MPhil Degree: ವಿದ್ಯಾರ್ಥಿಗಳೇ… ಎಂಫಿಲ್‌ಗೆ ಯುಜಿಸಿ ಮಾನ್ಯತೆ ಇಲ್ಲ, ಅಡ್ಮಿಶನ್ ಮಾಡಬೇಡಿ! - Vistara News

ದೇಶ

MPhil Degree: ವಿದ್ಯಾರ್ಥಿಗಳೇ… ಎಂಫಿಲ್‌ಗೆ ಯುಜಿಸಿ ಮಾನ್ಯತೆ ಇಲ್ಲ, ಅಡ್ಮಿಶನ್ ಮಾಡಬೇಡಿ!

MPhil Degree: ಕೆಲವು ವಿಶ್ವವಿದ್ಯಾಲಯಗಳು ಎಂಫಿಲ್‌ ಕೋರ್ಸ್‌ಗೆ ಪ್ರವೇಶಾತಿ ಒದಗಿಸುತ್ತಿವೆ. ಈ ಹಿನ್ನೆಲೆಯಲ್ಲಿ ಯುಜಿಸಿ ಎಂಫಿಲ್‌ ಮಾನ್ಯತೆ ಪಡೆದ ಡಿಗ್ರಿ ಅಲ್ಲ ಎಂದು ಹೇಳಿದೆ.

VISTARANEWS.COM


on

Mphil is not recognised degree by ugs, dont get admission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಾಸ್ಟರ್ ಆಫ್ ಫಿಲಾಸಫಿ(Master of Philosophy – MPhil) ಮಾನ್ಯತೆಯನ್ನು ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗವು (University Grants Commission – UGC) ಹಿಂದಕ್ಕೆ ಪಡೆದುಕೊಂಡಿದ್ದು, ಈ ಕುರಿತು ವಿದ್ಯಾರ್ಥಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಎಂಫಿಲ್‌ ಪ್ರವೇಶ ಪಡೆಯಬಾರದು ಎಂದು ಸೂಚಿಸಿದೆ. ಮಾನ್ಯತೆಯನ್ನು ರದ್ದುಗೊಳಿಸಿದ ಬಳಿಕವೂ ಕೆಲವು ವಿಶ್ವವಿದ್ಯಾಲಯಗಳು ಎಂಫಿಲ್‌ಗೆ ಪ್ರವೇಶಾತಿಯನ್ನು ನೀಡುತ್ತಿವೆ. ಈ ಹಿನ್ನೆಲೆಯಲ್ಲಿ ಯುಜಿಸಿ ಎಚ್ಚರಿಕೆಯನ್ನು ನೀಡಿದೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಈ ಹಿಂದೆಯೇ ಎಂಫಿಲ್ ಪದವಿಯನ್ನು ಕಾನೂನುಬಾಹಿರ ಎಂದು ಘೋಷಿಸಿತ್ತು. ಅಲ್ಲದೇ, ಎಂಫಿಲ್ ಕೋರ್ಸ್‌ಗಳನ್ನು ಆಫರ್ ಮಾಡದಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ತಾಕೀತು ಮಾಡಿತ್ತು. ಅದರ ಹೊರತಾಗಿಯೂ ಕೆಲವು ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಎಂಫಿಲ್‌ಗೆ ಪ್ರವೇಶಾತಿಯನ್ನು ನೀಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ 2023-24ರ ಶೈಕ್ಷಣಿಕ ವರ್ಷದ ಎಂಫಿಲ್ ಕೋರ್ಸ್ ಪ್ರವೇಶಾತಿಗಳನ್ನು ಸ್ಥಗಿತಗೊಳಿಸುವಂತೆ ಯುಜಿಸಿ ಸೂಚಿಸಿದೆ.

ಅಧಿಕೃತ ಅಧಿಸೂಚನೆಯಲ್ಲಿ ವಿಶ್ವವಿದ್ಯಾಲಯ ಧನ ಸಾಹಾಯ ಆಯೋಗ, ಕೆಲವು ವಿಶ್ವವಿದ್ಯಾಲಯಗಳು ಎಂಫಿಲ್ (ಮಾಸ್ಟರ್ ಆಫ್ ಫಿಲಾಸಫಿ) ಕಾರ್ಯಕ್ರಮಕ್ಕಾಗಿ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದೆ. ಹಾಗಾಗಿ, ಈ ಕುರಿತು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ, ಪಿಎಫಿ ಡಿಗ್ರಿ ಮಾನ್ಯತೆ ಪಡೆದ ಪದವಿಯಲ್ಲ ಎಂದು ತಿಳಿಸಿದೆ.

ಅಧಿಸೂಚನೆಯು ಯುಜಿಸಿಯ ನಿಯಮಾವಳಿ ಸಂಖ್ಯೆ 14 (ಪಿಎಚ್‌ಡಿ ಪದವಿ ಪ್ರಶಸ್ತಿಗಾಗಿ ಕನಿಷ್ಠ ಮಾನದಂಡಗಳು ಮತ್ತು ಕಾರ್ಯವಿಧಾನಗಳು) ನಿಯಮಗಳು 2022 ಕುರಿತು ಮಾಹಿತಿ ನೀಡಿದ್ದು, ಈ ನಿಯಮ ಅನ್ವಯ ಉನ್ನತ ಶಿಕ್ಷಣ ಸಂಸ್ಥೆಗಳು ಎಂಫಿಲ್ ಕಾರ್ಯಕ್ರಮಗಳನ್ನು ನೀಡುವುದನ್ನು ಸ್ಪಷ್ಟವಾಗಿ ನಿಷೇಧಿಸಲಾಗುತ್ತದೆ ಎಂದು ತಿಳಿಸಿದೆ.

ಮುಂಬರುವ ಶೈಕ್ಷಣಿಕ ವರ್ಷಕ್ಕಾಗಿ ಎಂಫಿಲ್ ಪ್ರವೇಶಾತಿ ಮಾಡಿಕೊಂಡಿದ್ದರೆ ಈ ಕೂಡಲೇ ಆ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಎಂಫಿಲ್ ಪ್ರವೇಶಾತಿ ಪಡೆದುಕೊಳ್ಳದಂತೆ ಸೂಚಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: UGC’s Draft: ಕಾಲೇಜು ವಿದ್ಯಾರ್ಥಿಗಳಿಗೆ ರಾಮಾಯಣ, ಮಹಾಭಾರತದ ಪಾಠ; ಯುಜಿಸಿ ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

NEET UG 2024: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮಂಗಳವಾರ ಮತ್ತೆ ಸುಪ್ರೀಂ ಕೋರ್ಟ್‌ ಎನ್‌ಟಿಎಯನ್ನು ತರಾಟೆಗೆ ತೆಗೆದುಕೊಂಡಿದೆ. “ಯಾರ ಕಡೆಯಿಂದಾದರೂ ಶೇ. 0.001ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು” ಎಂದು ಹೇಳಿದೆ.

VISTARANEWS.COM


on

NEET UG 2024
Koo

ನವದೆಹಲಿ: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ(NEET UG 2024)ಯಲ್ಲಿನ ಅಕ್ರಮ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮಂಗಳವಾರ ಮತ್ತೆ ಸುಪ್ರೀಂ ಕೋರ್ಟ್‌ (Supreme Court) ಎನ್‌ಟಿಎಯನ್ನು ತರಾಟೆಗೆ ತೆಗೆದುಕೊಂಡಿದೆ.

“ಯಾರ ಕಡೆಯಿಂದಾದರೂ ಶೇ. 0.001ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು” ಎಂದು ಚಾಟಿ ಬೀಸಿರುವ ಸುಪ್ರೀಂ ಕೋರ್ಟ್ ಎನ್‌ಟಿಎಗೆ ನೋಟಿಸ್‌ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 8ರಂದು ನಡೆಯಲಿದೆ. ಈ ಹಿಂದೆಯೂ ಕೋರ್ಟ್‌ ಪರೀಕ್ಷೆಯಲ್ಲಿನ ಅಕ್ರಮದ ವಿಚಾರವಾಗಿ ಎನ್‌ಟಿಎ ಮತ್ತು ಕೇಂದ್ರಕ್ಕೆ ಛೀಮಾರಿ ಹಾಕಿತ್ತು.

ನೀಟ್​ ಯುಜಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಎನ್​ಟಿಎ ಜೂನ್‌ 13ರಂದು ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದೂ ಹೇಳಿದೆ. ಮರು ಪರೀಕ್ಷೆಗಳನ್ನು ಜೂನ್ 23ರಂದು ನಡೆಸಲಾಗುವುದು ಮತ್ತು ಜೂನ್ 30ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದಿರುವ ಎನ್​​ಟಿಎ ಮರುಪರೀಕ್ಷೆ ಬರೆಯಲು ಬಯಸದವರಿಗೆ ಗ್ರೇಸ್‌ ಮಾರ್ಕ್‌ ರಹಿತ ಅಂಕ ಹೊಂದುವ ಅವಕಾಶ ನೀಡಲಾಗಿದೆ ಎಂದು ಕೋರ್ಟ್‌ಗೆ ತಿಳಿಸಿದೆ.

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಕೇಂದ್ರ ಸೇರಿದಂತೆ 571 ನಗರಗಳ 4,750 ಕಡೆಗಳಲ್ಲಿ ನಡೆದ ನೀಟ್‌ ಪರೀಕ್ಷೆಗೆ 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರೀ ಸುದ್ದಿಯಾಗಿ ವಿವಾದ ಭುಗಿಲೆದ್ದಿತ್ತು. ಅಲ್ಲದೆ 67 ಅಭ್ಯರ್ಥಿಗಳು 720ಕ್ಕೆ 720 ಅಂಕ ಪಡೆದಿರುವುದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪಕ್ಕೆ ಇನ್ನಷ್ಟು ಪುಷ್ಟಿ ನೀಡಿತ್ತು. ಈ ಎಲ್ಲ ಕಾರಣಗಳಿಂದ ಹಲವು ಅಭ್ಯರ್ಥಿಗಳು ಕೋರ್ಟ್‌ ಮೆಟ್ಟಿಲೇರಿ ಮರು ಪರೀಕ್ಷೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದರು.

‘ಗ್ರೇಸ್ ಅಂಕ’ ಯಾಕೆ?

ಸಮಯ ನಷ್ಟವನ್ನು ಸರಿದೂಗಿಸಲು 1,563 ಅಭ್ಯರ್ಥಿಗಳಿಗೆ ಗ್ರೇಸ್‌ ಅಂಕ ನೀಡಲಾಗಿತ್ತು. ತಪ್ಪಾದ ಪ್ರಶ್ನೆ ಪತ್ರಿಕೆ, ಹರಿದ ಒಎಂಆರ್‌ ಶೀಟ್ ವಿತರಣೆ, ಒಎಂಆರ್‌ ಶೀಟ್ ವಿತರಣೆಯಲ್ಲಿ ವಿಳಂಬದಿಂದಾಗಿ ಪರೀಕ್ಷೆ ಬರೆಯಲಿರುವ ಸಮಯ ವ್ಯರ್ಥವಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಗ್ರೇಸ್‌ ಮಾರ್ಕ್‌ ನೀಡಲಾಗಿದೆ ಎಂದು ಎನ್‌ಟಿಎ ಕಾರಣ ನೀಡಿತ್ತು. ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ನೀಟ್‌ ಪರೀಕ್ಷೆಯನ್ನು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ.

Continue Reading

ದೇಶ

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

Reels Accident : ರೀಲ್ಸ್‌ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ಕಸಿದಿದೆ. ಬೆಟ್ಟದ ತುದಿಯಲ್ಲಿ ಸಾಹಸ ಪ್ರದರ್ಶಿಸಲು ಹೋಗಿ 25ರ ಯುವತಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾಳೆ. ಸಾವಿನ ಕೊನೆ ಕ್ಷಣವು ಸ್ನೇಹಿತನ ಮೊಬೈಲ್‌ನಲ್ಲಿ (Reels Tragedy) ಸೆರೆಯಾಗಿದೆ.

VISTARANEWS.COM


on

By

Reels tragedy
Koo

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ (Reels Accident) ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ರೀಲ್ಸ್‌ (Reels Tragedy) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ರೀಲ್ಸ್ ಹುಚ್ಚಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ.

ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
Koo

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿ (Varanasi)ಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಸುಮಾರು 9.26 ರೈತರ ಖಾತೆಗಳಿಗೆ 20,000 ಕೋಟಿ ರೂ. ಜಮೆ ಆಗಲಿದೆ.

ಮಾತ್ರವಲ್ಲ ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಮೋದಿ ಪ್ರಮಾಣಪತ್ರಗಳನ್ನೂ ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಲವು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ವಾರಣಾಸಿ ಪ್ರವಾಸದ ಸಂಪೂರ್ಣ ವಿವರ

ಮೋದಿ ಅವರು ಸುಮಾರು 5 ಗಂಟೆಗಳ ಕಾಲ ವಾರಣಾಸಿಯಲ್ಲಿ ಇರಲಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಮೋದಿ ಬಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ವಾರಣಾಸಿಯಲ್ಲಿ ಆಯೋಜಿಸಿರುವ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಮ್ಮಾನ್ ನಿಧಿಯ ಕಂತನ್ನು ಮೋದಿ ಬಿಡುಗಡೆ ಮಾಡಲಿದ್ದು, ವಾರಣಾಸಿಯಲ್ಲಿ 2,76,665 ಫಲಾನುಭವಿಗಳಿದ್ದಾರೆ. ಜತೆಗೆ 21 ರೈತರನ್ನು ಭೇಟಿ ಮಾಡಿ ಅವರ ಉತ್ಪನ್ನಗಳನ್ನು ಪರಿಶೀಲಿಸಲಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆಯಲಿರುವ ಗಂಗಾ ಆರತಿಯನ್ನು ವೀಕ್ಷಿಸಲಿರುವ ಮೋದಿ, ನಂತರ ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 25 ನಿಮಿಷಗಳ ಕಾಲ ದೇವಾಲಯದಲ್ಲಿ ಇರಲಿದ್ದಾರೆ ಎಂದು ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವ ಭೂಷಣ್ ಮಿಶ್ರಾ ತಿಳಿಸಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಸುಮಾರು 1,52,513 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

ಏನಿದು ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆ?

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

Continue Reading

ದೇಶ

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Nuclear Weapon: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದೂ ವಿವರಿಸಲಾಗಿದೆ.

VISTARANEWS.COM


on

Nuclear Weapon
Koo

ನವದೆಹಲಿ: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರ (Nuclear Weapon)ಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ವೀಡನ್ ಚಿಂತಕರ ಚಾವಡಿ ಥಿಂಕ್‌-ಟ್ಯಾಂಕ್‌ (Swedish think-tank) ಸೋಮವಾರ ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದು ವರದಿ ಹೇಳಿದೆ.

ಜಾಗತಿಕವಾಗಿ ಆವರಿಸಿರುವ ಯುದ್ಧದ ಭೀತಿಯ ನಡುವೆ, ಚೀನಾದ ಪರಮಾಣು ಶಸ್ತ್ರಾಸ್ತ್ರದ ಪ್ರಮಾಣ ಒಂದು ವರ್ಷದಲ್ಲಿ 90ರಷ್ಟು ಏರಿಕೆಯಾಗಿದೆ. 2023ರ ಜನವರಿಯಲ್ಲಿ ಚೀನಾದಲ್ಲಿ 410 ಸಿಡಿತಲೆ (Warheads) ಇದ್ದರೆ 2024ರ ಜನವರಿಯಲ್ಲಿ ಅದರ ಸಂಖ್ಯೆ 500ಕ್ಕೆ ಏರಿದೆ. ಜತೆಗೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಅಲ್ಲದೆ ಚೀನಾ ಕೆಲವು ಸಿಡಿತಲೆಗಳನ್ನು ಸರ್ವ ಸನ್ನದ್ಧ ರೀತಿಯಲ್ಲಿ ಇರಿಸಿಕೊಂಡಿದೆ ಎಂದೂ ಮೂಲಗಳು ತಿಳಿಸಿವೆ.

ಆಧುನೀಕರಣಕ್ಕೆ ಒತ್ತು

ಅಮೆರಿಕ, ರಷ್ಯಾ, ಇಂಗ್ಲೆಂಡ್‌, ಫ್ರಾನ್ಸ್, ಚೀನಾ, ಭಾರತ, ಪಾಕಿಸ್ತಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ – ಈ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ಟಾಕ್ಹೋಮ್ ಇಂಟರ್‌ನ್ಯಾಷನಲ್‌ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ (SIPRI) ವರದಿ ಮಾಡಿದೆ.

2024ರ ಜನವರಿಯಿಂದ ಜಾಗತಿಕವಾಗಿ 12,121 ಸಿಡಿತಲೆಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ ಸುಮಾರು 9,585ರಷ್ಟು ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳಲ್ಲಿವೆ. ಈ ಪೈಕಿ ಸುಮಾರು 3,904 ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳೊಂದಿಗೆ ಸಜ್ಜುಗೊಳಿಸಲಾಗಿದೆ ಎನ್ನುವ ಆಘಾತಕಾರಿ ಮಾಹಿತಿಯೂ ಬಹಿರಂಗಗೊಂಡಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಅನೇಕ ಸಿಡಿತಲೆಗಳನ್ನು ನಿಯೋಜಿಸುವ ಸಾಮರ್ಥ್ಯವನ್ನು ಈಗಾಗಲೇ ರಷ್ಯಾ, ಫ್ರಾನ್ಸ್, ಇಂಗ್ಲೆಂಡ್‌, ಅಮೆರಿಕ ಮತ್ತು ಚೀನಾ ಹೊಂದಿದ್ದು, ಇದನ್ನು ಅಭಿವೃದ್ಧಿ ಪಡಿಸಲು ಭಾರತ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾಗಳು ಮುಂದಾಗಿವೆ. ಇದು ನಿಯೋಜಿತ ಸಿಡಿತಲೆಗಳುಗೆ ಮನ್ನಷ್ಟು ಶಕ್ತಿ ತುಂಬುತ್ತದೆ ಮತ್ತು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಎಂದು ಥಿಂಕ್‌-ಟ್ಯಾಂಕ್‌ ಹೇಳಿದೆ. ಜಾಗತಿಕವಾಗಿ ಕಂಡು ಬಂದಿರುವ ಪರಮಾಣು ಶಸ್ತ್ರಾಸ್ತ್ರಗಳ ಪೈಕಿ ರಷ್ಯಾ ಮತ್ತು ಅಮೆರಿಕದಲ್ಲಿ ಸಿಂಹಪಾಲಿದೆ. ಅಂದೆ ಒಟ್ಟು ಶೇ. 90ರಷ್ಟು ಈ ಎರಡು ದೇಶಗಳಲ್ಲಿವೆ.

ಭಾರತ, ಪಾಕಿಸ್ತಾನದಲ್ಲಿ ಎಷ್ಟಿದೆ?

ಈ ವರ್ಷದ ಜನವರಿಯಲ್ಲಿ ಭಾರತದ ‘ಸಂಗ್ರಹಿತ’ ಪರಮಾಣು ಸಿಡಿತಲೆಗಳ ಸಂಖ್ಯೆ 172ರಷ್ಟಿದ್ದರೆ, ಪಾಕಿಸ್ತಾನದ ಸಂಖ್ಯೆ 170 ಎಂದು ವರದಿ ಹೇಳಿದೆ. “ಪಾಕಿಸ್ತಾನವು ಭಾರತದ ಮುಖ್ಯ ಕೇಂದ್ರಬಿಂದುವಾಗಿದ್ದರೂ, ಚೀನಾದಾದ್ಯಂತ ಗುರಿಗಳನ್ನು ತಲುಪುವ ಸಾಮರ್ಥ್ಯ ಸೇರಿದಂತೆ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳಿಗೆ ಒತ್ತು ನೀಡುತ್ತಿದೆ” ಎಂದು ಮೂಲಗಳು ತಿಳಿಸಿದೆ. ಇನ್ನು ರಷ್ಯಾ ಮತ್ತು ಅಮೆರಿಕಕ್ಕೆ ಹೋಲಿಸಿದರೆ ಚೀನಾದಲ್ಲಿ ಸಿಡಿತಲೆಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಚೀನಾ ತನ್ನ ಪರಮಾಣು ಶಸ್ತ್ರಾಗಾರವನ್ನು ಇತರ ದೇಶಗಳಿಗಿಂತ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Mission Divyastra: ʼದಿವ್ಯಾಸ್ತ್ರʼಕ್ಕೆ ಜೀವ ತುಂಬಿದ ʼದಿವ್ಯ ಪುತ್ರಿ! ಯಾರಿವರು?

Continue Reading
Advertisement
Actor Darshan
ಕರ್ನಾಟಕ10 mins ago

Actor Darshan: 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ರೆ ಹೀಗಾಗುತ್ತಿರಲಿಲ್ಲ: ಇಂದ್ರಜಿತ್ ಲಂಕೇಶ್

Gold Rate Today
ಚಿನ್ನದ ದರ33 mins ago

Gold Rate Today: ಆಭರಣ ಖರೀದಿಸುವವರಿಗೆ ಗುಡ್‌ನ್ಯೂಸ್‌; ಮತ್ತೆ ಇಳಿದ ಚಿನ್ನದ ದರ

Austria vs France
ಕ್ರೀಡೆ38 mins ago

Austria vs France: ಗಂಭೀರ ಗಾಯಗೊಂಡ ಎಂಬಾಪೆ; ಮುಂದಿನ ಪಂದ್ಯಕ್ಕೆ ಅನುಮಾನ

Murder case
ಹಾಸನ40 mins ago

Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

murder Case
ಶಿವಮೊಗ್ಗ56 mins ago

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

NEET UG 2024
ದೇಶ57 mins ago

NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

actor darshan manager death 3
ಪ್ರಮುಖ ಸುದ್ದಿ1 hour ago

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

Gautam Gambhir
ಕ್ರೀಡೆ1 hour ago

Gautam Gambhir: ಅಮೀತ್​ ಶಾ ಭೇಟಿಯಾದ ಗೌತಮ್‌ ಗಂಭೀರ್‌; ಕೋಚ್​ ಆಗುವುದು ಖಚಿತ ಎಂದ ನೆಟ್ಟಿಗರು

Reels tragedy
ದೇಶ2 hours ago

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

bhavani revanna bail
ಕ್ರೈಂ2 hours ago

Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌