Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಒಣಹವೆ; ನಾಳೆ ಈ ಜಿಲ್ಲೆಗಷ್ಟೆ ಮಳೆ ಸೂಚನೆ - Vistara News

ಉಡುಪಿ

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಒಣಹವೆ; ನಾಳೆ ಈ ಜಿಲ್ಲೆಗಷ್ಟೆ ಮಳೆ ಸೂಚನೆ

rain news : ರಾಜ್ಯದ ಮುಕ್ಕಾಲು ಜಿಲ್ಲೆಗಳಲ್ಲಿ ಮಳೆ ಮಾಯವಾಗಿದ್ದು ಒಣಹವೆ (Dry weather) ಇರಲಿದೆ. ಆರು ಜಿಲ್ಲೆಗಳಿಗೆ ಮಳೆಯಾಗುವ (karnataka weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

karnataka weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದರೂ, ಕೆಲವೆಡೆ ಸಾಧಾರಣದೊಂದಿಗೆ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಲ್ಲಿ ಚದುರಿದಂತೆ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಹಗುರದಿಂದ ಕೂಡಿದ (rain news) ಮಳೆಯಾಗಲಿದೆ. ಡಿ.13ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (karnataka weather Forecast) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆಯೇ (Dry weather) ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಇರಲಿದೆ.

ಮಲೆನಾಡಿನ ಕೊಡಗು ಮತ್ತು ಹಾಸನದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ಉಳಿದಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬಿಸಿಲ ವಾತಾವರಣ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆಯಾದರೆ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಒಣಹವೆ ಇರಲಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ವಿಜಯಪುರದಲ್ಲಿ ಕಡಿಮೆ ಉಷ್ಣಾಂಶ

ಸೋಮವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ದಕ್ಷಿಣ ಕನ್ನಡದಲ್ಲಿ ಮಂಗಳೂರು, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ವಿಜಯಪುರದಲ್ಲಿ 12 ಡಿ.ಸೆ ಕಡಿಮೆ ಉಷ್ಣಾಂಶ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Drown in Lake: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ನೀರುಪಾಲಾಗಿದ್ದಾರೆ

VISTARANEWS.COM


on

Drowned in Lake
Koo

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kamal Haasan Indian 2 to release on July 12
ಕಾಲಿವುಡ್19 mins ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ25 mins ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ33 mins ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್1 hour ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ1 hour ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ1 hour ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Devara Fear Song Jr NTR Unleashes Terror In Sync
ಟಾಲಿವುಡ್2 hours ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ2 hours ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ2 hours ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ2 hours ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ19 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ20 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌