ಮೂವರು ಸಹೋದ್ಯೋಗಿಗಳಿಗೆ ಗುಂಡಿಕ್ಕಿದ ಸಿಕ್ಕಿಂ ಪೊಲೀಸ್‌, ಇಬ್ಬರ ಸಾವು - Vistara News

ಕ್ರೈಂ

ಮೂವರು ಸಹೋದ್ಯೋಗಿಗಳಿಗೆ ಗುಂಡಿಕ್ಕಿದ ಸಿಕ್ಕಿಂ ಪೊಲೀಸ್‌, ಇಬ್ಬರ ಸಾವು

ಜಮ್ಮು ಕಾಶ್ಮೀರದಲ್ಲಿ ಗಡಿ ಭದ್ರತಾ ಸಿಬ್ಬಂದಿಯೊಬ್ಬ ಸಹೋದ್ಯೋಗಿಗಳಿಗೆ ಗುಂಡಿಕ್ಕಿದ ಬೆನ್ನಲ್ಲೇ, ದಿಲ್ಲಿಯಲ್ಲಿ ಅಂಥದ್ದೇ ದುರಂತ ಮರುಕಳಿಸಿದೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

VISTARANEWS.COM


on

shootout
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನವ ದೆಹಲಿಯ ಹೈದರ್‌ಪುರದಲ್ಲಿರುವ ಜಲ ಶುದ್ಧೀಕರಣದಲ್ಲಿ ಸಿಕ್ಕಿಂ ಪೊಲೀಸ್‌ ಇಲಾಖೆಯ ಸಿಬ್ಬಂದಿಯೊಬ್ಬ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ನಿಂದಿಸಿದರು ಎಂಬ ಕಾರಣಕ್ಕೆ ಮೂವರು ಸಹೋದ್ಯೋಗಿಗಳ ಮೇಲೆ ಸೋಮವಾರ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪೊಲೀಸ್‌ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲರೂ ಇಂಡಿಯನ್‌ ರಿಸರ್ವ್‌ ಬೆಟಾಲಿಯನ್‌ ( ಐಆರ್‌ಬಿಎನ್) ಪಡೆಯ ಭದ್ರತಾ ಸೇವೆ ವಿಭಾಗದಲ್ಲಿದ್ದರು. ಘಟಕದ ಭದ್ರತೆಯನ್ನು ನೋಡಿಕೊಳ್ಳುತ್ತಿದ್ದರು.

ಜಮ್ಮು ಕಾಶ್ಮೀರದ ಉಧಾಮ್ ಪುರದಲ್ಲಿ ಇಂಡೊ-ಟಿಬೆಟಿಯನ್‌ ಗಡಿ ಭದ್ರತೆಯ ಪೊಲೀಸ್‌ ಪೊಲೀಸ್‌ ಸಿಬ್ಬಂದಿಯೊಬ್ಬ ಕಳೆದ ವಾರ ಮೂವರು ಸಹೋದ್ಯೋಗಿಗಳಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದರು. ಇಲ್ಲೂ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿ ಕಲಹ ಏರ್ಪಟ್ಟಿತ್ತು.

ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಬೀನ್‌ ರಾಯ್‌ನನ್ನು (೩೨) ದಿಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವರದಿಗಳ ಪ್ರಕಾರ ಆರೋಪಿ ಪ್ರಬೀನ್‌ ರಾಯ್‌, ತನ್ನ ಪತ್ನಿ ಬಗ್ಗೆ ಕೆಟ್ಟದಾಗಿ ನಿಂದಿಸಿದರು ಎಂಬ ಕಾರಣಕ್ಕೆ ಗುಂಡಿನ ದಾಳಿ ನಡೆಸಿದ್ದಾನೆ.

ಗುಂಡಿನ ದಾಳಿಗೆ ಹತರಾದವರನ್ನು ಕಮಾಂಡರ್‌ ಪಿಂಟೊ ನಮುಗ್ಯಲ್‌ ಭುಟಿಯಾ, ಇಂದ್ರ ಲಾಲ್‌ ಛೆಟ್ರಿ ಎಂದು ಗುರುತಿಸಲಾಗಿದೆ. ಇಬ್ಬರೂ ೨೦೧೩ ಬ್ಯಾಚ್‌ನ ಸಿಬ್ಬಂದಿ. ಇಬ್ಬರೂ ಗುಂಡಿನ ದಾಲಿಗೆ ಸ್ಥಳದಲ್ಲೇ ಮೃತಪಟ್ಟರು. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Bhavani Revanna: ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಅವರನ್ನು ಎಸ್‌ಐಟಿ ಬಂಧನ ಮಾಡಿತ್ತು. ಆದರೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿ ವಾರವೇ ಕಳೆದಿದೆ. ಅಲ್ಲದೆ ಎಸ್‌ಐಟಿಯ ಎರಡು ನೊಟೀಸ್‌ಗಳಿಗೂ ಭವಾನಿ ಕ್ಯಾರೇ ಎಂದಿಲ್ಲ.

VISTARANEWS.COM


on

Bhavani Revanna
Koo

ಬೆಂಗಳೂರು: ಕೆ.ಆರ್‌ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯೊಬ್ಬರನ್ನು ಅಪಹರಣ (kidnap case) ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ  (Bhavani Revanna) ಒಂದು ವಾರದಿಂದ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಅಧಿಕಾರಿಗಳು ಒಂದು ದಿನ ಮಾತ್ರ ಭವಾನಿ ಮನೆಯ ಮುಂದೆ ಪಹರೆ ಕಾದಿದ್ದು, ನಂತರ ಮರೆತೇ ಬಿಟ್ಟಂತಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರ ಬಂಧನ ಮಾಡಲು ಎಸ್‌ಐಟಿ ಬಲು ತರಾತುರಿಯಲ್ಲಿತ್ತು. ಅಗತ್ಯವಿಲ್ಲ ಎನಿಸಿದರೂ ರೇವಣ್ಣರನ್ನು ಕರೆದುಕೊಂಡು ಬಂದು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿ, ಜಾಮೀನು ದೊರೆಯದಂತೆ ತುಂಬಾ ಪ್ರಯತ್ನಿಸಿತ್ತು. ಈ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರ ಹೆಚ್ಚೇನೂ ಇಲ್ಲ ಎಂದು ತಿಳಿದಿದ್ದರೂ, ಹೆಚ್ಚಿನ ವಿಚಾರಣೆಗೆ ಹೆಚ್ಚಿನ ಸಮಯ ಕಸ್ಟಡಿಗೆ ಕೊಡುವಂತೆ ನ್ಯಾಯಾಲಯವನ್ನು ಕೋರಿತ್ತು. ಆದರೆ ಭವಾನಿ ವಿಷಯದಲ್ಲಿ ಅಂಥ ತರಾತುರಿಯನ್ನು ಎಸ್‌ಐಟಿ ತೋರಿಸಿಲ್ಲ.

ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಅವರನ್ನು ಎಸ್‌ಐಟಿ ಬಂಧನ ಮಾಡಿತ್ತು. ಆದರೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿ ವಾರವೇ ಕಳೆದಿದೆ. ಅಲ್ಲದೆ ಎಸ್‌ಐಟಿಯ ಎರಡು ನೊಟೀಸ್‌ಗಳಿಗೂ ಭವಾನಿ ಕ್ಯಾರೇ ಎಂದಿಲ್ಲ. ಎರಡು ಸಲ ನೋಟೀಸ್‌ ನೀಡಿದ ಬಳಿಕ, ʼತನಿಖೆಗೆ ಬೇಕಿದ್ದರೆ ಹೊಳೆನರಸೀಪುರದ ಮನೆಗೆ ಬನ್ನಿʼ ಎಂದು ಉತ್ತರಿಸಿದ್ದರು. ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ ಅಲ್ಲಿಂದ ನಾಪತ್ತೆಯಾಗಿದ್ದರು. ಎಸ್‌ಐಟಿ ತಂಡ ಇಡೀ ದಿನ ಕಾದು ವಾಪಸಾಗಿತ್ತು. ಎಲ್ಲಿದ್ದಾರೆ ಎಂದು ಹುಡುಕುವ ಯತ್ನವನ್ನೂ ಎಸ್‌ಐಟಿ ಮಾಡಿದಂತಿಲ್ಲ.

ಇದೀಗ ಭವಾನಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna Case) ವಿದೇಶದಲ್ಲಿದ್ದ ಕಾರಣ ಒಂದು ತಿಂಗಳ ಕಾಲ ಬಂಧನ ಸಾಧ್ಯವಾಗಿಲಿಲ್ಲ. ಆದರೆ ಭವಾನಿ ರೇವಣ್ಣ ದೇಶದಲ್ಲಿಯೇ ತಲೆ ಮರೆಸಿಕೊಂಡಿದ್ದು, ಎಲ್ಲಿದ್ದಾರೆ ಎಂಬ ಸುಳಿವು ದೊರೆತಿಲ್ಲ. ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ಪಾತ್ರ ಇದೆ ಎಂಬುದಕ್ಕೆ ಹಲವು ದಾಖಲೆಗಳನ್ನು ಎಸ್‌ಐಟಿ ನ್ಯಾಯಾಲಯಕ್ಕೆ ನೀಡಿತ್ತು. ಆದರೆ ಬಂಧನ ಮಾಡದೇ ಇರುವ ಕುರಿತು ಕುತೂಹಲ ಹುಟ್ಟಿಕೊಂಡಿದೆ.

ಈಗಾಗಲೇ ಪ್ರಜ್ವಲ್‌ ಹಾಗೂ ರೇವಣ್ಣ ಬಂಧನದ ನಂತರ, ದೇವೇಗೌಡ ಕುಟುಂಬದ ಮೇಲೆ ದ್ವೇಷ ರಾಜಕಾರಣ ನಡೆಸಲಾಗುತ್ತಿದೆ ಎಂಬ ಅಭಿಪ್ರಾಯವನ್ನು ಹರಡಲು ಜೆಡಿಎಸ್‌ ಬಹುಪಾಲು ಯಶಸ್ವಿಯಾಗಿದೆ. ಭವಾನಿ ಬಂಧನ ಆದರೆ ಈ ಅಭಿಪ್ರಾಯಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗುತ್ತದೆ ಎಂಬ ಕಾರಣದಿಂದ, ಭವಾನಿ ಬಂಧನಕ್ಕೆ ತಡೆ ಹಾಕಲು ಮೇಲಿನಿಂದಲೇ ಸೂಚನೆ ಬಂದಿದೆಯಾ? ಎಂದೂ ಕೂಡ ಮಾತನಾಡಿಕೊಳ್ಳಲಾಗುತ್ತಿದೆ.

ಮೂರು ಜಿಲ್ಲೆ, ನಾಲ್ಕು ತಂಡಗಳು

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ.

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Valmiki Corporation Scam: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

VISTARANEWS.COM


on

valmiki corporation scam nagendra siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ಇಂದು ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

45 ಕೋಟಿ ರೂ. ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ವರ್ಗಾವಣೆ ಕೇಸ್ ಸಂಬಂಧಿಸಿ SITಯಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಸೀಜ್ ಮಾಡಲಾಗಿದೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ.ನಲ್ಲಿ ಬಹುಪಾಲು ಹಣ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಸದ್ಯ ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಎಸ್‌ಐಟಿ ಬಂಧಿಸಿದೆ. ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನವಾಗಿದೆ. ಐವರನ್ನು ಕಸ್ಟಡಿಗೆ ಪಡೆದು SIT ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Continue Reading

ಪ್ರಮುಖ ಸುದ್ದಿ

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

Uttarakhand Trekking Tragedy: ಉತ್ತರಾಖಂಡದ ಶಾಸ್ತ್ರತಾಳ್‌ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ 22 ಚಾರಣಿಗರ ತಂಡ ತೆರಳಿತ್ತು. ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ರಾಜ್ಯದ ಐವರು ಸೇರಿ 9 ಮಂದಿ ಮೃತಪಟ್ಟಿದ್ದಾರೆ.

VISTARANEWS.COM


on

Uttarakhand Trekking Tragedy
Koo

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್‌ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್‌ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜತೆ ದೂರವಾಣಿ ಮೂಲಕ ಮಾತನಾಡಿ ಸಿಎಂ ಅವರು, ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಮೃತರಿಗೆ ಸಿಎಂ ಸಂತಾಪ

ಉತ್ತರಾಖಂಡದ ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ (Uttarakhand Trekking Tragedy) ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ 9 ಮಂದಿ ಸಾವು

Uttarkashi Trekking Tragedy

ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ಐವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಶಾಸ್ತ್ರತಾಳ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಸುಜಾತ ಬೆಂಗಳೂರು (52), ಸಿಂಧು (47), ಚಿತ್ರಾ (48), ಪದ್ಮಿನಿ (45), ವೆಂಕಟೇಶ್‌ ಪ್ರಸಾದ್‌ (52, ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ KPS (50), ವಿನಾಯಕ್ ಎಂದು ಗುರುತಿಸಲಾಗಿದೆ.

ಸೌಮ್ಯಾ (36), ವಿನಯ್ (49), ಶಿವಜ್ಯೋತಿ (46), ಸುಧಾಕರ್‌ (64), ಸ್ಮೃತಿ (41), ಸೀನಾ (48), ಮಧುರೆಡ್ಡಿ (52), ಜಯಪ್ರಕಾಶ್ (61), ಭರತ್ (53), ಅನಿಲ್ ಭಟ್ಟ್ (52), ವಿವೇಕ್ ಶ್ರೀಧರ್, ರಿತಿಕಾ ಜಿಂದಾಲ್, ನವೀನ್ ಸೇರಿ 13 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಹಿಮಾಲಯ ಪರ್ವತಗಳಲ್ಲಿ ಸುಮಾರು 4,400 ಮೀಟರ್‌ ಎತ್ತರದಲ್ಲಿ ಶಾಸ್ತ್ರತಾಳ್‌ ಸರೋವರವಿದೆ. ಈ ಸರೋವರ ನೋಡಲು ಚಾರಣಿಗರು ತೆರಳಿದ್ದರು.

ಶಾಸ್ತ್ರತಾಳ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದರು. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | ‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

ಇನ್ನು ಉತ್ತರಾಖಂಡಕ್ಕೆ ಟ್ರೆಕ್ಕಿಂಗ್ ಹೋದ ತಂಡದ ರಕ್ಷಣಾ ಕಾರ್ಯಕ್ಕಾಗಿ ಐಎಎಸ್‌ ಅಧಿಕಾರಿ ವಿಪುಲ್ ಬನ್ಸಲ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಉತ್ತರಾಖಾಂಡ ಸರ್ಕಾರದ ಜೊತೆ ನಿರಂತರ ಸಂಪರ್ಕ ಬೆಳಸಲು ಸಮನ್ವಯ ಅಧಿಕಾರಿಯಾಗಿ ಇವರನ್ನು ನೇಮಕ ಮಾಡಲಾಗಿದೆ.

Continue Reading

ಕರ್ನಾಟಕ

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Drowned in Water: ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Drowned in Water young man drowned in tungabhadra river and died
Koo

ವಿಜಯನಗರ (ಹೊಸಪೇಟೆ): ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ (Drowned in Water) ಮೃತಪಟ್ಟಿರುವ ಘಟನೆ ಜರುಗಿದೆ.

ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮನ್ವಿತ್ ಎಂಬಾತ ಕಾಲು ಜಾರಿ ನದಿಗೆ ಬಿದ್ದಿದ್ದು, ಈತನನ್ನು ರಕ್ಷಿಸಲು ಹೋದ ಸಂಜು ಕೂಡ ಮುಳುಗಿದ್ದಾನೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ. ಈ ವೇಳೆ ಸ್ಥಳೀಯರಾದ ಮರಿಸ್ವಾಮಿ ಮತ್ತು ವೆಂಕಟೇಶ್ ಎಂಬುವವರು ಇಬ್ಬರನ್ನೂ ನೀರಿನಿಂದ ರಕ್ಷಣೆ ಮಾಡಿ ಹೊರತಂದರು.

ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

ಮೊದಲು ನದಿಗೆ ಬಿದ್ದಿದ್ದ ಮನ್ವಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಜುನನ್ನು ಕಮಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ವೇಳೆ ಮೃತಪಟ್ಟಿರುವ ಕುರಿತು ವೈದ್ಯರು ಖಚಿತಪಡಿಸಿದ್ದಾರೆ. ಈ ಕುರಿತು ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61) ಆಶಾ ಸುಧಾಕರ್ (72)‌, ಪದ್ಮನಾಭನ್‌ ಕೆಪಿಎಸ್‌ (50), ವಿನಾಯಕ್‌ ಎಂದು ಗುರುತಿಸಲಾಗಿದೆ. ಇನ್ನು ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಸೇರಿ ಹಲವರನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Continue Reading
Advertisement
Bhavani Revanna
ಪ್ರಮುಖ ಸುದ್ದಿ56 seconds ago

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Aishwarya Arjun reception dates out
ಟಾಲಿವುಡ್8 mins ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Indonesia Open
ಕ್ರೀಡೆ8 mins ago

Indonesia Open: ಮತ್ತೆ ಮುಂದುವರಿದ ಸಿಂಧು ವೈಫಲ್ಯ; ಇಂಡೋನೇಷ್ಯಾ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲು

CBSE
ದೇಶ10 mins ago

CBSE: 50% ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಭಾರೀ ಎಡವಟ್ಟು; ಶಾಲೆಗಳಿಗೆ ಸಿಬಿಎಸ್‌ಇ ಖಡಕ್‌ ಸೂಚನೆ

Uddhav Thackeray
Lok Sabha Election 202415 mins ago

Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

T20 World Cup 2024
ಕ್ರೀಡೆ23 mins ago

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

Postal Ballets
ದೇಶ47 mins ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ55 mins ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sunil Chhetri
ಕ್ರೀಡೆ1 hour ago

Sunil Chhetri: ಭಾರತದ ಫುಟ್ಬಾಲ್ ಐಕಾನ್​​ ಸುನೀಲ್‌ ಚೆಟ್ರಿಗೆ ಇಂದು ವಿದಾಯ ಪಂದ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌