Anupam Hazra: ದಲಿತ ನಾಯಕನನ್ನು ಉನ್ನತ ಹುದ್ದೆಯಿಂದ ಕೈಬಿಟ್ಟ ಬಿಜೆಪಿ; ಕಾರಣ ಇಲ್ಲಿದೆ - Vistara News

ದೇಶ

Anupam Hazra: ದಲಿತ ನಾಯಕನನ್ನು ಉನ್ನತ ಹುದ್ದೆಯಿಂದ ಕೈಬಿಟ್ಟ ಬಿಜೆಪಿ; ಕಾರಣ ಇಲ್ಲಿದೆ

Anupam Hazra: ತೃಣಮೂಲ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಅನುಪಮ್‌ ಹಜ್ರಾ ಅವರಿಗೆ ಬಿಜೆಪಿಯು ಉನ್ನತ ಹುದ್ದೆ ನೀಡಿತ್ತು. ಈಗ ಏಕಾಏಕಿ ಹುದ್ದೆಯಿಂದ ವಜಾಗೊಳಿಸಿದೆ.

VISTARANEWS.COM


on

Anupam Hazra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುವ ಬಿಜೆಪಿಯು ಪಶ್ಚಿಮ ಬಂಗಾಳದ (West Bengal) ಪ್ರಮುಖ ದಲಿತ ನಾಯಕ ಅನುಪಮ್‌ ಹಜ್ರಾ (Anupam Hazra) ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ (National Secretary) ಹುದ್ದೆಯಿಂದ ವಜಾಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖ ರಣತಂತ್ರಗಾರರೂ ಆದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೋಲ್ಕೊತಾಗೆ ಭೇಟಿ ನೀಡಿದ ದಿನವೇ ಅನುಪಮ್‌ ಹಜ್ರಾ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಜೆ.ಪಿ. ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ. ಅನುಪಮ್‌ ಬಜ್ರಾ ಅವರು ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡಿದ್ದು, ಇದರಿಂದ ಪಕ್ಷದ ಘನತೆಗೆ ಧಕ್ಕೆಯಾಗಿದೆ ಎಂಬುದಾಗಿ ಮುಖಂಡರು ನೀಡಿದ ದೂರಿನ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅನುಪಮ್‌ ಹಜ್ರಾ ವಿವಾದ ಏನು?

ಕಳೆದ ಕೆಲ ತಿಂಗಳಿಂದ ಅನುಪಮ್‌ ಹಜ್ರಾ ಅವರು ನೀಡುತ್ತಿರುವ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿರುವ ಜತೆಗೆ ಪಕ್ಷಕ್ಕೂ ಮುಜುಗರ ತರುತ್ತಿವೆ. ಕಳೆದ ಸೆಪ್ಟೆಂಬರ್‌ನಲ್ಲಿ, “ಟಿಎಂಸಿಯಲ್ಲಿರುವ ಭ್ರಷ್ಟಾಚಾರಿಗಳು ಜಾರಿ ನಿರ್ದೇಶನಾಲಯದ (ED) ನೋಟಿಸ್‌ ನಿರೀಕ್ಷೆಯಲ್ಲಿದ್ದರೆ, ದಾಳಿಯ ಭಯವಿದ್ದರೆ ಬಿಜೆಪಿ ಸೇರ್ಪಡೆಯಾಗಬಹುದು. ಭ್ರಷ್ಟಾಚಾರಿಗಳು ಬಿಜೆಪಿ ಸೇರ್ಪಡೆಯಾಗಬೇಕು ಎಂದಿದ್ದರೆ ನನ್ನನ್ನು ಸಂಪರ್ಕಿಸಿ” ಎಂದು ಬಹಿರಂಗವಾಗಿಯೇ ಹೇಳಿದ್ದು ಬಿಜೆಪಿ ವಿರುದ್ಧ ಪ್ರತಿಕ್ಷಗಳ ಟೀಕೆಗಳಿಗೆ ದಾರಿ ಮಾಡಿಕೊಟ್ಟಿತ್ತು.

“ಬಹಿರಂಗವಾಗಿ ಬಿಜೆಪಿ ಸೇರ್ಪಡೆಗೊಳ್ಳುವ ಕುರಿತು ಮಾತನಾಡಲು ಆಗದಿದ್ದರೆ, ಫೇಸ್‌ಬುಕ್‌ಗೆ ಹೋಗಿ, ನನ್ನ ಪೇಜ್‌ ಮೂಲಕ ಸಂಪರ್ಕಿಸಿ. ನೀವು ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗುವ ಮೂಲಕವೂ ನಿಮ್ಮ ಇಚ್ಛೆಯನ್ನು ವ್ಯಕ್ತಪಡಿಸಬಹುದು” ಎಂದು ಅನುಪಮ್‌ ಹಜ್ರಾ ಹೇಳಿದ್ದರು.

ಇದನ್ನೂ ಓದಿ: Electric Bus : ಶಕ್ತಿ ಯೋಜನೆ ಟೀಕಿಸುವ ಬಿಜೆಪಿಗೆ ಹೆಣ್ಮಕ್ಕಳೇ ಉತ್ತರ ಕೊಡಿ ಎಂದ ಸಿದ್ದರಾಮಯ್ಯ

ಬೋಲ್‌ಪುರ ಲೋಕಸಭೆ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ ಪಡೆದು 2014ರಲ್ಲಿ ಗೆಲುವು ಸಾಧಿಸಿದ್ದ ಅನುಪಮ್‌ ಹಜ್ರಾ ಅವರು ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದರು. ಪ್ರಮುಖ ದಲಿತ ನಾಯಕರಾಗಿರುವ ಅವರಿಗೆ ಪಕ್ಷದಲ್ಲಿ ಹಲವು ಜವಾಬ್ದಾರಿ ನೀಡಲಾಗಿತ್ತು. ಬೋಲ್‌ಪುರ ಸಂಸದರಾಗಿರುವ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಅಲ್ಲದೆ, ಬಿಹಾರದ ಸಹ ಉಸ್ತುವಾರಿಯನ್ನಾಗಿಯೂ ನೇಮಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ದೇಶ

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Mohan Bhagwat: ಮಣಿಪುರ ಹಿಂಸಾಚಾರದ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಮೋಹನ್‌ ಭಾಗವತ್‌ ಮೌನ ಮುರಿದಿದ್ದಾರೆ. ಮಣಿಪುರದಲ್ಲಿ ಆದ್ಯತೆಯ ಮೇರೆಗೆ ಶಾಂತಿಸ್ಥಾಪನೆ ಮಾಡಬೇಕು. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರವನ್ನು ಸಂಪೂರ್ಣವಾಗಿ ತಡೆಯಬೇಕು ಎಂಬುದಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅವರು ಸೂಚನೆ ನೀಡಿದ್ದಾರೆ.

VISTARANEWS.COM


on

Mohan Bhagwat
Koo

ಮುಂಬೈ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಿ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡುವ ಜತೆಗೆ ತಮ್ಮ ಸಂಪುಟದ 71 ಸಚಿವರಿಗೆ ಖಾತೆಗಳನ್ನೂ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ನೂತನ ಸರ್ಕಾರಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಅವರು ಹೊಸ ಸೂಚನೆ ನೀಡಿದ್ದಾರೆ. “ಮಣಿಪುರ ಹಿಂಸಾಚಾರ ನಿಗ್ರಹಿಸುವುದನ್ನು ಆದ್ಯತೆಯಾಗಿ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದ್ದಾರೆ.

ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್‌ ಮಾತನಾಡಿದರು. “ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ಭುಗಿಲೆದ್ದಿದೆ. ಮಣಿಪುರದ ನಾಗರಿಕರು ಶಾಂತಿ ಸ್ಥಾಪನೆಗಾಗಿ ಒಂದು ವರ್ಷದಿಂದ ಕಾಯುತ್ತಿದ್ದಾರೆ. ಹಾಗಾಗಿ, ಮಣಿಪುರದಲ್ಲಿ ಆದ್ಯತೆಯ ಮೇರೆಗೆ ಶಾಂತಿಸ್ಥಾಪನೆ ಮಾಡಬೇಕು. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರವನ್ನು ಸಂಪೂರ್ಣವಾಗಿ ತಡೆಯಬೇಕು” ಎಂಬುದಾಗಿ ಹೇಳಿದರು. ಮಣಿಪುರ ಹಿಂಸಾಚಾರದ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಮೋಹನ್‌ ಭಾಗವತ್‌ ಮೌನ ಮುರಿದಿದ್ದಾರೆ.

“ಭಾರತದ ಚಹರೆ ಈಗ ಬದಲಾಗಿದೆ. ದೇಶವು ಅಭಿವೃದ್ಧಿ ಹೊಂದುತ್ತಿದೆ. ಆರ್ಥಿಕತೆ, ರಕ್ಷಣೆ, ಕ್ರೀಡೆ, ಸಂಸ್ಕೃತಿ ಹಾಗೂ ತಂತ್ರಜ್ಞಾನ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಭಾರತವು ದಾಪುಗಾಲು ಇಡುತ್ತಿದೆ. ಇದರಿಂದ ಜಗತ್ತಿನಾದ್ಯಂತ ಭಾರತದ ಕುರಿತು ಅಭಿಪ್ರಾಯ ಬದಲಾಗಿದೆ. ಇದಾದ ಮಾತ್ರಕ್ಕೆ, ಭಾರತದಲ್ಲಿರುವ ಎಲ್ಲ ಸಮಸ್ಯೆಗಳು ಬಗೆಹರಿದಂತೆ ಆಗುವುದಿಲ್ಲ. ಎಲ್ಲ ಸವಾಲುಗಳನ್ನು ನಾವು ಮೆಟ್ಟಿನಿಂತಂತೆ ಆಗುವುದಿಲ್ಲ. ಮಣಿಪುರ ಹಿಂಸಾಚಾರದಂತಹ ಪ್ರಕರಣಗಳನ್ನು ನಾವು ಮೆಟ್ಟಿ ನಿಲ್ಲಬೇಕಿದೆ” ಎಂದು ಹೇಳಿದರು.

“ಪ್ರಜಾಪ್ರಭುತ್ವ ಗಟ್ಟಿಯಾಗಲು ಚುನಾವಣೆಗಳು ನಿರ್ಣಾಯಕವಾಗುತ್ತವೆ. ಚುನಾವಣೆ ಸ್ಪರ್ಧೆ ಒಂದು ಮುಖವಾದರೆ, ಪ್ರಜಾಪ್ರಭುತ್ವದ ಘನತೆ ಮತ್ತೊಂದು ಮುಖವಾಗಿದೆ. ಹಾಗಾಗಿ, ಚುನಾವಣೆಯನ್ನು ಯುದ್ಧವಾಗಿ ಪರಿಗಣಿಸಬಾರದು. ಸುಳ್ಳುಗಳನ್ನು ಹೇಳಬಾರದು. ಸ್ಪರ್ಧಿಯೊಬ್ಬ ಎದುರಾಳಿ ಕುರಿತು ಟೀಕೆ ಮಾಡಬಹುದು, ವಿಮರ್ಶೆ ಮಾಡಬಹುದು. ಆದರೆ, ಅವು ವೈಯಕ್ತಿಕವಾಗಿರಬಾರದು, ಸಮಾಜಕ್ಕೆ ಹಾನಿ ಮಾಡುವಂತೆ ಇರಬಾರದು. ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಇದೇ ಕಾರಣಕ್ಕೆ ಬಲಿಷ್ಠ ಪ್ರತಿಪಕ್ಷ ಇರಬೇಕು. ಕಳೆದ 10 ವರ್ಷಗಳಲ್ಲಿ ದೇಶವು ಪ್ರಗತಿ ಹೊಂದಿದೆ. ಹಾಗಂತ, ಎಲ್ಲ ಸಮಸ್ಯೆಗಳು ಬಗೆಹರಿದಿಲ್ಲ. ಅವುಗಳ ಕುರಿತು ನೂತನ ಸರ್ಕಾರ ಗಮನ ಹರಿಸಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

Continue Reading

ದೇಶ

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

Modi 3.0 Cabinet: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ ನೀಡಲಾಗಿದೆ? ಯಾರಿಗೆ ಸಂಪುಟ ದರ್ಜೆ? ಯಾರಿಗೆ ರಾಜ್ಯ ಖಾತೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ (Portfolios) ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು

  • ನರೇಂದ್ರ ಮೋದಿ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪರಮಾಣು ಶಕ್ತಿ, ಬಾಹ್ಯಾಕಾಶ, ಪ್ರಮುಖ ನೀತಿ ನಿರೂಪಣೆಗಳು ಹಾಗೂ ಯಾರಿಗೂ ಹಂಚಕೆಯಾಗದ ಖಾತೆಗಳು
  • ಅಮಿತ್ ಶಾ (ಬಿಜೆಪಿ- ಗುಜರಾತ್)- ಗೃಹ ಖಾತೆ
  • ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)- ರಕ್ಷಣಾ ಖಾತೆ
  • ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )-‌ ಕೃಷಿ‌, ಗ್ರಾಮೀಣಾಭಿವೃದ್ಧಿ
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)- ಹಣಕಾಸು, ಕಾರ್ಪೊರೇಟ್‌ ವ್ಯವಹಾರಗಳು
  • ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)- ವಿದೇಶಾಂಗ ವ್ಯವಹಾರಗಳ ಖಾತೆ
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)- ಇಂಧನ‌ ಮತ್ತು ವಸತಿ
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)- ಉಕ್ಕು ಮತ್ತು ಬೃಹತ್‌ ಕೈಗಾರಿಕೆ
  • ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )- ವಾಣಿಜ್ಯ ಮತ್ತು ಕೈಗಾರಿಕೆ
  • ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ): ಶಿಕ್ಷಣ‌
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)- ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)- ಪಂಚಾಯತ್‌ ರಾಜ್‌, ಮೀನುಗಾರಿಕೆ, ಪಶು ಸಂಗೋಪನೆ ಹಾಗೂ ಹೈನುಗಾರಿಕೆ
  • ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ): ಬಂದರು, ಜಲಸಾರಿಗೆ ಮತ್ತು ಜಲಮಾರ್ಗ
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)- ನಾಗರಿಕ ವಿಮಾನಯಾನ
  • ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ): ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ
  • ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)- ಸಾಮಾಜಿಕ ನ್ಯಾಯ
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)- ಬುಡಕಟ್ಟು
  • ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ) -‌ ಜವಳಿ
  • ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ) – ರೈಲ್ವೆ ಮತ್ತು ಮಾಹಿತಿ ಪ್ರಸಾರ, ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ
  • ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)- ಕಮ್ಯುನಿಕೇಷನ್ಸ್‌ ಮತ್ತು ಈಶಾನ್ಯ ಪ್ರದೇಶಾಭಿವೃದ್ಧಿ ಖಾತೆ
  • ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
  • ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ): ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)-ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)-‌ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)- ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ
  • ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌: ಕಾರ್ಮಿಕ ಮತ್ತು ಉದ್ಯೋಗ, ಯುವಜನ ಮತ್ತು ಕ್ರೀಡೆ
  • ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)-‌ ಆಹಾರ ಸಂಸ್ಕರಣೆ
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)-ಜಲಶಕ್ತಿ

ಯಾರಿಗೆ ಯಾವ ಖಾತೆ? ಪಟ್ಟಿ ಇಲ್ಲಿದೆ

ಸ್ವತಂತ್ರ ನಿರ್ವಹಣೆ

  • ಇಂದ್ರಜೀತ್‌ ಸಿಂಗ್‌ (ಬಿಜೆಪಿ-ಹರಿಯಾಣ)-ಸಾಂಖ್ಯಿಕ, ಯೋಜನೆ ಅನುಷ್ಠಾನ, ಯೋಜನೆ ಮತ್ತು ಸಂಸ್ಕೃತಿ
  • ಡಾ.ಜಿತೇಂದ್ರ ಸಿಂಗ್‌ (ಬಿಜೆಪಿ-ಜಮ್ಮು)- ವಿಜ್ಞಾನ ಮತ್ತು ತಂತ್ರಜ್ಞಾನ, ಭೂ ವಿಜ್ಞಾನ, ಪಿಎಂಒ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ, ಬಾಹ್ಯಾಕಾಶ, ಪರಮಾಣು
  • ಅರ್ಜುನ್‌ ರಾಮ್‌ ಮೇಘ್ವಾಲ್‌ (ಬಿಜೆಪಿ-ರಾಜಸ್ಥಾನ)- ಕಾನೂನು ಮತ್ತು ನ್ಯಾಯ
  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿವಸೇನೆ ಏಕನಾಥ್‌ ಶಿಂಧೆ ಬಣದ ಸಂಸದ-ಮಹಾರಾಷ್ಟ್ರ)- ಆಯುಷ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಜಯಂತ್‌ ಚೌಧರಿ (ಆರ್‌ಎಲ್‌ಡಿ-ಉತ್ತರ ಪ್ರದೇಶ)- ಕೌಶಲಾಭಿವೃದ್ಧಿ ಹಾಗೂ ಉದ್ಯಮ, ಶಿಕ್ಷಣ

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ (ಬಿಜೆಪಿ-ಉತ್ತರ ಪ್ರದೇಶ)- ವಾಣಿಜ್ಯ, ಕೈಗಾರಿಕೆ, ವಿದ್ಯುತ್‌ ಮತ್ತು ಮಾಹಿತಿ ತಂತ್ರಜ್ಞಾನ
  • ಶ್ರೀಪಾದ್‌ ನಾಯ್ಕ್ (ಬಿಜೆಪಿ-ಗೋವಾ)- ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ
  • ಪಂಕಜ್‌ ಚೌಧರಿ (ಬಿಜೆಪಿ-ಉತ್ತರ ಪ್ರದೇಶ)-‌ ಹಣಕಾಸು
  • ಕ್ರಿಶನ್‌ ಪಾಲ್‌ (ಬಿಜೆಪಿ-ಹರಿಯಾಣ)- ಸಹಕಾರ
  • ರಾಮ್‌ದಾಸ್‌ ಅಠಾವಳೆ (ಆರ್‌ಪಿಐ-ಮಹಾರಾಷ್ಟ್ರ)- ಸಾಮಾಜಿಕ ನ್ಯಾಯ
  • ರಾಮನಾಥ್‌ ಠಾಕೂರ್‌ (ಜೆಡಿಯು-ಬಿಹಾರ)- ಕೃಷಿ ಮತ್ತು ರೈತರ ಕಲ್ಯಾಣ
  • ನಿತ್ಯಾನಂದ್‌ ರಾಯ್‌ (ಬಿಜೆಪಿ-ಬಿಹಾರ)- ಗೃಹ
  • ಅನುಪ್ರಿಯಾ ಪಟೇಲ್‌ (ಅಪ್ನಾದಳ್‌ (ಎಸ್‌)-ಉತ್ತರ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ
  • ವಿ. ಸೋಮಣ್ಣ (ಬಿಜೆಪಿ-ಕರ್ನಾಟಕ)- ಜಲಶಕ್ತಿ ಹಾಗೂ ರೈಲ್ವೆ
  • ಪೆಮ್ಮಸಾನಿ ಚಂದ್ರಶೇಖರ್‌ (ಟಿಡಿಪಿ-ಆಂಧ್ರಪ್ರದೇಶ)- ಗ್ರಾಮೀಣಾಭಿವೃದ್ಧಿ, ಸಂವಹನ
  • ಎಸ್‌ಪಿ ಸಿಂಗ್‌ ಬಘೇಲ್‌ (ಬಿಜೆಪಿ-ಉತ್ತರ ಪ್ರದೇಶ)- ಮೀನುಗಾರಿಕೆ, ಪಶು ಸಂಗೋಪನೆ, ಪಂಚಾಯತ್‌ ರಾಜ್
  • ಶೋಭಾ ಕರಂದ್ಲಾಜೆ (ಬಿಜೆಪಿ-ಕರ್ನಾಟಕ)-‌ ಎಂಎಸ್‌ಎಂಇ, ಕಾರ್ಮಿಕ ಮತ್ತು ಉದ್ಯೋಗ
  • ಕೀರ್ತಿ ವರ್ಧನ್‌ ಸಿಂಗ್‌ (ಬಿಜೆಪಿ-ಉತ್ತರ ಪ್ರದೇಶ)- ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ, ವಿದೇಶಾಂಗ ಇಲಾಖೆ
  • ಬಿ.ಎಲ್‌.ವರ್ಮಾ (ಬಿಜೆಪಿ-ಉತ್ತರ ಪ್ರದೇಶ)- ಗ್ರಾಹಕ ರಕ್ಷಣೆ, ಆಹಾರ, ನಾಗರಿಕ ಪೂರೈಕೆ, ಸಾಮಾಜಿಕ ನ್ಯಾಯ
  • ಶಂತನು ಠಾಕೂರ್‌ (ಬಿಜೆಪಿ- ಪಶ್ಚಿಮ ಬಂಗಾಳ)- ಬಂದರು, ಜಲಸಾರಿಗೆ ಮತ್ತು ಜಲಮಾರ್ಗ
  • ಸುರೇಶ್‌ ಗೋಪಿ (ಬಿಜೆಪಿ-ಕೇರಳ)- ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಪ್ರವಾಸೋದ್ಯಮ
  • ಡಾ.ಎಲ್‌.ಮುರುಗನ್‌ (ಬಿಜೆಪಿ-ತಮಿಳುನಾಡು)- ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆ
  • ಅಜಯ್‌ ತಮ್ಟಾ (ಬಿಜೆಪಿ-ಉತ್ತರಾಖಂಡ)- ರಸ್ತೆ ಸಾರಿಗೆ ಮತ್ತು ಹೆದ್ದಾರಿ
  • ಬಂಡಿ ಸಂಜಯ್‌ ಕುಮಾರ್‌ (ಬಿಜೆಪಿ-ತೆಲಂಗಾಣ)- ಗೃಹ
  • ಕಮಲೇಶ್‌ ಪಾಸ್ವಾನ್‌ (ಬಿಜೆಪಿ-ಉತ್ತರ ಪ್ರದೇಶ)- ಗ್ರಾಮೀಣಾಭಿವೃದ್ಧಿ
  • ಭಾಗೀರಥ್‌ ಚೌಧರಿ (ಬಿಜೆಪಿ-ರಾಜಸ್ಥಾನ)- ಕೃಷಿ ಮತ್ತು ರೈತರ ಕಲ್ಯಾಣ
  • ಸತೀಶ್‌ ಚಂದ್ರ ದುಬೆ (ಬಿಜೆಪಿ-ಬಿಹಾರ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಸಂಜಯ್‌ ಸೇಠ್‌ (ಬಿಜೆಪಿ-ಜಾರ್ಖಂಡ್)- ರಕ್ಷಣಾ ಖಾತೆ
  • ರವನೀತ್‌ ಸಿಂಗ್‌ ಬಿಟ್ಟು (ಬಿಜೆಪಿ-ಪಂಜಾಬ್)- ಆಹಾರ ಸಂಸ್ಕರಣೆಗಳ ಉದ್ಯಮ ಮತ್ತು ರೈಲ್ವೆ
  • ದುರ್ಗಾದಾಸ್‌ ಉಯಿಕೆ (ಬಿಜೆಪಿ- ಮಧ್ಯಪ್ರದೇಶ)- ಬುಡಕಟ್ಟು ವ್ಯವಹಾರಗಳ ಇಲಾಖೆ
  • ರಕ್ಷಾ ನಿಖಿಲ್‌ ಖಡ್ಸೆ (ಬಿಜೆಪಿ-ಮಹಾರಾಷ್ಟ್ರ)- ಯುವಜನ ಮತ್ತು ಕ್ರೀಡೆ
  • ಸುಕಾಂತ ಮಜುಂದಾರ್‌ (ಬಿಜೆಪಿ-ಪಶ್ಚಿಮ ಬಂಗಾಳ)- ಶಿಕ್ಷಣ ಮತ್ತು ಈಶಾನ್ಯ ಪ್ರದೇಶಗಳ ಅಭಿವೃದ್ಧಿ
  • ಸಾವಿತ್ರಿ ಠಾಕೂರ್‌ (ಬಿಜೆಪಿ-ಮಧ್ಯಪ್ರದೇಶ)- ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)- ವಸತಿ ಮತ್ತು ನಗರಾಭಿವೃದ್ಧಿ
  • ಡಾ.ರಾಜ್‌ಭೂಷಣ್‌ ಚೌಧರಿ (ಬಿಜೆಪಿ-ಬಿಹಾರ)- ಜಲಶಕ್ತಿ
  • ಭೂಪತಿ ರಾಜು ಶ್ರೀನಿವಾಸ್‌ ವರ್ಮಾ (ಬಿಜೆಪಿ-ಆಂಧ್ರಪ್ರದೇಶ)- ಬೃಹತ್‌ ಕೈಗಾರಿಕೆ ಮತ್ತು ಉಕ್ಕು
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)- ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಕಾರ್ಪೊರೇಟ್‌ ವ್ಯವಹಾರಗಳ ಖಾತೆ
  • ನಿಮುಬೆನ್‌ ಬಾಂಭಣಿಯಾ (ಬಿಜೆಪಿ-ಗುಜರಾತ್)- ಗ್ರಾಹಕ ರಕ್ಷಣೆ, ಆಹಾರ ಮತ್ತು ನಾಗರಿಕ ಪೂರೈಕೆ
  • ಮುರಳೀಧರ್‌ ಮೊಹೊಲ್‌ (ಬಿಜೆಪಿ-ಮಹಾರಾಷ್ಟ್ರ)- ಸಹಕಾರ ಮತ್ತು ನಾಗರಿಕ ವಿಮಾನಯಾನ
  • ಜಾರ್ಜ್‌ ಕುರಿಯನ್‌ (ಬಿಜೆಪಿ-ಕೇರಳ)- ಅಲ್ಪಸಂಖ್ಯಾತ ವ್ಯವಹಾರಗಳು, ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ
  • ಪವಿತ್ರ ಮಾರ್ಗರಿಟಾ (ಬಿಜೆಪಿ-ಅಸ್ಸಾಂ)- ವಿದೇಶಾಂಗ ವ್ಯವಹಾರಗಳು ಮತ್ತು ಜವಳಿ

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Continue Reading

ಪ್ರಮುಖ ಸುದ್ದಿ

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Modi 3.0 Cabinet: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು.

VISTARANEWS.COM


on

Modi 3.0 Cabinet
Koo

ನವದೆಹಲಿ: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ (Narendra Modi) ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ (Modi 3.0 Cabinet) ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ತೀರ್ಮಾನ ತೆಗೆದುಕೊಂಡಂತಾಗಿದೆ.

ಏನಿದು ಯೋಜನೆ? ಹೇಗೆ ಅನುಕೂಲ?

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

ಭಾನುವಾರ ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Continue Reading
Advertisement
Yuva Rajkumar
ಪ್ರಮುಖ ಸುದ್ದಿ30 mins ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ48 mins ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು56 mins ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ1 hour ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ2 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ2 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ2 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ4 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ4 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು4 hours ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌