Amazon Prime : ಅಮೆಜಾನ್ ಪ್ರೈಮ್​ನಲ್ಲಿ ನೋಡಬಹುದು ಟಿ20 ವಿಶ್ವ ಕಪ್ - Vistara News

ಕ್ರಿಕೆಟ್

Amazon Prime : ಅಮೆಜಾನ್ ಪ್ರೈಮ್​ನಲ್ಲಿ ನೋಡಬಹುದು ಟಿ20 ವಿಶ್ವ ಕಪ್

Amazon Prime : 2024ರಿಂದ ಹಿಡಿದು 2027ರವರೆಗಿನ ಎಲ್ಲ ಟೂರ್ನಿಗಳನ್ನು ನೇರ ಪ್ರಸಾರ ಮಾಡುವ ಹಕ್ಕನ್ನು ಅಮೆಜಾನ್ ಪ್ರೈಮ್ ಪಡೆದುಕೊಂಡಿದೆ.

VISTARANEWS.COM


on

amazon Prime
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮೆರಿಕದ ಮೂಲದ ಒಟಿಟಿ ಫ್ಲ್ಯಾಟ್​​ಫಾರ್ಮ್​ ಅಮೆಜಾನ್ ಪ್ರೈಮ್ (Amazon Prime) ಭಾರತದಲ್ಲೂ ಸಿಕ್ಕಾಪಟ್ಟೆ ಜನಪ್ರಿಯ. ಇಕಾಮರ್ಸ್​ ಸಂಸ್ಥೆಯೂ ಇದರಲ್ಲಿ ಸೇರಿಕೊಂಡಿರುವ ಕಾರಣ ಅತಿ ಹೆಚ್ಚು ಮಂದಿ ಇದರ ಸಬ್​ಸ್ಕ್ರೈಬ್​ ಆಗಿದ್ದಾರೆ. ಈ ಒಟಿಟಿ ವೇದಿಕೆ ಇದೀಗ ಕ್ರಿಕೆಟ್​ ಪಂದ್ಯಗಳ ನೇರ ಪ್ರಸಾರವನ್ನೂ ಮಾಡಲು ಮುಂದಾಗಿದೆ. ಹೀಗಾಗಿ ಮುಂದಿನ 2024ರ ಟಿ20 ವಿಶ್ವ ಕಪ್​ ಸೇರಿದಂತೆ 2024ರಿಂದ 2027ರವರೆಗಿನ ಐಸಿಸಿ ಕ್ರಿಕೆಟ್​ ಪಂದ್ಯಗಳು ಅಮೆಜಾನ್ ಪ್ರೈಮ್​ನಲ್ಲಿ ಪ್ರಸಾರವಾಗಲಿದೆ. ಪ್ರೈಮ್​ ಆ್ಯಪ್ ಇದ್ದವರು ಯಾವುದೇ ಅಡೆತಡೆಗಳು ಇಲ್ಲದೆ ಪಂದ್ಯಗಳನ್ನು ವೀಕ್ಷಿಸಬಹುದು. ವಿಷಯ ತಿಳಿದ ತಕ್ಷಣ ನಾವು ಸಂಭ್ರಮ ಪಡುವ ಅಗತ್ಯವಿಲ್ಲ. ಯಾಕೆಂದರೆ ನೇರ ಪ್ರಸಾರದ ಹಕ್ಕನ್ನು ಅಮಜಾನ್ ಕಂಪನಿ ಪಡೆದುಕೊಂಡಿರುವುದು ಆಸ್ಟ್ರೇಲಿಯಾದಲ್ಲಿ ಪ್ರಸಾರ ಮಾಡಲು ಮಾತ್ರ. ಹೀಗಾಗಿ ಭಾರತೀಯರಿಗೆ ಇದರ ಅನುಕೂಲವಿಲ್ಲ.

2024ರಲ್ಲಿ ಅಮೆರಿಕದಲ್ಲಿ ನಡೆಯಲಿರುವ ಪುರುಷರ ಟಿ20 ವಿಶ್ವಕಪ್ ಟೂರ್ನಿಯಿಂದ ಮುಂದಿನ ನಾಲ್ಕು ವರ್ಷಗಳ ಕಾಲ ನಡೆಯಲಿರುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಆಸ್ಟ್ರೇಲಿಯಾದಲ್ಲಿ ನೇರ ಪ್ರಸಾರ ಮಾಡುವ ಹಕ್ಕನ್ನು ಅಮೆಜಾನ್ ಪ್ರೈಮ್ ವಿಡಿಯೋ ಪಡೆದುಕೊಂಡಿದೆ. ಈ ಒಪ್ಪಂದದಲ್ಲಿ ಪುರುಷರ ಮತ್ತು ಮಹಿಳಾ ಕ್ರಿಕೆಟ್ ವಿಶ್ವಕಪ್, ಟಿ 20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಅಂಡರ್ 19 ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶೀಪ್​​ ಫೈನಲ್ ಪಂದ್ಯಗಳು ಸೇರಿಕೊಂಡಿವೆ. ಈ ಒಪ್ಪಂದವು ಎಲ್ಲಾ ಐಸಿಸಿ ಕ್ವಾಲಿಫೈಯರ್ ಮತ್ತು ಅಂಡರ್ 19 ವಿಶ್ವಕಪ್ ಟೂರ್ನಿಗಳನ್ನೂ ಒಳಗೊಂಡಿದೆ. ಹೊಸ ಪಾಲುದಾರಿಕೆಯು ಉಚಿತವಲ್ಲ ಎಂಬುದಾಗಿ ತಿಳಿಸಲಾಗಿದೆ

ಅಮೆಜಾನ್ ಪ್ರೈಮ್ ವಿಡಿಯೋ ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಹಕ್ಕುಗಳನ್ನು ಪಡೆದುಕೊಂಡಿರುವುದು ಇದೇ ಮೊದಲು ಮತ್ತು ಭಾರತದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯಗಳನ್ನು ಸ್ಟ್ರೀಮಿಂಗ್ ಮಾಡಿದ ನಂತರ ಜಾಗತಿಕವಾಗಿ ಕ್ರೀಡೆಗೆ ಕಾಲಿಟ್ಟಿರುವುದು ಇದು ಎರಡನೇ ಬಾರಿ.

ಕ್ರಿಕೆಟ್ ಪ್ರಸಾರ ಹಕ್ಕುಗಳ ಗಳಿಕೆಯಲ್ಲಿ ಆರ್ಥಿಕ ನಷ್ಟ ಎದುರಿಸುತ್ತಿರುವ ಫಾಕ್ಸ್ ಸ್ಪೋರ್ಟ್ಸ್ ಮತ್ತು ಸೆವೆನ್ ನೆಟ್ವರ್ಕ್​​​ಗೆ ಇದು ಸವಾಲೆನಿಸಿದೆ. ಅಮೆಜಾನ್ ಪ್ರೈಮ್​ ಪ್ರವೇಶದಿಂದ ಅಲ್ಲಿನ ನೇರ ಪ್ರಸಾರದ ಚಿತ್ರಣ ಬದಲಾಗಲಿದೆ.

ಯಾವೆಲ್ಲ ಟೂರ್ನಿಗಳ ನೇರ ಪ್ರಸಾರ

  • ಪುರುಷರ ಟಿ 20 ವಿಶ್ವಕಪ್: ಯುಎಸ್ಎ / ವೆಸ್ಟ್ ಇಂಡೀಸ್ (ಜೂನ್ 2024)
  • ಮಹಿಳಾ ಟಿ 20 ವಿಶ್ವಕಪ್: ಬಾಂಗ್ಲಾದೇಶ (ಸೆಪ್ಟೆಂಬರ್ 2024)
  • ಪುರುಷರ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ (ಫೆಬ್ರವರಿ 2025)
  • ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ಇಂಗ್ಲೆಂಡ್ (ಜೂನ್ 2025)
  • ಮಹಿಳಾ ಏಕದಿನ ವಿಶ್ವಕಪ್: ಭಾರತ (ಸೆಪ್ಟೆಂಬರ್ 2025)
  • ಪುರುಷರ ಟಿ 20 ವಿಶ್ವಕಪ್: ಭಾರತ-ಶ್ರೀಲಂಕಾ (ಸೆಪ್ಟೆಂಬರ್ 2026)
  • ಮಹಿಳಾ ಟಿ 20 ವಿಶ್ವಕಪ್: ಇಂಗ್ಲೆಂಡ್ (ಜೂನ್ 2026)
  • ಮಹಿಳಾ ಚಾಂಪಿಯನ್ಸ್ ಟ್ರೋಫಿ: ಶ್ರೀಲಂಕಾ (ಫೆಬ್ರವರಿ 2027)
  • ಪುರುಷರ ಏಕದಿನ ವಿಶ್ವಕಪ್: ದಕ್ಷಿಣ ಆಫ್ರಿಕಾ/ನಮೀಬಿಯಾ (ಅಕ್ಟೋಬರ್ 2027)

ಈ ಒಪ್ಪಂದವು ಸ್ಟ್ರೀಮಿಂಗ್ ಸೇವೆಗೆ ವಿಚಾರದಲ್ಲಿ ಹೊಸ ಮೈಲುಗಲ್ಲು ಮತ್ತು ಇದು ಆಸ್ಟ್ರೇಲಿಯಾದ ಕ್ರಿಕೆಟ್ ಅಭಿಮಾನಿಗಳಿಗೆ ಅಭೂತಪೂರ್ವ ಅವಕಾಶ ಎಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್​​ನ ಅಮೆಜಾನ್ ಪ್ರೈಮ್ ಮುಖ್ಯಸ್ಥ ಹುಶಿದಾರ್ ಖರಾಸ್ ಹೇಳಿದ್ದಾರೆ.

ಇದನ್ನೂ ಓದಿ : Ind vs SA : ಭಾರತ ವಿರುದ್ಧ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

ಕ್ರಿಕೆಟ್ ವಿಶ್ವಕಪ್ ವಿಶ್ವದ ಅತಿ ಹೆಚ್ಚು ವೀಕ್ಷಿಸಿದ ಕ್ರೀಡಾಕೂಟಗಳಲ್ಲಿ ಒಂದಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಆವೃತ್ತಿಯನ್ನು ನೂರಾರು ಮಿಲಿಯನ್ ಜನರು ವೀಕ್ಷಿಸಿದ್ದಾರೆ. ಮುಂದಿನ ನಾಲ್ಕು ವರ್ಷಗಳಲ್ಲಿ ಆಸ್ಟ್ರೇಲಿಯಾದ ಪ್ರೈಮ್ ಸದಸ್ಯರು ತಮ್ಮ ನೆಚ್ಚಿನ ಕ್ರಿಕೆಟ್ ತಂಡಗಳು ಮತ್ತು ಆಟಗಾರರು ಕ್ರಿಕೆಟ್​ನ ಅತಿದೊಡ್ಡ ಬಹುಮಾನಕ್ಕಾಗಿ ಸ್ಪರ್ಧಿಸುವುದನ್ನು ಪ್ರೈಮ್ ವೀಡಿಯೊದಲ್ಲಿ ವೀಕ್ಷಿಸಲು ಸಾಧ್ಯವಾಗುತ್ತದೆ ” ಎಂದು ಖರಾಸ್ ಹೇಳಿದ್ದಾರೆ.

ಅಮೆಜಾನ್ 2024 ರಲ್ಲಿ ಬಿಡುಗಡೆಯಾಗಲಿರುವ ಟೆಸ್ಟ್ ಸಾಕ್ಷ್ಯಚಿತ್ರದ ಮೂರನೇ ಸೀಸನ್ ಅನ್ನು ಘೋಷಿಸಿದೆ. ದಿ ಟೆಸ್ಟ್: ಎ ನ್ಯೂ ಎರಾ ಫಾರ್ ಆಸ್ಟ್ರೇಲಿಯಾ, ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾದ ಸಹ-ನಿರ್ಮಾಣದ ಸರಣಿಯಾಗಿದೆ. ಮೂರನೇ ಆವೃತ್ತಿಯು ಈ ವರ್ಷ ಇಂಗ್ಲೆಂಡ್​ನಲ್ಲಿ ನಡೆದ ಆಶಸ್ ಸರಣಿಯಲ್ಲಿ 2-2 ರಿಂದ ಕೊನೆಗೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sandeep Lamichhane: ಪಾಕ್​ ಆಟಗಾರನನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ನೇಪಾಳ ಸ್ಪಿನ್ನರ್​

Sandeep Lamichhane: ನೇಪಾಳ ತಂಡದ ಪ್ರಮುಖ ಸ್ಪಿನ್ನರ್‌ ಸಂದೀಪ್‌ ಲಮಿಚಾನೆ(Sandeep Lamichhane) ಅವರು ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಪಂದ್ಯಗಳನ್ನಾಡಿ 100 ವಿಕೆಟ್​ ಕಿತ್ತ ವಿಶ್ವದ 2ನೇ ಬೌಲರ್​(fastest bowler to 100 T20I wickets) ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

VISTARANEWS.COM


on

Sandeep Lamichhane
Koo

ಕಿಂಗ್ಸ್‌ಟೌನ್‌: ಅತ್ಯಾಚಾರ ಪ್ರಕರಣ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ನಿರ್ದೋಷಿ ಎಂದು ಸಾಬೀತಾದ ಬಳಿಕ ಟಿ20 ವಿಶ್ವಕಪ್​ ಆಡಲಿಳಿದ ನೇಪಾಳ ತಂಡದ ಪ್ರಮುಖ ಸ್ಪಿನ್ನರ್‌ ಸಂದೀಪ್‌ ಲಮಿಚಾನೆ(Sandeep Lamichhane) ಅವರು ಟಿ20 ಕ್ರಿಕೆಟ್​ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಅತಿ ಕಡಿಮೆ ಪಂದ್ಯಗಳನ್ನಾಡಿ 100 ವಿಕೆಟ್​ ಕಿತ್ತ ವಿಶ್ವದ 2ನೇ ಬೌಲರ್​(fastest bowler to 100 T20I wickets) ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಸೋಮವಾರ ಬಾಂಗ್ಲಾದೇಶ(BAN vs NEP) ವಿರುದ್ಧದ ಟಿ20 ವಿಶ್ವಕಪ್​ ಲೀಗ್​ ಪಂದ್ಯದಲ್ಲಿ 2 ವಿಕೆಟ್​ ಪಡೆಯುವ ಮೂಲಕ ವೇಗವಾಗಿ 100 ವಿಕೆಟ್​ ಕಿತ್ತ ಮೈಲುಗಲ್ಲು ನಿರ್ಮಿಸಿದರು. ವಿಶ್ವ ದಾಖಲೆ ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಖಾನ್(Rashid Khan)​ ಹೆಸರಿನಲ್ಲಿದೆ. ರಶೀದ್​ 53 ಪಂದ್ಯಗಳಿಂದ 100 ವಿಕೆಟ್​ ಕಿತ್ತಿದ್ದಾರೆ. ಲಮಿಚಾನೆ 54 ಪಂದ್ಯ ಆಡಿ 100 ವಿಕೆಟ್​ ಪೂರ್ತಿಗೊಳಿಸಿದರು. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್‌ ಲಮಿಚಾನೆಗೆ ಯುಎಸ್‌ ವೀಸಾ ಲಭಿಸುವುದು ವಿಳಂಬವಾಗಿತ್ತು. ಹೀಗಾಗಿ ಅವರು ಆರಂಭಿಕ ಪಂದ್ಯಳಲ್ಲಿ ಆಡುವ ಅವಕಾಶ ಕಳೆದುಕೊಂಡರು.

ಟಿ20ಯಲ್ಲಿ ವೇಗವಾಗಿ 100 ವಿಕೆಟ್​ ಕಿತ್ತ ಬೌಲರ್​ಗಳು


ರಶೀದ್​ ಖಾನ್​-53 ಪಂದ್ಯ

ಸಂದೀಪ್‌ ಲಮಿಚಾನೆ-54 ಪಂದ್ಯ

ಹ್ಯಾರಿಸ್ ರೌಫ್- 71 ಪಂದ್ಯ

ಮಾರ್ಕ್ ಅಡೇರ್-72 ಪಂದ್ಯ

ಬಿಲಾಲ್ ಖಾನ್-72 ಪಂದ್ಯ

ಲಸಿತ್ ಮಾಲಿಂಗ-76 ಪಂದ್ಯ

ಸಂದೀಪ್‌ ಲಮಿಚಾನೆ ಅವರು 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೇ ವರ್ಷದ ಜನವರಿಯಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಲಮಿಚಾನೆಗೆ 8 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಶಿಶಿರ್ ರಾಜ್ ಧಾಕಲ್ ಅವರ ಪೀಠವು ವಿಚಾರಣೆಯ ಬಳಿಕ 8 ವರ್ಷಗಳ ಜೈಲು ಶಿಕ್ಷೆ, ಪರಿಹಾರ ಮತ್ತು ದಂಡದ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಸಂದೀಪ್ ಲಮಿಚಾನೆ ಹೈಕೋರ್ಟ್ ಮೆಟ್ಟಿಲ್ಲೇರಿದ್ದರು. ಮರು ವಿಚಾರಣೆ ನಡೆಸಿದ ನೇಪಾಳ ಹೈಕೋರ್ಟ್(Nepal High Court) ಕಳೆದ ತಿಂಗಳಷ್ಟೇ ಲಮಿಚಾನೆ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಿರಪರಾಧಿ ಎಂದು ಸಾಬೀತಾದ ನಂತರ ಸಂದೀಪ್ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

ಇದನ್ನೂ ಒದಿ Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

ಏನಿದು ಪ್ರಕರಣ?

2022ರಲ್ಲಿ ಲಾಮಿಚಾನೆ ವಿರುದ್ಧ ಹದಿಹರೆಯದ ಹುಡುಗಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಈ ಆರೋಪದ ಬಳಿಕ ಲಾಮಿಚಾನೆ ಬಂಧನ ಕೂಡ ಆಗಿತ್ತು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಕ್ರಿಕೆಟಿಗನ ಮೇಲೆ ಆರೋಪ ಹೊರಿಸಲಾಗಿತ್ತು.

2022ರಲ್ಲಿ ಲಾಮಿಚಾನೆ ಅವರು ವೆಸ್ಟ್​ ಇಂಡೀಸ್​ನಲ್ಲಿ ನಡೆಯುತ್ತಿದ್ದ ಕೆರಿಬಿಯನ್​ ಕ್ರಿಕೆಟ್​ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ವೇಳೆ ಅವರ ಮೇಲೆ ಅತ್ಯಾಚಾರದ ದೂರು ದಾಖಲಾಗಿತ್ತು. ತನಿಖೆಗೆ ಹಾಜರಾಗದ ಕಾರಣ ಅವರ ವಿರುದ್ಧ ಕೋರ್ಟ್​ ಜಾಮೀನು ರಹಿತ ವಾರಂಟ್​ ಹೊರಡಿಸಿತ್ತು. ಬಳಿಕ ಅವರು ತವರಿಗೆ ಮರಳಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಪಡಿಸಿಕೊಂಡು ಕೋರ್ಟ್​ಗೆ ಹಾಜರುಪಡಿಸಿದ್ದರು. ಕೆಳ ಹಂತದ ನ್ಯಾಯಾಲಯ ಲಾಮಿಚಾನೆಯನ್ನು ನ್ಯಾಯಾಂಗ ಬಂಧನದಲ್ಲಿ ಇಡುವಂತೆ ಆದೇಶಿಸಿತ್ತು. ಹೀಗಾಗಿ ಮೂರು ತಿಂಗಳು ಜೈಲಿನಲ್ಲಿದ್ದರು.

Continue Reading

ಕ್ರೀಡೆ

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana: ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು.

VISTARANEWS.COM


on

Smriti Mandhana
Koo

ಬೆಂಗಳೂರು: ಭಾನುವಾರ ನಡೆದ ದಕ್ಷಿಣ ಆಫ್ರಿಕಾ(NDW vs RSAW) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ 143 ರನ್​ ಜಯ ಸಾಧಿಸಿ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಸೊಗಸಾದ ಬ್ಯಾಟಿಂಗ್​ ನಡೆಸಿ ಶತಕ ಬಾರಿಸಿದ ಎಡಗೈ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana) ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿ ಸೇರಿ 7 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆದಿದ್ದಾರೆ. ಮಂಧನಾ ಅವರ 6ನೇ ಏಕದಿನ ಶತಕ ಇದಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 56 ರನ್‌ಗಳನ್ನು ಕಲೆ ಹಾಕುತ್ತಿದ್ದಂತೆ ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್(Mithali Raj) ಹೆಸರಿನಲ್ಲಿದೆ. ಮಿಥಾಲಿ ರಾಜ್ ಅವರು 10868 ರನ್‌ಗಳನ್ನು ಬಾರಿಸಿದ್ದಾರೆ. 7,059 ರನ್​ ಪೂರ್ತಿಗೊಳಿಸಿದ ಮಂಧಾನಗೆ ಬಿಸಿಸಿಐ ಶುಭ ಹಾರೈಸಿದೆ.


ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದಕೊಂಡ ಭಾರತ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. 15 ರನ್​ ಒಟ್ಟುಗೂಡುವಷ್ಟರಲ್ಲಿ ಶಫಾಲಿ ವರ್ಮ(7) ವಿಕೆಟ್​ ಪತನಗೊಂಡಿತು. ಬಳಿಕ ಬಂದ ಹೇಮಲತಾ(12), ಜೆಮಿಮಾ ರೋಡ್ರಿಗಸ್​(17), ನಾಯಕಿ ಹರ್ಮನ್​ ಪ್ರೀತ್​ ಕೌರ್​(10), ರಿಚಾ ಘೋಷ್​(3) ಕಳಪೆ ಬ್ಯಾಟಿಂಗ್​ ನಡೆಸಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಏಕಾಂಗಿಯಾಗಿ ಹೋರಾಡಿದ ಮಂಧನಾ ಶತಕ ಬಾರಿಸಿ ತಂಡದ ಪಾಲಿಗೆ ಆಪತ್ಬಾಂಧವರಾಗಿ ಮೂಡಿಬಂದರು.

47ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಮಂಧಾನ 12 ಬೌಂಡರಿ ಮತ್ತು ಒಂದು ಸಿಕ್ಸರ್​ ಸಿಡಿಸಿ 117 ರನ್​ ಬಾರಿಸಿದರು. ಇವರಿಗೆ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ದೀಪ್ತಿ ಶರ್ಮ ಮತ್ತು(37) ಮತ್ತು ಪೂಜಾ ವಸ್ತ್ರಾಕರ್​(31*) ಉತ್ತಮ ಸಾಥ್​ ನೀಡಿದರು. ಹೀಗಾಗಿ ತಂಡ 250ರ ಗಡಿ ದಾಟಿತು. ಚೇಸಿಂಗ್​ ನಡೆಸಿದ ದಕ್ಷಿಣ ಆಫ್ರಿಕಾ ಆಶಾ ಸೋಬನಾ( 4 ವಿಕೆಟ್​) ಅವರ ಸ್ಪಿನ್​ ಬೌಲಿಂಗ್​ ದಾಳಿಗೆ ಕೇವಲ 122 ರನ್​ಗೆ ಸರ್ವಪತನ ಕಂಡಿತು. ಪದಾರ್ಪಣ ಪಂದ್ಯದಲ್ಲೇ ಆಶಾ ಸೋಬನಾ ಅಮೊಘ ಪ್ರದರ್ಶನ ತೋರುವ ಮೂಲಕ ಭಾರತ ತಂಡದಲ್ಲಿ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಭರವಸೆ ಮೂಡಿಸಿದ್ದಾರೆ.

ಇದನ್ನೂ ಓದಿ Smriti Mandhana: ಆರ್​ಸಿಬಿ ಅಭಿಮಾನಿಗಳ ಕ್ರೇಜ್​ಗೆ ಫಿದಾ ಆದ ಸ್ಮೃತಿ ಮಂಧಾನ

ಸಂಕ್ಷಿಪ್ತ ಸ್ಕೋರ್‌: ಭಾರತ-8 ವಿಕೆಟಿಗೆ 265 (ಮಂಧನಾ 117, ದೀಪ್ತಿ 37, ಪೂಜಾ ಔಟಾಗದೆ 31, ಅಯಬೊಂಗಾ ಖಾಕಾ 47ಕ್ಕೆ 3, ಮಸಬಟಾ ಕ್ಲಾಸ್‌ 51ಕ್ಕೆ 2). ದಕ್ಷಿಣ ಆಫ್ರಿಕಾ-37.4 ಓವರ್‌ಗಳಲ್ಲಿ 122 (ಸುನೆ ಲೂಸ್‌ 33, ಸಿನಾಲೊ ಜಾಫ‌¤ 27, ಮರಿಜಾನ್‌ ಕಾಪ್‌ 24, ಆಶಾ 21ಕ್ಕೆ 4, ದೀಪ್ತಿ 10ಕ್ಕೆ 2). ಪಂದ್ಯಶ್ರೇಷ್ಠ: ಸ್ಮೃತಿ ಮಂಧನಾ

Continue Reading

ಕ್ರೀಡೆ

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BAN vs NEP: ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ಸೋಮವಾರ ನಡೆದ ಟಿ20 ವಿಶ್ವಕಪ್​ನ(T20 World Cup 2024) ಲೀಗ್​ ಪಂದ್ಯದಲ್ಲಿ ನೇಪಾಳ(BAN vs NEP) ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್​ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್​ಗೆ(Nepal Fan Jumps in Swimming Pool) ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್​ ಆಗಿದೆ.

ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.


ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು. ಈ ಗೆಲುವಿನೊಂದಿಗೆ ಬಾಂಗ್ಲಾ ಸೂಪರ್​-8 ಹಂತಕ್ಕೂ ಪ್ರವೇಶ ಪಡೆಯಿತು. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ಕ್ರೀಡೆ

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

T20 World Cup 2024: ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024) ಟೂರ್ನಿಯ ಸೂಪರ್​-8 ಹಂತದ(Super Eight stage) ತಂಡಗಳ ಪಟ್ಟಿ ಅಂತಿಮಗೊಂಡಿದೆ. ಇಂದು(ಸೋಮವಾರ) ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ ಗೆಲುವು ಸಾಧಿಸುವ ಮೂಲಕ ಈ ಪಟ್ಟಿ ಅಂತಿಮಗೊಂಡಿತು. 7 ತಂಡಗಳು ಈಗಾಗಲೇ ಈ ಹಂತಕ್ಕೇರಿತ್ತು. ಆದರೆ ಉಳಿದ ಒಂದು ಸ್ಥಾನಕ್ಕಾಗಿ ಡಿ ಗುಂಪಿನಿಂದ ಬಾಂಗ್ಲಾ ಮತ್ತು ನೆದರ್ಲೆಂಡ್ಸ್​ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಬಾಂಗ್ಲಾ ಮೇಲುಗೈ ಸಾಧಿಸಿ ಅಂತಿಮವಾಗಿ ತೇರ್ಗಡೆಗೊಂಡಿದೆ.

ಬಾಂಗ್ಲಾದೇಶ ‘ಎ’ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಅಪಘಾನಿಸ್ತಾನದ ಜತೆ ಸ್ಥಾನ ಪಡೆದಿದೆ. ‘ಬಿ’ ಗುಂಪಿನಲ್ಲಿ ವೆಸ್ಟ್​ ಇಂಡೀಸ್​, ಅಮೆರಿಕ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್​ ತಂಡಗಳು ಕಾಣಿಸಿಕೊಂಡಿವೆ. ಲೀಗ್​ ಹಂತದ ಪಂದ್ಯಕ್ಕೆ ನಾಳೆ ತೆರೆ ಬೀಳಲಿದೆ. ಅಂತಿಮ ಪಂದ್ಯದಲ್ಲಿ ವಿಂಡೀಸ್​ ಮತ್ತು ಆಫ್ಘಾನ್​ ಮುಖಾಮುಖಿಯಾಗಲಿವೆ. ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್​ 20ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಇದನ್ನೂ ಓದಿ BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಬಾಂಗ್ಲಾದೇಶಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಬಾಂಗ್ಲಾಗೆ 21 ರನ್​ ಜಯ


ಸೋಮವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆಯಿತು. ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading
Advertisement
Gold Rate Today
ಚಿನ್ನದ ದರ16 seconds ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ34 seconds ago

GPF Interest: 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ರಾಜ್ಯ ಸರ್ಕಾರ ಆದೇಶ

Actor Darshan
ಮೈಸೂರು1 min ago

Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan Police To Serve Notice To sandalwood comedy actor
ಸ್ಯಾಂಡಲ್ ವುಡ್16 mins ago

Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

Viral Video
ಪ್ರಮುಖ ಸುದ್ದಿ18 mins ago

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Sandeep Lamichhane
ಕ್ರೀಡೆ20 mins ago

Sandeep Lamichhane: ಪಾಕ್​ ಆಟಗಾರನನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ನೇಪಾಳ ಸ್ಪಿನ್ನರ್​

Yogi Adithyanath
Latest22 mins ago

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Reasi Terror Attack
ವೈರಲ್ ನ್ಯೂಸ್33 mins ago

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Bakrid 2024
ಬೆಂಗಳೂರು46 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Actor Darshan Please leave Pavitra Darshan request to police
ಸಿನಿಮಾ58 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು46 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ19 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ20 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌