Actor Vishal: ಯುವತಿ ಜತೆ ವಿಶಾಲ್‌ ಸುತ್ತಾಟ; ಮುಖ ಮುಚ್ಚಿಕೊಂಡು ಓಡಿ ಹೋದ ನಟ! - Vistara News

South Cinema

Actor Vishal: ಯುವತಿ ಜತೆ ವಿಶಾಲ್‌ ಸುತ್ತಾಟ; ಮುಖ ಮುಚ್ಚಿಕೊಂಡು ಓಡಿ ಹೋದ ನಟ!

Actor Vishal: ನ್ಯೂಯಾರ್ಕ್‌ನಲ್ಲಿ ವಿಶಾಲ್‌ ಅವರು ಅಪರಿಚಿತ ಹುಡುಗಿ ಜತೆ ಸುತ್ತಾಡುತ್ತಿದ್ದಾರೆ. ನೀವು ವಿಶಾಲ್ ಅಲ್ವಾ? ಎನ್ನುತ್ತಿದ್ದಂತೆ ಮುಖ ಮುಚ್ಚಿಕೊಂಡು ಓಡಿ ಹೋಗುವಂತಹ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Vishal spotted with woman in New York
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ವಿಶಾಲ್ (Actor Vishal) ಆಗಾಗ ವಿವಾದದ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ವೈಯಕ್ತಿಕ ಜೀವನದ ಬಗ್ಗೆ ಕೂಡ ಟ್ರೋಲಿಗರು ಅವರನ್ನು ಟ್ರೋಲ್‌ ಮಾಡಿದ್ದೂ ಇದೆ. ವಿಶಾಲ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ವಿಶಾಲ್‌ ಅವರ ಮದುವೆ ವಿಚಾರ ಚರ್ಚೆಯಾಗಿತ್ತು. ವರಲಕ್ಷ್ಮಿ ಶರತ್‌ಕುಮಾರ್, ಲಕ್ಷ್ಮಿ ಮೆನನ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲ ನಟಿ ಅಭಿನಯ ಜತೆ ಮದುವೆ ಆಗುತ್ತಾರೆ ಎನ್ನುವ ವದಂತಿಗಳು ಹಬ್ಬಿತ್ತು. ಆದರೀಗ ನ್ಯೂಯಾರ್ಕ್‌ನಲ್ಲಿ ವಿಶಾಲ್‌ ಅವರು ಅಪರಿಚಿತ ಹುಡುಗಿ ಜತೆ ಸುತ್ತಾಡುತ್ತಿದ್ದಾರೆ. ನೀವು ವಿಶಾಲ್ ಅಲ್ವಾ? ಎನ್ನುತ್ತಿದ್ದಂತೆ ಮುಖ ಮುಚ್ಚಿಕೊಂಡು ಓಡಿ ಹೋಗುವಂತಹ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ರೀತಿ ವಿಶಾಲ್ ಅವರು ಓಡಿ ಹೋದ ವಿಡಿಯೊಗೆ ಸಾಕಷ್ಟು ಕಮೆಂಟ್‌ಗಳು ಬಂದಿವೆ. ಕೆಲವರು ಇದು ವಿಶಾಲ್‌ ಅವರ ಮುಂಬರುವ ಚಿತ್ರದ ಪ್ರಚಾರದ ವಿಡಿಯೊ ಇರಬೇಕು ಎಂದು ಕಮೆಂಟ್‌ ಮಾಡಿದ್ದಾರೆ. ಸಾಮಾನ್ಯವಾಗಿ ಬೇಗನೇ ಸ್ಪಷ್ಟನೆ ನೀಡುವ ವಿಶಾಲ್, ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ವಿಡಿಯೊದಲ್ಲಿ, ವಿಶಾಲ್ ಮರೂನ್ ಹೂಡಿ ಮತ್ತು ಜೀನ್ಸ್ ಧರಿಸಿರುವುದನ್ನು ಕಾಣಬಹುದು. ಕೆಲವರು ಇದು ಫೇಕ್ ವಿಡಿಯೊ ಎನ್ನುತ್ತಿದ್ದಾರೆ. ಸಿನಿಮಾ ಪಬ್ಲಿಸಿಟಿಗಾಗಿ ಈ ರೀತಿಯ ವಿಡಿಯೊ ವೈರಲ್ ಮಾಡಿದ್ದಾರೆ ಎನ್ನುವ ಮಾತುಗಳು ಇವೆ.

ಸಿಬಿಎಫ್‍ಸಿ ವಿವಾದ

ನಟ ವಿಶಾಲ್ ಅಭಿನಯದ ಮಾರ್ಕ್ ಆಂಟನಿ (Mark Antony) ಸೆಪ್ಟೆಂಬರ್ 15ರಂದು ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಹಿಂದಿ ಆವೃತ್ತಿಯು ಸೆಪ್ಟೆಂಬರ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಇದಾದ ಬಳಿಕ ನಟ ತಮ್ಮ ತಮಿಳು ಚಿತ್ರದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ನೀಡಲು ಮುಂಬೈ ಸಿಬಿಎಫ್‍ಸಿ ಅಧಿಕಾರಿಗಳು ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದರು.

ಇದನ್ನೂ ಓದಿ: Actor Vishal: ವಿಶಾಲ್‌ ಸಿನಿಮಾಗೆ 6.5 ಲಕ್ಷ ರೂ. ಲಂಚ ಕೇಳಿದ ಸಿಬಿಎಫ್‍ಸಿ; ಮೋದಿಗೆ ನಟ ಮನವಿ ಮಾಡಿದ್ದೇನು?

ಈ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಬರೋಬ್ಬರಿ 6.50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಶಾಲ್ ಹೇಳಿದ್ದರು. ಅಷ್ಟೇ ಅಲ್ಲದೇ ಈ ಬಗ್ಗೆ ಸಾಕ್ಷಿಗಳೂ ಕೂಡ ನನ್ನಲ್ಲಿದೆ ಎಂದು ಹೇಳಿಕೊಂಡಿದ್ದರು. ಮಾರ್ಕ್ ಆಂಟೋನಿ ಸಿನಿಮಾದಲ್ಲಿ ಎಸ್ ಜೆ ಸೂರ್ಯ ಕೂಡ ನಟಿಸಿದ್ದಾರೆ. ಈ ಚಿತ್ರವನ್ನು ಅಧಿಕ್ ರವಿಚಂದ್ರನ್ ನಿರ್ದೇಶಿಸಿದ್ದಾರೆ. ಇದರಲ್ಲಿ ಸುನೀಲ್, ಸೆಲ್ವರಾಘವನ್ ಮತ್ತು ರಿತು ಕೂಡ ನಟಿಸಿದ್ದಾರೆ.ವಿಶಾಲ್‌ ಶೀಘ್ರದಲ್ಲೇ ಹರಿ ನಿರ್ದೇಶನದ ರತ್ನಂ ಎಂಬ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Samarjit Lankesh: ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕಿದರು. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

VISTARANEWS.COM


on

Samarjit Lankesh Love you Samantha Song Teaser
Koo

ಬೆಂಗಳೂರು: ಸಾಂಸ್ಕೃತಿಕ ನಗರಿ (Samarjit Lankesh) ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಕಾರಣ ಈ ಕಾಲೇಜಿನ ಕ್ಲಾಸ್ ರೂಂನಲ್ಲಿ ʻಗೌರಿ’ ಚಿತ್ರತಂಡ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ (Love you Samantha Song Teaser) ಮಾಡಿದೆ. ಕರ್ನಾಟಕದ ಹೆಮ್ಮೆಯ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು.

ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತ ʻಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿದರು.

ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಫಿದಾ ಆಗಿದ್ದಾರೆ. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕಾ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ʻಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿಗಿದೆ.
ʻಲವ್ ಯೂ ಸಮಂತಾ’ಗೆ ಸಾಹಿತ್ಯ ಕವಿರಾಜ್ ಅವರದ್ದಾದರೆ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನವಿದೆ.
ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sreenath Bhasi Movie: ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶೀಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

VISTARANEWS.COM


on

Sreenath Bhasi Movie Shashidhar direction new Movie
Koo

ಬೆಂಗಳೂರು: ʻಮಂಜುಮ್ಮೆಲ್ ಬಾಯ್ಸ್ʼ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ. ವಿಶ್ವಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡುತ್ತಿದ್ದಾರೆ. ಪಾತ್ರಧಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಂಚೂ ಮಾತನಾಡುತ್ತಿದ್ದಾರೆ. ಇದೇ ವೇಳೆ ʻಡಾಟರ್ ಆಫ್ ಪಾರ್ವತಮ್ಮʼ, ವೀರಂ, ʻಶುಗರ್ ಲೆಸ್ʼ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶಿಧರ ಅವರು ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ‌ ಚಿತ್ರವನ್ನ ನಿರ್ದೇಶನ‌ ಮಾಡಲು‌ ಹೊರಟಿದ್ದಾರೆ. ಈ ಮೂಲಕ ಇದು ಶಶಿಧರ ಅವರ ಸಿನಿಜರ್ನಿಯ (Sreenath Bhasi Movie) ಎರಡನೇ ಡೈರೆಕ್ಷನ್‌ನ ಸಿನಿಮಾವಾಗಲಿದೆ.

ಸಿಬಿಲ್ ಸ್ಕೋರ್‌ನಲ್ಲಿ ಶ್ರೀನಾಥ್ ಭಾಸಿ

ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ, ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶಿಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

ಇದನ್ನೂ ಓದಿ: Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

ಈ‌ ಸಿನಿಮಾವನ್ನು ಕನ್ನಡದ ನಿರ್ದೇಶಕರೇ ನಿರ್ದೇಶನ ಮಾಡುತ್ತಿದ್ದು, ಹಾಗೇ ಮಲಯಾಳಂ ಸಿನಿಮಾ ಆಗಿರುವುದರಿಂದ ಈ ಸಿನಿಮಾದಲ್ಲಿ ಟೆಕ್ನಿಶಿಯನ್ಸ್ ಆರ್ಟಿರ್ಸ್ಟ್ ಕನ್ನಡ ಹಾಗೂ ಮಲಯಾಳಂನವರಾಗಿರುತ್ತಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸೋಹನ್ ಸೀನುಲಾಲ್, ದೀಪಕ್ ಪ್ರಿನ್ಸ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ದಿ ಎಮೋಷನ್ಸ್ ಫ್ಯಾಕ್ಟರಿ ಗ್ರೂಪ್(EFG) ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ವಿವೇಕ್ ಶ್ರೀಕಂಠಯ್ಯ ಬಂಡವಾಳ ಹೂಡುತ್ತಿದ್ದಾರೆ. ಕೋ ಪ್ರೊಡ್ಯೂಸರ್ ಆಗಿ ವಿಕ್ರಮ್, ಲೈನ್ ಪ್ರೊಡ್ಯೂಸರ್ ಆಗಿ ದೀಪು ಕರುಣಾಕರಣ್ ಎಕ್ಸೆಕ್ಯೂಟೀವ್ ಪ್ರೊಡ್ಯೂಸರ್ ಆಗಿ ಶಾಜಿ ಫ್ರಾನ್ಸಿಸ್ ಕೈ ಜೋಡಿಸಿದ್ದಾರೆ. ಸಿನಿಮಾದ ಛಾಯಾಗ್ರಹಣ ಪ್ರದೀಪ್ ನಾಯರ್, ಡೈಲಾಗ್ಸ್ ಅರ್ಜುನ್ ಟಿ ಸತ್ಯನ್, ಸೋಬಿನ್ ಕೆ ಸೋಮನ್ ಸಂಕಲನವಿದೆ. ಇನ್ನೂ ಕ್ರಿಯೇಟಿವ್ ಹೆಡ್ ಆಗಿ ಶರತ್ ವಿನಾಯಕ್ ಸಿನಿಮಾಗೆ ಜತೆಯಾಗಿದ್ದಾರೆ.

Continue Reading

ಕಾಲಿವುಡ್

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Karthi next film: ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

VISTARANEWS.COM


on

Karthi next film Suriya to produce Meiyazhagan
Koo

ಬೆಂಗಳೂರು: ಇಂದು ನಟ ಸೂರ್ಯ ಅವರ ಸಹೋದರ ಕಾರ್ತಿ ಜನುಮದಿನ. ನಟ ಸೂರ್ಯ ತನ್ನ ಸಹೋದರ, ನಟ ಕಾರ್ತಿ ಅವರಿಗೆ ಒಂದು ದಿನ ಮುಂಚಿತವಾಗಿ ವಿಶ್‌ ಮಾಡಿದ್ದಾರೆ. ಜತೆಗೆ ಕಾರ್ತಿ ಅವರ ಮುಂಬರುವ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಪ್ರೇಮ್ ಕುಮಾರ್ ನಿರ್ದೇಶಿಸಿರುವ ಮತ್ತು ಸೂರ್ಯ ಅವರೇ ಸ್ವತಃ ನಿರ್ಮಿಸಿದ, ʻಮೇಯಳಗನ್ʼ (Meiyazhagan ) ಸಿನಿಮಾದಲ್ಲಿ ಕಾರ್ತಿ (Karthi next film) ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿ ಮತ್ತು ಅರವಿಂದ್ ಸ್ವಾಮಿ (Arvind Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪೋಸ್ಟರ್ ಒಂದರಲ್ಲಿ ಅರವಿಂದ್ ಅವರು ಸೈಕಲ್ ಮೇಲೆ ಕುಳಿತಿದ್ದಾರೆ. ಹಿಂದೆ ಕಾರ್ತಿ ಕೂತ್ತಿದ್ದಾರೆ. ಸವಾರಿ ಮಾಡುವಾಗ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಾಣಬಹುದು. ಎರಡನೇ ಪೋಸ್ಟರ್‌ನಲ್ಲಿ, ಕಾರ್ತಿ ಅವರು ಎತ್ತಿನ ಎದುರು ನಿಂತಿದ್ದಾರೆ. ಅವರು ನಗುತ್ತಿದ್ದಾರೆ. ಇದು ಹಳ್ಳಿಯ ಕಥೆ ಇರಬಹುದು ಎನ್ನಲಾಗುತ್ತಿದೆ.

ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಕಂಗುವ ಸಿನಿಮಾ

ಸೂರ್ಯ ಸದ್ಯ ಕಂಗುವ ಸಿನಿಮಾದಲ್ಲಿ ನಟಿಸಲಿದ್ದಾರೆ, ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Kiccha Sudeep: ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Kiccha Sudeep Max cinema Pre climax Photo leak
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ‘ಮ್ಯಾಕ್ಸ್’ ಬಗ್ಗೆ ಏನಾದರೂ ಅಪ್‌ಡೇಟ್ ಕೊಡ್ತಾರ ಎಂದು ಕಿಚ್ಚ ಫ್ಯಾನ್ಸ್‌ ಕಾದಿದ್ದರು. ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ (Max cinema Pre climax) ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ವಾರದ ಹಿಂದೆ ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಆದರೀಗ ಸಿನಿಮಾದ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌ ಆಗಿದೆ ಎಂದು ಹೇಳಲಾಗುತ್ತಿದೆ. ಜಾತ್ರೆಯ ಸೆಟಪ್‌, ಕಾಳೀಮಾತೆಯ ವಿಗ್ರಹ. ಸುದೀಪ್ ಕಾಳಿ ವಿಗ್ರಹ ಮುಂದೆ ನಡೆದು ಬರುತ್ತಿರುವುದನ್ನು ಕಂಡು ಕ್ಲೈಮ್ಯಾಕ್ಸ್ ಅಥವಾ ಇಂಟ್ರವಲ್‌ ವೇಳೆಗೆ ಬರುವ ಸನ್ನಿವೇಶ ಎಂದು ಜನ ಊಹಿಸುತ್ತಿದ್ದಾರೆ.

`ಪ್ರೀ-ಕ್ಲೈಮ್ಯಾಕ್ಸ್ ನಿಮ್ಮೆಲ್ಲರಿಗೂ ಮ್ಯಾಕ್ಸಿಮಮ್‌ ಹಬ್ಬವನ್ನು ಆನಂದಿಸುವಂತೆ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಯಾವ ರೀತಿ ನೋಡಲು ಬಹಳ ದಿನಗಳಿಂದ ಕಾಯುತ್ತಿದ್ದಾರೋ, ನಿಜಕ್ಕೂ ಸುದೀಪ್ ಅಣ್ಣ ಹಾಗೇ ಕಾಣುತ್ತಾರೆʼʼಎಂದು ಪ್ರದೀಪ್‌ ಎಂಬುವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ14 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ26 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ41 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ42 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್49 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್50 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ55 mins ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್59 mins ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌