Health Card: ಸರ್ಕಾರದ ಹೊಸ ಹೆಲ್ತ್‌ ಕಾರ್ಡ್‌; ದೇಶದ ಎಲ್ಲೆಡೆ ಸಿಗಲಿದೆ Treatment! ಏನಿದರ ವಿಶೇಷತೆ? - Vistara News

ಆರೋಗ್ಯ

Health Card: ಸರ್ಕಾರದ ಹೊಸ ಹೆಲ್ತ್‌ ಕಾರ್ಡ್‌; ದೇಶದ ಎಲ್ಲೆಡೆ ಸಿಗಲಿದೆ Treatment! ಏನಿದರ ವಿಶೇಷತೆ?

Health Card : ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್‌ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

VISTARANEWS.COM


on

Arogya Karnataka New card Treatment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) – ಆರೋಗ್ಯ ಕರ್ನಾಟಕ (Arogya Karnataka) ಹೆಲ್ತ್ ಕಾರ್ಡ್‌ಗಳಿಗೆ (Health Card) ಆರೋಗ್ಯ ಇಲಾಖೆ ಈಗ ಹೊಸ ರೂಪ ನೀಡಿದೆ. ಇದರ ಹೆಸರಿನಲ್ಲೂ ಅಲ್ಪ ಬದಲಾವಣೆಯಾಗಿದ್ದು, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಡಲಾಗಿದೆ. ಇದರ ವೈಶಿಷ್ಟ್ಯತೆ ಎಂದರೆ ಈ ಕಾರ್ಡ್‌ ಹೊಂದಿದವರು ದೇಶದ ಯಾವುದೇ ಕಡೆ (ನೋಂದಾಯಿತ) ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಈ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಡಿಸೆಂಬರ್‌ 6ರಂದು ಬಿಡುಗಡೆ ಮಾಡಿದ್ದಾರೆ. ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೆಲ್ತ್ ಕಾರ್ಡ್‌ ಅನ್ನು ರಾಜ್ಯದ 5.9 ಕೋಟಿ ಜನರಿಗೆ ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌

Ayushman Bharat Arogya Karnataka Health Card

ಇತರೆ ರಾಜ್ಯಗಳಲ್ಲಿ ಚಿಕಿತ್ಸೆ ಪಡೆಯಬಹುದು

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್‌ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

6 ತಿಂಗಳಲ್ಲಿ 5.09 ಕೋಟಿ ಮಂದಿಗೆ ಕಾರ್ಡ್‌ ವಿತರಣೆ ಗುರಿ

ರಾಜ್ಯದಲ್ಲಿರುವ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

ರಾಜ್ಯದ ಪಾಲು ಶೇ.66 ಮತ್ತು ಕೇಂದ್ರದ ಪಾಲು ಶೇ. 34

ಈ ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ.66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.

ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆ ಪಡೆಯಬಹುದು

ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

ಎಪಿಎಲ್‌ನವರಿಗೆ ಗರಿಷ್ಠ ರೂ.1.5 ಲಕ್ಷ ವೆಚ್ಚ ಪಾವತಿ

APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, APL ಕುಟುಂಬಗಳಿಗೆ 5 ಲಕ್ಷದ ರೂ. ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡುದಾರರು ಶೇ. 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಿದರೆ, ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.\

1650 ಚಿಕಿತ್ಸಾ ಪ್ಯಾಕೇಜ್‌ಗಳು ಲಭ್ಯ

ಪ್ರಸ್ತುತ ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು “ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೋಂದಾಯಿಸಿಕೊಂಡಿರುತ್ತಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲ ಸಾರ್ವಜನಿಕ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ.

60:40 ಅನುಪಾತದಲ್ಲಿ ಅನುದಾನ

ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಎಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಿಲ್ವಾ? ಕೂಡಲೇ ಈ ಕೆಲಸ ಮಾಡಿ!

ಸುಲಭವಾಗಿ ನೋಂದಾಯಿಸಿ

ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌ ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ. ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೋಂದಾಯಿಸಿ ಪಡೆಯಬಹುದಾಗಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

Vijayanagara News: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Disciplinary action if cases of mother and child deaths recur DC Diwakar warns
Koo

ಹೊಸಪೇಟೆ: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ (Vijayanagara News) ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ತಾಯಿ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು. ತಾಯಿ ಮತ್ತು ಶಿಶು ಮರಣಕ್ಕೆ ವೈದ್ಯರು ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವ ದೂರು ಬಾರದ ಹಾಗೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ದಿನ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಶುಶ್ರೂಷಣಾ ಸಿಬ್ಬಂದಿ ರೋಗಿಗಳೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಚಿಕಿತ್ಸೆ ಕೊಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು. ಬೇರೊಬ್ಬರನ್ನು ಹೊಣೆಯಾಗಿಸಬಾರದು. ಸಕಾಲದಲ್ಲಿ ಸಿಗಬೇಕಾಗಿದ್ದ ಆರೋಗ್ಯ ಸೇವೆ ಸಿಗದ ಕಾರಣಕ್ಕೆ ತಾಯಿ ಮರಣ, ಶಿಶುಮರಣ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ದೂರುಗಳು ಬಂದಲ್ಲಿ ಮತ್ತು ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಮತ್ತೆ ಮರುಕಳಿಸಿದಲ್ಲಿ ಯಾವುದೇ ಮುಲಾಜಿಲ್ಲದೇ ತನಿಖೆಗೊಳಪಡಿಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

ಸರ್ಕಾರಿ ಆಸ್ಪತ್ರೆಗಳಿಗೆ ಬಹುತೇಕ ಕೃಷಿ ಕಾರ್ಮಿಕರು, ಕಡು ಬಡವರೇ ಹೆಚ್ಚಾಗಿ ಬರುತ್ತಾರೆ. ವೈದ್ಯರೇ ದೇವರೆಂದು ಭಾವಿಸಿ ಅವರು ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ವೈದ್ಯರು ಏನೇ ಹೇಳಿದರು ಅವರು ಅದಕ್ಕೆ ಸಮ್ಮತಿ ಸೂಚಿಸುತ್ತಾರೆ. ನನ್ನ ಮಗಳು ಆರಾಮಿರಬೇಕು. ಹೆರಿಗೆ ಸುಸೂತ್ರವಾಗಿ ನಡೆದು ಕೂಸು ಬದುಕಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿ ಪಾಲಕರ ಆಸೆ ಆಗಿರುತ್ತದೆ. ಆಸ್ಪತ್ರೆಗೆ ಯಾರೆ ಬರಲಿ ಅವರೊಂದಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು.

ಹೆರಿಗೆಯಂತಹ ಸಂದರ್ಭದಲ್ಲಿ ವಿಳಂಬಕ್ಕೆ ಆವಕಾಶ ಮಾಡಿಕೊಡದೇ ಸಕಾಲಕ್ಕೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದೆ ಎಂಬುದು ಗೊತ್ತಾದಾಗ ವಿಳಂಬ ಮಾಡದೇ ಮೇಲಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಹಾಗೆ ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಆಡಳಿತ ವ್ಯೆದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಹಾಜರಿದ್ದರು.

Continue Reading

ಆರೋಗ್ಯ

Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

ಯೂರಿಕ್‌ ಆಮ್ಲ (Uric Acid) ನಮ್ಮ ಶರೀರಕ್ಕೆ ಬೇಕು. ಆದರೆ ಅದೇ ಹೆಚ್ಚಾದರೆ ಸಮಸ್ಯೆಗಳಿಗೆ ಮೂಲವಾಗುತ್ತದೆ. ಕೀಲುಗಳಲ್ಲಿ, ಗಂಟುಗಳಲ್ಲಿ ನೋವು, ಸಂಧಿವಾತ, ಹೃದಯದ ತೊಂದರೆಗಳು, ಮೂತ್ರಪಿಂಡದಲ್ಲಿ ಕಲ್ಲಿನಂಥ ಸಮಸ್ಯೆಗಳಿಗೆ ಎಡೆಯಾಗುತ್ತದೆ. ಯೂರಿಕ್‌ ಆಮ್ಲವನ್ನು ನೈಸರ್ಗಿಕವಾಗಿ ಕಡಿಮೆ ಮಾಡುವ ವಿಧಾನಗಳಿವು.

VISTARANEWS.COM


on

Uric Acid
Koo

ನಾವು ತಿಂದಿದ್ದೆಲ್ಲಾ ಪಚನವಾಗಿ, ದೇಹದೊಳಗೆ ಹೀರಲ್ಪಡುತ್ತವೆ ಎಂದು ತಿಳಿದಿದ್ದರೆ… ತಪ್ಪು! ಏನೇ ತಿಂದರೂ ಅದರಲ್ಲಿ ದೇಹಕ್ಕೆ ಬೇಡದ್ದು ತ್ಯಾಜ್ಯವಾಗಲೇಬೇಕು. ಅಂಥ ತ್ಯಾಜ್ಯಗಳಲ್ಲಿ ಯೂರಿಕ್‌ ಆಮ್ಲ ಸಹ ಒಂದು. ಅದರಲ್ಲೂ ಪ್ಯೂರಿನ್‌ಗಳನ್ನು ಹೊಂದಿರುವ ಆಹಾರಗಳನ್ನು ಸೇವಿಸಿದಾಗ ನಡೆಯುವ ವಿಘಟನೆಯಲ್ಲಿ ಯೂರಿಕ್‌ ಆಮ್ಲ (Uric Acid) ಪ್ರಧಾನವಾಗಿ ಉತ್ಪತ್ತಿಯಾಗುತ್ತದೆ. ಈ ತ್ಯಾಜ್ಯವು ರಕ್ತದೊಂದಿಗೆ ಸೇರಿ, ಮೂತ್ರಪಿಂಡಗಳ ಮೂಲಕ ದೇಹದಿಂದ ಹೊರಗೆ ಹೋಗುತ್ತದೆ. ಆದರೆ ಈ ಯೂರಿಕ್‌ ಆಮ್ಲದ ತ್ಯಾಜ್ಯದ ಪ್ರಮಾಣ ಅತಿಯಾದರೆ ಗೌಟ್‌ ಆರ್ಥರೈಟಿಸ್‌ಗೆ ಮೂಲವಾಗುತ್ತದೆ. ಯೂರಿಕ್‌ ಆಮ್ಲ ನಮ್ಮ ಶರೀರಕ್ಕೆ ಬೇಕು. ಆದರೆ ಅದೇ ಹೆಚ್ಚಾದರೆ ಏನಾಗುತ್ತದೆ ದೇಹದಲ್ಲಿ? ಆರಂಭದ ದಿನಗಳಲ್ಲಿ ದೇಹದಲ್ಲಿ ಯೂರಿಕ್‌ ಆಮ್ಲದ ಸಾಂದ್ರತೆ ಹೆಚ್ಚಿದ್ದರೆ ಸಮಸ್ಯೆ ಎನಿಸುವುದಿಲ್ಲ. ಇದೇ ಮುಂದುವರಿದರೆ ಕ್ರಮೇಣ ಸಮಸ್ಯೆಗಳಿಗೆ ಮೂಲವಾಗುತ್ತದೆ. ಕೀಲುಗಳಲ್ಲಿ, ಗಂಟುಗಳಲ್ಲಿ ನೋವು, ಸಂಧಿವಾತ, ಹೃದಯದ ತೊಂದರೆಗಳು, ಮೂತ್ರಪಿಂಡದಲ್ಲಿ ಕಲ್ಲು ಮುಂತಾದ ಸಮಸ್ಯೆಗಳಿಗೆ ಎಡೆಯಾಗುತ್ತದೆ. ಹಾಗಾಗಿ ದೇಹ ಆರೋಗ್ಯವಾಗಿರಬೇಕೆಂದರೆ ಶರೀರದಲ್ಲಿ ತ್ಯಾಜ್ಯ ಉಳಿಯಬಾರದು.

Uric Acid

ಲಕ್ಷಣಗಳೇನು?

ಅದನ್ನು ರಕ್ತ ಪರೀಕ್ಷೆಯಿಂದ ಪತ್ತೆ ಮಾಡಬಹುದು. ಕೀಲುಗಳಲ್ಲಿ ಬಿಗಿಯುವ ಅನುಭವವಿದ್ದರೆ, ಮೂತ್ರ ವಿಸರ್ಜನೆಯ ವೇಳೆಗೆ ನೋವಿದ್ದರೆ ವೈದ್ಯರನ್ನು ಕಾಣುವುದು ಸೂಕ್ತ. ಕೆಂಬಣ್ಣದ ಮಾಂಸ, ಶೆಲ್‌ ಫಿಶ್‌ನಂಥ ಮೀನುಗಳು, ಚಿಕನ್‌, ಅಂಗಾಂಗಗಳ ಮಾಂಸ ಇತ್ಯಾದಿಗಳಲ್ಲಿ ಪ್ಯೂರಿನ್‌ ಅಂಶ ಅತಿ ಹೆಚ್ಚು. ಇವುಗಳ ವಿಘಟನೆಯಲ್ಲಿ ಹೆಚ್ಚಿನ ಪ್ರಮಾಣದ ಯೂರಿಕ್‌ ಆಮ್ಲ ಬಿಡುಗಡೆಯಾಗುತ್ತದೆ. ಹಾಗಾಗಿ ಪ್ಯೂರಿನ್‌ ಹೆಚ್ಚಿರುವಂಥ ಯಾವುದೇ ಆಹಾರಗಳಿಂದ ದೂರ ಇರಿ ಅಥವಾ ಕಡಿಮೆ ಮಾಡಿ. ಜೊತೆಗೆ, ದೇಹದಲ್ಲಿನ ಎಲ್ಲಾ ತ್ಯಾಜ್ಯಗಳನ್ನು ಹೊರಹಾಕುವಲ್ಲಿ ನೀರು ಮಹತ್ವದ ಪಾತ್ರ ವಹಿಸುತ್ತದೆ. ದೇಹಕ್ಕೆ ಸಾಕಷ್ಟು ನೀರು ದೊರೆಯುವುದರಿಂದ ಮೂತ್ರಪಿಂಡಗಳ ಕೆಲಸವೂ ಸುಗಮವಾಗುತ್ತದೆ. ತ್ಯಾಜ್ಯವೂ ಹೊರಹೋಗುತ್ತದೆ.

ಆಯುರ್ವೇದ ಸಹಕಾರಿ

ಕೆಲವು ಸರಳ ಕ್ರಮಗಳು ಮತ್ತು ಆಯುರ್ವೇದದ ಉಪಾಯಗಳು ಯೂರಿಕ್‌ ಆಮ್ಲ ಕಡಿಮೆ ಮಾಡುವಲ್ಲಿ ನೆರವಾಗುತ್ತವೆ. ಉದಾ, ತ್ರಿಫಲ ಚೂರ್ಣ ಎಂದೇ ಕರೆಸಿಕೊಳ್ಳುವ ನೆಲ್ಲಿಕಾಯಿ, ತಾರೆಕಾಯಿ ಮತ್ತು ಅಳಲೆಕಾಯಿ ಎಂಬ ಮೂರು ಫಲಗಳ ಮಿಶ್ರಣವು, ದೇಹದ ಚಯಾಪಚಯ ಹೆಚ್ಚಿಸಿ, ತ್ಯಾಜ್ಯವನ್ನು ಹೊರಗೆಸೆಯುವಲ್ಲಿ ಸಾಮರ್ಥವಾಗಿ ಕೆಲಸ ಮಾಡುತ್ತದೆ. ಇದಲ್ಲದೆ, ಅಮೃತಬಳ್ಳಿ, ಬೇವು ಮುಂತಾದ ಮೂಲಿಕೆಗಳ ಕೂಡಾ ಯೂರಿಕ್‌ ಆಮ್ಲದ ಮಟ್ಟವನ್ನು ಕಡಿಮೆ ಮಾಡುವಲ್ಲಿ ಉಪಯುಕ್ತ ಎನಿಸಿವೆ.

Drinking warm water with a little lemon juice on an empty stomach in the morning is beneficial for health Benefits Of Lemon Water

ನಿಂಬೆರಸದ ನೀರು

ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕುವಲ್ಲಿ ನಿಂಬೆ ನೀರು ಸಹ ಒಳ್ಳೆಯ ಉಪಾಯ. ಬೆಳಗಿನ ಹೊತ್ತು ಇದನ್ನು ಡಿಟಾಕ್ಸ್‌ ಪೇಯದಂತೆ ಸೇವಿಸಬಹುದು. ಯೂರಿಕ್‌ ಆಮ್ಲ ಹೆಚ್ಚಿದ್ದರಿಂದ ಕಿಡ್ನಿಯಲ್ಲಿ ಉಂಟಾಗುವ ಹರಳುಗಳನ್ನು ಕರಗಿಸಲು ಇದು ಸಹಕಾರಿ. ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆರಸವನ್ನು ಸೇರಿಸಿ ಬೆಳಗಿನ ಹೊತ್ತು ಕುಡಿಯುವುದು ಸಹಾಯವಾಗಬಹುದು.

Soaking mentha seeds in water at night and drinking it on an empty stomach in the morning is beneficial Benefits Of Fenugreek Water

ಮೆಂತೆ ನೀರು

ರಾತ್ರಿ ಮಲಗುವಾಗ ಒಂದು ಚಮಚ ಮೆಂತೆಯನ್ನು ನೀರಿಗೆ ಹಾಕಿ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಿ. ಇದರಿಂದ ಯೂರಿಕ್‌ ಆಮ್ಲದ ಮಟ್ಟವನ್ನು ಸುಧಾರಿಸುವುದರ ಜೊತೆಗೆ, ಇದರಿಂದಾಗುವ ಉರಿಯೂತವನ್ನೂ ಕಡಿಮೆ ಮಾಡಬಹುದು.

Apple cider vinegar for Fungal Infection Home Remedies

ಆಪಲ್‌ ಸೈಡರ್‌ ವಿನೆಗರ್

ಒಂದಿಡೀ ಗ್ಲಾಸ್‌ ನೀರಿಗೆ ಒಂದು ದೊಡ್ಡ ಚಮಚ ಆಪಲ್‌ ಸೈಡರ್‌ ವಿನೇಗರ್‌ ಮಿಶ್ರ ಮಾಡಿಕೊಂಡು ಬೆಳಗಿನ ಹೊತ್ತು ಸೇವಿಸಬಹುದು. ಇದು ಕೀಲುಗಳಲ್ಲಿ ಜಮೆಯಾಗಿರುವ ಯೂರಿಕ್‌ ಆಮ್ಲವನ್ನು ಕರಗಿಸಲು ಸಹಾಯ ಮಾಡುತ್ತದೆ. ಇದಕ್ಕಿರುವ ಉತ್ಕರ್ಷಣ ನಿರೋಧದ ಗುಣದಿಂದ ಕೀಲುಗಳಲ್ಲಿರುವ ನೋವು ಸಹ ಕಡಿಮೆಯಾಗುತ್ತದೆ.

Ginger tea

ಶುಂಠಿ ಕಷಾಯ

ಶುಂಠಿಯನ್ನು ನೀರಲ್ಲಿ ಕುದಿಸಿ, ಶೋಧಿಸಿ ಬೆಳಗಿನ ಹೊತ್ತು ಕುಡಿಯಬಹುದು. ಇದರಿಂದ ದೇಹದಲ್ಲಿನ ಉರಿಯೂತ ಕಡಿಮೆಯಾಗುತ್ತದೆ. ಜೊತೆಗೆ, ಜಮೆಯಾಗಿ ಕುಳಿತ ಯೂರಿಕ್‌ ಆಮ್ಲವನ್ನೂ ಹೊರಹಾಕುತ್ತದೆ ಶುಂಠಿ. ಇವುಗಳ ಜೊತೆಗೆ, ನಮ್ಮ ಪ್ರತಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ.

Continue Reading

ಆರೋಗ್ಯ

Super Food For Kids: ನಿಮ್ಮ ಮಕ್ಕಳು ಜಾಣರಾಗಿ ಹೆಚ್ಚು ಅಂಕ ಗಳಿಸಬೇಕೆ? ಈ ಆಹಾರಗಳನ್ನು ಕೊಡಿ

ಮಕ್ಕಳಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯವಿರುತ್ತದೆ. ಹೀಗಾಗಿ ಅವರ ನಿತ್ಯದ ಆಹಾರದಲ್ಲಿ ಕೆಲವೊಂದು ಪದಾರ್ಥಗಳು ಇರಲೇಬೇಕು. ಇದು ಅವರ ದೇಹಾರೋಗ್ಯ ಮಾತ್ರವಲ್ಲ ಮೆದುಳಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಅಂತಹ ಆಹಾರ ಪದಾರ್ಥಗಳು (Super Food For Kids) ಯಾವುದು ಗೊತ್ತೇ? ಇಲ್ಲಿದೆ ಪೋಷಕರಿಗೆ ಉಪಯುಕ್ತ ಮಾಹಿತಿ.

VISTARANEWS.COM


on

By

Super Food For Kids
Koo

ನೆನಪಿನ ಶಕ್ತಿ (memory), ಏಕಾಗ್ರತೆ (concentration) ಮತ್ತು ಮೆದುಳಿನ ಕಾರ್ಯವನ್ನು (brain function) ಸುಧಾರಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿರುವುದರಿಂದ ಮಕ್ಕಳಿಗೆ (childrens) ಸರಿಯಾದ ಆಹಾರವನ್ನು (Super Food For Kids) ಆಯ್ಕೆ ಮಾಡುವುದು ಬಹಳ ಮುಖ್ಯ. ಮಕ್ಕಳು ಮೆದುಳು ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಪೌಷ್ಟಿಕ ಆಹಾರಗಳನ್ನು (nutritious foods) ಸೇವಿಸಬೇಕು. ಮಗುವಿನ ಮೆದುಳನ್ನು ಶಕ್ತಿಯುತವಾಗಿ ಮತ್ತು ಚುರುಕಾಗಿಸಬಲ್ಲ ಕೆಲವು ಆಹಾರ ಪದಾರ್ಥಗಳು ಹೀಗಿವೆ.


ಹಾಲು

ಹೆಚ್ಚಿನ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಇದು ಮಗುವಿನ ಮೆದುಳನ್ನು ಚುರುಕುಗೊಳಿಸುವ ಅತ್ಯಂತ ಪ್ರಮುಖ ಆಹಾರ ಪದಾರ್ಥವಾಗಿದೆ. ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೊಟೀನ್ ಇದ್ದು ಇದು ಮಗುವಿನ ಮೆದುಳಿನ ಕಾರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.


ಮೊಟ್ಟೆ

ಮೊಟ್ಟೆಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಡಿ ಮತ್ತು ಪ್ರೊಟೀನ್ ಇದೆ. ಇದು ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯಕರವಾಗಿ ಮತ್ತು ತೀಕ್ಷ್ಣವಾಗಿಡುವಲ್ಲಿ ಮೊಟ್ಟೆಗಳು ತುಂಬಾ ಪರಿಣಾಮಕಾರಿಯಾಗಿರುವುದರಿಂದ ದೈನಂದಿನ ಆಹಾರದಲ್ಲಿ ಮೊಟ್ಟೆಗಳನ್ನು ಅಳವಡಿಸಿಕೊಳ್ಳಬೇಕು. ಮೊಟ್ಟೆಗಳಲ್ಲಿ ಇರುವ ಕೋಲೀನ್ ಮಕ್ಕಳ ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.


ಗೋಡಂಬಿ

ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ವಿಟಮಿನ್‌ ಮತ್ತು ಖನಿಜಗಳನ್ನು ಒಳಗೊಂಡಿರುವ ಕಾರಣ ವಯಸ್ಸಿನ ಹೊರತಾಗಿಯೂ ಗೋಡಂಬಿ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯವಾಗಿಡಲು ಅವರ ದೈನಂದಿನ ಆಹಾರದಲ್ಲಿ ಗೋಡಂಬಿಯನ್ನು ಸೇರಿಸಲು ಪ್ರಯತ್ನಿಸಿ.


ಧಾನ್ಯಗಳು

ಧಾನ್ಯಗಳು ಮಕ್ಕಳಿಗೆ ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಕಿಡ್ನಿ ಮತ್ತು ಪಿಂಟೋ ಧಾನ್ಯಗಳು ಯಾವುದೇ ರೀತಿಯ ಧಾನ್ಯಗಳು ಹೆಚ್ಚು ಒಮೆಗಾ 3 ಅನ್ನು ಹೊಂದಿರುತ್ತದೆ. ಧಾನ್ಯಗಳು ಅನ್ನು ಸಲಾಡ್‌ನೊಂದಿಗೆ ಬೆರೆಸಿ ಅಥವಾ ಕರಿ ಮಾಡುವ ಮೂಲಕ ಬಡಿಸಬಹುದು. ಧಾನ್ಯಗಳು ಜ್ಞಾಪಕ ಶಕ್ತಿ ಹೆಚ್ಚಿಸಲು ಮತ್ತು ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Benefits Of Cherries: ಚೆರ್ರಿ ಹಣ್ಣು ರುಚಿಗಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ಹಿತಕರ!


ಮೀನು

ಮಕ್ಕಳಿಗೆ ಪ್ರತಿದಿನ ಮೀನನ್ನು ಬಡಿಸಲು ಪ್ರಯತ್ನಿಸಿ. ಯಾಕೆಂದರೆ ಇದು ಆರೋಗ್ಯದ ಒಟ್ಟಾರೆ ಬೆಳವಣಿಗೆಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮೀನಿನಲ್ಲಿ ಹೆಚ್ಚಿನ ಪ್ರಮಾಣದ ಒಮೆಗಾ 3 ಇದ್ದು ಇದು ಜೀವಕೋಶಗಳ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ.


ತರಕಾರಿಗಳು

ತರಕಾರಿಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಮೆದುಳಿನ ಕೋಶಗಳನ್ನು ಆರೋಗ್ಯಕರವಾಗಿಡಲು ತರಕಾರಿಗಳು ಸಹಾಯ ಮಾಡುತ್ತದೆ. ಟೊಮ್ಯಾಟೊ, ಸಿಹಿ ಆಲೂಗಡ್ಡೆ, ಕುಂಬಳಕಾಯಿ, ಕ್ಯಾರೆಟ್ ಮತ್ತು ಪಾಲಕ್ ಮೊದಲಾದ ತರಕಾರಿಗಳನ್ನು ಮಗುವಿನ ನಿಯಮಿತ ಆಹಾರದಲ್ಲಿ ಸೇರಿಸಬೇಕು.

Continue Reading

ಆರೋಗ್ಯ

Lotus Seeds Benefits: ತಾವರೆ ಬೀಜಗಳನ್ನು ಸೇವಿಸಿ; ಇದು ರುಚಿಗೂ ಒಳ್ಳೆಯದು, ಹೃದಯಕ್ಕೂ ಒಳ್ಳೆಯದು

ತಾವರೆ ಬೀಜ ಖೀರು, ಸ್ನ್ಯಾಕ್‌ ಸೇರಿದಂತೆ ಅನೇಕ ಬಗೆಗಳಲ್ಲಿ ಇದು ಹೊಟ್ಟೆ ಸೇರುತ್ತದೆ. ಯಾವುದೇ ಹೇಳಿಕೊಳ್ಳುವ ರುಚಿ ಇರದ, ತಾವರೆಯ ಗಿಡದಿಂದ ಸಿಗುವ ಈ ಬೀಜಗಳು ಬಿಹಾರ ರಾಜ್ಯದಲ್ಲಿ ಹೇರಳವಾಗಿ ಸಿಗುತ್ತದೆ. ತನ್ನ ಪರಿಮಳ ಹಾಗೂ ರುಚಿಯಿಂದ ಇದು ಯಾರನ್ನೂ ಅಷ್ಟಾಗಿ ಆಕರ್ಷಿಸದಿದ್ದರೂ, ಇದು ತನ್ನ ಗುಣದಿಂದ ಇತ್ತೀಚೆಗೆ ಬಹುತೇಕರನ್ನು ಆಕರ್ಷಿಸಿರುವ ಆಹಾರ. ಪೊಟಾಶಿಯಂ, ಕಬ್ಬಿಣಾಂಶ, ಮೆಗ್ನೀಶಿಯಂ ಸೇರಿದಂತೆ ಹಲವು ಪೋಷಕಾಂಶಗಳು (Lotus Seeds Benefits) ಇದರಲ್ಲಿವೆ.

VISTARANEWS.COM


on

Lotus Seeds Benefits
Koo

ತಾವರೆ ಬೀಜಗಳು ಅಥವಾ ಮಖಾನಾ ಇಂದು ಬಹುತೇಕ ಎಲ್ಲರ ಮನೆಗಳಲ್ಲಿ ಸಾಮಾನ್ಯ. ಉತ್ತರ ಭಾರತವೂ ಸೇರಿದಂತೆ ಹಲವೆಡೆ ಇದು ಪ್ರಸಾದ ರೂಪದಲ್ಲಿ ದೇವಸ್ಥಾನಗಳಲ್ಲಿ ಸಿಗುತ್ತವೆ. ಇದರ ಹೊರತಾಗಿ, ದಕ್ಷಿಣ ಭಾರತದಲ್ಲಿ ಇದರ ಬಳಕೆ ಕಡಿಮೆಯಾದರೂ ಉತ್ತರ ಭಾರತದಲ್ಲಿ ಇದು ಸಾಮಾನ್ಯ ಆಹಾರ. ಇದರ ಖೀರು, ಸ್ನ್ಯಾಕ್‌ ಸೇರಿದಂತೆ ಅನೇಕ ಬಗೆಗಳಲ್ಲಿ ಇದು ಹೊಟ್ಟೆ ಸೇರುತ್ತದೆ. ಯಾವುದೇ ಹೇಳಿಕೊಳ್ಳುವ ರುಚಿ ಇರದ, ತಾವರೆಯ ಗಿಡದಿಂದ ಸಿಗುವ ಈ ಬೀಜಗಳು ಬಿಹಾರ ರಾಜ್ಯದಲ್ಲಿ ಹೇರಳವಾಗಿ ಸಿಗುತ್ತದೆ. ತನ್ನ ಪರಿಮಳ ಹಾಗೂ ರುಚಿಯಿಂದ ಇದು ಯಾರನ್ನೂ ಅಷ್ಟಾಗಿ ಆಕರ್ಷಿಸದಿದ್ದರೂ, ಇದು ತನ್ನ ಗುಣದಿಂದ ಇತ್ತೀಚೆಗೆ ಬಹುತೇಕರನ್ನು ಆಕರ್ಷಿಸಿರುವ ಆಹಾರ. ಪೊಟಾಶಿಯಂ, ಕಬ್ಬಿಣಾಂಶ, ಮೆಗ್ನೀಶಿಯಂ ಸೇರಿದಂತೆ ಹಲವು ಪೋಷಕಾಂಶಗಳು ಇದರಲ್ಲಿವೆ. ಮುಖ್ಯವಾಗಿ ತೂಕ ಇಳಿಸುವ ಮಂದಿಯನ್ನು ಆಕರ್ಷಿಸಿರುವ ಈ ಬೀಜದ ಲಾಭಗಳೇನು (Lotus Seeds Benefits) ಎಂಬುದನ್ನು ನೋಡೋಣ. ಮಖಾನ ಅಥವಾ ಈ ತಾವರೆಯ ಬೀಜದಲ್ಲಿ ಎಲ್ಲವೂ ಇದೆ. ಪೋಷಕಾಂಶಗಳ ಮಟ್ಟಿಗೆ ಹೇಳಿವುದಾದರೆ ಇದು ಚಿನ್ನ. ಇದರಲ್ಲಿ ನಮ್ಮ ದೇಹಕ್ಕೆ ಬೇಕಾದ ಖನಿಜಾಂಶಗಳೂ, ಪ್ರೊಟೀನ್‌, ಕಾರ್ಬೋಹೈಡ್ರೇಟ್‌, ಒಳ್ಳೆಯ ಕೊಬ್ಬು ಸೇರಿದಂತೆ ಎಲ್ಲವೂ ಇದೆ. ಸಕ್ಕರೆ ಇಲ್ಲ. ನಾರಿನಂಶವಿದ್ದು, ಜೀರ್ಣಕ್ರಿಯೆಗೆ ಅತ್ಯಂತ ಒಳ್ಳೆಯದು.

Masala Fox Nuts Weight Loss Snacks

ಅಧಿಕ ಪೋಷಕಾಂಶ

ತೂಕ ಇಳಿಸುವ ಮಂದಿಗೆ ಇದರಲ್ಲಿರುವ ಖುಷಿ ಸುದ್ದಿ ಎಂದರೆ ಇದು ಅತ್ಯಂತ ಕಡಿಮೆ ಕ್ಯಾಲರಿ ಹೊಂದಿದ ಆಹಾರಗಳಲ್ಲಿ ಒಂದು. ಹಾಗಂತ ಪೋಷಕಾಂಶಗಳ ವಿಷಯದಲ್ಲಿ ಯಾವುದೇ ರಾಜಿ ಇದು ಮಾಡಿಕೊಳ್ಳುವುದಿಲ್ಲ. ಹಸಿವಾದಾಗ ತಿನ್ನಬಹುದಾದ ಕಡಿಮೆ ಕ್ಯಾಲರಿಯ ಆಹಾರವಿದು. ಸ್ವಲ್ಪ ಮಸಾಲಾದ ಜೊತೆಗೆ ಹಗುರವಾಗಿ ಹುರಿದು ತಿಂದರೆ ರುಚಿಯಾದ ಆಹಾರವೂ ಹೌದು. ಸ್ವಲ್ಪವೇ ಸ್ವಲ್ಪ ತಿಂದರೂ ಹೊಟ್ಟೆ ತುಂಬಿರುವ ಭಾವವನ್ನು ಇದು ನೀಡುತ್ತದೆ.

ನಾರಿನಂಶ ಹೇರಳ

ಇದು ನಾರಿನಂಶದಿಂದ ಸಮೃದ್ಧವಾಗಿರುವ ಆಹಾರವಾದ್ದರಿಂದ ಜೀರ್ಣಕ್ರಿಯೆಗೆ ಅತ್ಯಂತ ಒಳ್ಳೆಯದು. ಹುರಿದಾಗ ಕ್ರಂಚೀಯಾಗಿ ಅತ್ಯಂತ ರುಚಿಯಾಗಿ ಇರುತ್ತದೆ. ಮಲಬದ್ಧತೆ ಸೇರಿದಂತೆ ಯಾವ ಸಮಸ್ಯೆಗಳೂ ಇದರ ಹತ್ತಿರ ಸುಳಿಯದು.

Skin Care

ಚರ್ಮದ ಆರೋಗ್ಯಕ್ಕೆ ಸೂಕ್ತ

ಮಖಾನಾದಲ್ಲಿ ಆಂಟಿ ಆಕ್ಸಿಡೆಂಟ್‌ ಗುಣಗಳಿದ್ದು, ಇದು ಆಂಟಿ ಏಜಿಂಗ್‌ ಕೂಡಾ ಹೌದು. ಫಿನಾಲಿಕ್‌ ಆಸಿಡ್‌ ಹಾಗೂ ಫ್ಲೇವನಾಯ್ಡ್‌ಗಳಿರುವ ಆಹಾರಗಳು ಫ್ರೀ ರ್ಯಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ಈ ಗುಣ ಮಖಾನಾದಲ್ಲಿರುವುದರಿಂದ, ನಿತ್ಯವೂ ಸೇವನೆ ಮಾಡುವುದರಿಂದ ಇದು ಚರ್ಮ ಬಹುಬೇಗನೆ ಸುಕ್ಕಾಗುವುದನ್ನು ತಡೆಯುತ್ತದೆ.

Heart Health Fish Benefits

ಹೃದಯಸ್ನೇಹಿ

ಮಖಾನಾ ಹೃದಯಸ್ನೇಹಿ ಕೂಡಾ ಹೌದು. ಇದರಲ್ಲಿರುವ ಒಳ್ಳೆಯ ಕೊಬ್ಬು ಹೃದಯಕ್ಕೆ ಒಳ್ಳೆಯದನ್ನೇ ಮಾಡುತ್ತದೆ. ಇದರಲ್ಲಿ ಮೆಗ್ನೀಶಿಯಂ ಅಧಿಕವಾಗಿದ್ದು ಕಡಿಮೆ ಕೊಲೆಸ್ಟೆರಾಲ್‌ ಇರುವುದರಿಂದ ಹೃದಯಕ್ಕೆ ಒಳ್ಳೆಯದು.

ಇದನ್ನೂ ಓದಿ: Benefits Of Cherries: ಚೆರ್ರಿ ಹಣ್ಣು ರುಚಿಗಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ಹಿತಕರ!

ಮಧುಮೇಹಿಗಳಿಗೆ ಸೂಕ್ತ

ಮಧುಮೇಹಿಗಳಿಗೂ ಇದು ಒಳ್ಳೆಯದು. ಇದರ ನಿತ್ಯ ಸೇವನೆಯಿಂದ ಮಧುಮೇಹಕ್ಕೆ ಏನೂ ತೊಂದರೆಯಾಗದು ಹಾಗೂ ಇದರಲ್ಲಿರುವ ಪೋಷಕಾಂಶಗಳು ಮಧುಮೇಹವನ್ನು ದೂರ ಇರಿಸುವಲ್ಲಿ ಸಹಾಯವನ್ನೇ ಮಾಡುತ್ತದೆ.

Continue Reading
Advertisement
Gadag News
ಕರ್ನಾಟಕ27 mins ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ1 hour ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ1 hour ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು2 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ2 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ2 hours ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ3 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌