Rishabh Pant: ಪಂತ್​ ಫಿಟ್​ನೆಸ್​ ಕುರಿತು ಮಹತ್ವದ ಮಾಹಿತಿ ನೀಡಿದ ಎನ್​ಸಿಎ - Vistara News

ಕ್ರಿಕೆಟ್

Rishabh Pant: ಪಂತ್​ ಫಿಟ್​ನೆಸ್​ ಕುರಿತು ಮಹತ್ವದ ಮಾಹಿತಿ ನೀಡಿದ ಎನ್​ಸಿಎ

ಪಂತ್​ ಅವರಿಗೆ ಪ್ರತಿ ನಿತ್ಯ ಎನ್​ಸಿಎಯಲ್ಲಿ ತರಬೇತಿ ನೀಡಲಾಗುತ್ತದೆ. ಸದ್ಯಕ್ಕೆ ಅವರು ರನ್ನಿಂಗ್​ ಮತ್ತು ಭಾರ ಎತ್ತುವ ಮತ್ತು ಕೆಲ ಸಣ್ಣ ಪುಟ್ಟ ಫಿಟ್​ನೆಸ್​ ಮಾಡುತ್ತಾರೆ. ಶೇ.80ರಷ್ಟು ಫಿಟ್​ ಆದಂತೆ ತೋರುತ್ತಿದೆ ಎಂದು ಎನ್​ಸಿಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

VISTARANEWS.COM


on

Rishabh Pant Fitness
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಕೆ ಕಾಣುತ್ತಿರುವ ರಿಷಭ್​ ಪಂತ್(Rishabh Pant),​ ಮುಂದಿನ ವರ್ಷದ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಆಡುವ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಲಿದ್ದಾರೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಪಂತ್​ ಫಿಟ್​ನೆಸ್​(Fitness) ಕುರಿತು ಎನ್​ಸಿಎ(NCA) ಮೂಲಗಳು ಮಹತ್ವದ ಅಪ್​ಡೇಟ್​ ನೀಡಿದೆ.

“ಪಂತ್ ಚೇತರಿಕೆ ಹಂತದಲ್ಲಿದ್ದಾರೆ. ಚೇತರಿಕೆ ನಿರೀಕ್ಷೆಗಿಂತ ಉತ್ತಮವಾಗಿದೆ. ಗಾಯದ ನಂತರ ಅವರ ಮೊಣಕಾಲು ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವ ಆತಂಕವಾಗಿತ್ತು. ಆದರೆ ಪಂತ್​ ವ್ಯಾಯಾಮ ಮತ್ತು ಚೇತರಿಕೆ ಕಾಣುವಾಗ ಈ ಆತಂಕ ದೂರವಾಗಿದೆ. ಆದರೂ ಅವರು ಇನ್ನೂ ಸಂಪೂರ್ಣ ಫಿಟ್​ ಆಗಿಲ್ಲ” ಎಂದು ಎನ್​ಸಿಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಶೇ.100ರಷ್ಟು ಫಿಟ್​ ಆಗಿಲ್ಲ

ಪಂತ್​ ಅವರಿಗೆ ಪ್ರತಿ ನಿತ್ಯ ಎನ್​ಸಿಎಯಲ್ಲಿ ತರಬೇತಿ ನೀಡಲಾಗುತ್ತದೆ. ಸದ್ಯಕ್ಕೆ ಅವರು ರನ್ನಿಂಗ್​ ಮತ್ತು ಭಾರ ಎತ್ತುವ ಮತ್ತು ಕೆಲ ಸಣ್ಣ ಪುಟ್ಟ ಫಿಟ್​ನೆಸ್​ ಮಾಡುತ್ತಾರೆ. ಶೇ.80ರಷ್ಟು ಫಿಟ್​ ಆದಂತೆ ತೋರುತ್ತಿದೆ. ಮುಂದಿನ ವಾರದಿಂದ ಅವರಿಗೆ ಶೇ.100ರ ಪರಿಪೂರ್ಣ ಫಿಟ್​ನೆಸ್​ನ ತರಬೇತಿ ಆರಂಭಿಸುತ್ತೇವೆ. ಇಲ್ಲಿ ಅವರ ಕ್ರಿಕೆಟ್​ ಕಮ್​ಬ್ಯಾಕ್​ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಎನ್​ಸಿಎ ಮೂಲಗಳು ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ IND vs SA: ವಿಶ್ವಕಪ್​ ಬಳಿಕ ಮೊದಲ ಏಕದಿನ ಪಂದ್ಯ ಆಡಲು ಸಜ್ಜಾದ ಭಾರತ

ಬಿಸಿಸಿಐ ಕೂಡ ಪಂತ್​ ಅವರ ಫಿಟ್​ನೆಸ್​ ಮೇಲೆ ತೀವ್ರ ನಿಗಾ ಇರಿಸಿದೆ. ಪ್ರತಿ ಹಂತದ ಟ್ರೈನಿಂಗ್​ ಬಳಿಕವೂ ಎನ್​ಸಿಎ ಬಳಿ ಅಪ್​ಡೇಟ್​ ಪಡೆಯುತ್ತಿದೆ. ಪಂತ್​ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳ ಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಆಡಿ ತಮ್ಮ ಫಿಟ್​ಸೆನ್​ ಸಾಬೀತುಪಡಿಸಬೇಕಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಹೀಗಾಗಿ ಪಂತ್​ಗೆ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆಡಿದ್ದರೆ ಇದು ಅವರಿಗೆ ಮಹತ್ವದ ಟೂರ್ನಿಯಾಗಲಿದೆ.

ಕೆಲ ದಿನಗಳ ಹಿಂದೆ ಪಂತ್​ ಅವರು ಜಿಮ್​ನಲ್ಲಿ ಬಾರ ಎತ್ತುವ ಮತ್ತು ಇನ್ನು ಕೆಲ ಕಸರತ್ತು ಮಾಡುವ ವಿಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ಎಲ್ಲ ನೋವನ್ನು ಮರೆತು ಮತ್ತೆ ಪುಟಿದೇಳುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಪಂತ್ ಜಿಮ್‌ನಲ್ಲಿ ಫಿಟ್​ನೆಸ್​ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಕಂಡ ಅವರ ಅಭಿಮಾನಿಗಳು ನಿಮ್ಮ ಆಗಮನಕ್ಕೆ ಕಾಯುತ್ತಿದ್ದೇವೆ ಎಂದು ಕಮೆಂಟ್​ ಮಾಡಿದ್ದರು.

ಡಿಸೆಂಬರ್​ನಲ್ಲಿ ಕಾರು ಅಪಘಾತ

ಕಳೆದ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಡಿಸೆಂಬರ್​ ಅಂತ್ಯಕ್ಕೆ ಘಟನೆ ನಡೆದು ಒಂದು ವರ್ಷವಾಗಲಿದೆ. ಅಂದಿನ ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

PBKS vs SRH: ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​

VISTARANEWS.COM


on

PBKS vs SRH
Koo

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಹೆಡ್​ ಕ್ಲೀನ್​ ಬೌಲ್ಡ್​


ಗುರಿ ಬೆನ್ನಟ್ಟಿದ ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಹೆಡ್​ ವಿಕೆಟ್​ ಬಿದ್ದರೂ ಕೂಡ ವಿಚಲಿತರಾಗದ ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಮೊತ್ತವನ್ನು ಈ ಜೋಡಿ ಕೇವಲ 4.6 ಓವರ್​ನಲ್ಲಿ ಬಾರಿಸಿದರು. ತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮತ್ತೆ ಸಿಡಿದ ಅಭಿಷೇಕ್ ಶರ್ಮ

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಇದೇ ವೇಳೆ 37 ಸಿಕ್ಸರ್​ ಬಾರಿಸಿರುವ ವಿರಾಟ್​ ಕೊಹ್ಲಿಯ ದಾಖಲೆ ಪತನಗೊಂಡಿತು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯ 3ನೇ ಅರ್ಧಶತಕವಾಗಿದೆ.

ಇದನ್ನೂ ಓದಿ RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್​ ಬ್ಯಾಟರ್​ಗಳು ಬೃಹತ್​ ಮೊತ್ತ ಪೇರಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ ಕಾರಣ ಸೋಲಿಗೆ ತುತ್ತಾದರು.

ಪ್ರಭಾಸಿಮ್ರಾನ್ ಅರ್ಧಶತಕ ವ್ಯರ್ಥ


ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕೂಡ ಅತ್ಯಂತ ಜೋಶ್​ನಲ್ಲಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರರಾದ ​ಅಥರ್ವ ತೈಡೆ ಮತ್ತು ಪ್ರಭಾಸಿಮ್ರಾನ್ ಸಿಂಗ್ 10 ಸರಾಸರಿಯಲ್ಲಿ ರನ್​ ಗಳಿಸಿ ಮೊದಲ ವಿಕೆಟ್​ಗೆ 97 ರನ್​ ಒಟ್ಟುಗೂಡಿಸಿದರು. ಅಥರ್ವ ತೈಡೆ 46 ರನ್​ ಬಾರಿಸಿದರೆ, ಪ್ರಭಾಸಿಮ್ರಾನ್ 71 ರನ್(7 ಬೌಂಡರಿ, 4 ಸಿಕ್ಸರ್​)​ ಬಾರಿಸಿದರು. ಆ ಬಳಿಕ ಬಂದ ರೀಲಿ ರೋಸೊ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 4 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ 3 ರನ್​ ಅಂತರದಿಂದ ಅರ್ಧಶಕ ವಂಚಿತರಾದರು.

5 ನೇ ಕ್ರಮಾಂಕದಲ್ಲಿ ಆಡಲಿಳಿದ ಜಿತೇಶ್​ ಶರ್ಮ ಕೇವಲ 15 ಎಸೆತಗಳಿಂದ ಅಜೇಯ 32 ರನ್​ ಬಾರಿಸಿ ತಂಡದ ಬೃಹತ್​ ಮೊತಕ್ಕೆ ಕಾರಣರಾದರು. ಹೈದರಾಬಾದ್​ ಪರ ಎಡಗೈ ವೇಗಿ ಟಿ ನಟರಾಜ್​ 33 ರನ್​ಗೆ 2 ವಿಕೆಟ್​ ಉರುಳಿಸಿದರು. ನಾಯಕ ಪ್ಯಾಟ್​ ಕಮಿನ್ಸ್​ ಮತ್ತು ವಿಜಯಕಾಂತ್ ವ್ಯಾಸಕಾಂತ್ ತಲಾ ಒಂದು ವಿಕೆಟ್​ ಪಡೆದರು.

Continue Reading

ಕ್ರೀಡೆ

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

RCB vs CSK: ಶನಿವಾರದ ಚೆನ್ನೈ ಮತ್ತು ಆರ್​ಸಿಬಿ(RCB vs CSK) ನಡುವಣ ಪಂದ್ಯ ಜಿಯೋ ಸಿನಿಮಾದಲ್ಲಿ(jiocinema) 50 ಕೋಟಿ ವೀಕ್ಷಣೆ ಕಾಣುವ ಮೂಲಕ ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಫೈನಲ್​ ಪಂದ್ಯಕ್ಕೂ ಮಿಗಿಲಾದ ಕಾತುಕ ಸೃಷ್ಟಿಸಿದ್ದ ಶನಿವಾರದ ಚೆನ್ನೈ ಮತ್ತು ಆರ್​ಸಿಬಿ(RCB vs CSK) ನಡುವಣ ಪಂದ್ಯ ಜಿಯೋ ಸಿನಿಮಾದಲ್ಲಿ(jiocinema) 50 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆಯೊಂದನ್ನು ಬರೆದಿದೆ. ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು.


ಅದರಲ್ಲೂ ಅಂತಿಮ ಓವರ್​ ವೇಳೆಗೆ ವೀಕ್ಷಕರ ಸಂಖ್ಯೆ ಒಂದೇ ಕ್ಷಣ ಏರಿಕೆ ಕಂಡಿತು. ಚೆನ್ನೈಗೆ(RCB vs CSK) ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಪಂದ್ಯದಲ್ಲಿ 201ರನ್​ ಗಡಿ ದಾಟಿಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದಲ್ಲಿ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. ಈ ಗುರಿ ತಲುಪಲು ಚೆನ್ನೈಗೆ ಅಂತಿಮವಾಗಿ 6 ಎಸೆತಗಳಲ್ಲಿ 17 ರನ್ ತೆಗೆಯುವ ಸವಾಲು ಎದುರಾಯಿತು. ಈ ವೇಳೆ  ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಈ ವೇಳೆ ಪಂದ್ಯ ರೋಚಕ ಘಟ್ಟ ತಲುಪಿತು. 5 ಎಸೆತಗಳಲ್ಲಿ 11 ರನ್ ಬೇಕಿದ್ದಾಗ ಧೋನಿ ಮತ್ತೊಂದು ಸಿಕ್ಸರ್​ಗೆ ಪ್ರಯತ್ನಪಟ್ಟರು. ಆದರೆ ಇದು ಬ್ಯಾಟ್​ನ ತಳಭಾಗಕ್ಕೆ ಸಿಕ್ಕಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ಔಟಾದರು. ಅಂತಿಮವಾಗಿ 2 ಎಸೆತಕ್ಕೆ 10 ರನ್​ ಬೇಕಿದ್ದಾಗ ಜಡೇಜಾ 2 ಬಾಲ್​ ಡಾಡ್​ ಮಾಡಿದರು. ಆರ್​ಸಿಬಿ 27 ರನ್​ಗಳ ಗೆಲುವು ಸಾಧಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶ ಪಡೆಯಿತು.

ಇದನ್ನೂ ಓದಿ RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?


​ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಆರ್​ಸಿಬಿ ಗೆಲುವಿನ ಬಳಿಕ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು.  ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

Continue Reading
Advertisement
Narendra Modi
ದೇಶ44 mins ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ59 mins ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ1 hour ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ2 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ2 hours ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ2 hours ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ3 hours ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ3 hours ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ3 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ4 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ9 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌