಸ್ಟ್‌ ಮಾಡಿದ್ದರೋ, ಆಗ ಮಂಜುಳಾ ಕೆಲಸ ಬಿಟ್ಟಿದ್ದಳು. ನಂತರ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಹಲವು ದಿನಗಳಿಂದ ಮಂಜುಳಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆಕೆ ಜಾಡು ಹಿಡಿದು ಹೋದ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆಯಿಂದಲೇ ವಶಕ್ಕೆ ಪಡೆದು ಕರೆತಂದಿದ್ದಾರೆ.

ವಿಚಾರಣೆಯಲ್ಲಿ ಆರೋಪಿ ಮಂಜುಳಾ ಮೂಲತಃ ಚಾಮರಾಜನಗರದವಳು ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದಿಂದ ಡಾ. ಬಲ್ಲಾಳ್ ಜತೆ ಮೈಸೂರಿನ ರಾಜ್ ಕುಮಾರ್ ರಸ್ತೆಯ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ‌ ಮಾಡುತ್ತಿದ್ದಳು. ಆಸ್ಪತ್ರೆಯಲ್ಲೆ ಉಳಿದುಕೊಂಡು ಭ್ರೂಣ ಹತ್ಯೆ ದಂಧೆ ನಡೆಸುತ್ತಿದ್ದಳು.

ಇದನ್ನೂ ಓದಿ:Doctor death : ಮಂಡ್ಯದ ಮತ್ತೊಬ್ಬ ಡಾಕ್ಟರ್‌ ಆತ್ಮಹತ್ಯೆ; ಭ್ರೂಣ ಹತ್ಯೆಗೆ ಸಂಬಂಧ ಇದ್ಯಾ?

ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಫ್ಲಶ್‌!

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ. ಒಂದೆರಡು ಪ್ರಕರಣಗಳಲ್ಲಿ 6 ತಿಂಗಳ ಮಕ್ಕಳನ್ನೂ ಗರ್ಭದಿಂದ ಹೊರತೆಗೆದಿದ್ದೇನೆ. ಆರು ತಿಂಗಳ ಮಗುವಿಗೂ ಜೀವ ಇರುತ್ತಿತ್ತು, ಆದರೆ ಅವುಗಳಿಗೆ ಧ್ವನಿ ಇನ್ನೂ ಬಂದಿರುವುದಿಲ್ಲ. ಆದರೆ ಹೊರ ತೆಗೆದಾಗ ಕೆಲ ಸಮಯದ ನಂತರ ಸಾಯುತ್ತಿದ್ದವು ಎಂದು ಮಂಜುಳಾ ಹೇಳಿದ್ದಾಳೆ.

ಆಪ್ತ ಸಮಾಲೋಚಕಿಯೂ ಆಗಿದ್ದ ನರ್ಸ್‌ ಮಂಜುಳಾ

ಭ್ರೂಣ ಹತ್ಯೆಗೆ ನರ್ಸ್‌ ಮಂಜುಳಾನೇ ಆಪ್ತ ಸಮಾಲೋಚಕಿ ಆಗಿರುತ್ತಿದ್ದಳು. ಪೋಷಕರ ಮನವೊಲಿಸಿ ಪ್ರಚೋದನೆ ನೀಡುತ್ತಿದ್ದಳು. ಮೂರ್ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದ ಮಂಜುಳಾ, ಅದೇ ಸಂಪರ್ಕದ ಆಧಾರದ ಮೇಲೆ ಬೇರೆ ಆಸ್ಪತ್ರೆಗೆ ಬಂದ ಗರ್ಭಿಣಿಯರ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಳು. ಭ್ರೂಣ ಲಿಂಗ ಪತ್ತೆಯ ಆಫರ್ ನೀಡಿ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುತ್ತಿದ್ದಳು. ಸದ್ಯ ಮಂಜುಳಾನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡವರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತ ಆಕೆಯ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Udupi News Self harming
ಬಾವಿಗಿಳಿದು ಮೃತದೇಹವನ್ನು ತೆರವು ಮಾಡಿದ ಅಗ್ನಿಶಾಮಕ ದಳ ಸಿಬ್ಬಂದಿ
Koo

ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Udupi News Self Harming

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದ ಮೇರೆಗೆ ಆಶ್ರಯ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Self Harming : ಮೈಸೂರಿನಲ್ಲಿ ನವ ವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯದ್ದು ಆತ್ಮಹತ್ಯೆನಾ? ಕೊಲೆನಾ? ಎಂಬ ಶಂಕೆ ವ್ಯಕ್ತವಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Self Harming
Koo

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಉಡುಪಿಯಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

CM Award : 2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

VISTARANEWS.COM


on

CM Award
Koo

ಬೆಂಗಳೂರು: ಚಿನ್ನ ಕಳ್ಳತನ ಪ್ರಕರಣದ ಆರೋಪ ಹೊತ್ತಿರುವ ಡಿವೈಎಸ್ಪಿ ಜಾವೀದ್​ ಇನಾಮ್ದಾರ್​ಗೆ ಮುಖ್ಯಮಂತ್ರಿಗಳ ಉತ್ತಮ ಸಾಧನೆ ಪ್ರಶಸ್ತಿ (CM Award) ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಸುರಪುರ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಾವೀದ್ ಇನಾಮ್ದಾರ್ ವಿರುದ್ಧ ಚಿನ್ನ ಕಳ್ಳತನದ ಆರೋಪವಿದೆ. ಇಂಥವರಿಗೆ ಪ್ರಶಸ್ತಿ ಶಿಫಾರಸು ಮಾಡಿರುವುದು ಅಚ್ಚರಿಗೆ ಮೂಡಿಸಿದೆ ಎಂದು ಶಾಸಕ ಶರಣಗೌಡ ಕಂದಕೂರ ವಿರೋಧ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

ಶಾಸಕ ಶರಣಗೌಡ ಕಂದಕೂರ ಪತ್ರದ ಸಾರ ಈ ಕೆಳಗೆ ಇದೆ

ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಉಪ ವಿಭಾಗದ ಉಪಾಧೀಕ್ಷರಾದ (ಡಿವೈಎಸ್‌ಪಿ) ಜಾವೀದ್​ ಇನಾಂದಾರ್​ ಇವರಿಗೆ 2023ನೇ ಸಾಲಿನ ಗೌರವಾನ್ವಿತ ಮುಖ್ಯಮಂತ್ರಿಗಳ ಪದಕಕ್ಕೆ ಈ ಭಾಗದ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ಮಾನ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್) ಕಳುಹಿಸಿದ್ದಾರೆ ಎಂಬ ಮಾಹಿತಿಗಳು ಬಂದಿವೆ. ಜಾವೀದ್​ ಇನಾಂದಾರ್​ ಅವರ ವಿರುದ್ಧ ಭ್ರಷ್ಟಾಚಾರದ ಸೇರಿದಂತೆ ಹಲವಾರು ಆರೋಪಗಳಿವೆ. ಸರ್ಕಾರವು ಬಡವರಿಗೆ ನೀಡುವ ಆಹಾರಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಂತಹ ದಂಧೆಕೋರರ ಜೊತೆಗೆ ಶಾಮೀಲಾಗಿರುವ ಗಂಭೀರ ಆರೋಪಗಳಿವೆ. ಅವೆಲ್ಲವನ್ನೂ ಮರೆಮಾಚಿ ಪದಕಕ್ಕೆ ಶಿಫಾರಸು ಮಾಡಿದ್ದು ದುರದೃಷ್ಟಕರ ಎಂದು ಕಂದಕೂರ ಅವರು ಹೇಳಿದ್ದಾರೆ.

ಇದನ್ನೂ ಓದಿ: BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

ಜಾವೀದ್​ ಇನಾಂದಾರ್​ ಅವರು ಈ ಹಿಂದೆ (2021ರಲ್ಲಿ) ಬೆಳಗಾವಿ ಜಿಲ್ಲೆ ಗೋಕಾಕ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರಾಗಿದ್ದ ಸಂದರ್ಭದಲ್ಲಿ, ಹುಕ್ಕೇರಿ ತಾಲೂಕಿನ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ 4.9 ಕೆ.ಜಿ. ಚಿನ್ನದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವು. ಚಿನ್ನದ ಕಳ್ಳ ಸಾಗಣೆ ತಡೆಗಟ್ಟಬೇಕಾದ ಪೊಲೀಸ್ ಅಧಿಕಾರಿ ಕಳ್ಳರ ಜೊತೆ ಭಾಗಿಯಾಗಿ ಸುಮಾರು 4.9 ಕೆ.ಜಿಯಷ್ಟು ಚಿನ್ನ ಲಪಟಾಯಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ತನಿಖೆ ಕೊನೆಗೊಂಡಿಲ್ಲ. ಅಂದಿನ ಗೋಕಾಕ್​ ಡಿವೈಎಸ್‌ಪಿಯಾಗಿದ್ದ ಜಾವೀದ್​ ಇನಾಂದಾರ್​ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು ಎಂದು ಕಂದಕೂರ ಅವರು ಪತ್ರದಲ್ಲಿ ಬರೆದಿದ್ದಾರೆ.

ಕಾಳಸಂತೆಯಲ್ಲಿ ಆಹಾರ ಧಾನ್ಯ ಮಾರಿದ ಶಹಾಪುರದ ಚಾಮನಾಳದ ಮಲ್ಲಿಕ್ ಎಂಬಾತನ ಜೊತೆ ಡಿವೈಎಸ್ಪಿ ಜಾವೀದ್​ ನಿಕಟ ಸಂಪರ್ಕ ಹೊಂದಿದ್ದಾರೆ. ಆರೋಪಿಗೆ ಖುದ್ದು ಡಿವೈಎಸ್‌ಪಿ ಜಾವೀದ್​ ಇನಾಂದಾರ್​​ ಸನ್ಮಾನ ಮಾಡಿ ಇಲಾಖೆಗೆ ಮಜುಗರ ತಂದಿದ್ದರು. ಅಕ್ಕಿ ಅಕ್ರಮ ಮಾರಾಟ ಪ್ರಕರಣದಲ್ಲಿ ಮಲ್ಲಿಕ್​ನನ್ನು ಪಾರು ಮಾಡಲು ಡಿವೈಎಸ್‌ಪಿ ಜಾವೀದ್​ ​ ಇನಾಂದಾರ್​ ಅವರು ಅಮಾಯಕ ವ್ಯಾಪಾರಿಗಳನ್ನು ಸಿಲುಕಿಸಿದ್ದರು. ಈ ಹಿಂದೆ ನಡೆದ ಅಧಿವೇಶನದಲ್ಲಿ ನಾನು ಇದನ್ನು ಸರ್ಕಾರದ ಗಮನಕ್ಕೆ ತಂದಿರುತ್ತೇನೆ ಎಂದು ಕಂದಕೂರ ಅವರ ಪತ್ರದಲ್ಲಿ ತಿಳಿಸಿದ್ದಾರೆ.

ಅವರ ಬಗ್ಗೆ ಹಿರಿಯ ಅಧಿಕಾರಿಗಳು ನೀಡಿರುವ ಶಿಫಾರಸು ಪತ್ರದಲ್ಲಿ ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಆಕ್ರಮದ ಪ್ರಕರಣವನ್ನು ಜಾವೀದ್​ ಪತ್ತೆ ಹಚ್ಚಿದ್ದಾರೆ ಎಂದು ಬರೆಯಲಾಗಿದೆ. ವಾಸ್ತವದಲ್ಲಿ, ಕಲಬುರಗಿ ಹಿರಿಯ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಈ ಪ್ರಕರಣ ಬಯಲಾಗಿದೆ. ಇನ್ನೂ ಅನೇಕ ಪ್ರಕರಣಗಳನ್ನು ಬಗೆ ಹರಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿರುವ ಅಂಶಗಳು ಬಹುತೇಕ ಸತ್ಯಕ್ಕೆ ದೂರವಾಗಿದೆ. ಈ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸ್ಸು ಮಾಡುತ್ತಿರುವುದು ಪ್ರಾಮಾಣಿಕ ಅಧಿಕಾರಿಗಳನ್ನು ಕುಗ್ಗಿಸಿದಂತೆ ಎಂದು ಶಾಸಕರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Stabbing Case : ಪಾರ್ಕಿಂಗ್ ವಿಚಾರದಲ್ಲಿ ಜಗಳ; ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ನಟಿ ಅನುಷ್ಕಾ ಶೆಟ್ಟಿಯ ಮಾವ

Stabbing Case : ಘಟನೆಯಲ್ಲಿ ಸದಾಶಿವ ಪೈ ಅವರ ಕೈ ಗೆ ಗಾಯವಾಗಿದ್ದು ಅವರು ಪುತ್ತೂರಿನ ಸರಕಾರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರು ಗುಣಶೇಖರ್ ಅವರ ತಲೆಗೂ ಹೊಡೆದಿದ್ದಾರೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.

VISTARANEWS.COM


on

stabbing Case
Koo

ಪುತ್ತೂರು (ದಕ್ಷಿಣ ಕನ್ನಡ): ಇಲ್ಲಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಿಚಾರದಲ್ಲಿ ನಡೆದ ಗಲಾಟೆ ತಾರಕ್ಕೇರಿದ ಹಿನ್ನೆಲೆಯಲ್ಲಿ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಮಾವ ಉರಮಾಲು ಗುಣಶೇಖ‌ರ್ ಶೆಟ್ಟಿ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (Stabbing Case) ಇರಿದಿದ್ದಾರೆ. ಅವರೊಂದಿಗೆ ಗಲಾಟೆ ಮಾಡಿರುವ ಸದಾಶಿವ ಪೈ ಎಂಬುವರ ಕೈಗೆ ಗಾಯವಾಗಿದೆ.

ಘಟನೆಯಲ್ಲಿ ಸದಾಶಿವ ಪೈ ಅವರ ಕೈ ಗೆ ಗಾಯವಾಗಿದ್ದು ಅವರು ಪುತ್ತೂರಿನ ಸರಕಾರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರು ಗುಣಶೇಖರ್ ಅವರ ತಲೆಗೂ ಹೊಡೆದಿದ್ದಾರೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.

ಕೋರ್ಟ್ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿರುವ ವಿಚಾದಲ್ಲಿ ಗಲಾಟೆ ಆರಂಭವಾಗಿತ್ತು. ಕಾರಿಗೆ ಇನ್ನೊಂದು ಕಾರು ಅಡ್ಡಲಾಗಿ ನಿಲ್ಲಿಸಲಾಗಿದೆ ಎಂಬುವ ವಿಚಾರದಲ್ಲಿ ಗುಣಶೇಖರ್ ಮತ್ತು ಸದಾಶಿವ ಪೈ ನಡುವೆ ಗಲಾಟೆ ಆರಂಭಗೊಂಡಿದೆ. ಈ ವೇಳೆ ಕೈಕೈ ಮಿಲಾಯಿಸಿದ್ದು ಗುಣಶೇಖರ್ ಅವರು ಚಾಕು ತೆಗೆದು ಇರಿದಿದ್ದಾರೆ. ಗಾಯಗೊಂಡ ಸದಾಶಿವ ಪೈ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದಾರೆ. ಗುಣಶೇಖರ್ ಅವರೂ ಪ್ರತಿದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

ಕಿರಿದಾಗಿರುವ ಕೋರ್ಟ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ಇದೆ. ಈ ರಸ್ತೆಯಲ್ಲಿನ ಅಂಗಡಿಯೊಂದರ ಮುಂದೆ ಈ ಇಬ್ಬರ ನಡುವೆ ವಾಹನ ಪಾರ್ಕ್ ಮಾಡಿದ ವಿಚಾರವಾಗಿ ಗಲಾಟೆ ಆಗಿದೆ. ಈ ವೇಳೆ ಗುಣಶೇಖರ್ ಸದಾಶಿವ ಪೈ ಅವರಿಗೆ ಚೂರಿಯಿಂದ ಇರಿದಿದ್ದಾರೆ. ಚೂರಿ ಇರಿತದಿಂದ ತಪ್ಪಿಸಿಕೊಳ್ಳಲು ಕೈ ಅಡ್ಡ ಹಿಡಿದಿದ್ದ ಸದಾಶಿವ ಪೈ ಕೈಗೆ ಗಾಯವಾಗಿದೆ. ಸದಾಶಿವ ಪೈ ಪುತ್ತೂರಿನ ದರ್ಬೆ ನಿವಾಸಿಯಾಗಿದ್ದು, ಪುತ್ತೂರಿನ ಮುಕ್ರಂಪಾಡಿಯ ಆನಂದಾಶ್ರಮದಲ್ಲಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗುಣಶೇಖರ್ ಶೆಟ್ಟಿ ಉರಮಾಲ್ ನಿವಾಸಿ. ಇಬ್ಬರೂ ಕೂಡಾ 60ರ ಆಸುಪಾಸಿನಲ್ಲಿ ಇರುವ ವ್ಯಕ್ತಿಗಳಾಗಿದ್ದು, ಪಾರ್ಕಿಂಗ್ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ್ದು ಅಚ್ಚರಿ ಮೂಡಿಸಿದೆ.

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Kannada Serials TRP seetha rama grow Ninagaagi serial full down
ಕಿರುತೆರೆ15 mins ago

Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

Udupi News Self harming
ಉಡುಪಿ23 mins ago

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

Self Harming
ಮೈಸೂರು38 mins ago

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Italian Parliament
ವೈರಲ್ ನ್ಯೂಸ್44 mins ago

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

Kotee Movie release today dolly dhananjay
ಸ್ಯಾಂಡಲ್ ವುಡ್47 mins ago

Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

T20 World Cup 2024
ಕ್ರೀಡೆ50 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

Actor Darshan case comparision to serial troll
ಕಿರುತೆರೆ50 mins ago

Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

CM Award
ಪ್ರಮುಖ ಸುದ್ದಿ60 mins ago

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

Ajay Devgn Singham Again postponed release on Diwali 2024
ಬಾಲಿವುಡ್1 hour ago

Ajay Devgn: ʻಪುಷ್ಪ’ನಿಗೆ ಹೆದರಿದ ‘ಸಿಂಗಂ’; ಅಜಯ್ ದೇವಗನ್ ಸಿನಿಮಾ ರಿಲೀಸ್​ ಪೋಸ್ಟ್‌ಪೋನ್‌?

Priyanka Gandhi
ದೇಶ1 hour ago

Priyanka Gandhi: ರಾಹುಲ್ ಗಾಂಧಿ ತೆರವು ಮಾಡುವ ವಯನಾಡ್‌ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌