Dr Vishnuvardhan: ವಿಷ್ಣು ಪುಣ್ಯಭೂಮಿ; ಬೇಡಿಕೆ ಈಡೇರಿಸುವ ಭರವಸೆ ನೀಡಿದ ಡಿಕೆಶಿ - Vistara News

South Cinema

Dr Vishnuvardhan: ವಿಷ್ಣು ಪುಣ್ಯಭೂಮಿ; ಬೇಡಿಕೆ ಈಡೇರಿಸುವ ಭರವಸೆ ನೀಡಿದ ಡಿಕೆಶಿ

Dr Vishnuvardhan:  ಈ ಹೋರಾಟದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಕ್ರಾಂತಿರಾಜು, ಚಂದ್ರಶೇಖರ ಸ್ವಾಮಿಜಿ ಬಿಜಿಎಸ್, ಪ್ರಕಾಶ್ ಮೂರ್ತಿ, ದಲಿತ ಸಂಘದ ಅಧ್ಯಕ್ಷರು ಸೇರಿದಂತೆ ಅನೇಕ ವಿಷ್ಣು ಸಂಘಟನೆಗಳು ಭಾಗಿಯಾಗಿತ್ತು.

VISTARANEWS.COM


on

Dr Vishnuvardhan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಷ್ಣುವರ್ಧನ್ ಇಹಲೋಕ ತ್ಯಜಿಸಿ 14 ವರ್ಷಗಳು ಕಳೆದಿವೆ. ಡಾ. ವಿಷ್ಣುವರ್ಧನ್​ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್‌ ಸ್ಟುಡಿಯೋ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧ ಹೇರಲಾಗುತ್ತಿದೆ. ಈ ಸಂಬಂಧವಾಗಿ ಇಂದು (ಡಿ.17) ವಿಷ್ಣುವರ್ಧನ್​ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹೋರಾಟದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಕ್ರಾಂತಿರಾಜು, ಚಂದ್ರಶೇಖರ ಸ್ವಾಮಿಜಿ ಬಿಜಿಎಸ್, ಪ್ರಕಾಶ್ ಮೂರ್ತಿ, ದಲಿತ ಸಂಘದ ಅಧ್ಯಕ್ಷರು ಸೇರಿದಂತೆ ಅನೇಕ ವಿಷ್ಣು ಸಂಘಟನೆಗಳು ಭಾಗಿಯಾಗಿತ್ತು.

ನಾರಾಯಣ ಗೌಡ ಈ ಬಗ್ಗೆ ಮಾತನಾಡಿ ʻʻಬೇಡಿಕೆಯನ್ನು ಇಡೇರಿಸುವುದಾಗಿ ಡಿಕೆಶಿ ಅವರು ಭರವಸೆ ಕೊಟ್ಟಿದ್ದಾರೆ .ವಿಷ್ಣುವರ್ಧನ್ ಅವರ ಪುಣ್ಯಭೂಮಿ ಅಲ್ಲೇ ಇರಲಿದೆ. ಯಾರು ನೆಲಸಮ ಮಾಡಲು ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಅಪ್ಪಟ ಕನ್ನಡ ಪ್ರೇಮಿ. ನಾಡು ನುಡಿ ವಿಚಾರ ಬಂದಾಗ ಎದೆಗಾರಿಕೆಯಿಂದ ಮಾತಾಡ್ತಾರೆ ಅಂದರೆ ಅದು ಸಿದ್ದರಾಮಯ್ಯ ಮಾತ್ರ. ಕೋಟಿ ಕೋಟಿ ಕನ್ನಡಿಗರ ಮನಸ್ಸನ್ನು ಸೆಳೆದ ಸಾಹಸ ಸಿಂಹ ‌ವಿಷ್ಣು ವರ್ದನ್ ಅಭಿಮಾನಿಗಳಿಗೆ ನಮಸ್ಕಾರಗಳು. ವೀರಕ ಪುತ್ರ ಶ್ರಿನಿವಾಸ್ ಅವರು ನಿಮ್ಮನ್ನೆಲ್ಲ ಈ ವಿಚಾರವಾಗಿ ಇಲ್ಲಿ ಸೇರಿಸಿದ್ದಾರೆ. ಡಿಕೆ ಶಿವಕುಮರ್ 10ಗುಂಟೆ ಜಾಗ ಕೊಡಿಸುವ ಭರವಸೆ ಕೊಟ್ಟಿದ್ದಾರೆʼʼಎಂದರು.

ಅಭಿಮಾನಿಯೊಬ್ಬರು ಈ ಬಗ್ಗೆ ಮಾತನಾಡಿ ʻʻಕನ್ನಡ ಕಲಾವಿದರು ವಿಷ್ಣುವರ್ಧನ್‌ ಅವರ ಪರವಾಗಿ ಟ್ವೀಟ್ ಮಾಡಿರುವುದು ಖುಷಿ ಇದೆ. ಆದರೂ ಹೋರಾಟದಲ್ಲಿ ಕಲಾವಿದರು ಭಾಗಿಯಾಗಬೇಕು. ದಾದಾ ಅವರ ಪುಣ್ಯಭೂಮಿ ಬಾಲಣ್ಣ ಅವರದ್ದು ಅಲ್ಲಾ. ಸರ್ಕಾರ ಅವರಿಗೆ ನೀಡಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕುʼʼಎಂದರು.

ಇದನ್ನೂ ಓದಿ: Dr Vishnuvardhan: ವಿಷ್ಣು ಸ್ಮಾರಕ ವಿವಾದ; ಹೋರಾಟಕ್ಕೆ ಕಿಚ್ಚನ ಬೆಂಬಲ!

42 ಕ್ಕೂ ಹೆಚ್ಚು ಸಂಘಟನೆಗಳು ಹೋರಾಟದಲ್ಲಿ ಭಾಗಿಯಾಗಿದ್ದವು. ನಟರಾದ ಸುದೀಪ್‌, ಧನಂಜಯ್‌ ಸೇರಿದಂತೆ ಹಲವರ ಬೆಂಬಲ‌ ಕೂಡ ಇದೆ. “ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ”ಎಂದು ಧನಂಜಯ್‌ ಅವರು ಟ್ವೀಟ್‌ ಹಂಚಿಕೊಂಡಿದ್ದಾರೆ.

ಪ್ರತಿಭಟನೆ ಯಾಕೆ?

ಡಾ. ವಿಷ್ಣುವರ್ಧನ್​ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್‌ ಸ್ಟುಡಿಯೋ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧ ಹೇರಲಾಗುತ್ತಿದೆ. ಅಭಿಮಾನ್‌ ಸ್ಟುಡಿಯೋದ ಮಾಲೀಕರಿಂದ ಈ ರೀತಿ ಆಗುತ್ತಿದೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಆಚರಿಸಲು ಹಲವಾರು ತೊಂದರೆಗಳನ್ನು ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದು, ಈ ಸಂಬಂಧವಾಗಿ ಪ್ರತಿಭಟನೆ ಮಾಡಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

Dhruva Sarja: ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು.

VISTARANEWS.COM


on

Dhruva Sarja Entry to Bollywood in brother Role
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ವಾರ್ 2 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ: Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

ಕೆಡಿ ಸಿನಿಮಾ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Actor Darshan: ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Actor Darshan fans against forest officials Construction of Arjuna tomb
Koo

ಬೆಂಗಳೂರು: ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿ ನಿರ್ಮಾಣಕ್ಕೆ ದರ್ಶನ್‌ (Actor Darshan) ಕರೆ ಕೊಟ್ಟಿದ್ದರು. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ನಾಗಾರಾಜ್‌ ವಿಡಿಯೊ ಮಾಡಿ ʻʻನಾನು ನಾಗಾರಾಜ್‌. ದರ್ಶನ್‌ ಅವರ ಸ್ನೇಹಿತ. ದರ್ಶನ್‌ ಪರ ಮಾತನಾಡಲು ಬಂದಿರುವೆ. ದರ್ಶನ್‌ ಅವರು ಹೇಳದೇ ಕೇಳದೇ ಅರ್ಜುನ್‌ ಸಮಾಧಿ ಮಾಡಲು ಹುಡುಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ದರ್ಶನ್‌ ಅವರು ಸಮಾಧಿ ಬಗ್ಗೆ ಟ್ವೀಟ್‌ ಮಾಡಿದ್ದರು. ಅದಾದ ಮೇಲೆ ಸರಕಾರ ಈ ಬಗ್ಗೆ ಯಾವುದೇ ಗಮನ ಹರಿಸಿರಲಿಲ್ಲ. ಇದಾದ ಬಳಿಕ ಅರ್ಜುನ ಮಾವುತ ವಿನು ಅವರು ತಂಡ ಅರಣ್ಯ ಅಧಿಕಾರಿಗಳಿಗೆ ಅರ್ಜುನ ಸಮಾಧಿ ಮಾಡಬೇಕು ಎಂದು ರಿಕ್ವೆಸ್ಟ್‌ ಮಾಡುತ್ತಾರೆ. ಅವಕಾಶ ಕೊಡಿ ಎಂದು ಲೆಟರ್‌ ಕೊಟ್ಟಿದ್ದಾರೆ. ಆಗ ಅನುಮತಿ ಕೂಡ ಕೊಟ್ಟಿದ್ದರು. ಹೀಗಾಗಿ ಅನುಮತಿ ಸಿಕ್ಕಿದ ಬಳಿಕ ದರ್ಶನ್‌ ಅವರು ನನ್ನ ಬಳಿ ಹಣವನ್ನು ಕೊಟ್ಟು ಕಲ್ಲುಗಳನ್ನು ವ್ಯವಸ್ಥೆ ಮಾಡು ಅಂದಾಗ ಕಲ್ಲುಗಳನ್ನು ತಂದೆವು. ನಮ್ಮ ಹುಡುಗರು ಮತ್ತು ವಿನು ತಂಡ ಫಾರೆಸ್ಟ್‌ ಒಳಗಡೆ ಸಮಾಧಿ ಕಟ್ಟಲು ಒಟ್ಟಿಗೆ ಹೋಗುತ್ತಾರೆ. ಸ್ಮಾರಕ ಮಾಡಬೇಕು ಎಂದು ಕೆಲಸ ಶುರು ಮಾಡಿದಾಗ, ಅರಣ್ಯ ಅಧಿಕಾರಿಗಳು ಮಾಡಬೇಡಿ ಎಂದು ತಡೆದಿದ್ದಾರೆ. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ರು. ಹಣವನ್ನೂ ಹಿಂದಿರುಗಿಸೋದಾಗಿ ಹೇಳಿದ್ರು. ಆದರೆ ಇದುವರೆಗೂ ನಮ್ಮ ಖಾತೆಗೆ ಹಣ ಬಂದಿಲ್ಲʼʼ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಸದ್ಯ ದರ್ಶನ್ ಹಾಗೂ ಅರಣ್ಯಾಧಿಕಾರಿಗಳ ಗುದ್ದಾಟ ಮುಂದುವರಿದಿದೆ. “ಮೊದಲು ಅನುಮತಿ ಕೊಟ್ಟು ಬಳಿಕ ನಾವೇ ಮಾಡ್ತೀವಿ ಎನ್ನುತ್ತಿದ್ದಾರೆ.” ಎಂದು ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Dhruva Sarja:  ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ! ಹೆಚ್ಚಾಗಲಿದ್ಯಾ ದರ್ಶನ್‌-ಧ್ರುವ ಸಂಘರ್ಷ?

Dhruva Sarja:  ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ.

VISTARANEWS.COM


on

Dhruva Sarja KD and Darshan devil will clash on box office
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಇನ್ನು ದರ್ಶನ್‌ ಅವರ ಡೆವಿಲ್‌ ಸಿನಿಮಾ ಕ್ರಿಸ್‌ಮಸ್‌ಗೆ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್ 25 ಬುಧವಾರ ಬರುವುದರಿಂದ ಒಂದು ವಾರ ಮುಂಚೆ ಅಥವಾ ಎರಡು ದಿನ ತಡವಾಗಿ ಸಿನಿಮಾ ರಿಲೀಸ್ ಆಗಬಹುದು. ಇನ್ನು ಕೆಡಿ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಒಂದು ವಾರ ಮುಂಚಿತವಾಗಿಯೇ ಸಿನಿಮಾ ರಿಲೀಸ್‌ ಮಾಡಬಹುದು. ಒಂದು ವೇಳೆ ಎರಡೂ ಸಿನಿಮಾಗಳು ಒಟ್ಟಿಗೆ ರಿಲೀಸ್‌ ಆದರೆ ಥಿಯೇಟರ್‌ ಸಮಸ್ಯೆಯಾಗೋದಂತೂ ಖಚಿತ. ಕರ್ನಾಟಕದಲ್ಲಿ 500 ಥಿಯೇಟರ್‌ಗಳು ಇವೆ. ‘ಕೆಡಿ’ ಸಿನಿಮಾಗೆ ನಿರ್ಮಾಣ ಸಂಸ್ಥೆ ಕೆವಿಎನ್ ಸಿಕ್ಕಾಪಟ್ಟೆ ಹಣ ಸುರಿದಿದೆ. ಈ ಕಾರಣಕ್ಕೆ ಕಮ್ಮಿ ಅಂದರೂ 400 ಸ್ಕ್ರೀನ್‌ನಲ್ಲಾದರೂ ರಿಲೀಸ್ ಆಲೇಬೇಕು. ಮಾತ್ರವಲ್ಲ ಪ್ರೇಮ್‌ ಕೂಡ ಹೆಚ್ಚು ಥಿಯೇಟರ್‌ಗಳಲ್ಲಿ ಸಿನಿಮಾ ರಿಲೀಸ್‌ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Dhruva Sarja: ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ ಎಂದಿದ್ದೇಕೆ ಧ್ರುವ ಸರ್ಜಾ?

Dhruva Sarja: ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ? ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

VISTARANEWS.COM


on

Dhruva Sarja Prem say about the theater problem
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಮತ್ತು ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ (KD Movie) ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ?

ಇತ್ತೀಚೆಗೆ ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಗಳಲ್ಲಿ ಬರುತ್ತಿಲ್ಲ ಎಂಬ ದೂರು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ ಫಿಲ್ಮ್‌ ಚೇಂಬರ್​ನವರು ಸಭೆ ನಡೆಸಿ, ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡುವಂತೆ ಒತ್ತಾಯಿಸಲು ನಿರ್ಣಯಿಸಿರುವ ಸುದ್ದಿ ಹರಿದಾಡಿತು. ಈ ಬಗ್ಗೆ ಪ್ರೇಮ್‌ಗೆ ಪ್ರಶ್ನೆ ಎದುರಾದಾಗ ಉತ್ತರಿಸಿದ್ದು ಹೀಗೆ.

ಪ್ರೇಮ್‌ ಮಾತನಾಡಿ ʻʻಇಂದಿನ ದಿನಮಾನದಲ್ಲಿ ಸಿನಿಮಾ ಮಾಡುವ ರೀತಿ ಬೇರೆ ಆಗಿದೆ. ಮುಂಚೆಲ್ಲ ವರ್ಷಕ್ಕೊಂದು ಸಿನಿಮಾಗಳನ್ನು ಮಾಡುತ್ತಿದ್ದರು. ಆಗ ಗ್ರಾಫಿಕ್‌ ಆಗಿರಲಿ, ತಂತ್ರಜ್ಞಾನ ಇರಲಿಲ್ಲ. ಆದರೆ ಈಗ ಕಾಂಪಿಟೇಶನ್‌ ಹೆಚ್ಚಾಗಿದೆ. ಬೇರೆ ಭಾಷೆಗಳಲ್ಲಿ ಕಾಂಪೀಟ್‌ ಮಾಡಲೇಬೇಕಾಗಿದೆ. ಕಾಂಪೀಟ್‌ ಮಾಡಬೇಕು ಎಂದರೆ ಕ್ವಾಲಿಟಿ ತುಂಬ ಮುಖ್ಯ. ಆಗ ಸಮಯ ಬೇಕೆ ಬೇಕು. ದರ್ಶನ್‌, ಧ್ರುವ ಅವರಿಗೆ ಮೂರು ಸಿನಿಮಾ ಮಾಡಿ ಎನ್ನುವುದಕ್ಕೆ ಆಗಲ್ಲ. ಈಗ ಸಿನಿಮಾ ಮಾಡಬೇಕು ಎಂದರೆ ಒಂದು ವರ್ಷ ಬೇಕೆ ಬೇಕು” ಎಂದರು.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಕನ್ನಡ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ

ಇದೇ ವೇಳೆ ಧ್ರುವ ಸರ್ಜಾ ಮಾತನಾಡಿ ʻʻಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್‌ ಅಂತ ಯಾರಿಲ್ಲ. ಸಿನಿಮಾ ಚೆನ್ನಾಗಿದ್ದಾರೆ ಅವರೇ ಸ್ಟಾರ್‌. ಕ್ವಾಲಿಟಿ, ಕಂಟೆಂಟ್‌ ತುಂಬ ಮುಖ್ಯ. ಪ್ರೇಕ್ಷಕರಿಗೆ ಇಷ್ಟ ಆಗಬೇಕು ಎಂದೇ ನಾವು ಕಟೆಂಟ್‌ಗೆ ಆದ್ಯತೆ ಕೊಡುತ್ತಿದ್ದೇವೆʼʼಎಂದರು ಧ್ರುವ ಸರ್ಜಾ. ಧ್ರುವ ಸರ್ಜಾ ಸಿನಿಮಾ ಬಗ್ಗೆ ಮಾತನಾಡಿ ʻʻಮಾರ್ಟಿನ್‌ ಸಿನಿಮಾ ಅಕ್ಟೋಬರ್‌ 11ಕ್ಕೆ ರಿಲೀಸ್‌ ಆದರೆ, ಕೆಡಿ ಸಿನಿಮಾ ಡಿಸೆಂಬರ್‌ನಲ್ಲಿ ರಿಲೀಸ್‌ ಆಗುತ್ತಿದೆ. ಎರಡು ಸಿನಿಮಾಗಳ ಜಾನರ್‌ ಬೇರೆ ಬೇರೆ. ಕೆಡಿ ರೆಟ್ರೋ ಆಗಿದ್ದು, ಮಾರ್ಟಿನ್‌ ಒಳ್ಳೆ ಡ್ರಾಮ್‌ ಮತ್ತು ಕಟೆಂಟ್‌ ಸಿನಿಮಾʼʼಎಂದರು.

ಡಿಸೆಂಬರ್‌ಗೆ ಕೆಡಿ ಸಿನಿಮಾ ರಿಲೀಸ್‌

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading
Advertisement
Prajwal Revanna Case Will SIT team go abroad for arrest Prajwal
ಕ್ರೈಂ3 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Robert Vadra
ದೇಶ3 mins ago

Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

Gautam Gambhir
ಕ್ರೀಡೆ17 mins ago

Gautam Gambhir : ಟ್ರೋಫಿ ಗೆದ್ದ ಸಂಭ್ರಮ; ಗಂಭೀರ್​ಗೆ ಖಾಲಿ ಚೆಕ್​ ಕೊಟ್ಟರೇ ಶಾರುಖ್​ ಖಾನ್​ ?

Netraa Jadhav Out From Serial perform Yakshagana on the special occasion
ಕಿರುತೆರೆ30 mins ago

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Pune Porsche accident
ದೇಶ50 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Chris Gayle
ಕ್ರಿಕೆಟ್50 mins ago

Chris Gayle : ಎಣ್ಣೆ ಹೊಡಿತಾ ಕೆಕೆಆರ್ ತಂಡಕ್ಕೆ ಶುಭಾಶಯ ತಿಳಿಸಿದ ಕ್ರಿಸ್​ ಗೇಲ್; ಇಲ್ಲಿದೆ ವಿಡಿಯೊ

Comedy Khiladigalu anchor anushree and Jaggesh Remembers Dogs
ಕಿರುತೆರೆ59 mins ago

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

kalaburagi illegal relationship
ಕ್ರೈಂ1 hour ago

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

Ranbir Kapoor and Alia Bhatt flew to Italy
ಬಾಲಿವುಡ್2 hours ago

Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು18 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌