ಹೆಂಡತಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮೂವರು ಸಹೋದ್ಯೋಗಿಗಳನ್ನು ಗುಂಡಿಟ್ಟು ಸಾಯಿಸಿದ ಪೊಲೀಸ್‌ - Vistara News

ಕ್ರೈಂ

ಹೆಂಡತಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮೂವರು ಸಹೋದ್ಯೋಗಿಗಳನ್ನು ಗುಂಡಿಟ್ಟು ಸಾಯಿಸಿದ ಪೊಲೀಸ್‌

ಸಿಕ್ಕಿಂ ಮೀಸಲು ಪೊಲೀಸ್‌ ಪಡೆಗೆ ಸೇರಿದ ಅವನು ದಿಲ್ಲಿಯಲ್ಲಿ ಕೆಲಸ ಆರಂಭಿಸಿ ಇನ್ನೂ ಕೇವಲ ಹತ್ತು ದಿನ ಆಗಿತ್ತಷ್ಟೆ. ಆಗಲೇ ಅವನ ಸಹೋದ್ಯೋಗಿಗಳು ಆತನ ಹೆಂಡತಿ ಬಗ್ಗೆ ಕೆಟ್ಟದಾಗಿ ಮಾತನಾಡಲು ಆರಂಭಿಸಿದರು. ಆಗ ಆತ ಅತಿರೇಕದ ನಿರ್ಧಾರಕ್ಕೆ ಬಂದೇಬಿಟ್ಟ.

VISTARANEWS.COM


on

police kills three colleagues
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಹೆಂಡತಿಯ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ, ಮಾನಸಿಕ ಹಿಂಸೆ ನೀಡುತ್ತಿದ್ದ ಮೂವರು ಸಹೋದ್ಯೋಗಿಗಳನ್ನು ಪೊಲೀಸ್‌ ಒಬ್ಬ ಗುಂಡಿಕ್ಕಿ ಸಾಯಿಸಿದ್ದಾನೆ. ದಿಲ್ಲಿಯ ಹೈದರ್‌ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೂವನ್ನು ಕೊಂದ ಬಳಿಕ ತಾನೇ ಪೊಲೀಸ್‌ ಠಾಣೆಗೆ ಹಾಜರಾಗಿರುವ ಈ ವ್ಯಕ್ತಿ ಅಲ್ಲಿ ತನಗಾದ ನೋವಿನ ಕಥೆಯನ್ನು ಹೇಳಿಕೊಂಡು ಕೊಲೆಯನ್ನು ಸಮರ್ಥಿಸಿಕೊಂಡಿದ್ದಾನೆ.

ಜತೆಗಾರರೇ ಹಿಂಸೆ ಕೊಡುತ್ತಿದ್ದರು
ಸಿಕ್ಕಿಂ ಮೀಸಲು ಪಡೆಗೆ ಸೇರಿದ ೩೨ ವರ್ಷಷ ಲಾನ್ಸ್‌ ನಾಯ್ಕ್‌ ಪ್ರಬೀಣ್‌ ರಾಯ್‌ ಹೈದರ್‌ಪುರದ ನೀರು ಶುದ್ಧೀಕರಣ ಘಟಕದಲ್ಲಿ ಸೇವೆಗೆ ನಿಯೋಜಿಸಲ್ಪಟ್ಟಿದ್ದ. ಆತ ಅಲ್ಲಿ ಕೆಲಸಕ್ಕೆ ಸೇರಿ ಇನ್ನೂ ೧೦ ದಿನ ಆಗಿರಲಿಲ್ಲ. ಆದರೆ, ಅಷ್ಟು ಹೊತ್ತಿಗೇ ಸಹೋದ್ಯೋಗಿಗಳು ಆತನ ಹೆಂಡತಿ ಬಗ್ಗೆ ಕೆಟ್ಟದಾಗಿ ಮಾತನಾಡಲು ಆರಂಭಿಸಿದ್ದರು. ಇದನ್ನು ಕೇಳಿ ಕೇಳಿ ಬೇಸತ್ತ ಆತ ಕೊನೆಗೆ ಅವರ ಮೇಲೆ ಗುಂಡು ಹಾರಿಸಿದ್ದಾನೆ.

ಸೋಮವಾರ ಮಧ್ಯಾಹ್ನ ೨.೩೦ರ ಹೊತ್ತಿಗೆ ರಾಯ್‌ ತಾನು ವಾಸವಾಗಿದ್ದ ಕ್ವಾರ್ಟ್‌ರ್ಸ್‌ಗೆ ಹೋಗಿದ್ದಾನೆ. ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನಾಲ್ವರ ಮೇಲೆ ತನ್ನಲ್ಲಿರುವ ಇನ್ಸಾಸ್‌ ರೈಫಲ್‌ನಿಂದ ಏಳು-ಎಂಟು ಸುತ್ತು ಗುಂಡು ಹಾರಿಸಿದ್ದಾನೆ. ಮೂವರಲ್ಲಿ ಇಬ್ಬರು ಒಂದು ಕೋಣೆಯಲ್ಲಿದ್ದರೆ, ಮತ್ತೊಬ್ಬ ಇನ್ನೊಂದು ಕೋಣೆಯಲ್ಲಿದ್ದ. ನಾಲ್ಕನೇ ವ್ಯಕ್ತಿ ಹಿಂಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣೆಗೆ ಹೋಗಿ ಶರಣಾಗತನಾದ
ಮೂವರು ಸಹೋದ್ಯೋಗಿಗಳನ್ನು ಕೊಂದ ಪ್ರಬೀಣ್‌ ರಾಯ್‌ ಬಳಿಕ ನೇರವಾಗಿ ಸಮಯಾಪುರ್‌ ಬಾದ್ಲಿ ಪೊಲೀಸ್‌ ಠಾಣೆಗೆ ಹೋಗಿ ಶರಣಾಗತನಾಗಿದ್ದಾನೆ. ತಾನು ಕಮಾಂಡರ್‌ ಪಿಂಟೋ ನಂಗ್ಯಾಲ್‌ ಭೂತಿಯಾ (೨೦೧೨ರ ಬ್ಯಾಚ್‌ನ ಸಹೋದ್ಯೋಗಿ), ಕಾನ್‌ಸ್ಟೇಬಲ್‌ಗಳಾದ ಇಂದ್ರ ಲಾಲ್‌ ಛೇಟ್ರಿ ಮತ್ತು ಧನ್‌ ಹಂಗ್‌ ಸುಬ್ಬಾ (೨೦೧೩ನೇ ಬ್ಯಾಚ್‌) ಅವರನ್ನು ಕೊಂದಿರುವುದಾಗಿ ಹೇಳಿದ್ದಾನೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಶೇಷ ಪೊಲೀಶ್‌ ಕಮಿಷನರ್‌ ದೀಪೇಂದ್ರ ಪಾಠಕ್‌ ಅವರು ಪ್ರಾಥಮಿಕವಾಗಿ ವಿಚಾರಣೆ ನಡೆಸಿದಾಗ ಹೆಂಡತಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೇ ಘಟನೆಗೆ ಕಾರಣ ಎಂದು ಸ್ಪಷ್ಟವಾಗಿದೆ.

ಹತ್ತು ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ಪ್ರಬೀಣ್‌ ರಾಯ್‌ನ ಖಾಸಗಿ ವಿಚಾರಗಳನ್ನು ಈ ಸಿಬ್ಬಂದಿ ಕೇಳಿ ತಿಳಿದುಕೊಂಡಿದ್ದಾರೆ. ಪ್ರಬೀಣ್‌ಗೆ ಮದುವೆಯಾಗಿತ್ತಾದರೂ ಹೆಂಡತಿ ಜತೆಗಿರಲಿಲ್ಲ. ಯಾವುದೋ ಸಮಸ್ಯೆಯಾಗಿ ಆಕೆ ತವರಿಗೆ ಹೋಗಿದ್ದಳು. ಈ ನಡುವೆ ಆಕೆಯನ್ನು ಮನವೊಲಿಸುವ ಪ್ರಯತ್ನ ನಡೆಯುತ್ತಿತ್ತು. ಸೋಮವಾರ ಮಧ್ಯಾಹ್ನದ ನಂತರವೂ ಪ್ರಬೀಣ್‌ ತನ್ನ ಪತ್ನಿಗೆ ಕರೆ ಮಾಡಿದ್ದ. ಆದರೆ, ಆಕೆ ಕರೆಗೆ ಪ್ರತಿಕ್ರಿಯಿಸಲೇ ಇಲ್ಲ. ಇದನ್ನು ನೋಡಿದ ಸಹೋದ್ಯೋಗಿಗಳು ಆತನ ಹೆಂಡತಿಯ ಬಗ್ಗೆ ಅಪಹಾಸ್ಯ ಮಾಡಿದ್ದರು. ಇದರಿಂದ ಪ್ರಬೀಣ್‌ಗೆ ಸಿಕ್ಕಾಪಟ್ಟೆ ಸಿಟ್ಟು ಬಂದಿತ್ತು. ಆತ ರೈಫಲ್‌ ಎತ್ತಿ ಗುಂಡು ಹಾರಿಸಿದ್ದ ಎಂದು ಪೊಲೀಸರು ವಿಚಾರಣೆಯ ಬಳಿಕ ತಿಳಿಸಿದ್ದಾರೆ.

ಇದನ್ನೂ ಓದಿ| ಮೂವರು ಸಹೋದ್ಯೋಗಿಗಳಿಗೆ ಗುಂಡಿಕ್ಕಿದ ಸಿಕ್ಕಿಂ ಪೊಲೀಸ್‌, ಇಬ್ಬರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Road Accident: ಬೆಂಗಳೂರು ಹಾಗೂ ಗದಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು. ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಹೋಟೆಲ್‌ ಸೇರಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

Road Accident
Koo

ಬೆಂಗಳೂರು/ಗದಗ/ಪುಣೆ: ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಫೋಟದಿಂದ ಮೂರು ಕಂಟೇನರ್ ವಾಹನಗಳು, ಒಂದು ಹೋಟೆಲ್ ಮತ್ತು ಮೂರು ಮನೆಗಳು ಬೆಂಕಿ ಆಹುತಿಯಾಗಿವೆ. ಭಾನುವಾರ ಬೆಳಗಿನ ಜಾವ 5 ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ (road Accident) ನಡೆದಿದೆ.

road Accident

ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ

ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿದ್ದರಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಚಾಲಕನಿಂದ ಅಡ್ಡಾದಿಡ್ಡಿ ಚಾಲನೆಗೆ ಆಟೋ, ಎರಡು ಬೈಕ್‌ಗೆ ಡಿಕ್ಕಿಯಾಗಿದೆ. ಬೆಂಗಳೂರಿನ ರಾಜಾಜಿನಗರದ ಈಸ್ಟ್ ವೆಸ್ಟ್ ಪಬ್ಲಿಕ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಿತಿ‌ ಗಂಭೀರವಾಗಿದೆ. ಮಲ್ಲೇಶ್ವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

road Accident

ಇದನ್ನೂ ಓದಿ: Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಗದಗದಲ್ಲಿ ಭೀಕರ ಅಪಘಾತ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ವಿಜಯಪುರ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ವಾಹನಗಳ ನಡುವೆ ಅಪಘಾತ ನಡೆದಿದೆ.

road Accident

ಬೊಲೆರೋ ಪಿಕಪ್ ವಾಹನ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿನ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಾಶತ್‌ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಎರ್ಟಿಗಾ ಚಾಲಕ ಮತ್ತು ಸ್ನೇಹಿತ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರು ‌ನಜ್ಜುಗುಜ್ಜಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Viral News:ವುಡ್‌ಸ್ಪ್ರಿಂಗ್‌ ಸೂಟ್ಸ್‌ ಹೊಟೇಲ್‌ನಲ್ಲಿ ಘಟನೆ ನಡೆದಿದ್ದು, ಶೆಂಟಿಂಗ್‌ ಗೋ ಎಂಬ 32ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ ಅನ್ನು ಹಲವು ಬಾರಿ ಚುಚ್ಚಿದ್ದಾಳೆ. ಬಳಿಕ ಅವನ ಗುಪ್ತಾಂಗವನ್ನು ಕಟ್‌ ಮಾಡಿ ಎಸೆದಿದ್ದಾಳೆ. ಈ ವಿಚಾರ ತಿಳಿದ ಹೊಟೇಲ್‌ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್‌ ಸ್ಥಳಕ್ಕೆ ಬಂದು ನೋಡಿದಾಗ ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನ ಗುಪ್ತಾಂಗವನ್ನು ಕತ್ತರಿಸಲಾಗಿತ್ತು. ಕತ್ತರಿಸಿಲಾಗಿದ್ದ ಗುಪ್ತಾಂಗ ಬೆಡ್‌ ಪಕ್ಕದಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಸಿಕ್ಕಿತ್ತು.

VISTARANEWS.COM


on

Viral News
Koo

ನವದೆಹಲಿ: ಗಾಢನಿದ್ದೆಯಲ್ಲಿದ್ದ ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಮಹಿಳೆಯೊಬ್ಬಳು ಕತ್ತರಿಸಿ ಎಸೆದಿರುವ ಘಟನೆ(Viral News) ಅಮೆರಿಕದ(America) ಕೊಲೋರಡೋ ಪ್ರದೇಶದಲ್ಲಿ ನರೆದಿದೆ. ತನ್ನನ್ನು ನೆಮ್ಮದಿಯಿಂದ ಮಲಗುವುದಕ್ಕೆ ಬಿಡದಿದ್ದ ಕಾರಣ ಮತ್ತು ಆತ ಮತ್ತೆ ತನ್ನನ್ನು ಗರ್ಭಿಣಿ(Pregnant)ಯನ್ನಾಗಿ ಮಾಡಿದ್ದಾನೆಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕತ್ತರಿಸಿದ್ದಾಳೆ.

ಘಟನೆ ವಿವರ

ವುಡ್‌ಸ್ಪ್ರಿಂಗ್‌ ಸೂಟ್ಸ್‌ ಹೊಟೇಲ್‌ನಲ್ಲಿ ಘಟನೆ ನಡೆದಿದ್ದು, ಶೆಂಟಿಂಗ್‌ ಗೋ ಎಂಬ 32ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ ಅನ್ನು ಹಲವು ಬಾರಿ ಚುಚ್ಚಿದ್ದಾಳೆ. ಬಳಿಕ ಅವನ ಗುಪ್ತಾಂಗವನ್ನು ಕಟ್‌ ಮಾಡಿ ಎಸೆದಿದ್ದಾಳೆ. ಈ ವಿಚಾರ ತಿಳಿದ ಹೊಟೇಲ್‌ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್‌ ಸ್ಥಳಕ್ಕೆ ಬಂದು ನೋಡಿದಾಗ ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನ ಗುಪ್ತಾಂಗವನ್ನು ಕತ್ತರಿಸಲಾಗಿತ್ತು. ಕತ್ತರಿಸಿಲಾಗಿದ್ದ ಗುಪ್ತಾಂಗ ಬೆಡ್‌ ಪಕ್ಕದಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಸಿಕ್ಕಿತ್ತು.

ಮತ್ತೆ ಗರ್ಭಿಯಾಗಿದ್ದ ಮಹಿಳೆ

ಕೊಲೆಯಾದ ವ್ಯಕ್ತಿ , ಶೆಂಟಿಂಗ್‌ ಗೋ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಎರಡನೇ ಬಾರಿ ಗರ್ಭಿಣಿಯನ್ನಾಗಿ ಮಾಡಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಾರೀ ಗಲಾಟೆಯಾಗಿತ್ತು. ಆಕೆಯನ್ನು ಮಲಗಲೂ ಬಿಡದೇ ವ್ಯಕ್ತಿ ಬಹಳಷ್ಟು ಕಿರಿ ಕಿರಿ ಮಾಡುತ್ತಿದ್ದ. ಇದರಿಂದ ಕೋಪಕೊಂಡ ಶೆಂಟಿಂಗ್‌ ಗೋ ಚಾಕುವಿನಿಂದ ಆತನನ್ನು ಚುಚ್ಚಿದ್ದಾಳೆ. ಬಳಿಕ ಆತನ ಗುಪ್ತಾಂಗ ಕಿತ್ತು ಕಸದ ಬುಟ್ಟಿಗೆ ಹಾಕಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಶೆಂಟಿಂಗ್‌ ಗೋಳನ್ನು ಅರೆಸ್ಟ್‌ ಮಾಡಿದ್ದು, ಮೃತ ವ್ಯಕ್ತಿಯ ಗುರುತು ಬಹಿರಂಗ ಪಡಿಸಿಲ್ಲ.

ಮಹಾರಾಷ್ಟ್ರದ ಪುಣೆಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ. ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

ಇದನ್ನೂ ಓದಿ: Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ. ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಉಡುಪಿ

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock : ಭಾರಿ ಮಳೆ ಗಾಳಿಗೆ (Karnataka rain) ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಇದನ್ನು ಗಮನಿಸದೆ ವ್ಯಕ್ತಿಯೊಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬ್ಬಂದಿ ದೌಡಾಯಿಸಿದ್ದಾರೆ.

VISTARANEWS.COM


on

By

Electric shock in udupi
Koo

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ಪಾಟ್ನಾ:ಲೋಕಸಭೆ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿರುವಗಲೇ ಬಿಹಾರ(Bihar)ದಲ್ಲಿ ಬಾಂಬ್‌ ಸ್ಫೋಟ(Bomb blast)ಗೊಂಡಿದ್ದು, ಮೌಲಾನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸರನ್‌ ಜಿಲ್ಲೆಯ ಮದರಸಾವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೌಲಾನ ಮೌಲಾನಾ ಇಮಾಮುದ್ದೀನ್ ಮತ್ತು ವಿದ್ಯಾರ್ಥಿ ನೂರ್ ಆಲಂ (15) ಗಾಯಗೊಂಡಿದ್ದರು. ಇವರಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಮಾಮುದ್ದೀನ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ವಿವರ:

ಬುಧವಾರ ತಡರಾತ್ರಿ ಸರನ್‌ನ ಓಲ್ಹಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದೆ. ನಾವು ಅವರ ವರದಿಯನ್ನು ಪಡೆದ ನಂತರ, ವಸ್ತುವು ಬಾಂಬ್ ಅಥವಾ ಪಟಾಕಿಯೇ ಎನ್ನುವುದನ್ನು ಖಚಿತವಾಗಿ ಹೇಳಬಹುದು ಎಂದು ಸರನ್ ಎಸ್ಪಿ ಗೌರವ್ ಮಂಗಳಾ ತಿಳಿಸಿದ್ದಾರೆ. ಇನ್ನು ಪ್ರಕರಣದ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಕೂಲಂಕಷ ತನಿಖೆ ಮಾಡಲು ನಿರ್ಧಾರ ಮಾಡಿದ್ದಾರೆ. ಶುಕ್ರವಾರದ ವೇಳೆ ಬ್ಲಾಸ್ಟ್‌ನಲ್ಲಿ ಗಾಯಗೊಂಡವರು ಇಬ್ಬರು ವ್ಯಕ್ತಿಗಳು ಎಂದು ತಿಳಿಸಲಾಗಿದೆ.  ಎಸ್ಪಿ ಗೌರವ್ ಮಂಗಳಾ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣದ ನಡೆದ ಬಳಿಕ ಸ್ಥಳೀಯ ಜನರು ಸಾಕ್ಷ್ಯವನ್ನು ನಾಶ ಮಾಡಿದ್ದರಿಂದ ಇಲ್ಲಿ ಬ್ಲಾಸ್ಟ್‌ ಆದ ವಸ್ತು ಯಾವುದು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

ಮದರಸಾದಲ್ಲಿ ಸ್ಫೋಟದ ನಂತರ, ಎಫ್‌ಎಸ್‌ಎಲ್ ತಂಡ ತನಿಖೆ ಆರಂಭಿಸಿದೆ. ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸ್ಫೋಟದ ಹಿಂದೆ ಬಾಂಬ್ ಇದೆಯೇ ಅಥವಾ ಪಟಾಕಿಯಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಈ ಘಟನೆಯ ನಂತರ ಮದರಸಾದಲ್ಲಿ ಯಾರೂ ಪತ್ತೆಯಾಗಿಲ್ಲ. ಘಟನೆಗೂ ಮುನ್ನ ಮದರಸಾದಲ್ಲಿ 12 ಮಕ್ಕಳು ಓದುತ್ತಿದ್ದರು. ಘಟನೆಯ ನಂತರ ಸ್ಥಳವನ್ನು ತೊಳೆಯಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಯತ್ನ ನಡೆದಿದೆ ಎಂಬ ಆರೋಪಗಳಿವೆ ಎನ್ನಲಾಗಿದೆ. ಸ್ಫೋಟದ ನಂತರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಹಾರದ ಮದರಸಾಗಳು ಭಯೋತ್ಪಾದನೆಯ ಗೂಡು ಎಂಬುದನ್ನು ಚಾಪ್ರಾ ಘಟನೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಬಿಹಾರದ ಮದರಸಾಗಳು ಭಯೋತ್ಪಾದಕರ ತಾಣಗಳಾಗಿವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
R Ashok
ರಾಜಕೀಯ8 mins ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್27 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ31 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್40 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ44 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್51 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ58 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್1 hour ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ1 hour ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ1 hour ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌