Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ - Vistara News

ಕರ್ನಾಟಕ

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

Dasara Elephant Arjuna: ಕಾರ್ಯಾಚರಣೆ ವೇಳೆ ಕಾಡಾನೆ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ದಸರಾ ಆನೆ ಅರ್ಜುನ ಸಾವಿಗೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.

VISTARANEWS.COM


on

Dasara Elephant Arjuna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ವಿರುದ್ಧ ಹೋರಾಡಿ ಮೃತಪಟ್ಟ ದಸರಾ ಆನೆ ಅರ್ಜುನನ (Dasara Elephant Arjuna) ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ನಟ ದರ್ಶನ್‌ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಮೃತಪಟ್ಟಿದೆ. ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ. ಹೀಗಾಗಿ ಜನರ ಪ್ರೀತಿಪಾತ್ರವಾಗಿದ್ದ ದಸರಾ ಆನೆಯ ಸೇವೆಯನ್ನು ಗಣ್ಯರು ಸ್ಮರಿಸಿದ್ದಾರೆ.

‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ಎಂದ ಸಿಎಂ

ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ.‌

ಇದನ್ನೂ ಓದಿ | Dasara Elephant Arjuna: 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು; ಒಂಟಿ ಸಲಗ ದಾಳಿಯಿಂದ ದುರ್ಘಟನೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಂತಾಪ

ದಸರಾ ಆನೆ ಅರ್ಜುನ ಸಾವಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದ್ದಾರೆ.

ಅರ್ಜುನ ಮರಣದ ಸುದ್ದಿ ತೀವ್ರ ನೋವುಂಟು ಮಾಡಿದೆ: ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ, ಆನೆಗಳ ಕಾರ್ಯಾಚರಣೆ ವೇಳೆ ವೀರ ಮರಣರಾಗಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ

ಮರೆಯಲಾರದ ನೆನಪುಗಳನ್ನು ಬಿಟ್ಟುಹೋದ: ಡಿಕೆಶಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ ಎಂದ ದರ್ಶನ್

‌ನಟ ದರ್ಶನ್‌ ಪ್ರತಿಕ್ರಿಯಿಸಿ, 8 ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! ಓಂ ಶಾಂತಿ!

ಇದನ್ನೂ ಓದಿ | ಕಾರ್ಯಾಚರಣೆಗೆ ಅರ್ಜುನ ಬಳಕೆ ಕಾನೂನುಬಾಹಿರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್‌ ಗೂಳಿಗೌಡ ಆಗ್ರಹ

ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಂದಿಸಿ, ವಿಶ್ವ ವಿಖ್ಯಾತ ನಾಡಹಬ್ಬ ದಸರೆಯ ಮುಖ್ಯ ಆಕರ್ಷಣೆ ಜಂಬೂಸವಾರಿಯಲ್ಲಿ ಸತತ ಎಂಟು ಬಾರಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗುತ್ತಿದ್ದ ಗಜರಾಜ ಅರ್ಜುನ ಸಾವನ್ನಪ್ಪಿರುವ ಸಂಗತಿ ಬೇಸರ ತರಿಸಿದೆ.
ಅರ್ಜುನ ನಾಡಿನ ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ ಎಂದು ತಿಳಿಸಿದ್ದಾರೆ.

ಅತ್ಯಂತ ದುರಾದೃಷ್ಟಕರ ಘಟನೆ: ಈಶ್ವರ್‌ ಖಂಡ್ರೆ

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

HD Kumaraswamy: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡುವಿನ ವಾಕ್ಸರ, ಆರೋಪ-ಪ್ರತ್ಯಾರೋಪ, ಟೀಕೆ, ವ್ಯಂಗ್ಯ ತಾರಕಕ್ಕೇರಿವೆ. ಅದರಲ್ಲೂ, ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ತೀರ್ಮಾನದ ಬಳಿಕ ಕುಮಾರಸ್ವಾಮಿ ಅವರು ಕೆರಳಿ ಕೆಂಡವಾಗಿದ್ದಾರೆ. ಇವರಿಬ್ಬರ ನಡುವಿನ ವಾಕ್ಸಮರದ ಝಲಕ್‌ ಇಲ್ಲಿದೆ.

VISTARANEWS.COM


on

HD Kumaraswamy
Koo

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಬದಲಾಯಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದಕ್ಕೆ ನಿದರ್ಶನ ಎಂಬಂತೆ, “10 ವರ್ಷ ಆದ ಮೇಲೂ ರಾಜ್ಯದಲ್ಲಿ ನಾವೇ ಸರ್ಕಾರ ರಚಿಸುತ್ತೇವೆ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ನೀಡಿದ ಹೇಳಿಕೆಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ಎಸಗಿರುವ ಭ್ರಷ್ಟಾಚಾರ ನೋಡಿದರೆ, ನಾಳೆ ಚುನಾವಣೆ ನಡೆದರೂ, ಜನ ಕಾಂಗ್ರೆಸ್‌ಅನ್ನು ಮನೆಗೆ ಕಳುಹಿಸುತ್ತಾರೆ” ಎಂದಿದ್ದಾರೆ.

“ನಾವೇ ಸರ್ಕಾರ ರಚಿಸುತ್ತೇವೆ ಎಂಬುದಾಗಿ ಇದಕ್ಕೂ ಮೊದಲು ತುಂಬ ಜನ ಹೇಳಿದ್ದರು. ಹಾಗೆ ಹೇಳಿದವರು ಒಂದೇ ವರ್ಷಕ್ಕೆ ಹೋಗಿದ್ದಾರೆ. ಇವರು ಮಾಡಿರುವ ಘನಂದಾರಿ ಕೆಲಸ ಏನು ಎಂಬುದನ್ನು ನೋಡಿ ಜನ ಇವರಿಗೆ ಮತ ಹಾಕುತ್ತಾರೆ? ಇವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಪಾಪ, ಇವರು ಗೂಟ ಹೊಡೆದುಕೊಂಡು ಅಧಿಕಾರದಲ್ಲಿ ಇರಲಿ. ಇಲ್ಲಿ ಗೂಟ ಹೊಡೆದುಕೊಂಡು ಇರುತ್ತಾರೋ, ಇನ್ನೆಲ್ಲಿ ಇರುತ್ತಾರೋ ಎಂಬುದರ ಬಗ್ಗೆ ಮುಂದೆ ಚರ್ಚೆ ಮಾಡೋಣ” ಎಂದು ಕುಮಾರಸ್ವಾಮಿ ಹೇಳಿದರು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ, “ಹೆಸರು ಬದಲಾವಣೆ ಮಾಡಿದ ಇವರು ದೊಡ್ಡಮಟ್ಟದಲ್ಲಿ ಪ್ರಾಯಶ್ಚಿತ್ತ ಪಡುತ್ತಾರೆ. ಇವರು ದೊಡ್ಡ ಬೆಲೆ ತೆರಬೇಕಾಗುತ್ತದೆ. ಇದಕ್ಕಾಗಿ ಸ್ವಲ್ಪ ದಿನ ಕಾಯಲಿ” ಎಂದರು.

ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

2028ರ ಒಳಗೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಇದಕ್ಕೂ ಮೊದಲು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದರು. “ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಡಿಕೆಶಿ ಹೇಳಿದ್ದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಡಿಕೆಶಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Continue Reading

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Brand Bengaluru: ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar
Koo

ಬೆಂಗಳೂರು: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ (Brand Bengaluru) ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಬೆಂಗಳೂರು ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜತೆ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಜುಲೈ 27) ‘ನಾಗರಿಕರ ಧ್ವನಿ-ಅದೇ ಸರ್ಕಾರದ ಧ್ವನಿ’ ಸಭೆ ನಡೆಸಿದರು. ಹಾಗೆಯೇ, ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ವಿವರಿಸಿದರು.

“ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸಿ ನಮ್ಮೆಲ್ಲರಿಗೂ ಸುಂದರ ನಗರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಬೆಂಗಳೂರು, ಅಪಾರ ಮಾನವ ಸಂಪನ್ಮೂಲ, ಸಂಸ್ಕೃತಿ, ಉದ್ಯೋಗ, ಹವಾಮಾನದಿಂದ ನೆರೆಹೊರೆ ರಾಜ್ಯದ ಜನರನ್ನು ಸೆಳೆಯುತ್ತಿದೆ. ಆದರೆ ಬೆಂಗಳೂರು ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಕಾವೇರಿ ನೀರಿನ ಸಮಸ್ಯೆ, ಟ್ರಾಫಿಕ್‌, ಕಸದ ನಿರ್ವಹಣೆ, ಕೆರೆಗಳ ನಿರ್ವಹಣೆ ಇತ್ಯಾದಿಗಳನ್ನು ಕುರಿತು ಕೂಲಂಕಷವಾಗಿ ಚರ್ಚಿಸಲಾಗುತ್ತಿದೆ” ಎಂದು ತಿಳಿಸಿದರು.

70 ಸಾವಿರ ನಾಗರಿಕರಿಂದ ಸಲಹೆ

“ಭವಿಷ್ಯದ ದೃಷ್ಟಿಯಿಂದ, ಬೆಂಗಳೂರು ಅಭಿವೃದ್ಧಿಯನ್ನು ಪಾರದರ್ಶಕವಾಗಿ ಮಾಡಬೇಕಾಗಿದೆ. ಅತ್ಯುತ್ತಮ ಕಾರ್ಯಕ್ರಮದ ಆಯ್ಕೆಯ ಕುರಿತು ಚರ್ಚಿಸಲಾಗುತ್ತಿದೆ. 70 ಸಾವಿರ ನಾಗರಿಕರು ಈ ಕುರಿತು ಸಲಹೆಗಳನ್ನು ನೀಡಿದ್ದಾರೆ. ಉತ್ತಮ ಯೋಜನೆಗಳನ್ನು ರೂಪಿಸಿ ಜನಪರ ಆಡಳಿತ ನೀಡುವ ಉದ್ದೇಶದಿಂದ ಈ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.

“ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ಅವರು ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸು ಮಾಡಿದರೆ ಇಂದು ಸಂಜೆಯೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು. ಇಂದು ಈ ಎಲ್ಲ ವಿಚಾರವಾಗಿ ಎಷ್ಟು ಹೊತ್ತು ಬೇಕಾದರೂ ಚರ್ಚೆ ಮಾಡಲು ಸಿದ್ಧ. ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿ” ಎಂದು ಹೇಳಿದರು.

“ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬಹಳ ಸವಾಲಿನ ಇಲಾಖೆ. ಬೆಂಗಳೂರಿನ ಸಮಸ್ಯೆಗಳಿಗೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಕೇಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಕೆಂಗಲ್ ಹನುಮಂತಯ್ಯನವರು ಇಲ್ಲಿ ವಿಧಾನಸೌಧ ಕಟ್ಟಿಸಿದರು. ಎಸ್.ಎಂ ಕೃಷ್ಣ ಅವರು ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೋಯ್ದರು. ಬೆಂಗಳೂರು ಯೋಜಿತ ನಗರವಲ್ಲ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.04 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ” ಎಂದು ತಿಳಿಸಿದರು.

“ಇಲ್ಲಿರುವ ತಂತ್ರಜ್ಞಾನ, , ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ. ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ ಬಂದವರು ಕೂಡ ಇಲ್ಲೇ ಉಳಿದುಕೊಂಡಿದ್ದಾರೆ. ಹೀಗೆ ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದೆ. ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದ್ದು, ಇಲ್ಲಿಯವರೆಗೂ ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಪ್ರಯತ್ನ ಮಾಡುತ್ತಿದ್ದೇವೆ. ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಕಳೆದ ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು. ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು. ಇದಕ್ಕಾಗಿ ಏನು ಮಾಡಬೇಕು ಚರ್ಚೆ ಮಾಡಲಾಗುತ್ತಿದೆ. ಅಂತರ್ಜಲ ಹೆಚ್ಚಿಸದಿದ್ದರೆ ಪರ್ಯಾಯ ಅವಕಾಶವಿಲ್ಲ” ಎಂದು ಹೇಳಿದರು.

“ಕಸದ ವಿಚಾರ ನಿಮಗೆಲ್ಲ ತಿಳಿದಿದೆ. ಇನ್ನು ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಇದನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದು, ಆದರೆ ಅದು ಸಾಧ್ಯವಾಗುತ್ತಿಲ್ಲ. ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿದ್ದೇವೆ. ಬೆಂಗಳೂರಿನ ಎಲ್ಲಾ ಇಲಾಖೆಗಳಲ್ಲಿ ಪಾರದರ್ಶಕವಾಗಿ ಕೆಲಸ ಮಾಡಲಾಗುತ್ತಿದೆ. ಕಾನೂನು ಚೌಕಟ್ಟಿನ ಆಚೆಗೆ ಯಾವುದೇ ಕೆಲಸ ಮಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲ ಪ್ರಕ್ರಿಯೆ ನಡೆಯಬೇಕು. ನಾನು ತಪ್ಪು ಮಾಡಲು ಹೋದರೂ ನನಗೆ ಎಚ್ಚರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಟಿಡಿಆರ್ ವಿಚಾರವಾಗಿ ದೊಡ್ಡ ಹಗರಣವಾಗಿದೆ. ಅವುಗಳನ್ನು ಬಗೆಹರಿಸಲು ಹೊಸ ವ್ಯವಸ್ಥೆ ತರಲಾಗುತ್ತಿದೆ. ಈ ಬಗ್ಗೆಯೂ ನಿಮಗೆ ಮಾಹಿತಿ ನೀಡುತ್ತೇವೆ” ಎಂದರು.

ಪ್ರವಾಸೋದ್ಯಮಕ್ಕೆ ಆದ್ಯತೆ

“ಇನ್ನು ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಡ ಬಿಟ್ಟರೆ ಪ್ರವಾಸಿಗರ ಆಕರ್ಷಕ ಕೇಂದ್ರಗಳು ಹೆಚ್ಚಾಗಿಲ್ಲ. ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನೋಡುತ್ತಿದ್ದ ಕಾಲ ಮುಗಿದಿದೆ. ಸಣ್ಣ ಮಕ್ಕಳು ನೆಹರು ಪ್ಲಾನೆಟೋರಿಯಂ ನೋಡಬಹುದು. ಇದರ ಹೊರತಾಗಿ ಪ್ರಮುಖವಾಗಿ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ವಿಚಾರವಾಗಿ ವಿವರಣೆ ನೀಡಲಾಗುವುದು” ಎಂದು ಹೇಳಿದರು..

ಇದಕ್ಕೂ ಮುನ್ನ ಬ್ರ್ಯಾಂಡ್ ಬೆಂಗಳೂರು ಕುರಿತ ಕಿರುಹೊತ್ತಗೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಸತಿ ಸಚಿವ ಜಮೀರ್ ಅಹ್ಮದ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬಿಡುಗಡೆಗೊಳಿಸಿದರು.

ಇದನ್ನೂ ಓದಿ: DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

Continue Reading

ಮಳೆ

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

VISTARANEWS.COM


on

By

karnataka Rain
Koo

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಮರ ಬಿದ್ದು ಮನೆ ಜಖಂ

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

ನೀರಿನಲ್ಲಿ ಸಿಲುಕಿದ ಕಾರು

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Kumaraswamy
ಪ್ರಮುಖ ಸುದ್ದಿ17 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ20 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್23 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ56 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ1 hour ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ1 hour ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ2 hours ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ2 hours ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ24 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌