Krishna Janmabhoomi: ಮಥುರಾ ಶಾಹಿ ಈದ್ಗಾ ಸರ್ವೆಗೆ ತಡೆ ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್ - Vistara News

ಕೋರ್ಟ್

Krishna Janmabhoomi: ಮಥುರಾ ಶಾಹಿ ಈದ್ಗಾ ಸರ್ವೆಗೆ ತಡೆ ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದಲ್ಲಿ (Sri Krishna Janmabhoomi – Shahi Idgah Masjid dispute) ವೈಜ್ಞಾನಿಕ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಶಾಹಿ ಈದ್ಗಾ ಮಸೀದಿ ಕಮಿಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

VISTARANEWS.COM


on

Sri Krishna Janmabhoomi case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಆವರಣದಲ್ಲಿರುವ ವಿವಾದಿತ ಭೂಮಿಯಲ್ಲಿನ ಶಾಹಿ ಈದ್ಗಾ (Sri Krishna Janmabhoomi – Shahi Idgah Masjid dispute) ಸರ್ವೇಗೆ ಅನುಮತಿ ನೀಡುವ ಆದೇಶವನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ (Supreme court) ನಿರಾಕರಿಸಿದೆ.

ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಶಾಹಿ ಈದ್ಗಾ ಮಸೀದಿ ಕಮಿಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಗುರುವಾರ ಅಲಹಾಬಾದ್‌ ಹೈಕೋರ್ಟ್‌ ಆಯುಕ್ತರನ್ನು ನೇಮಿಸಿ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ ನೀಡಿತ್ತು. ಸಮೀಕ್ಷೆಗಾಗಿ ವಕೀಲರ ಆಯೋಗದ ವಿಧಾನಗಳನ್ನು ಡಿಸೆಂಬರ್ 18ರಂದು ನಿರ್ಧರಿಸಲಾಗುತ್ತದೆ ಎಂದಿತ್ತು. ಶಾಹಿ ಈದ್ಗಾ ಮಸೀದಿ ನಿರ್ವಹಣಾ ಸಮಿತಿಯ ಕಾರ್ಯದರ್ಶಿ ಮತ್ತು ವಕೀಲ ತನ್ವೀರ್ ಅಹ್ಮದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಏನಿದು ವಿವಾದ?

ಭಗವಾನ್ ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಮಸೀದಿಯ ಸರ್ವೇ ನಡೆಸುವಂತೆ ಅರ್ಜಿ ಸಲ್ಲಿಸಿದ್ದರು. ಹಿಂದೂ ದೇವಸ್ಥಾನವನ್ನು ಬೀಳಿಸಿ ಶಾಹಿ ಈದ್ಗಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳನ್ನು ನೋಡಿದರೆ ಹಿಂದೂ ದೇವಸ್ಥಾನ ಶೈಲಿ ಎನ್ನುವುದು ಸ್ಪಷ್ಟವಾಗುತ್ತದೆ. ಅಲ್ಲದೆ ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ಗಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

ಭೂಮಿಯನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡವನ್ನು ತೆಗೆದುಹಾಕುವಂತೆ ಹೈಕೋರ್ಟ್ ಆದೇಶ ಹೊರಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. 1968ರ ಅಕ್ಟೋಬರ್ 12ರಂದು ಶ್ರೀ ಕೃಷ್ಣ ಜನ್ಮಸ್ಥಾನ್ ಸೇವಾ ಸಂಸ್ಥಾನ ಮತ್ತು ಟ್ರಸ್ಟ್ ಶಾಹಿ ಮಸೀದಿ ಈದ್ಗಾ ನಡುವೆ ನಡೆದ ರಾಜಿ ಒಪ್ಪಂದವು ಕಾನೂನುಬಾಹಿರ ಎಂದೂ ಮನವಿಯಲ್ಲಿ ಹೇಳಲಾಗಿದೆ.

ವಿವಾದದ ಇತಿಹಾಸ

ವಿವಿಧ ಅರ್ಜಿದಾರರು ಮಥುರಾದ ನ್ಯಾಯಾಲಯಗಳಲ್ಲಿ ಕನಿಷ್ಠ ಒಂದು ಡಜನ್ ಪ್ರಕರಣಗಳನ್ನು ದಾಖಲಿಸಿದ್ದಾರೆ. 13.77 ಎಕರೆ ಸಂಕೀರ್ಣದಿಂದ ಮಸೀದಿಯನ್ನು ತೆಗೆದುಹಾಕಬೇಕೆಂಬ ಎಲ್ಲ ಅರ್ಜಿಗಳಲ್ಲಿ ಮನವಿ ಸಲ್ಲಿಸಲಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಅಲಹಾಬಾದ್ ಹೈಕೋರ್ಟ್ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಮೊಕದ್ದಮೆಗಳನ್ನು ತನಗೆ ವರ್ಗಾಯಿಸಿಕೊಂಡಿತ್ತು.

ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ಇತ್ತೀಚೆಗೆ ಕೋರ್ಟ್‌ ಆದೇಶದ ಮೇರೆಗೆ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಪಕ್ಕದ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಪೂರ್ಣಗೊಳಿಸಿತ್ತು. ಇದೀಗ -ಶಾಹಿ ಈದ್ಗಾ ಸರ್ವೆಗೆ ಸೂಚಿಸಲಾಗಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತ ಒಂದು ಅರ್ಜಿಯನ್ನು ವಜಾಗೊಳಿಸಿತ್ತು. ದೇವಸ್ಥಾನದ ಮೇಲೆ ಮಸೀದಿ ಕಟ್ಟಲಾಗಿದೆಯೇ ಎನ್ನುವುದನ್ನು ಪತ್ತೆ ಹಚ್ಚಲು ಸರ್ವೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಸದ್ಯ ಹೈಕೋರ್ಟ್‌ನಲ್ಲಿ ಕೃಷ್ಣ ಜನ್ಮಭೂಮಿ ಟ್ರಸ್ಟ್‌ಗೆ ಜಯ ಸಿಕ್ಕಿದ್ದು, ಅದನ್ನು ಸುಪ್ರೀಂ ಕೋರ್ಟ್‌ ಕೂಡ ಮಾನ್ಯ ಮಾಡಿದೆ.

ಇದನ್ನೂ ಓದಿ: Allahabad High Court: ಮಥುರಾ ಕೃಷ್ಣ ಜನ್ಮ ಭೂಮಿ ಸರ್ವೇಗೆ ಹೈಕೋರ್ಟ್‌ ಅನುಮತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading

ದೇಶ

Laila Khan Case: ನಟಿ ಲೈಲಾ ಖಾನ್‌ ಸೇರಿ 6 ಜನರ ಹತ್ಯೆ;‌ ನಟಿಯ ತಂದೆ ಪರ್ವೇಜ್‌ ತಕ್‌ಗೆ ಗಲ್ಲು ಶಿಕ್ಷೆ!

Laila Khan Case: ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ. ಕೊನೆಗೊಂದು ದಿನ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಲೆ ಮಾಡಿದ್ದ. ಈಗ ಈತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Laila Khan Case
Koo

ಮುಂಬೈ: ಬಾಲಿವುಡ್‌ ನಟಿ, ವಫಾ, ಫರಾರ್‌ ಸಿನಿಮಾಗಳ ಖ್ಯಾತಿಯ ಲೈಲಾ ಖಾನ್‌ (Laila Khan Case) ಹಾಗೂ ಅವರ ಐವರು ಸಂಬಂಧಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯವು (Mumbai Court) ನಟಿಯ ಮಲ ತಂದೆ ಪರ್ವೇಜ್‌ ತಕ್‌ಗೆ (Parvez Tak) ಗಲ್ಲು ಶಿಕ್ಷೆ ವಿಧಿಸಿದೆ. ಆ ಮೂಲಕ 13 ವರ್ಷಗಳ ಪ್ರಕರಣಕ್ಕೆ ಮುಂಬೈ ನ್ಯಾಯಾಲಯವು ಅಂತ್ಯ ಹಾಡಿದೆ. ಆರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಚಿನ್‌ ಪವಾರ್‌ ಅವರು ಆದೇಶ ಹೊರಡಿಸಿದ್ದಾರೆ. ಇವರು ಮೇ 9ರಂದು ವಿಚಾರಣೆ ಅಂತ್ಯಗೊಳಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದರು.

ಏನಿದು ಪ್ರಕರಣ?

2011ರ ಫೆಬ್ರವರಿಯಲ್ಲಿ ಮಹಾರಾಷ್ಟ್ರದ ನಾಶಿಕ್‌ ಜಿಲ್ಲೆಯ ಇಗಟ್‌ಪುರಿಯಲ್ಲಿರುವ ನಿವಾಸದಲ್ಲಿ ನಟಿ ಲೈಲಾ ಖಾನ್‌, ಲೈಲಾ ಖಾನ್‌ ತಾಯಿ ಸೆಲಿನಾ ಸೇರಿ ಆರು ಜನರನ್ನು ಪರ್ವೇಜ್‌ ತಕ್‌ ಸೇರಿ ಹಲವರು ಕೊಲೆ ಮಾಡಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಲಿನಾ ಸೇರಿ ಆರು ಮಂದಿಯನ್ನು ಹತ್ಯೆಗೈದು, ಫಾರ್ಮ್‌ಹೌಸ್‌ನಲ್ಲಿಯೇ ಸಮಾಧಿ ಮಾಡಲಾಗಿತ್ತು. ಜಮ್ಮು-ಕಾಶ್ಮೀರ ಪೊಲೀಸರು ಪರ್ವೇಜ್‌ ತಕ್‌ನನ್ನು ಬಂಧಿಸಿದ ಬಳಿಕವೇ ಫಾರ್ಮ್‌ಹೌಸ್‌ನಲ್ಲಿ ಲೈಲಾ ಖಾನ್‌ ಸೇರಿ ಎಲ್ಲರ ಶವಗಳು ಪತ್ತೆಯಾಗಿದ್ದವು.

Court Order

ಕೊಲೆ ಮಾಡಲು ಏನು ಕಾರಣ?

ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ ಕಾರಣ ಪರ್ವೇಜ್‌ ತಕ್‌ನನ್ನು ಸೆಲಿನಾ ಅವರು ಮನೆಗೆಲಸದವನ ರೀತಿ ನೋಡುತ್ತಿದ್ದರು. ಮನೆಯಿಂದ ಈತನನ್ನು ದೂರವೇ ಇಟ್ಟಿದ್ದರು ಎಂದು ತಿಳಿದುಬಂದಿತ್ತು.

2011ರ ಫೆಬ್ರವರಿಯಲ್ಲಿ ಸೆಲಿನಾ ಸೇರಿ ಎಲ್ಲರನ್ನೂ ಕೊಲೆ ಮಾಡಲು ಪ್ಲಾನ್‌ ರೂಪಿಸಿದ್ದ. ಇದಕ್ಕಾಗಿ ಆತ ಹಲವರಿಗೆ ಹಣವನ್ನೂ ಕೊಟ್ಟು ಕರೆದುಕೊಂಡು ಹೋಗಿದ್ದ. ಮನೆಗೆ ಹೋದವನೇ, ಸೆಲಿನಾ ಅವರ ಜತೆ ಜಗಳವಾಡಿದ್ದಾನೆ. ಮೊದಲು ಸೆಲಿನಾ ಅವರನ್ನು ಕೊಂದ ಪರ್ವೇಜ್‌ ತಕ್‌, ಬಳಿಕ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಂದು, ಅದೇ ಫಾರ್ಮ್‌ಹೌಸ್‌ನಲ್ಲಿ ಹೂತು ಹಾಕಿದ್ದ. ಕೆಲ ತಿಂಗಳ ಬಳಿಕ ಈತನನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದರು. ಫಾರ್ಮ್‌ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾಗ ಆರೂ ಮಂದಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Continue Reading

ಪ್ರಮುಖ ಸುದ್ದಿ

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕೋಲ್ಕೊತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾತಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾವು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕೋಲ್ಕೊತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್‌ಎಸ್‌ಎಸ್‌ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Cauvery Dispute: ತಮಿಳುನಾಡಿಗೆ ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು (Cauvery Dispute) ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
AUS vs NAM
ಕ್ರೀಡೆ11 mins ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ14 mins ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ20 mins ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

MLC Election North East Graduate Constituency Election 2024 total 24 183 graduate voters in the district
ಬಳ್ಳಾರಿ20 mins ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

Uttara Kannada DC Gangubai Manakar spoke in Vote counting training program at Kumta
ಉತ್ತರ ಕನ್ನಡ22 mins ago

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

LinkedIns Tips for Graduates in the Job Search
ಕರ್ನಾಟಕ25 mins ago

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

Star Fashion
ಫ್ಯಾಷನ್31 mins ago

Star Fashion: ಏನಿದು ನಟಿ ಶ್ರೀ ಲೀಲಾ ಧರಿಸಿ ಮಿಂಚಿದ್ದ ಘರಾರ ಡ್ರೆಸ್?

bitcoin scam
ಪ್ರಮುಖ ಸುದ್ದಿ41 mins ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ1 hour ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ1 hour ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌