Cash shower: ಶರತ್ ಬಚ್ಚೇಗೌಡ ಮೇಲೆ ನೋಟುಗಳ ಸುರಿಮಳೆಗೈದ ಅಭಿಮಾನಿಗಳು! - Vistara News

ಕರ್ನಾಟಕ

Cash shower: ಶರತ್ ಬಚ್ಚೇಗೌಡ ಮೇಲೆ ನೋಟುಗಳ ಸುರಿಮಳೆಗೈದ ಅಭಿಮಾನಿಗಳು!

Sharath Bachegowda: ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬ ಆಚರಣೆ ವೇಳೆ ಹೂವಿನ ಜತೆಗೆ ಹಣದ ಮಳೆ ಸುರಿಸಿ, ಅಭಿಮಾನಿಗಳು ಜೈಕಾರ ಹಾಕಿದ್ದಾರೆ.

VISTARANEWS.COM


on

MLA Sharath Bachegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ: ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬದಲ್ಲಿ ಝಣ ಝಣ ಕಾಂಚಾಣ ಸದ್ದು ಮಾಡಿದೆ. ತಮ್ಮ ನೆಚ್ಚಿನ ನಾಯಕನಿಗೆ ಅಭಿಮಾನಿಗಳು ಹೂವಿನ ಜತೆ ನೋಟುಗಳ ಸುರಿಮಳೆಗೈದಿರುವುದು (Cash shower) ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ನಡೆದಿದೆ.

ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬ ಆಚರಣೆ ವೇಳೆ ಹೂ ಜತೆಗೆ ಹಣದ ಮಳೆ ಸುರಿಸಿ, ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಹಣದ ಮಳೆ ಸುರಿಯುತ್ತಿದ್ದಂತೆ ಎಚ್ಚೆತ್ತ ಶಾಸಕ ಶರತ್ ಬಚ್ಚೇಗೌಡ, ಕೆಳಕ್ಕೆ‌ ಬಿದ್ದ ಹಣವನ್ನ ಸ್ವತಃ ಕೈಗೆತ್ತಿಕೊಂಡು ಜನರಿಗೆ ನೀಡಿದ್ದಾರೆ. ನಂತರ ಹಣ ಹಾಕದಂತೆ ಅಭಿಮಾನಿಗಳಿಗೆ ತಾಕೀತು ಮಾಡಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೃಹತ್‌ ಸೇಬಿನ ಹಾರದೊಂದಿಗೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಸ್ವಾಗತ ಕೋರಲಾಗಿದೆ. ಈ ವೇಳೆ ಹೂವಿನ ಜತೆಗೆ ನೋಟಿನ ಮಳೆ ಸುರಿಸಲಾಗಿದೆ. ಆದರೆ, ಸಂಭ್ರಮಾಚರಣೆ ವೇಳೆ ನೋಟಿನ ಸುರಿಮಳೆ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಹುಟ್ಟು ಹಬ್ಬವನ್ನು ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿರುವ ಶರತ್ ಬಚ್ಚೇಗೌಡ ಅವರು ಮುತ್ಸಂದ್ರ ಮತ್ತು ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ 2 ಆಂಬ್ಯುಲೆನ್ಸ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಒಟ್ಟು 30 ಲಕ್ಷ ರೂ. ಮೌಲ್ಯದ ಎರಡು ಮಿನಿ ಆ್ಯಂಬುಲೆನ್ಸ್‌ಗಳನ್ನು ಶಾಸಕರು ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಹೈದರಾಬಾದ್​​​ನಲ್ಲಿ ಸಚಿವ ಶಿವಾನಂದ ಪಾಟೀಲ್‌ ಭಾಗವಹಿಸಿದ್ದ ನಡೆದ ವಿವಾಹ ಕಾರ್ಯಕ್ರಮದಲ್ಲಿ ನೋಟಿನ ಸುರಿಮಳೆಗೈದ ಘಟನೆ ನಡೆದಿತ್ತು. ಕವ್ವಾಲಿ ವೀಕ್ಷಿಸುತ್ತಿದ್ದ ವೇಳೆ ಸಚಿವ ಶಿವಾನಂದ ಪಾಟೀಲ್ ಮೇಲೆ ವ್ಯಕ್ತಿಯೊಬ್ಬರು ನೋಟುಗಳ ಮಳೆಗೈದಿದ್ದರು. ಆದರೆ, ಯಾವುದೇ ಪ್ರತಿರೋಧ‌ ತೋರದಿದ್ದ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ವಿರೋಧ ಪಕ್ಷಗಳ ನಾಯಕರು ಆಕ್ರೋಶ ಹೊರಹಾಕಿದ್ದರು. ರಾಜ್ಯದಲ್ಲಿ ಒಂದೆಡೆ ಬರಗಾಲವಿದ್ದರೆ, ಮತ್ತೊಂದೆಡೆ ನಾಡಿನ ಜನರಿಂದ ಲೂಟಿ ಮಾಡಿದ ಹಣದಲ್ಲಿ ಮಂತ್ರಿಗಳು ಮಜಾ ಉಡಾಯಿಸುತ್ತಿದ್ದಾರೆ ಎಂದು ವಿಪಕ್ಷಗಳು ಕಿಡಿಕಾರಿದ್ದವು. ಇದೀಗ ಶರತ್ ಬಚ್ಚೇಗೌಡ ಹುಟ್ಟುಹಬ್ಬದಲ್ಲಿ ನೋಟಿನ ಸುರಿಮಳೆಗೈದಿರುವುದು ಕಂಡುಬಂದಿದೆ.

ಇದನ್ನೂ ಓದಿ | Congress politics: ಮಧು ಬಂಗಾರಪ್ಪಗೆ ಅಹಂ ತಲೆಗೇರಿದೆ; ಕಾಂಗ್ರೆಸ್‌ ಶಾಸಕ ಬೇಳೂರು ವಾಗ್ದಾಳಿ

ತಮ್ಮ ಹುಟ್ಟು ಹಬ್ಬವನ್ನು ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡ ಶರತ್ ಬಚ್ಚೇಗೌಡ ಅವರು ಮುತ್ಸಂದ್ರ ಮತ್ತು ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ 2 ಆಂಬುಲೆನ್ಸ್ಗಳನ್ನು ಕೊಡುಗೆಯಾಗಿ ನೀಡಿದರು. ಇನ್ನು ರೋಗಿಗಳ ಜೀವ ಉಳಿಸಲಿಕ್ಕೆ ಈ ಆಂಬುಲೆನ್ಸ್ ಸದ್ಬಳಕೆ ಆಗಲಿ ಎಂದು ಶಾಸಕ ಶರತ್ ಬಚ್ಚೇಗೌಡ ಹಾರೈಸಿದರು. ಒಟ್ಟು 30 ಲಕ್ಷ ರೂ. ಮೌಲ್ಯದ ಎರಡು ಮಿನಿ ಆ್ಯಂಬುಲೆನ್ಸ್‌ಗಳನ್ನು ವಿತರಣೆ ಮಾಡಿದ ನಂತರ, ಆಯಾ ಗ್ರಾಮ ಪಂಚಾಯತಿ ವತಿಯಿಂದ ಆ್ಯಂಬುಲೆನ್ಸ್‌ಗಳನ್ನು ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Exit Poll 2024: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿಂ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

VISTARANEWS.COM


on

exit poll 2024
Koo

ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್​ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿರುವುದು ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಕಟಗೊಂಡಿದೆ. ಸಮೀಕ್ಷೆಯು ಅಂದಾಜಿಸಿದ ಪ್ರಕಾರ ಮುಸ್ಲಿಂ ಸಮುದಾಯದವರು ಚಲಾವಣೆ ಮಾಡಿರುವ ಶೇಕಡಾ 72ರಷ್ಟು ಮತಗಳು ಕೈ ಪಕ್ಷದ ಪಾಲಾಗಿವೆ.

ಉತ್ತರ ಪ್ರದೇಶದ ಫರೂಕಾಬಾದ್​ನ್ಲಲಿ ಏಪ್ರಿಲ್ 29ರಂದು ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಮರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕನ್ನು ಹೊಂದಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 2006ರ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದನ್ನು ಈ ವೇಳೆ ಸ್ಮರಿಸಬಹುದು. ಕಾಂಗ್ರೆಸ್ ತನ್ನ ಅಲ್ಪಸಂಖ್ಯಾತ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಒಬಿಸಿಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೀಸಲನ್ನು ಕಸಿದು ಮುಸ್ಲಿಮರಿಗೆ ನೀಡಲಿದೆ ಎಂದು ಪ್ರಧಾನಿ ಆರೋಪಿಸಿದ್ದರು. ಮೋದಿ ಅವರಿಗೆ ಮುಸ್ಲಿಮರು ಕಾಂಗ್ರೆಸ್​ಗಾಗಿ ಒಟ್ಟಾಗಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಅದಕ್ಕಾಗಿಯೇ ಅವರು ಹಿಂದೂ ಮತಗಳ ಧ್ರುವೀಕರಣಕ್ಕೆ ತಂತ್ರ ಹೆಣೆದಿದ್ದರು.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಮುಸ್ಲಿಮರು ಏಕೆ ಚುನಾವಣೆಯಲ್ಲಿ ಮುಖ್ಯವಾಗಿದ್ದರು?

ಭಾರತವು ವಿಶ್ವದಲ್ಲಿ ಮೂರನೇ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿದ ರಾಷ್ಟ್ರ. ಇದು ದೇಶವೊಂದರ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯ. ಮುಸ್ಲಿಮರು ಭಾರತದ ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ. ಭಾರತದ 543 ಲೋಕಸಭಾ ಕ್ಷೇತ್ರಗಳ ಪೈಕಿ 86ರಲ್ಲಿ ಮುಸ್ಲಿಮರ ಜನಸಂಖ್ಯೆ ಕನಿಷ್ಠ ಶೇ.20ರಷ್ಟಿದೆ. ಇದರಲ್ಲಿ 16 ಸ್ಥಾನಗಳಲ್ಲಿ, ಜನಸಂಖ್ಯೆಯಲ್ಲಿ ಆ ಪಾಲು ಶೇಕಡಾ 50ಕ್ಕಿಂತ ಹೆಚ್ಚಾಗಿದೆ. ಈ 86 ಸ್ಥಾನಗಳು 12 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಇವೆ. ಇದರಲ್ಲಿ 71 ಸ್ಥಾನಗಳು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಬಿಹಾರ, ಅಸ್ಸಾಂ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹರಡಿದೆ.

Continue Reading

ಕರ್ನಾಟಕ

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Pralhad Joshi: ಧಾರವಾಡ ಕೃಷಿ ವಿವಿ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Union Minister Pralhad Joshi showed humanity by taking the injured to the hospital in his convoy vehicle
Koo

ಹುಬ್ಬಳ್ಳಿ: ಧಾರವಾಡ ಕೃಷಿ ವಿವಿ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಮ್ಮ ಬೆಂಗಾವಲು ವಾಹನ ಮತ್ತು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಮಾನವೀಯತೆ ಮೆರೆದಿದ್ದಾರೆ.

ಆಗಿದ್ದೇನು?

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಶನಿವಾರ ಮಧ್ಯಾಹ್ನ ಬೆಳಗಾವಿಗೆ ಹೊರಟಿದ್ದು, ಇದೇ ವೇಳೆ ಮಾರ್ಗ ಮಧ್ಯೆ ಕಾರೊಂದರ ಅಪಘಾತ ಕಂಡಿದೆ. ತಕ್ಷಣ ಸಚಿವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಪಂದಿಸಿದ್ದಾರೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಧಾರವಾಡದ ಕೃಷಿ ವಿವಿ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹಣ್ಣಿನ ಅಂಗಡಿಗೆ ನುಗ್ಗಿದೆ. ಪರಿಣಾಮ ಗ್ರಾಹಕನೊಬ್ಬ ಮೃತಪಟ್ಟಿದ್ದು, ಮೂವರು ತೀವ್ರ ಗಾಯಗೊಂಡಿದ್ದರು.

ಅದೇ ಮಾರ್ಗದಲ್ಲಿ ಬೆಂಗಾವಲು ವಾಹನದೊಂದಿಗೆ ಸಂಚರಿಸುತ್ತಿದ್ದ ಸಚಿವ ಪ್ರಲ್ಹಾದ್‌ ಜೋಶಿ ಅವರು ಅಪಘಾತದ ದೃಶ್ಯ ಕಂಡು ವಾಹನ ನಿಲ್ಲಿಸಿ ನರಳುತ್ತಿದ್ದ ಗಾಯಾಳುಗಳನ್ನು ಉಪಚರಿಸಿದ್ದಲ್ಲದೇ, ತಮ್ಮ ಬೆಂಗಾವಲು ವಾಹನ ಹಾಗೂ 108 ಆಂಬ್ಯುಲೆನ್ಸ್ ತರಿಸಿ ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ವತಃ ಸಚಿವರೇ ಕೈಜೋಡಿಸಿ, ಗಾಯಾಳುಗಳಿಗೆ ಧೈರ್ಯ ತುಂಬಿದರು. ಸಚಿವರ ಸಮಯ ಪ್ರಜ್ಞೆಗೆ ಸ್ಥಳೀಯರಿಂದ ಮೆಚ್ಚುಗೆ ಸಹ ವ್ಯಕ್ತವಾಯಿತು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Valmiki Corporation Scam: ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದಲ್ಲಿ (Valmiki Corporation Scam) ಬಂಧನವಾಗಿರುವ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ನಗರದ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಪ್ರಕರಣದಲ್ಲಿ ಹಣ ದುರುಪಯೋಗ ಆರೋಪ ಕೇಳಿಬಂದಿದ್ದರಿಂದ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಹೀಗಾಗಿ ತನಿಖೆ ಆರಂಭಿಸಿದ್ದ ಎಸ್‌ಐಟಿ, ಶುಕ್ರವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿತ್ತು. ಇಂದು ಆರೋಪಿಗಳನ್ನು ವಿಚಾರಣೆಗಾಗಿ 1ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಲಾಗಿತ್ತು. ಆದ್ದರಿಂದ ಆರೋಪಿಗಳನ್ನು ವಿಚಾರಣೆಗಾಗಿ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ | Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಬಳ್ಳಾರಿ

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಅಂತಿಮ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

VISTARANEWS.COM


on

Ballari DC Prashanth Kumar Mishra visit to Vote counting centre Review of final preparations
Koo

ಬಳ್ಳಾರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 (Lok Sabha Election 2024) ರ ಮತ ಎಣಿಕೆ ಕಾರ್ಯವು ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಅಂತಿಮ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಜೂ.04 ರಂದು ಬೆಳಿಗ್ಗೆ 08 ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂ ಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್‍ಗಳ ಎಣಿಕೆಗೆ ಸಿದ್ಧ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಇದನ್ನೂ ಓದಿ: Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

ಈಗಾಗಲೆ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‍ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮತಗಳ ಎಣಿಕಾ ಕಾರ್ಯ ಅತ್ಯಂತ ಸುಗಮ ಹಾಗೂ ಸುವ್ಯವಸ್ಥೆಯಿಂದ ಜರುಗಬೇಕು, ಈ ಬಗ್ಗೆ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಎಣಿಕಾ ಕೇಂದ್ರ ಕಟ್ಟಡದಲ್ಲಿ ಅಂದು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಸೇರುವುದರಿಂದ ಉಪಹಾರ ಹಾಗೂ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು. ಕಟ್ಟಡದ ಪ್ರತಿ ಮಹಡಿಯಲ್ಲಿರುವ ಶೌಚಾಲಯಗಳನ್ನು ಸ್ವಚ್ಛವಾಗಿರಿಸಿ, ನಿಯಮಿತವಾಗಿ ಸ್ವಚ್ಛತೆಯ ನಿರ್ವಹಣೆಗೆ ಸ್ವಚ್ಛತಾ ಸಿಬ್ಬಂದಿ ನಿಯೋಜಿಸಬೇಕು, ಎಣಿಕಾ ಕೇಂದ್ರ ಪ್ರವೇಶಿಸಲು ಅಧಿಕೃತವಾಗಿ ಪಡೆದಿರುವ ಪ್ರವೇಶ ಅನುಮತಿ ಪತ್ರ (ಪಾಸ್) ಹೊಂದಿದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ವಿವಿಧ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Exit Poll 2024
ದೇಶ9 mins ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

exit poll 2024
ಪ್ರಮುಖ ಸುದ್ದಿ25 mins ago

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Union Minister Pralhad Joshi showed humanity by taking the injured to the hospital in his convoy vehicle
ಕರ್ನಾಟಕ36 mins ago

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Air Conditioner Safety
ತಂತ್ರಜ್ಞಾನ39 mins ago

Air Conditioner Safety: ಎಸಿ ಏಕೆ ಬ್ಲಾಸ್ಟ್ ಆಗುತ್ತದೆ? ಅಪಾಯ ತಡೆಯುವುದು ಹೇಗೆ?

Valmiki Corporation Scam
ಕರ್ನಾಟಕ56 mins ago

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Ballari DC Prashanth Kumar Mishra visit to Vote counting centre Review of final preparations
ಬಳ್ಳಾರಿ1 hour ago

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Exit poll 2024
ಪ್ರಮುಖ ಸುದ್ದಿ1 hour ago

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

100 kg of banned plastic seized by municipal council in Shira
ಕರ್ನಾಟಕ1 hour ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Selco India SELCO Suryamitra Annual Award to Richard Hansen of America
ಕರ್ನಾಟಕ1 hour ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

union Minister Pralhad Joshi latest statement about Valmiki Corporation scam
ಕರ್ನಾಟಕ1 hour ago

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು3 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌