ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ - Vistara News

ಆರೋಗ್ಯ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

Super Speciality Hospital : ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

VISTARANEWS.COM


on

super speciality hospital in Uttara Kannada District
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಕ್ಕಾಗಿ ಕುಮಟಾದಲ್ಲಿ ಜಾಗವನ್ನೂ ಗುರುತಿಸಿ ಓಕೆ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಳೆದ ಬಜೆಟ್‌ನಲ್ಲಿ (Karnataka budget 2023) ಅನುದಾನ ನೀಡಿರಲಿಲ್ಲ. ಈಗ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪ ವೇಳೆ ಕಾರವಾರ ಶಾಸಕ ಸತೀಶ್‌ ಸೈಲ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೇ ಬೇಕು. ಹೀಗಾಗಿ ಸದ್ಯಕ್ಕೆ ಕಾರವಾರದಲ್ಲಿ ಮಾಡಿಕೊಡಿ. ನಂತರ ಉತ್ತರ ಕನ್ನಡದ ಬೇರೆ ಪ್ರದೇಶದಲ್ಲಿ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ಇದರಿಂದ ಅಸಮಾಧಾನಗೊಂಡ ಕುಮಟಾ ಶಾಸಕ ದಿನಕರ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬೇಕು. ಈಗಾಗಲೇ ಈ ಬಗ್ಗೆ ಒಮ್ಮೆ ನಿರ್ಣಯ ಕೂಡಾ ಆಗಿದೆ. ಅಲ್ಲದೆ, ಸ್ಥಳವನ್ನೂ ಗುರುತಿಸಲಾಗಿದ್ದು, ಎಲ್ಲರೂ ಆಗ ಒಪ್ಪಿಗೆ ನೀಡಿದ್ದರು. ಹೀಗಾಗಿ ಕುಮಟಾದಲ್ಲಿಯೇ ಆಗಬೇಕು. ಇದು ಜಿಲ್ಲೆಯ ಹೃದಯ ಸ್ಥಳ ಆಗಿರುವುದರಿಂದ ಜಿಲ್ಲೆಯ ಎಲ್ಲರಿಗೂ ಇಲ್ಲಿಗೆ ಬರಲು ಅನುಕೂಲ ಆಗಲಿದೆ ಎಂದು ಆಗ್ರಹಿಸಿದರು.

ಆಗ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು, ಘಟ್ಟದ ಮೇಲೊಂದು, ಘಟ್ಟದ ಕೆಳಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಡಿಮ್ಯಾಂಡ್‌ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಂದಲೂ ಕೇಳಿಬಂತು.

ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಬಹಳ ದಿನಗಳಿಂದ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮಾಡಬೇಕು ಎಂಬ ಪ್ರಯತ್ನ ನಡೆದಿದೆ. ಆದರೆ, ಕಾರವಾರದಲ್ಲಿ ಅಗತ್ಯ ವೈದ್ಯ ಹುದ್ದೆಗಳಿಗೆ ಎರಡು ಸಲ ಕಾಲ್ ಫಾರ್ ಮಾಡಿದರೂ ಯಾರೂ ಅರ್ಜಿ ಹಾಕಿಲ್ಲ. ಮತ್ತೊಮ್ಮೆ ವೈದ್ಯ ಹುದ್ದೆಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಕೆಲಸವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸುಲಭವಾಗಲಿದೆ ಎಂದು ಹೇಳಿದರು.

ಉ.ಕ. ಜನರಿಂದ ನಡೆದಿದ್ದ ಆಂದೋಲನ

ಉತ್ತರ ಕನ್ನಡ ಜಿಲ್ಲೆಯು ಭೌಗೋಳಿಕವಾಗಿ ಬಹಳ ದೊಡ್ಡದಿರುವ ಕಾರಣ, ಅಪಘಾತವಾದರೆ ಇಲ್ಲವೇ ತುರ್ತು ಚಿಕಿತ್ಸೆ ಬೇಕಿದ್ದರೆ ಪಕ್ಕದ ಮಂಗಳೂರು, ಗೋವಾ ಇಲ್ಲವೇ ಹುಬ್ಬಳ್ಳಿಯಂತಹ ಕಡೆಗಳಿಗೆ ಹೋಗಬೇಕು. ಇದರಿಂದ ಸಾಕಷ್ಟು ಜೀವ ಹಾನಿಯಾಗುತ್ತಲಿದೆ. ರಾಜ್ಯಕ್ಕೆ ವಿದ್ಯುತ್‌ ಕೊಟ್ಟ ಜಿಲ್ಲೆಯ ಜನರಿಗೆ ಕನಿಷ್ಠ ಮೂಲ ಸೌಕರ್ಯವೂ ಇಲ್ಲದಂತೆ ಆಗಿದ್ದು, ಕೊನೇ ಪಕ್ಷ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾದರೂ ನೀಡಬೇಕು ಎಂದು ಈಚೆಗೆ ಭಾರಿ ಹೋರಾಟ ನಡೆದಿತ್ತು.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಹೀಗಾಗಿ ಆಗಿನ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿದ್ದಲ್ಲದೆ, ಜಿಲ್ಲೆಗೆ ಭೇಟಿ ನೀಡಿ ಸ್ಥಳಪರಿಶೀಲನೆಯನ್ನೂ ನಡೆಸಿದ್ದರು. ಕೊನೆಗೆ ಸರ್ಕಾರ ಸಹ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವಾಗ ಇದರ ಪ್ರಸ್ತಾಪವೇ ಇರಲಿಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಗೆಹರಿದಿದ್ದ ಜಾಗದ ಗೊಂದಲ

ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂಬರ್ 440ರಲ್ಲಿ 15.35 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಹಿಂದೆ ಈ ಜಾಗವನ್ನು ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮೀಸಲಿಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಜಾಗವನ್ನು ಆಸ್ಪತ್ರೆಗಾಗಿ ನೀಡುವಂತೆ ಸೂಚನೆ ನೀಡಲಾಗಿತ್ತು. ವಸತಿ ಶಾಲೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪರ್ಯಾಯ ಜಾಗವನ್ನು ಒದಗಿಸುವ ಭರವಸೆಯನ್ನು ನೀಡಲಾಗಿತ್ತು.

ಇದನ್ನೂ ಓದಿ: NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ವಸತಿ ಶಾಲೆಯ ಜಾಗ ಆಸ್ಪತ್ರೆಗೆ

ಉತ್ತರ ಕನ್ನಡ ಜಿಲ್ಲಾಡಳಿತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗೆ ಮೀಸಲಿರಿಸಲಾಗಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ನೀಡುವಂತೆ ಇಲಾಖೆಗೆ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಆಗಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಅವರು ಆ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದ್ದರು. ಅದರಂತೆ ಏಕಲವ್ಯ ವಸತಿ ಶಾಲೆಗಾಗಿ ನಿಗದಿಪಡಿಸಿ ಇರಿಸಲಾಗಿದ್ದ 17 ಎಕರೆ 14 ಗುಂಟೆ ಜಮೀನಿನಲ್ಲಿ, 15 ಎಕರೆ 35 ಗುಂಟೆಯಷ್ಟು ಪ್ರದೇಶವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಜತೆಗೆ ಏಕಲವ್ಯ ವಸತಿ ಶಾಲೆಗೆ ಪರ್ಯಾಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಷರತ್ತು ವಿಧಿಸಿ, ಆ ಪ್ರದೇಶವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸಲು ಸರ್ಕಾರದ ಆಪ್ತ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

ನುಣುಪಾಗಿ ನಯವಾಗಿ ಹೊಳಪಾಗಿದ್ದ ಕೂದಲು ನಿಸ್ತೇಜವಾಗಿ ಬಾಡುತ್ತದೆ. ಮಾರುಕಟ್ಟೆಯ ಜಾಹೀರಾತುಗಳನ್ನು ನೋಡಿ, ಏನಾದರೊಂದು ಹೊಸ ಶಾಂಪೂ, ಕಂಡೀಶನರ್‌ ಪ್ರಯತ್ನಿಸುವ ಮಂದಿ ನೈಸರ್ಗಿಕವಾದ ಕಂಡೀಶನರ್‌ಗಳ ಮೊರೆ ಹೋದರೆ ಖಂಡಿತವಾಗಿಯೂ ಉತ್ತಮ ಪ್ರಯೋಜನ ಪಡೆಯಬಲ್ಲರು. ಮಾರುಕಟ್ಟೆಯ ಕಂಡೀಶನರ್‌ಗೆ ಸೆಡ್ಡು ಹೊಡೆಯುವಂಥ ನೈಸರ್ಗಿಕ ಕಂಡೀಷನರ್‌ಗಳ (Hair conditioner) ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Hair Conditioner
Koo

ಕೂದಲ ಪೋಷಣೆ ಎಷ್ಟು ಮಾಡಿದರೂ ಸಾಲದು. ಬಿಡದೆ ಕಾಡುವ ಕೂದಲ ಸಮಸ್ಯೆ ಒಂದೆರಡಲ್ಲ. ಒಂದೋ ತಲೆಹೊಟ್ಟು, ಸೀಳುತುದಿಗಳು, ಒಣಕಲಾಗುದು, ಉದುರುವುದು ಇತ್ಯಾದಿ ಇತ್ಯಾದಿ ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ಈಗ ಬೇಸಿಗೆಯಲ್ಲಂತೂ ತಿರುಗಾಡಿ ಮನೆಗೆ ಬಂದಾಗ ಕೂದಲು ಒಣಕಲಾಗಿ ಹಾರಾಡುತ್ತಾ, ಬಾಚಿಕೊಳ್ಳಲು ಕಷ್ಟವಾಗುತ್ತದೆ. ನುಣುಪಾಗಿ ನಯವಾಗಿ ಹೊಳಪಾಗಿದ್ದ ಕೂದಲು ನಿಸ್ತೇಜವಾಗಿ ಬಾಡುತ್ತದೆ. ಮಾರುಕಟ್ಟೆಯ ಜಾಹಿರಾತುಗಳನ್ನು ನೋಡಿ, ಏನಾದರೊಂದು ಹೊಸ ಶಾಂಪೂ, ಕಂಡೀಶನರ್‌ ಪ್ರಯತ್ನಿಸುವ ಮಂದಿ ನೈಸರ್ಗಿಕವಾದ ಕಂಡೀಶನರ್‌ಗಳ ಮೊರೆ ಹೋದರೆ ಖಂಡಿತವಾಗಿಯೂ ಉತ್ತಮ ಪ್ರಯೋಜನ ಪಡೆಯಬಲ್ಲರು. ಮಾರುಕಟ್ಟೆಯ ಕಂಡೀಶನರ್‌ಗೆ ಸೆಡ್ಡು ಹೊಡೆಯುವಂಥ ನೈಸರ್ಗಿಕ ಕಂಡೀಷನರ್‌ಗಳೇ ಇರುವಾಗ ರಾಸಾಯನಿಕ ಸಹಾಯ ಯಾಕೆ ಬೇಕು ಹೇಳಿ? ಬನ್ನಿ, ನೈಸರ್ಗಿಕ ಹೇರ್‌ ಕಂಡೀಷನರ್‌ಗಳಾಗಿ (Hair conditioner) ಯಾವುದನ್ನು ಬಳಸಬಹುದು ಎಂಬುದನ್ನು ನೋಡೋಣ.

Egg conditioner

ಮೊಟ್ಟೆಯ ಕಂಡೀಷನರ್‌

ಇದು ಕೂದಲ ಪೋಷಣೆಗೆ ಹೇಳಿ ಮಾಡಿಸಿದಂತಹ ಕಂಡೀಷನರ್‌. ಒಂದೇ ಬಳಕೆಯಲ್ಲಿ ನಿಮ್ಮ ಕೂದಲಲ್ಲಿ ಗಣನೀಯ ಬದಲಾವಣೆಯನ್ನು ನೀವು ಕಾಣುತ್ತೀರಿ. ಕೂದಲ ಮೇಳೆ ಅಡ್ಡ ಪರಿಣಾಮಗಳಾಗಬಹುದು ಎಂಬ ಭಯವೂ ಇಲ್ಲ. ಮೊಟ್ಟೆಯ ಬಿಳಿ ಲೋಳೆ, ಆಲಿವ್‌ ಎಣ್ಣೆ, ಜೇನುತುಪ್ಪ ಹಾಗೂ ವಿನೆಗರ್‌ ಇವನ್ನೆಲ್ಲ ಸೇರಿಸಿ ಚೆನ್ನಾಗಿ ಕಲಕಿಕೊಂಡು ಪೇಸ್ಟ್‌ನಂತೆ ತಲೆಗೆ ಕೂದಲ ಬುಡದಿಂದ ತುದಿಯವರೆಗೆ ಹಚ್ಚಿಕೊಳ್ಳಿ. ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ಇದನ್ನು ಹಾಗೆಯೇ ತಲೆಯಲ್ಲಿರಲು ಬಿಟ್ಟು ನಂತರ ಮೆದುವಾದ ಶಾಂಪೂವಿನಿಂದ ತೊಳೆಯಿರಿ. ಯಾವ ಕಂಡೀಷನರ್‌ ಅಗತ್ಯವೂ ಇಲ್ಲದೆ ನಿಮ್ಮ ಕೂದಲು ಕಂಡೀಷನರ್‌ ಬಳಸಿದಂತೆ ಪಳಪಳಿಸುತ್ತದೆ.

Banana conditioner

ಬಾಳೆಹಣ್ಣಿನ ಕಂಡೀಷನರ್

ಒಂದು ಚೆನ್ನಾಗಿ ಹಣ್ಣಾದ ಬಾಳೆಹಣ್ಣನ್ನು ತೆಗೆದುಕೊಂಡು ಒಂದು ಚಮಚ ಜೇನುತುಪ್ಪ, ಆಲಿವ್‌ ಎಣ್ಣೆ ಇವಿಷ್ಟನ್ನೂ ತೆಗೆದುಕೊಂಡು ಪೇಸ್ಟ್‌ ಮಾಡಿ ತಲೆಗೆ ಹಚ್ಚಿ. ಅರ್ಧ ಗಂಟೆ ಬಿಟ್ಟು ತಲೆಗೆ ಸ್ನಾನ ಮಾಡುವುದರಿಂದ ಕೂದಲು ನಯವಾಗಿ ಹೊಳೆಯುತ್ತದೆ.‌ ಈ ಪೇಸ್ಟ್‌ ಜೊತೆಗೆ ಏಕಿದ್ದರೆ ಮೊಟ್ಟೆಯ ಬಿಳಿ ಲೋಳೆಯನ್ನೂ ಸೇರಿಸಬಹುದು.

ತೆಂಗಿನೆಣ್ಣೆ ಕಂಡೀಷನರ್

ತೆಂಗಿನ ಎಣ್ಣೆಗೆ ಒಂದು ಚಮಚ ಜೇನುತುಪ್ಪ, ನಿಂಬೆಹಣ್ಣಿನ ರಸ, ಮೊಸರು ಹಾಗೂ ರೋಸ್‌ ವಾಟರ್‌ ಸೇರಿಸಿ. ಇವನ್ನು ಚೆನ್ನಾಗಿ ಮಿಕ್ಸ್‌ ಮಾಡಿ ತಲೆಗೆ ಹಚ್ಚಿ ಮಸಾಜ್‌ ಮಾಡಿಕೊಳ್ಳಿ. ನಂತರ ಅರ್ಧ ಗಂಟೆ ಬಿಟ್ಟು ಸ್ನಾನ ಮಾಡಿ. ಕೂದಲು ಆರೋಗ್ಯಯುತವಾಗಿ ಕಂಗೊಳಿಸುತ್ತದೆ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

ಅಗಸೆಬೀಜದ ಕಂಡೀಷನರ್

ಎರಡು ಚಮಚ ಅಗಸೆ ಬೀಜವನ್ನು ನೀರಿಗೆ ಹಾಕಿ ಸ್ವಲ್ಪ ಹೊತ್ತು ಕುದಿಸಿ. ಅದು ಕುದಿರುವ ಸಂದರ್ಭ ಜೆಲ್‌ನಂತಾಗುತ್ತದೆ. ಸ್ವಲ್ಪ ಆರಿದ ಮೇಲೆ ಅದನ್ನು ಸೋಸಿಕೊಂಡು ಅದರಿಂದ ದೊರೆತ ಜೆಲ್‌ಗೆ, ಆಲೊವೆರಾ ಜೆಲ್‌ ಹಾಗೂ ತೆಂಗಿನೆಣ್ಣೆ ಸ್ವಲ್ಪ ಸೇರಿಸಿ. ಈ ಮೂರನ್ನೂ ಚೆನ್ನಾಗಿ ಮಿಕ್ಸ್‌ ಮಾಡಿ, ಕೂದಲ ಬುಡದಿಂದ ತುದಿಯವರೆಗೂ ಹಚ್ಚಿ. ಅರ್ಧ ಗಂಟೆ ಬಿಟ್ಟು ತೊಳೆದರೆ, ಯಾವ ಕಂಡೀಷನರ್‌ ಕೂಡಾ ಅಗತ್ಯವೇ ಇಲ್ಲ. ನಿಸ್ತೇಜವಾಗಿದ್ದ ಕೂದಲು ಒಂದೇ ಸಲಕ್ಕೆ ಪಳಪಳಿಸುವ ಹೊಳಪನ್ನು ಪಡೆಯುತ್ತದೆ.

Tips To Prevent Curd

ಮೊಸರಿನ ಕಂಡೀಷನರ್

ಒಂದು ಬೌಲ್‌ನಲ್ಲಿ ಗಟ್ಟಿ ಮೊಸರು ತೆಗೆದುಕೊಂಡು ಅದಕ್ಕೆ, ಮೊಟ್ಟೆಯ ಬಿಳಿ ಲೋಳೆಯನ್ನು ಸೇರಿಸಿ ಚೆನ್ನಾಗಿ ಮಿಕ್ಸ್‌ ಮಾಡಿ. ಈ ಮಿಶ್ರಣವನ್ನು ತಲೆ ಕೂದಲಿಂದ ಬುಡದವರೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಕೂದಲು ತೊಳೆಯಿರಿ. ಯಾವ ಕಂಡೀಷನರ್‌ ಹಾಕುವ ಅಗತ್ಯವೇ ಇಲ್ಲ. ಕೂದಲು ಸೊಂಪಾಗಿ ಬೆಳೆಯುತ್ತದೆ. ಹೊಟ್ಟಿನ ಸಮಸ್ಯೆಯಿದ್ದರೂ ಮಂಗಮಾಯ. ರಾಸಾಯನಿಕಯುಕ್ತ ಕಂಡೀಷನರ್‌ ಬಳಸುವ ಬದಲು, ವಾರಕ್ಕೊಮ್ಮೆಯಾದರೂ ಇಂತಹ ನೈಸರ್ಗಿಕ ಕಂಡೀಷನಿಂಗ್‌ ಮಾಡುವುದರಿಂದ ಕೂದಲನ್ನು ಯಾವ ಸಮಸ್ಯೆಯೂ ಬಾಧಿಸುವುದಿಲ್ಲ.

Continue Reading

ಆರೋಗ್ಯ

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ (Healthy Diet) ಭಾಗವಾಗುವುದು ನಿಜ. ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Healthy Diet
Koo

ಹಾಲು (milk), ಮೊಸರು (curd), ತುಪ್ಪ (ghee), ಬೆಣ್ಣೆ (butter) ಇಲ್ಲದೇ ಇದ್ದರೆ ಭಾರತೀಯರ ಮನೆಗಳಲ್ಲಿ ಅಡುಗೆ ಕೆಲಸ ಕಾರ್ಯಗಳು ಒಂದೂ ನಡೆಯುವುದಿಲ್ಲ. ಆರೋಗ್ಯದ ವಿಚಾರದಲ್ಲಿ (Healthy Diet) ಹಾಲು, ತುಪ್ಪ, ಮೊಸರಿನ ಬಗ್ಗೆ ಅಷ್ಟೇನು ಸಂದೇಹವಿಲ್ಲ. ಆದರೆ ಬೆಣ್ಣೆಯ ವಿಚಾರ ಬಂದಾಗ ಇದು ಆರೋಗ್ಯಕರ ಹೌದೋ ಅಲ್ಲವೋ ಎನ್ನುವ ಗೊಂದಲ ಕಾಡುತ್ತದೆ.

ಭಾರತೀಯ ಮನೆಗಳ ಪಾಕ ಶಾಲೆಯಲ್ಲಿ ಬಹುವಿಧವಾಗಿ ಬಳಸುವ ಬೆಣ್ಣೆಯು ಅದರ ಪೋಷಕಾಂಶದಿಂದಲೂ ಹೆಚ್ಚು ಮೌಲ್ಯಯುತ ಎಂದೆನಿಸಿದೆ. ಇದು ಹಲವಾರು ಪೋಷಕಾಂಶಗಳ ಕೇಂದ್ರೀಕೃತ ಮೂಲವಾಗಿದೆ. ಇದರಲ್ಲಿ ಕೊಬ್ಬು ಕರಗಬಲ್ಲ ವಿಟಮಿನ್‌ಗಳಾದ ಎ, ಇ ಮತ್ತು ಕೆ2 ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ದೃಷ್ಟಿ, ಚರ್ಮವನ್ನು ಕಾಪಾಡಿಕೊಳ್ಳಲು ಮತ್ತು ಒಟ್ಟಾರೆ ದೇಹದ ಪ್ರತಿರಕ್ಷೆಯನ್ನು ಬೆಂಬಲಿಸಲು ಇವುಗಳು ಅತ್ಯಗತ್ಯ.

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ ಭಾಗವಾಗುವುದು ನಿಜ. ಅಲ್ಲದೇ ಉತ್ತಮ ಗುಣಮಟ್ಟದ ಬೆಣ್ಣೆಯನ್ನು ಆಯ್ಕೆ ಮಾಡಲು ಸೂಚಿಸಲಾಗುತ್ತದೆ. ಏಕೆಂದರೆ ಇದು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ. ದೇಹಕ್ಕೆ ಅಗತ್ಯವಾದ ಉತ್ತಮ ಕೊಬ್ಬಿನಾಂಶಗಳು ಬೆಣ್ಣೆ, ಆಲಿವ್ ಎಣ್ಣೆ, ಆವಕಾಡೊಗಳಿಂದಲೂ ಸಿಗುತ್ತದೆ.


ಹೆಚ್ಚುವರಿ ಬೆಣ್ಣೆಯನ್ನು ಸೇವಿಸಿದರೆ ಏನಾಗುತ್ತದೆ?

ಬೆಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ. ಇದನ್ನು ಅಧಿಕವಾಗಿ ಸೇವಿಸಿದಾಗ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.

ಬೆಣ್ಣೆಯು ಕ್ಯಾಲೋರಿ ದಟ್ಟವಾಗಿರುತ್ತದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಬೆಣ್ಣೆಯನ್ನು ಮಿತವಾಗಿ ಸೇವಿಸಲು ಯಾವಾಗಲೂ ಸಲಹೆ ನೀಡಲಾಗುತ್ತದೆ.

ಹಲವಾರು ಅಧ್ಯಯನಗಳ ಪ್ರಕಾರ ಬೆಣ್ಣೆಯು ರಕ್ತದ ಲಿಪಿಡ್ ಮಟ್ಟವನ್ನು ಹಾನಿಗೊಳಿಸುತ್ತದೆ. ಹೃದಯದ ಪರಿಸ್ಥಿತಿಗಳು ಅಥವಾ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರಿಗೆ, ಮಿತವಾಗಿರುವುದು ಮುಖ್ಯವಾಗಿದೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ಬೆಣ್ಣೆಯು ಲ್ಯಾಕ್ಟೋಸ್ ಮತ್ತು ಡೇರಿ ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಇದು ಡೇರಿ ಅಲರ್ಜಿಯಿಂದ ಬಳಲುತ್ತಿರುವವರಿಗೆ ಸಮಸ್ಯೆಯಾಗಬಹುದು. ಬೆಣ್ಣೆಯನ್ನು ಸೇವಿಸಿದ ಅನಂತರ ಉಬ್ಬುವುದು, ಗ್ಯಾಸ್ ಅಥವಾ ಅತಿಸಾರದಂತಹ ಜೀರ್ಣಕಾರಿ ತೊಂದರೆಗಳನ್ನು ಅವರು ಅನುಭವಿಸಬಹುದು.

ಬೆಣ್ಣೆಯನ್ನು ಮಿತವಾಗಿ ಸೇವಿಸಿದಾಗ ಆರೋಗ್ಯಕರ ಆಹಾರದ ಭಾಗವಾಗಬಹುದು. ಅದರ ಸ್ಯಾಚುರೇಟೆಡ್ ಕೊಬ್ಬಿನಂಶವನ್ನು ಗಮನದಲ್ಲಿಟ್ಟುಕೊಳ್ಳುವುದು ಮತ್ತು ಸಾಧ್ಯವಾದಾಗ ಉತ್ತಮ ಗುಣಮಟ್ಟದ ಆಯ್ಕೆಗಳನ್ನು ಆರಿಸುವುದು ಅತ್ಯಗತ್ಯ. ವೈವಿಧ್ಯಮಯ ಮತ್ತು ಸಮತೋಲಿತ ಆಹಾರದ ಭಾಗವಾಗಿ ಬೆಣ್ಣೆಯನ್ನು ಆನಂದಿಸುವುದು ಉತ್ತಮ.

Continue Reading

ಆರೋಗ್ಯ

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

West Nile fever : ಕೇರಳದಲ್ಲಿ ವೆಸ್ಟ್‌ ನೈಲ್‌ ಜ್ವರವು ಹೆಚ್ಚಾಗಿ ಆವರಿಸುತ್ತಿದೆ. ಮೈಸೂರಿನ ಗಡಿಭಾಗದಲ್ಲೂ ಜ್ವರ ಹರಡುವ ಕಾರಣಕ್ಕೆ ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಈಗಾಗಲೇ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಈ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.

VISTARANEWS.COM


on

By

West Nile fever Health department on alert
Koo

ಮೈಸೂರು: ನಿಫಾ, ಕೋವಿಡ್, ಹಕ್ಕಿ ಜ್ವರ, ಹಂದಿ ಜ್ವರ ಬಳಿಕ ಈಗ ವೆಸ್ಟ್ ನೈಲ್ ಜ್ವರದ ಭೀತಿ ಹೆಚ್ಚಾಗಿದೆ. ನೆರೆಯ ಕೇರಳದಲ್ಲಿ ವೆಸ್ಟ್‌ ನೈಲ್ ಜ್ವರ (West Nile fever) ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ (Health department) ಅಲರ್ಟ್ ಆಗಿದೆ.

ಎಚ್‌ಡಿ ಕೋಟೆ ತಾಲೂಕಿನ ಡಿ.ಬಿ ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗಿದೆ. ಗಡಿ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆಯೊಂದಿಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ವೈರಸ್‌ ಕೇರಳದಲ್ಲಿ ಕಾಣಿಸಿಕೊಂಡು ನಂತರ ಕರ್ನಾಟಕಕ್ಕೂ ಹರಡಿತ್ತು. ಹೀಗಾಗಿ ಕೇರಳ ಗಡಿ ಮೂಲಕ ಮೈಸೂರಿಗೆ ಪ್ರವೇಶ ಪಡೆಯುವ ರೋಗಿಗಳಿಂದ ರಾಜ್ಯಕ್ಕೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಲಾಗುತ್ತಿದೆ.

ಎಚ್‌ಡಿ ಕೋಟೆಯ ಗಡಿ ಭಾಗದಲ್ಲಿ ಹಲವರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಜ್ವರ, ತಲೆನೋವು, ಶೀತದಿಂದ ಬಳಲುತ್ತಿದ್ದಾರೆ. ಹೀಗಾಗಿ ಎಚ್‌ಡಿಕೋಟೆಯ ತಾಲೂಕು ಆರೋಗ್ಯಾಧಿಕಾರಿಗಳು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಸ್ಯಾಂಪಲ್ ರವಾನಿಸಿದ್ದಾರೆ.

West Nile fever  Health department on alert
ಜನರಲ್ಲಿ ವೆಸ್ಟ್‌ ನೈಲ್‌ ಜ್ವರದ ಕುರಿತು ಜಾಗೃತಿ ಮೂಡಿಸುತ್ತಿರುವ ಆರೋಗ್ಯಾಧಿಕಾರಿಗಳು

ಈ ಬಗ್ಗೆ ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪಿ.ಸಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯು ಕಾಡಂಚಿನ ಗ್ರಾಮದ ಮನೆ – ಮನೆಗೆ ತೆರಳಿ ಮಾಹಿತಿ ನೀಡುತ್ತಿದ್ದೇವೆ. ಸಾಮಾನ್ಯ ಜ್ವರಕ್ಕೆ ನೀಡುವಂತೆ ವೆಸ್ಟ್ ನೈಲ್ ಜ್ವರಕ್ಕೂ ಚಿಕಿತ್ಸೆ ನೀಡಲಾಗುತ್ತದೆ.

ವೆಸ್ಟ್‌ ನೈಲ್‌ ಜ್ವರದ ಲಕ್ಷಣಗಳಿವು

1) ದಿಢೀರ್‌ ಜ್ವರ ಬರುವುದು
2) ವಿಪರೀತ ಮೈ-ಕೈ ನೋವು, ತಲೆನೋವು ಕಾಣಿಸಿಕೊಳ್ಳುವುದು
3) ದೇಹದ ಮೇಲೆ ದದ್ದುಗಳು ಕಾಣಿಸಿಕೊಳ್ಳುವುದು
4) ಕೆಲವೊಮ್ಮೆ ವಾಂತಿ ಆಗಲಿದೆ. ಇವು ವೆಸ್ಟ್ ನೈಲ್ ಜ್ವರದ ಲಕ್ಷಣಗಳಾಗಿವೆ. ಸಾಮಾನ್ಯವಾಗಿ ಈ ವೈರಸ್‌ ಸೊಳ್ಳೆಗಳಿಂದ ಹರಡುತ್ತದೆ. ಸೋಂಕಿತ ಪಕ್ಷಿಗಳನ್ನು ತಿನ್ನುವಾಗ ಸೋಂಕಿಗೆ ಒಳಗಾಗುತ್ತವೆ. ಅವು ಮನುಷ್ಯನನ್ನು ಕಚ್ಚಿದಾಗ ಈ ವೆಸ್ಟ್‌ ಬೈಲ್‌ ಜ್ವರ ಕಾಣಿಸಿಕೊಳ್ಳುತ್ತದೆ.

ಈ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವೆಸ್ಟ್ ನೈಲ್ ಜ್ವರ ಮಾರಣಾಂತಿಕವಲ್ಲ. ಹಾಗಾಗಿ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕು.

ಇದನ್ನೂ ಓದಿ: Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

ಮೈಸೂರಿನಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿಧಾನಸಭೆ ಕ್ಷೇತ್ರವಾದ ವರುಣದಲ್ಲಿ (Varuna) ಶುದ್ಧ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ತಗಡೂರು ಗ್ರಾಮದಲ್ಲಿ ಇದರಿಂದ ಜನ ಕಾಲರಾಗೆ ತುತ್ತಾಗುತ್ತಿದ್ದಾರೆ. ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಕಲುಷಿತ ನೀರು ಸೇವಿಸಿದ ಕಾರಣ 25 ಗ್ರಾಮಸ್ಥರು ಸೇರಿ 114 ಮಂದಿ ಕಾಲರಾ (Cholera) ಕಾಯಿಲೆಯಿಂದ ಬಳಲುತ್ತಿದ್ದಾರೆ. ವಾಂತಿ-ಭೇದಿಯಿಂದ ಜನ ತತ್ತರಿಸಿ ಹೋಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ತಗಡೂರು ಗ್ರಾಮವು ನಂಜನಗೂಡು ತಾಲೂಕಿಗೆ ಸೇರಿದರೂ ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ತಗಡೂರು ಗ್ರಾಮ ಪಂಚಾಯಿತಿಯ 1, 2 ಹಾಗೂ 3ನೇ ವಾಸಿಸುತ್ತಿರುವ ಜನರು ಕಾಲರಾಗೆ ತುತ್ತಾಗಿದ್ದಾರೆ. 114 ರೋಗಿಗಳಲ್ಲಿ ಐವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಕಾಲರಾ ಹರಡಲು ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಕೈ ಪಂಪ್‌ಗಳಿದ್ದರೂ ಪ್ರಯೋಜನ ಇಲ್ಲ

ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಜನಾಕ್ರೋಶದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ದಿಢೀರ್‌ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಗ್ರಾಮದಲ್ಲಿ ನೂರಾರು ಜನ ಕಾಲರಾಗೆ ತುತ್ತಾಗಿರುವ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳ ದಂಡೇ ಗ್ರಾಮಕ್ಕೆ ತೆರಳಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ನೀಡಲಾಗುತ್ತಿದೆ. ಪ್ರತಿ ಮನೆ ಮನೆಗೆ ಒಆರ್‌ಎಸ್ ಪೌಡರ್ ವಿತರಣೆ ಮಾಡಲಾಗಿದೆ. ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು, ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಷ್ಟಾದರೂ ಪಿಡಿಒ ದಿವಾಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading
Advertisement
actor Chetan Kumar Ahimsa
ಸಿನಿಮಾ21 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ39 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್44 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್45 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ1 hour ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌