khadak singh review: ಖಡಕ್ ಕತೆಯಿಲ್ಲದೆ ತೇಲಿ ಹೋಗುವ ಖಡಕ್ ಸಿಂಗ್! - Vistara News

ಬಾಲಿವುಡ್

khadak singh review: ಖಡಕ್ ಕತೆಯಿಲ್ಲದೆ ತೇಲಿ ಹೋಗುವ ಖಡಕ್ ಸಿಂಗ್!

ಕಟ್ಟುನಿಟ್ಟಿನ ತಂದೆಯ ದುರ್ವರ್ತನೆ ನೋಡಿ ಮಕ್ಕಳಿಬ್ಬರು ಅಪ್ಪನಿಗೆ ‘ಖಡಕ್ ಸಿಂಗ್’ (khadak singh review) ಎಂದು ಅಡ್ಡ ಹೆಸರು ಇಟ್ಟುಕೊಂಡಿರುತ್ತಾರೆ. ಸಿನಿಮಾದಲ್ಲಿ ಅದೊಂದೇ ಆಕರ್ಷಣೆ.

VISTARANEWS.COM


on

Khadak SIngh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವರಾಜ್‌ ಡಿ ಎನ್‌ ಎಸ್‌

Shivaraj DNS

ಈ ಸಿನಿಮಾದ (khadak singh review) ಕಾಸ್ಟಿಂಗ್ ಅದ್ಭುತವಾಗಿದೆ. ಪಾರ್ವತಿ ತಿರುವತ್ತೂರ್ ಹೆಡ್ ನರ್ಸ್ ‘ಮಿಸ್ ಕಣ್ಣನ್’ ಪಾತ್ರದಲ್ಲಿ ಕ್ಯೂಟ್ ಎನ್ನುವಂತೆ ನಟಿಸಿದ್ದಾರೆ, ಪಂಕಜ್ ತ್ರಿಪಾಠಿ ಅವರು ಎಕೆ ಶ್ರೀವಾತ್ಸವ್ ಪಾತ್ರಕ್ಕೆ ಎಂದಿನಂತೆ ತಮ್ಮ ಮನೋಜ್ಞ ಅಭಿನಯದಿಂದ ಜೀವ ನೀಡಿದ್ದಾರೆ. ಬಹಳ ದಿನಗಳ ನಂತರ ಚಿತ್ರದ ಸಂಗೀತದಲ್ಲಿ ಸಿತಾರ್, ಸರೋದ್ ವಾದ್ಯದ ಸದ್ದುಗಳು ಕೇಳಿ ಬಂದವು. ಸಾಕ್ಷಿ ಶ್ರೀವಾತ್ಸವ್ ಪಾತ್ರದಲ್ಲಿ ಸಂಜನಾ ಶಾಘೈ ಅಚ್ಚುಕಟ್ಟಾಗಿ ಅಭಿನಯಿಸಿರುವುದಲ್ಲದೆ ಕೆಲವು ದೃಶ್ಯಗಳಲ್ಲಿ ಭಾವನಾತ್ಮಕವಾಗಿ ಗಮನ ಸೆಳೆಯುತ್ತಾರೆ. ಚಿತ್ರದ ಸಂಭಾಷಣೆ ಕವಿತೆಯಂತೆ ಭಾಸವಾಗುತ್ತದೆ.

ಎಲ್ಲರಿಗೂ ಅನ್ಸತ್ತೆ.. ನಮಗೆ ಅಮ್ಮ ಇಲ್ಲ ಅಂತಾ. ಆದರೆ ಅವರಿಗೆ ಗೊತ್ತಿಲ್ಲ, ನಮ್ಮ ಅಪ್ಪನೂ ಇಲ್ಲ. ನಾವು ಅಪ್ಪ ಅಮ್ಮ ಇಬ್ಬರನ್ನೂ ಒಟ್ಟಿಗೆ ಕಳ್ಕೊಂಡೆವು. ಒಬ್ಬರಿದ್ದಾರೆ ಮನೆಯಲ್ಲಿ, ಅಪ್ಪನಂತೆ ಓಡಾಡಿಕೊಂಡು. ಆದರೇ ಅವರು ನಮ್ಮಪ್ಪ ಅಲ್ಲ. ಯಾಕಂದ್ರೆ ನಮ್ಮಪ್ಪನ ಮುಖದಲ್ಲಿ ನಗು ಇರ್ತಿತ್ತು. ಅವರ ಬೆವರ ವಾಸನೆಯೊಂದಿಗೆ ಟಾಲ್ಕಂ ಪೌಡರ್ ಘಮಲು ಮೂಗಿದೆ ತಾಕುತ್ತಿತ್ತು. ಅವರು ಕಣ್ಣಲ್ಲಿ ಕಣ್ಣಿಡುತ್ತಿದ್ದರು. ಪ್ರೀತಿಯಿಂದ ಅಪ್ಪಿಕೊಳ್ಳುತ್ತಿದ್ದರು.

ಅಪ್ಪನ ಮುಂದೆ ನಿಂತು ಮಗಳು ಹೇಳುವ ಮಾತುಗಳಿವು, ಸಿನಿಮಾದಲ್ಲಿ ಕೇಳುವಾಗ ಕಣ್ತುಂಬಿಕೊಂಡವು. ಹೀಗೆ ಎಲ್ಲ ಪಾತ್ರದಅರಿಗಳ ಅಭಿನಯ ಹಾಗೂ ತಂತ್ರಜ್ಞ ವರ್ಗದ ಎಲ್ಲ ಕಾರ್ಯವೂ ಗಟ್ಟಿಯಾಗಿದೆ ಆದರೆ ದುನಿಯಾ ತು ಶಾತೀರ್ ಹೈ, ವಿಶ್ವಾಸ್ ಗಾತಿ ಹೈ.. ‘ಹೆ ಜಗತ್ತೆ ನೀನೆಷ್ಟು ಚಾಣಾಕ್ಷ, ನಿನ್ನೊಳಗೆ ಏನೆಲ್ಲ ಹೊಳಹು, ಬೆಳಕು, ಕೊಳಕು ಇದೆ’ ಎನ್ನುವ ಹಿನ್ನೆಲೆ ಧ್ವನಿಯಲ್ಲಿ ಟೈಟಲ್ ಕಾರ್ಡಿನೊಂದಿಗೆ ಶರುವಾಗುವ ಸಿನಿಮಾ ಮೊದಲ ದೃಶ್ಯದಲ್ಲೇ ತಂದೆ ಮಗಳಂಥವರು ಎದುರಾಗಬಾರದಂಥ ಸ್ಥಳದಲ್ಲಿ ಎದುರಾಗುತ್ತಾರೆ ಎಂಬಂತೆ ಬಿಂಬಿಸಿ ಪ್ರೇಕ್ಷಕರಲ್ಲಿ ದಟ್ಟ ಆಲೋಚನೆಗಳು ಹುಟ್ಟಿಕೊಳ್ಳುವಂತೆ ಮಾಡುತ್ತದೆ.

ಖಡಕ್‌ ಸಿಂಗ್‌ ಯಾಕೆ?:

ಕಟ್ಟುನಿಟ್ಟಿನ ತಂದೆಯ ದುರ್ವರ್ತನೆ ನೋಡಿ ಮಕ್ಕಳಿಬ್ಬರು ಅಪ್ಪನಿಗೆ ‘ಖಡಕ್ ಸಿಂಗ್’ ಎಂದು ಅಡ್ಡ ಹೆಸರು ಇಟ್ಟುಕೊಂಡಿರುತ್ತಾರೆ. ಅದನ್ನೆ ಟೈಟಲ್ ಮಾಡುವಷ್ಟು ಚಿತ್ರದಲ್ಲಿ ವಿಷಯಕ್ಕೆ ಪ್ರಾಮುಖ್ಯತೆ ಕೊಟ್ಟಿಲ್ಲದಿರುವುದು ಗೊಂದಲಕಾರಿ. ಚಿತ್ರದಲ್ಲಿ ಮಗ ತಪ್ಪುಮಾಡಿದ ಎಂದು ಬೆಲ್ಟ್ ಬಿಚ್ಚಿ ಥಳಿಸುವ ಅಪ್ಪ ಹೊರಗೆ ಬಂದು ಅದೇ ತಪ್ಪನ್ನು ಮಾಡುವ ವಿಷಯ, ನೋವಿನ ನೆಪ ಒಡ್ಡಿ ತಪ್ಪು ಹಾದಿ ತುಳಿಯುವ ತಮ್ಮನ ತಿದ್ದುವ ಅಕ್ಕ, ಅಪ್ಪನ ಪ್ಯಾಂಟ್ ಜೇಬಿನಲ್ಲಿ ವಯಸ್ಸಿಗೆ ಬಂದ ಮಗಳ ಕೈಗೆ ಕಾಂಡೋಮ್ ಸಿಗುವುದು, ಪ್ರೀತಿ ಸ್ನೇಹವನ್ನೂ ಮೀರಿದಂಥ ಸಂಬಂಧ ಹೊಂದುವ ಇಬ್ಬರು ತಮ್ಮ ಸಂಬಂಧ ಅನಿವಾರ್ಯವೋ, ಅವಶ್ಯಕತೆಯೊ, ನೋವಿಗೆ ಔಷಧಿಯೊ ಎಂದು ಸಮಾಲೋಚನೆ ಮಾಡುವಂಥದ್ದು. ಹೀಗೆ ಹತ್ತು ಹಲವು ಅದ್ಭುತ ಎನಿಸುವಂತ ವಿಷಯಗಳು ಚಿತ್ರದಲ್ಲಿದೆ. ಆದರೆ ಚಿತ್ರ ಮುಗಿದ ನಂತರದಲ್ಲಿ ಬರಹಗಾರರೋ ನಿರ್ದೇಶಕರೊ ಕತೆ ಸಾಗಿಸುವ ಭರದಲ್ಲಿ ಯಾವ ವಿಷಯಕ್ಕೂ ಒತ್ತು ಕೊಡದೆ ಎಲ್ಲವನ್ನೂ ಮಾತಿನಲ್ಲೇ ತೇಲಿಸಿ ಎಲ್ಲೋ ಏನೊ ಎಡವಟ್ಟು ಮಾಡಿಕೊಂಡಿದ್ದಾರೆ ಅನಿಸುತ್ತದೆ.

ಸಂಶಯದಿಂದ ಶುರು

ಕೋಲ್ಕತ್ತಾದ ಫೈನಾನ್ಸಶೀಯಲ್ ಕ್ರೈಮ್ ಇಲಾಖೆಯಲ್ಲಿ ನಿರ್ದೇಶಕನಾಗಿರುವ ಎ ಕೆ ಶ್ರೀವಾತ್ಸವ್ ಒತ್ತಡದಿಂದಲೋ ವೈಯಕ್ತಿಕ ಬದುಕಿನ ಸಮಸ್ಯೆಯಿಂದಲೋ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾನೆ. ನಿಜಕ್ಕೂ ಅವನು ಆತ್ಮಹತ್ಯೆ ಪ್ರಯತ್ನ ಮಾಡಿರುವುದಾ ಅಥವಾ ವೃತ್ತಿರಂಗದ ವೈರಿಗಳ ಕೊಲೆ ಪ್ರಯತ್ನವಾ ಎನ್ನುವ ಸಂಶಯ ಸಿನಿಮಾದ ಶುರುವಿನಿಂದ ಕೊನೆಯವರೆಗೂ ಪ್ರೇಕ್ಷಕರಷ್ಟೆ ಅಲ್ಲದೇ ಪಾತ್ರಗಳಿಗೂ ಕೊನೆಯವರೆಗೂ ಪ್ರಶ್ನೆಯಾಗಿಯೇ ಉಳಿದಿರುತ್ತದೆ.
ಸದ್ಯ ಸಾವಿನ ದವಡೆಯಿಂದ ಪಾರಾಗಿರುವ ಶ್ರೀ ವಾತ್ಸವ್ ತನ್ನ ಜ್ಞಾಪಕ ಶಕ್ತಿ ಕಳೆದುಕೊಂಡು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತರಿದ್ದಾನೆ. ಅವನ ಬದುಕಿನ ವೈಯಕ್ತಿಕ ಸಂಬಂಧಗಳು ಸಹೋದ್ಯೋಗಿಯಾಗಿರುವ ಹಲವು ಪಾತ್ರಗಳು, ಒಂದೊಂದಾಗಿ ಬಂದು ಅವರವರ ದೃಷ್ಟಿಕೊನದಲ್ಲಿ ಕಥೆ ಹೇಳುತ್ತ ನೆನಪು ಮರುಕಳಿಸಲು ಸಹಕರಿಸುತ್ತಿದ್ದಾರೆ.

ಶ್ರೀವಾತ್ಸವ್ ನಿತ್ಯ ‘ನರ್ಸ್ ಮಿಸ್ ಕಣ್ಣನ್’ ಜೊತೆಗೆ ಬಂದು ಹೋದವರು ಹೇಳಿದ ಕತೆಗಳ ಸತ್ಯ ಅಸತ್ಯತೆಯನ್ನ ವಿಮರ್ಶಿಸಿ ನಿರ್ಧಾರಕ್ಕೆ ಬರುತ್ತಿದ್ದಾನೆ. ಎಕೆ ಶ್ರೀ ಆತ್ಮಹತ್ಯೆ ಪ್ರಯತ್ನಕ್ಕೂ ಮೊದಲು ಸಹೋದ್ಯೋಗಿ ರವಿ ಎಂಬಾತನೂ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಪರಿಸ್ಥಿತಿ ಹೀಗಿರುವಾಗ ಈ ಕುರಿತು ನ್ಯೂಸ್ ಚಾನೆಲ್‌ಗಳಲ್ಲಿ ಊಹಾಪೋಹಗಳು ಸುದ್ದಿಯಾಗುತ್ತಿವೆ. ಹೀಗೆ ಸಾಗುವ ಚಿತ್ರಕತೆ ಚಿಟ್ ಫಂಡ್ ನಂತಹ ವೈಟ್ ಕಾಲರ್ ಕ್ರೈಂಗಳನ್ನೂ ಸುತ್ತಿಬಂದು ಕೊನೆಯಲ್ಲಿ ಶ್ರೀವಾತ್ಸವ್ ಆತ್ಮಹತ್ಯೆ ಪ್ರಯತ್ನಮಾಡಿದ್ದಾ? ಅಥವಾ ಕೊಲೆಯ ಪ್ರಯತ್ನವಾ ಅನ್ನೋದು ತಿಳಿಯುತ್ತದೆ.

ಇದನ್ನೂ ಓದಿ : YEAR ENDER 2023: ಈ ವರ್ಷದ ಅತ್ಯಂತ ವಿವಾದಾತ್ಮಕ ಸಿನಿಮಾಗಳಿವು!

ಅದು ಹೇಗೆ ಏನು, ಶ್ರೀವಾತ್ಸವ್ ಮಕ್ಕಳ ಜೊತೆ ಯಾಕೆ ಕಠೋರವಾಗಿ ನೆಡೆದುಕೊಳ್ಳುತ್ತಿದ್ದ, ಈ ಎಲ್ಲ ವಿಷಯವನ್ನು ಸಿನಿಮಾದಲ್ಲಿ ನೋಡಿ ತಿಳಿಯೋದು ಉತ್ತಮ. ಚಿತ್ರ ಮೊದಲೇ ಹೇಳಿದಂತೆ ಹತ್ತು ಹಲವು ವಿಷಯಗಳನ್ನ ಹೊತ್ತ ಓವರ್ ಲೋಡ್ ಲಾರಿಯಂತಿದೆ. ಅದನ್ನು ನಿರ್ದೇಶಕರೊಂದಿಗೆ ಪಂಕಜ್ ತ್ರಿಪಾಠಿ ಕ್ಷೇಮವಾಗಿ ಶುರುವಿನಿಂದ ಕೊನೆಯವರೆಗೂ ತಂದು ನಿಲ್ಲಿಸಿದ್ದಾರೆ ಅನ್ನೋದು ನನ್ನ ಅನಿಸಿಕೆ.

ಸೂಕ್ಷ್ಮ ಸಂಗತಿಗಳು

Mahesh Ramanathan. Viraf Sarkar ಮುಂತಾದವರು ಬಂಡವಾಳ ಹೂಡಿರುವ ಈ ಸಿನಿಮಾಕ್ಕೆ Aniruddha Roy Chowdhury ಆಕ್ಸನ್ ಕಟ್ ಹೇಳಿದ್ದು, ಸಿನಿಮಾ ನೇರವಗಿ ಓಟಿಟಿ ಯಲ್ಲಿ ಡಿಸೆಂಬರ್-8 ರಂದು ಬಿಡುಗಡೆಯಾಗಿದೆ. ಚಿತ್ರ ಶೀರ್ಷಿಕೆಯಿಂದಲೋ, ಕಾಸ್ಟಿಂಗ್ ನಿಂದಲೋ ಭಾರಿ ನಿರೀಕ್ಷೆ ಹೊಂದಿದ್ದ ಸಿನಿಮಾ, ಸಿನಿಮಾಸಕ್ತರಿಗೆ ನಿರಾಸೆ ಮೂಡಿಸಿದೆ ಎಂದು ಬಾಲಿವುಡ್ ಅಂಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಚಿತ್ರದಲ್ಲಿ ತಳೆದಿರುವ ಸೂಕ್ಷ್ಮ ಸಂಗತಿಗಳು ಮನ ಮುಟ್ಟುತ್ತವೆ. ರೋಗಿಯಾದವನಿಗೆ ಬಾಸ್ be patient ಅಂದಾಗ i’m officially patient ಸರ್ ಅನ್ನೋ ಸಣ್ಣ ಹಾಸ್ಯ ಚಟಾಕಿಯಂಥ ಮಾತುಗಳು ಇಷ್ಟವಾಗುತ್ತವೆ. ಸದ್ಯ ಈ ಸೈಕಲಾಜಿಕ್ ಸಸ್ಪೆನ್ಸ್ ಸಿನಿಮಾ ‘ಖಡಕ್ ಸಿಂಗ್’ ZEE5 ನಲ್ಲಿ ಸ್ಟ್ರೀಮ್ ಆಗುತ್ತಿದ್ದು ಆಸಕ್ತರು ಕಾಣಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Jr NTR: ಆರ್‌ಆರ್‌ಆರ್ ಬಿಡುಗಡೆಯಾದಾಗಿನಿಂದ, ಜ್ಯೂ. ಎನ್‌ಟಿಆರ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಾಲಿವುಡ್‌ಗೆ ವಾರ್‌ ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದಾರೆ ನಟ. ದೇವರ ಕೂಡ ಜ್ಯೂ. ಎನ್‌ಟಿಆರ್ ಕೈಯಲ್ಲಿದೆ. ಇದೀಗ ವರದಿಗಳ ಪ್ರಕಾರ NTR 31 ಅನ್ನು ತಾತ್ಕಾಲಿಕವಾಗಿ ʻಡ್ರ್ಯಾಗನ್ʼ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Jr NTR and Prashanth Neel get the title Dragon from Karan
Koo

ಬೆಂಗಳೂರು: ಮೇ 20ಕ್ಕೆ ಟಾಲಿವುಡ್‌ ನಟ ಜ್ಯೂನಿಯರ್‌ ಎನ್‌ಟಿಆರ್‌ (Jr NTR) ಅವರ ಜನುಮ ದಿನ. ಈ ಮುಂಚೆಯೇ ಘೋಷಣೆಯಾಗಿದ್ದ ಪ್ರಶಾಂತ್‌ ನೀಲ್-ಜ್ಯೂ. ಎನ್‌ಟಿಆರ್ ಸಿನಿಮಾದ ಟೈಟಲ್‌ ಜ್ಯೂನಿಯರ್‌ ಎನ್‌ಟಿಆರ್‌ ಬರ್ತ್‌ಡೇ ದಿನ ರಿವೀಲ್‌ ಆಗಬಹುದು ಎಂದು ವರದಿಯಾಗಿದೆ. ಟೈಟಲ್ ಏನು ಎನ್ನುವ ಬಗ್ಗೆ ಬಹಳ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಲೇ ಇದೆ.

ಆರ್‌ಆರ್‌ಆರ್ ಬಿಡುಗಡೆಯಾದಾಗಿನಿಂದ, ಜ್ಯೂ. ಎನ್‌ಟಿಆರ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಾಲಿವುಡ್‌ಗೆ ವಾರ್‌ ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದಾರೆ ನಟ. ದೇವರ ಕೂಡ ಜ್ಯೂ. ಎನ್‌ಟಿಆರ್ ಕೈಯಲ್ಲಿದೆ. ಇದೀಗ ವರದಿಗಳ ಪ್ರಕಾರ NTR 31 ಅನ್ನು ತಾತ್ಕಾಲಿಕವಾಗಿ ʻಡ್ರ್ಯಾಗನ್ʼ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಎಲ್ಲಾ ಭಾಷೆಗಳಲ್ಲಿ ಒಂದೇ ಟೈಟಲ್ ಇರುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಹಿಂದಿಯಲ್ಲಿ ಈ ಟೈಟಲ್ ಕರಣ್ ಜೋಹರ್ ಬಳಿ ಇತ್ತಂತೆ. ತಮ್ಮ ‘ಬ್ರಹ್ಮಾಸ್ತ್ರ’ ಚಿತ್ರಕ್ಕಾಗಿ ಈ ಟೈಟಲ್ ರಿಜಿಸ್ಟರ್ ಮಾಡಿಸಿದ್ದರಂತೆ. ಇದೀಗ ಆ ಟೈಟಲ್‌ ಅನ್ನು ನೀಲ್ ಚಿತ್ರಕ್ಕೆ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗ್ತಿದೆ.. ‘ಡ್ರ್ಯಾಗನ್‌’ಗಿಂತ ‘ಡೈನೋಸಾರ್’ ಚೆನ್ನಾಗಿರುತ್ತದೆ ಎನ್ನುತ್ತಿದ್ದಾರೆ.

ಇದನ್ನೂ ಓದಿ: Banners Of Jr NTR: ಜ್ಯೂ. ಎನ್‌ಟಿಆರ್‌ ಬ್ಯಾನರ್, ಫ್ಲೆಕ್ಸ್ ಕಿತ್ತು ಬಿಸಾಕಿ ಎಂದ ಬಾಲಯ್ಯ!

ಸದ್ಯ ನಟ ‘ದೇವರ‘ ಸಿನಿಮಾ (Devara Movie)ದಲ್ಲಿ ಬ್ಯಸಿಯಾಗಿದ್ದಾರೆ. ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. `ದೇವರ’ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕರು ಹೊಸ ಅಪ್ ಡೇಟ್ ನೀಡಿದ್ದಾರೆ. ಈ ಚಿತ್ರವು 2024ರ ಅಕ್ಟೋಬರ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ. ಮೊದಲ ಭಾಗಕ್ಕೆ ‘ದೇವರ: ಭಾಗ 1’ ಎಂದು ಹೆಸರಿಡಲಾಗಿದೆ. ಈ ಮುಂಚೆ ಚಿತ್ರತಂಡ ಏಪ್ರಿಲ್ 5 ರಂದು ಸಿನಿಮಾ ರಿಲೀಸ್‌ ಡೇಟ್‌ವನ್ನು ಘೋಷಿಸಿತ್ತು.

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

ಬಾಲಿವುಡ್

Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

Shah Rukh Khan: ಸಿದ್ಧಾರ್ಥ್ ಮತ್ತು ಶಾರುಖ್ ಖಾನ್ ಪಠಾಣ್ ಚಿತ್ರೀಕರಣದ ಮೂಲಕ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಇದೀಗ ಈ ಕಿಂಗ್‌ ಸಿನಿಮಾ ಮೂಲಕ ತಮ್ಮ ಸ್ನೇಹವನ್ನು ಮತ್ತಷ್ಟು ವಿಸ್ತರಿಸಲು ಸಿದ್ಧರಾಗಿದ್ದಾರೆ. ವಾಸ್ತವವಾಗಿ, ಸಿದ್ ಮತ್ತು ಅವರ ತಂಡವು ಈಗಾಗಲೇ ಈ ಪ್ರಾಜೆಕ್ಟ್‌ಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ, ”ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Shah Rukh Khan and Anirudh Ravichander to team up for King
Koo

ಬೆಂಗಳೂರು: `ಜವಾನ್’ ನಂತರ, ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ಶಾರುಖ್ ಖಾನ್ (Shah Rukh Khan) ಅವರೊಂದಿಗೆ ಮತ್ತೆ ಕೈ ಜೋಡಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಶಾರುಖ್‌ ಅವರ ಮುಂದಿನ ಚಿತ್ರ ‘ಕಿಂಗ್’ ಸಿನಿಮಾಗಾಗಿ ಸಂಗೀತ ಮಾಡಲು ರೆಡಿಯಾಗಿದ್ದಾರೆ. ಈ ಸಿನಿಮಾಗೆ ಶಾರುಖ್‌ ಮಗಳು ಸುಹಾನಾ ಖಾನ್ ಕೂಡ ಇರಲಿದ್ದಾರೆ ಎನ್ನಲಾಗಿದೆ.

ಅಟ್ಲೀ ಅವರ ‘ಜವಾನ್’ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ರಚಿಸಿದ್ದರು. ಈಗ ಶಾರುಖ್‌ ಅವರ ಮುಂದಿನ ಚಿತ್ರ ‘ಕಿಂಗ್’ ಸಿನಿಮಾಗಾಗಿ ಸಂಗೀತ ಮಾಡಲು ರೆಡಿಯಾಗಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

‘ಕಿಂಗ್’ ಒಂದು ರೀತಿಯ ಆ್ಯಕ್ಷನ್ ಥ್ರಿಲ್ಲರ್ ಆಗಿರುತ್ತದೆʼʼಎಂದು ವರದಿಯಾಗಿದೆ. ಸಿದ್ಧಾರ್ಥ್ ಮತ್ತು ಶಾರುಖ್ ಖಾನ್ ಪಠಾಣ್ ಚಿತ್ರೀಕರಣದ ಮೂಲಕ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಇದೀಗ ಈ ಕಿಂಗ್‌ ಸಿನಿಮಾ ಮೂಲಕ ತಮ್ಮ ಸ್ನೇಹವನ್ನು ಮತ್ತಷ್ಟು ವಿಸ್ತರಿಸಲು ಸಿದ್ಧರಾಗಿದ್ದಾರೆ. ವಾಸ್ತವವಾಗಿ, ಸಿದ್ ಮತ್ತು ಅವರ ತಂಡವು ಈಗಾಗಲೇ ಈ ಪ್ರಾಜೆಕ್ಟ್‌ಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ, ”ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

ಸುಜೋಯ್ ಪ್ರಸ್ತುತ ದಿ ಕಿಂಗ್‌ಗಾಗಿ ಪ್ರಿ-ಪ್ರೊಡಕ್ಷನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ ಆ್ಯಕ್ಷನ್ ಥ್ರಿಲ್ಲರ್‌ನ ಸ್ಕ್ರಿಪ್ಟ್‌ಗೆ ಅಂತಿಮ ಸ್ಪರ್ಶವನ್ನು ನೀಡುತ್ತಿದ್ದಾರೆ. “ಕಿಂಗ್‌ನಲ್ಲಿ ಶಾರುಖ್‌ ಅವರ ಪಠಾಣ್ ಮತ್ತು ಜವಾನ್ ಸಿನಿಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಇದು ಬಹಳಷ್ಟು ಚೇಸ್ ಸೀಕ್ವೆನ್ಸ್‌ಗಳೊಂದಿಗೆ ಇರಲಿದೆ. ಆದರೂ, ಮುಖ್ಯ ಕಥಾವಸ್ತುವು ಭಾವನಾತ್ಮಕವಾಗಿದೆ. ಸಾಕಷ್ಟು ತಿರುವುಗಳನ್ನು ಹೊಂದಿದೆ, ಇದರಿಂದಾಗಿ ಸುಜೋಯ್‌ಗೆ ನಿರ್ದೇಶನದ ಜವಾಬ್ದಾರಿಯನ್ನು ನೀಡಲಾಗಿದೆ, ”ಎಂದು ಮೂಲಗಳು ತಿಳಿಸಿವೆ. ಪಠಾಣ್ ಮತ್ತು ಜವಾನ್‌ನ ಸಿನಿಮಾಗಳ ಯಶಸ್ಸಿನ ಬಳಿಕ ಈ ಸಿನಿಮಾ ವಿಜಯೋತ್ಸವಕ್ಕೆ ಶಾರುಖ್‌ ಸಿದ್ಧವಾಗಿದ್ದಾರೆ.

Continue Reading

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading
Advertisement
Virat kohli
ಪ್ರಮುಖ ಸುದ್ದಿ6 mins ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Crime News
ಕ್ರೈಂ16 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ20 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ51 mins ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ1 hour ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ2 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ3 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ7 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌