Jammu and Kashmir: ನೆಹರು ತಪ್ಪಿನಿಂದ ಪಿಒಕೆ ಸೃಷ್ಟಿ; ಅದು ನಮ್ಮದೇ: ಸಂಸತ್‌ನಲ್ಲಿ ಅಮಿತ್‌ ಶಾ - Vistara News

ದೇಶ

Jammu and Kashmir: ನೆಹರು ತಪ್ಪಿನಿಂದ ಪಿಒಕೆ ಸೃಷ್ಟಿ; ಅದು ನಮ್ಮದೇ: ಸಂಸತ್‌ನಲ್ಲಿ ಅಮಿತ್‌ ಶಾ

Amit Shah: ಮೊದಲ ಪ್ರಧಾನಿ ನೆಹರು ಅವರು ಕೈಗೊಂಡ ಎರಡು ಮಹಾ ಪ್ರಮಾದಗಳಿಂದಾಗಿಯೇ ಕಾಶ್ಮೀರ (Jammu and Kashmir) ಕಣಿವೆ ದಶಕಗಳಿಂದ ಬಳಲುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

VISTARANEWS.COM


on

Vistara Editorial, New bill must help to kashmiri pandit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ಪಂಡಿತ ಜವಾಹರ್ ಲಾಲ್ ನೆಹರು (PM Jawahar Lal Nehru) ಅವರ ತಪ್ಪಿನಿಂದಾಗಿ ಪಾಕ್ ಆಕ್ರಮಿತ ಕಾಶ್ಮೀರ ಸೃಷ್ಟಿಯಾಯಿತು(POK). ನೆಹರು ಅವರ ಕೈಗೊಂಡು ಎರಡು ತಪ್ಪು ನಿರ್ಧಾರಗಳಿಂದ ಕಾಶ್ಮೀರವು (Jammu and Kashmir) ದಶಕಗಳಿಂದ ಬಳಲುವಂತಾಗಿದೆ. ಆದರೆ ಎಂದೆಂದಿಗೂ ನಮ್ಮದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಬುಧವಾರ ಪ್ರತಿಪಾದಿಸಿದರು. 2023ರ ಜಮ್ಮು ಮತ್ತು ಕಾಶ್ಮೀರ ಮೀಸಲು(ತಿದ್ದುಪಡಿ) ವಿಧೇಯಕ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ(ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿ, ಮಾತನಾಡಿದರು(Parliament Session).

ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕಾರಾವಧಿಯಲ್ಲಿ ಎರಡು ಪ್ರಮಾದಗಳಿಂದಾಗಿ ಹಲವಾರು ವರ್ಷಗಳ ಕಾಶ್ಮೀರ ಅನುಭವಿಸುತ್ತಾ ಬಂದಿದೆ. ನಮ್ಮ ಪಡೆಗಳು ಗೆಲ್ಲುತ್ತಿರುವಾಗಲೂ ಕದನ ವಿರಾಮ ಘೋಷಿಸಲಾಯಿತು ಮತ್ತು ಪಾಕಿಸ್ತಾನ ಆಕ್ರಮಿತ ಪ್ರದೇಶವು ಅಸ್ತಿತ್ವಕ್ಕೆ ಬಂದದ್ದು ದೊಡ್ಡ ತಪ್ಪು. ಕದನ ವಿರಾಮವನ್ನು ಮೂರು ದಿನಗಳ ಕಾಲ ವಿಳಂಬ ಮಾಡಿದ್ದರೆ, ಪಿಒಕೆ ಭಾರತದ ಭಾಗವಾಗುತ್ತಿತ್ತು. ಇದು ನೆಹರು ಅವರ ಮೊದಲನೇ ತಪ್ಪು ಎಂದು ಅಮಿತ್ ಶಾ ಅವರು ಹೇಳಿದರು.

ನಮ್ಮ ಸಮಸ್ಯೆಯನ್ನು ನೆಹರವು ವಿಶ್ವ ಸಂಸ್ಥೆಗೆ ತೆಗೆದುಕೊಂಡು ಹೋಗಿದ್ದು ಎರಡನೇ ತಪ್ಪು ಎಂದು ಅಮಿತ್ ಶಾ ಹೇಳಿದರು. ಇದೇ ವೇಳೆ ಅವರು ಕಾಶ್ಮೀರ ಪಂಡಿತರ ಹತ್ಯೆಗೆ ಕಾಂಗ್ರೆಸ್ ಕಾರಣ. ಒಂದೊಮ್ಮೆ ಮತ ರಾಜಕಾರಣವನ್ನು ಕೈ ಬಿಟ್ಟಿದ್ದರೆ ಈ ಅಮಾನವೀಯ ಹತ್ಯೆಗಳನ್ನು ತಡೆಯಬಹುದಾಗಿತ್ತು ಎಂದು ಶಾ ಹೇಳಿದರು.

ಪಿಒಕೆ ನಮ್ಮದು, ಅವರಿಗಾಗಿ ಮೀಸಲು ಕ್ಷೇತ್ರಗಳು

ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳನ್ನು ಕಳೆದುಕೊಂಡಿರುವ ಕಾಶ್ಮೀರದ ಜನರಿಗಾಗಿ ಈ ಎರಡು ವಿಧೇಯಕಗಳನ್ನು ಮಂಡಿಸುತ್ತಿದ್ದೇವೆ. ಭಯೋತ್ಪಾದನೆಯ ಕಾರಣದಿಂದ ಕಾಶ್ಮೀರ ತೊರೆದವರಿಗೆ ಈ ವಿಧೇಯಕಗಳು ನ್ಯಾಯ ಒದಗಿಸಲಿವೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ವಲಸೆ ಬಂದವರಿಗೆ ಕಾಶ್ಮೀರ ವಿಧಾನಸಭೆಯಲ್ಲಿ ಒಂದು ಸ್ಥಾನವನ್ನು ಮೀಸಲಿಡಲಾಗುವುದು. ಎರಡು ಮಸೂದೆಗಳಲ್ಲಿ ಒಂದು ಕಾಶ್ಮೀರಿ ವಲಸಿಗ ಸಮುದಾಯದ ಇಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಅಮಿತ್ ಶಾ ಅವರು ಹೇಳಿದರು.

ಅವರು (ಕಾಶ್ಮೀರಿ ಪಂಡಿತರು) ಕಾಶ್ಮೀರದಿಂದ ನಿರ್ಗತಿಕರಾದಾಗ, ತಮ್ಮ ದೇಶದಲ್ಲಿ ನಿರಾಶ್ರಿತರಾಗಿ ಬದುಕುವ ಅನಿವಾರ್ಯತೆಯು ಸೃಷ್ಟಿಯಾಯಿತು. ಸುಮಾರು 46,631 ಕುಟುಂಬಗಳು ತಮ್ಮದೇ ದೇಶದಲ್ಲಿ ನಿರಾಶ್ರಿತರಾಗಿದ್ದಾರೆ. ಈ ಮಸೂದೆ ಅವರಿಗೆ ಹಕ್ಕುಗಳನ್ನು ಪಡೆಯಲು, ಈ ಮಸೂದೆ ಅವರಿಗೆ ಪ್ರಾತಿನಿಧ್ಯವನ್ನು ನೀಡುತ್ತದೆ. ಮತ-ಬ್ಯಾಂಕ್ ರಾಜಕೀಯವನ್ನು ಪರಿಗಣಿಸದೆ ಆರಂಭದಲ್ಲಿ ಭಯೋತ್ಪಾದನೆಯನ್ನು ನಿಭಾಯಿಸಿದ್ದರೆ, ಕಾಶ್ಮೀರಿ ಪಂಡಿತರು ಕಣಿವೆಯನ್ನು ತೊರೆಯಬೇಕಾಗಿರಲಿಲ್ಲ. ಈ ಹತ್ಯಾಕಾಂಡವನ್ನು ತಡೆಯುವ ಜವಾಬ್ದಾರಿಯನ್ನು ಹೊತ್ತವರು ಇಂಗ್ಲೆಂಡ್‌ನಲ್ಲಿ ರಜೆಯ ಮಜದಲ್ಲಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ವಿರುದ್ಧ ಹರಿ ಹಾಯ್ದರು.

ಕೇಂದ್ರಾಡಳಿತ ಪ್ರದೇಶ ಮೀಸಲು ಕಾಯ್ದೆಗೆ ತಿದ್ದುಪಡಿಯನ್ನು ಬಯಸುವ 2023ರ ಜಮ್ಮು ಮತ್ತು ಕಾಶ್ಮೀರ ಮೀಸಲು ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರ್ಕಾರವು 2023ರ ಜುಲೈ 26ರಂದು ಮಂಡಿಸಿತ್ತು. ಈ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲು ಕಲ್ಪಿಸುತ್ತದೆ. ಜತೆಗೆ, ಜಮ್ಮು ಮತ್ತು ಕಾಶ್ಮೀರ ಮರು ಸಂಘಟನಾ ತಿದ್ದುಪಡಿ ವಿಧೇಯಕವು ರಾಜ್ಯಪಾಲರಿಗೆ, ಕಾಶ್ಮೀರ ವಲಸೆ ಸಮುದಾಯದ ಇಬ್ಬರನ್ನು ಅಸೆಂಬ್ಲಿಗೆ ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ನೀಡುತ್ತದೆ. ನವೆಂಬರ್ 1, 1989ರ ನಂತರ ಕಾಶ್ಮೀರ ಕಣಿವೆಯಿಂದ ಅಥವಾ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಯಾವುದೇ ಭಾಗದಿಂದ ವಲಸೆ ಬಂದವರು ಮತ್ತು ರಿಲೀಫ್ ಕಮಿಷನರ್‌ನಲ್ಲಿ ನೋಂದಾಯಿಸಲ್ಪಟ್ಟ ವ್ಯಕ್ತಿಗಳನ್ನು ವಲಸಿಗರು ಎಂದು ವ್ಯಾಖ್ಯಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: VK Singh: ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಜತೆ ಶೀಘ್ರ ವಿಲೀನ! ಸುಳಿವು ಬಿಟ್ಟುಕೊಟ್ಟ ಕೇಂದ್ರ ಸಚಿವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ದೇಶ

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Atrocity on women:ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್‌ಖಲಿಯಲ್ಲಿ ತೃಣ ಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವತಿಯರ ಮೇಲೆ ‘ವ್ಯವಸ್ಥಿತ ಅತ್ಯಾಚಾರ’ ಎಸಗಿದ ಆರೋಪ ಕೇಳಿಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಟಿಎಂಸಿ ಪಕ್ಷದ ಮುಖಂಡರು ಸುಂದರವಾದ ಹೆಂಡತಿ ಅಥವಾ ಚಿಕ್ಕ ಹೆಣ್ಣುಮಕ್ಕಳು ಇರುವ ಮನೆಗಳಿಗೆ ಸಮೀಕ್ಷೆ ನೆಪದಲ್ಲಿ ಬರುತ್ತಿದ್ದರು.

VISTARANEWS.COM


on

Atrocity on women
Koo

ಪಶ್ಚಿಮ ಬಂಗಾಳ: ಇಡೀ ರಾಜ್ಯದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದ್ದ ತೃಣಮೂಲ ಕಾಂಗ್ರೆಸ್‌(Trinamool Congress) ಮುಖಂಡರ ವಿರುದ್ಧದ ಅತ್ಯಾಚಾರ ಪ್ರಕರಣ(Atrocity on women)ದಲ್ಲಿ ಮಹತ್ವದ ಬೆಳವಣಿಗೆಯೊಂದು ಆಗಿದೆ. ಅತ್ಯಾಚಾರದ ದೂರು ನೀಡಿದ್ದ ಮೂವರು ಮಹಿಳೆಯರಲ್ಲಿ ಒಬ್ಬ ಸಂತ್ರಸ್ತೆ ಯೂ ಟರ್ನ್‌ ಹೊಡೆದಿದ್ದು, ಸುಳ್ಳು ದೂರು ನೀಡುವಂತೆ ಸ್ಥಳೀಯ ಬಿಜೆಪಿ ಮುಖಂಡರು(BJP Leaders) ಒತ್ತಾಯಿಸಿದ್ದರು ಎಂದು ಹೇಳಿಕೆ ನೀಡಿದ್ದಾಳೆ. ಅಲ್ಲದೇ ತನ್ನ ದೂರನ್ನು ಹಿಂಪಡೆದಿದ್ದಾಳೆ.

ಏನಿದು ಪ್ರಕರಣ?

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್‌ಖಲಿಯಲ್ಲಿ ತೃಣ ಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವತಿಯರ ಮೇಲೆ ‘ವ್ಯವಸ್ಥಿತ ಅತ್ಯಾಚಾರ’ ಎಸಗಿದ ಆರೋಪ ಕೇಳಿಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಟಿಎಂಸಿ ಪಕ್ಷದ ಮುಖಂಡರು ಸುಂದರವಾದ ಹೆಂಡತಿ ಅಥವಾ ಚಿಕ್ಕ ಹೆಣ್ಣುಮಕ್ಕಳು ಇರುವ ಮನೆಗಳಿಗೆ ಸಮೀಕ್ಷೆ ನೆಪದಲ್ಲಿ ಬರುತ್ತಿದ್ದರು. ಮಹಿಳೆಯರನ್ನು ಪಕ್ಷದ ಕಚೇರಿಗೆ ಕರೆದೊಯ್ಯುತ್ತಿದ್ದರು. ಹಲವಾರು ರಾತ್ರಿಯವರೆಗೂ ತಮಗೆ ತೃಪ್ತಿಯಾಗುವವರೆಗೂ ಅವರನ್ನು ಅಲ್ಲಿಯೇ ಇರಿಸಿಕೊಳ್ಳುತ್ತಿದ್ದರು ಎಂದು ಮಹಿಳೆಯೊಬ್ಬರು ಹೇಳಿರುವ ವಿಡಿಯೋ ವೈರಲ್ ಆಗಿದ್ದು ಇಡೀ ದೇಶದಲ್ಲಿ ಸುದ್ದಿಯಾಗಿತ್ತು.

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯ ಶೇಖ್ ಷಹಜಹಾನ್ ವಿರುದ್ಧ ‘ವ್ಯವಸ್ಥಿತ ಲೈಂಗಿಕ ದೌರ್ಜನ್ಯ’ ಮತ್ತು ಭೂ ಕಬಳಿಕೆಯ ಆರೋಪ ಕೇಳಿಬಂದಿತ್ತು. ಈತನೇ ಮುಖ್ಯ ತಪ್ಪಿತಸ್ಥ ಎಂದು ಮಹಿಳೆಯರು ಆರೋಪಿಸಿದ್ದಾರೆ. ಬಹಳ ಪ್ರಭಾವಿ ಟಿಎಂಸಿ ನಾಯಕರಾಗಿರುವ ಷಹಜಹಾನ್ ಶೇಖ್ ಮತ್ತು ಅವರ ಸಹಚರರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಿ ಸಂದೇಶ್‌ಖಾಲಿಯ ಮಹಿಳೆಯರು ನಡೆಸುತ್ತಿದ್ದ ಪ್ರತಿಭಟನೆ, ಇತ್ತೀಚೆಗೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಇದಾದ ಮೇಲೆ ಷಹಜಹಾನ್‌ ಮೇಲೆ ಇಡಿ ರೇಡ್‌ ಕೂಡ ನಡೆದಿತ್ತು.

ಇದನ್ನೂ ಓದಿ:Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

ಯೂಟರ್ನ್‌ ಹೊಡೆದ ಮಹಿಳೆ ಹೇಳೋದೇನು?

ಷಹಜಹಾನ್‌ ಮತ್ತು ಆತನ ಸಹಚರರ ವಿರುದ್ಧ ದೂರು ದಾಖಲಿಸಿದ್ದ ಮೂವರು ಮಹಿಳೆಯರಲ್ಲಿ ಒಬ್ಬಳು ತನ್ನ ದೂರನ್ನು ವಾಪಾಸ್‌ ಪಡೆದಿದ್ದು, ಬಿಜೆಪಿಯ ಕುಮ್ಮಕ್ಕು ಎಂದು ಹೇಳಿದ್ದಾಳೆ.ಬಿಜೆಪಿಯ ಸ್ಥಳೀಯ ಮುಖಂಡರು ನನ್ನನ್ನು ಬೆದರಿಸಿ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಬಿಜೆಪಿ ಮಹಿಳಾ ಮೋರ್ಛಾದ ನಾಯಕರು ನಮ್ಮ ಮನೆಗೆ ಬಂದು ಸುಳ್ಳು ಅತ್ಯಾಚಾರ ದೂರಿಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಇದಾದ ಮೇಲೆ ಪೊಲೀಸ್‌ ಠಾಣೆಗೂ ಕರೆದೊಯ್ದು ಅತ್ಯಾಚಾರ ಪ್ರಕರಣ ದಾಖಲಿಸಿದರು. ನನ್ನ ಮೇಲೆ ಯಾವ ಟಿಎಂಸಿ ಮುಖಂಡನೂ ಅತ್ಯಾಚಾರ ಮಾಡಿಲ್ಲ. ರಾತ್ರಿ ವೇಳೆ ಟಿಎಂಸಿ ಕಚೇರಿಗೆ ಬರುವಂತೆ ಯಾರೂ ಒತ್ತಾಯಿಸಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಅಲ್ಲದೇ ಇದೀಗ ಆಕೆ ಬಿಜೆಪಿ ವಿರುದ್ಧವೇ ದೂರು ನೀಡಿದ್ದಾಳೆ. ಮತ್ತೊಂದೆಡೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು ನೀಡಿದೆ.

Continue Reading

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading
Advertisement
Silent Heart Attack
ಆರೋಗ್ಯ15 mins ago

Silent Heart Attack: ಏನಿದು ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌? ಇದರ ಲಕ್ಷಣಗಳೇನು?

Olive Oil benefits
ಆರೋಗ್ಯ16 mins ago

Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

SSLC Result 2024
ಮಂಡ್ಯ19 mins ago

SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

IPL 2024
ಪ್ರಮುಖ ಸುದ್ದಿ19 mins ago

IPL 2024 : ಸ್ಟೊಯ್ನಿಸ್ ಕಪಾಳಕ್ಕೆ ಬಾರಿಸಿದ ಕೋಚ್​​ ಕ್ಲೂಸ್ನರ್​; ಇಲ್ಲಿದೆ ವಿಡಿಯೊ

Akshaya Tritiya Fashion
ಫ್ಯಾಷನ್46 mins ago

Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

SSLC Result 2024
ಶಿಕ್ಷಣ53 mins ago

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

MS Dhoni
ಕ್ರೀಡೆ53 mins ago

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

Janhvi Kapoor Wears Cricket-Themed Dress
ಬಾಲಿವುಡ್60 mins ago

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Job Alert
ಉದ್ಯೋಗ1 hour ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Kannada Serials TRP Puttakkana makkalu TOP one
ಕಿರುತೆರೆ2 hours ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ4 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ5 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌