Rajasthan DCM: ಯಾರಿವರು ರಾಜಸ್ಥಾನ ಡಿಸಿಎಂಗಳಾದ ದಿಯಾ ಕುಮಾರಿ, ಪ್ರೇಮ್ ಚಂದ್ ಬೈರ್ವಾ? - Vistara News

ದೇಶ

Rajasthan DCM: ಯಾರಿವರು ರಾಜಸ್ಥಾನ ಡಿಸಿಎಂಗಳಾದ ದಿಯಾ ಕುಮಾರಿ, ಪ್ರೇಮ್ ಚಂದ್ ಬೈರ್ವಾ?

Rajasthan DCM: ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಗೆದ್ದಿರುವ ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ.

VISTARANEWS.COM


on

Who are these Diya Kumari, Prem Chand Bairwa? elected to Rajasthan DCM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಛತ್ತೀಸ್‌ಗಢ (Chhattisgarh) ಮತ್ತು ಮಧ್ಯ ಪ್ರದೇಶದಲ್ಲಿ (Madhya Pradesh) ಮುಖ್ಯಮಂತ್ರಿಗಳಾಗಿ ಹೊಸಬರನ್ನು ಆಯ್ಕೆ ಮಾಡಿದಂತೆ ರಾಜಸ್ಥಾನದಲ್ಲಿ (Rajasthan) ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್‌ಲಾಲ್ ಶರ್ಮಾ (Bhajanlal Sharma) ಅವರನ್ನು ಬಿಜೆಪಿ ಪಾರ್ಟಿಯು, ಸಿಎಂ ಪೋಸ್ಟ್‌ಗೆ (Chief Minister) ನೇಮಕ ಮಾಡಿದೆ. ಇದೇ ವೇಳೆ, ಜನರ ರಾಜಕುಮಾರಿ ಎಂದೇ ಖ್ಯಾತರಾಗಿರುವ ದಿಯಾ ಕುಮಾರಿ (Diya Kumari) ಮತ್ತು ಪ್ರೇಮ್ ಚಂದ್ ಬೈರ್ವಾ (Prem Chand Bairwa) ಅವರನ್ನು ಉಪ ಮುಖ್ಯಮಂತ್ರಿಗಳಾಗಿ (Rajasthan DCM) ಆಯ್ಕೆ ಮಾಡಲಾಗಿದೆ.

ಯಾರು ಈ ದಿಯಾ ಕುಮಾರಿ?

ಜೈಪುರ ರಾಜ ಕುಟುಂಬದ ರಾಜಕುಮಾರಿ ದಿಯಾ ಕುಮಾರಿ ಹಾಲಿ ಸಂಸದೆಯೂ ಆಗಿದ್ದರು. ದಿಯಾ ಕುಮಾರಿ ಅವರು ಜೈಪುರದ ರಾಜವಂಶದ ಕೊನೆಯ ಆಡಳಿತದ ಮಹಾರಾಜ ಮಾನ್ ಸಿಂಗ್ II ಅವರ ಮೊಮ್ಮಗಳು. ಪ್ರಚಾರದ ವೇಳೆ ದಿಯಾ ಕುಮಾರಿಯನ್ನು ಜೈಪುರದ ಮಗಳು, ಬೀದಿಗಳಲ್ಲಿ ನಡೆಯುವ ರಾಜಕುಮಾರಿ ಎಂದೇ ಪ್ರಚಾರ ಮಾಡಲಾಯಿತು. ರಾಜಸ್ಥಾನದ ಪರಂಪರೆ ಮತ್ತು ಸರಳತೆಯ ಮಿಶ್ರಣವಾಗಿರುವ ದಿಯಾ ಕುಮಾರಿ ಅವರು ರಾಜಸ್ಥಾನದಲ್ಲಿ ಸದ್ಯ ಅತ್ಯಂತ ಜನಪ್ರಿಯ ನಾಯಕಿ.

2013ರಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರ್ಪಡೆಯಾದ ದಿಯಾ ಕುಮಾರಿ ಅವರು ಈವರೆಗೆ ಎರಡು ಚುನಾವಣೆಗಳನ್ನು ಗೆದ್ದಿದ್ದಾರೆ. 2013ರಲ್ಲಿ ಅವರು ಸವಾಯಿ ಮಾಧೋಪುರ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರು. 2019ರಲ್ಲಿ ರಾಜಸಮಂದ್ ಕ್ಷೇತ್ರದಿಂದ ಸ್ಪರ್ಧಿಸಿ 5.51 ಲಕ್ಷ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆಯಾದರು. ಪರಿಸರ, ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಸಬಲೀಕರಣ ವಿಷಯಗಳ ಮೂಲಕವೇ ಹೆಚ್ಚು ಪ್ರಸಿದ್ಧಿಗೆ ಬಂದಿರುವ 52 ವರ್ಷದ ದಿಯಾ ಕುಮಾರಿ ಅವರು, 2019 ರಲ್ಲಿ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಸದಸ್ಯರಾಗಿ ಸೇವೆ ಸಲ್ಲಿಸಲು ಆಯ್ಕೆಯಾದರು. 2023ರ ಚುನಾವಣೆಯಲ್ಲಿ ದಿಯಾ ಕುಮಾರಿ ಅವರು ಜೈಪುರದ ವಿದ್ಯಾನಗರದ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದಾರೆ.

ಯಾರು ಪ್ರೇಮ್ ಚಂದ್ ಬೈರ್ವಾ?

54 ವರ್ಷದ ಪ್ರೇಮ್ ಚಂದ್ ಬೈರ್ವಾ ಅವರು ದುದು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಾಬುಲಾಲ್ ನಗರ್ ಅವನರ್ನು 35 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. 2018ರ ಚುನಾವಣೆಯಲ್ಲಿ ಬೈರ್ವಾ ಅವರು ಸೋಲು ಕಂಡಿದ್ದರು. ಆಗ ಬಾಬು ಲಾಲ್ ನಗರ್ ಅವರು 14,779 ಮತಗಳ ಅಂತರದಿಂದ ಗೆದ್ದಿದ್ದರು. ಬೈರ್ವಾ ಅವರು 2013 ರಲ್ಲಿ ದುದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಜಾರಿ ಲಾಲ್ ನಗರ್ ಅವರನ್ನು 33,720 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದರು. ರಾಜಕೀಯವಾಗಿ ಸಾಕಷ್ಟು ಅನುಭವ ಹೊಂದಿರುವ ಬೈರ್ವಾ ಅವರನ್ನು ಡಿಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭೆ ಚುನಾವಣೆಯಲ್ಲಿ, ರಾಜಸ್ಥಾನದ 199 ಸೀಟುಗಳ ಪೈಕಿ ಭಾರತೀಯ ಜನತಾ ಪಾರ್ಟಿಯು 115 ಗೆದ್ದು, ಭರ್ಜರಿ ಜಯ ಸಾಧಿಸಿತು. ಆಢಳಿತಾರೂಢ ಕಾಂಗ್ರೆಸ್ ಪಕ್ಷವು ಕೇವಲ 65 ಸೀಟುಗಳನ್ನು ಮಾತ್ರ ಗೆಲ್ಲಲು ಶಕ್ಯವಾಯಿತು. ಇದರೊಂದಿಗೆ ಅಧಿಕಾರವನ್ನು ಕಳೆದುಕೊಂಡಿತು. ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮುನ್ನು, ಆ ಹುದ್ದೆಗೆ ಮಾಜಿ ಸಿಎಂ ವಸುಂಧರಾ ರಾಜೇ, ಅನಿತಾ ಭದೇಲ್, ಸಿದ್ಧಿ ಕುಮಾರಿ, ಬಾಬಾ ಬಾಲಕನಾಥ್, ಗಜೇಂದ್ರ ಶೆಖಾವತ್, ಅಶ್ವಿನ್ ವೈಷ್ಣವ್ ಅವರ ಹೆಸರು ಕೇಳಿ ಬರುತ್ತಿತ್ತು.

ಈ ಸುದ್ದಿಯನ್ನೂ ಓದಿ: Bhajanlal Sharma: ಯಾರಿವರು ರಾಜಸ್ಥಾನದ ನೂತನ ಸಿಎಂ ಭಜನ್‌ಲಾಲ್ ಶರ್ಮಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Weather Updates: ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

VISTARANEWS.COM


on

Weather Report
Koo

ನವದೆಹಲಿ: ದೇಶಾದ್ಯಂತ ಒಂದೆಡೆ ಬಿಸಿಲು(Heat wave) ಮತ್ತೊಂದೆಡೆ ಮಳೆರಾಯನ(Heavy Rain) ಅಬ್ಬರ ಜೋರಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೆಲವು ದಿನಗಳಿಂದ ಮಳೆಯ ಅಬ್ಬರ ಶುರುವಾಗಿದ್ದು, ಉತ್ತರಭಾರತದ ರಾಜ್ಯಗಳಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ(Weather Updates). ಉತ್ತರಭಾರತದಲ್ಲಿ ಬುಧವಾರ ಗರಿಷ್ಠ ತಾಪಮಾನ ದಾಖಲೆ ಆಗಿದ್ದು, ಅಧಿಕೃತ ಮಾಹಿತಿ ಪ್ರಕಾರ ದಿಲ್ಲಿ, ಪಂಜಾಬ್‌, ಹರ್ಯಾಣ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್‌ ಮತ್ತು ಮಧ್ಯಪ್ರದೇಶದ ಒಟ್ಟು 24 ಪ್ರದೇಶಗಳಲ್ಲಿ ಬುಧವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ.

ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಕೇರಳದಲ್ಲಿ ಭಾರೀ ಮಳೆ

ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕೇರಳದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಇನ್ನು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು. ಇನ್ನು ಭಾರೀ ಮಳೆಗೆ ಇದುವರೆಗೆ ನಾಲ್ವರು ಬಲಿ ಆಗಿದ್ದಾರೆ.

ಕೇರಳದಲ್ಲಿ ವಿಮಾನ ಸಂಚಾರಕ್ಕೆ ಸ್ಥಗಿತ

ಇನ್ನು ಕೇರಳದಲ್ಲಿ ಭಾರೀ ಮಳೆಯಿಂದಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಕಲ್ಲಿಕೋಟೆ ವಿಮಾನ ನಿಲ್ದಾಣದಿಂದ ಹೊರಡಬೇಕಾಗಿದ್ದ ವಿಮಾನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ದೋಹಾ, ಮಸ್ಕತ್‌, ದುಬೈ, ದಾಮನ್‌ ಮತ್ತು ರಿಯಾಧ್‌ನಿಂದ ಬರುತ್ತಿದ್ದ ವಿಮಾನಗಳನ್ನು ಡೈವರ್ಟ್‌ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಜೆಡ್ಡಾ, ಕುವೈತ್ ಮತ್ತು ದುಬೈಗೆ ಹೋಗುವ ವಿಮಾನಗಳು ವಿಳಂಬವಾಗಿದ್ದರೆ, ದೋಹಾಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ:Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಒಡಿಶಾದಲ್ಲಿ ಈ ವಾರ ಭಾರೀ ಮಳೆ

ಇನು ಒಡಿಶಾದಲ್ಲೂ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಂದಾಜಿಸಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದ್ದು, ಅದರ ಪ್ರಭಾವದಿಂದ ಉತ್ತರ ಒಡಿಶಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ.

Continue Reading

ಕ್ರೈಂ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

Physical Abuse & Murder: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

VISTARANEWS.COM


on

physical abuse & murder
Koo

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಘಟನೆ ವಿವರ:

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading

ಕ್ರೈಂ

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

Physical Abuse: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

VISTARANEWS.COM


on

Physical Abuse
Koo

ಪಟ್ನ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ್ದ ನಾಲ್ವರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಇವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಜತೆಗೆ ನ್ಯಾಯಾಲಯವು ಅಪರಾಧಿಗಳಿಗೆ ತಲಾ 25,000 ರೂ.ಗಳ ದಂಡವನ್ನೂ ವಿಧಿಸಿದೆ (Crime News).

ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

ಘಟನೆಯ ವಿವರ

ಅಂದು ಸಂತ್ರಸ್ತೆ ತನ್ನ ಸಹೋದರನೊಂದಿಗೆ ಕಸೆರಾ ಗ್ರಾಮದ ಜಾತ್ರೆಗೆ ಹೋಗಿದ್ದಳು. ಸ್ವಲ್ಪ ಸಮಯದ ನಂತರ ಆಕೆ ಸಮೀಪದ ಶಾಲೆಯೊಂದರ ಶೌಚಾಲಯಕ್ಕೆ ತೆರಳಿದ್ದಳು. ಈ ವೇಳೆ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಕೂಡ ಅಲ್ಲಿಗೆ ಆಗಮಿಸಿದ್ದರು. ಶೌಚಾಲಯದಿಂದ ಹೊರಬಂದ ಆಕೆಯನ್ನು ಬಲವಂತವಾಗಿ ಶಾಲೆಯ ಛಾವಣಿಗೆ ಕರೆದೊಯ್ದರು. ಅಲ್ಲಿ ಅವರು ಸರದಿಯಂತೆ ಸಾಮೂಹಿಕ ಅತ್ಯಾಚಾರ ಎಸಗಿದರು. ಬಾಲಕಿಯ ಕೂಗು ಕೇಳಿದ ಸ್ಥಳೀಯರು ಜಮಾಯಿಸಲು ಆರಂಭಿಸುತ್ತಿದ್ದಂತೆ ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಿಂದ ಈ ಎಲ್ಲ ನಾಲ್ಕು ಅಪರಾಧಿಗಳು ಅಲ್ಲಿಂದ ತಲೆ ಮರೆಸಿಕೊಂಡಿದ್ದರು. ಬಳಿಕ ಸ್ಥಳೀಯರು ಬೆನ್ನಟ್ಟಿ ಜಾಫರ್ ಅನ್ಸಾರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ತನಿಖೆ ವೇಳೆ ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಅವರೂ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದಿತ್ತು. ಬಳಿಕ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದರು. ಘಟನೆ ನಡೆದ ಮಾರನೇ ದಿನ ಅಂದರೆ 2022ರ ಸೆಪ್ಟೆಂಬರ್‌ 6ರಂದು ಅಪರಾಧಿಗಳ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ನಾಲ್ವರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಡಿ) ಮತ್ತು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.

ಸಂತ್ರಸ್ತೆಯ ಸಹೋದರಿಯ ಮೇಲೂ ನಡೆದಿತ್ತು ದೌರ್ಜನ್ಯ

ʼʼನ್ಯಾಯಾಲಯವು ತನ್ನ ತೀರ್ಪಿನಲ್ಲಿ ಎಲ್ಲ ಅಪರಾಧಿಗಳನ್ನು ಅವರ ಕೊನೆಯ ಉಸಿರಿರುವವರೆಗೂ ಜೈಲಿನಲ್ಲಿಡಲು ಆದೇಶಿಸಿದೆ. ಒಂದೂವರೆ ವರ್ಷಗಳ ಕಾಲ ನಡೆದ ವಿಚಾರಣೆಯ ಸಮಯದಲ್ಲಿ, ಅಪರಾಧಿಗಳು ಅನೇಕ ಬಾರಿ ವಕೀಲರನ್ನು ಬದಲಾಯಿಸಿದ್ದಾರೆ. ಆದಾಗ್ಯೂ ಅವರಿಗೆ ಯಾವುದೇ ಪ್ರಯೋಜನ ಸಿಗಲಿಲ್ಲ. ಕೊನೆಗೂ ಅಪರಾಧಿಗಳಿಗೆ ಶಿಕ್ಷೆಯಾಗಿದೆʼʼ ಎಂದು ಸಂತ್ರಸ್ತೆಯ ಪರ ವಕೀಲರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಲಕ್ಷ ರೂ. ಪರಿಹಾರ ಪಾವತಿಸುವಂತೆಯೂ ಬಿಹಾರ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ʼʼದೌರ್ಭಾಗ್ಯ ಎಂದರೆ ಸಂತ್ರಸ್ತೆಯ ಸಹೋದರಿಯ ಮೇಲೂ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂನ್‌ನಲ್ಲಿ ಕೈಗೆತ್ತಿಕೊಳ್ಳಲಿದೆʼʼ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Continue Reading
Advertisement
Weather Report
ದೇಶ4 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ7 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ13 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ15 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ42 mins ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ45 mins ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

PM Narendra Modi
Lok Sabha Election 202454 mins ago

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಬುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Murder Case
ಬೆಳಗಾವಿ54 mins ago

Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

gold rate today kiara
ಚಿನ್ನದ ದರ1 hour ago

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

hotel oterra bomb hoax
ಕ್ರೈಂ2 hours ago

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌