IPL 2024 : ಐಪಿಎಲ್​ ಹರಾಜಿಗೆ ಒಂದು ದಿನ ಮೊದಲು 2008ರ ಪಟ್ಟಿ ವೈರಲ್​! ಧೋನಿಯದ್ದೇ ಮಾತು - Vistara News

ಕ್ರಿಕೆಟ್

IPL 2024 : ಐಪಿಎಲ್​ ಹರಾಜಿಗೆ ಒಂದು ದಿನ ಮೊದಲು 2008ರ ಪಟ್ಟಿ ವೈರಲ್​! ಧೋನಿಯದ್ದೇ ಮಾತು

IPL 2024 : ಉದ್ಘಾಟನಾ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಎಂಎಸ್ ಧೋನಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ಐಕಾನ್ ಆಟಗಾರನಾಗಿ 1.5 ಮಿಲಿಯನ್ ಡಾಲರ್​ಗೆ ಖರೀದಿ ಮಾಡಿತ್ತು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ಅನ್ನು ಕಡಿಮೆ ಅವಧಿಯಲ್ಲಿ ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ದದರು. ಇದೇ ವೇಳೆ ಅವರು ಚೆನ್ನೈನ ನೆಚ್ಚಿನ ಮಗನಾದರು. ಅದಕ್ಕೂ ಅವರಿಗೆ ಹೆಚ್ಚು ದಿನಗಳ ಬೇಕಾಗಲಿಲ್ಲ. ಹಲವು ವರ್ಷಗಳಿಂದ, ವಿಕೆಟ್ ಕೀಪರ್-ಬ್ಯಾಟರ್​ ತಮ್ಮ ನಾಯಕತ್ವದಲ್ಲಿ ದಾಖಲೆಯ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದು ಇಡೀ ಕ್ರಿಕೆಟ್​ ಕ್ಷೇತ್ರಕ್ಕೆ ಸ್ಫೂರ್ತಿ ಎನಿಸಿಕೊಂಡಿದ್ದಾರೆ.

ಇದೀಗ ಐಪಿಎಲ್ 2024ನೇ ಆವೃತ್ತಿಗೆ ಹರಾಜು ನಡೆಯಲಿದೆ. ಡಿಸೆಂಬರ್​ 19ರಂದು ಹರಾಜು ನಡೆಯಲಿದ್ದು, ಯಾವ ಆಟಗಾರರು ಎಷ್ಟು ಮೊತ್ತ ಪಡೆಯುತ್ತಾರೆ ಎಂಬ ಕೌತುಕ ಸೃಷ್ಟಿಯಾಗಿದೆ. ಇವೆಲ್ಲದರ ನಡುವೆ 2008ರಲ್ಲಿ ಐಪಿಎಲ್ ಹರಾಜಿನ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಈ ವೇಳೆ ಧೋನಿ ಎಷ್ಟು ಸಂಭಾವನೆ ಪಡೆದುಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಧೋನಿಯನ್ನು 2008 ರಲ್ಲಿ ಸಿಎಸ್​ಕೆ 1.5 ಮಿಲಿಯನ್ ಡಾಲರ್​ಗೆ ಖರೀದಿಸಿತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡ. ಇದು ಉದ್ಘಾಟನಾ ಐಪಿಎಲ್ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡವು 15 ವರ್ಷಗಳಲ್ಲಿ ಅತ್ಯುತ್ತಮ ತಂಡ ಎಂಬುದು ಸಾಬೀತಾಗಿದೆ.

2008 ರಲ್ಲಿ ಹರಾಜು ನಡೆಸಿದ ರಿಚರ್ಡ್ ಮ್ಯಾಡ್ಲೆ ಅವರು “ಮೊದಲ ಹರಾಜು ಶೀಟ್” ಚಿತ್ರವನ್ನು ಹಂಚಿಕೊಂಡಿದ್ದರು. ಶೇನ್ ವಾರ್ನ್, ಶೋಯೆಬ್ ಅಖ್ತರ್, ಆಡಮ್ ಗಿಲ್ಕ್ರಿಸ್ಟ್, ಮುತ್ತಯ್ಯ ಮುರಳೀಧರನ್ ಮತ್ತು ಮಹೇಲಾ ಜಯವರ್ಧನೆ ಅವರಂತಹ ಇತರ ಸ್ಟಾರ್ ಆಟಗಾರರೊಂದಿಗೆ ಧೋನಿ ಖರೀದಿಯ ವಿವರಗಳನ್ನು ಆ ಹಾಳೆಯ ಮೇಲೆ ಬರೆಯಲಾಗಿತ್ತು.

ಮುಂಬೈ ತಂಡವನ್ನು ಖರೀದಿಸಿದ ಅಮಿತಾಭ್​ ಬಚ್ಚನ್​

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಮುಂಬೈ ತಂಡದ ಮಾಲೀಕರಾಗಿ ಅಧಿಕೃತವಾಗಿ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ISPL ) ಗೆ ಸೇರ್ಪಡೆಗೊಂಡಿದ್ದಾರೆ. ಹೊಸ ದಿನ ಮತ್ತು ಹೊಸ ಉದ್ಯಮ, ತಂಡದ ಮಾಲೀಕನಾಗಿ ಮುಂಬೈನೊಂದಿಗೆ ಇರುವುದು ನನಗೆ ಗೌರವ ಮತ್ತು ಅಭಿಮಾನ ಎಂದು 81 ವರ್ಷದ ನಟ ತಮ್ಮ ಎಕ್ಸ್ (ಹಿಂದೆ ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ಟೆನಿಸ್ ಬಾಲ್ ಕ್ರಿಕೆಟ್​ ಲೀಗ್ ಆಗಿದ್ದು, ಮೊಟ್ಟ ಮೊದಲ ಬಾರಿಗೆ ಲೀಗ್​ ರೂಪದಲ್ಲಿ ನಡೆಯಲಿದೆ. ಸ್ಟಾರ್ ನಟರ ಮಾಲೀಕತ್ವ ಸೇರಿದಂತೆ ವಿಭಿನ್ನ ಗುರಿಯೊಂದಿಗೆ ಈ ಟೂರ್ನಿ ನಡೆಯಲಿದೆ.

ಇದನ್ನೂ ಓದಿ : IPL 2024 : ಮಾರ್ಚ್​ 22ರಂದು ಐಪಿಎಲ್​ ಶುರು, ಎಲ್ಲಿ ತನಕ ಟೂರ್ನಿ?

ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್, ಭಾರತದ ಮಾಜಿ ಕ್ರಿಕೆಟ್ ಕೋಚ್ ರವಿ ಶಾಸ್ತ್ರಿ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮಲ್ ಕಾಳೆ ಅವರ ಪರಿಕಲ್ಪನೆಯ ಐಎಸ್​​ಪಿಎಲ್ ಭಾರತದಲ್ಲಿ ನಡೆಯಲಿರುವ ವಿಶೇಷ ಟೆನಿಸ್ ಬಾಲ್ ಟಿ-ಟೆನ್ ಕ್ರಿಕೆಟ್ ಸ್ವರೂಪವಾಗಿದೆ.. ಈ ಆವಿಷ್ಕಾರವು ದೇಶದಲ್ಲಿ ಮೊದಲ ಟಿ10 ಮಾದರಿಯ ಕ್ರಿಕೆಟ್​ ಲೀಗ್ ಎನಿಸಿಕೊಂಡಿದೆ.

ಟೂರ್ನಿಯಲ್ಲಿ ಮುಂಬೈ, ಹೈದರಾಬಾದ್, ಬೆಂಗಳೂರು, ಚೆನ್ನೈ, ಕೋಲ್ಕತಾ ಮತ್ತು ಶ್ರೀನಗರ ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳು ಭಾಗವಹಿಸಲಿವೆ. ಏಳು ದಿನಗಳ ಕಾಲ ನಡೆಯಲಿರುವ ಐಎಸ್​ಪಿಎಲ್​ ಮಾರ್ಚ್ 2, 2024ರಂದು ಪ್ರಾರಂಭವಾಗಿ ಮಾರ್ಚ್ 9 ರಂದು ಕೊನೆಗೊಳ್ಳಲಿದ್ದು, ಎಲ್ಲಾ 19 ಪಂದ್ಯಗಳು ಮುಂಬೈನಲ್ಲಿ ನಡೆಯಲಿವೆ.

ತಂಡದ ಮಾಲೀಕತ್ವದ ಸಾಲಿನಲ್ಲಿ ಡಿಸೆಂಬರ್ 13 ರಂದು ಶ್ರೀನಗರ ತಂಡವನ್ನು ಖರೀದಿಸಿದ ಅಕ್ಷಯ್ ಕುಮಾರ್ ಮತ್ತು ಡಿಸೆಂಬರ್ 18 ರಂದು ಬೆಂಗಳೂರು ತಂಡದ ಮಾಲೀಕತ್ವವನ್ನು ವಹಿಸಿಕೊಂಡ ಹೃತಿಕ್ ರೋಷನ್ ಅವರೂ ಸೇರಿಕೊಂಡಿದ್ದಾರೆ. ಈಗ, ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್ ಮುಂಬೈ ತಂಡದ ಮಾಲೀಕತ್ವವನ್ನು ತೆಗೆದುಕೊಳ್ಳುವ ಮೂಲಕ ಲೀಗ್​ಗೆ ಪ್ರವೇಶಿಸಿದ್ದಾರೆ. ಈ ಬೆಳವಣಿಗೆಯು ಹೊಸ ಹತ್ತು ಓವರ್​ಗಳ ಟೂರ್ನಿಯಲ್ಲಿನ ಸ್ಟಾರ್ ಮಾಲೀಕತ್ವದ ಪಟ್ಟಿಗೆಯನ್ನು ಹಿಗ್ಗಿಸಿದೆ. ಟೆನ್ನಿಸ್ ಬಾಲ್ ಕ್ರಿಕೆಟ್ ಅನ್ನು ಭಾರತೀಯ ಕ್ರಿಕೆಟ್​ನಲ್ಲಿ ಅಗ್ರ ಸ್ಥಾನಕ್ಕೇರಿಸುವ ಗುರಿಯನ್ನು ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ ಎಂದು ರೋಹಿತ್​ ಈ ಪಿಚ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಐರ್ಲೆಂಡ್​(India vs Ireland) ವಿರುದ್ಧ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರಿಗೆ(T20 World Cup 2024) ಅಪಾಯಕಾರಿ ನಸೌ ಪಿಚ್​ ಬಗ್ಗೆ ಭೀತಿ ಕಾಡಿದೆ. ಈಗಾಗಲೇ ಈ ಪಿಚ್​ ಬಗ್ಗೆ ಹಲವುರು ಅಸಮಾಧಾನ ಹೊರಹಾಕಿದ್ದರು. ನಿನ್ನೆ(ಬುಧವಾರ) ನಡೆದ ಪಂದ್ಯದಲ್ಲಿ ನಾಯಕ ರೋಹಿತ್(Rohit Sharma) ​ತೋಳಿನ ಮಾಂಸಖಂಡಕ್ಕೆ ಚೆಂಡು ತಗುಲಿ ಅರ್ಧದಲ್ಲೇ ಬ್ಯಾಟಿಂಗ್​ ಮೊಟಕುಗೊಳಿಸಿದ್ದರು. ಸದ್ಯ ಗಾಯದ ಪ್ರಮಾಣ ಸಣ್ಣ ಮಟ್ಟದಿಂದ ಕೂಡಿದ್ದು ಮುಂದಿನ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ರೋಹಿತ್​ ಶರ್ಮ, ಇಲ್ಲಿನ ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ. ಈಗ ಚೇತರಿಸಿಕೊಂಡಿದ್ದೇನೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡದ್ದು ಕೂಡ ಪಿಚ್​ ವರ್ತನೆಯನ್ನು ಅರಿಯುವ ಉದ್ದೇಶದಿಂದ. ಆದರೆ ಈ ಪಿಚ್​ ವರ್ತನೆ ಅರ್ಥೈಸುವುದು ಅಷ್ಟು ಸುಲಭವಾಗಿಲ್ಲ” ಎಂದರು.

‘ಇದು ಹೊಸ ಪಿಚ್ ಆಗಿದ್ದು, ಉತ್ತಮವಾದ ಹುಲ್ಲಿನ ಹೊದಿಕೆ ಇದೆ. ಆದರೆ, ಅದರೊಂದಿಗೆ ದೊಡ್ಡ ಬಿರುಕುಗಳೂ ಇವೆ. ಇದರಿಂದ ಚೆಂಡಿನ ಬೌನ್ಸ್ ಕುಗ್ಗುತ್ತದೆ. ಈ ರೀತಿಯ ಪಿಚ್‌ಗಳಲ್ಲಿ ಅಭ್ಯಾಸ ಪಂದ್ಯಗಳನ್ನು ನಡೆಸಿ ಇದನ್ನು ಸೆಟ್ ಮಾಡಬೇಕು​. ಬಳಿಕ, ದೊಡ್ಡ ಪಂದ್ಯಗಳನ್ನು ಆಯೋಜಿಸಬೇಕು. ಎಲ್ಲ 4 ಪಿಚ್‌ಗಳು ಇದೇ ರೀತಿ ಆಗಿದ್ದು, ಟಿ-20 ಟೂರ್ನಿಗೆ ಯೋಗ್ಯವಲ್ಲ’ ಎಂದು ಕ್ರಿಕೆಟ್​ ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ ಇದಾಗಿದೆ.

ಇದನ್ನೂ ಓದಿ India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

ಪಾಕಿಸ್ತಾನ ಮತ್ತು ಭಾರತ ತಂಡದ ಪರ ಘಾತಕ ಬೌಲರ್​ಗಳು ಇರುವ ಕಾರಣ ಉಭಯ ತಂಡಗಳ ಬ್ಯಾಟರ್​ಗಳಿಗೆ ಇಲ್ಲಿ ಆಡುವುದೇ ಸವಾಲಾಗಿ ಪರಿಣಮಿಸಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಅದರಲ್ಲೂ ಸ್ಟಾರ್​ ಬ್ಯಾಟರ್​ಗಳು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದರೆ ತಂಡಕ್ಕೆ ದೊಡ್ಡ ನಷ್ಟವಾಗಲಿದೆ. ಹೀಗಾಗಿ ಎಲ್ಲ ತಂಡದ ಬ್ಯಾಟರ್​ಗಳು ಕೂಡ ಜಾಗರೂಕರಾಗಿ ಆಡಬೇಕಿದೆ. ಈ ಸ್ಟೇಡಿಯಂ ಅನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಕ್ರಿಕೆಟ್

India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

India vs Ireland: ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್(Best Fielder Award)ಪ್ರಶಸ್ತಿ ಮೊಹಮ್ಮದ್​ ಸಿರಾಜ್​ಗೆ ಲಭಿಸಿದೆ. ಪುಟ್ಟ ಅಭಿಮಾನಿ ಡ್ರೆಸ್ಸಿಂಗ್​ ರೋಮ್​ಗೆ ಬಂದು ಸಿರಾಜ್​ಗೆ(Siraj Wins Best Fielder Award) ಚಿನ್ನದ ಪದಕ ನೀಡಿದ್ದು ವಿಶೇಷವಾಗಿತ್ತು.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಕಳೆದ ವರ್ಷ ನಡೆದಿದ್ದ ಏಕದಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಮ್ಯಾನೆಜ್​ಮೆಂಟ್​ ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬವ ನಿಟ್ಟಿನಲ್ಲಿ, ಪಂದ್ಯವೊಂದರಲ್ಲಿ ಉತ್ತಮ ಫೀಲ್ಡಿಂಗ್(Best Fielder Award) ನಡೆಸಿದರೆ ಆತನನ್ನು ಗುರುತಿಸಿ ಚಿನ್ನದ ಪದಕ ನೀಡುವ ಕಾರ್ಯವನ್ನು ಜಾರಿಗೆ ತಂದಿತ್ತು. ಇದೀಗ ಟಿ20 ವಿಶ್ವಕಪ್​ನಲ್ಲಿಯೂ(T20 World Cup 2024) ಈ ಪ್ರಕ್ರಿಯೆ ಮುಂದುವರಿದಿದೆ. ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ಈ ಪ್ರಶಸ್ತಿ ಮೊಹಮ್ಮದ್​ ಸಿರಾಜ್​ಗೆ ಲಭಿಸಿದೆ. ಪುಟ್ಟ ಅಭಿಮಾನಿ ಡ್ರೆಸ್ಸಿಂಗ್​ ರೋಮ್​ಗೆ ಬಂದು ಸಿರಾಜ್​ಗೆ(Siraj Wins Best Fielder Award) ಚಿನ್ನದ ಪದಕ ನೀಡಿದ್ದು ವಿಶೇಷವಾಗಿತ್ತು. ತಂಡದ ಫೀಲ್ಡಿಂಗ್​ ಕೋಚ್​ ಟಿ.ದಿಲೀಪ್​ ಅವರು ಈ ಪ್ರಶಸ್ತಿ ಘೋಷಣೆ ಮಾಡಿದರು. 


ಐರ್ಲೆಂಡ್​ ಬ್ಯಾಟರ್​ ಡೆಲಾನಿಯನ್ನು ರನೌಟ್ ಮಾಡುವಲ್ಲಿ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಫೀಲ್ಡಿಂಗ್ ಕೋಚ್ ಟಿ ದಿಲೀಪ್, ಸಿರಾಜ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಡೆಲಾನಿ 26 ರನ್​ ಬಾರಿಸಿದರು. ಪಂದ್ಯದ ವೇಳೆ ರಾಷ್ಟ್ರೀಯ ಗೀತೆಯ ಹಾಡುವ ವೇಳೆ ಕಾಣಿಸಿಕೊಂಡಿದ್ದ ಪಂಜಾಬಿ ಬಾಲಕನನ್ನು ಟೀಮ್ ಇಂಡಿಯಾ ಫೀಲ್ಡಿಂಗ್ ಕೋಚ್ ಡ್ರೆಸ್ಸಿಂಗ್ ರೂಮ್​ಗೆ ಆಹ್ವಾನಿಸಿ ಪ್ರಶಸ್ತಿ ಪ್ರಧಾನ ಮಾಡಿಸಿದರು. ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ವಿರಾಟ್​ ಕೊಹ್ಲಿ ಮೊದಲ ಚಿನ್ನದ ಪದಕ ಜಯಿಸಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಮೊದಲ ಚಿನ್ನದ ಪದಕ ಸಿರಾಜ್​ಗೆ ಒಲಿದಿದೆ.

ಇದನ್ನೂ ಓದಿ India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

ಭಾರತಕ್ಕೆ ಗೆಲುವು


ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

Continue Reading

ಕ್ರೀಡೆ

Jasprit Bumrah: ಭುವನೇಶ್ವರ್​ ಕುಮಾರ್​ ವಿಶ್ವ ದಾಖಲೆ ಮುರಿದ ಜಸ್​ಪ್ರೀತ್​ ಬುಮ್ರಾ

Jasprit Bumrah: ಅರ್ಧಶತಕ ಬಾರಿಸುವ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್(1015)​ ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಮೂರನೇ ಹಾಗೂ 2ನೇ ಭಾರತೀಯ ಎನಿಸಿಕೊಂಡರು. ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(1142) ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

Jasprit Bumrah
Koo

ನ್ಯೂಯಾರ್ಕ್: ಐರ್ಲೆಂಡ್​(India vs Ireland) ವಿರುದ್ಧದ ಪಂದ್ಯದಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿ 6 ರನ್​ಗೆ 2 ವಿಕೆಟ್​ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಟೀಮ್​ ಇಂಡಿಯಾದ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ತನ್ನದೇ ದೇಶದ ಬೌಲರ್​ ಭುವನೇಶ್ವರ್​ ಕುಮಾರ್​ ಅವರ ದಾಖಲೆಯನ್ನೊಂದನ್ನು ಮುರಿದಿದ್ದಾರೆ.

ಐರ್ಲೆಂಡ್ ಎದುರು ನಾಲ್ಕು ಓವರ್​ ಬೌಲಿಂಗ್​ ನಡೆಸಿದ ಬುಮ್ರಾ ಕೇವಲ 6 ರನ್ ನೀಡಿ 2 ವಿಕೆಟ್​ ಪಡೆದರು. ಒಂದು ಓವರ್​ ಮೇಡನ್​ ಆಯಿತು. ಈ ಮೇಡನ್​ ಓವರ್​ ಮೂಲಕ ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ 11ನೇ ಮೇಡನ್ ಓವರ್ ದಾಖಲಿಸಿದರು. ಇದರೊಂದಿಗೆ ಟೆಸ್ಟ್ ಆಡುವ ರಾಷ್ಟ್ರದ ಬೌಲರ್‌ಗಳ ಪೈಕಿ ಅತಿ ಹೆಚ್ಚು ಮೇಡನ್​ ಓವರ್‌ ಎಸೆತದ ಮೊದಲ ಬೌಲರ್​ ಎನಿಸಿಕೊಂಡರು. ಈ ಮೂಲಕ ಭುವನೇಶ್ವರ್​(10) ದಾಖಲೆ ಹಿಂದಿಕ್ಕಿದರು.

ಅತಿ ಹೆಚ್ಚು ಮೇಡನ್​ ಓವರ್​ ಮಾಡಿದ ಬೌಲರ್​


ಜಸ್​ಪ್ರೀತ್​ ಬುಮ್ರಾ-11

ಭುವನೇಶ್ವರ್​ ಕುಮಾರ್​-10

ರಿಚರ್ಡ್ ನಾಗರವ-8

ಮುಸ್ತಫಿಜುರ್‌ ರೆಹಮಾನ್‌-7

ಜೋಶ್​ ಹ್ಯಾಲ್​ವುಡ್​-6

ಭಾರತಕ್ಕೆ ಗೆಲುವು


ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

ಇದನ್ನೂ ಓದಿ India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮಾ(Rohit Sharma) ಅವರು ಅರ್ಧಶತಕ ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅವರ ದಾಖಲೆಯ ಪಟ್ಟಿ ಇಂತಿದೆ.

600 ಸಿಕ್ಸರ್​


ಐರ್ಲೆಂಡ್​ ವಿರುದ್ಧ ಮೂರು ಸಿಕ್ಸರ್​ಗಳನ್ನು ಬಾರಿಸುವ ಮೂಲಕ ರೋಹಿತ್​ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 600 (ಏಕದಿನದಲ್ಲಿ 323, ಟಿ20ಯಲ್ಲಿ 193, ಟೆಸ್ಟ್​ನಲ್ಲಿ 84)​ ಸಿಕ್ಸರ್​ ಪೂರೈಸಿದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್​ ಎನಿಸಿಕೊಂಡರು. ಕ್ರಿಸ್​ ಗೇಲ್ 553 ಸಿಕ್ಸರ್​, ಶಾಹೀದ್​ ಅಫ್ರೀದಿ 476 ಸಿಕ್ಸರ್​ ಬಾರಿಸಿ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ.

4 ಸಾವಿರ ರನ್​


ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ದಾಖಲೆಯನ್ನು ಕೂಡ ರೋಹಿತ್(4026)​ ತಮ್ಮ ಹೆಸರಿಗೆ ಬರೆದರು. ಈ ಸಾಧನೆ ಮಾಡಿದ ವಿಶ್ವದ ದ್ವಿತೀಯ ಬ್ಯಾಟರ್​ ಎನಿಸಿಕೊಂಡರು. ದಾಖಲೆ ವಿರಾಟ್​ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ 4038 ರನ್​ ಬಾರಿಸಿದ್ದಾರೆ. ಪಾಕಿಸ್ತಾನದ ಬಾಬರ್​ ಅಜಂ(4023) ಮೂರನೇ ಸ್ಥಾನದಲ್ಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಸಾವಿರ ರನ್​


ಅರ್ಧಶತಕ ಬಾರಿಸುವ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್(1015)​ ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಮೂರನೇ ಹಾಗೂ 2ನೇ ಭಾರತೀಯ ಎನಿಸಿಕೊಂಡರು. ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(1142) ಮೊದಲ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(1016) ದ್ವಿತೀಯ ಸ್ಥಾನದಲ್ಲಿದ್ದಾರೆ. ರೋಹಿತ್​ ಮುಂದಿನ ಪಂದ್ಯದಲ್ಲಿ 2 ರನ್​ ಗಳಿಸಿದರೆ ಜಯವರ್ಧನೆ ದಾಖಲೆ ಪತನಗೊಳ್ಳಲಿದೆ.

Continue Reading

ಕ್ರೀಡೆ

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

T20 World Cup 2024: ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು.

VISTARANEWS.COM


on

T20 World Cup 2024
Koo

ಗಯಾನ: ಗುರುವಾರ ನಡೆದ ಟಿ20 ವಿಶ್ವಕಪ್(T20 World Cup 2024)​ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಉಗಾಂಡ ಗೆಲುವಿನ ನಗೆ ಬೀರಿದೆ. ‘ಸಿ’ ಗುಂಪಿನ ಪಂದ್ಯದಲ್ಲಿ ಉಗಾಂಡ ತಂಡ ಪಪುವಾ ನ್ಯೂ ಗಿನಿಯಾಯನ್ನು(Papua New Guinea vs Uganda) 3 ವಿಕೆಟ್​ಗಳ ಅಂತರದಿಂದ ಮಣಿಸಿದರೆ, ‘ಬಿ’ ಗುಂಪಿನ ಪಂದ್ಯದಲ್ಲಿ ಒಮಾನ್​ ತಂಡ ಆಸ್ಟ್ರೇಲಿಯಾಕ್ಕೆ(Australia vs Oman) ಶರಣಾಯಿತು.

ಖಾತೆ ತೆರೆದ ಉಗಾಂಡ


ಉಂಗಾಡ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಅಫಘಾನಿಸ್ತಾನ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ 125 ರನ್​ಗಳ ಹೀನಾಯ ಸೋಲು ಕಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ 19.1 ಓವರ್​ಗಳಲ್ಲಿ 77 ರನ್​ಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಉಗಾಂಡ 18.2 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 78 ರನ್​ ಬಾರಿಸಿ ಗೆಲುವು ಸಾಧಿಸಿತು.

ಚೇಸಿಂಗ್​ ವೇಳೆ ಉಂಗಾಂಡ ನಾಟಕೀಯ ಕುಸಿತ ಕಂಡಿತು. 26 ರನ್​ ಗಳಿಗೆ 5 ವಿಕೆಟ್​ ಕಳೆದುಕೊಂಡು ಸೋಲಿನ ಸೂಚನೆ ನೀಡಿತು. ಈ ವೇಳೆ ರಿಯಾಝತ್ ಅಲಿ ಶಾ 33 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಒಂದೊಮ್ಮೆ ಇವರ ವಿಕೆಟ್​ ಕೂಡ ಬೀಳುತ್ತಿದ್ದರೆ ಉಂಗಾಡ ಸೋಲು ಕಾಣುತ್ತಿತ್ತು.

ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವು


ದಿನದ ಮತ್ತೊಂದು ಪಂದ್ಯದಲ್ಲಿ ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಆಸೀಸ್​ ಪರ ವಿದಾಯದ ಟೂರ್ನಿಯನ್ನಾಡುತ್ತಿರುವ ಡೇವಿಡ್​ ವಾರ್ನರ್​ ಅವರು ಅಧರ್ಶತಕ ಬಾರಿಸಿ ಮಿಂಚಿದರು. ಒಟ್ಟು 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಗಳಿಸಿದರು. ಐಪಿಎಲ್​ನಲ್ಲಿ ಸನ್​ರೈಸರ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದ ಟ್ರಾವಿಸ್​ ಹೆಡ್​ (12) ಮತ್ತು ನಾಯಕ ಮಿಚೆಲ್​ ಮಾರ್ಷ್​ (14), ಆರ್​ಸಿಬಿ ತಂಡದ ಗ್ಲೆನ್​ ಮ್ಯಾಕ್ಸ್​ವೆಲ್​ ಶೂನ್ಯ ಸುತ್ತಿ ಘೋರ ವೈಫಲ್ಯ ಕಂಡರು. ಅಂತಿಮ ಹಂತದಲ್ಲಿ ಮಾರ್ಕಸ್​ ಸ್ಟೋಯಿನಿಸ್​ ಬಾರಿಸಿದ ಅಜೇಯ 67 ರನ್​ಗಳ ನೆರವಿನಿಂದ ಆಸೀಸ್​ 150ರ ಗಡಿ ದಾಟಿತು. ಒಂದೊಮ್ಮೆ ಸ್ಟೋಯಿನಿಸ್​ ತಂಡಕ್ಕೆ ಆಸರೆಯಾಗದೇ ಹೋಗಿದ್ದರೆ ಆಸೀಸ್​ ಸೋಲುವ ಎಲ್ಲ ಸಾಧ್ಯತೆಯೂ ಇರುತ್ತಿತ್ತು.

ಇದನ್ನೂ ಓದಿ

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading
Advertisement
Election Results 2024
Lok Sabha Election 20245 mins ago

Election Results 2024: ಠೇವಣಿ ಕಳೆದುಕೊಂಡ ದೆಹಲಿಯ 148 ಅಭ್ಯರ್ಥಿಗಳು; ಏನಿದು ಠೇವಣಿ ನಷ್ಟ? ನಿಯಮ ಏನು ಹೇಳುತ್ತದೆ?

rahul gandhi
ಪ್ರಮುಖ ಸುದ್ದಿ16 mins ago

Rahul Gandhi: ನಾಳೆ ಬೆಂಗಳೂರಿನಲ್ಲಿ ಕೋರ್ಟ್‌ ಕಟಕಟೆ ಏರಲಿರುವ ರಾಹುಲ್‌ ಗಾಂಧಿ

NEET UG 2024
ಶಿಕ್ಷಣ18 mins ago

NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

Valmiki corporation Scam
ಕರ್ನಾಟಕ38 mins ago

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Protest demanding adequate bus facility at govinakovi village
ದಾವಣಗೆರೆ42 mins ago

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Food Poisoning
ಬೆಂಗಳೂರು ಗ್ರಾಮಾಂತರ44 mins ago

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Narendra Modi
ದೇಶ58 mins ago

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Kannada New Movie sahara movie release tomorrow
ಸ್ಯಾಂಡಲ್ ವುಡ್1 hour ago

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Physical Abuse in Gadaga
ಕ್ರೈಂ1 hour ago

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

Environment awareness programme by NCC team in Bengaluru
ಬೆಂಗಳೂರು1 hour ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌