ind vs aus : ಆಸ್ಟ್ರೇಲಿಯಾ- ಭಾರತ ಟಿ20 ಪಂದ್ಯದ ಅಂಪೈರ್​ ಮೇಲೆ ಮೋಸದ ಅರೋಪ! - Vistara News

ಕ್ರಿಕೆಟ್

ind vs aus : ಆಸ್ಟ್ರೇಲಿಯಾ- ಭಾರತ ಟಿ20 ಪಂದ್ಯದ ಅಂಪೈರ್​ ಮೇಲೆ ಮೋಸದ ಅರೋಪ!

ind vs aus : ಸರಣಿಯ ಕೊನೇ ಪಂದ್ಯದಲ್ಲಿ ಭಾರತ ತಂಡ 6 ರನ್​ಗಳ ರೋಚಕ ಗೆಲುವು ಸಾಧಿಸಿ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿಕೊಂಡಿತ್ತು.

VISTARANEWS.COM


on

Cricket news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ (ind vs aus) ಐದನೇ ಮತ್ತು ಅಂತಿಮ ಟಿ 20 ಪಂದ್ಯದಲ್ಲಿ ಭಾರತ ತಂಡವು ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯನ್ನು 4-1 ರಿಂದ ಗೆದ್ದುಕೊಂಡು ಬೀಗಿದೆ. ಭಾರತ ತಂಡಕ್ಕೆ ಇದು ಉತ್ತಮ ಫಲಿತಾಂಶವಾಗಿದ್ದು, ವಿಶ್ವಕಪ್ ಫೈನಲ್ ಸೋಲಿನ ನಂತರ ನಿರಾಶೆಗೊಂಡ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಸ್ವಲ್ಪ ಉತ್ಸಾಹ ತಂದಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೇಡ್ ಅವರು ಮೊದಲು ಬ್ಯಾಟಿಂಗ್ ಮಾಡವಂತೆ ಭಾರತಕ್ಕೆ ಆಹ್ವಾನ ಕೊಟ್ಟಿತು/ ಶ್ರೇಯಸ್ ಅಯ್ಯರ್ 53 ರನ್ ಗಳಿಸಿದರೆ, ಅಕ್ಷರ್ ಪಟೇಲ್ 31 ರನ್ ಗಳಿಸಿದ್ದರಿಂದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಅಂತೆಯೇ ಪಂದ್ಯದ ಕೊನೇ ಹಂತದಲ್ಲಿ ಬೌಲಿಂಗ್​ನಲ್ಲಿ ಮಿಂಚಿದ ಮುಕೇಶ್ ಕುಮಾರ್ (32ಕ್ಕೆ 3) ಹಾಗೂ ಅರ್ಷ್ದೀಪ್ ಸಿಂಗ್ (40ಕ್ಕೆ 2) ಭಾರತ ತಂಡವನ್ನು ಗೆಲ್ಲಿಸಿದರು. ಅದರಲ್ಲೂ ಅರ್ಶ್​ ದೀಪ್​ ಕೊನೇ ಓವರ್​ನಲ್ಲಿ ಬೇಕಾಗಿದ್ದ 10 ರನ್ ಕಾಪಾಡಿ ಭಾರತಕ್ಕೆ 6 ರನ್ ಗಳ ಜಯ ತಂದಕೊಟ್ಟಿದ್ದರು. ಈ ಓವರ್ ಅತ್ಯಂತ ರೋಚಕವಾಗಿತ್ತು. ಇದೀಗ ಆ ಓವರ್​ನ ಎರಡು ಎಸೆತಗಳು ವಿವಾದಕ್ಕೆ ಒಳಗಾಗಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರರು ಇದು ಮೋಸದಾಟ ಎಂಬಂತೆ ಅದನ್ನು ಬಿಂಬಿಸಿದ್ದಾರೆ. ಅಂಪೈರ್​ಗಳ ಮೇಲೆ ಪಕ್ಷಪಾತದ ಗೂಬೆ ಕೂರಿಸಿದ್ದಾರೆ.

ಹೇಡನ್ ವಿವಾದಾತ್ಮಕ ಹೇಳಿಕೆ

ಪಂದ್ಯದ ವೀಕ್ಷಕ ವಿವರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ನೀಡಿದ ಹೇಳಿಕೆ ಸ್ವಲ್ಪ ಕೋಲಾಹಲಕ್ಕೆ ಕಾರಣವಾಯಿತು. ಅರ್ಶ್​ದೀಪ್​ ಅವರು ಎಸೆದ ಬೌನ್ಸರ್ ಮ್ಯಾಥ್ಯೂ ವೇಡ್ ಅವರ ತಲೆಯ ಮೇಲೆ ಹಾರಿ ಹೋಗಿತ್ತು. ಬ್ಯಾಟರ್​ ಮನವಿಯ ಹೊರತಾಗಿಯೂ, ಲೆಗ್-ಅಂಪೈರ್ ಅದಕ್ಕೆ ವೈಡ್​ ನೀಡಲಿಲ್ಲ. ಇದು ವೇಡ್ ಅವರ ಕೋಪಕ್ಕೆ ಕಾರಣವಾಯಿತು.

ಇದನ್ನೂ ಓದಿ : Suryakumar Yadav : ಕೊಹ್ಲಿ ದಾಖಲೆ ಮುರಿಯಲು ಸಜ್ಜಾಗಿದ್ದಾರೆ ಸೂರ್ಯಕುಮಾರ್​

ಹೇಡನ್ ಈ ಕುರಿತು ವಿವರಣೆ ನೀಡಿ, ವೇಡ್​ ಕೋಪಗೊಂಡಿದ್ದು ಸರಿಯಾಗಿದೆ. ಅದು ಖಂಡಿತವಾಗಿಯೂ ವೈಡ್​ ಎಸೆತ. ಅವರ ತಲೆಯ ಮೇಲೆ ಹಾರಿ ಹೋಗಿದೆ. ಅವರು ತಮ್ಮ ಸ್ಥಾನದಲ್ಲಿ ನಿಂತಿದ್ದ ಹೊರತಾಗಿಯೂ ಚೆಂಡು ಮೇಲಕ್ಕೆ ಹಾರಿದೆ. ಹೀಗಾಗಿ ವೈಡ್​ ನೀಡಬೇಕಾಗಿತ್ತು ಎಂದು ವಾದಿಸಿದ್ದಾರೆ. ಇದು ಅಂಪೈರ್ ಮಾಡಿದ ಮೊದಲ ತಪ್ಪು ಎಂಬುದಾಗಿ ಹೇಡನ್ ಆರೋಪಿಸಿದ್ದಾರೆ.

ಅಂಪೈರ್​ ದೇಹಕ್ಕೆ ಬಡಿದಿತ್ತು ಚೆಂಡು

ಕೊನೆಯ 2 ಎಸೆತಗಳಲ್ಲಿ ಆಸೀಸ್​ ಬಳಗಕ್ಕೆ 8 ರನ್​ಗಳ ಅಗತ್ಯವಿತ್ತು. ನಥನ್ ಎಲ್ಲಿಸ್ ಸ್ಟ್ರೈಟ್​ ಬೌಂಡರಿಯನ್ನು ಗುರಿಯಾಗಿಸಿ ಬಾರಿಸಿದ ಚೆಂಡು ಬೌಲರ್ ಅರ್ಶ್​ದೀಪ್ ಅವರ ಕೈಸವರಿ ಅಂಪೈರ್​ನ ಮೈ ಮೇಲೆ ಬಿದ್ದಿತ್ತು. ಅಂಪೈರ್​ ಚೆಂಡಿನಿಂದ ತಪ್ಪಿಸಿಕೊಳ್ಳುವುದಕ್ಕೆ ನಾನಾ ರೀತಿ ಯತ್ನಿಸಿದರೂ ಅದು ಅವರ ತೊಡೆಗೆ ಬಡಿದಿತ್ತು. ಎಲ್ಲಿಸ್ ಸಂಭಾವ್ಯ ಬೌಂಡರಿಯನ್ನು ತಪ್ಪಿಸಿಕೊಂಡಿರುವ ಬಗ್ಗೆ ಸನ್ನೆ ಮಾಡಿದರೂ ಅಂಪೈರ್​ ಮರುತ್ತರ ಕೊಟ್ಟಿರಲಿಲ್ಲ.

ಈ ಎರಡೂ ಪ್ರಸಂಗವನ್ನು ನೋಡಿದ ಹೇಡನ್, ಅಂಪೈರ್ ಈ ಓವರ್​ನಲ್ಲಿ ಎರಡನೇ ಬಾರಿಗೆ ತಮ್ಮ ಕರ್ತವ್ಯ ಪೂರೈಸಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಮಾತು ಅಂಪೈರ್​ಗಳ ಮೋಸ ಹಾಗೂ ಸ್ವಜನಪಕ್ಷಪಾತ ಎಂಬ ಹೇಳಿಕೆಯಾಗಿತ್ತು.

ಹೇಡನ್ ಅವರ ಹೇಳಿಕೆಗಳು ಅನಗತ್ಯ ಎಂದು ನೆಟ್ಟಿಗರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಲಾಂಗ್ ಆನ್ ನಲ್ಲಿ ಫೀಲ್ಡರ್​ಗಳಿದ್ದರು. ಇದರಿಂದ ಯಾವುದೇ ವ್ಯತ್ಯಾಸ ಉಂಟಾಗುತ್ತಿರಲಿಲ್ಲ ಎಂದ ಹೇಳಿದ್ದಾರೆ. ಮೊದಲ ಎಸೆತವನ್ನು ವೈಡ್ ಕೊಟ್ಟಿದ್ದರೆ ಆಸ್ಟ್ರೇಲಿಯಾ ಐದು ರನ್​ನಿಂದ ಸೋಲುತ್ತಿತ್ತು ಎಂಬುದಾಗಿಯೂ ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

IND vs PAK :

VISTARANEWS.COM


on

IND vs PAK
Koo

ಬೆಂಗಳೂರು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಳಾ ಅವರು ಕ್ರಿಕೆಟ್ ಅಭಿಮಾನಿ. ಕ್ರಿಕೆಟ್​ ಪಂದ್ಯಗಳನ್ನು ತಪ್ಪದೇ ವೀಕ್ಷಿಸುತ್ತಾರೆ. ಅದರಲ್ಲೂ ಭಾರತದ ಪಂದ್ಯವಿದ್ದರೆ ಅವರಿಗೆ ಹಬ್ಬ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪುರುಷರ ಟಿ 20 ವಿಶ್ವಕಪ್ 2024 ರ ಪಂದ್ಯಕ್ಕೆ ಹಾಜರಾದ ದೊಡ್ಡ ಹೆಸರುಗಳಲ್ಲಿ ಅವರು ಇದ್ದರೂ. ಮೈಕ್ರೋಸಾಫ್ಟ್ ಸಿಇಒ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಉದ್ಯಮಿ ಗೌರವ್ ಜೈನ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ . ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

“ಸೂಪರ್ ಅಭಿಮಾನಿ @satyanadella #PakvsInd #t20USA ತಂಡದೊಂದಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಉತ್ಸುಕನಾಗಿದ್ದೇನೆ” ಎಂದು ಜೈನ್ ಪೋಸ್ಟ್​​ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಚಿತ್ರವನ್ನು ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದ ಸ್ಟ್ಯಾಂಡ್​ಗಳ ಮೇಲಿನಿಂದ ತೆಗೆದುಕೊಳ್ಳಲಾಗಿದೆ.

ಭಾನುವಾರ ರಾತ್ರಿ ಪೋಸ್ಟ್​​ ಹಂಚಿಕೊಂಡಾಗಿನಿಂದ, (ಹಿಂದೆ ಟ್ವಿಟರ್) ನಲ್ಲಿ 2.7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. “ಸಿಲಿಕಾನ್ ವ್ಯಾಲಿಯ ಅರ್ಧದಷ್ಟು ಭಾಗವು ಒಟ್ಟುಗೂಡಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಮಹಾಕಾವ್ಯ !!” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ಇದು ಅಮೆರಿಕದಲ್ಲಿರುವ ಭಾರತೀಯರಿಗೆ ಸೂಪರ್​ಬೌಲ್​ ಎಂದು ಹೇಳಿದ್ದಾರೆ. “ಅವರು ಜೆರ್ಸಿಯನ್ನು ನಿರೀಕ್ಷಿಸಿರಲಿಲ್ಲ” ಎಂದು ಎಕ್ಸ್ ಬಳಕೆದಾರರೊಬ್ಬರು ಹೇಳಿದರು.

ಟೂರ್ನಿಯ ಕೇಂದ್ರ ಬಿಂದು ಈ ಪಂದ್ಯ

ಕ್ರೀಡಾ ಜಗತ್ತಿನಲ್ಲಿ ಅತ್ಯಂತ ತೀವ್ರವಾದ ಭಾರತ-ಪಾಕಿಸ್ತಾನ ಕ್ರಿಕೆಟ್ ಪೈಪೋಟಿಯು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಎಂದಿಗೂ ವಿಫಲವಾಗುವುದಿಲ್ಲ. ಈ ಪಂದ್ಯವು ಇದಕ್ಕೆ ಹೊರತಾಗಿರಲಿಲ್ಲ, ಪ್ರಪಂಚದಾದ್ಯಂತದ ವೀಕ್ಷಕರನ್ನು ಸೆಳೆಯಿತು ಮತ್ತು ಕ್ರಿಕೆಟ್​​ನ ಉತ್ಸಾಹವನ್ನು ಪ್ರದರ್ಶಿಸಿತು. ಟಿ20 ವಿಶ್ವಕಪ್ ಟೂರ್ನಿಯಲ್ಲಿ 120 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಸೋತಿದೆ. ಆರಂಭದಲ್ಲಿ ಪಾಕಿಸ್ತಾನ ಉತ್ತಮವಾಗಿ ಆಡಿತು. ಕ್ರಮೇಣ ವಿಕೆಟ್​ಗಳನ್ನು ಕಳೆದುಕೊಂಡು ಆರು ರನ್​ಗಳಿಂದ ಸೋತಿತ. ಭಾರತದ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು.

ಇದನ್ನೂ ಓದಿ :IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

ಭಾರತ-ಅಮೆರಿಕನ್ ಸಿಇಒ ಕ್ರಿಕೆಟ್ ಮೇಲಿನ ತಮ್ಮ ಪ್ರೀತಿಯ ಬಗ್ಗೆ ಆಗಾಗ ಹೇಳುತ್ತಿರುತ್ತಾರೆ. ಕ್ರೀಡೆಯು ಅವರಿಗೆ ಟೀಮ್​ ವರ್ಕ್​ ಮತ್ತು ನಾಯಕತ್ವ ಕಲಿಸಿದೆ. ಅದು ಕಾರ್ಪೊರೇಟ್ ಪ್ರಪಂಚ ಎದುರಿಸುವ ಅಚ್ಚರಿಗಳಿಂದ ಮೇಲಕ್ಕೇರಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. “ಕ್ರಿಕೆಟ್ ನನಗೆ ತಂಡಗಳಲ್ಲಿ ಕೆಲಸ ಮಾಡುವ ಕುರಿತು ಮತ್ತು ವೃತ್ತಿಜೀವನದುದ್ದಕ್ಕೂ ನಾಯಕತ್ವದ ಬಗ್ಗೆ ನನಗೆ ಹೆಚ್ಚು ಕಲಿಸಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಮೈಕ್ರೋಸಾಫ್ಟ್ ಸಿಇಒ ಆಗಿ ನೇಮಕವಾದಾಗ ಹೇಳಿದ್ದರು.

Continue Reading

ಕ್ರೀಡೆ

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

IND vs PAK:

VISTARANEWS.COM


on

IND VS PAK
Koo

ನ್ಯೂಯಾರ್ಕ್: : ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ (T20 World Cup) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು(IND vs PAK) ಮಣಿಸಿದೆ. ಇದರೊಂದಿಗೆ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು 8-1ರ ಮುನ್ನಡೆಗೆ ಕೊಂಡೊಯ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್​​ ಇಳಿಯುವುದರೊಂದಿಗೆ ಆಟ ಪ್ರಾರಂಭವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ಕೇವಲ 119 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಮೆನ್ ಇನ್ ಬ್ಲೂ (Men In Blue) ತಂಡವು ಬೌಲಿಂಗ್​ ಸಾಮರ್ಥ್ಯವನ್ನು ಬಂಡವಾಳ ಮಾಡಿಕೊಂಡಿತು. ಒಂದು ಹಂತದಲ್ಲಿ ಕೈ ಜಾರುತ್ತಿರುವಂತೆ ಕಂಡುಬಂದರೂ ಭಾರತವು ಚೇತರಿಕೆಯ ನಂತರ ಅದನ್ನು ಮರಳಿ ತರುವಲ್ಲಿ ಯಶಸ್ವಿಯಾಯಿತು.

ಪಂದ್ಯದ ನಂತರ, ದೆಹಲಿ ಪೊಲೀಸರ ಅಧಿಕೃತ ಎಕ್ಸ್ ಹ್ಯಾಂಡಲ್ ತಮಾಷೆಯೊಂದನ್ನು ಮಾಡಿತು. ಪೊಲೀಸರ ಬಳಗ ಸಾಮಾಜಿಕ ಮಾಧ್ಯಮದ ಮೂಲಕ ನ್ಯೂಯಾರ್ಕ್​​ ಸಿಟಿ ಪೊಲೀಸರಿಗೆ ಸಂದೇಶವೊಂದನ್ನು ಟ್ಯಾಗ್ ಮಾಡಿತು “ಹೇ, @NYPDnews, ನಾವು ಎರಡು ದೊಡ್ಡ ಶಬ್ದಗಳನ್ನು ಕೇಳಿದ್ದೇವೆ. ಒಂದು “ಇಂಡಿಯಾ ಎ.. ಭಾರತ!” ಇನ್ನೊಂದು ಬಹುಶಃ ಮುರಿದ ಟಿವಿಗಳಾಗಿದ್ದರಬಹುದು. ದಯವಿಟ್ಟು ದೃಢೀಕರಿಸುವಿರಾ?” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಂದ್ಯ ನಡೆದ ನ್ಯೂಯಾರ್ಕ್​ ಸಿಟಿಯ ನಸ್ಸೌ ಸ್ಟೇಡಿಯಮ್​ನಲ್ಲಿ ಸುಮಾರು 125 ಡೆಸಿಬಲ್​ನಷ್ಟು ಸದ್ದು ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಕೇಳಿ ಬಂದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತ ಕಾರಣ ಯಥಾವತ್ ಅಲ್ಲಿನ ಪ್ರೇಕ್ಷಕರು ಟಿವಿ ಒಡೆದು ಹಾಕಿರಬಹುದು ಎಂದು ಡೆಲ್ಲಿ ಪೊಲೀಸರು ತಮಾಷೆ ಮಾಡಿದ್ದಾರೆ.

ಭಾರತಕ್ಕೆ ಸತತ ಎರಡನೇ ವಿಜಯ

ರೋಹಿತ್ ಶರ್ಮಾ 13 ಹಾಗೂ ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ನಿರ್ಗಮಿಸಿದರೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕ್ರಮವಾಗಿ ಕೇವಲ 7 ಮತ್ತು 3 ರನ್ ಸೇರಿಸಿದರು.

ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ಭಾರತ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಲು ಸಹಾಯ ಮಾಡಿದರು. ಅವರ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ ಒಟ್ಟು 119 ರನ್ ಗಳಿಸಲು ಸಹಾಯ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ ಹಾಗೂ ಹ್ಯಾರಿಸ್ ರವೂಫ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಭಾರತದ ಪರ ಮೊಹಮ್ಮದ್ ಅಮೀರ್ 2 ವಿಕೆಟ್ ಕಿತ್ತರೆ, ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.

ಇದನ್ನೂ ಓದಿ: T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

ಗುರಿ ಬೆನ್ನಟ್ಟಿದ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಬಾಬರ್ ಅಜಮ್ 13 ಮತ್ತು ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಉಸ್ಮಾನ್ ಖಾನ್, ಫಖರ್ ಜಮಾನ್ ಮತ್ತು ಇಮಾದ್ ವಾಸಿಮ್ ಕ್ರಮವಾಗಿ 13, 13 ಮತ್ತು 15 ರನ್ ಗಳಿಸಿದರು.

ಪಂದ್ಯದ ಒಂದು ಹಂತದಲ್ಲಿ, ಪಾಕಿಸ್ತಾನವು ಪ್ರತಿ ಎಸೆತಕ್ಕೆ ಒಂದು ರನ್ ಗಳಿಸಬೇಕಾಗಿತ್ತು. ಆದರೆ ನಂತರದಲ್ಲಿ ಭಾರತವು ಪಂದ್ಯದಲ್ಲಿಹಿಡಿದ ಸಾಧಿಸಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಅರ್ಷ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Continue Reading

Latest

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

T20 World Cup : ಸದ್ಯದ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಇದು ಅವರ ನೆಟ್ ರನ್ ರೇಟ್ (ಎನ್ಆರ್ಆರ್) ಅನ್ನು +1.455 ಕ್ಕೆ ಹೆಚ್ಚಿಸಿದೆ. ಭಾರತದಷ್ಟೇ ಅಂಕ ಹೊಂದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಂತರದ ಸ್ಥಾನದಲ್ಲಿದೆ.

VISTARANEWS.COM


on

T20 World Cup
Koo

ನ್ಯೂಯಾರ್ಕ್​: ಇಲ್ಲಿ ಭಾನುವಾರ ರಾತ್ರಿ ನಡೆದ ಟಿ 20 ವಿಶ್ವಕಪ್ 2024ರ (T20 World Cup) 19 ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪಾಕಿಸ್ತಾನ (Pakistan Cricket Team) ಮುಖಾಮುಖಿಯಾದಾಗ ಟೂರ್ನಿಯ ಕೇಂದ್ರ ಬಿಂದು ಎಂದು ಹೇಳಲಾಯಿತು. ಅದು ಸಾಕ್ಷಿ ಸಮೇತ ಸಾಬೀತು ಕೂಡ ಆಗಿದೆ. ಟಾಸ್ ಗೆದ್ದ ನಂತರ ನಾಯಕ ಬಾಬರ್ ಅಜಮ್ ಭಾರತ ತಂಡಕ್ಕೆ ಬ್ಯಾಟ್ ಮಾಡಲು ಆಹ್ವಾನ ಕೊಟ್ಟರು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬೇಗ ಔಟಾದಾಗ ಇದು ಸರಿ ಎನಿಸಿತು. ಆದರೆ, ಸಿಕ್ಕ ಅವಕಾಶವನ್ನು ಕಳೆದುಕೊಂಡ ಪಾಕಿಸ್ತಾನ ತಂಡ ಕೊನೆಯಲ್ಲಿ 6 ರನ್​ಗಳಿಂದ ಸೋತಿತು. ಈ ಮೂಲಕ ಪರಿತಪಿಸಲು ಆರಂಭಿಸಿದೆ. ಭಾರತ ತಂಡದ ಪಾಕಿಸ್ತಾನದ ಸೂಪರ್-8 ಹಂತದ ಪ್ರವೇಶಕ್ಕೆ ಮುಳ್ಳಾಗಿದೆ.

ಪಂದ್ಯದಲ್ಲಿ ಭಾರತ ಪರ ಯುವ ಬ್ಯಾಟರ್​ ರಿಷಭ್ ಪಂತ್ 41 ರನ್ ಬಾರಿಸಿದರು. ಅವರ ರನ್​ ಭಾರತ ಪರ ಗರಿಷ್ಠ ಸ್ಕೋರ್. ಆದರೆ ನಸೀಮ್ ಶಾ ಮತ್ತು ಮೊಹಮ್ಮದ್ ಅಮೀರ್ ಅವರ ಬೌಲಿಂಗ್ ಸ್ಪೆಲ್​ಗಳು ಭಾರತದ ಬ್ಯಾಟಿಂಗ್ ಘಟಕವನ್ನು ಧೂಳಿಪಟ ಮಾಡಿದರು. ಒಂದು ಬಾರಿ ಕುಸಿದ ಭಾರತ ಚೇತರಿಸಿಕೊಳ್ಳಲೇ ಇಲ್ಲ. ಅಂತಿಮವಾಗಿ 18.3 ಓವರ್​ಗಳಲ್ಲಿ 119 ರನ್​ಗಳಿಗೆ ಆಲ್​ಔಟ್ ಆಯಿತು.

ಉತ್ತರವಾಗಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಎಚ್ಚರಿಕೆಯಿಂದ ಇನಿಂಗ್ಸ್​​ ಪ್ರಾರಂಭಿಸಿದರು. ಆದರೆ ಶೀಘ್ರದಲ್ಲೇ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ಪ್ರಗತಿ ತಂದುಕೊಟ್ಟರು. ಆದಾಗ್ಯೂ, ರಿಜ್ವಾನ್ ತಳವೂರಿ ಆಡಿ ಸ್ಕೋರ್ ಬೋರ್ಡ್ ಹಿಗ್ಗಿಸಲು ಯತ್ನಿಸಿದರು. ಆದರೆ ಮೊಹಮ್ಮದ್ ಸಿರಾಜ್ ಮತ್ತು ನಂತರ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಅವರ ಕೆಲವು ಬಿಗಿಯಾದ ಸ್ಪೆಲ್​ಗಳು ಪಾಕಿಸ್ತಾನಕ್ಕೆ ರನ್​ ಗಳಿಸಲು ಕೊಂಚವೂ ಅವಕಾಶ ಕೊಡಲಿಲ್ಲ. ನಂತರ, ಬುಮ್ರಾ 19 ನೇ ಓವರ್​ನಲ್ಲಿ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಭಾರತ ತಂಡ ಪರ ತಿರುಗಿಸಿದರು. ಅಲ್ಲದೆ ಮತ್ತೊಮ್ಮೆ ತಾವು ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಇದು ಅವರ ನೆಟ್ ರನ್ ರೇಟ್ (ಎನ್ಆರ್ಆರ್) ಅನ್ನು +1.455 ಕ್ಕೆ ಹೆಚ್ಚಿಸಿದೆ. ಭಾರತದಷ್ಟೇ ಅಂಕ ಹೊಂದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಂತರದ ಸ್ಥಾನದಲ್ಲಿದೆ. ಅವರ ನೆಟ್ ರನ್ ರೇಟ್ ಪ್ರಸ್ತುತ +0.626 ಆಗಿದೆ. ಇದಲ್ಲದೆ, ಆರಂಭಿಕ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಸೋತ ನಂತರ ಐರ್ಲೆಂಡ್ ಅನ್ನು ಸೋಲಿಸಿದ ಕೆನಡಾ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ಪ್ರಸ್ತುತ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿವೆ. ಪಾಕ್​ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಇನ್ನೂ ಖಾತೆ ತೆರೆದಿಲ್ಲ. ಹೀಗಾಗಿ ಸೂಪರ್ 8 ರೌಂಡ್ ಅರ್ಹತೆಯ ಬೇಟೆಯಲ್ಲಿ ಆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

ಪಾಕಿಸ್ತಾನದ ಪರಿಸ್ಥಿತಿ ಏನು?

ಮುಂದಿನ ಪಂದ್ಯಗಳಲ್ಲಿ ನೆಟ್ ರನ್ ರೇಟ್ (ಎನ್ಆರ್​ಆರ್​) ವಿಷಯದಲ್ಲಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡುವುದರ ಜೊತೆಗೆ ಪಾಕಿಸ್ತಾನ ತಂಡವು ಈಗ ಇತರ ತಂಡಗಳನ್ನು ಅವಲಂಬಿಸಬೇಕಾಗಿದೆ. ಸೂಪರ್ 8 ಹಂತಕ್ಕೆ ಅರ್ಹತೆ ಪಡೆಯಲು ಪಾಕ್​ ಮೊದಲು ಗ್ರೂಪ್ ಹಂತದ ಉಳಿದ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಇದೇ ವೇಳೆ ಅಮೆರಿಕ ಮತ್ತು ಐರ್ಲೆಂಡ್​​ ಭಾರತ ವಿರುದ್ಧ ಸೋಲಲೇಬೇಕು. ಹಾಗಾದರೆ ಮಾತ್ರ ಯುಎಸ್ಎ ತಂಡ ಆರು ಅಂಕಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ:IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

ಕುತೂಹಲಕಾರಿ ಸಂಗತಿಯೆಂದರೆ, ಐರ್ಲೆಂಡ್ ಯುಎಸ್ಎ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ಇದು ಪಾಕಿಸ್ತಾನಕ್ಕೆ ಅವಕಾಶ ಕೊಡಲಿದೆ. ತಮ್ಮ ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆದ್ದು ಮತ್ತು ಭಾರತ ಅಥವಾ ಯುಎಸ್ಎಗಿಂತ ಉತ್ತಮ ರನ್ ರೇಟ್ ಹೊಂದಿದರೆ ಟಿ 20 ವಿಶ್ವಕಪ್ 2024 ರ ಸೂಪರ್ 8 ಸುತ್ತಿಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ಪಾಕಿಸ್ತಾನ ಗುಂಪು ಹಂತದಿಂದಲೇ ಹೊರಕ್ಕೆ ಹೋಗುವುದು ಖಚಿತ.

ಟೀಮ್ ಇಂಡಿಯಾದ ಹೇಳುವುದಾದರೆ ಈಗಾಗಲೇ ಮುಂಚೂಣಿ ಸ್ಥಾನ ಪಡೆದುಕೊಂಡಿದೆ. ಗುಂಪಿನ ಅಗ್ರಸ್ಥಾನಿಗಳಾಗಿ ಉಳಿಯಲು ಇನ್ನೂ ಒಂದು ಪಂದ್ಯ ಗೆಲ್ಲಬೇಕು. ಆದ್ದರಿಂದ ಜೂನ್ 12 ರಂದು ಯುಎಸ್ಎ ವಿರುದ್ಧ ಗೆದ್ದರೆ ಸಾಕು. ಭಾರತಕ್ಕೆ ಕೆನಡಾ ವಿರುದ್ಧ ಇನ್ನೊಂದು ಪಂದ್ಯವಿದೆ. ಆದಾಗ್ಯೂ ಅಮೆರಿಕ ಮಣಿಸಿದರೆ ಸೂಪರ್8 ಸ್ಥಾನ ಖಾತರಿ.

Continue Reading

ಪ್ರಮುಖ ಸುದ್ದಿ

IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

IND vs PAK : ರೋಹಿತ್ ಶರ್ಮಾ ಓವರ್​ನ ಮೊದಲ ಎಸೆತದಲ್ಲಿ 2 ರನ್ ಗಳಿಸಿದರು ಮತ್ತು ನಂತರ ಅವರು ಹಿಂತಿರುಗಿ ನೋಡಲಿಲ್ಲ. ಓವರ್​ನ ಮೂರನೇ ಎಸೆತದಲ್ಲಿ ಎಡಗೈ ವೇಗಿ ಅಫ್ರಿದಿಗೆ ಅದ್ಭುತ ಸಿಕ್ಸರ್ ಬಾರಿಸಿದರು. ಇದು ಈ ಪಂದ್ಯದ ಅದ್ಭುತ ಸಿಕ್ಸರ್​. ಶಾಹಿನ್ ಅಫ್ರಿದಿ ಫುಲ್ ಲೆಂತ್ ಎಸೆತವನ್ನು ಎಸೆದಿದ್ದರು. ಅದು ರೋಹಿತ್​ ಪ್ಯಾಡ್​ಗಳಿಗೆ ಬಡಿಯಬೇಕಿತ್ತು. ಆದರೆ ಫ್ಲಿಕ್ ಮಾಡಿದ ರೋಹಿತ್ ಸಿಕ್ಸರ್ ಬಾರಿಸಿದರು.

VISTARANEWS.COM


on

IND vs PAK
Koo

ಬೆಂಗಳೂರು: ಪಾಕಿಸ್ತಾನ ವಿರುದ್ಧ ಪಂದ್ಯವನ್ನು (IND vs PAK) ಗೆದ್ದ ನಂತರ ಭಾರತ ಕ್ರಿಕೆಟ್​ ತಂಡದ ಅಭಿಮಾನಿಗಳು ತುಂಬಾ ಖುಷಿಯಲ್ಲಿದ್ದಾರೆ. ಯಾಕೆಂದರೆ ಟಿ20 ವಿಶ್ವ ಕಪ್​ನಲ್ಲಿ(T20 World Cup) ಭಾರತ ತಂಡದ ಪಾರಮ್ಯ 8-1 ಕ್ಕೆ ಮುನ್ನಡೆದಿದೆ. ಆದಾಗ್ಯೂ ಭಾರತ ತಂಡದ ಬ್ಯಾಟಿಂಗ್ ಪ್ರದರ್ಶನದ ಮೇಲೆ ಕಟ್ಟರ್ ಅಭಿಮಾನಿಗಳಿಗೆ ಕೋಪವಿದೆ. ಆದರೆ, ಬೌಲರ್​ಗಳು ತಂಡವನ್ನು ರಕ್ಷಿಸಿರುವ ಪರಿಗೆ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ(Rohit Sharma) , ವಿರಾಟ್ ಕೊಹ್ಲಿಯಂಥ ವಿಶ್ವ ದರ್ಜೆಯ ಬ್ಯಾಟರ್​ಗಳ ಬಗ್ಗೆ ಪ್ರಶ್ನಿಸಲು ಆರಂಭಿಸಿದ್ದಾರೆ. ಇವೆಲ್ಲದರ ನಡುವೆಯೂ ನಾಯಕ ರೋಹಿತ್​ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಪರೂಪದ ಸಾಧನೆಯೊಂದನ್ನು ಮಾಡಿದ್ದಾರೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ನಾಯಕ ಬಾಬರ್​ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಭಾರತ ಉತ್ತಮ ಆರಂಭವನ್ನು ಪಡೆಯಿತು. ನಾಯಕ ರೋಹಿತ್ ಶರ್ಮಾ ಎಡಗೈ ವೇಗಿ ಶಾಹೀನ್ ಅಫ್ರಿದಿ ವಿರುದ್ಧ ಅಬ್ಬರಿಸಿದರು. ಆದರೆ 13 ರನ್ ಗೆ ಸೀಮಿತಗೊಂಡರು. ಅದಕ್ಕಿಂತ ಮೊದಲು ಅವರು ಇನಿಂಗ್ಸ್​​ನ ಮೊದಲ ಓವರ್​ನಲ್ಲಿಯೇ ಅದ್ಭುತ ಸಿಕ್ಸರ್ ಒಂದನ್ನು ಬಾರಿಸಿದ್ದರು. ಇದು ಅಲ್ಲಿನ ಅಭಿಮಾನಿಗಳ ಕಣ್ಮನ ಸೆಳೆಯಿತು.

ರೋಹಿತ್ ಶರ್ಮಾ ಓವರ್​ನ ಮೊದಲ ಎಸೆತದಲ್ಲಿ 2 ರನ್ ಗಳಿಸಿದರು ಮತ್ತು ನಂತರ ಅವರು ಹಿಂತಿರುಗಿ ನೋಡಲಿಲ್ಲ. ಓವರ್​ನ ಮೂರನೇ ಎಸೆತದಲ್ಲಿ ಎಡಗೈ ವೇಗಿ ಅಫ್ರಿದಿಗೆ ಅದ್ಭುತ ಸಿಕ್ಸರ್ ಬಾರಿಸಿದರು. ಇದು ಈ ಪಂದ್ಯದ ಅದ್ಭುತ ಸಿಕ್ಸರ್​. ಶಾಹಿನ್ ಅಫ್ರಿದಿ ಫುಲ್ ಲೆಂತ್ ಎಸೆತವನ್ನು ಎಸೆದಿದ್ದರು. ಅದು ರೋಹಿತ್​ ಪ್ಯಾಡ್​ಗಳಿಗೆ ಬಡಿಯಬೇಕಿತ್ತು. ಆದರೆ ಫ್ಲಿಕ್ ಮಾಡಿದ ರೋಹಿತ್ ಸಿಕ್ಸರ್ ಬಾರಿಸಿದರು.

ಶಾಹೀನ್ ಅಫ್ರಿದಿ ವಿರುದ್ಧದ ಮೊದಲ ಓವರ್​ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಹಿತ್ ಶರ್ಮಾ ಇತ್ತಂಡಗಳ ಮುಖಾಮುಖಿ ಇತಿಹಾಸದಲ್ಲಿ ಪಾಕಿಸ್ತಾನದ ಎಡಗೈ ವೇಗಿ ಶಾಹೀನ್ ಅಫ್ರಿದಿ ವಿರುದ್ಧ ವಿಶೇಷ ದಾಖಲೆ ಬರೆದರು. ಎಡಗೈ ವೇಗಿ ವಿರುದ್ಧ ಇನ್ನಿಂಗ್ಸ್​​ನ ಮೊದಲ ಓವರ್​ನಲ್ಲಿ ಎರಡು ಸಿಕ್ಸರ್​ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರೋಹಿತ್​ ಏಕದಿನ ಮಾದರಿಯಲ್ಲೂ ಅದೇ ದಾಖಲೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: IND vs PAK : ಭಾರತ ಪರ ಬೆಟ್ಟಿಂಗ್ ಕಟ್ಟಿ 5.4 ಕೋಟಿ ರೂಪಾಯಿ ಗೆದ್ದ ಕೆನಡಾದ ರ್ಯಾಪರ್ ಡ್ರೇಕ್!

ಶ್ರೀಲಂಕಾದಲ್ಲಿ ನಡೆದ ಏಷ್ಯಾ ಕಪ್ 2023 ರ ಸೂಪರ್ ಫೋರ್ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ರೋಹಿತ್ ಅಲ್ಲಿಯೂ ಇದೇ ರೀತಿಯ ಸಿಕ್ಸರ್ ಅನ್ನು ಹೊಡೆದಿದ್ದರು.

ಗೆಲುವು ತಂದುಕೊಟ್ಟ ಬೌಲರ್​ಗಳು

ಜಸ್ಪ್ರೀತ್ ಬುಮ್ರಾ ನೇತೃತ್ವದ ಭಾರತೀಯ ಬೌಲಿಂಗ್ ವಿಭಾಗ ಬ್ಯಾಟರ್​ಗಳು ಪೇರಿಸಿದ್ದ 119 ರನ್​ಗಳ ಸಾಧಾರಣ ಮೊತ್ತವನ್ನು ಯಶಸ್ವಿಯಾಗಿ ರಕ್ಷಿಸಿತು ಈ ಭಾರೀ ಜಿದ್ದಾಜಿದ್ದಿನ ಹೋರಾಟಕ್ಕೆ 34,000 ಕ್ಕೂ ಹೆಚ್ಚು ಅಭಿಮಾನಿಗಳು ಸಾಕ್ಷಿಯಾಗಿದ್ದರು. ಬುಮ್ರಾ ಅವರ ಅಸಾಧಾರಣ ಪ್ರದರ್ಶನವು ಪಾಕಿಸ್ತಾನ ವಿರುದ್ಧದ ಭಾರತದ ಗೆಲುವಿನಲ್ಲಿ ನಿರ್ಣಾಯಕ ಅಂಶವೆಂದು ಸಾಬೀತಾಗಿದೆ. ಯಾಕೆಂದರೆ ಈ ಹಂತದಲ್ಲಿ ಪಾಕಿಸ್ತಾನದ ಗೆಲುವಿನ ನಿರೀಕ್ಷೆ ಶೇಕಡಾ 92 ರಷ್ಟು ಇದ್ದರೆ, ಭಾರತದ್ದು ಕೇವಲ 8% ಇತ್ತು. ಆದರೆ, ಫಲಿತಾಂಶ ಮಾತ್ರ ಉಲ್ಟಾ ಆಯಿತು. ವಿಶ್ವ ವೇದಿಕೆಯಲ್ಲಿ ನಾವೇ ಬಾಸ್​ ಎಂಬುದನ್ನು ಭಾರತ ಮತ್ತೊಂದು ಬಾರಿ ಸಾಕ್ಷಿ ಸಮೇತ ತೋರಿಸಿತು.

ಭಾರತವು 119 ರನ್​ಗಳ ಸಾಧಾರಣ ಮೊತ್ತವನ್ನು ರಕ್ಷಿಸಿದಾಗ, ಅವರ ಪ್ರತಿಭೆ ಅನಾವರಣಗೊಂಡಿತು. 3 ವಿಕೆಟ್​ಗೆ 80 ರನ್ ಗಳಿಸಿದ್ದ ಪಾಕಿಸ್ತಾನವು ಅಂತಿಮವಾಗಿ 113 ರನ್​ಗೆ ಸೀಮಿತಗೊಂಡಿದ್ದು ಭಾರತ ತಂಡದ ಸಾಮರ್ಥ್ಯಕ್ಕೆ ಸಾಕ್ಷಿ. ಈ ಪ್ರದರ್ಶನವು ಬುಮ್ರಾ ಅವರ ಶ್ರೇಷ್ಠ ವೃತ್ತಿಜೀವನದಲ್ಲಿ ಸ್ಮರಣೀಯ ಎನಿಸಿಕೊಳ್ಳಲಿದೆ. ಪಾಕ್​ ತಂಡದ ರನ್​ ಎಚ್ಚರಿಕೆಯಿಂದ ಪ್ರಾರಂಭವಾಗಿತ್ತು. ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿ ಇನ್ನಿಂಗ್ಸ್ ಗೆ ಭದ್ರ ಬುನಾದಿ ಹಾಕಿದ್ದರು. ಆದಾಗ್ಯೂ, ನಿಯಮಿತವಾಗಿ ವಿಕೆಟ್​ಗಳು ಕಳೆದುಕೊಂಡ ಕಾರಣ ಪಾಕಿಸ್ತಾನದ ವೇಗಕ್ಕೆ ಅಡ್ಡಿಯಾಯಿತು.

Continue Reading
Advertisement
Viral Video
ವೈರಲ್ ನ್ಯೂಸ್26 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ32 mins ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ43 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ43 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್56 mins ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ1 hour ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು1 hour ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ1 hour ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್1 hour ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ2 hours ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌