ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ! - Vistara News

ದೇಶ

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ಷೇರು ಮಾರುಕಟ್ಟೆಯಲ್ಲಿ ಹೊಸ ಲವಲವಿಕೆ ಕಾಣಿಸಿದೆ. ಬಿಜೆಪಿ ಗೆಲುವಿಗೂ, ಷೇರು ಮಾರುಕಟ್ಟೆಗೆ ಏನು ಸಂಬಂಧ ಎಂಬುದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

Narendra Modi And stock market news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ.

ಷೇರು ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಭಾರಿ ಲವಲವಿಕೆ ಕಂಡುಬಂದಿದೆ. ಬಿಎಸ್‌ಇ ಸೆನ್ಸೆಕ್ಸ್‌ 877.43 ಪಾಯಿಂಟ್‌ಗಳ ಏರಿಕೆಯೊಂದಿಗೆ (ಶೇ.1.3%) 68,358.52 ಅಂಕಗಳೊಂದಿಗೆ ಸಾರ್ವಕಾಲಿಕ ಸಾಧನೆ ಮಾಡಿತು. ಇನ್ನು ನಿಫ್ಟಿಯೂ 284.80 ಅಂಕಗಳ ಏರಿಕೆಯೊಂದಿಗೆ (ಶೇ.1.41) 20,552.70 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪಾಯಿಂಟ್‌ಗಳ ದಾಖಲೆ ಬರೆಯಿತು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಾಲರ್‌ ಎದುರು ರೂಪಾಯಿ ಮೌಲ್ಯವು 6 ಪೈಸೆ ಸುಧಾರಣೆಯಾಗಿದೆ. ಇನ್ನು ಷೇರು ಮಾರುಕಟ್ಟೆಯಲ್ಲ ವಹಿವಾಟು ಆರಂಭವಾದ ಕೆಲವೇ ನಿಮಿಷಗಳಲ್ಲಿ ಹಲವು ಕಂಪನಿಗಳ ಮಾರುಕಟ್ಟೆ ಬಂಡವಾಳವು 4.09 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬೆಳಗ್ಗೆಯ ಟ್ರೇಡಿಂಗ್‌ನಲ್ಲಿ ಅದಾನಿ ಗ್ರೂಪ್‌ ಕಂಪನಿಗಳು ಹೆಚ್ಚು ಲಾಭ ಗಳಿಸಿವೆ. ಹಾಗೆಯೇ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಎನ್‌ಟಿಪಿಸಿ ಹಾಗೂ ಲಾರ್ಸೆನ್‌ & ಟರ್ಬೊ ಕೂಡ ಹೆಚ್ಚಿನ ಲಾಭ ಗಳಿಸಿದವು.

ಷೇರು ಪೇಟೆಗೂ, ಚುನಾವಣೆಗೂ ಏನು ಸಂಬಂಧ?

ಚುನಾವಣೆ ಫಲಿತಾಂಶಕ್ಕೂ, ಷೇರುಪೇಟೆ ವಹಿವಾಟಿಗೂ ಸಂಬಂಧವಿದೆ ಎಂದು ಹೂಡಿಕೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಷೇರುಪೇಟೆಯು ಸ್ಥಿರ ಹಾಗೂ ಸುಧಾರಣೆ ಪರವಾಗಿರುವ ರಾಜಕಾರಣವನ್ನು ಬಯಸುತ್ತದೆ. ಮಾರುಕಟ್ಟೆ ದೃಷ್ಟಿಯಿಂದ ಚುನಾವಣೆ ಫಲಿತಾಂಶವು ನಿರೀಕ್ಷೆಗಿಂತ ಹೆಚ್ಚಾಗಿದೆ. ಬಿಜೆಪಿ ಗೆಲುವು ಸಾಧಿಸಿದ ಕಾರಣ ಷೇರು ಮಾರುಕಟ್ಟೆಯಲ್ಲಿ 500 ಪಾಯಿಂಟ್‌ಗಳ ಏರಿಕೆಯಾಗಿದೆ. ಇದೇ ಬೆಳವಣಿಗೆ ಮುಂದುವರಿಯಲಿದೆ” ಎಂದು ಹೂಡಿಕೆ ತಜ್ಞ ವಿ.ಕೆ. ವಿಜಯ್‌ಕುಮಾರ್‌ ಅವರು ಪಿಟಿಐಗೆ ತಿಳಿಸಿದ್ದಾರೆ.

Rajastan BJP Win

ಇದನ್ನೂ ಓದಿ: PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

ಮಧ್ಯಪ್ರದೇಶದಲ್ಲಿ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 163, ಕಾಂಗ್ರೆಸ್‌ 66 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ 199 ಕ್ಷೇತ್ರಗಳ ಪೈಕಿ ಬಿಜೆಪಿ 115, ಕಾಂಗ್ರೆಸ್‌ 69 ಹಾಗೂ 18 ಕ್ಷೇತ್ರಗಳು ಇತರೆ ಪಕ್ಷಗಳ ಪಾಲಾಗಿವೆ. ಛತ್ತೀಸ್‌ಗಢದಲ್ಲಿರುವ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 54, ಕಾಂಗ್ರೆಸ್‌ 35 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮೂರೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

PM Modi Russia Visit: ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ಉಭಯ ನಾಯಕರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಬಿಸಿ ಬಿಸಿ ಚಹಾ ಸವಿಯುತ್ತ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಮೋದಿ ಅವರನ್ನು ಪುಟಿನ್‌ ಅವರು ಹಾಡಿ ಹೊಗಳಿದರು.

VISTARANEWS.COM


on

PM Modi Russia Visit
Koo

ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Russia Visit) ಅವರು ಮಾಸ್ಕೋ ತಲುಪುತ್ತಲೇ ಅದ್ಧೂರಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ಕಲಾವಿದರು ಹಿಂದಿಗೆ ಹಾಡಿಗೆ ನೃತ್ಯ ಮಾಡಿ, ಭಜನೆ, ಹಾಡುಗಳ ಮೂಲಕ ನರೇಂದ್ರ ಮೋದಿ (Narendra Modi) ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲ, ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರನ್ನೂ ಭೇಟಿಯಾಗಿದ್ದು, ಪುಟಿನ್‌ ಮನೆಯಲ್ಲೇ ಚಾಯ್‌ ಪೆ ಚರ್ಚಾ, ಔತಣ ಕೂಡ ನಡೆದಿದೆ.

ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ತಮ್ಮ ನಿವಾಸದಲ್ಲಿಯೇ ಮೋದಿ ಅವರಿಗೆ ಪುಟಿನ್‌ ಅವರು ಚಹಾ, ಭೋಜನಕೂಟದ ಉಸ್ತುವಾರಿ ನೋಡಿಕೊಂಡರು. ಇದೇ ವೇಳೆ ಉಭಯ ನಾಯಕರು ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಮೋದಿಯನ್ನು ಹೊಗಳಿದ ಪುಟಿನ್‌

ನರೇಂದ್ರ ಮೋದಿ ಅವರನ್ನು ವ್ಲಾಡಿಮಿರ್‌ ಪುಟಿನ್‌ ಅವರು ಹಾಡಿ ಹೊಗಳಿದ್ದಾರೆ. “ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಪ್ರಧಾನಿಯಾಗಿದ್ದಕ್ಕೆ ಅಭಿನಂದನೆಗಳು. ನೀವು ಹೊಂದಿರುವ ಸಾಮರ್ಥ್ಯ, ಉತ್ಸಾಹವು ಅಮೋಘವಾದುದು. ನೀವು ದೇಶ ಹಾಗೂ ಸಾರ್ವಜನಿಕರ ಸೇವೆಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದೀರಿ. ನೀವು ನಮ್ಮ ದೇಶಕ್ಕೆ ಆಗಮಿಸಿರುವುದು ಖುಷಿಯಾಗಿದೆ. ಇನ್ನು, ಬಾರತದಲ್ಲಿ 2.3 ಕೋಟಿ ಮಕ್ಕಳಿದ್ದು, ಅವರು ಭವಿಷ್ಯದ ಬಗ್ಗೆ ಯೋಚಿಸುತ್ತಾರೆ, ಕನಸು ಕಾಣುತ್ತಾರೆ. ಅಲ್ಲದೆ, ಇದು ಭದ್ರ, ಸ್ಥಿರ ಭಾರತದ ಸಂಕೇತವಾಗಿದೆ” ಎಂದು ವ್ಲಾಡಿಮಿರ್‌ ಪುಟಿನ್‌ ಅವರು ಖಾಸಗಿ ಭೇಟಿ ವೇಳೆ ಹೊಗಳಿದ್ದಾರೆ.

ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಮಂಗಳವಾರ (ಜುಲೈ 9) ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆಯು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Continue Reading

ದೇಶ

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Ramniwas Rawat: ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಇದರಿಂದಾಗಿ ಕೆಲಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಎರಡನೇ ಬಾರಿ ಬಿಜೆಪಿ ಶಾಸಕ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Ramniwas Rawat
Koo

ಭೋಪಾಲ್‌: ನಾವು ಮಾತನಾಡುವಾಗ, ಬರೆಯುವಾಗ ಬಳಸುವ ಒಂದು ಪದವು ಎಷ್ಟು ಪರಿಣಾಮ ಬೀರುತ್ತದೆಯೋ, ಬಳಸಬೇಕಾದ ಜಾಗದಲ್ಲಿ ಇನ್ನೊಂದು ಪದ ಬಳಸದಿದ್ದರೂ ಅದು ಕೂಡ ಬೇರೊಂದು ಪರಿಣಾಮವನ್ನೇ ಬೀರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದ (Madhya Pradesh Cabinet) ನೂತನ ಸಚಿವರಾಗಿ ಬಿಜೆಪಿಯ ರಾಮ್‌ನಿವಾಸ್‌ ರಾವತ್‌ (Ramniwas Rawat) ಅವರು ಪ್ರಮಾಣವಚನ ಸ್ವೀಕರಿಸುವಾಗ ಒಂದು ಪದವನ್ನು ಬಳಸದ ಕಾರಣ 15 ನಿಮಿಷಗಳಲ್ಲಿಯೇ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಮೋಹನ್‌ ಯಾದವ್‌ ಅವರು ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ. ಇದಾದ ಐದು ತಿಂಗಳ ಬಳಿಕ ಅವರು ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ನಲ್ಲಿದ್ದ ರಾಮ್‌ನಿವಾಸ್‌ ರಾವತ್‌ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಸೋಮವಾರ (ಜುಲೈ 8) ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವಾಗ ಅವರು ಒಂದು ಪದವನ್ನು ಉಚ್ಚರಣೆ ಮಾಡದ ಕಾರಣ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅವರು ಬಳಸದ ಆ ಒಂದು ಪದ ಯಾವುದು?

ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಸಹಾಯಕ ಸಚಿವ ಎಂಬುದಾಗಿ ಅವರು ಹೇಳುತ್ತಲೇ ಕಾರ್ಯಕ್ರಮದಲ್ಲಿ ಗೊಂದಲವಾಯಿತು. ಪತ್ರಕರ್ತರು ಕೂಡ ಈ ಕುರಿತು ನಾಯಕರ ಗಮನಕ್ಕೆ ತಂದರು.

ರಾಜ್ಯ ಕೆ ಮಂತ್ರಿ ಎಂಬುದಾಗಿ ಹೇಳುವ ಬದಲು ರಾಜ್ಯ ಮಂತ್ರಿ ಎಂದು ಹೇಳಿರುವುದು ಗಮನಕ್ಕೆ ಬಂದ 15 ನಿಮಿಷದಲ್ಲಿಯೇ ರಾಮ್‌ನಿವಾಸ್‌ ರಾವತ್‌ ಅವರು ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಂದೇ ಒಂದು ಪದವನ್ನು ಬಳಸದ ಕಾರಣ ರಾಜಭವನದಲ್ಲಿ ಇಷ್ಟೆಲ್ಲ ಗೊಂದಲ ಉಂಟಾಯಿತು. ರಾಮ್‌ನಿವಾಸ್‌ ರಾವತ್‌ ಅವರ ಸೇರ್ಪಡೆಯೊಂದಿಗೆ ಮಧ್ಯಪ್ರದೇಶ ಸಚಿವರ ಸಂಖ್ಯೆ 32ಕ್ಕೆ ಏರಿಕೆಯಾಯಿತು. Words

ಇದನ್ನೂ ಓದಿ: Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Continue Reading

ದೇಶ

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Union Budget 2024: ಬಜೆಟ್‌ಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಸರ್ಕಾರಕ್ಕೆ ಪ್ರಮುಖ 7 ಬೇಡಿಕೆಗಳನ್ನು ಇಟ್ಟಿದ್ದಾರೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ಒಕ್ಕೂಟವು (Government Union) 8ನೇ ವೇತನ ಆಯೋಗ ಜಾರಿ ಸೇರಿ ಕೇಂದ್ರ ಸರ್ಕಾರಕ್ಕೆ 7 ಬೇಡಿಕೆಗಳನ್ನು ಇಟ್ಟಿದ್ದಾರೆ. ಸಂಪುಟ ಕಾರ್ಯದರ್ಶಿಗೆ ನೌಕರರ ಒಕ್ಕೂಟವು 7 ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳ ಕುರಿತ ಮಾಹಿತಿ ಇಲ್ಲಿದೆ.

ನೌಕರರ 7 ಬೇಡಿಕೆಗಳು

  1. ಕೂಡಲೇ 8ನೇ ವೇತನ ಆಯೋಗ ಜಾರಿಗೊಳಿಸಬೇಕು
  2. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು
  3. ಕೇಂದ್ರ ನೌಕರರಿಗೆ ಬಾಕಿ ಇರುವ 18 ತಿಂಗಳ ತುಟ್ಟಿಭತ್ಯೆ ನೀಡಬೇಕು
  4. ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇರುವ ಶೇ.5ರಷ್ಟು ಗರಿಷ್ಠ ಮಿತಿ ತೆಗೆದು, ನಿಧನರಾದ ಎಲ್ಲ ನೌಕರರ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು
  5. ಕೇಂದ್ರ ಸರ್ಕಾರದ ಎಲ್ಲ ಬಾಕಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಬೇಕು
  6. ಸಂಘಟನೆಗಳ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ದೃಢಪಡಿಸುವುದು
  7. ಒಕ್ಕೂಟಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವುದು
Reservation in outsourcing

ಆಯುಷ್ಮಾನ್‌ ಭಾರತ್‌ ವಿಮಾ ಮೊತ್ತ ದ್ವಿಗುಣ?

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Continue Reading

Latest

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Maharashtra Rain: ಮಹಾರಾಷ್ಟ್ರದಲ್ಲಿ ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತ್ತರಿಸಿ ಹೋಗಿದ್ದಾರೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಡ್ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ.

VISTARANEWS.COM


on

Maharashtra Rain
Koo

ಮುಂಬಯಿ: ಇತ್ತೀಚೆಗೆ ದೇಶದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಅಂತಹದೊಂದು ಭೀಕರ ಘಟನೆ ಮಹಾರಾಷ್ಟ್ರದಲ್ಲಿ (Maharashtra Rain) ನಡೆದಿದ್ದು, ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತತ್ತರಿಸಿ ಹೋಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಢ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ. ಮತ್ತು ಕೋಟೆಯ ಮೆಟ್ಟಿಲಿನಿಂದ ಇಳಿಯುವುದು ತುಂಬಾ ಕಷ್ಟಕರವಾಗಿದೆ. ಹಾಗಾಗಿ ಕೋಟೆಗೆ ಭೇಟಿ ನೀಡಿದ್ದ ಶಿವ ಭಕ್ತರು ಮತ್ತು ಪ್ರವಾಸಿಗರೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಈ ನೀರಿನ ತೊರೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರು ಭಯಗೊಂಡಿದ್ದಾರೆ. ಆದರೆ ಈ ಪ್ರವಾಸಿಗರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮುಖ್ಯ ಮೆಟ್ಟಿಲುಗಳ ಮೇಲಿನ ಅಪಾಯಕಾರಿ ಪರಿಸ್ಥಿತಿಗಳಲ್ಲಿ ಸಾಗಿ ದುರಂತದಿಂದ ಪಾರಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲಾಗಿದೆ, ಸಿಕ್ಕಿಬಿದ್ದ ಎಲ್ಲಾ ವ್ಯಕ್ತಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಭಾರೀ ಮಳೆಯ ಸಮಯದಲ್ಲಿ ಕೋಟೆಗಳು ಮತ್ತು ಇತರ ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದಾರೆ.

ಭಾರೀ ಮಳೆಗೆ ರಾಯಗಢ ಮಾತ್ರವಲ್ಲ ಮುಂಬೈ, ಥಾಣೆ, ನವೀ ಮುಂಬೈ ಮತ್ತು ಕಲ್ನೈ ಸೇರಿದಂತೆ ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂಬ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಹಾಗಾಗಿ ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

ವಿಶೇಷವಾಗಿ ರತ್ನಗಿರಿಯ ಮೇಲೆ ಭಾರಿ ಪರಿಣಾಮ ಬೀರಿದ್ದು, ನದಿಗಳ ನೀರಿನ ಮಟ್ಟವು ಅಪಾಯಕಾರಿಯಾಗಿ ಏರುತ್ತಿದೆ. ರಾಜಾಪುರ ತಾಲ್ಲೂಕಿನ ಜಗ್ಬುಡಿ ನದಿ ಅಪಾಯದ ಮಟ್ಟವನ್ನು ಮೀರಿದ್ದು, ಹತ್ತಿರದ ಹಳ್ಳಿಗಳಿಗೆ ಎಚ್ಚರಿಕೆ ನೀಡಲಾಗಿದೆ. ರತ್ನಗಿರಿಯಲ್ಲಿ ಭಾರಿ ಮಳೆಯ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಬಗ್ಗೆ ವಿವರವಾಗಿ ತಿಳಿಸುತ್ತಿವೆ.

Continue Reading
Advertisement
PM Modi Russia Visit
ವಿದೇಶ35 mins ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ1 hour ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ1 hour ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ2 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ3 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ3 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ3 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ3 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ3 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ4 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ7 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ9 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ12 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು13 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌