ವಿಸ್ತಾರ ಅಂಕಣ: ಕನ್ನಡ ಶಾಲೆ ಉಳಿವಿಗೆ ಎಸ್ಇಪಿ ಜಾರಿಯೇ ಅಡ್ಡಿ! - Vistara News

ಅಂಕಣ

ವಿಸ್ತಾರ ಅಂಕಣ: ಕನ್ನಡ ಶಾಲೆ ಉಳಿವಿಗೆ ಎಸ್ಇಪಿ ಜಾರಿಯೇ ಅಡ್ಡಿ!

ಎನ್‌ಇಪಿ (NEP) ಹಾಗೂ ರಾಜಕೀಯ ಪ್ರತಿಷ್ಠೆಗಾಗಿ ತರಲಾಗುತ್ತಿರುವ ಎಸ್‌ಇಪಿಗಳ (SEP) ನಡುವಿನ ಸಮರದಲ್ಲಿ ಬಡವಾಗುವವರು ರಾಜ್ಯದ ಬಡ, ಸರ್ಕಾರಿ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು. ಇದು ಕನ್ನಡ ಶಾಲೆಗಳನ್ನು ಉಳಿಸುವ ದಾರಿಯೂ ಅಲ್ಲ.

VISTARANEWS.COM


on

kannada school
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

ನಮ್ಮ ಶಿಕ್ಷಣ ವ್ಯವಸ್ಥೆ (Education system) ಸರಿ ಇಲ್ಲ. ಇದರಲ್ಲಿ ಎಳ್ಳಷ್ಟು ನೈತಿಕ ಶಿಕ್ಷಣ ಇಲ್ಲ. ಪ್ರಾಯೋಗಿಕ ಶಿಕ್ಷಣದ ಸೋಂಕಿಲ್ಲ. ಇಂಥಾ ಶಿಕ್ಷಣ ಹೆಚ್ಚಾದಂತೆ ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ. ಇಂಥಾ ಶಿಕ್ಷಣ ಸುಧಾರಣೆಯಾಗಲೇಬೇಕು…!

ನಮ್ಮ ನಾಡಿನ ಶಿಕ್ಷಣ ತಜ್ಞರು, ಚಿಂತಕರು ಇಂಥಾ ಮಾತನ್ನು ಹೇಳುತ್ತಲೇ ಇರುತ್ತಾರೆ. ಅವರ ಬರಹ, ಭಾಷಣ- ಎಲ್ಲೆಲ್ಲೂ ಈ ಕೊರಗನ್ನು ಕಾಣಬಹುದು. ಹಾಗೆ ನೋಡಿದರೆ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿದ್ಯಾರ್ಥಿ ವೇತನ ಯೋಜನೆಗಳಿವೆ. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲೆಂದೇ ಈ ಯೋಜನೆಗಳು ವಿನ್ಯಾಸಗೊಂಡಿವೆ. ಶಿಕ್ಷಣ ಹಕ್ಕೂ (Education right) ಕೂಡ ಜಾರಿಯಾಗಿ ದಶಕಗಳೇ ಸಂದಿವೆ. ಆದರೂ ಉನ್ನತ ಶಿಕ್ಷಣದ ದಾಖಲಾತಿಯ ಸರಾಸರಿ ಪ್ರಮಾಣ ನಿರೀಕ್ಷಿಸಿದಷ್ಟು ಹೆಚ್ಚುತ್ತಿ,ಲ್ಲ. ಹಾಗಾಗಿ ಶಿಕ್ಷಣದ ವ್ಯವಸ್ಥೆ ತಳ ಸಮುದಾಯದ ಮಕ್ಕಳ ಅಭಿವೃದ್ಧಿಗೆ ಸಹಕಾರಿಯಾಗಿಲ್ಲ ಎಂಬುದು ಇನ್ನೂ ಕೆಲವರು ಮುಂದಿಡುವ ಕೊರಗು. ಒಂದಿಷ್ಟು ಮಂದಿಯಂತೂ, ನಮ್ಮ ರ್ಯಾಂಕ್‌ಗಳನ್ನೇ ಗೇಲಿ ಮಾಡುವುದುಂಟು. “ರ್ಯಾಂಕ್ ಬಂದ ಮಕ್ಕಳು ಅಗ್ರ ಶ್ರೇಯಾಂಕಿತರೇ ಹೊರತು ಬುದ್ಧಿವಂತರಲ್ಲ, ಕೌಶಲಿಗಳೂ ಅಲ್ಲ!” ಎಂದು ಮೂಗು ಮುರಿಯುತ್ತಾರೆ.

ಅಂದರೆ ಏನು? ಈಗಿನ ನಮ್ಮ ಶಿಕ್ಷಣದಲ್ಲಿ ಏನೋ ಸಮಸ್ಯೆ ಇದೆ ಎನ್ನುವುದು ಎಲ್ಲರೂ ಒಪ್ಪುವ ಮಾತು. ಮೊದಲನೆಯದಾಗಿ ಶಿಕ್ಷಣದ ಗುಣಮಟ್ಟ ಸರಿಯಿಲ್ಲ. ಎರಡನೆಯದಾಗಿ, ಗುಣಮಟ್ಟದ ಶಿಕ್ಷಣವು ಬಡವರ ಕೈಗೆ ಸಿಗುತ್ತಿಲ್ಲ. ಮೂರನೆಯದಾಗಿ, ಈ ಶಿಕ್ಷಣವು ವಿದ್ಯಾರ್ಥಿಗಳನ್ನು ಮಕ್ಕಿ ಕಾ ಮಕ್ಕಿ ಗಿರಾಕಿಗಳನ್ನಾಗಿ ಮಾಡಿದೆಯೇ ಹೊರತು ಜ್ಞಾನವಂತರನ್ನಾಗಿ ಅಲ್ಲ. ಇದೆಲ್ಲವೂ ಅನೇಕರು ಒಪ್ಪುವ ಮಾತು. ಇದೇ ಕಾರಣಕ್ಕೆ, ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ.

ಭಾರತದಲ್ಲಿ 34 ವರ್ಷಗಳ ನಂತರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National education policy) ಜಾರಿಗೆ ತರಲಾಗಿದೆ. ನೆನಪಿರಲಿ, ಈ ಮೂರೂವರೆ ದಶಕದಲ್ಲಿ ಶರವೇಗದಲ್ಲಿ ಬದಲಾಗಿದೆ (2000ರ ಹಿಂದಿನ ಸಾವಿರಾರು ವರ್ಗಗಳಲ್ಲಿ ಘಟಿಸದ ಬದಲಾವಣೆಯ ವೇಗದ ಪ್ರಮಾಣ, ಆ ನಂತರದ ಎರಡೂವರೆ ದಶಕದ ಅವಧಿಯಲ್ಲಿ ಸಾವಿರ ಪಟ್ಟು ಹೆಚ್ಚಿದೆ ಎಂಬ ಮಾತಿದೆ). ಬದಲಾಗದೇ ಉಳಿದಿದ್ದು ನಮ್ಮ ಅಧಿಕೃತ ಶಿಕ್ಷಣ ನೀತಿ. ಇದೇ ಇರಲಿ, ಈ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಏಕಾಏಕಿ ಜಾರಿ ಮಾಡಿದೆಯೇ? ಹಾಗೇನೂ ಇಲ್ಲ. 2015 ಫೆಬ್ರವರಿಯಲ್ಲಿ ಅಂದಿನ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಪತ್ರಿಕಾಗೋಷ್ಠಿ ನಡೆಸಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಬಗ್ಗೆ ಘೋಷಿಸಿದ್ದರು. ಭಾರತದ ಶಿಕ್ಷಣಕ್ಕೆ ಸಂಬಂಧಿಸಿದ 39 ಅಂಶಗಳನ್ನು ಜನರ ಮುಂದೆ ಇಡುತ್ತಿದ್ದೇವೆ, ದೇಶದ ಎಲ್ಲ ಜನರೂ ಇದಕ್ಕೆ ಸಲಹೆ ಕೊಡಬೇಕು, ಅದೆಲ್ಲದರ ಆಧಾರದಲ್ಲಿ ಶಿಕ್ಷಣ ನೀತಿ ರೂಪಿಸುತ್ತೇನೆ ಎಂದು ಸಾರ್ವಜನಿಕವಾಗಿ ಪ್ರಕಟಿಸಿದ್ದರು. ನಂತರ ಐದು ವರ್ಷ ವಿಚಾರ ಮಂಥನ ನಡೆಸಲಾಗಿದೆ.

ಬಹುಶಃ ಜಗತ್ತಿನಲ್ಲಿ ಯಾವುದೇ ಶಿಕ್ಷಣ ನೀತಿ ರೂಪಿಸುವಾಗ ಇಷ್ಟು ಪ್ರಮಾಣದ ಚರ್ಚೆ, ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ನಡೆದಿಲ್ಲ. ದೇಶದ 30 ಕೋಟಿ ಜನರ ಬಳಿಗೆ ಇದನ್ನು ಕೊಂಡೊಯ್ಯಲಾಗಿದೆ. ಹರಿದು ಬಂದ 2 ಲಕ್ಷಕ್ಕಿಂತ ಅಧಿಕ ಸಲಹೆಗಳನ್ನು ಸೇರಿಸಿದ್ದರೆ, ಅದರ ಒಟ್ಟು ಪುಟಗಳ ಸಂಖ್ಯೆ 50 ಸಾವಿರ ದಾಟುತ್ತಿತ್ತು. ನಿವೃತ್ತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನೇತೃತ್ವದ ಸಮಿತಿ ಇದೆಲ್ಲವನ್ನೂ ದತ್ತಾಂಶ ರೂಪಕ್ಕೆ ಇಳಿಸಿಕೊಂಡು ಎಲ್ಲವನ್ನೂ ಅಧ್ಯಯನ ಮಾಡಿ ಕರಡು ನೀತಿಯೊಂದನ್ನು ರೂಪಿಸಿತು. ಬಳಿಕ ಮತ್ತೆ ಸಾರ್ವಜನಿಕರ ಚರ್ಚೆಗೆ ಬಿಡಲಾಯಿತು. ಅಲ್ಲಿಂದ ಬಂದ ಸಲಹೆಗಳನ್ನೂ ಅಳವಡಿಸಿ ಕೊನೆಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಘೋಷಣೆ ಮಾಡಲಾಯಿತು.

ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ಇರುವ ಪ್ರಮುಖ ದೂರು ಯಾವುದು? ಅವರು ಮುಖ್ಯವಾಗಿ ಇರುವುದೇ ನೀತಿ ನಿರೂಪಣೆ ಮಾಡಲು. ಆದರೆ ಸಂಸತ್ತಿನಲ್ಲಿ ಕಾನೂನು ರಚನೆ, ತಿದ್ದುಪಡಿಯಂತಹ ಶಾಸನ ರಚನಾ ಕೆಲಸಕ್ಕೆ ಅವರ ಬಳಿ ಸಮಯವೇ ಇರುವುದಿಲ್ಲ. ಸಂಸತ್ತು ಹಾಗೂ ವಿಧಾನಮಂಡಲಗಳಲ್ಲಿ ಗದ್ದಲ, ಆರೋಪ-ಪ್ರತ್ಯಾರೋಪ ಮಾಡಿಕೊಂಡಿರುತ್ತಾರೆ ಎನ್ನುವುದು. ಆದರೆ ಈಗ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಅತ್ಯಂತ ವಿಸ್ತೃತವಾದ ಚರ್ಚೆ, ಸಾರ್ವಜನಿಕ ಸಹಭಾಗಿತ್ವ ನಡೆಸಲಾಗಿದೆ. ಆದರೂ ಕೇಂದ್ರದಲ್ಲಿ ಪ್ರತಿಪಕ್ಷಗಳು ಹಾಗೂ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಮಾತನಾಡುತ್ತಿದೆ.

kids study
kids playing in school

ಕರ್ನಾಟಕದಲ್ಲಂತೂ ಒಂದು ಹೆಜ್ಜೆ ಮುಂದೆ ಹೋಗಿ, ರಾಜ್ಯ ಶಿಕ್ಷಣ ನೀತಿ ಜಾರಿ (state education policy) ಮಾಡುವುದಾಗಿಯೂ ಘೊಷಣೆ ಮಾಡಲಾಗಿದೆ. ಇದಕ್ಕಾಗಿ ಸಮಿತಿಯನ್ನೂ ರಚಿಸಿ ಮೊದಲ ಸಭೆಯೂ ನಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತದೆ ಎನ್ನುವುದು ಸಚಿವರ ಹಾಗೂ ಸ್ವತಃ ಮುಖ್ಯಮಂತ್ರಿಗಳ ವಾದ. ಎಲ್ಲಿ ಅನ್ಯಾಯವಾಗುತ್ತದೆ ಎಂದು ಕೇಳಿದರೆ, ಇದರಲ್ಲಿ ಹಿಂದುತ್ವ ಹೇರುವ ಪಠ್ಯವಿದೆ, ನಾವು ಸಮಾನತೆಯನ್ನು ಸಾರುವ ಪಠ್ಯ ರೂಪಿಸುತ್ತೇವೆ ಎನ್ನುತ್ತಾರೆ. ಅಸಲಿಗೆ ಇವರಿಗೆಲ್ಲ, ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಏನು ಎನ್ನುವುದೇ ಅರ್ಥವಾಗಿಲ್ಲ ಅಥವಾ ಅರ್ಥವಾಗಿದ್ದರೂ ಈ ರೀತಿ ನಟಿಸುತ್ತಿದ್ದಾರೆ. ಏಕೆಂದರೆ ʼನೀತಿʼಗೂ ʼಪಠ್ಯʼಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ನೀತಿ ಎನ್ನುವುದು ಒಟ್ಟಾರೆ ಶಿಕ್ಷಣದ ವ್ಯವಸ್ಥೆ, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ, ಭಾಷಾ ದೃಷ್ಟಿಕೋನ, ವಿಜ್ಞಾನದ ಕುರಿತು ದೃಷ್ಟಿಕೋನ, ಸಂಶೋಧನೆಗೆ ನೀಡುವ ಒತ್ತು, ಮೂಲಸೌಕರ್ಯ ಸೇರಿ ಅನೇಕ ವಿಚಾರಗಳಲ್ಲಿ ಇರುತ್ತದೆ. ಹೆಚ್ಚೆಂದರೆ ದೇಶದ ಘನತೆ, ಸಾರ್ವಭೌಮತೆ, ಗಣತಂತ್ರದ ಮಹತ್ವ ಸಾರುವ ಪಠ್ಯ ಸೇರಿಸಬೇಕು ಎಂದಿರಬಹುದೇ ಹೊರತು, ಇಂಥದ್ದೇ ಪಠ್ಯವನ್ನು ಸೇರಿಸಿ ಎಂದಿರುವುದಿಲ್ಲ. ಇದನ್ನೇ ಹಿಂದುತ್ವ, ಕೇಸರೀಕರಣ ಎನ್ನುವುದು ಸರಿಯಲ್ಲ. ವಾಸ್ತವವಾಗಿ ಶಿಕ್ಷಣ ನೀತಿ, ಪಠ್ಯ ಹೇಗಿರಬೇಕು ಎಂಬುದನ್ನು ಹೇಳಿದಿಯೇ ಹೊರತು, ಯಾವುದಿರಬೇಕು ಎಂಬುದನ್ನು ಹೇಳುವುದಿಲ್ಲ. ಇದನ್ನು ನಿರ್ಧಾರ ಮಾಡುವುದು ಆಯಾ ರಾಜ್ಯಗಳ ಪಠ್ಯಪುಸ್ತಕ ರಚನಾ ಸಮಿತಿಗಳು. ಹಾಗಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯು ಕೇಸರೀಕರಣದ ಪ್ರಯತ್ನ ಎನ್ನುವುದು ಒಪ್ಪುವ ಮಾತಲ್ಲ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದರೆ ಯಾರಿಗೆ ಲಾಭ? ಯಾರಿಗೆ ನಷ್ಟ? ಸಾಮಾನ್ಯವಾಗಿ ಪೋಷಕರ ಮನೋಭಾವವನ್ನು ನೋಡೋಣ. ಕರ್ನಾಟಕದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಶಿಕ್ಷಣ ಮಾಧ್ಯಮವಾಗಿಸಬೇಕು ಎಂಬ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಸೋಲಾಗಿ, ಶಿಕ್ಷಣ ಮಾಧ್ಯಮ ಯಾವುದು ಎನ್ನುವುದನ್ನು ಪೋಷಕರು ನಿರ್ಧರಿಸಬೇಕೆ ವಿನಃ ಸರ್ಕಾರವಲ್ಲ ಎಂದು ತೀರ್ಪು ಬಂದಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳನ್ನು ಓದಿಸುತ್ತಿರುವ ಪೋಷಕರಿಗೆ ಕನ್ನಡ ಅಭಿಮಾನ ಇಲ್ಲ ಎಂದು ಅರ್ಥವೇ? ತಮ್ಮ ಮಕ್ಕಳು ದೇಶದ ಮಟ್ಟದಲ್ಲಿ, ವಿಶ್ವದ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಸಿದ್ಧವಾಗಬೇಕು ಎನ್ನುವುದು ಎಲ್ಲ ಪೋಷಕರ ಆಸೆ, ಅದು ಸಹಜವೂ ಹೌದು. ಕನ್ನಡದಲ್ಲಿ ಓದಿದರೆ ಅವಕಾಶಗಳು ಕಡಿಮೆ ಎನ್ನುವುದು ಅವರ ಅನಿಸಿಕೆ. ಅವರ ಅನಿಸಿಕೆ ಸರಿಯೋ ತಪ್ಪೋ ಎನ್ನುವುದು ಬೇರೆ ಚರ್ಚೆಯ ವಿಷಯ. ಆದರೆ ತಮ್ಮ ಮಕ್ಕಳು ಉನ್ನತ ಮಟ್ಟದ ಸ್ಪರ್ಧೆಗೆ ಸಿದ್ಧರಾಗಬೇಕು ಎನ್ನುವುದು ಪೋಷಕರ ಆಸೆ.

kids playing in school
kids playing in school

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿವಿಧ ರಾಜ್ಯಗಳು ಅನುಷ್ಠಾನ ಮಾಡುತ್ತವೆ. ಹಾಗೂ ವಿಶ್ವವಿದ್ಯಾಲಯಗಳಲ್ಲೂ ಜಾರಿ ಮಾಡಲಾಗುತ್ತದೆ. ಅಲ್ಲಿನ ಬೋಧನಾ ಪದ್ಧತಿ, ಪರೀಕ್ಷೆ, ಮೌಲ್ಯಮಾಪನ, ಅಂಕನೀಡಿಕೆಗಳು ಇದೀಗ ವಿಶ್ವದ ಮಟ್ಟದಲ್ಲಿ ಇರುವ ವ್ಯವಸ್ಥೆಗೆ ಅನುಗುಣವಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ನಾಲ್ಕು ವರ್ಷದ ಪದವಿ ಇದೆ. ಆದರೆ ಭಾರತದಲ್ಲಿ ಮಾತ್ರ ಮೂರು ವರ್ಷದ ಪದವಿ ಕೋರ್ಸ್‌ಗಳಿವೆ. ವಿದೇಶಿ ವ್ಯಾಸಂಗಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಈಗಾಗಲೆ ಅದು ಸಮಸ್ಯೆಯಾಗುತ್ತಿದೆ. ಮೂರು ವರ್ಷ ಪದವಿಯನ್ನು ಪದವಿ ಎಂದೇ ಅನೇಕ ದೇಶಗಳು ಪರಿಗಣಿಸದೇ ಇರುವುದರಿಂದ, ಸ್ನಾತಕೋತ್ತರ ಪದವಿಗೆ ಸೇರ್ಪಡೆಯಾಗಲು ಅಡ್ಡಿಯಾಗುತ್ತಿದೆ. ಹಾಗಾಗಿ ಎನ್ಇಪಿಯಲ್ಲಿ ನಾಲ್ಕು ವರ್ಷದ ಪದವಿಯನ್ನು ಪ್ರಸ್ತಾಪಿಸಲಾಗಿದೆ. ಇದೇನೂ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಅನುಕೂಲಕ್ಕೆ ತಕ್ಕಂತೆ ಕೋರ್ಸ್‌ನ ಯಾವುದೇ ವರ್ಷ ಹೊರನಡೆಯಬಹುದು. ಆಯಾ ವರ್ಷಕ್ಕೆ ಅನುಗುಣವಾಗಿ ಪ್ರಮಾಣಪತ್ರ, ಡಿಪ್ಲೊಮಾ ಮುಂತಾದ ಮಾನ್ಯತೆಯನ್ನು ನೀಡಲಾಗುತ್ತದೆ. ಉನ್ನತ ವ್ಯಾಸಂಗ ಮಾಡಬೇಕು, ವಿದೇಶಕ್ಕೆ ತೆರಳಬೇಕು ಎನ್ನುವುವವರು ನಾಲ್ಕು ವರ್ಷ ಪೂರೈಸುತ್ತಾರೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಉಪರಾಷ್ಟ್ರೀಯತೆಯನ್ನು ಬೆಂಬಲಿಸುವ ರಾಷ್ಟ್ರೀಯ ಕಾಂಗ್ರೆಸ್‌!

ಎಸ್ಇಪಿ ಎಂದು ಹೇಳುತ್ತಿರುವ ರಾಜ್ಯ ಸರ್ಕಾರ, ಒಂದು ಸಮಿತಿಯನ್ನು ನೇಮಿಸಿದೆ. ಈ ಸಮಿತಿಯ ಶಿಫಾರಸಿನಂತೆ ಎನ್ಇಪಿ ಜಾರಿಯನ್ನು ಮಾಡುವುದರಿಂದ ರಾಜ್ಯ ಸರ್ಕಾರ ಹಿಂತೆಗೆಯಿತು ಎಂದೇ ಭಾವಿಸಿಕೊಳ್ಳೋಣ. ಇದು ಯಾರಿಗೆ ಅನ್ವಯವಾಗುತ್ತದೆ? ಸರ್ಕಾರದ ನಿಯಂತ್ರಣದಲ್ಲಿರುವ ಕೆಲವು ವಿಶ್ವವಿದ್ಯಾಲಯಗಳು, ರಾಜ್ಯ ಸರ್ಕಾರದ ಪಠ್ಯಕ್ರಮ ಬೋಧಿಸುವ ಶಾಲೆಗಳಿಗೆ ಅಷ್ಟೆ. ಈಗಂತೂ ರಾಜ್ಯದಲ್ಲಿ ಸರ್ಕಾರದಷ್ಟೇ, ಉನ್ನತ ಶಿಕ್ಷಣದಲ್ಲಿ ಸರ್ಕಾರಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳನ್ನು ಖಾಸಗಿ ಸಂಸ್ಥೆಗಳು ಸೆಳೆಯುತ್ತಿವೆ. ರಾಜ್ಯದ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಎಂದು ಪರಿಗಣಿಸಲ್ಪಡುವ ಖಾಸಗಿ ವಿವಿಗಳು, ಡೀಮ್ಡ್ ವಿವಿಗಳಿಗೆ ಎಸ್ಇಪಿ ಅನ್ವಯವೇ ಆಗುವುದಿಲ್ಲ. ಜಿಲ್ಲೆ, ತಾಲೂಕು ಮಟ್ಟದಲ್ಲೂ ಇರುವ ಖಾಸಗಿ ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮಗಳಿಗೆ ಎಸ್ಇಪಿ ಅನ್ವಯ ಆಗುವುದಿಲ್ಲ. ಜಿಲ್ಲೆಗೊಂದರಂತಿರುವ ಜವಾಹರ ನವೋದಯ ವಿದ್ಯಾರ್ಥಿಗಳು, ಕೇಂದ್ರೀಯ ಶಾಲೆಗಳು, ಸೈನಿಕ ಶಾಲೆಗಳಲ್ಲಿ ಎನ್ಇಪಿಯೇ ಜಾರಿಯಾಗುತ್ತದೆ, ಅಲ್ಲಿಗೂ ಎಸ್ಇಪಿ ಅನ್ವಯ ಆಗುವುದಿಲ್ಲ. ರಾಜ್ಯ ಸರ್ಕಾರದಿಂದಲೇ ನಡೆಸುವ ಕೆಲವು ವಸತಿ ಶಾಲೆಗಳಲ್ಲೂ ಸಿಬಿಎಸ್ಸಿ ಪಠ್ಯವಿದ್ದು, ಅಲ್ಲಿಂದಲೂ ಎಸ್ಇಪಿ ಹೊರಗೇ ಇರಲಿದೆ. ಇಡೀ ದೇಶ ಎನ್ಇಪಿ ರೀತಿಯಲ್ಲಿ ನಡೆಯುತ್ತಿರುವುದರಿಂದ, ಎಸ್ಇಪಿಯಲ್ಲಿ ಓದಿದ ಕರ್ನಾಟಕ ವಿದ್ಯಾರ್ಥಿಗಳಿಗೆ ಹೊರರಾಜ್ಯಗಳಲ್ಲಿ ಉನ್ನತ ಶಿಕ್ಷಣಕ್ಕೆ, ಕೆಲಸಕ್ಕೆ ತೊಂದರೆಯಾಗಬಹುದು. ಇದೇ ಕಾರಣಕ್ಕೆ ವಿದೇಶದಲ್ಲಿ ಶಿಕ್ಷಣ ಪಡೆಯಲೂ ಅಡಚಣೆ ಆಗಬಹುದು. ಆಗ ನಷ್ಟ ಆಗುವುದು ಯಾರಿಗೆ? ಇದೇ ಸರ್ಕಾರಿ ಶಾಲೆಯಲ್ಲಿ, ಸರ್ಕಾರಿ ವಿವಿಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ.

ಈಗಾಗಲೆ ಹೇಳಿದಂತೆ, ಪೋಷಕರ ಮೊದಲ ಆದ್ಯತೆ ತಮ್ಮ ಮಕ್ಕಳ ಏಳಿಗೆ. ತಮ್ಮ ಮಕ್ಕಳು ಎಸ್ಇಪಿಯಲ್ಲಿ ಓದಿದರೆ ಭವಿದ್ಯ ಇಲ್ಲ ಎಂದು ತಿಳಿದರೆ ಅವರೂ ನಿಧಾನವಾಗಿ ಸಿಬಿಎಸ್ಇ ಶಾಲೆಗಳತ್ತ ಹೊರಳುತ್ತಾರೆ. ವಿದ್ಯಾರ್ಥಿಗಳು ಆಸಕ್ತಿ ವಹಿಸುತ್ತಿರುವ ಕಾರಣ, ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳೂ ನಿಧಾನವಾಗಿ ಸಿಬಿಎಸ್ಇ (CBSE) ಮಾನ್ಯತೆಯತ್ತ ಹೆಜ್ಜೆ ಹಾಕುತ್ತವೆ. ಅಲ್ಲಿಗೆ, ಅನುದಾನಿತ ಶಾಲೆಗಳನ್ನು ಹೊರತುಪಡಿಸಿ ಖಾಸಗಿ ವಲಯದಲ್ಲಿ ರಾಜ್ಯ ಪಠ್ಯಕ್ರಮ ದಿನೇದಿನೇ ಕಡಿಮೆಯಾಗುತ್ತದೆ. ಕೊನೆಗೆ ಉಳಿಯುವುದು ಸರ್ಕಾರಿ ಶಾಲೆ, ಕಾಲೇಜುಗಳು, ಅನುದಾನಿತ ಶಾಲೆ ಕಾಲೇಜುಗಳು. ಇವೆಲ್ಲದರಲ್ಲಿ ಓದುವ ಬಡ ಮಕ್ಕಳಿಗೆ ಇದು ಅನ್ಯಾಯ ಆಗುತ್ತದೆ. ತಾನು ಬಡವರ ಪರ, ಬಡವರಿಗಾಗಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ ಇತ್ತ ರಾಜಕೀಯ ಕಾರಣಗಳಿಗೋಸ್ಕರ ಎನ್ಇಪಿಯನ್ನು ವಿರೋಧಿಸುತ್ತಿರುವುದು ಮೇಲ್ನೋಟಕ್ಕೇ ಕಾಣುತ್ತದೆ. ರಾಜಕೀಯ ಉದ್ದೇಶದಿಂದ, ಬಡ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕಲ್ಲು ಹಾಕುವುದು ಸರ್ವಥಾ ಸಮರ್ಥನೀಯವಲ್ಲ. ರಾಜ್ಯ ಸರ್ಕಾರ ಕೂಡಲೆ ಈ ಎನ್ಇಪಿ ವರ್ಸಸ್ ಎಸ್ಇಪಿ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಪೋಷಕರೆಲ್ಲ ಒತ್ತಾಯ ಮಾಡುವುದೊಂದೇ ಕನ್ನಡ ಶಾಲೆಗಳನ್ನು ಉಳಿಸಲು ಇರುವ ದಾರಿ.

ಇದನ್ನೂ ಓದಿ: ವಿಸ್ತಾರ ಅಂಕಣ: ಭಾರತಾಂಬೆಯ ವಿರುದ್ಧ ಆಕೆಯ ತನುಜಾತೆಯನ್ನು ಎತ್ತಿಕಟ್ಟುವುದು ಏಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
ind vs sl
ಪ್ರಮುಖ ಸುದ್ದಿ13 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ23 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ34 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ43 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್1 hour ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ2 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ2 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ2 hours ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ3 hours ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌