Salaar Movie: ಎಷ್ಟೇ ಪ್ಲಾಪ್‌ ಆದರೂ ಒಂದು ಹಿಟ್‌ ಸಾಕು; ಶಾರುಖ್‌ರಂತೆ ಪ್ರಭಾಸ್‌ ಎಂದ ನೀಲ್‌! - Vistara News

South Cinema

Salaar Movie: ಎಷ್ಟೇ ಪ್ಲಾಪ್‌ ಆದರೂ ಒಂದು ಹಿಟ್‌ ಸಾಕು; ಶಾರುಖ್‌ರಂತೆ ಪ್ರಭಾಸ್‌ ಎಂದ ನೀಲ್‌!

2014ರ “ಉಗ್ರಂ” ಸಿನಿಮಾದೊಂದಿಗೆ (Salaar Movie) ನಿರ್ದೇಶನಕ್ಕೆ ಇಳಿದರು ಪ್ರಶಾಂತ್‌ ನೀಲ್‌. ಸಂದರ್ಶನವೊಂದರಲ್ಲಿ ಪ್ರಶಾಂತ್‌ ನೀಲ್‌ ಹಲವು ವಿಚಾರಗಳನ್ನು ತೆರೆದಿಟ್ಟರು.

VISTARANEWS.COM


on

Salaar Director prashanth neel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಜಿಎಫ್‌ʼ ಸರಣಿ ಮತ್ತು ʼಕಾಂತಾರʼ ಚಿತ್ರಗಳ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ವಿಜಯ್‌ ಕಿರಗಂದೂರು ಮಾಲೀಕತ್ವದ ಹೊಂಬಾಳೆ ಫಿಲ್ಮ್ಸ್ (Hombale Films) ಇದೀಗ ʼಸಲಾರ್‌ʼ ಚಿತ್ರದ ಬಿಡುಗಡೆಯ ತಯಾರಿಯಲ್ಲಿದೆ. ಪ್ರಶಾಂತ್‌ ನೀಲ್‌ ಮತ್ತು ಪ್ರಭಾಸ್‌ ಮೊದಲ ಬಾರಿಗೆ ಒಂದಾಗುತ್ತಿರುವ ಈ ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ. 2014ರ “ಉಗ್ರಂ” ಸಿನಿಮಾದೊಂದಿಗೆ (Salaar Movie) ನಿರ್ದೇಶನಕ್ಕೆ ಇಳಿದರು ಪ್ರಶಾಂತ್‌ ನೀಲ್‌. ಸಂದರ್ಶನವೊಂದರಲ್ಲಿ ಪ್ರಶಾಂತ್‌ ನೀಲ್‌ ಹಲವು ವಿಚಾರಗಳನ್ನು ತೆರೆದಿಟ್ಟರು. ನಾನು ಸಿನಿಮಾಗಳನ್ನು ಮಾಡುವಾಗ ಪ್ಯಾನ್-ಇಂಡಿಯಾ ಯೋಜನೆಗಳಾಗಿ ಎಂದಿಗೂ ಯೋಜಿಸುವುದಿಲ್ಲ ಎಂದು ಹೇಳಿದರು. ಹಾಗೇ ಶಾರುಖ್‌ ಅವರ ರೀತಿ ಪ್ರಭಾಸ್‌ ಕೂಡ ಹಿಟ್‌ ಸಿನಿಮಾ ಕೊಡುತ್ತಾರೆ ಎಂದರು.

ಸಲಾರ್ ಪ್ಯಾನ್-ಇಂಡಿಯಾ ಸಿನಿಮಾ ಎಂತಾದರೆ ನಮಗೆಲ್ಲರಿಗೂ ಬೋನಸ್

ಪ್ರಶಾಂತ್‌ ನೀಲ್‌ ಮಾತನಾಡಿ ʻʻನಾನು ಒಂದು ಕಥೆಯನ್ನು ಬರೆದು ಇಡುತ್ತೇನೆ. ಬಳಿಕ ಅದನ್ನು ಕಾರ್ಯಗತಗೊಳಿಸುತ್ತೇನೆ. ಇದು (‘ಸಲಾರ್’) ಪ್ಯಾನ್-ಇಂಡಿಯಾ ಚಲನಚಿತ್ರವಾಗುತ್ತದೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಪ್ಯಾನ್-ಇಂಡಿಯಾ ಸಿನಿಮಾ ಎಂತಾದರೆ, ಅದು ನಮಗೆಲ್ಲರಿಗೂ ಬೋನಸ್ʼʼಎಂದರು.

ʻʻಆರ್ಗಾನಿಕ್ ಆಗಿ ಸಿನಿಮಾಗಳು ಮೂಡಿಬಂದರೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಸಲಾರ್‌ನಲ್ಲಿ ಇಬ್ಬರು ಸ್ನೇಹಿತರಾದ ದೇವ ಮತ್ತು ವರ್ಧ ಅವರ ಕಥೆ ಇದೆ. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರು ಈ ಪಾತ್ರದಲ್ಲಿ ನಟಿಸಿದ್ದಾರೆ. ಬಳಿಕ ಅವರೇ ಪ್ರತಿಸ್ಪರ್ಧಿಗಳಾಗುತ್ತಾರೆʼʼಎಂದರು.

ನನ್ನ ತಲೆಯಲ್ಲಿದ್ದ ಕಲ್ಪನೆ ಸಿನಿಮಾವಿದು!

ʻʻಈ ಸಿನಿಮಾ ಕತೆ ನನ್ನ ತಲೆಯಲ್ಲಿದ್ದ ಕಲ್ಪನೆ. ಆದರೆ ಅದಕ್ಕೆ ಬಹಳ ದೊಡ್ಡ ಬಜೆಟ್ ಬೇಕಿತ್ತು. ಹಾಗಾಗಿ ನನ್ನ ಮೊದಲ ಸಿನಿಮಾ ‘ಉಗ್ರಂ’, ನಂತರ ‘ಕೆಜಿಎಫ್’ ಸಿನಿಮಾ ಮಾಡಿದೆ. ಸುಮಾರು ಎಂಟು ವರ್ಷಗಳ ಕಾಲ ‘ಕೆಜಿಎಫ್’ನಲ್ಲಿ ತೊಡಗಿಸಿಕೊಂಡಿದ್ದೆ. ಕೋವಿಡ್‌ ಸಮಯದಲ್ಲಿ, ನಾನು ಈ ಸಲಾರ್‌ ಬಗ್ಗೆ ಪ್ರಭಾಸ್ ಅವರ ಬಳಿ ಹೇಳಿದ್ದೆ. ಬಳಿಕ ಈ ಸಿನಿಮಾ ಮಾಡಲು ಒಪ್ಪಿಕೊಂಡರುʼʼಎಂದರು. ಪ್ರಶಾಂತ್‌ ನೀಲ್‌ ಅವರ ಪ್ರಕಾರ, ಬಿಗ್ ಬಜೆಟ್ ಚಿತ್ರಗಳಲ್ಲಿ ಕಥೆ ಮತ್ತು ಪಾತ್ರಗಳಿಗೆ ಸಮಾನ ಪ್ರಾಮುಖ್ಯತೆ ನೀಡಬೇಕು.

ಯಾವತ್ತೂ ಒತ್ತಡ ಇರಲಿಲ್ಲ

“ನಾವು ಒಂದು ಕಥೆಯನ್ನು ಹೇಳಲು ಸಿನಿಮಾವನ್ನು ಮಾಡುತ್ತೇವೆ. ಪ್ರತಿ ಪಾತ್ರವನ್ನು ಚಿತ್ರಿಸಲು ಸರಿಯಾದ ಪಾತ್ರಗಳು ಮತ್ತು ಸರಿಯಾದ ನಟರನ್ನು ನಾವು ಹುಡುಕಲು ಶುರು ಮಾಡುತ್ತೇವೆ. ನಮಗೆ ಬೇಕಾದ ಸಿನಿಮಾಗಳನ್ನು ಮಾಡಲು ನಾವು ದೊಡ್ಡ ಬಜೆಟ್‌ಗಳನ್ನು ಪಡೆಯುತ್ತೇವೆʼʼಎಂದರು.

ʻʻ’ಸಲಾರ್’ ಮಾಡಲು ಯಾವತ್ತೂ ಒತ್ತಡ ಇರಲಿಲ್ಲ. ನಟ ಪಾತ್ರದಂತೆ ಕಾಣುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ. ನೀವು ಪ್ರಭಾಸ್ ಅವರನ್ನು ಪ್ರಭಾಸ್ ಆಗಿ ತೋರಿಸಲು ಬಯಸುವುದಿಲ್ಲ, ನೀವು ಅವರನ್ನು ಪಾತ್ರವಾಗಿ ತೋರಿಸಲು ಬಯಸುತ್ತೀರಿ. ಅಂತಹದನ್ನು ಮಾಡಲು ನಾನು ನಮ್ಮ ಕೈಲಾದಷ್ಟು ಪ್ರಯತ್ನಿಸಿದೆ, ”ಎಂದು ಅವರು ಹೇಳಿದರು.

ಇದನ್ನೂ ಓದಿ: Salaar Movie: ಸಲಾರ್‌ ಶೋ ಹೌಸ್​ಫುಲ್; ಪ್ರಿ ಬುಕ್ಕಿಂಗ್‌​ಗೆ ಭರ್ಜರಿ ರೆಸ್ಪಾನ್ಸ್

ಶಾರುಖ್ ಖಾನ್ ತರ!

“ಪ್ರಭಾಸ್ ದೊಡ್ಡ ಸ್ಟಾರ್. ‘ಬಾಹುಬಲಿ’ ನಂತರ ದೊಡ್ಡ ಸ್ಟಾರ್ ಆದರು. ನಕ್ಷತ್ರಗಳು ಯಾವುತ್ತೂ ನಕ್ಷತ್ರಗಳೇ ಆಗಿರುತ್ತದೆ. ಒಂದು ಫ್ಲಾಪ್ ಅಥವಾ 20 ಫ್ಲಾಪ್‌ ಸಿನಿಮಾಗಳನ್ನು ನೀಡರಬಹುದು. ಆದರೆ ಒಂದು ಹಿಟ್‌ ಸಿನಿಮಾ ಸಾಕು, ಮತ್ತೆ ಮೇಲೆ ಏಳಲು. ಇತ್ತೀಚೆಗೆ, ಶಾರುಖ್ ಖಾನ್ ಅದನ್ನು ಮಾಡಿ ತೋರಿಸಿದ್ದಾರೆ. ಸ್ಟಾರ್ ಯಾವಾಗಲೂ ಸ್ಟಾರ್ ಎಂದು ತೋರಿಸಿದರು. ಅದನ್ನು ಅಲ್ಲಗಳೆಯುವಂತಿಲ್ಲ ”ಎಂದು ನೀಲ್ ಹೇಳಿದರು.

“ಸಿನಿಮಾ ಸಿದ್ಧವಾದ ನಂತರ ಮುಂದೆ ಏನಾಗುತ್ತದೆ ಎಂಬ ಲಾಜಿಸ್ಟಿಕ್ಸ್‌ನಲ್ಲಿ ನಾನು ತೊಡಗಿಸಿಕೊಳ್ಳುವುದಿಲ್ಲ. ನಾನು ನಿರ್ದಿಷ್ಟ ಬಜೆಟ್‌ನಲ್ಲಿ ಸಿನಿಮಾವನ್ನು ಮಾಡಬೇಕು ಮತ್ತು ಅವರು ಬಿಡುಗಡೆ ಮಾಡಲು ಬಯಸುವ ಸಮಯದಲ್ಲಿ ನಾನು ಸಿನಿಮಾವನ್ನು ಅವರಿಗೆ ನೀಡಬೇಕುʼʼ ಎಂದರು. ʻಜನರು ಯಾವಾಗಲೂ ಯಾವುದೇ ಟ್ರೈಲರ್‌ ಅಥವಾ ಟೀಸರ್‌ನಲ್ಲಿ ಅತ್ಯಂತ ಮಾನವೀಯ ವಿಷಯವನ್ನು ನೋಡಲು ಬಯಸುತ್ತಾರೆ. ಈ ರೀತಿಯ ಅಂಶಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲು ಪ್ರಯತ್ನಿಸುತ್ತೇವೆʼʼಎಂದರು.

ಇದನ್ನೂ ಓದಿ: Salaar Movie: ʻಸಲಾರ್‌ʼ ಫಸ್ಟ್‌ ಸಾಂಗ್‌ ಔಟ್‌; ಗೆಳೆತನ ಸಂಭ್ರಮಿಸುವ ಹೊತ್ತಿದು!

ʼಸಲಾರ್‌ʼ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಡಿಸೆಂಬರ್ 15ರಂದು ಶುರುವಾಗಿತ್ತು. ಪ್ರಭಾಸ್‌ ಚಿತ್ರ ತನ್ನ ಆರಂಭಿಕ ದಿನದಂದು 5.99 ಕೋಟಿ ರೂ. ಗಳಿಸಿದೆ. ಸಲಾರ್‌ʼ ಚಿತ್ರದ ಟಿಕೆಟ್ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ಲಭ್ಯವಿದೆ. ಪ್ರಶಾಂತ್‌ ನೀಲ್‌ ʼಸಲಾರ್‌ʼ ಚಿತ್ರವನ್ನು ನಿರ್ದೇಶಿಸಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೆ ಸತತ ಸೋಲುಗಳಿಂದ ಕಂಗೆಟ್ಟಿರುವ ಪ್ರಭಾಸ್‌ ವೃತ್ತಿ ಜೀವನಕ್ಕೆ ಇದು ತಿರುವು ನೀಡಲಿದೆ ಎಂದೇ ಹೇಳಲಾಗುತ್ತಿದೆ. ಪೃಥ್ವಿರಾಜ್‌, ಶ್ರುತಿ ಹಾಸನ್‌ ಮತ್ತತರರು ಮುಖ್ಯ ಪಾತ್ರದಲ್ಲಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Kajal Aggarwal: ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

VISTARANEWS.COM


on

Kajal Aggarwal Kannappa Movie Entry
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ʻಕಣ್ಣಪ್ಪʼ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೊಬ್ಬರು ಸ್ಟಾರ್‌ ನಟಿ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್! ವಿಷ್ಣು ಮಂಚು ಮತ್ತು ಕಾಜಲ್‌ ಅಗರ್‌ವಾಲ್‌ (Kajal Aggarwal) ಈ ಹಿಂದೆ ತೆಲುಗಿನ ʻಮೊಸಗಲ್ಲುʼ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ʻಕಣ್ಣಪ್ಪʼ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಇದನ್ನೂ ಓದಿ: Kajal Aggarwal: ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಸೊಂಟ ಮುಟ್ಟಿದ ವ್ಯಕ್ತಿ: ವಿಡಿಯೊ ವೈರಲ್‌!


ಕಣ್ಣಪ್ಪ’ ಸಿನಿಮಾ ವ್ಯಕ್ತಿಯ ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುವ ಸಿನಿಮಾ ಆಗಿದೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರವು ಶಿವನ ಭಕ್ತನಾಗಿದ್ದ ಭಕ್ತ ಕಣ್ಣಪ್ಪನ ಜೀವನವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

Continue Reading

South Cinema

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Pavithra Jayaram: ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

VISTARANEWS.COM


on

Pavithra Jayaram Last Instagram post to chandrakanth
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ, ಚಂದ್ರಕಾಂತ್‌ ಅವರು ಪವಿತ್ರ ಜಯರಾಮ್ ಜತೆ ರೀಲ್ಸ್‌ ಮಾಡಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ.

ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ನಟ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಇದೀ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Continue Reading

ಕಾಲಿವುಡ್

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

Kanguva Film: ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು. ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ.

VISTARANEWS.COM


on

Kanguva Film Suriya-Bobby Deol's war scene with 10,000 people
Koo

ಬೆಂಗಳೂರು: ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ʻʻಗ್ರೀನ್‌ ಸ್ಟುಡಿಯೋ , ನಿರ್ದೇಶಕ ಶಿವ ಮತ್ತು ಇಡೀ ತಂಡ ಈ ದೃಶ್ಯಕ್ಕೆ ನ್ಯಾಯ ಸಲ್ಲಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಸೂರ್ಯ ಶಿವಕುಮಾರ್, ಬಾಬಿ ಡಿಯೋಲ್ ಮತ್ತು 10,000ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ದೊಡ್ಡ ಯುದ್ಧದ ದೃಶ್ಯವನ್ನು ನಿರ್ದೇಶಕರು ಚೆನ್ನಾಗಿ ನಿಭಾಯಿಸಿದ್ದಾರೆʼʼಎನ್ನಲಾಗಿದೆ. ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ಟೀಸರ್‌ನಲ್ಲಿ ಏನಿತ್ತು?

ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು.

ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ.

38 ಭಾಷೆಗಳಲ್ಲಿ ಕಂಗುವ ಬಿಡುಗಡೆಗೆ ಪ್ಲ್ಯಾನ್

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Kannada New Movie : “ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ.

VISTARANEWS.COM


on

Kannada New Movie powder Teaser Out
Koo

ಬೆಂಗಳೂರು: ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ (Kannada New Movie) ಪಿಕ್ಚರ್ಸ್‌ನ ಚೊಚ್ಚಲ ಸಹಯೋಗ ಆಗಸ್ಟ್‌ ತಿಂಗಳಲ್ಲಿ ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಘೋಷಿಸಿದ ಮೊದಲ ಚಿತ್ರವಾದ “ಪೌಡರ್”‌ ಇದೀಗ ಟೀಸರ್‌ ಬಿಡುಗಡೆ ಮಾಡಿದೆ.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್”‌ ಹಿಂದಿನ “ಪವರ್”‌ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ 12 ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್‌ ಮೂಲಕ “ಪೌಡರ್”‌ ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

“ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ. ಇನ್ನು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಹಲವಾರು ವೆಬ್‌ ಸೀರೀಸ್‌ ಗಳ ಮೂಲಕ ತನ್ನದೇ ಛಾಪನ್ನು ಮೂಡಿಸಿರುವ ಸಂಸ್ಥೆಯಾಗಿದ್ದು, ಇವರಿಬ್ಬರ ಸಹಯೋಗದಲ್ಲಿ ಮೂಡಿ ಬಂದಿರುವ “ಪೌಡರ್”‌ ಬಹುನಿರೀಕ್ಷಿತ ಚಿತ್ರವಾಗಿದೆ.

ಇದನ್ನೂ ಓದಿ: Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

ಕೆ.ಆರ್‌.ಜಿ ಸ್ಟೂಡಿಯೋಸ್‌ನ ಮಾಲಿಕ ಕಾರ್ತಿಕ್‌ ಗೌಡ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ನ ಮಾಲಿಕ ಅರುನಭ್‌ ಕುಮಾರ್‌ ಮಾತನಾಡಿ, “ಯುವಕರಿಗೆ, ಸಿನಿ ಪ್ರೇಕ್ಷಕರಿಗೆ ಹೊಸ ರೀತಿಯ ಕಥೆಗಳನ್ನು, ವಿಭಿನ್ನ ಕಥಾ ಹಂದರವನ್ನು ಹೊಂದಿರುವ ಚಿತ್ರಗಳನ್ನು ನೀಡುವುದು ನಮ್ಮ ಮುಖ್ಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ “ಪೌಡರ್”‌ ನಮ್ಮ ಸಹಯೋಗದ ಚೊಚ್ಚಲ ಪ್ರಯತ್ನ. ʼಮಡ್ಗಾನ್‌ ಎಕ್ಸ್‌ ಪ್ರೆಸ್‌ʼ , ʼಫುಕ್ರೇ” ,ʼಗೋ ಗೋವಾ ಗಾನ್‌ʼ, ʼಡೆಲ್ಲಿ ಬೆಲ್ಲಿʼ ನಂತಹ ಹಾಸ್ಯ ಚಿತ್ರಗಳ ಅಭಿಮಾನಿಗಳಾಗಿ ಕನ್ನಡದಲ್ಲಿ ಅಂತಹದ್ದೇ ನಗೆ ಚಟಾಕಿಯನ್ನು ಹತ್ತಿಸುವ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ನಂಬಿದ್ದೇವೆ. ಚಿತ್ರವನ್ನು ನೋಡಿ ಪ್ರೇಕ್ಷಕರು ತಮ್ಮ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ ಎಂಬ ಭರವಸೆ ನಮಗಿದೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಇನ್ನಷ್ಟು ವಿಭಿನ್ನ ಕಥೆಗಳನ್ನು ಈ ಸಹಯೋಗದ ಮೂಲಕ ಮುಂದಿಡಲು ಬಯಸುತ್ತೇವೆʼʼಎಂದರು.

ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಕುರಿತು

ಸಂಸ್ಥೆಯ ಸಂಸ್ಥಾಪಕ ಅರುನಭ್‌ ಕುಮಾರ್‌ ಸಾರಥ್ಯದಲ್ಲಿ, ಆರಂಭದ ದಿನದಿಂದಲೂ, ಉತ್ತಮ ಗುಣ ಮಟ್ಟದ ಕಥೆಗಳ ಮೂಲಕ ಟಿ.ವಿ.ಎಫ್‌ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದೆ. ತನ್ನ 1೦ ವರ್ಷಗಳ ಪಯಣದಲ್ಲಿ, ಹಲವಾರು “ಸ್ಟೀರಿಯೋ ಟೈಪ್”ಗಳನ್ನು ಭೇದಿಸಿದೆ. “ದಿ ವೈರಲ್‌ ಫೀವರ್” ಎಂಬ ಶೀರ್ಷಿಕೆಯೊಂದಿಗೆ ಸಾವಿರಾರು ಪ್ರೇಕ್ಷಕರ ಮನಮುಟ್ಟಿದೆ. ಈ ನಡುವೆ ಹಲವಾರು ನಿರ್ಮಾಣ ಸಂಸ್ಥೆಗಳು ಉಗಮವಾಗಿದ್ದರೂ, ಟಿ.ವಿ.ಎಫ್‌ ವೆಬ್‌ ಕಂಟೆಂಟ್‌ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿದೆ.

ಕೆ.ಆರ್.ಜಿ ಸ್ಟೂಡಿಯೋಸ್‌ ಕುರಿತು

ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಸಾರಥ್ಯದಲ್ಲಿ 7 ವರ್ಷಗಳ ಹಿಂದೆ ಆರಂಭಗೊಂಡ ಈ ಸಂಸ್ಥೆ ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ಕೊಡುಗೆಯಾಗಿ ನೀಡುತ್ತಾ ಬಂದಿದೆ. ತನ್ನ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಹಾಗೂ ಸಿನಿ ಪ್ರೇಕ್ಷಕರ ಮನದಲ್ಲಿ ಮನೆ ಮಾಡಿದೆ, ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ಇಂತಹ ಅರ್ಥಪೂರ್ಣ ಸಹಯೋಗಗಳ ಮೂಲಕ ಕನ್ನಡ ಚಿತ್ರರಂಗವನ್ನು ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ.

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ5 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ19 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ23 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್25 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ39 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ39 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ48 mins ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ56 mins ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ1 hour ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ17 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌