Sukhdev Singh: ಆತ್ಮೀಯವಾಗಿ ಮಾತನಾಡುತ್ತಲೇ ಸುಖ್​ದೇವ್ ಮೇಲೆ ಹಾರಿಸಿದ್ರು 5 ಗುಂಡು; ಇಲ್ಲಿದೆ ವಿಡಿಯೊ! - Vistara News

ದೇಶ

Sukhdev Singh: ಆತ್ಮೀಯವಾಗಿ ಮಾತನಾಡುತ್ತಲೇ ಸುಖ್​ದೇವ್ ಮೇಲೆ ಹಾರಿಸಿದ್ರು 5 ಗುಂಡು; ಇಲ್ಲಿದೆ ವಿಡಿಯೊ!

Sukhdev Singh Gogamedi : ಸುಖ್​ದೇವ್​ ಸಿಂಗ್​ ಮನೆಯಲ್ಲಿ ಕುಳಿತು ಚಹಾ ಕುಡಿದು ಅವರ ಮೇಲೆಯೇ ಏಕಾಏಕಿ ಗುಂಡುಗಳನ್ನು ಹಾರಿಸಿದ್ದಾರೆ ರೌಡಿಗಳು.

VISTARANEWS.COM


on

Sukhdev SIngh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಬಲಪಂಥೀಯ ಸಂಸ್ಥೆಯಾಗಿರುವ ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾದ ಮುಖ್ಯಸ್ಥ ಸುಖದೇವ್ ಸಿಂಗ್ ಗೋಗಮೇಡಿ (Sukhdev Singh Gogamedi) ಅವರನ್ನು ಕೊಂದ ವ್ಯಕ್ತಿಗಳು ಮೊದಲು ಜೈಪುರದ ಅವರ ಮನೆಯಲ್ಲಿ ಅವರೊಂದಿಗೆ ಚಹಾ ಸೇವಿಸಿದ್ದರು ಎಂಬುದು ಬೆಳಕಿಗೆ ಬಂದಿದೆ. ಅವರ ಜತೆ ಆತ್ಮೀಯತೆಯಿಂದ ಮಾತನಾಡುತ್ತಲೇ ಹತ್ತಿರದಿಂದಲೇ ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆಯ ವಿಡಿಯೊ ಬಹಿರಂಗಗೊಂಡಿದ್ದು ತಲ್ಲಣ ಸೃಷ್ಟಿಸಿದೆ.

ಆಘಾತಕಾರಿ ವೀಡಿಯೊದಲ್ಲಿ ಆರೋಪಿಯು ಗುಂಡು ಹಾರಿಸುವ ಮೊದಲು ಅವರೊಂದಿಗೆ ಕುಳಿತು ಮಾತನಾಡಿದ್ದಾರೆ. ಏಕಾಏಕಿ ಎದ್ದು ಅವರ ಬೆಂಗಾವಲು ಸಿಬ್ಬಂದಿ ಸೇರಿದಂತೆ ಹಲವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಬಳಿಕ ಸುಖ್​ದೇವ್ ಅವರ ತಲೆಗೆ ರಿವಾಲ್ವರ್ ಇಟ್ಟು ಗುಂಡು ಹೊಡೆದಿದ್ದಾರೆ.

ಸಿಸಿಟಿವಿ ವೀಡಿಯೊದಲ್ಲಿ ದುಷ್ಕರ್ಮಿಗಳು ಸುಖ್​ದೇವ್ ಅವರು ಫೋನ್ ನೋಡುತ್ತಿರುವ ವೇಳೆ ಅವರ ಅವರಿಗೆ ಅರಿವಿಲ್ಲದ ಹೊತ್ತಿನಲ್ಲಿಯೇ ಗುಂಡು ಹಾರಿಸಿದ್ದಾರೆ. ಅವರ ಕಾವಲುಗಾರರಲ್ಲಿ ಒಬ್ಬರು ಬಂದೂಕುಧಾರಿಗಳನ್ನು ತಡೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಗೂಂಡಾಗಳು ಅವರ ಮೇಲೆಯೂ ಗುಂಡು ಹಾರಿಸಿದ್ದಾರೆ.

“ದುಷ್ಕರ್ಮಿಗಳು ಸುಖದೇವ್ ಸಿಂಗ್ ಗೊಗಮೇಡಿ ಅವರನ್ನು ಗುಂಡಿಕ್ಕಿ ಕೊಲ್ಲುವ ಮೊದಲು ಕನಿಷ್ಠ 10 ನಿಮಿಷಗಳ ಕಾಲ ಅವರೊಂದಿಗೆ ಕುಳಿತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

20 ಸೆಕೆಂಡುಗಳ ಈ ಕ್ಲಿಪ್​​ನಲ್ಲಿ ಗೋಗಮೇಡಿ ಗುಂಡಿನ ಆಘಾತಕ್ಕೆ ಕುಸಿದು ಬಿದ್ದ ನಂತರವೂ ದುಷ್ಕರ್ಮಿಗಳು ಪದೇ ಪದೇ ಗುಂಡು ಹಾರಿಸಿದ್ದಾರೆ. ವರದಿಗಳ ಪ್ರಕಾರ, ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ನಡೆದಿದೆ. ಗೋಗಮೇಡಿ ಮತ್ತು ಅವರ ಇಬ್ಬರು ಸಹಚರರು ಗಾಯಗೊಂಡಿದ್ದು ಎಲ್ಲರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಪ್ರಮುಖ ರಜಪೂತ ನಾಯಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ವೀಡಿಯೊದಲ್ಲಿ ಕಾಣಿಸದ ದಾಳಿಕೋರರಲ್ಲಿ ಒಬ್ಬ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆ ಎಂದೂ ಹೇಳಲಾಗಿದೆ. ಉಳಿದಿಬ್ಬರು ಮೋಟಾರ್​ ಬೈಕಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಲ್ಡಿ ಬ್ರಾರ್​ ಗ್ಯಾಂಗ್​ ಕೃತ್ಯ

ಗೋಲ್ಡಿ ಬ್ರಾರ್ ಗ್ಯಾಂಗ್​​ ಕೊಲೆಯ ಹೊಣೆ ಹೊತ್ತುಕೊಂಡಿದೆ. ಸುಖದೇವ್ ಗೋಗಮೇಡಿ ಅವರ ಹತ್ಯೆಯ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ” ಎಂದು ರೋಹಿತ್ ಗೋದಾರಾ ಕಪುರಿಸರ್ ಎಂಬಾತ ಫೇಸ್ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾನೆ. ಗೋಗಮೇಡಿ ನಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದರು. ಅದು ಈ ಹತ್ಯೆಗೆ ಪ್ರೇರೇಪಿಸಿತು ಎಂದು ಬರೆದುಕೊಂಡಿದ್ದಾನೆ.

ಇದನ್ನೂ ಓದಿ : Byju’s Debt: ಸಿಬ್ಬಂದಿ ಸಂಬಳಕ್ಕಾಗಿ ಮನೆ ಅಡವಿಟ್ಟ ಬೈಜೂಸ್ ಕಂಪನಿ ಮಾಲಿಕ!

ಕೆನಡಾ ಮೂಲದ ಗ್ಯಾಂಗ್​​ ಗೋಲ್ಡಿ ಬ್ರಾರ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ದೇಶದ ವಿವಿಧ ರಾಜ್ಯಗಳಿಗೆ ಬೇಕಾಗಿರುವ ಅಪರಾಧಿ. ಪಂಜಾಬಿ ಗಾಯಕ ಸಿದ್ದು ಮೂಸೆವಾಲಾ ಅವರ ಕೊಲೆ ಪ್ರಕರಣದಲ್ಲೂ ಈತ ಬೇಕಾಗಿದ್ದ. ಬಾಲಿವುಡ್ ಚಿತ್ರ ‘ಪದ್ಮಾವತ್’ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಜಪೂತ್ ಕರ್ಣಿ ಸೇನೆಗಿಂತ ಗೋಗಮೇಡಿ ನೇತೃತ್ವದ ಸಂಘಟನೆ ಭಿನ್ನವಾಗಿದೆ. 2015ರಲ್ಲಿ ಲೋಕೇಂದ್ರ ಸಿಂಗ್ ಕಲ್ವಿ ನೇತೃತ್ವದ ಕರ್ಣಿ ಸೇನಾದಿಂದ ಬೇರ್ಪಟ್ಟು ಸಂಘಟನೆ ಸ್ಥಾಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

NEETPG 2024 : ಜೂನ್‌ 23ಕ್ಕೆ ನೀಟ್‌ ಪಿಜಿ ಪರೀಕ್ಷೆ ನಡೆಯಲಿದ್ದು, ನಾಳೆ ಅಂದರೆ ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.‌

VISTARANEWS.COM


on

By

NEETPG 2024
ಸಾಂದರ್ಭಿಕ ಚಿತ್ರ
Koo

ನವದೆಹಲಿ/ಬೆಂಗಳೂರು : ದೇಶಾದ್ಯಂತ ಸುಮಾರು 259 ಕೇಂದ್ರದಲ್ಲಿ ಜೂನ್‌ 23ಕ್ಕೆ ನೀಟ್ ಪಿಜಿ 2024 (NEETPG 2024) ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿ ಕೊಂಡಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನ ಅಧಿಕೃತ ವೆಬ್ಸೈಟ್ natboard.edu.in ಡೌನ್‌ಲೋಡ್‌ ಮಾಡಬಹುದು.

ಅರ್ಹ ಅಭ್ಯರ್ಥಿಗಳು ತಮ್ಮ ಲಾಗಿನ್ ಐಡಿ ಮೂಲಕ ನೀಟ್ ಪಿಜಿ ಹಾಲ್ ಟಿಕೆಟ್ 2024 ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಬೇಕು.

ಇದನ್ನೂ ಓದಿ: PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?

  1. -ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಅಧಿಕೃತ ವೆಬ್‌ಸೈಟ್‌ಗೆ nbe.edu.in ಹೋಗಿ.
  2. -ಮುಖಪುಟದಲ್ಲಿ “ನೀಟ್ ಪಿಜಿ” ಲಿಂಕ್ ಕ್ಲಿಕ್‌ ಮಾಡಿ. ಇದು ಸಾಮಾನ್ಯವಾಗಿ “ಪರೀಕ್ಷೆಗಳು” ಅಥವಾ “ಪ್ರಮುಖ ಲಿಂಕ್‌ಗಳು” ವಿಭಾಗದಲ್ಲಿ ಕಂಡುಬರುತ್ತದೆ.
  3. -ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ ವರ್ಡ್ ನಮೂದಿಸಿ.
  4. -ಒಮ್ಮೆ ಲಾಗ್ ಇನ್ ಆದ ನಂತರ, ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವ ಆಯ್ಕೆ ಇರುತ್ತದೆ.
  5. -ಡೌನ್ಲೋಡ್ ಮಾಡುವ ಮೊದಲು, ಪ್ರವೇಶ ಪತ್ರದಲ್ಲಿನ ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ನಿಮ್ಮ ಹೆಸರು, ಛಾಯಾಚಿತ್ರ, ಪರೀಕ್ಷಾ ದಿನಾಂಕ ಮತ್ತು ಪರೀಕ್ಷಾ ಕೇಂದ್ರದ ವಿವರಗಳು ಇರಲಿದೆ.
  6. -ಪ್ರವೇಶ ಪತ್ರವನ್ನು ಸೇವ್‌ ಮಾಡಲು ಡೌನ್ಲೋಡ್ ಬಟನ್ ಕ್ಲಿಕ್ ಮಾಡಿ. ಫೈಲ್ ಸಾಮಾನ್ಯವಾಗಿ ಪಿಡಿಎಫ್ ರೂಪದಲ್ಲಿರುತ್ತದೆ.
  7. -ಪ್ರವೇಶ ಪತ್ರದ ಕನಿಷ್ಠ ಎರಡು ಪ್ರತಿಗಳ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ. ಪ್ರವೇಶ ಪತ್ರದಲ್ಲಿ ಫೋಟೋ ಅಂಟಿಸಲು ಜಾಗ ಇರಲಿದೆ.
  8. -ಪರೀಕ್ಷಾ ಕೇಂದ್ರಕ್ಕೆ ಏನು ತರಬೇಕು, ನಿಷೇಧಿತ ವಸ್ತುಗಳ ಬಗ್ಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನ ಓದಿಕೊಳ್ಳಿ. ಯಾವ ಸಮಯದೊಳಗೆ ನೀವೂ ಪರೀಕ್ಷಾ ಕೇಂದ್ರದೊಳಗೆ ಇರಬೇಕು ಎಂಬುದನ್ನೂ ಸೂಚಿಸಲಾಗುತ್ತದೆ.

ಪರೀಕ್ಷಾ ಕೇಂದ್ರದಲ್ಲಿ ಇದೆಲ್ಲವೂ ನಿರ್ಬಂಧ

ಪಠ್ಯ ಸಾಮಗ್ರಿ (ಮುದ್ರಿತ ಅಥವಾ ಲಿಖಿತ), ಟಿಪ್ಪಣಿಗಳು, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ರೈಟಿಂಗ್ ಪ್ಯಾಡ್ ಹಾಗೂ ಮೊಬೈಲ್‌ ಫೋನ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೊಫೋನ್, ಹೆಲ್ತ್ ಬ್ಯಾಂಡ್, ಎಲೆಕ್ಟ್ರಾನಿಕ್ ಪೆನ್, ಸ್ಕ್ಯಾನರ್ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಇನ್ನೂ ಹುಡುಗಿಯರು ಬ್ರೇಸ್ ಲೆಟ್ ಗಳು, ಉಂಗುರ, ಕಿವಿಯೋಲೆಗಳು, ನೋಸ್-ಪಿನ್, ಚೈನ್/ ನಂತಹ ಎಲ್ಲಾ ಆಭರಣಗಳು/ ಪೆಂಡೆಂಟ್‌, ಬ್ಯಾಡ್ಜ್, ಬ್ರೂಚ್ ಎಲ್ಲವನ್ನೂ ನಿಷೇಧಿಸಲಾಗಿದೆ. ಜತೆಗೆ ವ್ಯಾಲೆಟ್, ಕ್ಯಾಪ್ , ನೀರಿನ ಬಾಟೆಲ್‌ ಕೂಡ ಕೊಂಡೊಯ್ಯುವಂತಿಲ್ಲ.

ಜುಲೈ 15ರೊಳಗೆ ಫಲಿತಾಂಶ ಪ್ರಕಟ

ಇನ್ನೂ ನೀಟ್‌ ಪಿಜಿ ಫಲಿತಾಂಶವನ್ನು ಜುಲೈ 15ರೊಳಗಾಗಿ ಪ್ರಕಟಿಸಲಾಗುವುದು ಎಂದು ನ್ಯಾಷನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ ಮೆಡಿಕಲ್‌ ಸೈನ್ಸ್‌ ತಿಳಿಸಿದೆ. ನೀಟ್-ಪಿಜಿ 2024 ಗೆ ಅರ್ಹತೆ ಪಡೆಯಲು ಇಂಟರ್ನ್ಶಿಪ್ ಪೂರ್ಣಗೊಳಿಸಲು ಕಟ್ ಆಫ್ ದಿನಾಂಕವನ್ನು ಆಗಸ್ಟ್‌ 15ಕ್ಕೆ ನಿಗದಿ ಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Air India Food: ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಭೀಕರ ಅನುಭವವಾಗಿದೆ. ವಿಮಾನದಲ್ಲಿ ಅವರು ಆರ್ಡರ್‌ ಮಾಡಿದ ಆಹಾರದಲ್ಲಿ ಮೆಟಲ್‌ ಬ್ಲೇಡ್‌ ಪತ್ತೆಯಾಗಿದೆ. ಈ ಕುರಿತು ಅವರು ಪೋಸ್ಟ್‌ ಮಾಡುತ್ತಲೇ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.

VISTARANEWS.COM


on

Air India Food
Koo

ಬೆಂಗಳೂರು: ಏರ್‌ ಇಂಡಿಯಾ ಸೇರಿ ಹಲವು ಸಂಸ್ಥೆಗಳ ವಿಮಾನಗಳಲ್ಲಿ ಪ್ರಯಾಣಿಕರು ಕುಡಿದು ಗಲಾಟೆ ಮಾಡುವುದು, ಸಹ ಪ್ರಯಾಣಿಕರಿಗೆ ತೊಂದರೆ ಕೊಡುವುದು, ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ಕೃತ್ಯಗಳು ಇತ್ತೀಚೆಗೆ ವರದಿಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಊಟದಲ್ಲಿ (Air India Food) ಮೆಟಲ್‌ ಬ್ಲೇಡ್‌ (Metal Blade) ಒಂದು ಸಿಕ್ಕಿದ್ದು, ಊಟ ಆರ್ಡರ್‌ ಮಾಡಿದ ವ್ಯಕ್ತಿಯು ಕಂಗಾಲಾಗಿದ್ದಾರೆ. ಹಾಗೆಯೇ, ತಮಗೆ ಆದ ಭೀಕರ ಅನುಭವವನ್ನು, ಮೆಟಲ್‌ ಬ್ಲೇಡ್‌ ಫೋಟೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಇಂತಹ ಭೀಕರ ಅನುಭವವಾಗಿದೆ. “ಏರ್‌ ಇಂಡಿಯಾ ವಿಮಾನದಲ್ಲಿ ನಾನು ಆರ್ಡರ್‌ ಮಾಡಿದ ಸ್ವೀಟ್‌ ಪೊಟ್ಯಾಟೋ ಹಾಗೂ ಫಿಗ್‌ ಚಾಟ್‌ನಲ್ಲಿ ಬ್ಲೇಡ್‌ ರೀತಿ ಇರುವ ಮೆಟಲ್‌ ತುಣುಕು ಪತ್ತೆಯಾಗಿದೆ. ಅದೃಷ್ಟವಶಾತ್‌ ಇದರಿಂದ ನನಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಏರ್‌ ಇಂಡಿಯಾ ಕೆಟರಿಂಗ್‌ ಸರ್ವಿಸ್‌ ಬಗ್ಗೆ ನನಗೆ ಇದ್ದ ಗೌರವ ಕಡಿಮೆಯಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಕೂಡಲೇ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರತಿಕ್ರಿಯಿಸಿದೆ. “ನಿಮಗೆ ಇಂತಹ ಕೆಟ್ಟ ಅನುಭವ ಆಗಿದ್ದಕ್ಕೆ ಕ್ಷಮೆ ಇರಲಿ. ನಾವು ಪ್ರಯಾಣಿಕರಿಗೆ ಸೇವೆ ನೀಡಬೇಕು ಎಂಬ ನಿರ್ದಿಷ್ಟ ಗುರಿ ಹೊಂದಿದ್ದು, ಆ ಗುರಿಗೆ ಇದು ಧಕ್ಕೆ ತರುವಂತಿದೆ. ಸೇವೆಯಲ್ಲಿ ಸಮಸ್ಯೆಯಾಗಿರುವುದಕ್ಕೆ ಕ್ಷಮೆ ಇರಲಿ. ನಾವು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ” ಎಂಬುದಾಗಿ ಏರ್‌ ಇಂಡಿಯಾ ಪ್ರತಿಕ್ರಿಯಿಸಿದೆ. ಅಷ್ಟೇ ಅಲ್ಲ, ಏರ್‌ ಇಂಡಿಯಾ ಸಂಸ್ಥೆಯು ಮ್ಯಾಥ್ಯೂರಸ್‌ ಪೌಲ್‌ ಅವರಿಗೆ ಒಂದು ವರ್ಷದಲ್ಲಿ ಒಮ್ಮೆ ಉಚಿತವಾಗಿ ಟಿಕೆಟ್‌ ನೀಡಲಾಗುವುದು ಎಂದು ಆಫರ್‌ ನೀಡಿದೆ. ಆದರೆ, ಇದನ್ನು ಪತ್ರಕರ್ತ ನಿರಾಕರಿಸಿದ್ದಾರೆ.

ವೆಜ್‌ ಊಟದಲ್ಲಿ ಮೂಳೆಗಳು ಪತ್ತೆ

ಕೆಲ ತಿಂಗಳ ಹಿಂದೆಯೂ ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಸಸ್ಯಾಹಾರದ ಬದಲಿಗೆ ಚಿಕನ್‌ ಪೀಸ್‌ಗಳು ಇರುವ ಊಟ ನೀಡಲಾಗಿದೆ ಎಂದು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೆಯೇ, ಫೋಟೊಗಳ ಸಮೇತ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

“ಏರ್‌ ಇಂಡಿಯಾ 582 ವಿಮಾನದಲ್ಲಿ ನಾನು ಪ್ರಯಾಣಿಸುತ್ತಿದ್ದೆ. ಇದೇ ವೇಳೆ ನನಗೆ ನೀಡಿದ ವೆಜ್‌ ಮೀಲ್‌ನಲ್ಲಿ ಚಿಕನ್‌ ಪೀಸ್‌ಗಳು ದೊರೆತಿವೆ. ನಾನು ಕಲ್ಲಿಕೋಟೆಯಿಂದ ವಿಮಾನ ಹತ್ತಿದೆ. ಈ ವಿಮಾನವು 6.40 ಹೊರಡುವ ಬದಲು 7.40ಕ್ಕೆ ಹಾರಾಟ ಆರಂಭಿಸಿದೆ. ವಿಮಾನ ಹಾರಾಟ ವಿಳಂಬ ಮಾಡುವ ಜತೆಗೆ ಮಾಂಸಾಹಾರ ನೀಡಲಾಗಿದೆ. ಇದರ ಕುರಿತು ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರೆ, ಅವರು ಒಂದು ಸಾರಿ ಕೇಳಿ ಸುಮ್ಮನಾದರು. ಹಾಗಾಗಿ, ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಆಗ್ರಹಿಸುತ್ತಿದ್ದೇನೆ” ಎಂದು ವೀರಾ ಜೈನ್‌ ಎಂಬ ಮಹಿಳೆಯು ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Mayank Agarwal: ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್? ಐಸಿಯುನಲ್ಲಿ ಚಿಕಿತ್ಸೆ

Continue Reading

ವೈರಲ್ ನ್ಯೂಸ್

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

ಖ್ಯಾತ ವೈದ್ಯರು ಪತ್ತೆ ಹಚ್ಚಲಾಗದ ಕಾಯಿಲೆಯನ್ನು ಮನೆ ಕೆಲಸದವಳು ಸುಲಭವಾಗಿ ಗುರುತಿಸಿದ್ದಾಳೆ ಎಂದು ಲಿವರ್ ಡಾಕ್ ಎಂದೇ ಜನಪ್ರಿಯವಾಗಿರುವ ಕೇರಳದ ಹೆಪಟಾಲಜಿಸ್ಟ್ ಸಿರಿಯಾಕ್ ಡಾ. ಅಬ್ಬಿ ಫಿಲಿಪ್ಸ್ ಎಕ್ಸ್ ನಲ್ಲಿ ಹೇಳಿಕೊಂಡಿದ್ದು ಭಾರಿ ವೈರಲ್ (Viral News) ಆಗಿದೆ. ಆ ರೋಗ ಯಾವುದು, ಅದರ ಲಕ್ಷಣಗಳು ಏನು ಗೊತ್ತೇ? ಇಲ್ಲಿದೆ ವರದಿ.

VISTARANEWS.COM


on

By

Viral news
Koo

ತಿರುವನಂತಪುರಂ: ಕುಟುಂಬದ ಸದಸ್ಯರಿಗೆ ಇದ್ದ ರೋಗವನ್ನು ಗುರುತಿಸಲು ಮನೆಯ ಹಿರಿಯರು ಹೇಗೆ ಸಹಾಯ ಮಾಡಿದ್ದಾರೆ ಎಂಬುದನ್ನು ಕೇರಳದ (kerala) ಹೆಪಟಾಲಜಿಸ್ಟ್ (hepatologist) ಒಬ್ಬರು ಎಕ್ಸ್ ನಲ್ಲಿ (x) ಹಂಚಿಕೊಂಡಿದ್ದು, ಭಾರಿ ವೈರಲ್ (Viral News) ಆಗಿದೆ. ಈ ರೋಗ ನಿರ್ಣಯ (identify a disease) ಮಾಡಲು ಸ್ವತಃ ವೈದ್ಯರು ಹೆಣಗಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಲಿವರ್ ಡಾಕ್ (Liver Doc) ಎಂದು ಜನಪ್ರಿಯವಾಗಿರುವ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ವಯಸ್ಕರೊಬ್ಬರಿಗೆ ಬಿಟ್ಟು ಬಿಟ್ಟು ಬರುತ್ತಿದ್ದ ಜ್ವರ, ಶೀತ, ಆಯಾಸ, ಸಂಧಿವಾತದಂತಹ ಲಕ್ಷಣಗಳನ್ನು ಕಂಡು ಎಲ್ಲ ಪರೀಕ್ಷೆಗಳನ್ನು ನಡೆಸಿದರು. ಆದರೆ ಎಲ್ಲವೂ ನಕಾರಾತ್ಮಕ ಫಲಿತಾಂಶ ನೀಡಿತ್ತು. ವೈರಲ್ ಹೆಪಟೈಟಿಸ್‌, ಕೋವಿಡ್ -19, ಇನ್ ಫ್ಲೂ ಯೆನ್ಸ್, ಡೆಂಗ್ಯೂ, ಎಬ್‌ಸ್ಟೈನ್ ಬಾರ್ ವೈರಸ್‌ ಎಲ್ಲವನ್ನೂ ಪರೀಕ್ಷಿಸಿದರು. ಆದರೆ ಎಲ್ಲವೂ ನೆಗೆಟಿವ್ ವರದಿ ನೀಡಿತ್ತು. ಇದರಿಂದ ಸ್ವತಃ ವೈದ್ಯರಿಗೆ ಹತಾಶೆ ಉಂಟಾಯಿತು. ಎಲ್ಲ ವೈದ್ಯಕೀಯ ಪುಸ್ತಕಗಳನ್ನು ನೋಡಿದರು. ಯಾವುದೇ ಪ್ರಯೋಜನವಾಗಲಿಲ್ಲ.

ಒಂದು ದಿನ ಮನೆಯ ಕೆಲಸದವಳು ಬಂದು ತಮ್ಮ ಮೊಮ್ಮಕ್ಕಳಲ್ಲಿ ಈ ದದ್ದು ಕಾಣಿಸಿಕೊಂಡಿದೆ. ಇದನ್ನು ಸ್ಥಳೀಯ ಭಾಷೆಯಲ್ಲಿ ‘ಅಂಜಂಪಣಿ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದಳು. ಬಳಿಕ ಪಾರ್ವೊವೈರಸ್ ಬಿ 19 ಗಾಗಿ ಪರಿಶೀಲಿಸಿದಾಗ ಅದು ಪಾಸಿಟಿವ್ ಬಂದಿದೆ ಎಂದು ಡಾ. ಫಿಲಿಪ್ಸ್ ಹೇಳಿದ್ದಾರೆ.

17 ವರ್ಷಗಳ ವೈದ್ಯಕೀಯ ವೃತ್ತಿಯಲ್ಲಿ ವಯಸ್ಸಾದ ಸೇವಕಿಯೊಬ್ಬರು 10 ಸೆಕೆಂಡುಗಳಲ್ಲಿ ರೋಗವನ್ನು ಗುರುತಿಸಿದ್ದು ಇದೇ ಮೊದಲು ಎಂದು ಅವರು ತಿಳಿಸಿದ್ದಾರೆ.

ಇದನ್ನು ಐದನೇ ರೋಗ ಎಂದು ಕರೆಯಲಾಗುತ್ತದೆ. ಇದು ಪಾರ್ವೊವೈರಸ್ B19 ನಿಂದ ಉಂಟಾಗುತ್ತದೆ. ಇದು ವಯಸ್ಕರಿಗಿಂತ ಮಕ್ಕಳಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಯಾರಾದರೂ ಕೆಮ್ಮಿದಾಗ ಅಥವಾ ಸೀನಿದಾಗ ಮೂಗು ಮತ್ತು ಬಾಯಿಯಲ್ಲಿರುವ ದ್ರವಗಳ ಮೂಲಕ ರೋಗ ಹರಡುತ್ತದೆ. ಕೆನ್ನೆಗಳ ಮೇಲೆ ಕೆಂಪು ದದ್ದುಗಳನ್ನು ಹೊಂದಿರುತ್ತದೆ. ದೇಹಕ್ಕೂ ಹರಡುತ್ತದೆ ಮತ್ತು ಇತರ ರೋಗಲಕ್ಷಣಗಳನ್ನು ಉಂಟುಮಾಡಬಹುದು.


ವೈರಲ್ ಆದ ಟ್ವೀಟ್

ಡಾ. ಫಿಲಿಪ್ ಅವರ ಈ ಟ್ವಿಟ್ ಭಾರೀ ವೈರಲ್ ಆಗಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಇದು 4.18 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಕೂಡ ಮಾಡಿದ್ದಾರೆ.

ಒಬ್ಬರು ಕೆಲವೊಮ್ಮೆ ಪ್ರಯೋಗಿಕ ಜ್ಞಾನವನ್ನು ಸಾಂಪ್ರದಾಯಿಕ ಜ್ಞಾನ ಸೋಲಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು ಕಾಮೆಂಟ್ ನಲ್ಲಿ ಕೆಲವು ಸಂದರ್ಭದಲ್ಲಿ ವೈದ್ಯರಿಗಿಂತ ಹಿರಿಯರ ನಂಬಿಕೆಯೇ ನಿಜವಾಗುತ್ತದೆ ಎಂದು ತಿಳಿಸಿದ್ದಾರೆ.

Continue Reading

ದೇಶ

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Eid Prayers: ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Eid Prayers
Koo

ಶ್ರೀನಗರ: ದೇಶಾದ್ಯಂತ ಮುಸ್ಲಿಮರು ತ್ಯಾಗ, ಬಲಿದಾನದ ಸಂದೇಶ ಸಾರುವ ಬಕ್ರೀದ್‌ (Bakrid 2024) ಸಡಗರ-ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಸೀದಿಗೆ ತೆರಳಿ, ನಮಾಜ್‌ ಮಾಡುವ ಮೂಲಕ, ತಮ್ಮ ಕೈಲಾದಷ್ಟು ದಾನ-ಧರ್ಮವನ್ನೂ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದಾರೆ. ಆದರೆ, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಜಾಮಾ ಮಸೀದಿಯಲ್ಲಿ (Jama Masjid) ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರು ನಮಾಜ್‌ (Eid Prayers) ಮಾಡಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ ಎಂದು ತಿಳಿದುಬಂದಿದೆ.

“ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷವೂ ಮುಸ್ಲಿಮರು ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ. ಸೋಮವಾರ (ಜೂನ್‌ 17) ಬೆಳಗ್ಗೆ ಜಾಮಾ ಮಸೀದಿಯಲ್ಲಿ ನಮಾಜ್‌ ಮಾಡಲಾಯಿತು. ಇದಾದ ನಂತರ 9 ಗಂಟೆಗೆ ಈದ್‌ ಪ್ರಾರ್ಥನೆ ಕಾರ್ಯಕ್ರಮ ಇತ್ತು. ಆದರೆ, ಭದ್ರತಾ ಸಿಬ್ಬಂದಿಯು ಮಸೀದಿಯ ಗೇಟ್‌ಗೆ ಬೀಗ ಹಾಕಿ, 9 ಗಂಟೆಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂಬುದಾಗಿ ಹೇಳಿದರು” ಎಂದು ಮಸೀದಿಯಲ್ಲಿ ನಮಾಜ್‌ ಪ್ರಕ್ರಿಯೆ ನಡೆಸಿಕೊಡಬೇಕಿದ್ದ ಅಂಜುಮಾನ್‌ ಔಕಾಫ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಬಕ್ರೀದ್‌ ಆಚರಣೆ

“ಜಾಮಾ ಮಸೀದಿಯಲ್ಲಿ ನಿರಂತರವಾಗಿ ನಮಾಜ್‌ ಮಾಡಲು ನಿರ್ಬಂಧ ವಿಧಿಸಲಾಗುತ್ತಿದೆ. ಬಕ್ರೀದ್‌ನಂತಹ ಸಂದರ್ಭಗಳಲ್ಲಿ ಪ್ರಾರ್ಥನೆ ಸಲ್ಲಿಸುವುದು ಧಾರ್ಮಿಕ ಆಚರಣೆ, ಅಧ್ಯಾತ್ಮಿಕ ಪ್ರತಿಬಿಂಬ ಹಾಗೂ ಸಾಮರಸ್ಯದ ಸಂಕೇತವಾಗಿದೆ. ಹಾಗಾಗಿ, ನಿರಂತರವಾಗಿ ಪ್ರಾರ್ಥನೆಗೆ ನಿರ್ಬಂಧವನ್ನು ವಿಧಿಸುವುದು ಜಮ್ಮು-ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿಲ್ಲ ಎಂಬುದಕ್ಕೆ ಕೈಗನ್ನಡಿಯಾಗಿದೆ. ಪದೇಪದೆ ನಿರ್ಬಂಧಗಳನ್ನು ಹೇರುವುದು, ಜನರ ಆಚರಣೆಗಳಿಗೆ ಅಡ್ಡಿ ಮಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪ್ರತಿ ವರ್ಷವೂ ನಮಾಜ್‌ಗೆ ತಡೆ ನೀಡುತ್ತಿರುವುದಕ್ಕೆ ಮುಸ್ಲಿಮರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Continue Reading
Advertisement
Sex Worker
ಪ್ರಮುಖ ಸುದ್ದಿ21 mins ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ42 mins ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ60 mins ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest1 hour ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್1 hour ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ1 hour ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್2 hours ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ2 hours ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್2 hours ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ2 hours ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು5 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌