ವಿವಾಹದ 'ಅರಿಶಿನ' ಕಾರ್ಯಕ್ರಮದ ವೇಳೆ ಗೋಡೆ ಕುಸಿದು 8 ಸಾವು - Vistara News

ದೇಶ

ವಿವಾಹದ ‘ಅರಿಶಿನ’ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 8 ಸಾವು

haldi function: ಮದುವೆಯ ಅರಿಶಿನ ಕಾರ್ಯಕ್ರಮ ಅವರು ಅಕ್ಷರಶಃ ಸೂತಕದ ಕಾರ್ಯಕ್ರಮವಾಗಿ ಮಾರ್ಪಟ್ಟಿತು. ಗೋಡೆ ಕುಸಿತು 8 ಜನರು ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

VISTARANEWS.COM


on

8 killed in wall collapse during wedding haldi function
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮವು, ಉತ್ತರ ಪ್ರದೇಶ: ಶುಕ್ರವಾರ ಇಲ್ಲಿನ ಘೋಸಿ ಪ್ರದೇಶದಲ್ಲಿ ನಡೆದ ವಿವಾಹ ಪೂರ್ವ ಕಾರ್ಯಕ್ರಮದ (Pre-Wedding Function) ವೇಳೆ ಹಠಾತ್ ಗೋಡೆ ಕುಸಿದು (Wall Collapses) ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಮಾತನಾಡಿ, ವಿವಾಹ ಪೂರ್ವ ‘ಹಲ್ದಿ’ ಕಾರ್ಯಕ್ರಮದ (haldi function) ವೇಳೆ ಇದ್ದಕ್ಕಿದ್ದಂತೆ 20 ಜನರ ಮೇಲೆ ಗೋಡೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಡೆ ಕುಸಿತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(viral Video).

ಪೊಲೀಸರು ಹೇಳುವ ಪ್ರಕಾರ, ಹಠಾತ್ ಕುಸಿದಿರುವ ಗೋಡೆಯನ್ನು ಇತ್ತೀಚೆಗಷ್ಟೇ ನಿರ್ಮಾಣ ಮಾಡಲಾಗಿತ್ತು. ಈ ಗೋಡೆ ನಿರ್ಮಾಣ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ. ಶುಕ್ರವಾರ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಪಕ್ಕದ ಗೋಡೆ ಕುಸಿದು ಬಿದ್ದಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಎಲ್ಲಾ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Road Accident: ಮೂವರ ಪ್ರಾಣ ತೆಗೆದ ಅಪಘಾತಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Delhi Floods: ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

VISTARANEWS.COM


on

Delhi Floods
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾತಾವರಣವೇ ಹಾಗೆ. ಮಳೆಗಾಲದಲ್ಲಿ ವಿಪರೀತ ಮಳೆ, ಬೇಸಿಗೆಯಲ್ಲಿ ವಿಪರೀತ ಬಿಸಿಲು ಹಾಗೂ ಚಳಿಗಾಲದಲ್ಲಿ ಮೈ ಕೊರೆಯುವ ಚಳಿ ಇರುತ್ತದೆ. ಮೂರು ಸೀಸನ್‌ಗಳು ಕೂಡ ಜನರಿಗೆ ಮಾರಣಾಂತಿಕವಾಗಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲೀಗ ಭಾರಿ ಮಳೆ (Rain In Delhi) ಸುರಿಯುತ್ತಿದೆ. ಇನ್ನು, ದೆಹಲಿಯ ಹಲವೆಡೆ ಪ್ರವಾಹದ ಸ್ಥಿತಿ (Delhi Floods) ಉಂಟಾಗಿದ್ದು, ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ (Rao IAS Coaching Institute) ನೀರು ನುಗ್ಗಿವೆ. ನೆಲಮಹಡಿ ತುಂಬ ನೀರುತ್ತಿದ್ದು, ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ವಿದ್ಯಾರ್ಥಿಯೊಬ್ಬರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ, ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಶವ ಪತ್ತೆಯಾಗಿವೆ. ಈಗ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿದುಬಂದಿದೆ.

ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತಡರಾತ್ರಿಯಾದರೂ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

“ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್‌ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿನಿಯರ ಸಾವುಂಟಾಗಿದೆ. ಕೂಡಲೇ ಎನ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಲೂ ಕಾರ್ಯಾಚರಣೆ ಮುಂದುವರಿದಿದೆ” ಎಂಬುದಾಗಿ ಸೆಂಟ್ರಲ್‌ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್‌ ತಿಳಿಸಿದ್ದಾರೆ.

ಇದನ್ನೂ ಓದಿ: Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

Continue Reading

ದೇಶ

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Pervez Musharraf
Koo

ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Continue Reading

ದೇಶ

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

Tihar Jail: ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇನ್ನೂ 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Tihar Jail
Koo

ನವದೆಹಲಿ: ಜೈಲು ಅಂದರೆ, ಅಲ್ಲೆಲ್ಲ ಕನಿಷ್ಠ ಮೂಲ ಸೌಕರ್ಯಗಳಿರುತ್ತವೆ. ಒಂದೇ ಸೆಲ್‌ನಲ್ಲಿ ನಾಲ್ಕೈದು ಕೈದಿಗಳೊಂದಿಗೆ ಮಲಗಬೇಕು, ಸಾಮೂಹಿಕ ಶೌಚಾಲಯ, ಸೊಳ್ಳೆಗಳ ಕಾಟ, ಸಹ ಕೈದಿಗಳ ಉಪಟಳ, ತಣ್ಣೀರಿನ ಸ್ನಾನ ಮಾಡಬೇಕು, ಜೈಲಧಿಕಾರಿಗಳು ಹೇಳಿದ ಕೆಲಸ ಮಾಡಬೇಕು. ಆದರೆ, ಭಾರತದ ಜೈಲುಗಳಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಸೌಕರ್ಯ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಇಂತಹ ಆರೋಪಕ್ಕೆ ನಿದರ್ಶನ ಎಂಬಂತೆ, ತಿಹಾರ ಜೈಲಿನಲ್ಲಿರುವ (Tihar Jail) 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌ (HIV Positive) ಬಂದಿದೆ. ಅಷ್ಟೇ ಅಲ್ಲ, 200 ಕೈದಿಗಳು ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ (Syphilis) ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಿಹಾರ ಜೈಲಿನಲ್ಲಿ ಒಟ್ಟು 14 ಸಾವಿರ ಕೈದಿಗಳಿದ್ದಾರೆ. ಇವರಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಿದಾಗ, ಅವರಲ್ಲಿ 125 ಮಂದಿಗೆ ಎಚ್‌ಐವಿ ಪಾಸಿಟಿವ್‌, ಇನ್ನೂ 200 ಮಂದಿ ಸಿಫಿಲ್ಸ್‌ ಎಂಬ ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ತಿಹಾರ ಜೈಲಿನಲ್ಲಿ ನಿಯಮಿತವಾಗಿ ಕೈದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅವರು ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಾರೆಯೇ? ಅವರ ಆರೋಗ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲು ತಪಾಸಣೆ ಮಾಡಲಾಗುತ್ತದೆ.

ಇತ್ತೀಚೆಗೆ ತಿಹಾರ ಜೈಲಿನ ಡಿಜಿ ಆಗಿ ಸತೀಶ್‌ ಗೋಲ್ಚಾ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರು ಕೈದಿಗಳ ಆರೋಗ್ಯ ತಪಾಸಣೆಗೆ ಸೂಚಿಸಿದ್ದರು. ಅದರಂತೆ, ಕಳೆದ ಮೇ ಹಾಗೂ ಜೂನ್‌ ತಿಂಗಳಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನೂ, 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಸುರಕ್ಷಿತ ಲೈಂಗಿಕ ಸಂಪರ್ಕ ಸೇರಿ ಹಲವು ಕಾರಣಗಳಿಂದಾಗಿ ಎಚ್‌ಐವಿ ತಗುಲುತ್ತದೆ. ಆದರೆ, ಜೈಲಿನಲ್ಲಿರುವ ನೂರಾರು ಕೈದಿಗಳಿಗೆ ಹೇಗೆ ಏಕಾಏಕಿ ಎಚ್‌ಐವಿ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ. ಇನ್ನು, ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇವರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: K Kavitha : ತಿಹಾರ್​ ಜೈಲಿನಿಂದಲೇ ಕವಿತಾ ಅರೆಸ್ಟ್​​; ಇದೀಗ ಸಿಬಿಐ ಸರದಿ

Continue Reading

ದೇಶ

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಳಿಕ ಯುವಕನು ನಾಪತ್ತೆಯಾಗಿದ್ದು, ಆತನನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ.

VISTARANEWS.COM


on

Mumbai Girl
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ನಿಜವಾದ ಪ್ರೀತಿ-ಪ್ರೇಮ ಎಂಬುದರ ಅರ್ಥವೇ ಕ್ಷೀಣಿಸುತ್ತಿದೆ. ಕಾಲೇಜು ಓದುವಾಗಲೇ ಪ್ರೀತಿಸುವುದು, ಜಗಳ ಆಡಿ ಒಂದೆರಡು ವರ್ಷದಲ್ಲಿ ದೂರ ಆಗುವುದು, ಬ್ರೇಕಪ್‌ (Love Breakup) ಬಳಿಕ ಮತ್ತೊಂದು ಲವ್‌ ಹಿಂದೆ ಓಡುವುದು ಸಾಮಾನ್ಯ ಎಂಬಂತಾಗಿದೆ. ಇನ್ನೂ, ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರೇಮಿಗಳು, ತಾವು ಇಷ್ಟಪಟ್ಟವರು ಬ್ರೇಕಪ್‌ ಎಂದರೆ ಅಥವಾ ಇನ್ನೊಂದು ಅಫೇರ್‌ನ ಅನುಮಾನ ಮೂಡಿ ಕೊಲೆಯಂತಹ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ (Mumbai) ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಪೊದೆಯಲ್ಲಿ ಎಸೆದಿರುವ ಪ್ರಕರಣ ಬಯಲಾಗಿದೆ.

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. “ತಡರಾತ್ರಿ 2 ಗಂಟೆ ಸುಮಾರಿಗೆ ಉರಾನ್‌ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಶವ ಬಿದ್ದಿದೆ ಎಂಬುದಾಗಿ ಕರೆ ಬಂದಿತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಯುವತಿ ಮೈಮೇಲೆ ಭೀಕರ ಗಾಯಗಳಾಗಿವೆ. ಆಕೆಯನ್ನು ಇರಿದು ಕೊಲೆ ಮಾಡಲಾಗಿದೆ” ಎಂದು ನವಿ ಮುಂಬೈ ಡಿಸಿಪಿ ವಿವೇಕ್‌ ಪನ್ಸಾರೆ ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, ಯುವಕ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪ ಮೂಡಿತ್ತು. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಪತ್ತೆಯಾದ ಬಳಿಕ ಯುವಕನ ಮೇಲೆ ಶಂಕೆ ವ್ಯಕ್ತವಾಗಿದೆ. ಯುವಕನು ಈಗ ಪ್ರಾಥಮಿಕ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಯುವಕನು ಕೂಡ ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆಹಚ್ಚಲು ಐದು ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುತ್ತದೆ” ಎಂಬುದಾಗಿ ಡಿಸಿಪಿ ತಿಳಿಸಿದ್ದಾರೆ.

ಯುವತಿಯು ಉರಾನ್‌ ಪ್ರದೇಶದ ನಿವಾಸಿಯಾಗಿದ್ದು, ಅಲ್ಲಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಬೇಲಾಪುರದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇದೇ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪಗಳು, ಜಗಳಗಳು ಜಾಸ್ತಿಯಾಗಿದ್ದವು ಎಂದು ತಿಳಿದುಬಂದಿದೆ. ಆದಾಗ್ಯೂ, ಯುವತಿಯನ್ನು ಕೊಲೆ ಮಾಡಲು ನಿಖರ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ.

ಇದನ್ನೂ ಓದಿ: Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Continue Reading
Advertisement
Delhi Floods
ಪ್ರಮುಖ ಸುದ್ದಿ35 mins ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Paris Olympics 2024
ಕ್ರೀಡೆ44 mins ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ52 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ58 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ2 hours ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ2 hours ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ3 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ11 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ12 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌