Shreyas Talpade: ಬಾಲಿವುಡ್‌ ನಟ ಶ್ರೇಯಸ್‌ ತಲ್ಪಾಡೆಗೆ ಹೃದಯಾಘಾತ - Vistara News

ಬಾಲಿವುಡ್

Shreyas Talpade: ಬಾಲಿವುಡ್‌ ನಟ ಶ್ರೇಯಸ್‌ ತಲ್ಪಾಡೆಗೆ ಹೃದಯಾಘಾತ

ಮುಂಬಯಿಯಲ್ಲಿ ಗುರುವಾರ ಸಂಜೆ ʼವೆಲ್‌ಕಮ್ ಟು ಜಂಗಲ್’ ಚಿತ್ರೀಕರಣದ ವೇಳೆ ಶ್ರೇಯಸ್ ತಲ್ಪಾಡೆ (Shreyas Talpade) ಹೃದಯಾಘಾತದಿಂದ ಕುಸಿದು ಬಿದ್ದಿದ್ದರು.

VISTARANEWS.COM


on

shreyas talpade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಬಾಲಿವುಡ್‌ ನಟ ಶ್ರೇಯಸ್ ತಲ್ಪಾಡೆ (Bollywood Actor Shreyas Talpade) ಗುರುವಾರ ಸಂಜೆ ಹೃದಯಾಘಾತಕ್ಕೆ (heart attack) ಒಳಗಾಗಿದ್ದಾರೆ. ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಶುಕ್ರವಾರ ಆಂಜಿಯೋಪ್ಲಾಸ್ಟಿಗೆ ಒಳಗಾದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಆಂಜಿಯೋಪ್ಲ್ಯಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದ್ದು, ಇದೀಗ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ನಟನ ಆರೋಗ್ಯ ಚೆನ್ನಾಗಿದೆ ಎಂದಿದ್ದಾರೆ. ಮುಂಬಯಿಯಲ್ಲಿ ಗುರುವಾರ ಸಂಜೆ ʼವೆಲ್‌ಕಮ್ ಟು ಜಂಗಲ್’ ಚಿತ್ರೀಕರಣದ ವೇಳೆ ಶ್ರೇಯಸ್ ತಲ್ಪಾಡೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

47 ವರ್ಷದ ಶ್ರೇಯಸ್‌ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ. ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Shah Rukh Khan: ಶಾರುಖ್‌ ಖಾನ್‌ಗೆ ಏಕಾಏಕಿ ವೈ+ ಭದ್ರತೆ; ನಟನಿಗೆ ಯಾರಿಂದ ಜೀವ ಬೆದರಿಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

Sonakshi Sinha: ಶತ್ರುಘ್ನ ಸಿನ್ಹಾ ಅವರು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಸೋನಾಕ್ಷಿ ಮತ್ತು ಜಹೀರ್ ಆಸ್ಪತ್ರೆಗೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ. ಶತ್ರುಘ್ನ ಅವರು ಮಗಳ ಮದುವೆಯಲ್ಲಿ ಚೆನ್ನಾಗಿ ಓಡಾಟ ನಡೆಸಿದ್ದರೂ ಗುಟ್ಟಾದ ಮದುವೆ ಮತ್ತು ಟೀಕೆಗಳಿಂದ ನಟ ತುಂಬಾ ನೊಂದುಕೊಂಡಿದ್ದರು.

VISTARANEWS.COM


on

Sonakshi Sinha has a hilarious take on her pregnancy
Koo

ಬೆಂಗಳೂರು: ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ಜಹೀರ್ ಇಕ್ಬಾಲ್ ( Zaheer Iqbal) ಜೂನ್ 23 ರಂದು 7 ವರ್ಷಗಳ ಡೇಟಿಂಗ್ ನಂತರ ವಿವಾಹವಾದರು. ದಂಪತಿ ಇತ್ತೀಚೆಗೆ ಮದುವೆಯಾದ ಕೆಲವು ದಿನಗಳ ನಂತರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದಾದ ಬಳಿಕ ಸೋನಾಕ್ಷಿ ಗರ್ಭಿಣಿ ಎಂಬ ವದಂತಿ ಹಬ್ಬಿತ್ತು. ಇದರ ಬಗ್ಗೆ ಸೋನಾಕ್ಷಿ ಈಗ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. `ಮದುವೆಯಾದ ಮೇಲೆ ಒಂದೇ ಒಂದು ಬದಲಾವಣೆಯಾಗಿದೆ. ಅದೇನೆಂದರೆ, ನಾನು ಈಗ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ, ಏಕೆಂದರೆ ನಾನು ಹೊರಬಂದ ತಕ್ಷಣ, ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ಸ್ವಲ್ಪ ಅಸಮಾಧಾನದಿಂದಲೇ’ ಉತ್ತರಿಸಿದ್ದಾರೆ.

ತಮ್ಮ ಮುಂಬರುವ ಚಿತ್ರ ʻಕಾಕುಡ ಪ್ರಚಾರದಲ್ಲಿ ನಟಿ ಇದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿ ʻʻಮದುವೆಯಾದ ಬಳಿಕ ಜೀವನ ಚೆನ್ನಗಿದೆ. ಕೆಲಸಕ್ಕೆ ಮತ್ತೆ ಮರಳಿದ್ದೇನೆ. ತುಂಬ ಸಂತೋಷವಾಗಿದೆ. ನು ಈಗ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ, ಏಕೆಂದರೆ ನಾನು ಹೊರಬಂದ ತಕ್ಷಣ, ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆʼʼ ಎಂದು ಸ್ವಲ್ಪ ಅಸಮಾಧಾನದಿಂದಲೇ ಉತ್ತರಿಸಿದ್ದಾರೆ.

ಶತ್ರುಘ್ನ ಸಿನ್ಹಾ ಅವರು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಸೋನಾಕ್ಷಿ ಮತ್ತು ಜಹೀರ್ ಆಸ್ಪತ್ರೆಗೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ. ಶತ್ರುಘ್ನ ಅವರು ಮಗಳ ಮದುವೆಯಲ್ಲಿ ಚೆನ್ನಾಗಿ ಓಡಾಟ ನಡೆಸಿದ್ದರೂ ಗುಟ್ಟಾದ ಮದುವೆ ಮತ್ತು ಟೀಕೆಗಳಿಂದ ನಟ ತುಂಬಾ ನೊಂದುಕೊಂಡಿದ್ದರು. ಇದರಿಂದ ಮದುವೆಯಾಗುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ. ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು. ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಬಾಲಿವುಡ್

Urfi Javed: ಉರ್ಫಿ ಜಾವೇದ್‌ ಫುಲ್‌ ಟೈಟ್‌; ಸ್ನೇಹಿತೆ ಪಟ್ಟ ಹರಸಾಹಸ ಅಷ್ಟಿಷ್ಟಲ್ಲ!

Urfi Javed: ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು.

VISTARANEWS.COM


on

Urfi Javed Drunk Struggles To Walk
Koo

ಬೆಂಗಳೂರು: ನಟಿ ಉರ್ಫಿ ಜಾವೇದ್ (Urfi Javed) ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮುಂಬೈನ ಐಷಾರಾಮಿ ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿರುವುದು ಕಂಡು ಬಂದಿದೆ. ಆದರೆ ಉರ್ಫಿ ನಾರ್ಮಲ್‌ ಆಗಿ ಕಂಡು ಬಂದಿಲ್ಲ. ಫುಲ್‌ ಟೈಟ್‌ ಆಗಿ ತೇಲಾಡುತ್ತ ಹೊರ ನಡೆದರು. ಕಾರಿನಲ್ಲಿ ಸ್ನೇಹಿತೆಯ ಸಹಾಯದೊಂದಿಗೆ ತೇಲಾಡುತ್ತ ಕುಳಿತು ಅಲ್ಲಿಂದ ನಿರ್ಮಮಿಸಿದರು. ಇದೀಗ ಈ ವಿಡಿಯೊ ವೈರಲ್‌ ಆಗಿದೆ. ಕುಡಿದ ಮತ್ತಿನಲ್ಲಿದ್ದ ನಟಿಯ ಕಂಡು ನೆಟ್ಟಿಗರು ಬಗೆ ಬಗೆಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಗುಲಾಬಿ ಬಣ್ಣದ ಮಿನಿ ಡ್ರೆಸ್ ಮತ್ತು ಹೈ ಹೀಲ್ಸ್ ಧರಿಸಿ ತನ್ನ ಗೆಳತಿಯರೊಂದಿಗೆ ರೆಸ್ಟೋರೆಂಟ್‌ನಿಂದ ಹೊರಬರುವುದನ್ನು ಕಾಣಬಹುದು. ಪಾಪರಾಜಿಗಳ ಬಳಿ ಹೋಗಲು ಬಿಡುವಂತೆ ಕೇಳಿಕೊಳ್ಳುತ್ತಿರುವುದು ಕಂಡುಬಂದಿತು.”ನನ್ನ ಕಾರು ಎಲ್ಲಿದೆ? ನಾನು ಕುಡಿದಿದ್ದೇನೆ,” ಎಂದು ಸ್ವತಃ ಉರ್ಫಿಯೇ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Urfi Javed: ಉರ್ಫಿ ಜಾವೇದ್‌ಗೆ ಮುಖ ಹೀಗೆ ಊದಿಕೊಳ್ಳುತ್ತೆ; ಆರೋಗ್ಯ ಸಮಸ್ಯೆಯಿಂದ ಬಳಲ್ತಾ ಇದ್ದಾರೆ ಫ್ಯಾಷನ್‌ ಐಕಾನ್‌!

ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು.

ಬಾಲಿವುಡ್‌ ಕಲಾವಿದರಾದ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಇದು ಉರ್ಫಿ ಜಾವೇದ್‌ ಅಭಿನಯದ ಮೊದಲ ಬಾಲಿವುಡ್‌ ಚಿತ್ರ. ಬಿಗ್‌ಬಾಸ್‌ ರಿಯಾಲಿಟಿ ಶೋದ ಮೂಲಕ ಗಮನ ಸೆಳೆದಿದ್ದ ಅವರು ಸಿನಿಮಾದಲ್ಲಿ ಯಾವ ರೀತಿ ಕಾಣಿಸಿಕೊಳ್ಳಬಹುದು ಎನ್ನುವ ಕುತೂಹಲ ಮೂಡಿತ್ತು. ಮಾತ್ರವಲ್ಲ ಅವರು ಸ್ಪ್ಲಿಟ್‌ವಿಲ್ಲಾ ಎಕ್ಸ್ 5 (Splitsvilla X5) ಶೋದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Continue Reading

ಬಾಲಿವುಡ್

Manushi Chhillar: ಬ್ರೇಕಪ್‌ ಬಳಿಕ ವೀರ್ ಪಹಾರಿಯಾ ಜತೆ ಮಾನುಷಿ ಚಿಲ್ಲರ್‌ ಡೇಟಿಂಗ್‌?

Manushi Chhillar: ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

VISTARANEWS.COM


on

Manushi Chhillar Dating Veer Pahariya After Breakup
Koo

ಬೆಂಗಳೂರು:  ವಿಶ್ವ ಸುಂದರಿ, ನಟಿ ಮಾನುಷಿ ಚಿಲ್ಲರ್‌ (Manushi Chhillar) ಇದೀಗ ವೀರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಸಂಗೀತ ಸಮಾರಂಭದಲ್ಲಿ ಇಬ್ಬರೂ ಭಾಗವಹಿಸಿದ್ದರು. ಮಾನುಷಿ ಮತ್ತು ವೀರ್ ವೇದಿಕೆಯಲ್ಲಿ ಒಟ್ಟಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಹೀಗಾಗಿ ನೆಟ್ಟಿಗರು ಇವರಿಬ್ಬರು ಕ್ ರಿಲೇಶನ್‌ಶಿಪ್‌ ನಲ್ಲಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಮಾನುಷಿ ಸಿಲ್ವರ್ ಲೆಹೆಂಗಾದಲ್ಲಿ ಬೆರಗುಗೊಳಿಸಿದರೆ, ವೀರ್ ಅದೇ ಬಣ್ಣದ ಕುರ್ತಾವನ್ನು ಧರಿಸಿ ಡ್ಯಾಪ್ ಆಗಿ ಕಾಣುತ್ತಿದ್ದರು ವೀರ್ ಪಹಾರಿಯಾ ಜಾನ್ವಿ ಕಪೂರ್ ಅವರ ಗೆಳೆಯ ಶಿಖರ್ ಪಹಾರಿಯಾ ಅವರ ಸಹೋದರ. ಶೀಘ್ರದಲ್ಲೇ ಅವರು ʻಸ್ಕೈ ಫೋರ್ಸ್ʼ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಲಿದ್ದಾರೆ. ಈ ಹಿಂದೆ ಮಾನುಷಿ ಉದ್ಯಮಿ ನಿಖಿಲ್ ಕಾಮತ್ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಕಳೆದ ವರ್ಷ ಇಬ್ಬರೂ ಬ್ರೇಕಪ್‌ ಮಾಡಿಕೊಂಡರು. ನಿಖಿಲ್‌ ಕಾಮತ್‌ ಅವರು ಬೆಂಗಳೂರು ಮೂಲದವಾರಿದ್ದು ಈಗಾಗಲೇ ಅವರಿಗೆ ಮದುವೆ ಆಗಿತ್ತು ಎನ್ನಲಾಗಿದೆ. 2019ರ ವೇಳೆ ಇಟಲಿಯಲ್ಲಿ ಅಮಂಡಾ ಪುರವಂಕರ ಜತೆ ವಿವಾಹವಾಗಿದ್ದರು. ಕಾರಣಾಂತರದಿಂದ ಡಿವೋರ್ಸ್‌ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Manushi Chhillar | ಮಾನುಶಿ ಚಿಲ್ಲರ್‌ ನಡೆದು ಬಂದ ಸಕ್ಸಸ್ ಹಾದಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

Continue Reading

ಬಾಲಿವುಡ್

Mukesh Ambani: 60ರ ದಶಕದ ಹಾಡನ್ನು ಮೊಮ್ಮಕ್ಕಳೊಂದಿಗೆ ರೀ ಕ್ರಿಯೇಟ್ ಮಾಡಿದ ಮುಕೇಶ್ – ನೀತಾ ದಂಪತಿ; ಕ್ಯೂಟ್‌ ವಿಡಿಯೊ ಇಲ್ಲಿದೆ!

Mukesh Ambani: ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೆಟ್ರೊ ಹಾಡನ್ನು ರೀ ಕ್ರಿಯೇಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 1968ರಲ್ಲಿ ರಿಲೀಸ್ ಆದ ‘ಬ್ರಹ್ಮಚಾರಿ’ ಚಿತ್ರದ ‘ಚಕ್ಕೆ ಮೇ ಚಕ್ಕಾ..’ ಹಾಡನ್ನು ರೀ ಕ್ರಿಯೇಟ್ ಮಾಡಲಾಗಿದೆ.

VISTARANEWS.COM


on

Mukesh Ambani music video with grandkids
Koo

ಬೆಂಗಳೂರು: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹ ಮಹೋತ್ಸವ (Mukesh Ambani and Nita Ambani) ಅದ್ಧೂರಿಯಾಗಿ ನಡೆಯುತ್ತಿದೆ. ಸಂಗೀತ ಸಮಾರಂಭ ಜು.5ರಂದು ಅದ್ಧೂರಿಯಾಗಿ ನಡೆದಿದೆ. ಸಿನಿಮಾ, ಕ್ರಿಕೆಟ್ ಸೇರಿದಂತೆ ಅನೇಖ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಇವುಗಳ ನಡುವೆ, ಒಂದು ವಿಶೇಷ ವೀಡಿಯೊವೊಂದು ಜನರ ಮನ ಗೆದ್ದಿದೆ. ಈ ವೇಳೆ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೆಟ್ರೊ ಹಾಡನ್ನು ರೀ ಕ್ರಿಯೇಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 1968ರಲ್ಲಿ ರಿಲೀಸ್ ಆದ ‘ಬ್ರಹ್ಮಚಾರಿ’ ಚಿತ್ರದ ‘ಚಕ್ಕೆ ಮೇ ಚಕ್ಕಾ..’ ಹಾಡನ್ನು ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಮುಕೇಶ್- ನೀತಾ ಅವರ ಮೊಮ್ಮಕ್ಕಳಾದ ಪೃಥ್ವಿ, ಆದಿಯಾ, ಕೃಷ್ಣಾ ಹಾಗೂ ವೇದಾ ಕಾಣಿಸಿಕೊಂಡಿದ್ದಾರೆ.

ಮುಕೇಶ್ ಅಂಬಾನಿ ಅವರ ಪಕ್ಕದಲ್ಲಿ ಅವರ ಪತ್ನಿ ನೀತಾ ಮೊಮ್ಮಕ್ಕಳ ಜತೆ ಕಾರಿನಲ್ಲಿ ಕುಳಿತ್ತಿದ್ದಾರೆ. ವೀಡಿಯೊದಲ್ಲಿ ಮಕ್ಕಳು ಬಲೂನ್‌ ಹಿಡಿದುಕೊಂಡಿದ್ದಾರೆ. ಅಂಬಾನಿ ದಂಪತಿ ‘ಚಕ್ಕೆ ಮೇ ಚಕ್ಕಾ..’ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಅವರ ಮಕ್ಕಳಾದ ಪೃಥ್ವಿ ಮತ್ತು ವೇದಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಲ್ ಅವಳಿಗಳಾದ ಆದಿಯಾ ಮತ್ತು ಕೃಷ್ಣ ವಿಡಿಯೊದಲ್ಲಿ ಇದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

Continue Reading
Advertisement
Mahua Moitra
ದೇಶ1 min ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self Harming
ವಿಜಯನಗರ17 mins ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ20 mins ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ38 mins ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 202447 mins ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ49 mins ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Yogi Adityanath
ದೇಶ55 mins ago

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

leopard attack
ರಾಯಚೂರು59 mins ago

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Viral Video
ವೈರಲ್ ನ್ಯೂಸ್1 hour ago

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

bomb threat
ಕರ್ನಾಟಕ1 hour ago

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ2 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ2 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ12 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌