IPL 2024: ಪ್ರಮಾದದಿಂದ ಪಂಜಾಬ್‌ ಕಿಂಗ್ಸ್‌ ತಂಡ ಸೇರಿದ ಶಶಾಂಕ್‌ ಸಿಂಗ್; ಹೇಗಾಯ್ತು? - Vistara News

ಕ್ರಿಕೆಟ್

IPL 2024: ಪ್ರಮಾದದಿಂದ ಪಂಜಾಬ್‌ ಕಿಂಗ್ಸ್‌ ತಂಡ ಸೇರಿದ ಶಶಾಂಕ್‌ ಸಿಂಗ್; ಹೇಗಾಯ್ತು?

ಐಪಿಎಲ್‌ ಹರಾಜಿನ (IPL auction 2024, IPL 2024) ಸಂದರ್ಭದ ಗೊಂದಲಕ್ಕೆ ಕಾರಣ ಶಶಾಂಕ್‌ ಸಿಂಗ್ (Shashank Singh) ಎಂಬ ಹೆಸರಿನ ಇಬ್ಬರು ಇದ್ದುದು ಎಂದು ಭಾವಿಸಲಾಗಿದೆ. ಇನ್ನೊಬ್ಬ ಶಶಾಂಕ್‌ ಸಿಂಗ್‌ ಹೊಸ ಆಟಗಾರ.

VISTARANEWS.COM


on

shashank singh preity zinta
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ತನಗೆ ಬೇಕಿಲ್ಲದ ಆಟಗಾರನೊಬ್ಬನನ್ನು ಐಪಿಎಲ್‌ ಹರಾಜಿನಲ್ಲಿ (IPL auction 2024, IPL 2024) ಪಂಜಾಬ್‌ ಕಿಂಗ್ಸ್‌ (PBKS, Punjab Kings) ತಂಡ ಪಡೆದ ವಿಲಕ್ಷಣ ಘಟನೆ ಹರಾಜು ಪ್ರಕ್ರಿಯೆಯ ಸಮಯದಲ್ಲಿ ನಡೆದಿದೆ.

ನಿನ್ನೆ ನಡೆದ ಐಪಿಎಲ್‌ ಆಟಗಾರರ ಹರಾಜಿನ ಸಂದರ್ಭದಲ್ಲಿ ಇದು ನಡೆಯಿತು. ಹರಾಜು ಪ್ರಕ್ರಿಯೆ ಬಿಸಿಯೇರಿದ ಸಂದರ್ಭದಲ್ಲಿ PBKS ಸೂಕ್ತ ಆಟಗಾರರಿಗಾಗಿ ತಡಕಾಡುತ್ತಿತ್ತು. ಅಶುತೋಷ್ ಶರ್ಮಾ ಮತ್ತು ವಿಶ್ವನಾಥ್ ಪ್ರತಾಪ್ ಸಿಂಗ್ ಅವರನ್ನು ಮೂಲ ಬೆಲೆ ₹20 ಲಕ್ಷಕ್ಕೆ ತಂಡ ಪಡೆಯಿತು. ನಂತರ ಶಶಾಂಕ್ ಸಿಂಗ್‌ ಅವರ ಸರದಿ ಬಂದಿತು.

PBKS ಸಹ ಮಾಲೀಕರಾದ ಪ್ರೀತಿ ಜಿಂಟಾ ತನ್ನ ತಂಡದ ಇತರ ಸದಸ್ಯರೊಂದಿಗೆ ಸಂಕ್ಷಿಪ್ತ ಚರ್ಚೆಯ ನಂತರ ಪ್ಯಾಡಲ್ ಅನ್ನು ಎತ್ತಿದರು. ಆರಂಭಿಕ ಬಿಡ್ ಸ್ವೀಕರಿಸಿದ ನಂತರ, ಹರಾಜುದಾರರಾದ ಮಲ್ಲಿಕಾ ಸಾಗರ್ ಅವರು ವಾಡಿಕೆಯ ವಿಧಾನವನ್ನು ಅನುಸರಿಸಿದರು. ಶಶಾಂಕ್‌ಗಾಗಿ ಹರಾಜು ಮೊತ್ತ ಇನ್ನಷ್ಟು ಎತ್ತರಿಸಲು ಬೇರೆ ಯಾವುದೇ ತಂಡ ಮುಂದಾಗಲಿಲ್ಲ. ಹೀಗಾಗಿ ಕೊನೆಯ ಸೂಚನೆ ನೀಡಿ ಶಶಾಂಕ್‌ ಖರೀದಿಯನ್ನು PBKSಗೆ ಹರಾಜುಗಾರ್ತಿ ಮಲ್ಲಿಕಾ ಸಾಗರ್‌ ಖಚಿತಪಡಿಸಿ ಸುತ್ತಿಗೆ ಬಡಿದರು.

ಇದಾಗಿ ನಂತರದ ಆಟಗಾರ ತನಯ್ ತ್ಯಾಗರಾಜನ್ ಕಡೆಗೆ ಹರಾಜುದಾರರು ಮುಂದುವರಿದರು. ಆ ಕ್ಷಣದಲ್ಲಿ ಗೊಂದಲಕ್ಕೊಳಗಾಗಿದ್ದ PBSK ಸಹ-ಮಾಲೀಕ ನೆಸ್ ವಾಡಿಯಾ, ಮುಖ್ಯ ಕೋಚ್ ಟ್ರೆವರ್ ಬೇಲಿಸ್ ಮತ್ತಿತರರು ತಮ್ಮ ತಮ್ಮಲ್ಲೇ ವಾಗ್ವಾದ ನಡೆಸಿ ಶಶಾಂಕ್‌ ಸಿಂಗ್‌ ತಮಗೆ ಬೇಡವೆಂದು ಸೂಚಿಸಿದರು.

“ನಿಮಗೆ ಆಟಗಾರ ಬೇಡವೇ? ಆದರೆ ಸುತ್ತಿಗೆ ಇಳಿದಿದೆ. ಆಟಗಾರನ ಸಂಖ್ಯೆ 236 ಮತ್ತು 237 ಇಬ್ಬರೂ ನಿಮ್ಮ ಬಳಿಗೆ ಹೋಗಿದ್ದಾರೆ” ಎಂದು ಮಲ್ಲಿಕಾ ಹೇಳಿದರು. ತಪ್ಪಾಗಿ ಶಶಾಂಕ್‌ಗೆ ಹರಾಜು ಹಾಕಿದೆವು ಎಂದು ವಾಡಿಯಾ ಹರಾಜುದಾರರಿಗೆ ತಿಳಿಸಿದರು. ಆದರೆ ಮಲ್ಲಿಕಾ ನಿರ್ಧಾರ ಬದಲಿಸಲಿಲ್ಲ. ನಿಯಮದ ಪ್ರಕಾರ ಹರಾಜು ಕೂಗುವಿಕೆ ಅಂತಿಮಗೊಂಡು ಸುತ್ತಿಗೆ ಇಳಿದ ಬಳಿಕ ಖರೀದಿಯನ್ನು ಮರಳಿಸುವಂತಿಲ್ಲ. ಹೀಗಾಗಿ ಶಶಾಂಕ್‌ ಸಿಂಗ್‌ ಪಂಜಾಬ್‌ ಕಿಂಗ್ಸ್‌ ತಂಡ ಸೇರಿದರು.

ಬಹುಶಃ ಈ ಗೊಂದಲಕ್ಕೆ ಕಾರಣ ಶಶಾಂಕ್‌ ಸಿಂಗ್ ಎಂಬ ಹೆಸರಿನ ಇಬ್ಬರು ಇದ್ದುದು ಎಂದು ಭಾವಿಸಲಾಗಿದೆ. ಇನ್ನೊಬ್ಬ ಶಶಾಂಕ್‌ ಸಿಂಗ್‌ ಹೊಸ ಆಟಗಾರ. ಈಗ ಪಂಜಾಬ್‌ ಕಿಂಗ್ಸ್‌ ಖರೀದಿಸಿರುವ ಶಶಾಂಕ್‌ ಸಿಂಗ್‌ (32) ಈಗಾಗಲೇ ಐಪಿಎಲ್‌ನ ಮೂರು ಸೀಸನ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಛತ್ತೀಸ್‌ಘಡ ಮೂಲದ ಇವರು ಡೆಲ್ಲಿ ಕ್ಯಾಪಿಟಲ್ಸ್‌, ಮುಂಬಯಿ ಇಂಡಿಯನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳ ಪರವಾಗಿ ಆಡಿದ್ದಾರೆ. 10 ಪಂದ್ಯಗಳನ್ನು ಆಡಿದ್ದು, ಕೇವಲ 69 ರನ್‌ಗಳನ್ನು ಪಡೆಯಲು ಸಾಧ್ಯವಾಗಿದೆ. ಈತ ಬಲಗೈ ಬ್ಯಾಟ್ಸ್‌ಮನ್‌ ಹಾಗೂ ಸ್ಪಿನ್ನರ್.‌

ಈ ಸಲ ಸಂಭವಿಸಿದ ಹರಾಜು ಪ್ರಮಾದ ಇದೊಂದೇ ಅಲ್ಲ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಸುಮೀತ್‌ ಕುಮಾರ್‌ ಬದಲಿಗೆ ಸುಮೀತ್‌ ವರ್ಮಾಗೆ ಬಿಡ್‌ ಮಾಡಿತ್ತು. ಆದರೆ ಕೂಡಲೇ ತನ್ನ ತಪ್ಪನ್ನು ಅರಿತು, ಸುತ್ತಿಗೆ ಬೀಳುವ ಮೊದಲೇ ಈ ಖರೀದಿಯಿಂದ ತಂಡ ಹಿಂದೆಗೆದುಕೊಂಡಿತು.

ಇದನ್ನೂ ಓದಿ: IPL 2024 Auction : ಆಟಗಾರರನ್ನು ಖರೀದಿಸಿದ ಬಳಿಕ ಆರ್​ಸಿಬಿ ತಂಡ ಈ ರೀತಿ ಇದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KMF T20 World Cup: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಕೆಎಂಎಫ್‌

KMF T20 World Cup: “ನಾವೆಲ್ಲರೂ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ! ನಂದಿನಿ ಲಾಂಛನವು ಸ್ಕಾಟ್ಲೆಂಡ್ ಜರ್ಸಿ ಮತ್ತು ಐರ್ಲೆಂಡ್ ಜರ್ಸಿಯ ಪ್ರಮುಖ ತೋಳಿನ ಮೇಲೆ ಮೊದಲ ಬಾರಿಗೆ ದೊಡ್ಡ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದೆ” ಎಂದು ಕೆಎಂಎಫ್‌ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

KMF T20 World Cup
Koo

ಬೆಂಗಳೂರು: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಕೂಡ ಉಭಯ ತಂಡಗಳು ಈಗಾಗಲೇ ಬಿಡುಗಡೆಗೊಳಿಸಿದೆ. ಇದೀಗ ಕೆಎಂಎಫ್‌ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಉಭಯ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ನಂದಿನಿ ಲೋಗೊ(KMF T20 World Cup) ಇರುವ ಫೋಟೊ ಹಂಚಿಕೊಂಡಿದೆ.

“ನಾವೆಲ್ಲರೂ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ! ನಂದಿನಿ ಲಾಂಛನವು ಸ್ಕಾಟ್ಲೆಂಡ್ ಜರ್ಸಿ ಮತ್ತು ಐರ್ಲೆಂಡ್ ಜರ್ಸಿಯ ಪ್ರಮುಖ ತೋಳಿನ ಮೇಲೆ ಮೊದಲ ಬಾರಿಗೆ ದೊಡ್ಡ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದೆ” ಎಂದು ಕೆಎಂಎಫ್‌ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದೆ.

ನಂದಿನಿ ಹೆಸರಿನಲ್ಲಿ ಡೈರಿ ಉತ್ಪನ್ನ ಮಾರಾಟ ಮಾಡುತ್ತಿರುವ ಕೆಎಂಎಫ್‌ ವಿಶ್ವಕಪ್​ನಂತ ಟೂರ್ನಿಯಲ್ಲಿ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಮಹತ್ವದ ಹೆಜ್ಜೆಯಾಗಲಿದೆ ಜತೆಗೆ ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ದೇಶೀಯ ಮಟ್ಟದ ಉತ್ಪನ್ನವೊಂದು ವಿದೇಶಿ ಮಟ್ಟದಲ್ಲಿಯೂ ಪರಿಚಿತಗೊಳ್ಳಲಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ.

ಜೂನ್​ 4ರಂದು ಸ್ಕಾಟ್ಲೆಂಡ್ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇಂಗ್ಲೆಂಡ್​ ಎದುರಾಳಿ. ಐರ್ಲೆಂಡ್​ ಜೂನ್​ 5ರಂದು ಭಾರತ ವಿರುದ್ಧ ಆಡಲಿದೆ. ಈ ವೇಳೆ ಆಟಗಾರರ ಜೆರ್ಸಿಯಲ್ಲಿ ನಂದನಿ ಲೋಗ ರಾರಾಜಿಸಲಿದೆ. ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆ.

ಇದನ್ನೂ ಓದಿ KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

ವಿರೋಧ ವ್ಯಕ್ತಪಡಿಸಿದ್ದ ಮೋಹನ್‌ದಾಸ್‌ ಪೈ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ತಯಾರಿ ನಡೆಸುವ ವೇಳೆ ವಿರಾಟ್​ ತಮ್ಮ ಸಿಕ್ಸ್​ ಪ್ಯಾಕ್​ ತೋರಿಸಿ ತಾನೆಷ್ಟು ಬಲಿಷ್ಠ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್: ವಿರಾಟ್‌ ಕೊಹ್ಲಿ(Virat Kohli) ಮೈದಾನದಲ್ಲಿ ಎಷ್ಟು ಬದ್ಧತೆ, ಗಮನ ಕೇಂದ್ರೀಕರಿಸಿ ಅಬ್ಬರಿಸುತ್ತಾರೋ, ಅಷ್ಟೇ ನಿಷ್ಠೆಯಿಂದ ಫಿಟ್‌ನೆಸ್‌ಗೂ(Virat Kohli Fitness) ಆದ್ಯತೆ ಕೊಡುತ್ತಾರೆ. ಅದರಲ್ಲೂ, ಯಾವುದಾದರೂ ಸರಣಿ, ವಿಶ್ವಕಪ್‌ ಆರಂಭವಾಗುವ ಕೆಲ ದಿನಗಳ ಮೊದಲಂತೂ ಅವರು ಹೆಚ್ಚು ಕ್ರಿಕೆಟ್‌ ಪ್ರಾಕ್ಟೀಸ್‌ ಮಾಡುತ್ತಾರೆ. ಹಾಗೆಯೇ, ಜಿಮ್‌ನಲ್ಲಿ ತಾಸುಗಟ್ಟಲೆ ವರ್ಕೌಟ್‌ ಮಾಡುವ ಮೂಲಕ ಹೆಚ್ಚು ಫಿಟ್‌ ಆಗಿರಲು, ಮೈದಾನದಲ್ಲಿ ಮಿಂಚಲು ಸಿದ್ಧರಾಗುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಅಮೆರಿಕ ಮತ್ತು ವೆಸ್ಟ್​ ಇಂಡಿಸ್​ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೂ(T20 World Cup 2024) ಮುನ್ನ ಕೊಹ್ಲಿ ಸಿಕ್ಸ್​ ಪ್ಯಾಕ್(Virat Kohli Six-Pack)​ ತೋರಿಸಿದ್ದಾರೆ.

ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ತಯಾರಿ ನಡೆಸುವ ವೇಳೆ ವಿರಾಟ್​ ತಮ್ಮ ಸಿಕ್ಸ್​ ಪ್ಯಾಕ್​ ತೋರಿಸಿ ತಾನೆಷ್ಟು ಬಲಿಷ್ಠ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಿನ್ನೆ(ಶನಿವಾರ) ನಡೆದಿದ್ದ ಅಭ್ಯಾಸ ಪಂದ್ಯ ಆಡಿರಲಿಲ್ಲ. ವಿಶ್ರಾಂತಿ ಪಡೆದಿದ್ದರು. ಅಭ್ಯಾಸದ ವೇಳೆ ನೃತ್ಯವೊಂದನ್ನು ಕೂಡ ಮಾಡಿ ಗಮನಸೆಳೆದರು. ಕೊಹ್ಲಿಗೆ ಡ್ಯಾನ್ಸ್​ ಎಂದರೆ ಅಚ್ಚುಮೆಚ್ಚು. ಪಂದ್ಯದ ವೇಳೆಯೂ ಅವರು ಹಲವು ಬಾರಿ ಡ್ಯಾನ್ಸ್​ ಮಾಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಹಲವರಿಗೆ ಸ್ಫೂರ್ತಿ

ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ ಅವರು ವಿಶ್ವ ಕ್ರಿಕೆಟ್​ನ ಅತ್ಯಂತ ಫಿಟ್​ ಆಗಿರುವ ಕ್ರಿಕೆಟಿಗ ಅವರ ಫಿಟ್​ನೆಸ್​ ಬಗ್ಗೆ ಬದ್ಧ ವೈರಿ ಪಾಕ್​ ತಂಡದ ಆಟಗಾರರು ಸೇರಿ ವಿಶ್ವದ ಅನೇಕರು ಸಲಾಂ ಹೊಡೆದಿದ್ದಾರೆ. ಅದೆಷ್ಟೋ ಕ್ರಿಕೆಟ್‌ ಆಟಗಾರರಿಗೆ ಅವರು ಫಿಟ್‌ನೆಸ್‌ ವಿಚಾರದಲ್ಲಿಯೂ ಸ್ಫೂರ್ತಿಯಾಗಿದ್ದಾರೆ. ಇತರ ಆಟಗಾರರಂತೆ ವಿರಾಟ್ ಕೊಹ್ಲಿ ಗಾಯಗೊಂಡು ತಂಡದಿಂದ ಹೊರಗುಳಿದ ನಿದರ್ಶನ ಇದುವರೆಗೂ ಕಂಡುಬಂದಿಲ್ಲ. ಕ್ರಿಕೆಟ್​ ಆಡಲು ಆರಂಭಿಸಿದ ದಿನದಿಂದಲೂ ಕೊಹ್ಲಿ ತಮ್ಮ ಫಿಟ್​ನೆಸ್​ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಂಡು ಕ್ರಿಕೆಟ್​ನಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ(Virat Kohli) ಅವರು ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾನುವಾರ ಕೊಹ್ಲಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಮೂಲಕ ವೃತ್ತಿಜೀವನದಲ್ಲಿ ಮತ್ತೊಂದು ಬೃಹತ್ ಉತ್ತುಂಗಕ್ಕೆ ಏರಿದ್ದಾರೆ. ಟಿ20 ವಿಶ್ವಕಪ್​ ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟ್ರೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು. ಏಷ್ಯಾ ಕಪ್ 2023 ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿರ್ಣಾಯಕ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 94 ಎಸೆತಗಳಲ್ಲಿ ಅಜೇಯ 122* ರನ್ ಗಳಿಸಿದ್ದರು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್​ ಆಡಲು ಸಜ್ಜಾಗಿದ್ದಾರೆ.

Continue Reading

ಕ್ರೀಡೆ

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

Venkatesh Iyer Marriage: ಕೆಕೆಆರ್​ ತಂಡದ ವೆಂಕಟೇಶ್​ ಅಯ್ಯರ್​(Venkatesh Iyer Marriage) ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್(Shruti Raghunathan) ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದ್ದಾರೆ.

VISTARANEWS.COM


on

Venkatesh Iyer Marriage
Koo

ಬೆಂಗಳೂರು​: ಟೀಮ್​ ಇಂಡಿಯಾದ ಕ್ರಿಕೆಟಿಗ, ಕೆಕೆಆರ್​ ತಂಡದ ಸೂಪರ್​ ಸ್ಟಾರ್​ ವೆಂಕಟೇಶ್​ ಅಯ್ಯರ್​(Venkatesh Iyer Marriage) ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್(Shruti Raghunathan) ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು. ಭಾನುವಾರ ಈ ಜೋಡಿಯ ವಿವಾಹ ಸಂಪ್ರದಾಯಬದ್ಧವಾಗಿ ನೆರವೇರಿತು. ಮದುವೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಕೆಕೆಆರ್​ ಫ್ರಾಂಚೈಸಿ ಮತ್ತು ತಂಡದ ಸಹ ಆಟಗಾರರು ಸೇರು ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಈ ಜೋಡಿಗೆ ಶುಭ ಹಾರೈಸಿದ್ದಾರೆ.

ಕಳೆದ ವರ್ಷ ನವೆಂಬರ್ 21, 2023ರಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಸಪ್ತಪದಿ ತುಳಿದಿದ್ದಾರೆ. ವೆಂಕಟೇಶ್​ ಅಯ್ಯರ್ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಕೆಕೆಆರ್ ತಂಡದ ಸದ್ಯನಾಗಿದ್ದಾರೆ. ಈ ಬಾರಿ 14 ಪಂದ್ಯಗಳನ್ನಾಡಿ 370 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ವರದಿಗಳ ಪ್ರಕಾರ ಶ್ರುತಿ ಅವರು ಪಿಎಸ್​ಜಿ ಕಾಲೇಜ್ ಆಫ್ ಆರ್ಟ್ಸ್ ಆ್ಯಂಡ್​ ಸೈನ್ಸ್‌ನಿಂದ ಬಿಕಾಂ ಪದವಿ ಪೂರ್ಣಗೊಳಿಸಿದ್ದಾರೆ. ಭಾರತದ NIFTನಿಂದ ಫ್ಯಾಷನ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿರುವ ಲೈಫ್‌ಸ್ಟೈಲ್ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮರ್ಚಂಡೈಸ್ ಪ್ಲಾನರ್ ಆಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

29 ವರ್ಷದ ವೆಂಕಟೇಶ್​ ಅಯ್ಯರ್​ ಅವರು ಭಾರತ ಪರ 2 ಏಕದಿನ, 9 ಟಿ20 ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 24 ಮತ್ತು ಟಿ20ಯಲ್ಲಿ 133 ರನ್​ ಬಾರಿಸಿದ್ದಾರೆ. ಐಪಿಎಲ್​ನಲ್ಲಿ 50 ಪಂದ್ಯಗಳನ್ನು ಆಡಿ 1326 ರನ್​ ಗಳಿಸಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಐಪಿಎಲ್​ನಲ್ಲಿ ಸಿಕ್ಕ ಯಶಸ್ಸು ಅವರಿಗೆ ಟೀಮ್​ ಇಂಡಿಯಾ ಪರ ಸಿಗಲಿಲ್ಲ. ಮಧ್ಯಮ ವೇಗಿಯಾಗಿರುವ ವೆಂಕಿ, ಐಪಿಎಲ್​ನಲ್ಲಿ 3, ಭಾರತ ಪರ ಟಿ20ಯಲ್ಲಿ 5 ವಿಕೆಟ್​ ಪಡೆದಿದ್ದಾರೆ.

Continue Reading

ಕ್ರಿಕೆಟ್

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Aaron Jones: 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

VISTARANEWS.COM


on

Aaron Jones
Koo

ನ್ಯೂಯಾರ್ಕ್​: ಕೆನಡಾ(CAN vs USA) ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಮೆರಿಕ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಆರೋನ್ ಜೋನ್ಸ್(Aaron Jones) ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಡಲ್ಲಾಸ್​ನಲ್ಲಿ ನಡೆದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

ಒಟ್ಟು 40 ಎಸೆತ ಎದುರಿಸಿದ ಆರೋನ್ ಜೋನ್ಸ್ ಅಜೇಯ 94 ರನ್​ ಬಾರಿಸಿದರು. ಇದರಲ್ಲಿ 60 ರನ್​ ಕೇವಲ ಸಿಕ್ಸರ್​ ಮೂಲಕವೇ ದಾಖಲಾಯಿತು. ಒಟ್ಟು 10 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿದರು. 10 ಸಿಕ್ಸರ್​ ಬಾರಿಸುವ ಮೂಲಕ ವೆಸ್ಟ್​ ಇಂಡೀಸ್​ನ ಮಾಜಿ ಬ್ಯಾಟರ್​ ಕ್ರಿಸ್​ ಗೇಲ್​ ದಾಖಲೆಯನ್ನು ಸರಿಗಟ್ಟಿದರು. ಕ್ರಿಸ್​ ಗೇಲ್​ 2007ರಲ್ಲಿ ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ​ ವಿರುದ್ಧ 10 ಸಿಕ್ಸರ್​ ಬಾರಿಸಿದ್ದರು. ಈ ದಾಖಲೆಯನ್ನು 17ವರ್ಷಗಳ ಬಳಿಕ ಜೋನ್ಸ್ ಸರಿಗಟ್ಟಿದ್ದಾರೆ. ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ದಾಖಲೆ ಇನ್ನೂ ಕೂಡ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. 2016ರಲ್ಲಿ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಗೇಲ್​ 11 ಸಿಕ್ಸರ್​ ಬಾರಿಸಿದ್ದರು.

ಇದನ್ನೂ ಓದಿ CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರು

ಆಟಗಾರಸಿಕ್ಸರ್​ವಿರುದ್ಧವರ್ಷ
ಕ್ರಿಸ್​ ಗೇಲ್​11ಇಂಗ್ಲೆಂಡ್​2016
ಕ್ರಿಸ್​ ಗೇಲ್​10ದಕ್ಷಿಣ ಆಫ್ರಿಕಾ2007
ಆರೋನ್ ಜೋನ್ಸ್10ಕೆನಡಾ2024
ರೀಲಿ ರೊಸೊ8ಬಾಂಗ್ಲಾದೇಶ2022

ಭರ್ಜರಿ ಗೆಲುವು ಸಾಧಿಸಿದ ಅಮೆರಿಕ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading
Advertisement
Hassan Lok Sabha Constituency
ಪ್ರಮುಖ ಸುದ್ದಿ11 mins ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್11 mins ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ41 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ1 hour ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ1 hour ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ6 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ7 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ8 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌