IPL 2024 Auction : ಮಿನಿ ಹರಾಜಿನ ಐದು ದುಬಾರಿ ಆಟಗಾರರು ಇವರು - Vistara News

ಕ್ರಿಕೆಟ್

IPL 2024 Auction : ಮಿನಿ ಹರಾಜಿನ ಐದು ದುಬಾರಿ ಆಟಗಾರರು ಇವರು

IPL 2024 Auction : ಮಿಚೆಲ್ ಸ್ಟಾರ್ಕ್​ ಹಾಗೂ ಪ್ಯಾಟ್​ ಕಮಿನ್ಸ್ ಸೇರಿಕೊಂಡು 45 ಕೋಟಿ ರೂಪಾಯಿಗಳನ್ನು ಹರಾಜಿನಲ್ಲಿ ಬಾಚಿಕೊಂಡಿದ್ದಾರೆ.

VISTARANEWS.COM


on

Chennai Supe Kings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಹಲವು ಅಚ್ಚರಿಗಳು ಹಾಗೂ ತಿರಸ್ಕಾರಗಳ ನಡುವೆ ಐಪಿಎಲ್ 2024 ರ ಹರಾಜು ಪ್ರಕ್ರಿಯೆ (IPL 2024 Auction) ಮುಕ್ತಾಯಗೊಂಡಿದೆ. ಇದು ಇಂಡಿಯನ್​ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ವಿನಾಶವನ್ನು ಸೃಷ್ಟಿಸಿದೆ. ತಂಡಗಳು ವೇಗದ ಬೌಲರ್​ಗಳನ್ನು ಖರೀದಿಸಲು ದೊಡ್ಡ ಮೊತ್ತ ಹೂಡಿಕೆ ಮಾಡಿರುವುದು ಈ ಬಾರಿಯ ವಿಶೇಷ. ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ಸೇರಿಕೊಂಡು 45 ಕೋಟಿ ರೂ.ಗಿಂತ ಹೆಚ್ಚು ಹಣ ಪಡೆದ ಕಾಋಣ ಆಸ್ಟ್ರೇಲಿಯನ್ನರು ಈ ವರ್ಷದ ಐಪಿಎಲ್​ನಲ್ಲಿ ಫ್ರಾಂಚೈಸಿಗಳ ಬ್ಯಾಂಕ್ ಲೂಟಿ ಮಾಡಿದಂತಾಗಿದೆ. ಹೀಗೆ ಐಪಿಎಲ್​ ಹರಾಜಿನಲ್ಲಿ ಗರಿಷ್ಠ ಮೊತ್ತ ಪಡೆದ ಐವರು ಆಟಗಾರರ ವಿವರ ನೋಡೋಣ.

ಮಿಚೆಲ್ ಸ್ಟಾರ್ಕ್ – 24.75 ಕೋಟಿ (ಕೋಲ್ಕತಾ ನೈಟ್ ರೈಡರ್ಸ್)

ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಖರೀದಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂಟು ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಐಪಿಎಲ್​ಗೆ ಬಂದ ಅವರು ಅವರನ್ನು ಅವರ ಮಾಜಿ ಫ್ರಾಂಚೈಸಿ ಕೋಲ್ಕತಾ ನೈಟ್ ರೈಡರ್ಸ್ 24.75 ಕೋಟಿ ರೂ.ಗೆ ಖರೀದಿಸಿತು.

ಸ್ಟಾರ್ಕ್ 2014 ಮತ್ತು 2015 ರ ಋತುಗಳಲ್ಲಿ ಆರ್​ಸಿಬಿ ತಂಡದ ಭಾಗವಾಗಿದ್ದರು. 2018ರಲ್ಲಿ ಕೆಕೆಆರ್ ಅವರನ್ನು 9.80 ಕೋಟಿ ರೂ.ಗೆ ಕರೆ ತಂದಿತ್ತು. ದುರದೃಷ್ಟವಶಾತ್, ಗಾಯದಿಂದಾಗಿ ಅವರು ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

ಪ್ಯಾಟ್ ಕಮಿನ್ಸ್ – 20.50 ಕೋಟಿ (ಸನ್ರೈಸರ್ಸ್ ಹೈದರಾಬಾದ್)

ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಮತ್ತು 2023 ರ ವಿಶ್ವ ಕಪ್​ನಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಅವರು 2024ರ ಟಿ 20 ವಿಶ್ವಕಪ್ ಸವಾಲಿಗೆ ಸಿದ್ದರಾಗಿದ್ದಾರೆ. ಅವರ ಹೆಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಬಿಡ್ಡಿಂಗ್ ಜಟಾಪಟಿ ಸೃಷ್ಟಿಸಿದರು. ನಾಯಕ ಮತ್ತು ವೇಗದ ಬೌಲರ್ ಹುಡುಕಾಟದಲ್ಲಿದ್ದ ಹೈದರಾಬಾದ್ ತಂಡವು ಆಸ್ಟ್ರೇಲಿಯಾದ ಬಲಗೈ ವೇಗಿಯನ್ನು 20.50 ಕೋಟಿ ರೂ.ಗೆ ಖರೀದಿಸಿತು. ಪ್ಯಾಟ್ ಕಮಿನ್ಸ್​ ವಿಶ್ವ ದರ್ಜೆಯ ಬೌಲರ್​. ಅವರು ಲೆಂಥ್​ ಬಾಲ್​​ ಸ್ಪೆಷಲಿಸ್ಟ್​. ಬ್ಯಾಟಿಂಗ್​ನಲ್ಲೂ ಮಿಂಚಬಲ್ಲರು.

ಡ್ಯಾರಿಲ್ ಮಿಚೆಲ್ – 14.00 ಕೋಟಿ (ಚೆನ್ನೈ ಸೂಪರ್ ಕಿಂಗ್ಸ್)

ಕಿವೀಸ್ ಆಲ್​ರೌಂಡರ್​ ಡ್ಯಾರಿಲ್ ಮಿಚೆಲ್ ನ್ಯೂಜಿಲೆಂಡ್ ತಂಡದ ಅದ್ಭುತ ಆಸ್ತಿ. ಅವರು ಐಸಿಸಿ ಪಂದ್ಯಾವಳಿಗಳಲ್ಲಿ ತಮ್ಮ ತಂಡದ ಪ್ರಮುಖ ಆಟಗಾರ. ತಂಡವನ್ನು ಕಠಿಣ ಪರಿಸ್ಥಿತಿಗಳಿಂದ ಹೊರತರುವ ವಿಶೇಷ ಕೌಶಲ ಅವರು ಹೊಂದಿದ್ದಾರೆ. ಹಿಂದೆ ಅವರು ರಾಜಸ್ಥಾನ್ ರಾಯಲ್ಸ್​ ಭಾಗವಾಗಿದ್ದರು ಅಲ್ಲಿ ಅವಕಾಶಗಳು ಸಿಕ್ಕಿರಲಿಲ್ಲ.

ಬೆನ್ ಸ್ಟೋಕ್ಸ್ ಸೇರಿದಂತೆ ಕೆಲವು ಆಟಗಾರರನ್ನು ಬಿಡುಗಡೆ ಮಾಡಿದ ನಂತರ, ಚೆನ್ನೈ ಸೂಪರ್ ಕಿಂಗ್ಸ್ ಸೀಮ್ ಬೌಲಿಂಗ್ ಕೌಶಲ್ಯವನ್ನು ಹೊಂದಿರುವ ಆಲ್​ರೌಂಡರ್​ಗಾಗಿ ಹುಡುಕುತ್ತಿತ್ತು. ಅವರು ಡ್ಯಾರಿಲ್ ಮಿಚೆಲ್​ ಅದಕ್ಕೆ ಸೂಕ್ತ. ಮುಂಬರುವ ಋತುವಿನಲ್ಲಿ ಅವರ ಸೇವೆಗಳನ್ನು ಪಡೆಯುವ ಸಲುವಾಗಿ ಅವರು 14 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ.

ಹರ್ಷಲ್ ಪಟೇಲ್ – 11.75 ಕೋಟಿ (ಪಂಜಾಬ್ ಕಿಂಗ್ಸ್)

ಹರ್ಷಲ್ ಪಟೇಲ್ 2021 ರಲ್ಲಿ ಆರ್​ಸಿಬಿ ಪರ ಆಡುವಾಗ 50 ಲಕ್ಷ ರೂಪಾಯಿ ನೀಡಲಾಗಿತ್ತು. ಆ ವರ್ಷ ಅವರು 32 ವಿಕೆಟ್​ಗಳನ್ನು ಪಡೆದರು. 2022 ರ ಮೆಗಾ ಹರಾಜಿನಲ್ಲಿ 10.75 ಕೋಟಿ ರೂ.ಗಳ ಬೃಹತ್ ಮೊತ್ತವನ್ನು ಪಡೆದರು ಮತ್ತು ಆರ್​ಸಿಬಿ ಪರ ಆಡಿದರು. ಆದರೆ ಅದೇ ಪ್ರದರ್ಶನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಆರ್​ಸಿಬಿ ಬಿಡುಗಡೆ ಮಾಡಿತು.

ಹರ್ಷಲ್​ ಹಿಂದಿಗಿತಂತ ಹೆಚ್ಚಿನ ಮೊತ್ತಕ್ಕೆ ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಬಿಡ್ಡಿಂಗ್ ಸಮರದಲ್ಲಿ ಪಂಜಾಬ್ ಕಿಂಗ್ಸ್ ಅವರ ಸೇವೆಗಳನ್ನು 11.75 ಕೋಟಿ ರೂ.ಗೆ ಪಡೆಯಿತು.

ಅಲ್ಜಾರಿ ಜೋಸೆಫ್ – 11.50 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದ ಕೆರಿಬಿಯನ್ ವೇಗದ ಬೌಲರ್ ಅಲ್ಜಾರಿ ಜೋಸೆಫ್, ಐಪಿಎಲ್ 2023 ರ ನಂತರ ಬಿಡುಗಡೆಗೊಂಡರು . ಈಗ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ. ವೇಗದ ಬೌಲರ್​ಗಾಗಿ ಆರ್​ಸಿಬಿ 11.50 ಕೋಟಿ ರೂ. ಹೂಡಿಕೆ ಮಾಡಿತು.

ಆರ್​ಸಿಬಿಗೆ ವಿದೇಶಿ ವೇಗದ ಬೌಲರ್​​ನ ತೀವ್ರ ಅಗತ್ಯವಿತ್ತು. ಪ್ಯಾಟ್ ಕಮಿನ್ಸ್ ಅವರನ್ನು ಖರೀದಿಸಲು ವಿಫಲವಾದ ಕಾರಣ, ಜೋಸೆಫ್ ಅವರನ್ನು ಬೆನ್ನಟ್ಟಿದ್ದರು. ಕೇವಲ 2.4 ಕೋಟಿ ರೂ.ಗೆ ಜಿಟಿ ಪರ ಆಡುತ್ತಿದ್ದ ಜೋಸೆಫ್ ಏಕಾಏಕಿ ದೊಡ್ಡ ಮೊತ್ತ ಪಡೆದರು. ಅವರು ಸಿರಾಜ್​ ಮತ್ತು ರೀಸ್ ಟಾಪ್ಲೆಗೆ ಜತೆಯಾಗಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Team India Captain: ರೋಹಿತ್ ನಿವೃತ್ತಿಯ ಬಳಿಕ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಚುಟುಕು ಮಾದರಿಯಲ್ಲಿ ಅಬ್ಬರದ ಪ್ರದರ್ಶನ ನೀಡುವ ಜತೆಗೆ ತಂಡದ ಮುಂದಾಳತ್ವ ವಹಿಸಲು ಯಾರು ಸಮರ್ಥರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ತಂಡದಲ್ಲಿ ಹಿರಿಯ ಆಟಗಾರರ ಸಂಖ್ಯೆ ಕಡಿಮೆ ಇರುವ ಕಾರಣ ಇರುವವರಲ್ಲೇ ಇವರಾಗಬಹುದು ಎಂಬ ಊಹಾಪೋಗಳು ಹೆಚ್ಚಾಗಿದೆ. ಹೀಗಾಗಿ ಯಾರಿಗೆ ಹೆಚ್ಚಿನ ಅವಕಾಶ ಇದೆ ಎಂಬುದನ್ನು ನೋಡೋಣ.

VISTARANEWS.COM


on

Team India Captain
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ ಚಾಂಪಿಯನ್​ ಪಟ್ಟ ಲಭಿಸಿದ ತಕ್ಷಣ ನಾಯಕ ರೋಹಿತ್ ಶರ್ಮಾ (Rohit Sharma) ಶನಿವಾರ ಟಿ20 ಐ ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಆಟದ ಕಿರು ಸ್ವರೂಪದಲ್ಲಿ ರಾಷ್ಟ್ರೀಯ ತಂಡದ ನಾಯಕತ್ವವು (Team India Captain) ಸ್ಥಾನ ಖಾಲಿ ಬಿದ್ದಿದೆ. 20 ಓವರ್​ಗಳ ಸ್ವರೂಪದಲ್ಲಿ 62 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ರೋಹಿತ್​ ಮೊದಲ ಪ್ರಶಸ್ತಿ ಗೆದ್ದ ತಕ್ಷಣ ಟಿ20 ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಬಾರ್ಬಡೋಸ್​​ನಲ್ಲಿ ನಡೆದ ಫೈನಲ್​ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಕ್ಷಣದಲ್ಲಿಯೇ ಅವರು ನಿರ್ಧಾರ ತೆಗೆದುಕೊಂಡರು. ಇವರ ಜತೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಟಿ 20 ಪಂದ್ಯಗಳಲ್ಲಿ ನಿವೃತ್ತಿ ಘೋಷಿಸಿದ್ದರು. ಈ ಎರಡು ಬ್ಯಾಟಿಂಗ್ ದಿಗ್ಗಜರು ಇನ್ನು ಮುಂದೆ ಲಭ್ಯರಿಲ್ಲದ ಕಾರಣ ಭಾರತೀಯ ಕ್ರಿಕೆಟ್​​ ಹೊಸ ಯುಗ ಆರಂಭಿಸಬೇಕಾಗಿದೆ.

ರೋಹಿತ್ ನಿವೃತ್ತಿಯ ಬಳಿಕ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಚುಟುಕು ಮಾದರಿಯಲ್ಲಿ ಅಬ್ಬರದ ಪ್ರದರ್ಶನ ನೀಡುವ ಜತೆಗೆ ತಂಡದ ಮುಂದಾಳತ್ವ ವಹಿಸಲು ಯಾರು ಸಮರ್ಥರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ತಂಡದಲ್ಲಿ ಹಿರಿಯ ಆಟಗಾರರ ಸಂಖ್ಯೆ ಕಡಿಮೆ ಇರುವ ಕಾರಣ ಇರುವವರಲ್ಲೇ ಇವರಾಗಬಹುದು ಎಂಬ ಊಹಾಪೋಗಳು ಹೆಚ್ಚಾಗಿದೆ. ಹೀಗಾಗಿ ಯಾರಿಗೆ ಹೆಚ್ಚಿನ ಅವಕಾಶ ಇದೆ ಎಂಬುದನ್ನು ನೋಡೋಣ.

ಹಾರ್ದಿಕ್ ಪಾಂಡ್ಯ

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ 20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲು ಇರುವ ಮುಂಚೂಣಿ ಹೆಸರು. ಅವರು ಭಾರತದ ಟಿ 20 ವಿಶ್ವಕಪ್ 2024 ಅಭಿಯಾನಕ್ಕೆ ಉಪನಾಯಕರಾಗಿದ್ದರು. ಪ್ರಶಸ್ತಿ ಗೆಲುವಿನಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದ ಅವರು ಮುಂದಿನ ಋತುವಿನಲ್ಲಿ ಫ್ರಾಂಚೈಸಿಯನ್ನು ಫೈನಲ್​ಗೆ ಕೊಂಡೊಯ್ದಿದ್ದರು. ಹೀಗಾಗಿ ಹಾರ್ದಿಕ್ ಈ ಸ್ವರೂಪದಲ್ಲಿ ನಾಯಕತ್ವದ ಅನುಭವ ಹೊಂದಿದ್ದಾರೆ. ಪ್ರಸ್ತುತ ಅವರು ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದಾರೆ. ಅದರ ಜತೆಗೆ 2022-23ರ ಅವಧಿಯಲ್ಲಿ 16 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು.

2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್​ನಲ್ಲಿ ಭಾರತ ನಿರ್ಗಮಿಸಿದ ನಂತರ ನ್ಯೂಜಿಲೆಂಡ್​​ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಗೆ ಪಾಂಡ್ಯ ನಾಯಕರಾಗಿದ್ದರು. ಶ್ರೀಲಂಕಾ ವಿರುದ್ಧ 3-0 ವೈಟ್ವಾಶ್ ಮತ್ತು ತವರಿನಲ್ಲಿ ಕಿವೀಸ್ ವಿರುದ್ಧ 2-1 ಅಂತರದ ಗೆಲುವು ಸಾಧಿಸಿದ ತಂಡದ ಮುಂದಾಳತ್ವ ವಹಿಸಿದ್ದರು. ನಾಯಕನಾಗಿ ಅವರ ಕೊನೆಯ ಟಿ 20 ಐ ಸರಣಿ ಕಳೆದ ವರ್ಷ ಆಗಸ್ಟ್​​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 2-3 ಅಂತರದಲ್ಲಿ ಸರಣಿ ಸೋಲಿನೊಂದಿಗೆ ಕೊನೆಗೊಂಡಿತ್ತು. ಹಾರ್ದಿಕ್ ಪಾಂಡ್ಯ ಏಕದಿನ ತಂಡದ ಪ್ರಮುಖ ಆಟಗಾರನಾಗಿರುವುದರಿಂದ ಎರಡು ಸ್ವರೂಪಗಳನ್ನು ಹೇಗೆ ಸಮತೋಲನಗೊಳಿಸುತ್ತಾರೆ ಎಂಬುದನ್ನು ನೋಡಬೇಕಾಗಿದೆ.

ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ವಿಶ್ವದ ಪ್ರಮುಖ ಟಿ 20 ಬ್ಯಾಟರ್​ಗಳಲ್ಲಿ ಒಬ್ಬರು. ಈ ಮಾದರಿಯಲ್ಲಿ ಬ್ಯಾಟ್​ನೊಂದಿಗೆ ಭಾರತದ ಪರ ಆಕ್ರಮಣಕಾರಿಯಾಗಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್ ನಂತರ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಅವರು ಭಾರತವನ್ನು ಮುನ್ನಡೆಸಿದ್ದರು. ನಂತರ ಡಿಸೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟಿ 20 ಐಗಳಲ್ಲಿ ತಂಡದ ನಾಯಕರಾಗಿದ್ದರು. ನಾಯಕನಾಗಿದ್ದ ತಮ್ಮ ಕೊನೆಯ ಪಂದ್ಯದಲ್ಲಿ, ಸೂರ್ಯಕುಮಾರ್ 56 ಎಸೆತಗಳಲ್ಲಿ ಶತಕ ಬಾರಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ 106 ರನ್​ಗಳ ಬೃಹತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು

ಟೆಸ್ಟ್ ಮತ್ತು ಏಕದಿನ ತಂಡಗಳಲ್ಲಿ ಇನ್ನೂ ಕಾಯಂ ಸ್ಥಾನ ಪಡೆಯದ ಕಾರಣ, ಸೂರ್ಯಕುಮಾರ್ ತಮ್ಮ ಗಮನವನ್ನು ಆಟದ ಕಿರು ಸ್ವರೂಪಕ್ಕೆ ಮೀಸಲಿಡುವ ಸರ್ವ ಅವಕಾಶ ಹೊಂದಿದ್ದಾರೆ.

ಜಸ್ಪ್ರೀತ್ ಬುಮ್ರಾ

ಭಾರತದ ಆಲ್-ಫಾರ್ಮ್ಯಾಟ್ ವೇಗದ ಬೌಲರ್ ಆಧುನಿಕ ಯುಗದ ​​ ಅತ್ಯುತ್ತಮ ಕ್ರಿಕೆಟಿಗ. ಭಾರತ ತಂಡದ ಯಶಸ್ಸಿನ ರೂವಾರಿ ಕೂಡ. ಸೀಮಿತ ನಾಯಕತ್ವ ಅನುಭವವನ್ನು ಹೊಂದಿದ್ದರೂ, ಬುಮ್ರಾ ತಮ್ಮ ತೀಕ್ಷ್ಣ ಚಾತುರ್ಯ ಮತ್ತು ಆಟದ ಅರಿವಿಗೆ ಪ್ರಖ್ಯಾತರು. ಅವರು ಹಲವು ಬಾರಿ ತಂಡದ ಉಪನಾಯಕರೂ ಆಗಿದ್ದಾರೆ. ಕಳೆದ ವರ್ಷ ಐರ್ಲೆಂಡ್ ವಿರುದ್ಧ ಎರಡು ಟಿ 20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು. ಆದಾಗ್ಯೂ, ಎಲ್ಲಾ ಮೂರು ಸ್ವರೂಪಗಳಲ್ಲಿ ಅವರ ಬೌಲಿಂಗ್ ಭಾರತಕ್ಕೆ ಮುಖ್ಯ. ಅವರ ಇತ್ತೀಚಿನ ಗಾಯಗಳನ್ನು ಗಮನಿಸಿದರೆ, ತಂಡದ ಆಡಳಿತವು ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡದು.

ಇದನ್ನೂ ಓದಿ: T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

ರಿಷಭ್ ಪಂತ್

ಭೀಕರ ಕಾರು ಅಪಘಾತದಿಂದ ಆದ ಗಾಯಗಳಿಂದ ಚೇತರಿಸಿದ ರಿಷಭ್​ ಪಂತ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಗಮನಾರ್ಹ ಪುನರಾಗಮನ ಮಾಡಿದ್ದರು. ಐಪಿಎಲ್ 2024 ರಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಆ ತಂಡ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 2022 ರಲ್ಲಿ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದರು. ಅದು 2-2 ಡ್ರಾದಲ್ಲಿ ಕೊನೆಗೊಂಡಿತ್ತು. ಆದಾಗ್ಯೂ, ಪಂತ್ ಭಾರತದ ಟಿ 20 ಐ ಪ್ಲೇಯಿಂಗ್ ಹನ್ನೊಂದರಲ್ಲಿ ತಮ್ಮ ಸ್ಥಾನವನ್ನು ಇನ್ನೂ ಭದ್ರಪಡಿಸಿಕೊಂಡಿಲ್ಲ. ಅವರನ್ನು ಯಾವ ರೀತಿ ಮ್ಯಾನೇಜ್ಮೆಂಟ್​ ಬಳಸಿಕೊಳ್ಳಲಿದೆ ಎಂದು ನೋಡಬೇಕು. ಅವರ ಬ್ಯಾಟಿಂಗ್​ನಲ್ಲಿ ಅಸ್ಥಿತರೆ ಇರುವ ಕಾರಣ ನಾಯಕತ್ವ ಜವಾಬ್ದಾರಿ ನೀಡುವ ಮೊದಲು ಬಿಸಿಸಿಐ ಇನ್ನೊಮ್ಮೆ ಯೋಚನೆ ಮಾಡಲಿದೆ.

ಶುಬ್ಮನ್ ಗಿಲ್​

ಹಾರ್ದಿಕ್ ಪಾಂಡ್ಯ ಐಪಿಎಲ್​ನಲ್ಲಿ ಮಂಬಯಿ ತಂಡದ ಪಾಲಾದ ಬಳಿಕ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡ ಶುಭ್​​ಮನ್​ ಗಿಲ್ ಜಿಂಬಾಬ್ವೆಯಲ್ಲಿ ಮುಂಬರುವ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ಟಿ 20 ವಿಶ್ವಕಪ್ 2024 ತಂಡದಲ್ಲಿ ಅವರು ಸ್ಥಾನ ಪಡೆಯದಿದ್ದರೂ ರೋಹಿತ್ ಮತ್ತು ಕೊಹ್ಲಿ ಅವರ ನಿವೃತ್ತಿಯ ನಂತರ ಗಿಲ್ ಟಿ 20 ಐಗಳಲ್ಲಿ ಅಗ್ರ ಕ್ರಮಾಂಕದಲ್ಲಿ ನಿಯಮಿತವಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅವರು ಇನ್ನೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವದ ಅನುಭವವನ್ನು ಹೊಂದಿಲ್ಲವಾದರೂ, 24 ವರ್ಷದ ಆಟಗಾರ ಏಕದಿನ ಮತ್ತು ಟೆಸ್ಟ್ ತಂಡಗಳ ಪ್ರಮುಖ ಸದಸ್ಯರಾಗಿದ್ದಾರೆ. ಭವಿಷ್ಯಕ್ಕಾಗಿ ನಾಯಕನನ್ನು ರೂಪಿಸುವಲ್ಲಿ ಮ್ಯಾನೇಜ್ಮೆಂಟ್ ಕಣ್ಣಿಟ್ಟಿರುವ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

Continue Reading

ಕ್ರಿಕೆಟ್

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Virat Kohli: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

irat Kohli's Heartfelt Tribute to Anushka Sharma
Koo

ಬೆಂಗಳೂರು: ವಿರಾಟ್‌ ಕೊಹ್ಲಿ (Virat Kohli) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿರುವಂತಹ ವ್ಯಕ್ತಿ. ಆ ವ್ಯಕ್ತಿಗೂ ಸ್ಫೂರ್ತಿಯಾಗಿರುವವರಿದ್ದಾರೆ. ಅವರು ಮತ್ತಿನ್ಯಾರೂ ಅಲ್ಲ, ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ಅನುಷ್ಕಾ ಜತೆ ಇರುವ ಫೋಟೊ ಹಂಚಿಕೊಂಡು ಹೀಗೆ ಬರೆದುಕೊಂಡಿದ್ದಾರೆ. ʻʻನೀನಿಲ್ಲದೆ ಇದೆಲ್ಲವೂ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ವಿನಮ್ರವಾಗಿ ಇರಲು ಪ್ರಯತ್ನಿಸಿರುವೆ. ನಾನು ನಿಮಗಾಗಿ ಹೆಚ್ಚು ಕೃತಜ್ಞರಾಗಿರಲು ಸಾಧ್ಯವಿಲ್ಲ. ಈ ಗೆಲುವು ನನ್ನದಷ್ಟೇ ನಿನ್ನದು ಕೂಡ. ಧನ್ಯವಾದಗಳು ಮತ್ತು ನಾನು ನಿನ್ನನ್ನು ತುಂಬ ಪ್ರೀತಿಸುತ್ತೇನೆ ʼʼಎಂದು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ಅನುಷ್ಕಾ ಶರ್ಮಾ ಅವರು ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಪ್ರಮುಖ ಸುದ್ದಿ

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

T20 World Cup 2024: ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಗಾಳಿಯು ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: ದ್ವೀಪಗಳ ರಾಷ್ಟ್ರ ವೆಸ್ಟ್​​ ಇಂಡೀಸ್​ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ಸದಸ್ಯರು ಹಲವಾರು ದಿನಗಳವರೆಗೆ ಬಾರ್ಬಡೋಸ್​ನಲ್ಲಿ ಸಿಲುಕಿ ಹಾಕಿಕೊಳ್ಳಬಹುದು. ಶನಿವಾರ (ಜೂನ್ 29) ನಡೆದ ವಿಶ್ವ ಕಪ್​ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ರೋಹಿತ್ ಶರ್ಮಾ ಮತ್ತು ಅವರ ಬಳಗವು ಐಸಿಸಿ ಟಿ 20 ವಿಶ್ವಕಪ್ 2024 ಅನ್ನು (T20 World Cup 2024) ಗೆದ್ದುಕೊಂಡಿತ್ತು. ಅವರೆಲ್ಲರೂ ತಕ್ಷಣವೇ ಭಾರತಕ್ಕೆ ಮರಳಿ ಸಂಭ್ರಮಾಚರಣೆ ಮಾಡಬೇಕಾಗಿತ್ತು. ಆದರೆ, ಅಪಾಯಕಾರಿ ಚಂಡ ಮಾರುತ ಅವರ ಆಸೆಗೆ ತಣ್ಣೀರು ಎರಚಿದೆ. ಅವರು ತಡವಾಗಿ ಭಾರತ ಸೇರಬೇಕಾಗಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಮಾರುತದ ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರಕ್ಕೆ ವಿಂಡ್ವರ್ಡ್ ದ್ವೀಪಗಳಿಗೆ ಬೆರಿಲ್ ಚಂಡಮಾರುತ ಅಪ್ಪಳಿಸಲಿದೆ ನಿರೀಕ್ಷೆಯಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ರಾತ್ರಿ 8:30 ರ ಹೊತ್ತಿಗೆ ಬೆರಿಲ್ ಬಾರ್ಬಡೋಸ್​​ನ ಪೂರ್ವ-ಆಗ್ನೇಯಕ್ಕೆ ಸುಮಾರು 355 ಮೈಲಿ ದೂರದಲ್ಲಿ ಸಾಗಲಿದೆ. ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿ ತೀವ್ರವಾಗಬಹುದು ಎಂದು ವರದಿಯಾಗಿದೆ.

ಕಠಿಣ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಸದಸ್ಯರು ದ್ವೀಪವನ್ನು ತೊರೆಯಲು ಸಾಧ್ಯವಾಗದು. ಭಾನುವಾರ, ಆಜ್ ತಕ್​ನ ವಿಕ್ರಾಂತ್ ಗುಪ್ತಾ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ. ಎಲ್ಲರೂ ಸದ್ಯಕ್ಕೆ ಬಾರ್ಬಡೋಸ್​ನಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ವಿಮಾನಗಳ ಹಾರಾಟ ರದ್ದು

ಈಗಾಗಲೇ ವಿಮಾನಗಳನ್ನು ರದ್ದುಪಡಿಸಲಾಗಿದೆ. ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಮೂಲಗಳು ತಿಳಿಸಿವೆ. ಭಾರತೀಯ ತಂಡವು ದ್ವೀಪದಲ್ಲಿ ಸಿಲುಕಿಕೊಳ್ಳುತ್ತದೆ ಮತ್ತು ಪರಿಸ್ಥಿತಿ ಸುಧಾರಿಸಿದ ನಂತರವೇ ಹೊರಡಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

“ಬೆರಿಲ್ ಚಂಡಮಾರುತವು ಇಂದು ರಾತ್ರಿ ಅಥವಾ ಸೋಮವಾರ ಮುಂಜಾನೆ ಬಾರ್ಬಡೋಸ್​ಗೆ ಅಪ್ಪಳಿಸಲಿದೆ. ಭೂಕುಸಿತವು ತೀವ್ರವಾಗಿರಲಿದೆ. ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ. ಚಂಡಮಾರುತ ಕಡಿಮೆಯಾಗಿ ವಿಮಾನ ನಿಲ್ದಾಣ ಪುನರಾರಂಭವಾಗುವವರೆಗೂ ಭಾರತ ತಂಡವೂ ಇಲ್ಲಿ ಸಿಲುಕಿಕೊಳ್ಳಲಿದೆ. ನಾವೂ ಇಲ್ಲಿ ಸಿಲುಕಿಕೊಂಡಿದ್ದೇವೆ. ಎಲ್ಲಾ ಹೊರಹೋಗುವ ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ” ಎಂದು ಗುಪ್ತಾ ವಿವರಿಸಿದ್ದಾರೆ.

ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು

ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ 2007ರ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತರ ಎರಡು ಬಾರಿ ಪಂದ್ಯಾವಳಿಯನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 169 ರನ್​ಗೆ ಹೋರಾಟ ಮುಗಿಸಿತು

Continue Reading

ಪ್ರಮುಖ ಸುದ್ದಿ

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

Rohit Sharma: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ (Rohit Sharma) ಚಾಂಪಿಯನ್ ಪಟ್ಟ ಗೆದ್ದ ಮರುದಿನ (ವೆಸ್ಟ್​ ಇಂಡೀಸ್​ನಲ್ಲಿ ಈಗ ಬೆಳಗ್ಗಿನ ಅವಧಿ) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ತಂಡದ ನಾಯಕ ಭಾನುವಾರ ಜೂನ್​ 29ರಂದು ಪಂದ್ಯ ಮುಗಿದು ಕಪ್ ಗೆದ್ದ ಬಳಿಕ ಅದನ್ನು ತಮ್ಮ ಹಾಸಿಗೆಯ ಪಕ್ಕದಲ್ಲಿ ತಲೆ ಬಳಿಯೇ ಟ್ರೋಫಿಯೊಂದಿಗೆ ಇರುವ ಚಿತ್ರವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ ತಂಡ ಬಾರ್ಬಡೋಸ್​​ನ ಬ್ರಿಜ್​ಟೌನ್ ಕೆನ್ಸಿಂಗ್ಟನ್ ಓವಲ್​​ನಲ್ಲಿ ಶನಿವಾರ (ಜೂನ್ 29) ನಡೆದ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಕ್ರಿಕೆಟ್ ತಂಡವು ಟಿ 20 ವಿಶ್ವಕಪ್ 2024 ಅನ್ನು ಗೆದ್ದುಕೊಂಡಿತು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

2024 ರ ಟಿ 20 ವಿಶ್ವಕಪ್​ನಲ್ಲಿ ಭಾರತವು ರೋಚಕ ಪ್ರದರ್ಶನ ನೀಡಿತ್ತು. ಅವರು ಪಂದ್ಯಾವಳಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದರು. ಬಳಿಕ ಸೋಲಿನ ದವಡೆಯಿಂದ ಪಾರಾಗಿ ಫೈನಲ್ ಪಂದ್ಯ ಗೆದ್ದಿದ್ದರು. ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಬೌಲರ್​ಗಳು ಭಾರತದ ಭಾರತದ ನಾಯಕನ ನಂಬಿಕೆ ಉಳಿಸಿದ್ದಾರೆ.

ಗೆಲುವಿನ ನಂತರ ಭಾರತೀಯ ಆಟಗಾರ ಭಾವುಕರಾಗಿದ್ದರು. ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್​ಗಳಲ್ಲಿ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದರು. ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಇತರರು ಸಂತೋಷದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ರೋಹಿತ್ ಶರ್ಮಾ ಗೆಲುವಿನ ನಂತರ ಸಾಮಾಜಿಕ ಮಾಧ್ಯಮದಲ್ಲಿ ಏನನ್ನೂ ಪೋಸ್ಟ್ ಮಾಡದ ಕಾರಣ ಮೌನವಾಗಿದ್ದರು. ಅನೇಕರು ನಾಯಕನ ಪೋಸ್ಟ್​​ಗಾಗಿ ಕಾಯುತ್ತಿದ್ದರು. ಈಗ ಅವರು ಟಿ 20 ವಿಶ್ವಕಪ್ 2024 ಗೆದ್ದ ನಂತರ ಅವರು ಗುಡ್ ಮಾರ್ನಿಂಗ್​ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

ರೋಹಿತ್ ಶರ್ಮಾ ಟಿ 20 ವಿಶ್ವಕಪ್ ಟ್ರೋಫಿಯೊಂದಿಗೆ ಹಾಸಿಗೆಯ ಮೇಲೆ ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. “ಎಲ್ಲರಿಗೂ ನಮಸ್ಕಾರ” ಎಂಬ ಶೀರ್ಷಿಕೆಯೊಂದಿಗೆ ಅವರು ಕಥೆಯನ್ನು ಹಂಚಿಕೊಂಡಿದ್ದಾರೆ.

Continue Reading
Advertisement
Team India Captain
ಕ್ರೀಡೆ40 seconds ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ3 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ13 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ14 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ36 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ48 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ48 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್48 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ50 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್58 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌