Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ - Vistara News

South Cinema

Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Actress Leelavathi: ಲೀಲಾವತಿ ಅವರ ಆರೋಗ್ಯ ಕುಷಲೋಪರಿ ವಿಚಾರಿಸಿದ್ದಾರೆ ಸಿಎಂ.ಸರ್ಕಾರದಿಂದ ಯಾವುದೇ ಸಹಾಯ ಬೇಕಿದ್ದರೂ ನಾವು ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

VISTARANEWS.COM


on

Chief Minister Siddaramaiah inquired about actress Leelavati health
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿರಿಯ ನಟಿ ಲೀಲಾವತಿ (Actress Leelavathi) ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಸೋಲದೇವನಹಳ್ಳಿಯ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಇದಕ್ಕೂ ಮುಂಚೆ ನಟ ಶಿವರಾಜಕುಮಾರ್‌ ಮತ್ತು ಗೀತಾ ದಂಪತಿ (Shivarajkumar and Geetha) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು. ಇದೇ ವೇಳೆ ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದ್ದರು. ಇದು ಲೀಲಾವತಿ ಅವರ ಕನಸಿನ ಆಸ್ಪತ್ರೆಯಾಗಿತ್ತು.

ಲೀಲಾವತಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದ್ದಾರೆ ಸಿಎಂ. ʻʻನಾನು ನೆಲಮಂಗಲಕ್ಕೆ ಬಂದಿದ್ದೆ. ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದೆ.. ಈ ಜಮೀನಿನ ಸಮಸ್ಯೆ ಇದ್ದಾಗ ನನ್ನನ್ನು ಭೇಟಿ ಮಾಡಿದ್ದರು. ಲೀಲಾವತಿ ನೈಜ ಕಲಾವಿದೆ. ಅವರನ್ನ ಆಸ್ಪತ್ರೆಗೆ ಸೇರಿಸಿದರೆ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತೇವೆ. ಸರ್ಕಾರದಿಂದ ಯಾವುದೇ ಸಹಾಯ ಬೇಕಿದ್ದರೂ ನಾವು ಕೊಡುತ್ತೇವೆʼʼ ಎಂದು ಭರವಸೆ ಕೊಟ್ಟರು.

ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೀಲಾವತಿಯವರು ಚೆನ್ನಾಗಿದ್ದ ಸಂದರ್ಭದಲ್ಲಿ ಜಮೀನು ವಿಚಾರವಾಗಿ ಇದ್ದ ತೊಂದರೆ ಬಗೆಹರಿಸಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಆಸ್ಪತ್ರೆಗೆ ಸೇರಿಸಿದರೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಲೀಲಾವತಿ ಯವರು ಒಬ್ಬ ನೈಜ ಪ್ರತಿಭೆಯಿದ್ದ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ಚೆನ್ನಾಗಿ ನೋಡಿಕೊಳ್ಳಲಿ ಎಂದು ಹೇಳಿದ್ದೇನೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರೂ ಒದಗಿಸುವುದಾಗಿ ತಿಳಿಸಿದ್ದೇನೆ. ರೈತರ ಪರವಾಗಿ ಲೀಲಾವತಿ ಗಟ್ಟಿಯಾದ ನಿಲುವು ಹೊಂದಿದ್ದರು. ಈಗಾಲೂ ಅವರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದನ್ನೂ ಓದಿ: Actress Leelavathi: ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ, ಆದರೆ ನಟಿ ಪ್ರಜ್ಞಾಶೂನ್ಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ, ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಜತೆಗಿದ್ದರು. ಲೀಲಾವತಿ ಅವರ ಕನಸಿನ ಕೂಸಾಗಿದ್ದ ಪಶು ಆಸ್ಪತ್ರೆಗೆ ಹಸುವಿನ ಪೂಜೆ ಮಾಡುವ ಮೂಲಕ ಡಿ.ಕೆ.‌ ಶಿವಕುಮಾರ್ ಉದ್ಘಾಟಿಸಿದ್ದರು. ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್‌, ಒಂದು ವಾರದ ಹಿಂದೆ ನಟಿ ಲೀಲಾವತಿ, ವಿನೋದ್ ರಾಜ್ ನಮ್ಮ ಮನೆಗೆ ಬಂದು ಪಶು ಆಸ್ಪತ್ರೆ ಉದ್ಘಾಟನೆಗೆ ಕರೆದಿದ್ದರು. ಈ ಪಶು ಆಸ್ಪತ್ರೆ ಮೂಲಕ ದೊಡ್ಡ ಸಂದೇಶ ನೀಡಿದ್ದರು. ಅವರು ಅಂತಹ ಶ್ರೀಮಂತರಲ್ಲ. ಅಂಥದ್ದರಲ್ಲಿ ಪ್ರಾಣಿಗಳಿಗೆ ಸಹಾಯ ಮಾಡಲು ಹೊರಟಿದ್ದರು. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದರು. ಈಚೆಗೆ ನಟ ದರ್ಶನ್‌, ಅರ್ಜುನ್ ಸರ್ಜಾ ಅವರು ಭೇಟಿ ನೀಡಿ ನಟಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Kalki 2898 AD: ಪ್ರಭಾಸ್‍, ದೀಪಿಕಾ ಪಡುಕೋಣೆ, ಅಮಿತಾಭ್‍ ಬಚ್ಚನ್ ಮತ್ತಿತರರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ  ‘ಕಲ್ಕಿ 2898 ಎಡಿ’ಯ ಹೊಸ ಪಾತ್ರ ‘ಬುಜ್ಜಿ’ ಗಮನ ಸೆಳೆಯುತ್ತಿದೆ. ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಚಿತ್ರತಂಡ ಅದ್ಧೂರಿ ಕಾರ್ಯಕ್ರಮದಲ್ಲಿ ಪರಿಚಯಿಸಿದೆ. ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ ಈ ಬುಜ್ಜಿ. ಬುಜ್ಜಿ ಝಳಕ್‌ ಅನ್ನು ಈ ವಿಡಿಯೊದಲ್ಲಿ ನೋಡಿ.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ. ಈ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ (ಮೇ 22) ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ ಅನ್ನು ಅನಾವರಣಗೊಳಿಸಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪ್ರೇಕ್ಷಕರ ಮುಂದಿಡಲಾಗಿದೆ.

ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ಎಡಿʼ ಚಿತ್ರದ ಹೊಸ ಪೋಸ್ಟರ್‌ ಔಟ್‌; ಪ್ರಭಾಸ್‌ ಪಾತ್ರದ ಹೆಸರು ರಿವೀಲ್‌

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು. ಜತೆಗೆ ಮೊದಲ ಬಾರಿಗೆ ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ತೆರೆಮೇಲೆ ಒಂದಾಗುತ್ತಿರುವುದೂ ನಿರೀಕ್ಷೆ ಹೆಚ್ಚಿಸಿದೆ.

Continue Reading

ಸಿನಿಮಾ

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

Indian 2: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಕಾಲಿವುಡ್‌ನ ಇಂಡಿಯನ್ 2 ಕೂಡ ಒಂದು. ಉಳಗ ನಾಯಕನ್‌ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ.

VISTARANEWS.COM


on

Indian 2
Koo

ಚೆನ್ನೈ: ಉಳಗ ನಾಯಕನ್‌ ಕಮಲ್ ಹಾಸನ್ (Kamal Haasan) ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ (R.Shankar) ಜೋಡಿಯ ʼಇಂಡಿಯನ್ 2ʼ (Indian 2) ಪ್ಯಾನ್‌ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ʼಇಂಡಿಯನ್ 2ʼ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ʼಇಂಡಿಯನ್ 2ʼ ಸಿನಿಮಾದ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ. ಕುದುರೆ ಏರಿ ಬರುವ ಸೇನಾಪತಿಯ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ. ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,‌ ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.

1996ರಲ್ಲಿ ಬಿಡುಗಡೆಗೊಂಡಿದ್ದ ʼಇಂಡಿಯನ್ʼ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು. ʼಇಂಡಿಯನ್ 2ʼ ಆ ಹಿಟ್ ಚಿತ್ರದ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ. ಈ ಚಲನಚಿತ್ರವನ್ನು ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ನಿರ್ಮಿಸಿದೆ. ಈಗಾಗಲೇ ರಿಲೀಸ್‌ ಆಗಿರುವ ಪೋಸ್ಟರ್‌ ಕುತೂಹಲ ಮೂಡಿಸಿದ್ದು, ಇದೀಗ ಹಾಡು ಕೂಡ ಗಮನ ಸೆಳೆಯುತ್ತಿದೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಇದನ್ನೂ ಓದಿ: Indian 2 : ‘ಇಂಡಿಯನ್ 2ʼ ಸಿನಿಮಾದಲ್ಲಿ ಸಿದ್ಧಾರ್ಥ್: ಫಸ್ಟ್‌ ಲುಕ್‌ ಔಟ್‌!

ಇದೀಗ ‘ಇಂಡಿಯನ್‌ 2’ ಜತೆಗೆ ʼಇಂಡಿಯನ್ 3ʼ ಸಿನಿಮಾದ ಚಿತ್ರೀಕರಣವೂ ಮುಗಿದಿದೆ ಎಂದು ವರದಿಯೊಂದು ತಿಳಿಸಿದೆ. ‘ಇಂಡಿಯನ್ 2’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡ ಬಳಿಕ ‘ಇಂಡಿಯನ್ 3’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Kalki 2898 AD: ಕಲ್ಕಿ ಚಿತ್ರದ ʼಬುಜ್ಜಿʼ ಪಾತ್ರ ರಿವೀಲ್; ಅದ್ಧೂರಿ ಕಾರ್ಯಕ್ರಮದ LIVE ವಿಡಿಯೊ ಇಲ್ಲಿದೆ

Kalki 2898 AD: ನಟ ಪ್ರಭಾಸ್‌ ಅಭಿನಯದ ‘ಕಲ್ಕಿ 2898 AD’ ಚಿತ್ರದ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ಅನಾವರಣ ಮಾಡಲು ಹೈದರಾಬಾದ್‌ನ ರಾಮೋಜಿ ಫಿಲಂ ಸಿಟಿಯಲ್ಲಿ ಬುಧವಾರ ರಾತ್ರಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ವೀಕ್ಷಿಸಲು ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 AD’ (Kalki 2898 AD) ಚಿತ್ರವು ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿದೆ. ಹೀಗಾಗಿ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ, ಚಿತ್ರದ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಲ್ಕಿ ಚಿತ್ರದಲ್ಲಿನ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ರಿವೀಲ್‌ ಮಾಡಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೈರವನ (ಪ್ರಭಾಸ್)‌ ಜತೆ ಬುಜ್ಜಿಯನ್ನು ನೋಡಲು ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ʼಬುಜ್ಜಿʼ ಎಂಬ ಸೂಪರ್‌ ಕಾರನ್ನು ಅನಾವರಣ ಮಾಡಲಾಗಿದೆ. ʼಬುಜ್ಜಿʼ ಎಂಬುವುದು ರೋಬೋಟಿಕ್‌ ಕಾರು ಆಗಿದ್ದು, ಕಲ್ಕಿ ಚಿತ್ರದಲ್ಲಿ ಭೈರವನಿಗೆ (ಪ್ರಭಾಸ್‌) ಆಪ್ತಮಿತ್ರ ಆಗಿದೆ.

ಚಿತ್ರದಲ್ಲಿ ಈ ಬುಜ್ಜಿಗೆ ʼಮಹಾನಟಿʼ ಚಿತ್ರದ ಖ್ಯಾತಿಯ ನಟಿ ಕೀರ್ತಿ ಸುರೇಶ್‌ ವಾಯ್ಸ್‌ ನೀಡಿದ್ದಾರೆ. ಪ್ರೇಕ್ಷಕರ ಚಪ್ಪಾಳೆ, ಕೂಗಾಟದ ನಡುವೆ ರೋಬೋಟಿಕ್‌ ಮಾದರಿಯ ಕಾರಿನಲ್ಲಿ ನಟ ಪ್ರಭಾಸ್‌ ಎಂಟ್ರಿ ನೀಡಿದರು. ನಂತರ ಬುಜ್ಜಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದರು.

ಚಿತ್ರದಲ್ಲಿ ಐದನೇ ಸೂಪರ್‌ ಸ್ಟಾರ್‌ ಯಾರು? ಎಂಬ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಆತನ ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ ಎಂಬುವುದಾಗಿ ಮಾತ್ರ ಚಿತ್ರತಂಡ ಮಾಹಿತಿ ನೀಡಿತ್ತು. ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘From Skratch: Building A Superstar’ ಹೆಸರಿನ ಈ ವಿಡಿಯೊದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿತ್ತು. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವಿಡಿಯೊದಲ್ಲಿ ತೋರಿಸಲಾಗಿತ್ತು. ಇದೀಗ ಬುಜ್ಜಿಯ ಪಾತ್ರ ಅನಾವರಣ ಮಾಡಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ | Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Blink Movie: ಥಿಯೇಟರ್ ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4 ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

VISTARANEWS.COM


on

Blink Movie in half centuru with good in OTT
Koo

ಬೆಂಗಳೂರು: ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” (Blink Movie) ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವಾದದ ನಡುವೆ ʻಬ್ಲಿಂಕ್ʼ ಆಫ್ ಸೆಂಚುರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ಹಂಚಿಕೊಂಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ರವಿಚಂದ್ರ ಎ ಜೆ ಮಾತನಾಡಿ, ʻʻಸಿನಿಮಾ ಈ ಲೆವೆಲ್‌ಗೆ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ತಂಡ ಖುಷಿಯಾಗಬೇಕು ಎಂದರೆ ಅಂದುಕೊಂಡಿರುವ ದೊಡ್ಡ ಬರಬೇಕು. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಿನಿಮಾಗೆ ಭಾಷೆಯ ಎಲ್ಲೆ ಇಲ್ಲʼʼ ಎಂದರು.

ಇದನ್ನೂ ಓದಿ: Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ʻʻಬಹಳ ಖುಷಿಯಾಗುತ್ತಿದೆ. ಎಷ್ಟೋ ವರ್ಷಗಳ ನಂತರ ಹೊಸಬರ ತಂಡ 50 ದಿನಗಳ ಕಾಲ ಸಿನಿಮಾವನ್ನು ಥಿಯೇಟರ್‌ನಲ್ಲಿ ಉಳಿಸಿಕೊಂಡಿದ್ದೇವೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೇವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರ 50 ದಿನ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ ಎಂದು ಭಾವಿಸಿದ್ದೇನೆ. ಈ ಗೆಲುವಿಗೆ ಕಾರಣರಾದ ಇಡೀ ತಂಡಕ್ಕೆ ಧನ್ಯವಾದʼʼ ತಿಳಿಸಿದರು.

ಹೊಂದಿಸಿ ಬರೆಯಿರಿ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ , ಐವತ್ತು ಬರೀ ನಂಬರ್ ಅಷ್ಟೇ ಅಲ್ಲ. ಅದಕ್ಕೂ ಮೀರಿ ಸಿನಿಮಾವನ್ನು ಚಿತ್ರತಂಡ ತೆಗೆದುಕೊಂಡು ಹೋದ ರೀತಿ ನಾವು ಹೊಂದಿಸಿ ಬರೆಯಿರಿ ಮಾಡುವ ಟೈಮ್ ನಲ್ಲಿ ಮಾಡಿದ ರೀತಿ ಇತ್ತು. ಆ ಜರ್ನಿಯೇ ರೋಚಕ. ಬ್ಲಿಂಕ್ ಸಿನಿಮಾ ನೋಡಿದಾಗ ಇದು ಬೇರೆನೇ ಇದೆ ಎನಿಸಿತು. ಮೂರು ವರ್ಷ ಟ್ರಾವೆಲ್ ಆಗಿ ಸಿನಿಮಾ ಮಾಡುವುದು ಒಂದು ಜರ್ನಿಯಾದರೆ. ಸಿನಿಮಾ ತಲುಪಿಸಲು ಅಷ್ಟೇ ಟ್ರಾವೆಲ್ ಆಗಬೇಕು. ಸಿನಿಮಾ ಮಾಡಿ ಸುಮ್ಮನೇ ಆಗಬಾರದು. ಸಿನಿಮಾ ಚೆನ್ನಾಗಿ ಇದ್ದಾಗ ನಿಲ್ಲಿಸಲು ಓಡಾಡಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಒಟಿಟಿಯಲ್ಲಿಯೂ ಬ್ಲಿಂಕ್‌ಗೆ ಬಹುಪರಾಕ್

ಥಿಯೇಟರ್‌ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದು ಮೂರರಲ್ಲಿ ಮತ್ತೊಂದು ಸಿನಿಮಾ ಎಂದೇ ಅಂದುಕೊಳ್ಳಲಾಗಿತ್ತು. ಆದರೆ ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋದವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿತ್ತು. ಹೀಗಾಗಿ ಶೋ ಹೆಚ್ಚಳದಿಂದ ಪ್ರೇಕ್ಷಕರ ಪ್ರೀತಿಯೂ ಪಡೆದ ಬ್ಲಿಂಕ್ ಸಿನಿಮಾ ಆಫ್ ಸೆಂಚುರಿ ಬಾರಿಸಿದೆ.

Continue Reading
Advertisement
Aadhaar Card Fact Check
ವೈರಲ್ ನ್ಯೂಸ್7 mins ago

Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

cm siddaramaiah meet
ಪ್ರಮುಖ ಸುದ್ದಿ14 mins ago

CM Siddaramaiah: ಕಾಲರಾ ಕಂಡು ಬಂದರೆ ಅಧಿಕಾರಿಗಳು ಸಸ್ಪೆಂಡ್‌; ಸಿಎಂ ಖಡಕ್‌ ವಾರ್ನಿಂಗ್

Job Alert
ಉದ್ಯೋಗ20 mins ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

SRH vs RR
ಕ್ರೀಡೆ27 mins ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ29 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್38 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ53 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ58 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ1 hour ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ1 hour ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ9 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌