Gautam Gambhir : ಗಂಭೀರ್​ ನಗುವಿಗೆ ಗಂಭೀರವಾಗಿ ತಿರುಗೇಟು ಕೊಟ್ಟ ಶ್ರೀಶಾಂತ್​! - Vistara News

ಕ್ರಿಕೆಟ್

Gautam Gambhir : ಗಂಭೀರ್​ ನಗುವಿಗೆ ಗಂಭೀರವಾಗಿ ತಿರುಗೇಟು ಕೊಟ್ಟ ಶ್ರೀಶಾಂತ್​!

ನೀವು ಕ್ರೀಡಾ ಸ್ಫೂರ್ತಿಯ ಎಲ್ಲೆಗಳನ್ನು ಮೀರಿದ್ದೀರಿ ಎಂದು ಗಂಭೀರ್​ಗೆ (Gautam Gambhir) ಪ್ರತ್ಯುತ್ತರ ಕೊಟ್ಟಿರುವ ಶ್ರೀಶಾಂತ್​ ಸುದೀರ್ಘ ಸಂದೇಶವನ್ನು ಹಾಕಿದ್ದಾರೆ.

VISTARANEWS.COM


on

S Sreesanth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶ್ರೀಶಾಂತ್ ಮತ್ತು ಗೌತಮ್ ಗಂಭೀರ್ ನಡುವಿನ ಹೋರಾಟ ಮುಂದುವರಿದಿದೆ. ಗೌತಮ್ ಗಂಭೀರ್ ಅವರು ನಗುವಿನ ಫೋಟೋ ಹಾಕಿಕೊಂಡು ಮಾಡಿದ್ದ ರಹಸ್ಯ ಪೋಸ್ಟ್​​ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶ್ರೀಶಾಂತ್ ತಿರುಗೇಟು ಕೊಟ್ಟಿದ್ದಾರೆ. ಭಾರತದ ಮಾಜಿ ಬ್ಯಾಟರ್​​ ‘ಕ್ರೀಡಾಸ್ಫೂರ್ತಿಯ ಗಡಿಗಳನ್ನು ಮೀರಿದ್ದಾರೆ’ ಎಂದು ಶ್ರೀಶಾಂತ್​ ಹೇಳುವ ಮೂಲಕ ಆರೋಪ ಮಾಡಿದ್ದಾರೆ.

ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಲೆಜೆಂಡ್ಸ್ ಲೀಗ್ ಕ್ರಿಕೆಟ್ (ಎಲ್ಎಲ್ ಸಿ) ಪಂದ್ಯದ ವೇಳೆ ಇವರಿಬ್ಬರು ಮಾತಿನ ಚಕಮಕಿಯಲ್ಲಿ ನಡೆಸಿದ್ದರು. ಲೈವ್ ಟಿವಿಯಲ್ಲಿ ‘ಎಫ್ *** ಆಫ್ ಫಿಕ್ಸರ್’ ಎಂಬ ಅವಹೇಳನಕಾರಿ ಪದವನ್ನು ಬಳಸಿ ಗಂಭೀರ್ ತಮ್ಮನ್ನು ನಿಂದಿಸಿದ್ದಾರೆ ಎಂದು ಶ್ರೀಶಾಂತ್ ಆರೋಪಿಸಿದ್ದರು.

“ನೀವು ಕ್ರೀಡಾಸ್ಫೂರ್ತಿ ಹಾಗು ಸಹೋದರತ್ವದ ಗಡಿಗಳನ್ನು ಮೀರಿದ್ದೀರಿ. ಎಲ್ಲಕ್ಕಿಂತ ಹೆಚ್ಚಾಗಿ ನೀವು ಜನರನ್ನು ಪ್ರತಿನಿಧಿಸುತ್ತೀರಿ. ಆದರೂ, ನೀವು ಪ್ರತಿಯೊಬ್ಬ ಕ್ರಿಕೆಟಿಗನೊಂದಿಗೆ ಸಂಘರ್ಷದಲ್ಲಿ ತೊಡಗುವುದನ್ನು ಮುಂದುವರಿಸುತ್ತಿದ್ದೀರಿ. ನಿಮಗೆ ಏನಾಗಿದೆ? ನಗುವ ಚಿತ್ರ ಹಾಕಿದ್ದೀರಿ| ನೀವು ನನ್ನನ್ನು ಫಿಕ್ಸರ್ ಎಂದು ಹಣೆಪಟ್ಟಿ ಕಟ್ಟಿದ್ದೀರಾ? ಗಂಭೀರವಾಗಿ? ನೀವು ಸರ್ವೋಚ್ಚ ನ್ಯಾಯಾಲಯಕ್ಕಿಂತ ಮೇಲಿದ್ದೀರಾ? ಈ ರೀತಿ ಮಾತನಾಡಲು ಮತ್ತು ನಿಮಗೆ ಬೇಕಾದುದನ್ನು ಹೇಳಲು ನಿಮಗೆ ಅಧಿಕಾರವಿಲ್ಲ. ನೀವು ಅಂಪೈರ್ ಗಳನ್ನು ಮೌಖಿಕವಾಗಿ ನಿಂದಿಸಿದ್ದೀರಿ, ಆದರೂ ನೀವು ನಗುವ ಬಗ್ಗೆ ಮಾತನಾಡುತ್ತೀರಾ?

“ನೀವು ಕ್ರೀಡಾಸ್ಫೂರ್ತಿ ಹಾಗು ಸಹೋದರತ್ವದ ಗಡಿಗಳನ್ನು ಮೀರಿದ್ದೀರಿ. ಎಲ್ಲಕ್ಕಿಂತ ಹೆಚ್ಚಾಗಿ ನೀವು ಜನರನ್ನು ಪ್ರತಿನಿಧಿಸುತ್ತೀರಿ. ಆದರೂ, ನೀವು ಪ್ರತಿಯೊಬ್ಬ ಕ್ರಿಕೆಟಿಗನೊಂದಿಗೆ ಸಂಘರ್ಷದಲ್ಲಿ ತೊಡಗುವುದನ್ನು ಮುಂದುವರಿಸುತ್ತಿದ್ದೀರಿ. ನಿಮಗೆ ಏನಾಗಿದೆ? ನಗುವ ಚಿತ್ರ ಹಾಕಿದ್ದೀರಿ| ನೀವು ನನ್ನನ್ನು ಫಿಕ್ಸರ್ ಎಂದು ಹಣೆಪಟ್ಟಿ ಕಟ್ಟಿದ್ದೀರಾ? ಗಂಭೀರವಾಗಿ? ನೀವು ಸರ್ವೋಚ್ಚ ನ್ಯಾಯಾಲಯಕ್ಕಿಂತ ಮೇಲಿದ್ದೀರಾ? ಈ ರೀತಿ ಮಾತನಾಡಲು ಮತ್ತು ನಿಮಗೆ ಬೇಕಾದುದನ್ನು ಹೇಳಲು ನಿಮಗೆ ಅಧಿಕಾರವಿಲ್ಲ. ನೀವು ಅಂಪೈರ್ ಗಳನ್ನು ಮೌಖಿಕವಾಗಿ ನಿಂದಿಸಿದ್ದೀರಿ. ಆದರೂ ನೀವು ನಗುವಿನ ಮುಖವಾಡ ತೊಟ್ಟಿದ್ದೀರಿ ಎಂದು ಶ್ರೀಶಾಂತ್ ಸೋಶಿಯಲ್ ಮೀಡಿಯಾಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

ನೀವು ಅಹಂಕಾರಿ ಮತ್ತು ಸಂಪೂರ್ಣವಾಗಿ ಗೌರವ ಕಳೆದುಕೊಂಡ ವ್ಯಕ್ತಿಯಾಗಿದ್ದೀರಿ. ನಿಮ್ಮನ್ನು ಬೆಂಬಲಿಸಿದವರಿಂದಲೂ ಯಾವುದೇ ಗೌರವ ಪಡೆಯಲು ಅನರ್ಹರಾಗಿದ್ದೀರಿ. ನಿನ್ನೆಯವರೆಗೆ, ನಾನು ಯಾವಾಗಲೂ ನಿಮ್ಮ ಬಗ್ಗೆ ಮತ್ತು ನಿಮ್ಮ ಕುಟುಂಬದ ಬಗ್ಗೆ ಗೌರವವನ್ನು ಹೊಂದಿದ್ದೆ. ಆದಾಗ್ಯೂ, ನೀವು “ಫಿಕ್ಸರ್” ಎಂಬ ಅವಹೇಳನಕಾರಿ ಪದವನ್ನು ಒಮ್ಮೆ ಅಲ್ಲ, ಏಳು ಅಥವಾ ಎಂಟು ಬಾರಿ ಬಳಸಿದ್ದೀರಿ. ಅಂಪೈರ್​ಗಳನು ಮತ್ತು ನನ್ನ ಕಡೆಗೆ ಎಫ್-ಪದವನ್ನು ಪದೇಪದೇ ಬಳಸಿದ್ದೀರಿ. ನನ್ನನ್ನು ಪ್ರಚೋದಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೀರಿ. ನಾನು ಸಹಿಸಿಕೊಂಡದ್ದೇನೆ. ನಿಮ್ಮನ್ನು ಎಂದಿಗೂ ಯಾರೂ ಕ್ಷಮಿಸುವುದಿಲ್ಲ. ಆಳದಲ್ಲಿ, ನೀವು ಹೇಳಿದ್ದು ಮತ್ತು ಮಾಡಿದ್ದು ತಪ್ಪು ಎಂದು ನಿಮಗೆ ತಿಳಿದಿದೆ. ದೇವರು ಸಹ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ನನಗೆ ಖಾತ್ರಿಯಿದೆ ಎಂದ ಶ್ರೀಶಾಂತ್​ ಬರೆದುಕೊಂಡಿದ್ದಾರೆ.

ಜಗಳಕ್ಕೆ ಕಾರಣವೇನು?

ಆರಂಭದಲ್ಲಿ ಇದು ಶ್ರೀಶಾಂತ್​ ಮಾಡಿದ ಕಿತಾಪತಿ ಎನ್ನಲಾಗಿತ್ತು. ಇದೇ ಕಾರಣಕ್ಕೆ ಗಂಭೀರ್​ ಅವರು ಕೆರಳಿದ್ದು ಎಂದು ಹೇಳಲಾಗಿತ್ತು. ಆದರೆ ಇದೀಗ ನೈಜ ವಿಚಾರವನ್ನು ಶ್ರೀಶಾಂತ್​ ಬಹಿರಂಗಪಡಿಸಿದ್ದಾರೆ. ಲೈವ್​ ವಿಡಿಯೊ ಮೂಲಕ ಮಾತನಾಡಿದ ಶ್ರೀಶಾಂತ್, ನಾನು ಗಂಭೀರ್​ ಅವರಿಗೆ ಒಂದು ಸಣ್ಣ ಕಟ್ಟ ಪದ ಬಳಸಿಯೂ ಬೈದಿಲ್ಲ. ಈ ವಿಚಾರ ಫೀಲ್ಡ್​ ಅಂಪೈರ್​ಗೂ ತಿಳಿದಿದೆ. ಅವರೇ ನನ್ನನ್ನು ನೋಡಿ ನೀನೊಬ್ಬ ಫಿಕ್ಸರ್​ ಎಂದು ಪದೇಪದೆ ಹೇಳುವ ಮೂಲಕ ನನ್ನನ್ನು ಹೀಯಾಳಿಸಿದರು. ಆಗ ನಾನು ಅವರ ಬಳಿ ಪ್ರಶ್ನೆ ಮಾಡಿ ಏನು ಇನ್ನೊಮ್ಮೆ ಈ ಮಾತನ್ನು ಹೇಳಿ ಎಂದು ಹೇಳುತ್ತ ಅವರ ಬಳಿಗೆ ಬಂದೆ ಈ ವೇಳೆ ಸಹ ಆಟಗಾರರ ತಡೆದರು. ನಾನು ನಿಜವಾಗಿಯೂ ಯಾವುದೇ ಕಿರಿಕ್​ ಮಾಡಿಲ್ಲ” ಎಂದು ಶ್ರೀಶಾಂತ್​ ಈ ವಿಡಿಯೊದಲ್ಲಿ ಹೇಳಿದ್ದಾರೆ.

“ಗಂಭೀರ್​ ನನ್ನನ್ನು ಫೀಕ್ಸರ್​ ಎಂದು ಕರೆಯುವ ಜತೆಗೆ ಇನ್ನೂ ಕೆಲ ಅವಾಚ್ಯ ಪದಗಳಿಂದ ನಿಂದಿಸಿದರು. ನಾನ್ನ ಮೇಲಿದ್ದ ಫಿಕ್ಸಿಂಗ್ ಆರೋಪ ಸುಳ್ಳು ಎನ್ನುವುದು ಈಗಾಗಕಲೇ ಸಾಭೀತಾಗಿದೆ. ನಾನು ನನ್ನ ಕುಟುಂಬದ ಜತೆ ಮಾನ್ಯವಾಗಿ ಜೀವಿಸುವ ವ್ಯಕ್ತಿಯಾಗಿದ್ದೇನೆ” ಎಂದು ಶ್ರೀಶಾಂತ್​ ಹೇಳಿದ್ದಾರೆ.

ಇದನ್ನೂ ಓದಿ Gautam Gambhir: ʼಯಾಕೋ ಗುರಾಯಿಸ್ತೀಯಾ?ʼ ಕ್ರೀಡಾಂಗಣದಲ್ಲಿ ಶ್ರೀಶಾಂತ್-‌ ಗಂಭೀರ್ ಕಿರಿಕ್‌

ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್‌, ಐಪಿಎಲ್ ಪಂದ್ಯದ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪಕ್ಕೆ ಗುರಿಯಾದ ಬಳಿಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾಗಿದ್ದರು. ಕೆಲವು ವರ್ಷಗಳ ಹಿಂದೆ ನ್ಯಾಯಾಲಯ ಈ ನಿಷೇಧವನ್ನು ತೆಗೆದುಹಾಕಿದ್ದು, ಶ್ರೀಶಾಂತ್ ನಂತರ ವಿವಿಧ ಲೀಗ್‌ಗಳನ್ನು ಆಡುತ್ತಿದ್ದಾರೆ. ಪಂದ್ಯದ ವೇಳೆ ಗಂಭೀರ್ ತನಗೆ ನಿಖರವಾಗಿ ಏನು ಹೇಳಿದರು ಎಂಬುದನ್ನು ಬಹಿರಂಗಪಡಿಸುವುದಾಗಿ ಶ್ರೀಶಾಂತ್‌ ಹೇಳಿದ್ದು, ಈ ಮಾತುಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ನೋವುಂಟು ಮಾಡಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

Team India: ಅಬುಧಾಬಿಯ ಮೆಡಿಯೋರ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಂಭೀರ್, ಇತ್ತೀಚೆಗೆ ಕೆಕೆಆರ್​ ತಂಡಕ್ಕೆ ಮೂರನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಮಾರ್ಗದರ್ಶನ ನೀಡಿದ ಬಗ್ಗೆ ಮಾತನಾಡಿದರು. ಅವರು ಯುವ ಕ್ರೀಡಾ ಉತ್ಸಾಹಿಗಳೊಂದಿಗೆ ಮಾತುಕತೆ ನಡೆಸಿದರು. ಭಾರತೀಯ ಕ್ರಿಕೆಟ್ ಬಗ್ಗೆ ತಮ್ಮ ಆಕಾಂಕ್ಷೆಗಳು ಮತ್ತು ದೃಷ್ಟಿಕೋನವನ್ನು ಹಂಚಿಕೊಂಡರು. ಈ ವೇಳೆ ಅವರು ಭಾರತ ತಂಡದ ಕೋಚ್ ಆಗುವ ಬಗ್ಗೆಯೂ ಮಾತನಾಡಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮುಂದಿನ ಕೋಚ್ ಯಾರು ಆಗುತ್ತಾರೆ ಎಂಬ ಕೌತುಕದ ನಡುವೆಯೂ ಗೌತಮ್ ಗಂಭೀರ್ ಅವರ ಹೆಸರು ಮೊದಲಾಗಿ ಕೇಳಿ ಬರುತ್ತಿದೆ. ಆದರೆ, ಅವರಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹಲವಾರು ದಿನಗಳಿಂದ ಇದೇ ಊಹಾಪೋಹ ನಡೆಯುತ್ತಿದೆ. ಏತನ್ಮಧ್ಯೆ, ಭಾರತದ ಮಾಜಿ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅವರು ಭಾರತೀಯ ರಾಷ್ಟ್ರೀಯ ಪುರುಷರ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ನನ್ನ ವೃತ್ತಿಜೀವನದ ಅತ್ಯುನ್ನತ ಗೌರವ ಎಂಬದಾಗಿಯೂ ಹೇಳಿದ್ದಾರೆ.

ಅಬುಧಾಬಿಯ ಮೆಡಿಯೋರ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಂಭೀರ್, ಇತ್ತೀಚೆಗೆ ಕೆಕೆಆರ್​ ತಂಡಕ್ಕೆ ಮೂರನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಮಾರ್ಗದರ್ಶನ ನೀಡಿದ ಬಗ್ಗೆ ಮಾತನಾಡಿದರು. ಅವರು ಯುವ ಕ್ರೀಡಾ ಉತ್ಸಾಹಿಗಳೊಂದಿಗೆ ಮಾತುಕತೆ ನಡೆಸಿದರು. ಭಾರತೀಯ ಕ್ರಿಕೆಟ್ ಬಗ್ಗೆ ತಮ್ಮ ಆಕಾಂಕ್ಷೆಗಳು ಮತ್ತು ದೃಷ್ಟಿಕೋನವನ್ನು ಹಂಚಿಕೊಂಡರು. ಈ ವೇಳೆ ಅವರು ಭಾರತ ತಂಡದ ಕೋಚ್ ಆಗುವ ಬಗ್ಗೆಯೂ ಮಾತನಾಡಿದ್ದಾರೆ.

ಭಾರತ ಹಿರಿಯರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಬದಲಿಗೆ ಗಂಭೀರ್ ಅವರನ್ನು ನೇಮಕ ಮಾಡಲಾಗುತ್ತಿದೆ ಎಂಬ ಸುದ್ದಿಗಳಿವೆ. ಐಪಿಎಲ್ ಫ್ರಾಂಚೈಸಿ ನೈಟ್ ರೈಡರ್ಸ್​ಗೆ ಇತ್ತೀಚಿನ ಬದ್ಧತೆಯ ಹೊರತಾಗಿಯೂ ವಿಶ್ವಕಪ್ ವಿಜೇತ ಮಾಜಿ ಆರಂಭಿಕ ಆಟಗಾರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ. ದ್ರಾವಿಡ್ ಅವರ ಅಧಿಕಾರಾವಧಿ ಜೂನ್ ನಲ್ಲಿ ಕೊನೆಗೊಳ್ಳಲಿರುವುದರಿಂದ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಉನ್ನತ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿತ್ತು.

ನಾನು ಭಾರತ ತಂಡಕ್ಕೆ ತರಬೇತುದಾರನಾಗಲು ಇಷ್ಟಪಡುತ್ತೇನೆ. ನಿಮ್ಮ ರಾಷ್ಟ್ರೀಯ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವ ಇನ್ನೊಂದಿಲ್ಲ. ನೀವು ವಿಶ್ವದಾದ್ಯಂತ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುತ್ತಿದ್ದೀರಿ ಮತ್ತು ನೀವು ಭಾರತವನ್ನು ಪ್ರತಿನಿಧಿಸಿದಾಗ ಅದಕ್ಕಿಂತ ಗೌರವ ಇನ್ನೇನು?” ಎಂದು ಗಂಭೀರ್ ಎನ್​ಐ ಜತೆ ಮಾತನಾಡುತ್ತಾ ಹೇಳಿದ್ದಾರೆ.

ವಿಶ್ವ ಕಪ್​​ನಲ್ಲಿ ಯಶಸ್ಸನ್ನು ಸಾಧಿಸಲು ಸಾಮೂಹಿಕ ಪ್ರಯತ್ನವನ್ನು ಗಂಭೀರ್ ಒತ್ತಿಹೇಳಿದರು. ವಿಶೇಷವಾಗಿ ಅಪೇಕ್ಷಿತ ಕ್ರಿಕೆಟ್ ವಿಶ್ವಕಪ್ ಅನ್ನು ಉಲ್ಲೇಖಿಸಿದರು.”ಭಾರತ ವಿಶ್ವಕಪ್ ಗೆಲ್ಲಲು ಸಹಾಯ ಮಾಡುವುದು ನಾನಲ್ಲ. 140 ಕೋಟಿ ಭಾರತೀಯರು ಭಾರತಕ್ಕೆ ವಿಶ್ವಕಪ್ ಗೆಲ್ಲಲು ಸಹಾಯ ಮಾಡುತ್ತಾರೆ. ಪ್ರತಿಯೊಬ್ಬರೂ ನಮಗಾಗಿ ಪ್ರಾರ್ಥಿಸಲು ಪ್ರಾರಂಭಿಸಿದರೆ ಮತ್ತು ನಾವು ಆಡಲು ಮತ್ತು ಪ್ರತಿನಿಧಿಸಲು ಪ್ರಾರಂಭಿಸಿದರೆ, ಭಾರತವು ವಿಶ್ವಕಪ್ ಗೆಲ್ಲುತ್ತದೆ, “ಎಂದು ಅವರು ಹೇಳಿದರು.

ಇದನ್ನೂ ಓದಿ: T20 World Cup 2024 : ಒಮಾನ್ ವಿರುದ್ಧ ಹೊಸ ದಾಖಲೆ ಬರೆದ ನಮೀಬಿಯಾ ತಂಡದ ರುಬೆನ್ ಟ್ರಂಪೆಲ್ಮನ್

ಮಾಜಿ ಆರಂಭಿಕ ಬ್ಯಾಟ್ಸ್ಮನ್ ಆಟವನ್ನು ಆಡುವ ತಮ್ಮ ಯೋಚನೆಗಳನ್ನು ಹಂಚಿಕೊಂಡರು. ನಿರ್ಭೀತ ವಿಧಾನದ ಮಹತ್ವ ಒತ್ತಿ ಹೇಳಿದರು. ಅತ್ಯಂತ ಮುಖ್ಯವಾದ ವಿಷಯವೆಂದರೆ ನಿರ್ಭೀತರಾಗಿರುವುದು ಎಂದು ಗಂಭೀರ್ ಪ್ರತಿಪಾದಿಸಿದರು. ಗರಿಷ್ಠ ಗುರಿಯಾಗಿಸಿಕೊಂಡಿರುವ ಯಾವುದೇ ತಂಡಕ್ಕೆ ಧೈರ್ಯ ಮತ್ತು ಆತ್ಮವಿಶ್ವಾಸವು ನಿರ್ಣಾಯಕ ಅಂಶಗಳಾಗಿವೆ ಎಂದು ಸೂಚಿಸಿದರು.

ವಿಶ್ವ ಕಪ್​ ಗೆಲುವುಗಳಲ್ಲಿ ಗಂಭೀರ್​ ಪ್ರಯತ್ನ ಸ್ಮರಣೀಯ

2007ರ ಐಸಿಸಿ ಟಿ20 ವಿಶ್ವಕಪ್ ಹಾಗೂ 2011ರ ಐಸಿಸಿ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಗಂಭೀರ್ ಪ್ರಮುಖ ಪಾತ್ರ ವಹಿಸಿದ್ದರು. ಅವರ ದೃಢತೆ ಮತ್ತು ತಂತ್ರಗಾರಿಕೆಗೆ ಹೆಸರುವಾಸಿಯಾದ ಅವರು ಕೋಚಿಂಗ್ ಪಾತ್ರದಲ್ಲಿ ಸಂಭಾವ್ಯ ಪಾಲ್ಗೊಳ್ಳುವಿಕೆಯು ಪ್ರಸ್ತುತ ತಂಡಕ್ಕೆ ಅನುಭವ ಮತ್ತು ಒಳನೋಟದ ಸಂಪತ್ತನ್ನು ತರಬಹುದು.

ಗಂಭೀರ್ 2022 ರಲ್ಲಿ ಲಕ್ನೋ ಐಪಿಎಲ್ ಫ್ರಾಂಚೈಸಿಯೊಂದಿಗೆ ತಮ್ಮ ಮಾರ್ಗದರ್ಶಕ ವೃತ್ತಿಜೀವನವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರಾರಂಭಿಸಿದರು. ಅವರ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ, ಆಂಡಿ ಫ್ಲವರ್ ತರಬೇತುದಾರರಾಗಿದ್ದ ಲಕ್ನೊ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್ ತಲುಪಿತ್ತು 2024ರಲ್ಲಿ ಗಂಭೀರ್ ಕೆಕೆಆರ್​ಗೆ ಮರಳಿದ್ದರು. ಅಲ್ಲಿ ಅವರು ತಮ್ಮ ಮೂರನೇ ಐಪಿಎಲ್ ಚಾಂಪಿಯನ್​ಶಿಪ್​ ಗೆಲ್ಲಲು ನೆರವಾದರು.

Continue Reading

ಪ್ರಮುಖ ಸುದ್ದಿ

T20 World Cup 2024 : ಒಮಾನ್ ವಿರುದ್ಧ ಹೊಸ ದಾಖಲೆ ಬರೆದ ನಮೀಬಿಯಾ ತಂಡದ ರುಬೆನ್ ಟ್ರಂಪೆಲ್ಮನ್

T20 World Cup 2024 : ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಗ್ರೂಪ್ ಬಿ ಪಂದ್ಯದಲ್ಲಿ ಒಮಾನ್ ಬ್ಯಾಟಿಂಗ್ ಘಟಕವನ್ನು ಛಿದ್ರಗೊಳಿಸುವ ಮೂಲಕ 26 ವರ್ಷದ ಎಡಗೈ ವೇಗಿ ಟಿ 20 ಐ ಪಂದ್ಯದ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಸೋಮವಾರ (ಜೂನ್ 3 ರಂದು) ನಡೆದ ಟಿ20 ವಿಶ್ವಕಪ್ 2024ರ ಮೊದಲ ಪಂದ್ಯದಲ್ಲಿ ಒಮಾನ್ ತಂಡದ ವಿರುದ್ಧ ನಮೀಬಿಯಾ ತಂಡದ ರೂಬೆನ್ ಟ್ರಂಪೆಲ್ಮನ್ ಹೊಸ ಟಿ20 ದಾಖಲೆ ಬರೆದಿದ್ದಾರೆ. ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಗ್ರೂಪ್ ಬಿ ಪಂದ್ಯದಲ್ಲಿ ಒಮಾನ್ ಬ್ಯಾಟಿಂಗ್ ಘಟಕವನ್ನು ಛಿದ್ರಗೊಳಿಸುವ ಮೂಲಕ 26 ವರ್ಷದ ಎಡಗೈ ವೇಗಿ ಟಿ 20 ಐ ಪಂದ್ಯದ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನಾಯಕ ಗೆರ್ಹಾರ್ಡ್ ಎರಾಸ್ಮಸ್ ಟಾಸ್ ಗೆದ್ದ ನಂತರ ರೂಬೆನ್ ಟ್ರಂಪೆಲ್ಮನ್ ಮಾರಕ ಬೌಲಿಂಗ್ ದಾಳಿ ಮಾಡಿದರು. ಬೌಲರ್​ಗಳಿಗೆ ಸಾಕಷ್ಟು ಮಾಡುವ ಪಿಚ್​ನಲ್ಲಿ ಭರ್ಜರಿ ಬೌಲಿಂಗ್​ ಮಾಡಲು ಮುಂದಾದರು. ಪಂದ್ಯದ ಮೊದಲ ಎರಡು ಎಸೆತಗಳಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ ಮತ್ತು ನಾಯಕ ಅಕಿಬ್ ಇಲ್ಯಾಸ್ ಅವರ ದೊಡ್ಡ ವಿಕೆಟ್​​ಗಳನ್ಉ ಉರುಳಿಸುದರ. ಹೀಗಾಗಿ ನಮೀಬಿಯಾ ಉತ್ತಮ ಆರಂಭ ಪಡೆಯಿತು. ಇದು ಟ್ರಂಪೆಲ್ಮನ್ ಅವರ ಎಡಗೈ ಸ್ವಿಂಗ್ ಬೌಲಿಂಗ್ ಮಾಸ್ಟರ್ ಕ್ಲಾಸ್ ಪ್ರದರ್ಶನವಾಗಿದೆ. ಪ್ರಜಾಪತಿಯನ್ನು ಲೆಂತ್ ಎಸೆತದ ಮೂಲಕ ಹಿಮ್ಮೆಟ್ಟಿಸಿದರೆ ಇಲ್ಯಾಸ್ ಗೆ ಆಡಲು ಸಾಧ್ಯವೇ ಇಲ್ಲದ ಸ್ವಿಂಗ್ ಯಾರ್ಕರ್ ಹಾಕಿದರು. ಆದಾಗ್ಯೂ, ಟ್ರಂಪೆಲ್ಮನ್ ಹ್ಯಾಟ್ರಿಕ್ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಅವರು ತಮ್ಮ ಎರಡನೇ ಓವರ್​ನಲ್ಲಿ ವಿಕೆಟ್ ಕೀಪರ್ ನಸೀಮ್ ಅವರನ್ನು 6 ರನ್​ಗಳಿಗೆ ಔಟ್ ಮಾಡಿದರು. ಪಂದ್ಯದ ಮೂರನೇ ಓವರ್​ನಲ್ಲಿ ನಮೀಬಿಯಾ 3 ವಿಕೆಟ್ ನಷ್ಟಕ್ಕೆ 10 ರನ್ ಗಳಿಸಿತ್ತು.

ಇನ್ನಿಂಗ್ಸ್ ನ 19 ನೇ ಓವರ್ ನಲ್ಲಿ ಟೇಲ್ ಎಂಡರ್ ಕಲೀಮುಲ್ಲಾ ಅವರನ್ನು ಔಟ್ ಮಾಡುವ ಮೂಲಕ ಟ್ರಂಪೆಲ್ಮನ್ ಸೋಮವಾರ ತಮ್ಮ ಖಾತೆಗೆ ಮತ್ತೊಂದು ವಿಕೆಟ್ ಸೇರಿಸಿದರು. ಟ್ರಂಪೆಲ್ಮನ್ 21 ರನ್ಗಳಿಗೆ 4 ವಿಕೆಟ್​​ ಪಡೆದರು. ಇದು ಟಿ 20 ಐ ಕ್ರಿಕೆಟ್​​ನಲ್ಲಿ ಅವರ ವೃತ್ತಿಜೀವನದ ಅತ್ಯುತ್ತಮ ಸಾಧನೆ.

ಇದನ್ನೂ ಓದಿ: T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

ಟಿ 20 ವಿಶ್ವಕಪ್ ಪಂದ್ಯದಲ್ಲಿ ಟ್ರಂಪೆಲ್ಮನ್ ಅವರ 21 ರನ್​ಗಳಿಗೆ 4 ವಿಕೆಟ್​ ಸಾಧನೆಯೊಂದಿಗೆ ನಮೀಬಿಯಾ ತಂಡವು ಒಮಾನ್ ತಂಡವನ್ನು 19.4 ಓವರ್​​ಗಳಲ್ಲಿ 109 ರನ್​ಗಳಿಗೆ ಆಲೌಟ್ ಮಾಡಿತು.

ಬಾರ್ಬಡೋಸ್ ನಲ್ಲಿ ಒಮಾನ್ ಹೋರಾಟ

ಒಮಾನ್ ತಂಡ ತನ್ನ ಇನಿಂಗ್ಸ್​ನಲ್ಲಿ ಉತ್ತಮವಾಗಿ ಆಡಲಿಲ್ಲ. ಅವರು ನಿಯಮಿತವಾಗಿ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಲೇ ಸಾಗಿದರು. ಅನುಭವಿ ಆಲ್ರೌಂಡರ್ ಝೀಶಾನ್ ಮಕ್ಸೂದ್ ಮಾತ್ರ ಅಗ್ರ ಕ್ರಮಾಂಕದಲ್ಲಿ 100 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​​ನಲ್ಲಿ ಸ್ಕೋರ್ ಮಾಡಿದ್ದಾರೆ. ಮಕ್ಸೂದ್ 20 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರು,. ಪವರ್ ಪ್ಲೇ ನಂತರ ಒಮಾನ್ 4 ವಿಕೆಟ್ ನಷ್ಟಕ್ಕೆ 37 ರನ್ ಗಳಿಗೆ ಕುಸಿಯಿತು.

ಖಾಲಿದ್ ಕೈಲ್ ಮತ್ತು ಅಯಾನ್ ಖಾನ್ 31 ರನ್​ಗಳ ಜೊತೆಯಾಟ ನೀಡಿದರು. ಆದರೆ ಒಮಾನ್ ನಮೀಬಿಯಾದ ಬೌಲಿಂಗ್ ದಾಳಿಯ ವೈವಿಧ್ಯತೆ ಮತ್ತು ಗುಣಮಟ್ಟವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಅನುಭವಿ ಡೇವಿಡ್ ವೈಸ್ ಮೂರು ವಿಕೆಟ್ ಪಡೆದರೆ, ನಾಯಕ ಗೆರ್ಹಾರ್ಡ್ ಎರಾಸ್ಮಸ್​ ನಾಲ್ಕು ಓವರ್​ಗಳಲ್ಲಿ ಕೇವಲ 20 ರನ್ ನೀಡಿ ಎರಡು ವಿಕೆಟ್ ಪಡೆದರು. ಬಳಿಕ ಬ್ಯಾಟ್ ಮಾಡಿದ ನಮೀಬಿಯಾ ತಂಡವೂ 106 ರನ್​ ಗಳಿಸಿತು. ಪಂದ್ಯ ಟೈ ಆದ ಕಾರಣ ಸೂಪರ್ ಓವರ್​ ನಡೆಸಲಾಯಿತು. ಅಲ್ಲಿ ನಮೀಬಿಯಾ ಗೆಲುವು ಸಾಧಿಸಿತು.

Continue Reading

ಕ್ರೀಡೆ

T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

T20 World Cup 2024 : ವರದಿಯ ಪ್ರಕಾರ ಹಲವಾರು ಭಾರತೀಯ ಆಟಗಾರರು ನ್ಯೂಯಾರ್ಕ್ ಸುತ್ತಲೂ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಕೆಲವರು ಅಪ್ರತಿಮ ಟೈಮ್ಸ್​ ಸ್ಕ್ವೇರ್​​ಗೆ ಭೇಟಿ ನೀಡಿದ್ದರು. ಇತರರು ದೀರ್ಘ ನಡಿಗೆ ಮತ್ತು ಹೊರ ಪ್ರದೇಶಕ್ಕೆ ಊಟಕ್ಕೆ ಹೋಗಿದ್ದರು. ಶನಿವಾರ (ಜೂನ್ 1) ಬಾಂಗ್ಲಾದೇಶ ವಿರುದ್ಧದ ಭಾರತದ ಏಕೈಕ ಟಿ 20 ವಿಶ್ವಕಪ್ ಅಭ್ಯಾಸ ಪಂದ್ಯದ ಸಮಯದಲ್ಲಿ ನ್ಯೂಯಾರ್ಕ್​​ನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

VISTARANEWS.COM


on

T20 World Cup 2024
Koo

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ 20 ವಿಶ್ವಕಪ್ 2024 ರ (T20 World Cup 2024) ಪಂದ್ಯಕ್ಕೆ ಮುಂಚಿತವಾಗಿ ಐಸಿಸ್ ಬೆದರಿಕೆ ಹಾಕಿದ್ದಾರೆ. ಕಾಯುತ್ತಿದ್ದೇವೆ ನಿಮಗಾಗಿ ಎಂಬ ಬೆದರಿಕೆಯ ಪೋಸ್ಟ್​ಗಳು ಹರಿದಾಡಿದ್ದವು. ಇದು ವರದಿಯಾದ ನಂತರ ಆಟಗಾರರಿಗೆ ಭದ್ರತೆ ಬಿಗಿಗೊಳಿಸಲಾಗಿದೆ. ಆದಾಗ್ಯೂ, ಇದು ಯುನೈಟೆಡ್ ಸ್ಟೇಟ್ಸ್ ಮತ್ತು ಸುತ್ತಮುತ್ತಲಿನ ಭಾರತೀಯ ಕ್ರಿಕೆಟಿಗರ ಓಡಾಟದ ಮೇಲೆ ಪರಿಣಾಮ ಬೀರಿಲ್ಲ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕ್​ ಜೂನ್ 9 ರಂದು ಅಮೆರಿಕದ ನ್ಯೂಯಾರ್ಕ್​​ನ ಹೊರವಲಯದಲ್ಲಿರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದಾರೆ. ಈ ಕುರಿತು ಮಾತನಾಡಿದ ಟೀಮ್ ಇಂಡಿಯಾ ಮೂಲಗಳು ಆಟಗಾರರಿಗೆ ಯಾವುದೇ ನಿರ್ದೇಶನ ನೀಡಲಾಗಿಲ್ಲ ಮತ್ತು ಅವರು ಸಾಮಾನ್ಯವಾಗಿ ನ್ಯೂಯಾರ್ಕ್​ನಲ್ಲಿ ತಿರುಗಾಡಬಹುದು. ತಂಡವು ಅಮೆರಿಕದಲ್ಲಿ ಇಳಿದ ನಂತರದಿಂದ ಭದ್ರತೆ ಚೆನ್ನಾಘಿ ನೀಡಿದ್ದೇವೆ. ಅಭ್ಯಾಸ ಪಂದ್ಯದ ವೇಳೆಯೂ ಅತ್ಯುತ್ತಮವಾಗಿತ್ತು ಅವರು ಹೇಳಿದ್ದಾರೆ.

ಇದನ್ನೂ ಓದಿ: T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ವರದಿಯ ಪ್ರಕಾರ ಹಲವಾರು ಭಾರತೀಯ ಆಟಗಾರರು ನ್ಯೂಯಾರ್ಕ್ ಸುತ್ತಲೂ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಕೆಲವರು ಅಪ್ರತಿಮ ಟೈಮ್ಸ್​ ಸ್ಕ್ವೇರ್​​ಗೆ ಭೇಟಿ ನೀಡಿದ್ದರು. ಇತರರು ದೀರ್ಘ ನಡಿಗೆ ಮತ್ತು ಹೊರ ಪ್ರದೇಶಕ್ಕೆ ಊಟಕ್ಕೆ ಹೋಗಿದ್ದರು. ಶನಿವಾರ (ಜೂನ್ 1) ಬಾಂಗ್ಲಾದೇಶ ವಿರುದ್ಧದ ಭಾರತದ ಏಕೈಕ ಟಿ 20 ವಿಶ್ವಕಪ್ ಅಭ್ಯಾಸ ಪಂದ್ಯದ ಸಮಯದಲ್ಲಿ ನ್ಯೂಯಾರ್ಕ್​​ನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ಭದ್ರತೆ ಉಲ್ಲಂಘಿಸಿದ

ಅಭ್ಯಾಸ ಪಂದ್ಯದಲ್ಲಿ ಭದ್ರತೆಯನ್ನು ಉಲ್ಲಂಘಿಸಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದ. ಆಟದ ಅಖಾಡಕ್ಕೆ ಪ್ರವೇಶಿಸಿದ್ದ. ಭದ್ರತಾ ಸಿಬ್ಬಂದಿ ಮೈದಾನಕ್ಕೆ ಬರುವ ಮೊದಲು ಅವರು ಭಾರತದ ನಾಯಕ ರೋಹಿತ್ ಅವರನ್ನು ತಬ್ಬಿಕೊಂಡಿದ್ದ. ಇತರ ಸ್ಥಳಗಳಿಗಿಂತ ಭಿನ್ನವಾಗಿ ಆತ ನೆಲಕ್ಕೆ ಬಿದ್ದು ಸಿಬ್ಬಂದಿಗೆ ಆತನನ್ನು ಹೊರಕ್ಕೆ ಕಳಹಿಸಲು ಕಷ್ಟವಾಯಿತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕ್ಲಿಪ್​ನಲ್ಲಿ ರೋಹಿತ್ ಪೊಲೀಸ್ ಅಧಿಕಾರಿಗಳಿಗೆ ಅಭಿಮಾನಿಗೆ ಹೊಡೆಯಬೇಡಿ ಮತ್ತು ಆತನಿಗೆ ನೋವುಂಟು ಮಾಡಬೇಡಿ ಎಂದು ಹೇಳುತ್ತಿರುವುದು ಕಂಡುಬರುತ್ತದೆ.

ಟಿ 20 ವಿಶ್ವಕಪ್ 2024 ರಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಾಗಿ ನ್ಯೂಯಾರ್ಕ್ ನಗರ ಪೊಲೀಸ್ ಇಲಾಖೆ ನಸ್ಸಾವು ಕೌಂಟಿಯಲ್ಲಿ ‘ಬಿಗಿ ಭದ್ರತೆ’ ಪ್ರಾರಂಭಿಸಿದೆ. ಬಹುನಿರೀಕ್ಷಿತ ಮುಖಾಮುಖಿಯ ಈ ಭದ್ರತಾ ಪರಿಸ್ಥಿತಿಯನ್ನು ಕಳೆದ ಬುಧವಾರ (ಮೇ 29) ನಸ್ಸಾವು ಕೌಂಟಿಯ ಪೊಲೀಸ್ ಆಯುಕ್ತ ಪ್ಯಾಟ್ರಿಕ್ ರೈಡರ್ ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ.

ನೀವು ಇಷ್ಟು ದೊಡ್ಡ ಪಂದ್ಯ ಮತ್ತು ಅಪಾಯ ಸಂಖ್ಯೆಯ ಪ್ರೇಕ್ಷಕರನ್ನು ಹೊಂದಿರುವಾಗ ಎಲ್ಲವೂ ನಾವಯ ವಿಶ್ವಾಸಾರ್ಹ ಭದ್ರತೆ ನೀಡುತ್ತೇವೆ. ನಸ್ಸಾವು ಕೌಂಟಿಯ ನಿವಾಸಿಗಳ ಭದ್ರತೆ ಮತ್ತು ಸುರಕ್ಷತೆಯ ವಿಷಯಕ್ಕೆ ಬಂದಾಗ ನಾವು ಪ್ರತಿಯೊಂದು ವಿವರಗಳನ್ನು ಪರಿಶೀಲಿಸುತ್ತೇವೆ. ಈ ಕೌಂಟಿಯ ಇತಿಹಾಸದಲ್ಲಿ ನಾವು ಮಾಡಬೇಕಾದ ಅತಿದೊಡ್ಡ ಭದ್ರತೆ ಇದು ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ ಎಂದು ಹೇಳಿದ್ದರು.

ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಯುಎಸ್ಎ ಸ್ಥಾನ ಪಡೆದಿವೆ. ಮೆನ್ ಇನ್ ಬ್ಲೂ ತಂಡ ಜೂನ್ 5ರಂದು ನ್ಯೂಯಾರ್ಕ್ ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

Continue Reading

ಕ್ರೀಡೆ

KMF T20 World Cup: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಕೆಎಂಎಫ್‌

KMF T20 World Cup: “ನಾವೆಲ್ಲರೂ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ! ನಂದಿನಿ ಲಾಂಛನವು ಸ್ಕಾಟ್ಲೆಂಡ್ ಜರ್ಸಿ ಮತ್ತು ಐರ್ಲೆಂಡ್ ಜರ್ಸಿಯ ಪ್ರಮುಖ ತೋಳಿನ ಮೇಲೆ ಮೊದಲ ಬಾರಿಗೆ ದೊಡ್ಡ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದೆ” ಎಂದು ಕೆಎಂಎಫ್‌ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

KMF T20 World Cup
Koo

ಬೆಂಗಳೂರು: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಕೂಡ ಉಭಯ ತಂಡಗಳು ಈಗಾಗಲೇ ಬಿಡುಗಡೆಗೊಳಿಸಿದೆ. ಇದೀಗ ಕೆಎಂಎಫ್‌ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಉಭಯ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ನಂದಿನಿ ಲೋಗೊ(KMF T20 World Cup) ಇರುವ ಫೋಟೊ ಹಂಚಿಕೊಂಡಿದೆ.

“ನಾವೆಲ್ಲರೂ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ! ನಂದಿನಿ ಲಾಂಛನವು ಸ್ಕಾಟ್ಲೆಂಡ್ ಜರ್ಸಿ ಮತ್ತು ಐರ್ಲೆಂಡ್ ಜರ್ಸಿಯ ಪ್ರಮುಖ ತೋಳಿನ ಮೇಲೆ ಮೊದಲ ಬಾರಿಗೆ ದೊಡ್ಡ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದೆ” ಎಂದು ಕೆಎಂಎಫ್‌ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದೆ.

ನಂದಿನಿ ಹೆಸರಿನಲ್ಲಿ ಡೈರಿ ಉತ್ಪನ್ನ ಮಾರಾಟ ಮಾಡುತ್ತಿರುವ ಕೆಎಂಎಫ್‌ ವಿಶ್ವಕಪ್​ನಂತ ಟೂರ್ನಿಯಲ್ಲಿ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಮಹತ್ವದ ಹೆಜ್ಜೆಯಾಗಲಿದೆ ಜತೆಗೆ ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ದೇಶೀಯ ಮಟ್ಟದ ಉತ್ಪನ್ನವೊಂದು ವಿದೇಶಿ ಮಟ್ಟದಲ್ಲಿಯೂ ಪರಿಚಿತಗೊಳ್ಳಲಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ.

ಜೂನ್​ 4ರಂದು ಸ್ಕಾಟ್ಲೆಂಡ್ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇಂಗ್ಲೆಂಡ್​ ಎದುರಾಳಿ. ಐರ್ಲೆಂಡ್​ ಜೂನ್​ 5ರಂದು ಭಾರತ ವಿರುದ್ಧ ಆಡಲಿದೆ. ಈ ವೇಳೆ ಆಟಗಾರರ ಜೆರ್ಸಿಯಲ್ಲಿ ನಂದನಿ ಲೋಗ ರಾರಾಜಿಸಲಿದೆ. ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆ.

ಇದನ್ನೂ ಓದಿ KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

ವಿರೋಧ ವ್ಯಕ್ತಪಡಿಸಿದ್ದ ಮೋಹನ್‌ದಾಸ್‌ ಪೈ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading
Advertisement
Udupi-Chikmagalur Lok Sabha constituency
ದೇಶ7 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Vasishta Simha Lovely Kannada Film Trailer Event
ಸ್ಯಾಂಡಲ್ ವುಡ್13 mins ago

Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

Heat wave
ದೇಶ13 mins ago

Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

Food Poisoning
ಮೈಸೂರು15 mins ago

Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Gold Rate Today
ಚಿನ್ನದ ದರ24 mins ago

Gold Rate Today: ಚಿನ್ನದ ಬೆಲೆ ಮತ್ತೂ ಇಳಿಕೆ; ಇಂದಿನ ಧಾರಣೆಯನ್ನು ಇಲ್ಲಿ ಗಮನಿಸಿ

karnataka Rain
ಮಳೆ35 mins ago

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Team India
ಪ್ರಮುಖ ಸುದ್ದಿ44 mins ago

Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

Priyanka Chopra The Bluff team Malti enjoys
ಬಾಲಿವುಡ್52 mins ago

Priyanka Chopra: ಆಸ್ಟ್ರೇಲಿಯಾದ ಬೀಚ್‌ನಲ್ಲಿ ಅಮ್ಮನ ಸಿನಿ ತಂಡದ ಜತೆ ಎಂಜಾಯ್ ಮಾಡಿದ ಮಾಲತಿ ಮೇರಿ ಚೋಪ್ರಾ!

George Fernandes ರಾಜಮಾರ್ಗ ಅಂಕಣ
ಅಂಕಣ53 mins ago

ರಾಜಮಾರ್ಗ ಅಂಕಣ: ಜಾರ್ಜ್ ಫರ್ನಾಂಡಿಸ್ ಮತ್ತು ಕೊಂಕಣ್ ರೈಲ್ವೆ ಎಂಬ ಮಹಾ ಕನಸು!

gold rate today
ಕರ್ನಾಟಕ1 hour ago

Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌