ಆಯ್ಕೆ ಸಮಿತಿಯ 2 ಅಧಿಕಾರಿಗಳ ಮುಂದೆ ಟಿ20 ಸರಣಿ ಆಡಲಿದೆ ಭಾರತ; ಬಿಸಿಸಿಐ ಪ್ಲ್ಯಾನ್ ಏನು? - Vistara News

ಕ್ರಿಕೆಟ್

ಆಯ್ಕೆ ಸಮಿತಿಯ 2 ಅಧಿಕಾರಿಗಳ ಮುಂದೆ ಟಿ20 ಸರಣಿ ಆಡಲಿದೆ ಭಾರತ; ಬಿಸಿಸಿಐ ಪ್ಲ್ಯಾನ್ ಏನು?

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಟಗಾರರ ಪ್ರದರ್ಶನದ ಮೇಲೆ ನಿಗಾ ಇರಿಸಲು ಇಬ್ಬರು ಆಯ್ಕೆ ಸಮಿತಿಯ ಅಧಿಕಾರಿಗಳನ್ನು ಬಿಸಿಸಿಐ ದಕ್ಷಿಣ ಆಫ್ರಿಕಾಗೆ ಕಳುಹಿಸಿದೆ.

VISTARANEWS.COM


on

The spotlight is on India's finishers Rinku Singh and Jitesh Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡರ್ಬಾನ್​: ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ರಚಿಸುವ ಸಲುವಾಗಿ ಬಿಸಿಸಿಐ ಈಗಾಗಲೇ ಯುವ ಆಟಗಾರರನ್ನು ಆಡಿಸುವ ಮೂಲಕ ಪ್ರಯೋಗ ಆರಂಭಿಸಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಟಗಾರರ ಪ್ರದರ್ಶನದ ಮೇಲೆ ನಿಗಾ ಇರಿಸಲು ಇಬ್ಬರು ಆಯ್ಕೆ ಸಮಿತಿಯ ಅಧಿಕಾರಿಗಳನ್ನು ಬಿಸಿಸಿಐ ದಕ್ಷಿಣ ಆಫ್ರಿಕಾಗೆ ಕಳುಹಿಸಿದೆ.

ಆಯ್ಕೆ ಸಮಿತಿಯ ಸದಸ್ಯರಾದ ಎಸ್‌ಎಸ್ ದಾಸ್ ಮತ್ತು ಸಲೀಲ್ ಅಂಕೋಲಾ ಅವರು ದಕ್ಷಿಣ ಆಫ್ರಿಕಾದಲ್ಲಿ ಡಿ.10 ರೀಂದ ಆರಂಭವಾಗಲಿರುವ ಟಿ20 ಸರಣಿಯ ವೇಳೆ ಹಾಜರಿರಲಿದ್ದು ಎಲ್ಲ ಆಟಗಾರರ ಪ್ರದರ್ಶನದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಮೂಲಕ ಮುಂದಿನ ವರ್ಷದ ಟಿ20 ವಿಶ್ವಕಪ್​ನಲ್ಲಿ ಯಾವ ಆಟಗಾರನನ್ನು ಆಯ್ಕೆ ಮಾಡಬೇಕು ಎನ್ನುವುದನ್ನು ಪಟ್ಟಿ ಮಾಡಲಿದ್ದಾರೆ. ಹೀಗಾಗಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸುದುಪಯೋಗ ಪಡಿಸಿಕೊಂಡು ಆಯ್ಕೆ ಸಮಿತಿಯ ಗಮನಸೆಳೆಯಬೇಕಿದೆ.

ವಿಶ್ವಕಪ್​ಗೆ ಸಿದ್ಧತೆ

ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಟೀಮ್​ ಇಂಡಿಯಾ ಆಡುವ ಎಲ್ಲ ಟಿ20 ಸರಣಿಯಲ್ಲಿಯೂ ತಲಾ ಇಬ್ಬರು ಆಯ್ಕೆ ಸಮಿತಿಯ ಅಧಿಕಾರಿಗಳು ಆಟಗಾರರ ಪ್ರದರ್ಶನದ ಮೇಲ್ವಿಚಾರಣೆ ನಡೆಸಲಿದ್ದಾರೆ. ಹಿರಿಯ ಆಟಗಾರರಿಗೆ ಬಹುತೇಏಕ ಟಿ20 ಕ್ರಿಕೆಟ್​ ಬಾಗಿಲು ಮುಚ್ಚಿದಂತೆ ತೋರುತ್ತಿದೆ. ಇದೇ ಕಾರಣಕ್ಕೆ ಬಿಸಿಸಿಐ ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಸೋಲಿನ ಬಳಿಕ ಎಲ್ಲ ಹಿರಿಯ ಆಟಗಾರರನ್ನು ತಂಡದಿಂದ ದೂರವೇ ಇರಿಸಿದೆ.

ಅಭ್ಯಾಸ ಆರಂಭಿಸಿದ ಟೀಮ್​ ಇಂಡಿಯಾ

ಗುರುವಾರ ರಾತ್ರಿ ಡರ್ಬಾನ್ ತಲುಪಿರುವ ಟೀಮ್​ ಇಂಡಿಯಾ ಆಟಗಾರರು ಶುಕ್ರವಾರ ಅಭ್ಯಾಸ ಆರಂಭಿಸಿದ್ದಾರೆ. ಈ ಮಾಹಿತಿಯನ್ನು ಬಿಸಿಸಿಐ(BCCI) ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತ ತಂಡ ಭಾನುವಾರ ದಕ್ಷಿಣ ಆಫ್ರಿಕಾ(india vs south africa) ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

ಇದನ್ನೂ ಓದಿ ಡರ್ಬಾನ್​ನಲ್ಲಿ ಅಭ್ಯಾಸ ಆರಂಭಿಸಿದ ಸೂರ್ಯ ಪಡೆ; ಎಚ್ಚರಿಕೆ ನೀಡಿದ ಕೋಚ್​!

ಡರ್ಬಾನ್ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸುವ ಮುನ್ನ ಗುಂಪಾಗಿ ನಿಂತು ಮಾತುಕತೆ ನಡೆಸುತ್ತಿರುವ ಫೋಟೊವನ್ನು ಹಂಚಿಕೊಂಡಿರುವ ಬಿಸಿಸಿಐ “ಡರ್ಬನ್‌ನಿಂದ ಹಲೋ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20ಗೆ ನಮ್ಮ ಅಭ್ಯಾಸ ಆರಂಭ” ಎಂದು ಬರೆದುಕೊಂಡಿದೆ.

ಕೋಚ್​ ದ್ರಾವಿಡ್​ ಅವರ ಸಲಹೆಯಂತೆ ಟೀಮ್​ ಇಂಡಿಯಾದ ಎಲ್ಲ ಆಟಗಾರರು ಶುಕ್ರವಾರ ಹೆಚ್ಚುವರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ. ಶನಿವಾರವೂ ಕೂಡ ಬೌಲಿಂಗ್​ಗಿಂತ ಬ್ಯಾಟಿಂಗ್​ಗೆ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಸೂರ್ಯಕುಮಾರ್​, ಇಶಾನ್ ಕಿಶನ್​, ಗಾಯಕ್ವಾಡ್​ ಮತ್ತು ಯಶಸ್ವಿ ಜೈಸ್ವಾಲ್​ ನೆಟ್ಸ್​ನಲ್ಲಿ ಬೆವರು ಸುರಿಸಿದ ಫೋಟೊಗಳು ಕೂಡ ವೈರಲ್​ ಆಗಿದೆ. ಒಟ್ಟಾರೆ ಮುಂದಿನ ವರ್ಷದ ಟಿ20 ವಿಶ್ವಕಪ್​ಗೆ ದ್ರಾವಿಡ್​ ಅವರು ಬಲಿಷ್ಠ ತಂಡವೊಂದನ್ನು ರಚಿಸಲು ಮುಂದಾಗಿರುವುದು ಖಚಿತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK: ಮೋದಿಯ ಪ್ರಮಾಣ ವಚನದ ಬದಲು ಭಾರತ-ಪಾಕ್ ಪಂದ್ಯ ವೀಕ್ಷಿಸುವೆ ಎಂದ ​ಶಶಿ ತರೂರ್

IND vs PAK: ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಶಶಿ ತರೂರ್ ಹೇಳಿದ್ದಾರೆ. ತರೂರ್​ ಹೇಳಿಕೆಗೆ ಪರ-ವಿರೋಧ ವ್ಯಕ್ತವಾಗಿದೆ.

VISTARANEWS.COM


on

IND vs PAK
Koo

ನವದೆಹಲಿ: ಒಂದೆಡೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿ(Modi 3.0 Cabinet) ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ನಾಯಕರು ಭಾಗಿಯಾಗಲಿದ್ದಾರೆ. ಮತ್ತೊಂದೆಡೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕಾದಾಟ ನಡೆಸಲಿದೆ. ಇದೀಗ ಕಾಂಗ್ರೆಸ್​ ಸಂಸದ ಶಶಿ ತರೂರ್(Shashi Tharoor) ಅವರು ತಾನು ಮೋದಿ ಅವರ​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಶಶಿ ತರೂರ್​, ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್​ ಪಂದ್ಯವನ್ನು ವೀಕ್ಷಿಸುತ್ತೇನೆ. ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ಅದರಲ್ಲೂ ಭಾರತ ವಿರೋಧಿ ಮನಸ್ಥಿತಿಯ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳುವ ಮೂಲಕ ಮೋದಿಗೆ ಟಾಂಗ್​ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಶಶಿ ತರೂರ್ ಹೇಳಿದ್ದಾರೆ. ತರೂರ್​ ಹೇಳಿಕೆಗೆ ಪರ-ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ Modi 3.0 Cabinet: ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ಅಟಲ್‌ ಸಮಾಧಿಗೆ ಮೋದಿ ನಮನ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂನಲ್ಲಿ ಯುಡಿಎಫ್‌ (ಕಾಂಗ್ರೆಸ್‌) ಅಭ್ಯರ್ಥಿ ಶಶಿ ತರೂರ್‌ (Shashi Tharoor) ಅವರಿಗೆ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ (Rajeev Chandrasekhar) ಪ್ರಬಲ ಸ್ಪರ್ಧೆ ಒಡ್ಡಿದ್ದರು. ಒಂದು ಹಂತದಲ್ಲಿ ತರೂರ್‌ ಸೋಲಿನ ಭೀತಿಗೂ ಒಳಗಾಗಿದ್ದರು. ಆರಂಭದಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮುನ್ನಡೆ ಸಾಧಿಸಿದ್ದರು. ಒಂದು ಹಂತದಲ್ಲಿ ಅವರು ಜಯ ಗಳಿಸುತ್ತಾರೆ ಎಂದೂ ಭಾವಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಫೀನಿಕ್ಸ್‌ನಂತೆ ಎದ್ದು ಬಂದ ಶಶಿ ತರೂರು ಅಂತಿಮವಾಗಿ ಕೇವಲ 16,077 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು.

Continue Reading

ಕ್ರೀಡೆ

Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

Viral Video: ರಿಷಭ್​ ಪಂತ್​ ಮತ್ತು ಸೂರ್ಯಕುಮಾರ್​ ಅವರು ಹೋಟೆಲ್ ಕಾರಿಡಾರ್​ನಲ್ಲಿ ಪೇಪರ್​ ಬ್ಯಾಗ್​ ಒಂದನ್ನು ಇರಿಸಿ ಬ್ಯಾಟ್​ ಮೂಲಕ ಗಾಲ್ಫ್ ಆಡಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ಇಂದು ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಪಂದ್ಯದಲ್ಲಿ ಭಾರತ ತಂಡ ತನ್ನ ಬದ್ಧ ಎದುರಾಳಿ ಪಾಕಿಸ್ತಾನ(India vs Pakistan) ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್​ ಇಂಡಿಯಾದ(team India) ಸ್ಟಾರ್​ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್​(Rishabh Pant) ಮತ್ತು ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(Suryakumar Yadav) ಅವರು ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್​ ಆಡಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

ರಿಷಭ್​ ಪಂತ್​ ಮತ್ತು ಸೂರ್ಯಕುಮಾರ್​ ಅವರು ಹೋಟೆಲ್ ಕಾರಿಡಾರ್​ನಲ್ಲಿ ಪೇಪರ್​ ಬ್ಯಾಗ್​ ಒಂದನ್ನು ಇರಿಸಿ ಬ್ಯಾಟ್​ ಮೂಲಕ ಗಾಲ್ಫ್ ಆಡಿದ್ದಾರೆ. ಪಂತ್​ ಅವರು ಗಾಲ್ಫ್ ಚೆಂಡನ್ನು ತಮ್ಮ ಬ್ಯಾಟ್​ ಮೂಲಕ ಬಾರಿಸಿ ಚೆಂಡನ್ನು ನೇರವಾಗಿ ಪೇಪರ್​ ಬ್ಯಾಗ್ ಒಳಗಡೆಗೆ ಬಾರಿಸುವಲ್ಲಿ ಯಶಸ್ಸು ಕೂಡ ಕಂಡಿದ್ದಾರೆ. ಚೆಂಡು ಗುರಿ ತಲುಪಿದ ಸಂತಸದಲ್ಲಿ ಪಂತ್​ ಮತ್ತು ಸೂರ್ಯಕುಮಾರ್​ ಜೋರಾಗಿ ಕಿರುಚುತ್ತಾ ಕುಣಿದು ಕುಪ್ಪಳಿಸಿದ್ದಾರೆ. ಇದರ ವಿಡಿಯೊವನ್ನು ಪಂತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪಂತ್​ ಅವರು ಕಳೆದ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಅಜೇಯ 36 ರನ್​ ಬಾರಿಸಿ ಮಿಂಚಿದ್ದರು. ಇದೀಗ ಇಂದು ನಡೆಯುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್​ ನಡೆಸುವ ವಿಶ್ವಾಸದಲ್ಲಿದ್ದಾರೆ. 2022ರಲ್ಲಿ ಪಂತ್​ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಸುಮಾರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಹೀಗಾಗಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿ ಅವರಿಗೆ ಮಿಸ್​ ಆಗಿತ್ತು. ಇದೀಗ ಟಿ20 ವಿಶ್ವಕಪ್​ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಯೋಜನೆಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿಯೂ ಪಂತ್​ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು.

ಭಾರತ ಈ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್​ ಅವರೇ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading

ಕ್ರೀಡೆ

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

IND vs PAK: ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಎರಡೂ ದೇಶಗಳ ಅಭಿಮಾನಿಗಳು ರೋಚಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ತುದಿಗಾಲಲ್ಲಿ ನಿಂತಿರುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭ್ಯಾಸದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಟೀಮ್​ ಇಂಡಿಯಾ(Team India) ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಇಂದಿನ ಪಂದ್ಯದಲ್ಲಿ ಆಡಲಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಭುಜಕ್ಕೆ ಚೆಂಡಯ ತಗುಲಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್​ ಮೊಟಕುಗೊಳಿಸಿದ್ದ ರೋಹಿತ್​, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಶನಿವಾರ ಅಭ್ಯಾಸ ನಡೆಸುವ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಈ ವೇಳೆ ರೋಹಿತ್​ ಅವರು ಪಾಕ್​ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಚಿಂತಿಸುವ ಅಗತ್ಯವಿಲ್ಲ. ರೋಹಿತ್​ ಫಿಟ್​ ಆಗಿದ್ದು ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. ಈ ವಿಚಾರವನ್ನು ರೋಹಿತ್ ಶನಿವಾರ ರಾತ್ರಿ ನಡೆದ​ ಸುದ್ದಿಗೋಷ್ಠಿಯಲ್ಲಿ ಖಚಿತಪಡಿಸಿದರು.

ಪಾಕ್​ಗೆ ಮಾಡು ಇಲ್ಲವೇ ಮಡಿ ಪಂದ್ಯ


ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು. ನಿರೀಕ್ಷಿತ ಬೌನ್ಸರ್​ ಪುಡಿದೇಳುವ ನಾಸ್ಸೌ ಪಿಚ್​ನಲ್ಲಿ ಆಡುವುದು ಕೂಡ ಉಭಯ ತಂಡಗಳಿಗೆ ಸವಾಲಿನಿಂದ ಕೂಡಿರಲಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಆಡಬೇಕಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ


ಭಾರತ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್​ ಅವರೇ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading

ಕ್ರೀಡೆ

WI vs UGA: ಉಗಾಂಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

WI vs UGA: ಉಗಾಂಡ ಪರ ಎರಡಂಕಿ ಮೊತ್ತ ದಾಟಿದ್ದು ಕೇವಲ ಒಬ್ಬ ಬ್ಯಾಟರ್​ ಮಾತ್ರ. 9ನೇ ಕ್ರಮಾಂಕದಲ್ಲಿ ಆಡಲಿಳಿದ ಜುಮಾ ಮಿಯಾಗಿ ಅಜೇಯ 13 ರನ್​ ಬಾರಿಸಿದರು. ಉಳಿದೆಲ್ಲರು ಒಂದಂಕಿಗೆ ಸೀಮಿತರಾದರು

VISTARANEWS.COM


on

WI vs UGA
Koo

ಗಯಾನಾ: ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಆತಿಥೇಯ ವೆಸ್ಟ್​ ಇಂಡೀಸ್(WI vs UGA)​ ತಂಡ ಉಗಾಂಡ ವಿರುದ್ಧ ಭರ್ಜರಿ 134 ರನ್​ಗಳ ಗೆಲುವು ದಾಖಲಿಸಿದೆ. ಉಗಾಂಡ ಕೇವಲ 39 ರನ್​ಗಳಿಗೆ ಆಲೌಟ್​ ಆಯಿತು. ಇದು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ದಾಖಲಾದ ಕನಿಷ್ಠ ಮೊತ್ತದ 2ನೇ ನಿದರ್ಶನ. ಇದಕ್ಕೂ ಮುನ್ನ 2014ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನೆದರ್ಲೆಂಡ್ಸ್​ 39 ರನ್​ಗೆ ಆಲೌಟ್​ ಆಗಿತ್ತು.

ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಏಕಪಕ್ಷೀಯವಾಗಿ ಸಾಗಿದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್​ 5 ವಿಕೆಟ್​ಗೆ 173 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ ಉಂಗಾಡ, ಅಕೀಲ್​ ಹೊಸೈನ್​ ಅವರ ಘಾತಕ ಬೌಲಿಂಗ್​ ದಾಳಿಗೆ ತರಗೆಲೆಯಂತೆ ಉದುರಿ ಕೇವಲ 39 ರನ್​ ಗಳಿಗೆ ಸರ್ವಪತನ ಕಂಡಿತು. ಹೊಸೈನ್ 4 ಓವರ್​ ಬೌಲಿಂಗ್​ ನಡೆಸಿ ಕೇವಲ 11 ರನ್​ ವೆಚ್ಚದಲ್ಲಿ 5 ವಿಕೆಟ್​ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಉಗಾಂಡ ಪರ ಎರಡಂಕಿ ಮೊತ್ತ ದಾಟಿದ್ದು ಕೇವಲ ಒಬ್ಬ ಬ್ಯಾಟರ್​ ಮಾತ್ರ. 9ನೇ ಕ್ರಮಾಂಕದಲ್ಲಿ ಆಡಲಿಳಿದ ಜುಮಾ ಮಿಯಾಗಿ ಅಜೇಯ 13 ರನ್​ ಬಾರಿಸಿದರು. ಉಳಿದೆಲ್ಲರು ಒಂದಂಕಿಗೆ ಸೀಮಿತರಾದರು. ಮೂರು ಮಂದಿ ಶೂನ್ಯ ಸಂಕಟಕ್ಕೆ ಸಿಲುಕಿದರು.

ಇದನ್ನೂ ಓದಿ AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್​ ಪರ ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್(13) ಹೊರತುಪಡಿಸಿ ಉಳಿದೆಲ್ಲ ಬ್ಯಾಟರ್​ಗಳು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ಗಮನಸೆಳೆದರು. ಜಾನ್ಸನ್ ಚಾರ್ಲ್ಸ್ 4 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 44 ರನ್​ ಬಾರಿಸಿ ತಂಡದ ಪರ ಅತ್ಯಧಿಕ ರನ್​ ಬಾರಿಸಿದ ಆಟಗಾರ ಎನಿಸಿಕೊಂಡರು. ಉಳಿದಂತೆ ಆಲ್​ರೌಂಡರ್​ ಆ್ಯಂಡ್ರೆ ರಸೆಲ್​ ಅಜೇಯ 30 ರನ್​ ಬಾರಿಸಿದರು. ನಾಯಕ ಪೋವೆಲ್​(23), ನಿಕೋಲಸ್​ ಪೂರನ್​(22), ಶೆರ್ಫೇನ್ ರುದರ್ಫೋರ್ಡ್(22) ರನ್​ಗಳ ಕೊಡುಗೆ ನೀಡಿದರು.

ಇದನ್ನೂ ಓದಿ

‘ಸಿ’ ಗುಂಪಿನಲ್ಲಿರುವ ವೆಸ್ಟ್​ ಇಂಡೀಸ್​ ತಂಡ ಸತತ 2 ಗೆಲುವು ದಾಖಲಿಸಿ ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿದೆ. ಅಫಘಾನಿಸ್ತಾನ ಮೊದಲ ಸ್ಥಾನದಲ್ಲಿದೆ. ಉಭಯ ತಂಡಗಳು ಇನ್ನೊಂದು ಪಂದ್ಯ ಗೆದ್ದರೆ ಸೂಪರ್​-8 ಹಂತಕ್ಕೇರಲಿದೆ. ಇದೇ ಗ್ರೂಪ್​ನಲ್ಲಿರುವ ನ್ಯೂಜಿಲ್ಯಾಂಡ್​ ಕಳೆದ ಪಂದ್ಯದಲ್ಲಿ ಆಫ್ಘಾನ್​ ವಿರುದ್ಧ ಹೀನಾಯ ಸೋಲು ಕಂಡು ಕೊನೆಯ ಸ್ಥಾನದಲ್ಲಿದೆ.

ಟಿ20 ವಿಶ್ವಕಪ್​ನಲ್ಲಿ ಕನಿಷ್ಠ ಮೊತ್ತದ ಪಂದ್ಯಗಳು

39 ರನ್​ಗೆ ಶೀಲಂಕಾ ವಿರುದ್ಧ ನೆದರ್ಲೆಂಡ್ಸ್​ ಆಲೌಟ್​(2014)

39 ರನ್​ಗೆ ವೆಸ್ಟ್​ ಇಂಡೀಸ್ ವಿರುದ್ಧ ಉಗಾಂಡ ಆಲೌಟ್​(2024)

44 ರನ್​ಗೆ ಶ್ರೀಲಂಕಾ ವಿರುದ್ಧ ನೆದರ್ಲೆಂಡ್ಸ್​ ಆಲೌಟ್(2021)

55 ರನ್​ಗೆ ಇಂಗ್ಲೆಂಡ್​ ವಿರುದ್ಧ ವೆಸ್ಟ್​ ಇಂಡೀಸ್​ ಆಲೌಟ್​(2021)

Continue Reading
Advertisement
Maharaj Movie Objects by Bajrang Dal Starring Junaid Khan
ಬಾಲಿವುಡ್31 seconds ago

Maharaj Movie: ಹಿಂದು ಧರ್ಮ, ಶ್ರೀಕೃಷ್ಣನ ಅವಹೇಳನ; ಆಮೀರ್ ಖಾನ್ ಪುತ್ರನಿಗೆ ಬಜರಂಗದಳ ವಾರ್ನಿಂಗ್!

Electric shock
ಬೆಂಗಳೂರು ಗ್ರಾಮಾಂತರ14 mins ago

Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

JEE Advanced Result 2024
ಶಿಕ್ಷಣ30 mins ago

JEE Advanced 2024 Result: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಹೀಗೆ ಚೆಕ್‌ ಮಾಡಿ

IND vs PAK
ಕ್ರಿಕೆಟ್32 mins ago

IND vs PAK: ಮೋದಿಯ ಪ್ರಮಾಣ ವಚನದ ಬದಲು ಭಾರತ-ಪಾಕ್ ಪಂದ್ಯ ವೀಕ್ಷಿಸುವೆ ಎಂದ ​ಶಶಿ ತರೂರ್

Viral Video
ವೈರಲ್ ನ್ಯೂಸ್43 mins ago

Viral Video: ಬಾಲಕಿಯ ಹಿಂಭಾಗ ಮುಟ್ಟಿದ ಮುಸ್ಲಿಂ ಯುವಕ; ಆಮೇಲೆ ನಡೆದಿದ್ದೇ ಬೇರೆ!

Drowned in water
ಬೆಳಗಾವಿ50 mins ago

Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

Radhika Merchant archival Dior dress for her pre-wedding
ಸಿನಿಮಾ54 mins ago

Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ?

Car Accident in chikkodi
ಚಿಕ್ಕೋಡಿ1 hour ago

Car Accident : ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

Viral Video
ಕ್ರೀಡೆ1 hour ago

Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

Vastu Tips
ಧಾರ್ಮಿಕ1 hour ago

Vastu Tips: ಸಣ್ಣ ವಾಸ್ತು ದೋಷವೇ ಕುಟುಂಬದಲ್ಲಿ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌