Mallika Sagar: ಐಪಿಎಲ್‌ನ ಮೊದಲ ಮಹಿಳಾ ಹರಾಜುಗಾರ್ತಿ ಮಲ್ಲಿಕಾ ಸಾಗರ್ ಯಾರು? - Vistara News

ಕ್ರಿಕೆಟ್

Mallika Sagar: ಐಪಿಎಲ್‌ನ ಮೊದಲ ಮಹಿಳಾ ಹರಾಜುಗಾರ್ತಿ ಮಲ್ಲಿಕಾ ಸಾಗರ್ ಯಾರು?

ಇತ್ತೀಚೆಗೆ ನಡೆದಿದ್ದ ವನಿತಾ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿಯೂ ಮಲ್ಲಿಕಾ ಸಾಗರ್ ಪ್ರಮುಖ ಹೈಲೆಟ್ಸ್​ ಆಗಿದ್ದರು. ಮುಂಬೈ ಮೂಲದವರಾದ ಮಲ್ಲಿಕಾ ಆರ್ಟ್ ಕಲೆಕ್ಟರ್ ಆಗಿದ್ದರು.

VISTARANEWS.COM


on

Mallika Sagar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಬಹುನಿರೀಕ್ಷಿತ ಇಂಡಿಯನ್​ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆ ಇಂದು (ಡಿ.19) ಮಧ್ಯಾಹ್ನ ದುಬೈನಲ್ಲಿ ನಡೆಯಲಿದೆ. ಒಟ್ಟು 333 ಆಟಗಾರರು ಹರಾಜು ಪಟ್ಟಿಯಲ್ಲಿದ್ದು, 10 ತಂಡಗಳಲ್ಲಿ 77 ಸ್ಥಾನ ಮಾತ್ರ ಖಾಲಿ ಉಳಿದಿದೆ. ಐಪಿಎಲ್​ ಹರಾಜಿನಲ್ಲಿ ಪ್ರಮುಖ ಆಕರ್ಷಣೆಯಾಗಲಿರುವುದು ಹರಾಜುಗಾರ್ತಿ ಮಲ್ಲಿಕಾ ಸಾಗರ್(Mallika Sagar).

mallika sagar


ಯಾರು ಈ ಮಲ್ಲಿಕಾ ಸಾಗರ್​

ಇತ್ತೀಚೆಗೆ ನಡೆದಿದ್ದ ವನಿತಾ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿಯೂ ಮಲ್ಲಿಕಾ ಸಾಗರ್ ಪ್ರಮುಖ ಹೈಲೆಟ್ಸ್​ ಆಗಿದ್ದರು. ಮುಂಬೈ ಮೂಲದವರಾದ ಮಲ್ಲಿಕಾ ಆರ್ಟ್ ಕಲೆಕ್ಟರ್ ಆಗಿದ್ದವರು. ಈಗ ಕಳೆದೆರಡು ದಶಕಗಳಿಂದ ಹರಾಜುಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. 2021 ರಲ್ಲಿ ಪ್ರೊ ಕಬಡ್ಡಿ ಲೀಗ್‌ನಲ್ಲಿ ಹರಾಜಿನ ಭಾಗವಾಗಿದ್ದರು. ಅಲ್ಲದೆ ಬ್ರಿಟೀಷ್ ಆಕ್ಷನ್ ಹೌಸ್ ಕ್ರಿಸ್ಟೀಸ್​ನಲ್ಲಿ ಹರಾಜು ನಡೆಸಿದ ಮೊದಲ ಭಾರತೀಯ ಮಹಿಳೆ ಎನ್ನುವ ಖ್ಯಾತಿಯನ್ನು ಹೊಂದಿದ್ದಾರೆ. ಮಲ್ಲಿಕಾ ಕಳೆದ ವರ್ಷ ಮತ್ತು ಈ ವರ್ಷದ ಡಬ್ಲ್ಯೂಪಿಎಲ್ ಹರಾಜನ್ನು ಸಹ ನಡೆಸಿದ್ದಾರೆ.

mallika sagar


ಐಪಿಎಲ್ ಮೊದಲ ಬಾರಿ

ಮಲ್ಲಿಕಾ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಇದೇ ಮೊದಲ ಬಾರಿ. ಈ ಹಿಂದೆ ಹರಾಜುದಾರರಾಗಿದ್ದ ಹಗ್ ಎಡ್ಮೀಡ್ಸ್ ಬದಲಿಗೆ ಮಲ್ಲಿಕಾ ಆಯ್ಕೆಯಾಗಿದ್ದಾರೆ.

mallika sagar


ಹರಾಜು ಪ್ರಕ್ರಿಯೆಯ ಹೈಲೆಟ್ಸ್​

ಹರಾಜಿನಲ್ಲಿರುವ ಒಟ್ಟು ಆಟಗಾರರು: 333

ಹರಾಜಿನಲ್ಲಿರುವ ಭಾರತದ ಆಟಗಾರರು: 214

ಹರಾಜಿನಲ್ಲಿರುವ ವಿದೇಶಿ ಆಟಗಾರರು: 119

ವಿದೇಶಿ ಆಟಗಾರರ ಮೀಸಲು ಕೋಟಾ: 30

10 ತಂಡಗಳಿಗೆ ಬೇಕಿರುವ ಆಟಗಾರರು: 77

ಅಂತಾರಾಷ್ಟ್ರೀಯ ಪಂದ್ಯ ಆಡಿದವರು: 116

ಅನ್​ಕ್ಯಾಪ್ಡ್​ ಆಟಗಾರರು: 215

ಅಸೋಸಿಯೇಟ್‌ ರಾಷ್ಟ್ರದ ಆಟಗಾರರು: 02

ಆರಂಭ: ಭಾರತೀಯ ಕಾಲಮಾನದಂತೆ ಮಧ್ಯಾಹ್ನ 1.00 ಗಂಟೆ

ಇದನ್ನೂ ಓದಿ IPL 2024 : ಐಪಿಎಲ್​ ಹರಾಜು ಬಗ್ಗೆ ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು

ಸ್ಟಾರ್​​ ಸ್ಪೋರ್ಟ್ಸ್​ನಲ್ಲಿ ಪ್ರಸಾರ

ಐಪಿಎಲ್​ನ ನೇರ ಪ್ರಸಾರದ ಹಕ್ಕು ಪಡೆದಿರುವ ಸ್ಟಾರ್​​ ಸ್ಪೋರ್ಟ್ಸ್​ನಲ್ಲಿ ಹರಾಜು ಪ್ರಕ್ರಿಯೆ ಪ್ರಸಾರವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ 2 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ಹಿಂದಿ, ಸ್ಟಾರ್ ಸ್ಪೋರ್ಟ್ಸ್ 3, ಸ್ಟಾರ್ ಸ್ಪೋರ್ಟ್ಸ್ ಫಸ್ಟ್, ಸ್ಟಾರ್ ಸ್ಪೋರ್ಟ್ಸ್ 1 ತಮಿಳು, ವೀಕ್ಷಕರು ಹರಾಜನ್ನು ಲೈವ್ ಆಗಿ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ತಮಿಳು, ಸ್ಟಾರ್ ಸ್ಪೋರ್ಟ್ಸ್ 1 ತೆಲುಗು, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ತೆಲುಗು, ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಕನ್ನಡ. ಇವುಗಳಲ್ಲಿ ನೇರ ಪ್ರಸಾರ ಇರಲಿದೆ. ಲೈವ್ ಸ್ಟ್ರೀಮಿಂಗ್ ಜಿಯೋ ಸಿನೆಮಾ(JioCinema) ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

India vs Ireland: ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಐರ್ಲೆಂಡ್(India vs Ireland)​ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದ್ದಾರೆ. ನಿರೀಕ್ಷೆಯಂತೆ ರೋಹಿತ್​ ಜತೆ ವಿರಾಟ್​ ಕೊಹ್ಲಿ(Virat Kohli) ಅವರು ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ. ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​ಗೆ ಅವಕಾಶ ಸಿಗಲಿಲ್ಲ.

ಭಾರತ ಈ ಪಂದ್ಯಕ್ಕೆ ಅಚ್ಚರಿಯ ತಂಡವನ್ನು ಕಣಕ್ಕಿಳಿಸಿದೆ. ನಿರೀಕ್ಷೆಯೇ ಮಾಡದ ಶಿವಂ ದುಬೆ, ಅಕ್ಷರ್​ ಪಟೇಲ್​ ಮತ್ತು ಅರ್ಶದೀಪ್​ ಸಿಂಗ್​ ಅವರು ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅನುಭವಿ ಸ್ಪಿನ್ನರ್​ಗಳಾದ ಕುಲ್​ದೀಪ್​ ಯಾದವ್​ ಮತ್ತು ಯಜುವೇಂದ್ರ ಚಹಲ್​ ಬೆಂಚ್​ ಕಾಯಬೇಕಿದೆ. ರಿಷಭ್​ ಪಂತ್​ ವಿಕೆಟ್​ ಕೀಪರ್​ ಆಗಿದ್ದಾರೆ. ಅಲ್ಲದೆ ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ. ಒಟ್ಟು 4 ವೇಗಿಗಳು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ದುಬೆ ಕೂಡ ಬೌಲಿಂಗ್​ ಮಾಡಿದರೆ 5 ಮಂದಿ ವೇಗಿಗಳು ಆಡಿದಂತಾಗುತ್ತದೆ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಇದನ್ನು ಓದಿ Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇತ್ತಂಡಗಳ ಆಡುವ ಬಳಗ


ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟಿರ್ಲಿಂಗ್(ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್(ವಿಕೆಟ್​ ಕೀಪರ್​), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

Continue Reading

ಕ್ರೀಡೆ

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Rahul Dravid: ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು.

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾ ಇಂದು(ಬುಧವಾರ) ಐರ್ಲೆಂಡ್(India vs Ireland)​ ವಿರುದ್ಧ ತನ್ನ ಮೊದಲ ಟಿ20 ವಿಶ್ವಕಪ್(T20 World Cup 2024)​ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಮುಖ್ಯ ಕೋಚ್(head coach Rahul Dravid)​ ರಾಹುಲ್ ದ್ರಾವಿಡ್(Rahul Dravid)​ ಅವರು ಉರ್ದುವಿನಲ್ಲಿ(Dravid Speaks Urdu) ಮಾತನಾಡಿ ಎಲ್ಲರನ್ನು ಅಚ್ಚರಿ ಪಡುವಂತೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ್ರಾವಿಡ್​ ತಮ್ಮ ತಂಡದ ತಯಾರಿಯ ಬಗ್ಗೆ ಮಾತನಾಡುವ ವೇಳೆಯಲ್ಲಿ ಉರ್ದು ಭಾಷೆಯಲ್ಲಿಯೂ ಮಾತನಾಡಿದರು. ‘ಈ ಸ್ವರೂಪದ ಕ್ರಿಕೆಟ್​ನಲ್ಲಿ ಯಾರನ್ನೂ ಕಡೆಗಣಿಸಲು ಅಥವಾ ಯಾರನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದು ಉರ್ದುವಿನಲ್ಲಿ ಹೇಳಿ ಜೋರಾಗಿ ನಕ್ಕಿದ್ದಾರೆ. ಜತೆಗೆ ವೆಲ್​ ಡನ್​ ರಾಹುಲ್​ ಎಂದು ಸ್ವತಃ ತಮ್ಮನ್ನು ತಾವೇ ಪ್ರಶಂಶಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿದ್ದ ಪತ್ರಕರ್ತರು ಕೂಡ ಜೋರಾಗಿ ನಗಾಡಿದ್ದಾರೆ. ದ್ರಾವಿಡ್ ಉರ್ದುವಿನಲ್ಲಿ ಮಾತನಾಡಿದ ವಿಡಿಯೊ ವೈರಲ್(viral video)​ ಆಗಿದೆ.

ಇದನ್ನೂ ಓದಿ Rahul Dravid: ಕೋಚ್ ಹುದ್ದೆಯಲ್ಲಿ ಮುಂದುವರಿಯಲ್ಲ; ಅಧಿಕೃತ ಹೇಳಿಕೆ ನೀಡಿದ ದ್ರಾವಿಡ್


ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು. ದ್ರಾವಿಡ್ ಕೋಚ್​ ಆದಾಗ ಅವರ ಮೇಲೆ ಅತಿಯಾದ ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೆ ತಕ್ಕ ಪ್ರದರ್ಶನ ಅವರ ಕೋಚಿಂಗ್​ ಅವಧಿಯಲ್ಲಿ ಕಂಡು ಬರಲಿಲ್ಲ. ಹೀಗಾಗಿ ಅವರ ಕೋಚಿಂಗ್​ ಬಗ್ಗೆ ಹಲವು ಟೀಕೆಗಳು ಕೂಡ ವ್ಯಕ್ತವಾಗಿತ್ತು. ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ನಿರೀಕ್ಷಿತ ಯಶಸ್ಸು ತಂಡಕ್ಕೆ ಸಿಕ್ಕಿಲ್ಲ. ಅಂಡರ್​-19 ಕ್ರಿಕೆಟ್​ ಮಾರ್ಗದರ್ಶನದಲ್ಲಿ ಅವರಿಗೆ ಸಿಕ್ಕಷ್ಟು ಯಶಸ್ಸು ಸೀನಿಯರ್ಸ್‌ ತಂಡದಲ್ಲಿ ಸಿಗಲಿಲ್ಲ.

ದ್ರಾವಿಡ್​ಗೆ ಟೀಮ್​ ಇಂಡಿಯಾದ ಕೋಚಿಂಗ್​ ಬಗ್ಗೆ ಮೊದಲಿನಿಂದಲೇ ಆಸಕ್ತಿ ಇರಲಿಲ್ಲ. ಆದರೆ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಂದಿನ ಅಧ್ಯಕ್ಷ ಸೌರವ್ ಗಂಗೂಲಿ ಅವರ ಒತ್ತಾಯದ ಮೇರೆಗೆ ದ್ರಾವಿಡ್​ ಕೋಚ್​ ಹುದ್ದೆ ವಹಿಸಿಕೊಂಡಿದ್ದರು. ಕೊನೆಯ ಬಾರಿಗೆ ಕೋಚಿಂಗ್​ ನಡೆಸುತ್ತಿರುವ ದ್ರಾವಿಡ್​ ಟಿ20 ವಿಶ್ವಕಪ್​ನಲ್ಲಾದರೂ ಕಪ್​ ಗೆದ್ದು ಗೆಲುವಿನ ವಿದಾಯ ಸಿಗಲಿ ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ಆಶಯ.

Continue Reading

T20 ವಿಶ್ವಕಪ್

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Pakistan Players: ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ.

VISTARANEWS.COM


on

Pakistan Players
Koo

ನ್ಯೂಯಾರ್ಕ್​: ಎಲ್ಲ ದೇಶಗಳು ಟಿ20 ವಿಶ್ವಕಪ್​ ಟ್ರೋಫಿ(T20 World Cup) ಗೆಲ್ಲುವತ್ತ ಗಮನಹರಿಸಿದರೆ, ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನದ ಆಟಗಾರರು(Pakistan Players) ಆರ್ಥಿಕ ಸಂಕಷ್ಟದಿಂದ ಪಾರಾಗುವತ್ತ ಗಮನ ಹರಿಸಿದಂತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಆಟಗಾರರು ದಂಧೆಗೆ ಇಳಿದು ವಿವಾದಕ್ಕೀಡಾಗಿದ್ದಾರೆ.

ಪಾಕಿಸ್ತಾನದ ಆಟಗಾರರು ಖಾಸಗಿ ಔತಣಕೂಟ(Pakistan Players Host Private Dinner) ಒಂದನ್ನು ಆಯೋಜಿಸಿ ಈ ಔತಣಕೂಟದಲ್ಲಿ ಅಭಿಮಾನಿಗಳು ಕೂಡ ಪಾಲ್ಗೊಳ್ಳಬಹುದು ಎಂದು ಹೇಳಲಾಗಿದೆ. ಆದರೆ ಒಂದು ಕ್ಷರತ್ತು ಕೂಡ ವಿಧಿಸಿದೆ. ಈ ಔತಣ ಕೂಟದಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳು 25 ಯುಎಸ್​ ಡಾಲರ್​ ಪಾವತಿಸಬೇಕು ಎಂದು ಹೇಳಿದೆ. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪಾಕ್​ ಆಟಗಾರರನ್ನು ಸ್ವತಃ ಪಾಕಿಸ್ತಾನದ ಜನರೇ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದಾರೆ. ಇಷ್ಟು ಗತಿಗೆಟ್ಟು ನೀವು ದೇಶವನ್ನು ಪ್ರತಿನಿಧಿಸಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಅಭಿಮಾನಿಗಳು ನೀಡಿದ 25 ಯುಎಸ್ ಡಾಲರ್​ಗಳನ್ನೆಲ್ಲ ಒಟ್ಟುಗೂಡಿಸಿ ಅಂತಿಮವಾಗಿ ಎಲ್ಲ ಆಟಗಾರರು ಸಮಾನವಾಗಿ ಹಂಚಿಕೊಂಡು ಹಣ ಗಳಿಸುವುದು ಆಟಗಾರರ ಉಪಾಯವಾಗಿತ್ತು. ಆದರೆ, ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್ ಆಡಲು ತೆರಳಿದ ತಂಡವೊಂದು ಔತಣಕೂಟ ಏರ್ಪಡಿಸಿ ಅಭಿಮಾನಿಗಳಿಂದ ದುಡ್ಡುಗಳಿಸಲು ಮುಂದಾಗುತ್ತಿರುವ ಅತ್ಯಂತ ನಾಚಿಕೆಗೇಡಿನ ಸಂಗತಿ. ಇದೊಂದು ದರೋಡೆ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕೂಡ ಕಾರಣವಿದೆ, ಇಷ್ಟೆಲ್ಲಾ ನಡೆದರೂ ಪಾಕ್​ ಕ್ರಿಕೆಟ್​ ಮಂಡಳಿ ಈ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಈ ಕೃತ್ಯದ ಹಿಂದೆ ಮಂಡಳಿಯ ಕೈವಾಡವಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 9, ಭಾನುವಾರ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

Virat Kohli: ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 World Cup)​ ಕ್ರಿಕೆಟ್​ ಟೂರ್ನಿಯಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಹೊಂದಿರುವ ಟೀಮ್​ ಇಂಡಿಯಾದ ವಿರಾಟ್​ ಕೊಹ್ಲಿ(Virat Kohli) ಇದೀಗ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲು ಸಜ್ಜಾಗಿ ನಿಂತಿದ್ದಾರೆ. ಈ ಬಾರಿ ಕೊಹ್ಲಿ ಕಣ್ಣಿಟ್ಟಿರುವ ದಾಖಲೆ ಎಂದರೆ ಬೌಂಡರಿಯದ್ದು.

ಇಂದು(ಬುಧವಾರ) ನಡೆಯುವ ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನ ಪಡೆಯಲಿದ್ದಾರೆ. ಜಯವರ್ಧನೆ 111 ಬೌಂಡರಿ ಬಾರಿಸಿದ್ದರೆ, ಕೊಹ್ಲಿ ಸದ್ಯ 103* ಬೌಂಡರಿ ದಾಖಲಿಸಿದ್ದಾರೆ.

ಟ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಸಾಧಕರು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ27103*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ರೋಹಿತ್​ ಶರ್ಮಭಾರತ3691*
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ3486
ಕ್ರಿಸ್​ ಗೇಲ್​ವೆಸ್ಟ್​ ಇಂಡೀಸ್​3178
ಜಾಸ್​ ಬಟ್ಲರ್​ಇಂಗ್ಲೆಂಡ್​2769*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2568*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.

ವರ್ಷ ಏಕದಿನ ಪ್ರಶಸ್ತಿ ಗೆದ್ದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಕೆಲವು ದಿನಗಳ ಹಿಂದಷ್ಟೇ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದರು. ಕೊಹ್ಲಿ 2023ರ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 24 ಇನ್ನಿಂಗ್ಸ್‌ನಲ್ಲಿ 72.47ರ ಸರಾಸರಿಯಲ್ಲಿ 1,377 ರನ್‌ ಕಲೆಹಾಕಿದ್ದರು. 6 ಶತಕಗಳು ಮತ್ತು 8 ಅರ್ಧ ಶತಕಗಳು ಬಾರಿಸಿದ್ದರು.

2023ರಲ್ಲಿ ಭಾರತದ ಏಷ್ಯಾ ಕಪ್‌ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೂಪರ್‌-4 ಹಂತದ ಪಾಕಿಸ್ಥಾನ ವಿರುದ್ಧದ ಹೈ ವೋಲ್ಟೇಜ್​ ಪಂದ್ಯದಲ್ಲಿ 94 ಎಸೆತಗಳಲ್ಲಿ ಅಜೇಯ 122 ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಏಕದಿನ ವಿಶ್ವಕಪ್‌ನಲ್ಲಿಯೂ 11 ಪಂದ್ಯಗಳಲ್ಲಿ 765 ರನ್‌ ಬಾರಿಸಿ ಗಮನ ಸೆಳೆದಿದ್ದರು. ಇದೇ ವೇಳೆ ಕಿವೀಸ್​ ವಿರುದ್ಧದ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿ ಏಕದಿನದಲ್ಲಿ 50 ಶತಕಗಳ ಸಾಧನೆಗೈದಿದ್ದರು. ಈ ಮೂಲಕ ಸಚಿನ್‌ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಮುರಿದಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿಯೂ ಅಮೋಘ ಬ್ಯಾಟಿಂಗ್​ ನಡೆಸುವ ವಿಶ್ವಾಸದಲ್ಲಿದ್ದಾರೆ.

Continue Reading
Advertisement
Belagavi Election Result 2024
ಬೆಳಗಾವಿ7 mins ago

ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

French Open 2024
ಕ್ರೀಡೆ33 mins ago

French Open 2024: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಮ್ಯಾಥ್ಯೂ ಜೋಡಿ

Minister Of Parliament
Latest57 mins ago

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

Uttarakhand Trekking Tragedy
ಪ್ರಮುಖ ಸುದ್ದಿ58 mins ago

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

India Bloc Meeting
ದೇಶ1 hour ago

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India vs Ireland
ಕ್ರೀಡೆ1 hour ago

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

Water Supply Cut
ಕರ್ನಾಟಕ2 hours ago

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Lowest Margin of Wins
ದೇಶ2 hours ago

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Rahul Dravid
ಕ್ರೀಡೆ2 hours ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ2 hours ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌