Chaturmasya 2022 | ಭಗವಂತನ ಕೃಪೆಯಿಂದ ಮುಕ್ತಿ ಹೊಂದಬೇಕು; ಸ್ವರ್ಣವಲ್ಲೀ ಶ್ರೀ - Vistara News

ಉತ್ತರ ಕನ್ನಡ

Chaturmasya 2022 | ಭಗವಂತನ ಕೃಪೆಯಿಂದ ಮುಕ್ತಿ ಹೊಂದಬೇಕು; ಸ್ವರ್ಣವಲ್ಲೀ ಶ್ರೀ

Chaturmasya 2022 | ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಪ್ರವಚನ ನೀಡುವ ಮೂಲಕ ಭಕ್ತಾದಿಗಳನ್ನು ಹರಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಪ್ರತಿಯೊಬ್ಬ ಮನುಷ್ಯನೂ ಕೂಡ ಭಗವಂತನ ಕೃಪೆಯನ್ನು ಪಡೆದು ಮುಕ್ತಿಯನ್ನು ಹೊಂದಲು ಪ್ರಯತ್ನಿಸಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು (Chaturmasya 2022) ಪ್ರವಚನ ನೀಡಿದರು.

ಸ್ವರ್ಣವಲ್ಲೀಯಲ್ಲಿ ೩೨ನೇ ಚಾತುರ್ಮಾಸ್ಯದ ವ್ರತದಲ್ಲಿರುವ ಶ್ರೀಗಳು ಸೋಮವಾರದಂದು (ಜುಲೈ 18) ಗುಂದ ಸೀಮೆ ಹಾಗೂ ಚಾಪಖಂಡ ಭಾಗದ ಶಿಷ್ಯ-ಭಕ್ತರು ಸಮರ್ಪಿಸಿದ ವಿವಿಧ ಸೇವೆಗಳನ್ನು ಸ್ವೀಕರಿಸಿ ಆಶೀರ್ವಚನ ನೀಡಿ ಭಕ್ತಾದಿಗಳನ್ನು ಹರಸಿದರು.

ಚಾತುರ್ಮಾಸ್ಯದ ಪುಣ್ಯಪರ್ವದಲ್ಲಿ ಭಕ್ತಾದಿಗಳಿಗೆ ಆಶೀರ್ವದಿಸಿದ ಶ್ರೀಗಳು ʼಮನುಷ್ಯನ ಜನ್ಮ ಲಭಿಸುವುದು ದುರ್ಲಭ. ಅದರಲ್ಲೂ ಸುಸಂಸ್ಕೃತ ಕುಟುಂಬದಲ್ಲಿ ಜನ್ಮ ಆಗುವುದು ಇನ್ನೂ ದುರ್ಲಭ. ಆದ್ದರಿಂದ ಲಭಿಸಿದ ಪರಮ ದುರ್ಲಭವಾದ ಮನುಷ್ಯ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕುʼ ಎಂದು ನುಡಿದರು.

ಮುಕ್ತಿ ಎಂದರೆ ಬಿಡುಗಡೆ, ಅದನ್ನು ಪಡೆಯಬೇಕೆಂಬಾಗ ನಾವು ಬಂಧನದಲ್ಲಿ ಇದ್ದೇವೆ ಎಂಬುದು ಸಿದ್ಧವಾಗುತ್ತದೆ. ನಾವೆಲ್ಲರೂ ಮನಸ್ಸಿನ ಹಿಂದಿರುವ ಸತ್ವ, ರಜ, ತಮೋಗುಣಗಳಿಂದ ಬಂಧಿಸಲ್ಪಟ್ಟಿದ್ದೇವೆ ಎಂದರು.

ನಾನು ಎಂದರೇನು?

ನಾನು ಎಂದರೆ ಶರೀರವಲ್ಲ. ಅದರೊಳಗಿನ ಜೀವ. ಇದು ಸಾಮಾನ್ಯರ ಅರಿವಿಗೆ ಬಾರದು. ಇದು ಕೂಡ ಸತ್ವ, ರಜಸ್ಸು ಹಾಗೂ ತಮಸ್ಸು ಗುಣಗಳ ಪ್ರಭಾವವೇ ಆಗಿದೆ. ಗುಣತ್ರಯಗಳ ಬಗ್ಗೆ ಒಂದು ಉದಾಹರಣೆಯನ್ನು ನೀಡುವ ಮೂಲಕ ಸ್ವರ್ಣವಲ್ಲೀ ಶ್ರೀಗಳು ಅರ್ಥೈಸಿದರು.

ಮನೆಯಲ್ಲಿ ಬಾಲಕರು ರಾತ್ರಿ ಊಟ ಮಾಡಿ ಅಧ್ಯಯನಕ್ಕೆ ಕುಳಿತಾಗ ತೂಕಡಿಸುತ್ತಾರೆ. ಆಗ ಸ್ವಲ್ಪ ಎದ್ದು ಓಡಾಡಿದರೆ ನಿದ್ದೆ ದೂರವಾಗಿ ಓದಲು ಆಸಕ್ತಿ ಬರುತ್ತದೆ. ಇಲ್ಲಿ ಮೂರು ಗುಣಗಳು ಗೋಚರವಾಗುತ್ತವೆ. ಮೊದಲಿಗೆ, ನಿದ್ದೆ ಬಂದದ್ದು ತಮೋಗುಣ, ಎದ್ದು ಓಡಾಡಿದ ಚಟುವಟಿಕೆ ರಜೋಗುಣದ ಲಕ್ಷಣ, ನಂತರದಲ್ಲಿ ಮನಸ್ಸು ಹಗುರವಾದಾಗ ಓದುವ ಕುರಿತು ಆಸಕ್ತಿ ಬಂದದ್ದು ಸತ್ವಗುಣಕ್ಕೆ ಸಂಬಂಧಪಡುತ್ತದೆ. ಮನಸ್ಸು ಪರಿಶುದ್ಧವಾಗಬೇಕು ಎಂದರೆ ಈ ಮೂರು ಗುಣಗಳು ಒಂದು ಹದದಲ್ಲಿ ಬೆರೆಯಬೇಕು. ಅಂಥ ಮನಸ್ಸು ಮುಕ್ತಿ ಹೊಂದುವ ಹಾದಿಯನ್ನು ಕಂಡುಕೊಳ್ಳುತ್ತದೆ ಎಂದು ಶ್ರೀಗಳು ಆಶೀರ್ನುಡಿಗಳನ್ನು ಕರುಣಿಸಿದರು.

ಮುಕ್ತಿಗೆ ಭಕ್ತಿಮಾರ್ಗವೇ ಸರಿ:

ಮನಸ್ಸಿನ ಬಂಧನದಿಂದ ಬಿಡುಗಡೆ ಹೊಂದಲು ಸಾಮಾನ್ಯರು ಕೂಡ ಅನುಸರಿಸಬಹುದಾದ ಸುಲಭವಾದ ಹಾಗೂ ಶ್ರೇಷ್ಠವಾದ ಮಾರ್ಗ ಎಂದರೆ ಅದು ಭಕ್ತಿಮಾರ್ಗ. ಭಗವಂತನಲ್ಲಿ ಅಚಲವಾದ ಭಕ್ತಿಯನ್ನು ಬೆಳೆಸಿಕೊಳ್ಳುವ ಮೂಲಕ ಭವಬಂಧನದಿಂದ ಮುಕ್ತರಾಗಿ ಮೋಕ್ಷವನ್ನು ಹೊಂದಬಹುದು ಎಂದು ಶ್ರೀಗಳು ವಿವರಿಸಿದರು.

ಈ ವೇಳೆ ಗುಂದ ಹಾಗೂ ಚಾಪಖಂಡ ಭಾಗದಿಂದ ಆಗಮಿಸಿದ ಶಿಷ್ಯಭಕ್ತರು ಕುಂಕುಮಾರ್ಚನೆ, ಗಾಯತ್ರಿ ಜಪ, ಶ್ರೀಗಳವರ ಭಿಕ್ಷೆ ಪಾದಪೂಜೆ ಮುಂತಾದ ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು.

ಇದನ್ನೂ ಓದಿ | ಸ್ವರ್ಣವಲ್ಲೀ ಶ್ರೀಗಳ 32ನೇ ಚಾತುರ್ಮಾಸ್ಯ ವ್ರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ರಾಯಚೂರಲ್ಲಿ ಗಾಳಿಗೆ ಮಳೆಗೆ ಹಾರಿಹೋದ ಜೋಪಡಿಗಳು

ರಾಯಚೂರು ಜಿಲ್ಲೆಯಲ್ಲಿ ತಡರಾತ್ರಿ ಗಾಳಿ ಸಹಿತ ಭಾರಿ ಮಳೆಗೆ ಲಿಂಗಸಗೂರಿನಲ್ಲಿ ಜೋಪಡಿಗಳು ಹಾರಿಹೋಗಿದೆ. ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಜನರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 50 ಕ್ಕೂ ಹೆಚ್ಚು ಜೋಪಡಿಗಳಿಗೆ ಹಾನಿಯಾಗಿದೆ. ಸೂರುಯಿಲ್ಲದೆ ಬುಡ್ಗ ಜಂಗಮ ಸಮುದಾಯದವರು ಕಂಗಲಾಗಿದ್ದಾರೆ. ಜೋಪಡಿಗಳಿಗೆ ಹಾನಿಯಾದರೂ,ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಬುಡ್ಗ ಜಂಗಮ ಸಮುದಾಯದವರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಬಿತ್ತನೆ ಕಾರ್ಯ ಚುರುಕು

ಮುಂಗಾರು ಪೂರ್ವ ಮಳೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಮುಂಗಾರಿನ ಬೆಳೆಗಳನ್ನು ಬಿತ್ತುವ ಕಾರ್ಯ ಆರಂಭವಾಗಿದೆ. ಧಾರವಾಡ ಗ್ರಾಮೀಣ ಹಾಗೂ ಜಿಲ್ಲೆಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಕಡಲೆ, ಶೇಂಗಾ ಇತ್ಯಾದಿ ಬೆಳೆಗಳನ್ನು ರೈತರು ಬಿತ್ತುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಕಳೆದ ವರ್ಷ ಬರ ಹಿನ್ನೆಲೆ ಈ ಮುಂಗಾರು ಪೂರ್ವವೇ ಬಿತ್ತನೆಗೆ ಸಿದ್ಧತೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

physical Abuse : ಮಗನ ಕಾಮಚೇಷ್ಠೆಗೆ ತಾಯಿ ಸಾಥ್‌; ಬೆತ್ತಲೆ ಫೋಟೊ ತೋರಿ ಬೆದರಿಸುತ್ತಿದ್ದ ಕಾಮುಕರಿಬ್ಬರು ಅರೆಸ್ಟ್‌

physical Abuse : ಹುಡುಗಿಯರ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ತೋರಿಸಿ ಬೆದರಿಸಿ ಅತ್ಯಾಚಾರವೆಸಗುತ್ತಿದ್ದ ರೇಪಿಸ್ಟ್‌ನ ಬಂಧನವಾಗಿದೆ. ಅತ್ಯಾಚಾರಿ ಆರೋಪಿಯನ್ನು ವಶಕ್ಕೆ ಪಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಬಂಧನದ ಭೀತಿಯಿಂದಾಗಿ ಮತ್ತೊಬ್ಬ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

physical abuse
Koo

ಕಾರವಾರ: ಯುವತಿಯರ ಫೋಟೋಗಳನ್ನು ನಗ್ನವಾಗಿ ಎಡಿಟ್ (physical Abuse) ಮಾಡಿ, ಅತ್ಯಾಚಾರವೆಸಗುತ್ತಿದ್ದ ಕಾಮುಕರ ಗ್ಯಾಂಗ್‌ನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗೆ ಸಹಕರಿಸುತ್ತಿದ್ದ ತಾಯಿ ಪರಾರಿ ಆಗಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅರ್ಜುನ್ ಅಲಿಯಾಸ್ ಅರುಣ ಗೌಡ ಮಳಲಿ ಹಾಗೂ ಈತನ ಸಂಬಂಧಿ ಬಾಲಚಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ದುಷ್ಟರ ಗ್ಯಾಂಗ್‌ ಯುವತಿಯರನ್ನು ಕಂಡರೆ ಸಾಕು ತಮ್ಮ ಮಾತಿನ ಮೋಡಿಯಿಂದಲೇ ಅವರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಮೋಹಕ್ಕೆ ಸಿಲುಕಿದ ಯುವತಿಯರ ಜತೆಗೆ ಪ್ರೀತಿಯ ನಾಟಕವಾಡುತ್ತಿದ್ದರು. ಬಳಿಕ ಪ್ರೀತಿಯ ನೆಪದಲ್ಲಿ ಫೋಟೋ ತೆಗೆಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡುತ್ತಿದ್ದರು. ಅಶ್ಲೀಲ ಫೋಟೋಗಳನ್ನು ತೋರಿಸಿ ಬೆದರಿಸಿ ಯುವತಿಯರನ್ನು ಅತ್ಯಾಚಾರವೆಸಗುತ್ತಿದ್ದರು.

ಅರ್ಜುನ್‌ ವಿರುದ್ಧ ಶಿರಸಿ, ಬನವಾಸಿ, ಕುಂದಾಪುರ ಸೇರಿ ವಿವಿಧೆಡೆ ಯುವತಿಯರಿಗೆ ಬ್ಲ್ಯಾಕ್‌ಮೇಲ್‌ ಹಾಗೂ ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಆರೋಪಿ ಅರ್ಜುನ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಕಲ್ಲು, ಹೆಂಚು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈತನಿಗೆ ಸಾಥ್‌ ನೀಡುತ್ತಿದ್ದ ಬಾಲಚಂದ್ರ ಬಂಧನದ ಭೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಪೊಲೀಸರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಅರ್ಜುನ್‌ ವಿರುದ್ಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ತಂದೆ ಬಳಿಕ ಮಗನೂ ಅರೆಸ್ಟ್!

ಮಗನ ಕೃತ್ಯಕ್ಕೆ ತಾಯಿಯೇ ಸಾಥ್‌!

ಅತ್ಯಾಚಾರಿ ಆರೋಪಿ ಅರ್ಜುನ್‌ನಿಗೆ ತಾಯಿಯೇ ಸಾಥ್‌ ನೀಡುತ್ತಿದ್ದಳು ಎಂದು ಬಹಿರಂಗವಾಗಿದೆ. ಪೊಲೀಸರು ಬಂಧಿಸಲು ಬಂದಾಗ ಘಟನಾ ಸ್ಥಳದಿಂದ ಪರಾರಿ ಆಗಿದ್ದಾಳೆ ಎನ್ನಲಾಗಿದೆ. ಇನ್ನೂ ಅರ್ಜುನ್‌ ಸೋಶಿಯಲ್‌ ಮೀಡಿಯಾದಲ್ಲಿ ಆ್ಯಕ್ಟಿವ್‌ ಆಗಿರುವ ಕರಾವಳಿ ಮೂಲದ ಸುಂದರ ಯುವತಿಯರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಯುವತಿಯರ ಜತೆಗೆ ಚಾಟಿಂಗ್‌ ಮಾಡುತ್ತಾ ಪಟಾಯಿಸುತ್ತಿದ್ದ.

ಈತನೊಂದಿಗೆ ಚಾಟಿಂಗ್‌ ಸಿಲುಕಿದರೆ ಮುಗಿದೆ ಹೋಯಿತು. ಆತ್ಮೀಯತೆಯನ್ನು ಬೆಳೆಸಿಕೊಂಡು ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಹೊರಗೆ ಸುತ್ತಾಡಲು ಕರೆದುಕೊಂಡು ಹೋಗಿ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ. ಮಾತ್ರವಲ್ಲ ಆತನೊಂದಿಗೆ ಇದ್ದಾಗಲೇ ಖಾಸಗಿ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ. ಇದಾದ ಕೆಲ ದಿನಗಳೇ ತನ್ನ ನಿಜವಾದ ಮುಖವನ್ನು ತೋರಿಸುತ್ತಿದ್ದ.

ಈತನನ್ನು ನಂಬಿದ ಯುವತಿಯರಿಗೆ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೆದರಿಸುತ್ತಿದ್ದ. ಬೆದರಿಸಿ ಪದೆ ಪದೇ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ. ಹೀಗೆ ಅರ್ಜುನ್‌ಗೌಡನ ಕಾಮಚೇಷ್ಟೆಗೆ ಸಂಬಂಧಿಕ ಬಾಲಚಂದ್ರಗೌಡ ಎಂಬಾತನು ಸಾಥ್‌ ನೀಡುತ್ತಿದ್ದ. ಕೆಲವರಿಂದ ಹಣ ವಸೂಲಿ ಮಾಡುತ್ತಿದ್ದ ಕಾರಣಕ್ಕೆ ತಾಯಿ ನಾಗವೇಣಿ ಲಕ್ಷ್ಮಣಗೌಡ ಕೂಡ ಸಾಥ್‌ ನೀಡುತ್ತಿದ್ದಳು..

ಕರಾವಳಿಯಲ್ಲಿ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಹಲ್ಲೆ ಮಾಡಿದ್ದಾರೆ. ಆರೋಪಿ ಅರ್ಜುನ್‌ನನ್ನು ಬಂಧಿಸಿದರೆ, ಇತ್ತ ತಪ್ಪಿಸಿಕೊಂಡು ಓಡಿ ಹೋದ ಬಾಲಚಂದ್ರ ಇಲಿ ಪಾಷಾಣ ಸೇವಿಸಿ, ಆಸ್ಪತ್ರೆಗೆ ದಾಖಲಾಗಿದ್ದಾನೆ. ಇತ್ತ ಮಗನ ಆಟಕ್ಕೆ ಸಹಾಯ ಮಾಡಿದ್ದ ತಾಯಿ ನಾಗವೇಣಿ ಪರಾರಿ ಆಗಿದ್ದಾಳೆ. ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಸೋಮವಾರವು (Heavy Rain) ಮುಂದುವರಿಯಲಿದೆ.ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Rain News) ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯೊಂದಿಗೆ ಗುಡುಗು ಸಹಿತ ಮಿಂಚಿನೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Rainfall Expect: ನಕ್ಷತ್ರಗಳ ಪ್ರಕಾರ ಈ ವರ್ಷ ಯಾವಾಗ ಮಳೆ ಬರಬಹುದು? ಇಲ್ಲಿದೆ ಪಕ್ಕಾ ಲೆಕ್ಕಾಚಾರ!

ಬಿಸಿಲಿನ ತಾಪ ದಿನೇದಿನೇ ಹೆಚ್ಚಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ತಲೆ ಎತ್ತಿ ಆಕಾಶದತ್ತ (sky) ನೋಡಿ ಒಂದೆರಡು ಹನಿ ಮಳೆ (Rainfall Expect) ಇವತ್ತಾದರೂ ಸುರಿಯಬಾರದೇ ಎನ್ನುವಂತಾಗಿದೆ. ಈ ನಡುವೆ ಅಗತ್ಯ ಕೆಲಸಗಳಿಗೆ ಮಾತ್ರವಲ್ಲ ಕೆಲವೆಡೆ ಕುಡಿಯಲೂ ನೀರಿಲ್ಲ. ಇನ್ನು ತೋಟ, ಗದ್ದೆಗಳಲ್ಲಿನ ಫಸಲು ಬಿಸಿಲಿನ ಬೇಗೆಯಿಂದ ಸುಟ್ಟು ಹೋದಂತಾಗಿದೆ. ಈ ಬಾರಿ ಏಪ್ರಿಲ್ (april) ಮತ್ತು ಮೇ (may) ತಿಂಗಳ ತೀವ್ರವಾದ ಶಾಖವನ್ನು ಗಮನಿಸಿದರೆ ಈಗಲೇ ಹೀಗೆ ಇನ್ನು ಭವಿಷ್ಯದಲ್ಲಿ ಹೇಗಿರಬಹುದು ಎನ್ನುವ ಚಿಂತೆ ಎಂಥವರನ್ನೂ ಕಾಡದೇ ಇರಲಾರದು.

ಮಳೆ (rain) ಯಾವಾಗ ಬರುತ್ತದೆ ಎನ್ನುವುದನ್ನು ಈಗ ವಿಜ್ಞಾನಿಗಳು (Scientist) ನಿಖರವಾಗಿ ಹೇಳುತ್ತಾರೆ. ಆದರೆ ಹಿಂದಿನ ಕಾಲದಲ್ಲಿ ನಕ್ಷತ್ರಗಳ (star) ಚಲನೆಯನ್ನು ಆಧರಿಸಿ ಮಳೆ ಯಾವಾಗ ಬರಬಹುದು ಎನ್ನುವುದನ್ನು ನಮ್ಮ ಹಿರಿಯರು ಅಂದಾಜು ಮಾಡುತ್ತಿದ್ದರು.

ಮಳೆಯ ಮುನ್ಸೂಚನೆ

ಆಕಾಶದಲ್ಲಿ ಆಗಾಗ ಕಾಣಿಸುವ ಮೋಡಗಳು ಮಳೆಯ ಮುನ್ಸೂಚನೆ ನೀಡಿದರೂ ಕೆಲವೇ ಕ್ಷಣಗಳಲ್ಲಿ ಮೋಡ ಮರೆಯಾಗಿ ಬೇಸರ ಮೂಡುವಂತೆ ಮಾಡುತ್ತದೆ. ಆದರೆ ನಕ್ಷತ್ರಗಳು ನಿಖರವಾಗಿ ಮಳೆಯ ಮುನ್ಸೂಚನೆಯನ್ನು ನೀಡುತ್ತವೆ. ಹಿಂದೆ ನಮ್ಮ ಹಿರಿಯರು ಈ ನಕ್ಷತ್ರಗಳನ್ನೇ ನೋಡಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ನಿಖರವಾಗಿ ಹೇಳುತ್ತಿದ್ದರು.

ಯಾವ ನಕ್ಷತ್ರಗಳು?

ಅಶ್ವಿನಿಯಿಂದ ವಿಶಾಖ ನಕ್ಷತ್ರದವರೆಗೆ ಗುರುತಿಸಲಾದ ಮಳೆ ನಕ್ಷತ್ರಗಳು ಸಾಂಪ್ರದಾಯಿಕವಾಗಿ ಜಾನಪದ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಮಳೆಯನ್ನು ಸೂಚಿಸುತ್ತವೆ ಎಂದೇ ನಂಬಲಾಗಿದೆ. ಅನಾದಿ ಕಾಲದಿಂದಲೂ ಈ ನಕ್ಷತ್ರಗಳು ರೈತರಿಗೆ ಮಳೆಯ ಮಾಹಿತಿ ನೀಡುತ್ತಿದ್ದವು.

ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದರೆ ಶತಮಾನಗಳಿಗಿಂತಲೂ ಹಿಂದೆ ನಕ್ಷತ್ರ ನೋಡಿಯೇ ಮಳೆಯ ಸೂಚನೆ ಪಡೆಯುತ್ತಿದ್ದರು, ಈ ಬಾರಿ ಮಳೆಯ ನಕ್ಷತ್ರಗಳು ಏನು ಹೇಳುತ್ತವೆ ಎಂಬುದರ ಕುರಿತಾದ ಒಂದು ಕಿರು ಮಾಹಿತಿ ಇಲ್ಲಿದೆ.

ಏಪ್ರಿಲ್‌ನಲ್ಲಿ ಮಳೆ ಸಾಧ್ಯತೆ ಕಡಿಮೆ

ಏಪ್ರಿಲ್ 13ರಂದು ಪ್ರಾರಂಭವಾಗುವ ಅಶ್ವಿನಿ ನಕ್ಷತ್ರವು ಆಗಾಗ ಸಾಮಾನ್ಯ ಮತ್ತು ಸಣ್ಣ ಮಳೆಯನ್ನು ತರುವ ನಿರೀಕ್ಷೆಯಿದೆ. ಏಪ್ರಿಲ್ 27ರಂದು ಪ್ರಾರಂಭವಾಗುವ ಭರಣಿ ನಕ್ಷತ್ರವು ಸಾಮಾನ್ಯ ಮಳೆಯನ್ನು ತರುತ್ತದೆ. ಆದರೂ ಈ ಬಾರಿ ಏಪ್ರಿಲ್ ನಲ್ಲಿ ಈ ಮಳೆ ನಕ್ಷತ್ರಗಳು ಮಳೆಯಾಗುವ ಸೂಚನೆಯನ್ನು ಖಾತ್ರಿಪಡಿಸಿಲ್ಲ. ಹೀಗಾಗಿ ಏಪ್ರಿಲ್ ನಲ್ಲಿ ಮಳೆ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನ.

ಮೇ 11ರ ಬಳಿಕ ಮಳೆ ಸಾಧ್ಯತೆ

ಮೇ 11ರ ಬಳಿಕ ಕೃತ್ತಿಕಾ ನಕ್ಷತ್ರವು ಮಳೆ ಸೂಚನೆ ನೀಡಿದೆ. ಮೇ 24ರಿಂದ ರೋಹಿಣಿ ನಕ್ಷತ್ರವು ಸಾಮಾನ್ಯ ಮಳೆ ತರುವ ನಿರೀಕ್ಷೆಯಿದೆ. ಆದರೂ ಇದು ಧರೆಯ ಬಿಸಿಲಿನ ತಾಪವನ್ನು ಸಂಪೂರ್ಣ ಕಡಿಮೆ ಮಾಡುತ್ತದೆ ಎಂದು ಹೇಳಲಾಗದು.

ಜೂನ್ 21ರಿಂದ ಪುನರ್ವಸು, ಜುಲೈ 5ರಿಂದ ಆರ್ಧ್ರ, ಜುಲೈ 19 ರಿಂದ ಪುಷ್ಯ, ಆಗಸ್ಟ್ 2ರಿಂದ ಆಶ್ಲೇಷ, ಜುಲೈ 16 ರಿಂದ ಮಾಘ ಮತ್ತು ಜುಲೈ 30 ರಿಂದ ಹಸ್ತ ನಕ್ಷತ್ರಗಳು ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಇದರ ಭವಿಷ್ಯವನ್ನು ಆಧರಿಸಿ ಸೆಪ್ಟೆಂಬರ್ 13 ರಿಂದ ಉತ್ತರ ಮಳೆ ನಿರೀಕ್ಷಿಸಲಾಗಿದೆ, ಹಸ್ತ ಸೆಪ್ಟೆಂಬರ್ 26 ರಿಂದ, ಅಕ್ಟೋಬರ್ 10 ರಿಂದ ಚಿತ್ರ ಮಳೆ, ಅಕ್ಟೋಬರ್ 23 ರಿಂದ ಸ್ವಾತಿ ಮಳೆ ಮತ್ತು ನವೆಂಬರ್ 1 ರಿಂದ ವಿಶಾಖ ಮಳೆಯಾಗುವ ನಿರೀಕ್ಷೆ ಇದೆ.

ಹಿಂದೂ ಜ್ಯೋತಿಷ್ಯದಲ್ಲಿ ಬಳಸಲಾಗುವ ಒಟ್ಟು 27 ನಕ್ಷತ್ರಗಳಿವೆ. ಇದು ಒಂದು ವರ್ಷದಲ್ಲಿ ಆಕಾಶಗೋಳದಾದ್ಯಂತ ಸೂರ್ಯನ ದಾರಿಯನ್ನು ನಿರ್ಧರಿಸತ್ತದೆ. ಹಿಂದೂ ಸಂಸ್ಕೃತಿಯಲ್ಲಿ ಜ್ಯೋತಿಷ್ಯ, ಜಾತಕ ಹೊಂದಾಣಿಕೆ, ಆಚರಣೆಗಳು ಮತ್ತು ಶುಭ ಸಮಾರಂಭಗಳ ಸಮಯದಲ್ಲಿ ನಕ್ಷತ್ರಗಳ ಪಾತ್ರ ಮಹತ್ವದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ29 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ53 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌