Manual Scavenging: ಯಲವಳ್ಳಿ ಮೊರಾರ್ಜಿ ವಸತಿ ಶಾಲೆ ಲಾಕರ್‌ ಒಡೆದ ಅಧಿಕಾರಿಗಳು! - Vistara News

ಕರ್ನಾಟಕ

Manual Scavenging: ಯಲವಳ್ಳಿ ಮೊರಾರ್ಜಿ ವಸತಿ ಶಾಲೆ ಲಾಕರ್‌ ಒಡೆದ ಅಧಿಕಾರಿಗಳು!

Manual Scavenging: ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಹಾಗೂ ನೂತನ ಪ್ರಾಂಶುಪಾಲ ರಘು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ದಾಖಲೆಗಳನ್ನು ಪರಿಶೀಲನೆ ಮಾಡಲು ಮುಂದಾಗಲಾಗಿದೆ. ಆದರೆ, ದಾಖಲೆಗಳು ಲಾಕರ್‌ನಲ್ಲಿ ಇತ್ತು. ಪ್ರಾಂಶುಪಾಲೆ ಭಾರತಮ್ಮ ಬಂಧನವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಲಾಕರ್‌ ಒಡೆದಿದ್ದಾರೆ. ಬಳಿಕ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Yelavalli Morarji Residential School
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ ಬೆಳಕಿಗೆ ಬರುತ್ತಿರುವಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ವಸತಿ ಶಾಲೆಯ ಶೌಚಾಲಯದ ಗುಂಡಿ ಮುಚ್ಚಲು ಯುಜಿಡಿ ಕ್ಲೀನಿಂಗ್‌ ಮಷಿನ್‌ ಅನ್ನು ಕಳುಹಿಸಲಾಗಿದೆ. ಅಲ್ಲದೆ, ಶಾಲೆಗೆ ನೂತನ ಪ್ರಾಂಶುಪಾಲರನ್ನು ನಿಯೋಜನೆ ಮಾಡಲಾಗಿದೆ. ಇನ್ನು ದಾಖಲೆಗಳ ಪರಿಶೀಲನೆಗಾಗಿ ವಸತಿ ಶಾಲೆಯ ಲಾಕರ್ ಅನ್ನು ಅಧಿಕಾರಿಗಳು ಒಡೆದಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಹಾಗೂ ನೂತನ ಪ್ರಾಂಶುಪಾಲ ರಘು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ದಾಖಲೆಗಳನ್ನು ಪರಿಶೀಲನೆ ಮಾಡಲು ಮುಂದಾಗಲಾಗಿದೆ. ಆದರೆ, ದಾಖಲೆಗಳು ಲಾಕರ್‌ನಲ್ಲಿ ಇತ್ತು. ಪ್ರಾಂಶುಪಾಲೆ ಭಾರತಮ್ಮ ಬಂಧನವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಲಾಕರ್‌ ಒಡೆದಿದ್ದಾರೆ. ಬಳಿಕ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Yelavalli Morarji Residential School

ಮಲ ಸ್ವಚ್ಛತೆಗೆ ಮಷಿನ್‌ ತಂದ ಅಧಿಕಾರಿಗಳು

ವಿಷಯ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ವಸತಿ ಶಾಲೆಗೆ ಯುಜಿಡಿ ಕ್ಲೀನಿಂಗ್‌ ಮಷಿನ್‌ ಅನ್ನು ತರಿಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅಧಿಕಾರಿಗಳು, ಸಚಿವರು ಬಂದ ಬಳಿಕ ಪಿಟ್ ಕ್ಲೀನ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ವಸತಿ ಶಾಲೆ ಸಿಬ್ಬಂದಿ ಬದಲಿಗೆ ಸೂಚನೆ

ವಸತಿ ಶಾಲೆಯ ಎಲ್ಲ ಸಿಬ್ಬಂದಿಯನ್ನು ಬದಲಾವಣೆ ಮಾಡಲು ಮುಂದಾಗಲಾಗಿದೆ. ಈ ಸಂಬಂಧ ಕೋಲಾರ ಜಿಲ್ಲಾ ಪಂಚಾಯತ್ ಸಿಇಒ (Kolar Zilla Panchayat CEO) ಪದ್ಮ ಬಸಂತಪ್ಪ ಖಡಕ್ ಸೂಚನೆ ನೀಡಿದ್ದಾರೆ.

ವಸತಿ ಶಾಲೆಯ ಸಿಬ್ಬಂದಿ, ಅಡುಗೆ ಸಹಾಯಕಿಯರು, ಡಿ ಗ್ರೂಪ್ ನೌಕರರು, ಶಿಕ್ಷಕ ವೃಂದದವರು, ನಿಲಯದ ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ಎಲ್ಲರನ್ನೂ ತಕ್ಷಣದಿಂದಲೇ ಬದಲಾಯಿಸಲು ಪದ್ಮ ಬಸಂತಪ್ಪ ಸೂಚನೆ ನೀಡಿದ್ದಾರೆ. ii

ಇದನ್ನೂ ಓದಿ: COVID Subvariant JN.1: ರಾಜ್ಯದಲ್ಲಿ ಕೋವಿಡ್‌ ಹೈ ಅಲರ್ಟ್‌; 60 ವರ್ಷ ದಾಟಿದವರಿಗೆ ಮಾಸ್ಕ್‌ ಕಡ್ಡಾಯ

Manual Scavenging Replacement of all staff of Yalavalli Morarji Residential School CEO notice

ವಸತಿ ನಿಲಯದಲ್ಲಿನ ಮಲ ಎತ್ತುವ ಪದ್ಧತಿ ಹಾಗೂ ಬಾಲಕಿಯರು ಬಟ್ಟೆ ಬದಲಿಸುವುದನ್ನು ಚಿತ್ರೀಕರಣ ಮಾಡಿರುವ ಕುರಿತು ತನಿಖೆ ಮುಂದುವರಿದಿದೆ. ಯಾರು ತಪ್ಪಿತಸ್ಥರೋ ಅವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪದ್ಮ ಬಸಂತಪ್ಪ ಹೇಳಿದ್ದಾರೆ.

ಚಿತ್ರಕಲಾ ಶಿಕ್ಷಕನ ಬಂಧನ ಖಂಡಿಸಿ ಮಕ್ಕಳ ಪ್ರತಿಭಟನೆ

ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕರೊಬ್ಬರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ವಸತಿ ಶಾಲೆ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ.

Kolara residential school and Chalavadi narayanaswamy visit

ಬೆಳಗ್ಗೆ 5 ಗಂಟೆಯಿಂದಲೇ ಪ್ರತಿಭಟನೆ ಮಾಡಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಚಿತ್ರಕಲಾ ಶಿಕ್ಷಕ‌ ಮುನಿಯಪ್ಪ ಬಂಧನಕ್ಕೆ ಖಂಡನೆ ವ್ಯಕ್ತವಾಗಿದೆ. ಅವರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಮಕ್ಕಳು ಆಗ್ರಹಿಸಿದ್ದಾರೆ. ಊಟ ತಿಂಡಿ ಬಿಟ್ಟು ಮಕ್ಕಳು ಪ್ರತಿಭಟಿಸಿದ್ದಾರೆ.

ಈ ವೇಳೆ ವಸತಿ ನಿಲಯಕ್ಕೆ ಸಂಬಂಧಪಟ್ಟಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಕೇಂದ್ರ ಸಚಿವ ನಾರಾಯಣಸ್ವಾಮಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಘೇರಾವ್ ಹಾಕಿದ್ದಾರೆ. ಶಿಕ್ಷಕರ ವಿರುದ್ಧ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಆಕ್ರೋಶವನ್ನು ಹೊರಹಾಕಿದ್ದರೆ. ಸಚಿವರ ಭರವಸೆ ಬಳಿಕ ಪ್ರತಿಭಟನೆಯನ್ನು ವಾಪಸ್‌ ಪಡೆದುಕೊಂಡರು.

Kolara residential school and Chalavadi narayanaswamy visit

ವಸತಿ ಶಾಲೆಗೆ ಭೇಟಿ ನೀಡಿದ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಭೇಟಿ, ಖಂಡನೆ

ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣವನ್ನು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಖಂಡಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿಯನ್ನು ಪಡೆದುಕೊಂಡರು. ಶಾಲಾ ಮಕ್ಕಳ ಕೈಯಲ್ಲಿ ಅಮಾನವೀಯ ಕೃತ್ಯ ನಡೆಸಿರುವುದು ಖಂಡನಾರ್ಹ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Kolara residential school and Chalavadi narayanaswamy visit

ಇಲ್ಲಿನ ಮಕ್ಕಳು ಪ್ರಕರಣದಿಂದ ಗಾಬರಿಯಲ್ಲಿದ್ದಾರೆ. ಮಕ್ಕಳನ್ನು ಮಲದ ಗುಂಡಿಯಲ್ಲಿ‌ ಇಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನ. ಡಿ. 1ರಂದು ಆಗಿರುವ ಘಟನೆ ಇದಾಗಿದೆ. ಜಿಲ್ಲಾಡಳಿತ ಇದರ‌ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದು ನಿಜಕ್ಕೂ ಸರಿಯಲ್ಲ. ಮಕ್ಕಳ‌ ಬಟ್ಟೆ ಬದಲಾವಣೆಯ ವಿಡಿಯೊ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ನ್ಯಾಯಾಧೀಶರು ವಸತಿ ಇಲಾಖೆಗೆ ಭೇಟಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ. ಎಲ್ಲ ವಸತಿ‌ ಶಾಲೆಗಳಿಗೆ ಎಚ್ಚರಿಕೆ ಗಂಟೆಯಾಗಿದೆ. ಕೇಸು ಹಾಕಿದರೆ, ಪ್ರಕರಣ ದಾಖಲು ಮಾಡಿದರೆ ಎಲ್ಲವೂ ಬದಲಾವಣೆಯಾಗುವುದಿಲ್ಲ. ಸರ್ಕಾರ ಇದರ ಜವಾಬ್ದಾರಿ‌ ಹೊರಬೇಕಾಗಿದೆ. ರಾಜ್ಯದ ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗಳ‌ ಕೊರತೆ ಬಗ್ಗೆ ಎಸ್‌ಐಟಿ ತನಿಖೆಯಾಗಬೇಕು. ವಸತಿ‌ ಶಾಲೆಗಳಲ್ಲಿ ನಡೆಯುತ್ತಿರುವ ಶೋಷಣೆ ಕುರಿತು ತನಿಖೆಯಾಗಬೇಕು. ಉನ್ನತ ಮಟ್ಟದ ತನಿಖೆಯಾಗಬೇಕು. ಈ ಪ್ರಕರಣ ಸರ್ಕಾರಕ್ಕೆ ಗೌರವ ತರುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ ಅವರ ಮೇಲೆ ಕ್ರಮ‌ ಕೈಗೊಳ್ಳಬೇಕು ಎಂದು ಹೇಳಿದರು. ಕೋಲಾರ ಸಂಸದ, ಮುನಿಸ್ವಾಮಿ ಇದ್ದರು.

ಅಧ್ಯಯನಕ್ಕೆ ರಾಜ್ಯ ಸಮಿತಿ ರಚಿಸಿದ ಬಿಜೆಪಿ

ಮಾಲೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣಕ್ಕೆ ಸಂಬಂಧೊಟ್ಟಂತೆ ಅಧ್ಯಯನ ನಡೆಸಲು ರಾಜ್ಯ ಸಮಿತಿಯೊಂದನ್ನು ಬಿಜೆಪಿ ರಚಿಸಿದೆ. ಈ ಸಮಿತಿಯು ವಸತಿ ಶಾಲೆಗೆ ಭೇಟಿ ನೀಡಿ ವಾಸ್ತವಾಂಶದ ವರದಿ ನೀಡಲು ಸೂಚನೆ ನೀಡಲಾಗಿದೆ. ಸಮಿತಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಚಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ , ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ್ ಇದ್ದಾರೆ.

ಏನಿದು ಪ್ರಕರಣ?

Toilet Pit cleaning in Morarji Desai Residential School

ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಪೋಷಕರು ಬೇಸರ ವ್ಯಕ್ತಪಡಿಸಿ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಈ ಕುರಿತ ವಿಡಿಯೊ ಹಾಗೂ ಫೊಟೊಗಳು ಎಲ್ಲೆಡೆ ಹರಿದಾಡಿದ್ದರಿಂದ ವಿರೋಧ ವ್ಯಕ್ತವಾಗಿತ್ತು. ನಂತರ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಿದ್ದರು.

ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಯು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದರು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಇದೇ ರೀತಿಯಲ್ಲಿ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವಿದೆ.

ಇದನ್ನೂ ಓದಿ | School Teacher : ಸ್ವಚ್ಛತೆ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಶಿಕ್ಷಕರು!

ಇದಲ್ಲದೆ, ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಕೊಡಲಾಗುತ್ತಿದೆ ಎಂದು ದೂರಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದು, ಅವರಿಗೆ ಶಿಕ್ಷೆ ನೀಡುವುದನ್ನು ತಪ್ಪಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಪ್ರಾಂಶುಪಾಲೆ, ಶಿಕ್ಷಕನ ಬಂಧನ

ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heavy Rain: ತಮಿಳುನಾಡಿನಲ್ಲಿ ಭಾರೀ ಮಳೆ; 4 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ, ರೈಲುಗಳ ಸಂಚಾರ ರದ್ದು

ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಭಾರತಮ್ಮ ಹಾಗೂ ಚಿತ್ರಕಲೆ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿತರು. ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದ್ಯ ಇಬ್ಬರನ್ನು ಮಾಸ್ತಿ ಠಾಣೆ ಬಂಧಿಸಲಾಗಿದೆ. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಹಾಗೂ ಸಹ ಶಿಕ್ಷಕ ಅಭಿಷೇಕ್ ಮೇಲೆ ಕೂಡ ಎಫ್‌ಐಆರ್ ದಾಖಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

R Ashok: ಎನ್‌ಡಿಎನಲ್ಲಿ ಯಾವುದೇ ಒಡಕಿಲ್ಲ. ಇಂಡಿಯಾ ಒಕ್ಕೂಟದಿಂದ ಕೆಲವರು ಎನ್‌ಡಿಎಗೆ ಬರುವ ಸಾಧ್ಯತೆಯಿದೆ. ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸಹೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

BJP celebration about lok sabha election results
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ. ಈ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೆ ಗ್ಯಾರಂಟಿ ನೀಡಿ, ಅವರ ಗಂಡಂದಿರಿಗೆ ಟ್ಯಾಕ್ಸ್‌ ಹಾಕಿದ್ದಾರೆ. ಕಾಂಗ್ರೆಸ್‌ಗೆ ಮಾನ ಮರ್ಯಾದೆ ಹೋಗಿದೆ. ಮುಸ್ಲಿಂ ತುಷ್ಟೀಕರಣ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್‌ಗೆ ಹೀಗಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಮತಗಳ ಅಂತರದ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಿಹಿ ತಿನ್ನಿಸಿ, ಅಭಿನಂದಿಸಿದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಸೇರಿ ಎನ್‌ಡಿಎಗೆ 51.66% ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ಗೆ 45.43% ಬಂದಿದೆ. ಅಂದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಎರಡಂಕಿ ದಾಟುತ್ತೇವೆ ಎಂದು ಅವರು ಹೇಳುತ್ತಲೇ ಇದ್ದರು. ಆದರೆ ಅವರು ವಿಫಲರಾಗಿದ್ದಾರೆ ಎಂದರು.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಕಾಂಗ್ರೆಸ್‌ ಈ ಬಾರಿ ದೇಶದಲ್ಲಿ 21.56% ಮತ ಪಡೆದಿದೆ. ಬಿಜೆಪಿಗೆ ಕಳೆದ ಬಾರಿ 35% ಇದ್ದು, ಈ ಬಾರಿ 36.8% ಮತ ಗಳಿಕೆಯಾಗಿದೆ. ಕಾಂಗ್ರೆಸ್‌ ಮೂರಂಕಿಗೆ ಹೋಗಲೇ ಇಲ್ಲ. 18-20 ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದು, ಆ ಹೇಳಿಕೆ ತಲೆ ಕೆಳಗಾಗಿದೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ 1.39 ಲಕ್ಷ ಅಂತರ ಬಂದಿದ್ದು, ಮುಖ್ಯಮಂತ್ರಿ ಫೇಲ್‌ ಆಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ರಾಜಕೀಯಕ್ಕೆ ಮೊದಲ ಬಾರಿಗೆ ಬಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ 2.69 ಲಕ್ಷ ಅಂತರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 206 ಸ್ಥಾನಗಳನ್ನು ಗಳಿಸಿತ್ತು. ಅದು ಕೂಡ ಸರಳ ಬಹುಮತ ಅಲ್ಲ. ಅಷ್ಟೇ ಅಲ್ಲ ಈಗ ಬಿಜೆಪಿ ಗಳಿಸಿದ್ದಷ್ಟೂ ಅಲ್ಲ. 2014 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಸ್ಥಾನ ಗಳಿಸಿತ್ತು. ಕೇವಲ ಐದು ವರ್ಷದ ದುರಾಡಳಿತದಿಂದಾಗಿ 160 ಸ್ಥಾನಗಳನ್ನು ಕಳೆದುಕೊಂಡಿತ್ತು. 2019 ರಲ್ಲಿ ಬಿಜೆಪಿ 303 ಸ್ಥಾನ ಪಡೆದಿದ್ದು, 2024 ರಲ್ಲಿ 239 ಸ್ಥಾನ ಪಡೆದು, 64 ಸ್ಥಾನ ಮಾತ್ರ ಮೈನಸ್ ಆಗಿದೆ.

2019 ರಲ್ಲಿ ಕಾಂಗ್ರೆಸ್ 52 ಸ್ಥಾನ ಪಡೆದಿದ್ದು, 2024 ರಲ್ಲಿ 99 ಸ್ಥಾನ ಪಡೆದು, 47 ಸ್ಥಾನ ಹೆಚ್ಚಿಸಿಕೊಂಡಿದೆ. ಈಗ ಇಂಡಿಯಾ ಕೂಟದಿಂದಾಗಿ ಕಾಂಗ್ರೆಸ್‌ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಕಾಂಗ್ರೆಸ್‌ಗೆ ಸಿಕ್ಕಿರುವುದು 99 ಸ್ಥಾನ ಮಾತ್ರ. ಇಂಡಿಯಾ ಒಕ್ಕೂಟಕ್ಕೆ ಸಿಕ್ಕಿರುವುದು 232 ಸ್ಥಾನಗಳು. ಬಿಜೆಪಿಗೆ 239 ಸ್ಥಾನಗಳಿವೆ. ಅಂದರೆ ಒಟ್ಟು ಇಂಡಿಯಾ ಕೂಟ ಪಡೆದ ಸ್ಥಾನಗಳು ಬಿಜೆಪಿಗಿಂತಲೂ ಕಡಿಮೆ ಇದೆ ಎಂದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 80 ಸೀಟು ಪಡೆದಿತ್ತು. ಬಿಜೆಪಿ 104 ಪಡೆದು ದೊಡ್ಡ ಪಕ್ಷವಾಗಿತ್ತು. ಆದರೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದಾಗ ಸಿದ್ದರಾಮಯ್ಯ ಕೈ ಕಟ್ಟಿಕೊಂಡು ಕೂತಿದ್ದರು. ಆಗ ನೈತಿಕತೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಕಾಂಗ್ರೆಸ್‌ ಸಚಿವರ ಮಕ್ಕಳು ಸೋತಿರುವುದು ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಜನರು ತೋರಿರುವ ವಿರೋಧ ಎಂದ ಅವರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

TA Sharavana: ರಾಜ್ಯ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

VISTARANEWS.COM


on

MLC TA Sharavana latest statement about lok sabha election results 2024
Koo

ಬೆಂಗಳೂರು: ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ (TA Sharavana) ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಜೆಡಿಎಸ್‌ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್‌ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Assault Case: ಬೆಳ್ತಂಗಡಿ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಸುರಪುರ ಉಪಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆದಿದೆ.

VISTARANEWS.COM


on

Assault Case
Koo

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತ ತಲ್ವಾರ್‌ನಿಂದ ದಾಳಿ ನಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಅಭ್ಯರ್ಥಿ ಬ್ರಿಜೇಶ್‌ ಚೌಟ ಗೆಲುವು ಸಾಧಿಸಿದ್ದಕ್ಕೆ ಕಾರ್ಯಕರ್ತ ರಾಜೇಶ್ ಪಟಾಕಿ ಸಿಡಿಸಿದ್ದರು. ಆರೋಪಿ ಕುಶಲಪ್ಪ‌ ಮನೆ ಮುಂದೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ.

ಪರಾಜಿತ ಅಭ್ಯರ್ಥಿ ಅಳಿಯನ ಕಾರಿನ ಮೇಲೆ ಕಲ್ಲು ತೂರಾಟ

ಯಾದಗಿರಿ: ಸುರಪುರ ಉಪಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಂಗಳವಾರ ಘಟನೆ ನಡೆದಿದೆ.

ಇದನ್ನೂ ಓದಿ | Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯ ಶಂಕರ್ ನಾಯಕ ಹಲ್ಲೆಗೊಳಗಾದವರು. ದಾಳಿ ವೇಳೆ ರಾಜುಗೌಡ ಅಳಿಯ ಹಾಗೂ ಬಿಜೆಪಿಯ ಇಬ್ಬರು ಕಾರ್ಯಕರ್ತರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕಾರಿನ ಹಿಂಭಾಗದ ಗ್ಲಾಸ್‌ಗೆ ಕಲ್ಲು ಬಿದ್ದಿದ್ದು, ಅದೃಷ್ಟವಶಾತ್ ಕಾರ್‌ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading

ಕರ್ನಾಟಕ

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Karnataka Election Results 2024: ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೂರನೇ ಬಾರಿ ಸರ್ಕಾರ ರಚನೆಯಾಗುತ್ತೆ. ನಾಳೆ ಎನ್‌ಡಿಎ ಮೈತ್ರಿ ಪಕ್ಷಗಳ ಸಭೆ ಕರೆದಿದ್ದಾರೆ. ನಾನು ಕೂಡ ದೆಹಲಿಗೆ ಹೋಗುವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ಇವತ್ತಿನ ಫಲಿತಾಂಶದ (Karnataka Election Results 2024) ಆಧಾರದ ಮೇಲೆ ಸ್ವಾರ್ಥದ ರಾಜಕಾರಣ ಮಾಡಬಾರದು ಎಂಬುವುದು ತಿಳಿಯುತ್ತದೆ. ಹಾಸನದಲ್ಲಿ ಗೆದ್ದಿರುವುದು ಕಾಂಗ್ರೆಸ್‌ನ ಗೆಲುವಲ್ಲ. ಹಾಸನದಲ್ಲಿ ದೇವೇಗೌಡರ ಫ್ಯಾಮಿಲಿ ಯಾವತ್ತೂ ದಬ್ಬಾಳಿಕೆ ಮಾಡಿಲ್ಲ. ಕೆಲವು ವ್ಯಕ್ತಿಗಳ ನಡವಳಿಕೆಯಿಂದ ಸೋಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ದರೆ ಕಾಂಗ್ರೆಸ್‌ ಅಧಿಕಾರಕ್ಕೇ ಬರುತ್ತಿರಲಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ಮೋದಿಯವರ ನೇತೃತ್ವದಲ್ಲಿ ಮೂರನೇ ಬಾರಿ ಸರ್ಕಾರ ರಚನೆಯಾಗುತ್ತೆ. ನಾಳೆ ಎನ್‌ಡಿಎ ಮೈತ್ರಿ ಪಕ್ಷಗಳ ಸಭೆ ಕರೆದಿದ್ದಾರೆ. ನಾನು ಹೋಗುತ್ತೇನೆ. ನನ್ನ ನಿರೀಕ್ಷೆ ಇದ್ದಿದ್ದು ಎನ್‌ಡಿಎಗೆ 25 ಸ್ಥಾನ. ಕಾಂಗ್ರೆಸ್‌ಗೆ 4-5 ಸ್ಥಾನ ಬರುತ್ತೆ ಅಂದುಕೊಂಡಿದ್ದೆ. ನಮ್ಮ ಕೆಲವು ಸಮಸ್ಯೆಗಳಿಂದ ಅವರು ಗೆದ್ದಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ರೀತಿ ಆಡಳಿತ ನಡೆಸುತ್ತಾರೋ ಕಾದು ನೋಡೋಣ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳನ್ನು ಜನ ಒಪ್ಪಿಲ್ಲ. ಒಂದು ವರ್ಷ ಇದೇ ರೀತಿ ಆಡಳಿತ ಮುಂದುವರಿಸಿದರೆ ಕಾಂಗ್ರೆಸ್ ಧೂಳಿಪಟವಾಗುತ್ತದೆ. ಜನರ ಮನಸ್ಸಿನಿಂದ ಕಾಂಗ್ರೆಸ್ ದೂರ ಆಗುತ್ತೆ. ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ಎನ್‌ಡಿಎ ಮೈತ್ರಿ ಅಭ್ಯರ್ಥಿಯೇ ಇರುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ | Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

ಸಿಎಂ ಸಿದ್ದರಾಮಯ್ಯರ ರಿಪಬ್ಲಿಕ್ ಆಫ್ ಹಾಸನ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ರಿಪಬ್ಲಿಕ್ ಆಫ್ ಗ್ರಾಮಾಂತರ ರಿಸಲ್ಟ್ ನೋಡಲಿ. ಕಾಂಗ್ರೆಸ್‌ನವರು ತಂತ್ರ-ಕುತಂತ್ರ ಅನ್ನೋಕೆ ಆಗಲ್ಲ. ಗ್ರಾಮಾಂತರದಲ್ಲಿ ಮಂಜುನಾಥ್ ಅವರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Continue Reading
Advertisement
Anna Lezhneva
ರಾಜಕೀಯ3 hours ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ3 hours ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ3 hours ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ3 hours ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ3 hours ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ3 hours ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ4 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ4 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ4 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20244 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ18 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌