ಅಸ್ಥಿಪಂಜರ ಪತ್ತೆ ಕೇಸ್‌; ಪಾಳು ಬಿದ್ದ ಮನೆಯಲ್ಲಿ ಮೊದಲು ಬುರುಡೆ ನೋಡಿದ್ದೇ ವಿದ್ಯಾರ್ಥಿಗಳು - Vistara News

ಕರ್ನಾಟಕ

ಅಸ್ಥಿಪಂಜರ ಪತ್ತೆ ಕೇಸ್‌; ಪಾಳು ಬಿದ್ದ ಮನೆಯಲ್ಲಿ ಮೊದಲು ಬುರುಡೆ ನೋಡಿದ್ದೇ ವಿದ್ಯಾರ್ಥಿಗಳು

Skeletons Found : ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ನಡುವೆ ಪಾಳು ಮನೆಯೊಳಗೆ ಮೊದಲು ಪ್ರವೇಶಿಸಿದ್ದೆ ಅಪ್ರಾಪ್ತರು ಎಂದು ತಿಳಿದು ಬಂದಿದೆ.

VISTARANEWS.COM


on

Skeletons found Death note found in dilapidated house
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರುದುರ್ಗ: ಚಿತ್ರದುರ್ಗ ನಗರದ ಜೈಲ್ ರೋಡ್ ಬಳಿಯ ಪಾಳು ಮನೆಯಲ್ಲಿ ಸಿಕ್ಕ 5 ಅಸ್ತಿ ಪಂಜರಗಳ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಜಗನ್ನಾಥ್ ರೆಡ್ಡಿ ಕುಟುಂಬದವರು ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಕೆಲ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿರುವುದು ಬಹಿರಂಗ ಆಗಿತ್ತು. ಅದರ ಬೆನ್ನಲ್ಲೇ ಇಂದು ಅದೇ ಡೆತ್ ನೋಟ್‌ನಲ್ಲಿ ಇಬ್ಬರು ವ್ಯಕ್ತಿಗಳ ಹೆಸರು ಉಲ್ಲೇಖ ಆಗಿರುವುದು ಪ್ರಕರಣದ ದಿಕ್ಕನ್ನೇ ಬದಲಿಸಿದೆ. ಈ ಮಧ್ಯೆ ಪಾಳು ಬಿದ್ದ ಮನೆಗೆ ಮೊದಲು ಪ್ರವೇಶಿಸಿದ್ದೆ ಅಪ್ರಾಪ್ತರು ಎನ್ನಲಾಗಿದೆ.

ಐದಾರು ವರ್ಷಗಳ ಕಾಲ ಪಾಳು ಬಿದ್ದು ಭೂತದ ಮನೆಯಂತಿದ್ದ ಕಾರಣಕ್ಕೆ ಆ ಏರಿಯಾ ಹುಡುಗರ ಕುತೂಹಲಕ್ಕೆ ಕಾರಣವಾಗಿತ್ತು. ಡೇರಿಂಗ್‌ ಮನೋಭಾವ ಹೊಂದಿದ್ದ ಅವರು ಕೈಯಲ್ಲೊಂದು ಮೊಬೈಲ್‌ ಹಿಡಿದು ಪಾಳು ಬಿದ್ದ ಮನೆಗೆ ನುಗ್ಗಿದ್ದರು.

ಕಗ್ಗತ್ತಲಿನಲ್ಲಿ ಟಾರ್ಚ್‌ಲೈಟ್‌ ಹಿಡಿದು ಮನೆಯೊಳಗೆ ಹೋಗಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಂಡಿದ್ದಾರೆ. ಬಾಲಕರ ಪೈಕಿ ಒಬ್ಬ ಭಯವಾಗುತ್ತಿದೆ ಎನ್ನುತ್ತಲೇ ರೂಮಿನೊಳಗೆ ಇದ್ದ ಅಸ್ಥಿಪಂಜರವನ್ನು ನೋಡಿ, ಮತ್ತೊಂದು ರೂಮಿನಲ್ಲಿದ್ದ ಎರಡು ಅಸ್ಥಿಪಂಜರವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.

boys went to an abandoned house and made a video
ಶನಿವಾರವೂ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಅಕ್ಕಪಕ್ಕದ ಮನೆಗಳಿಗೆ ಬೀಗ

ಐವರ ಅಸ್ಥಿಪಂಜರ ಪತ್ತೆ ಆಗಿದ್ದೆ ತಡ ಅಕ್ಕಪಕ್ಕದ ನಿವಾಸಿಗಳು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆಡೆ ತೆರಳುತ್ತಿದ್ದಾರೆ. ಜನನಿಬಿಡ‌ಪ್ರದೇಶವಾಗಿದ್ದ‌ ರಸ್ತೆ ಈಗ ಬಿಕೋ ಎನ್ನುತ್ತಿದೆ. ಒಂದೇ ಮನೆಯಲ್ಲಿ ಐವರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ನಿವಾಸಿಗಳು ಭಯಗೊಂಡಿದ್ದಾರೆ. ನಿತ್ಯ ಅದೇ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನ ಸವಾರರು, ವಾಯುವಿಹಾರಿಗಳು ಇತ್ತ ಮುಖಮಾಡುತ್ತಿಲ್ಲ. ಇನ್ನೂ ಇದೇ ರಸ್ತೆಯ ಕೊನೆಯಲ್ಲಿದ್ದ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಲ್ಲದೇ ಬಣಗುಡುತ್ತಿದೆ.

ಪೆನ್ಶನ್‌ಗಾಗಿ ಅರ್ಜಿ ಸಲ್ಲಿಸಿದ್ದ ಜಗನ್ನಾಥ್ ರೆಡ್ಡಿ

ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದು ವಿಚಾರಗಳು ಹೊರಬರುತ್ತಿದೆ. ಐದು ವರ್ಷಗಳ ಹಿಂದೆಯೇ ಐವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ. ಜಗನ್ನಾಥ್‌ ರೆಡ್ಡಿ ಕುಟುಂಬಸ್ಥರು 2019ರ ಜನವರಿಯಲ್ಲಿ ಕರೆಂಟ್ ಬಿಲ್ ಪಾವತಿಸಿದ್ದರು. ನಂತರ ಯಾವುದೇ ಬಿಲ್‌ ಪಾವತಿ ಆಗಿಲ್ಲ. ಜತೆಗೆ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿ ಜಗನ್ನಾಥ್‌ ರೆಡ್ಡಿ ನಿವೃತ್ತಿ ಹೊಂದಿದ್ದರು. ತಮ್ಮ ಪೆನ್ಶನ್ ತೆಗೆದುಕೊಳ್ಳಲು 2019 ಜನವರಿಯಲ್ಲಿ ಕೊನೆ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಯಾವುದೇ ಅರ್ಜಿ ಸಲ್ಲಿಸಿರಲಿಲ್ಲ.

ಇತ್ತ ಮನೆಯಲ್ಲಿದ್ದ ಒಡವೆಯನ್ನು ಅಡವಿಟ್ಟು ಹಣ ಪಡೆದಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಸಾಲಭಾದೆಗೆ ಬೇಸತ್ತ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡರಾ? ಎಂಬುದರ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.

ದಡೋಡೆ ಕೇಸ್‌ನಿಂದ ಮನನೊಂದು ಆತ್ಮಹತ್ಯೆ?

ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ಮೇಲೆ ರಾಬರಿ ಕೇಸ್ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯಲ್ಲಿ ನರೇಂದ್ರರೆಡ್ಡಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. 2013ರಲ್ಲಿ ಬಿಡದಿ ಬಳಿ ವಾಹನ ತಡೆದು ದರೋಡೆ ಮಾಡಿದ ಆರೋಪದಲ್ಲಿ ನರೇಂದ್ರರೆಡ್ಡಿ ಮತ್ತು ಗೆಳೆಯರ ವಿರುದ್ಧ ಕೇಸ್ ದಾಖಲಾಗಿತ್ತು. ನಂತರ ಆತ ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಪಾಲಾಗಿದ್ದ.

ಜಮೀನು ಪಡೆದು ಹೊರ ಬಂದಿದ್ದ ನರೇಂದ್ರರೆಡ್ಡಿ ಹಾಗೂ ಆತನ ಕುಟುಂಬಸ್ಥರು ಮನನೊಂದಿದ್ದರು ಎನ್ನಲಾಗಿದೆ. ಹೀಗಾಗಿಯೇ ಊಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪತ್ನಿಗೆ ಅನಾರೋಗ್ಯ; 2 ಕೋಟಿ ರೂ. ಖರ್ಚು

ಜಗನ್ನಾಥ ರೆಡ್ಡಿಯವರ ಪತ್ನಿ ಅಸ್ವಸ್ಥರಾಗಿದ್ದು, ಅವರಿಗಾಗಿ 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿರಲಿಲ್ಲ ಎನ್ನಲಾಗಿದೆ. ಈ ಮನೆಯವರು ಯಾರನ್ನೂ ಒಳಬಿಟ್ಟುಕೊಳ್ಳುತ್ತಿರಲಿಲ್ಲ. ಬಾಗಿಲು ತೆರೆಯದೇ ಕಿಟಕಿಯಿಂದ ಮಾತಾಡಿಸಿ ಕಳುಹಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಮನೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಕೂಡ ಕಂಡುಬಂದಿದೆ.

ಏನಿದು ಪ್ರಕರಣ?

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯಿರುವ ದೊಡ್ಡ ಸಿದ್ದವ್ವನ ಹಳ್ಳಿಯ ನಿವಾಸಿ ಜಗನ್ನಾಥ್ ರೆಡ್ಡಿ ಎಂಬವರ ಇಡೀ ಕುಟುಂಬದವರ ಅಸ್ಥಿಪಂಜರ ಪತ್ತೆಯಾಗಿತ್ತು. ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿತ್ತು. ಜಗನ್ನಾಥ್ ರೆಡ್ಡಿ, ಪತ್ನಿ ಪ್ರೇಮ, ಮಕ್ಕಳಾದ ತ್ರಿವೇಣಿ, ನರೇಂದ್ರ ರೆಡ್ಡಿ, ಕೃಷ್ಣ ರೆಡ್ಡಿ ಅವರ ಮೃತದೇಹದ ಅಸ್ಥಿಪಂಜರಗಳು ಪತ್ತೆ ಆಗಿತ್ತು.

ಜಗನ್ನಾಥ್ ರೆಡ್ಡಿ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಂದ ಬಾರಿ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.

ಇನ್ನು ಮನೆಯಲ್ಲಿ ಸಿಕ್ಕ 2019ರ ಕ್ಯಾಲೆಂಡರ್ ಪ್ರಕಾರ ಜಗನ್ನಾಥ್ ರೆಡ್ಡಿ ಕುಟುಂಬದವರು ಮೃತಪಟ್ಟು 5 ವರ್ಷಗಳು ಆಗಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಅಸ್ತಿ ಪಂಜರಗಳನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಗೂಢ ಸಾವಿಗೆ ಕಾರಣ ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

Ambedkar’s Portrait:
ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Ambedkar's portrait
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (ಆ.15) ಮತ್ತು ಸಂವಿಧಾನ ದಿನಾಚರಣೆ (ನ.6) ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರ್‌ (Dr BR Ambedkar) ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ (Ambedkar’s Portrait) ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.

ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

Continue Reading

ಪ್ರಮುಖ ಸುದ್ದಿ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಪುತ್ರಿಯ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

VISTARANEWS.COM


on

Self Harming
Koo

ದಾವಣಗೆರೆ: ಬಿಜೆಪಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆ.ಜಿ. (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ ಮಾಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ (Pratap Kumar K.G) ಮೃತಪಟ್ಟಿದ್ದಾರೆ.

ಮಾಜಿ ಸಚಿವ ಬಿ.ಸಿ. ಪಾಟೀಲ್‌ರ ಮೊದಲ ಪುತ್ರಿ ಸೌಮ್ಯಾ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವಿದ್ದು, ಅಲ್ಲಿಗೆ ಕುಟುಂಬಸ್ಥರು, ಸಂಬಂಧಿಕರು ತೆರಳುತ್ತಿದ್ದಾರೆ.

ಮೆಗ್ಗಾನ್‌ ಅಸ್ಪತ್ರೆಗೆ ಆಗಮಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು ಪೊಲೀಸರಿಂದ ಮಾಹಿತಿ ಪಡೆದು, ಕಾರಿನಲ್ಲಿ ಕುಳಿತು ದುಃಖಿಸುತ್ತಿರುವುದು ಕಂಡುಬಂದಿದೆ.

ಶಿವಮೊಗ್ಗದಲ್ಲಿ ಬಿ.ಸಿ.ಪಾಟೀಲ್ ಮಾತನಾಡಿ, ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ನಂತರ ಹೊನ್ನಾಳಿ-ಮಲೆಬೆನ್ನೂರು ರೋಡ್‌ನಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿಯಿತು. ಮೊದಲು ದಾವಣಗೆರೆಗೆ ಶಿಫ್ಟ್ ಮಾಡಲು ಹೇಳಿದ್ದೆವು, ನಂತರ ಶಿವಮೊಗ್ಗ ಹತ್ತಿರ ಅಂತ ಇಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಕಾರಿಪುರ ಹತ್ತಿರ ಬಂದಾಗ ಜೀವ ಹೋಗಿದೆ ಎಂದು ತಿಳಿಸಿದರು.

ಮಕ್ಕಳ ವಿಚಾರದಲ್ಲಿ ಅವರಿಗೆ ಕೊರಗಿತ್ತು, ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೇ ನೋಡಿಕೊಳ್ಳುತ್ತಿದ್ದರು. ಮದುವೆ ಆಗಿ 16 ವರ್ಷ ಆಗಿತ್ತು, ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಈಗ ಇಂತಹ ಘಟನೆ ನಡೆದಿದೆ. ನಾಳೆ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಿದರು.

ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Rain Effect : ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ನಾಳೆ ಮಂಗಳವಾರವೂ (Heavy rain) ಭಾರಿ ಮಳೆಯಾಗಲಿದ್ದು, ಉಡುಪಿಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ.

VISTARANEWS.COM


on

By

Rain Effect
Koo

ಮಹಾರಾಷ್ಟ್ರ/ಬೆಳಗಾವಿ: ಮಹಾರಾಷ್ಟ್ರದ‌ ಬುಲಡಾನ್ ಪ್ರದೇಶದಲ್ಲಿ ನಿರಂತರ ಮಳೆಯಿಂದ (Karnataka Rain) ಪ್ರವಾಸವೇ ಸೃಷ್ಟಿಯಾಗಿದೆ. ಉಕ್ಕಿ ಹರಿಯುವ ನೀರಲ್ಲಿ ಪಾನ್‌ ಶಾಪ್‌ ಹಾಗೂ ಕಾರು ಎರಡು ಕೊಚ್ಚಿ (Rain Effect) ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಬೆಳಗಾವಿಯ ಗಡಿಯಲ್ಲಿ ಮಳೆಯಿಂದಾಗಿ ಪ್ರವಾಸಿಗರು ಪರದಾಟ ಅನುಭವಿಸಿದರು. ಚಂದಗಡ್ ತಾಲೂಕಿನ ತಿಲಾರಿ ಮತ್ತು ಪಾಟ್ನೆಪಾಟಾದಲ್ಲಿ ಹಿರಣ್ಯಕೇಶಿ ನದಿ ನೀರು ಏಕಾಏಕಿ ರಸ್ತೆಗೆ ಹರಿದು ಬಂದಿತ್ತು. ಪರಿಣಾಮ ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ಹರಿದು ತಿಲಾರಿ ಬೆಳಗಾವಿ ಸಂಪರ್ಕಿಸುವ ರಸ್ತೆಯು ಹೊಳೆಯಂತಾಗಿ ಮಾರ್ಪಟ್ಟಿತ್ತು. ಕೆಲ ಪ್ರವಾಸಿಗರು ಎರಡ್ಮೂರು ಅಡಿ ನಿಂತ ನೀರಲ್ಲೇ ಕಾರು ಚಲಾಯಿಸಿಕೊಂಡು ಹೊರ ಬಂದರು. ನೀರಲ್ಲಿ ಬೈಕ್‌ ಚಲಾಯಿಸಲು ಆಗದೆ ಬೈಕ್‌ಗಳನ್ನು ತಳ್ಳಿಕೊಂಡು ಬಂದರು.

ಬೆಂಗಳೂರಿನಲ್ಲೂ ಅಬ್ಬರಿಸಿದ ಮಳೆ

ಜು.8ರ ಸಂಜೆ ರಾಜ್ಯದ ವಿವಿಧೆಡೆ ಮಳೆಯು ಆರ್ಭಟಿಸಿದೆ. ಬೆಂಗಳೂರಿನ ಮಲ್ಲೇಶ್ವರಂ, ಶಿವಾನಂದ, ಮೆಜೆಸ್ಟಿಕ್ ಹಾಗೂ ವಿಧಾನಸೌಧ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಇತ್ತ ವಿಜಯನಗರ ಜಿಲ್ಲೆಯಲ್ಲಿ ದಿಢೀರ್ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿತ್ತು. ವಿಜಯನಗರದ ಹೊಸಪೇಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿತ್ತು. ದಿಢೀರ್ ಸುರಿದ ಭಾರೀ ಮಳೆಗೆ ರಸ್ತೆ ಇಕ್ಕೆಲಗಳಲ್ಲೆಲ್ಲ ನೀರು ತುಂಬಿ ಹರಿದಿತ್ತು. ಏಕಾಏಕಿ ಸುರಿದ ಮಳೆಗೆ ರಸ್ತೆ, ಚರಂಡಿಗಳು ತುಂಬಿ ಹರಿದಿತ್ತು.

ನಿರಂತರ ಮಳೆಗೆ ಉರುಳಿ ಬಿದ್ದ ಮರ; ಕಾರು ಜಖಂ

ನಿರಂತರ ಮಳೆಯಿಂದ ಬೃಹತ್‌ ಮರವೊಂದು ಬುಡಸಮೇತ ಉರುಳಿ ಕಾರಿನ ಮೇಲೆ ಬಿದ್ದಿದೆ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ದಿಲೀಪ ಪವಾರ್ ಎಂಬುವವರಿಗೆ ಸೇರಿದ ಕಾರು ಸಂಪೂರ್ಣ ಜಖಂಗೊಂಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಯ ಭೇಟಿಗೆ ಬಂದಿದ್ದ ದಿಲೀಪ್ ಪವಾರ್, ಆಸ್ಪತ್ರೆಯ ಮುಂದೆ‌ ಕಾರು ಪಾರ್ಕ್ ಮಾಡಿದ್ದರು. ಈ ವೇಳೆ ಮರ ಬಿದ್ದಿದೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ದಾವಣಗೆರೆಯಲ್ಲಿ ಕೆಸರು ಗದ್ದೆಯಾದ ಶಾಲಾ ಆವರಣ

ಸತತ ಮಳೆಯಿಂದ ಶಾಲಾ ಆವರಣವು ಕೆಸರು ಗದ್ದೆಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ನೀಲಕಂಠ ನಗರದಲ್ಲಿ ಘಟನೆ ನಡೆದಿದೆ. ಒಂದನೇ ತರಗತಿ ರಿಂದ ಏಳನೇ ತರಗತಿ ವರೆಗೆ ಶಾಲೆಗೆ ಹೋಗುವ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ.

ಶಾಲಾ ಆವರಣದಲ್ಲಿ ಮಳೆ ನೀರು ಹೊರ ಹೋಗದೆ ನಿಂತಲ್ಲೇ ನಿಲ್ಲುವಂತಾಗಿದೆ. ಇದರಿಂದಾಗಿ ಮಕ್ಕಳು ಶಾಲೆ ಒಳಗೆ ಹೋಗಲು ಪರದಾಟ ಅನುಭವಿಸುವಂತಾಗಿದೆ. ಮಳೆ ಬಂದರೆ ಸಾಕು ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆವರಣವೆಲ್ಲವೂ ಕೆಸರು ಗದ್ದೆಯಾಗಿದೆ.

ಕೊಡಗಿನ ನದಿ ತಟ್ಟದ ನಿವಾಸಿಗಳಿಗೆ ಎಚ್ಚರಿಕೆ

ಹಾರಂಗಿ ಜಲಾನಯ ಪ್ರದೇಶದಲ್ಲಿ ಮಳೆ ಮುಂದುವರಿದ್ದು, ಒಳಹರಿವು ಪ್ರಮಾಣ ಹೆಚ್ಚಳಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಹರಿಸಲು ಸಿದ್ಧತೆ ನಡೆದಿದ್ದು, ನದಿ ತಟ್ಟದ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚನೆ‌ ನೀಡಲಾಗಿದೆ. 1000 ಕ್ಯೂಸೆಕ್ಸ್ ನೀರು ನದಿಗೆ ಹರಿಸಲು ಚಿಂತನೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ.

ಜು.9ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ತಾಲೂಕಿನ ಶಾಲಾ-ಕಾಲೇಜಿಗೆ ಜು.9 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Dengue Cases: ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ | OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಬೆಂಗಳೂರಿನ 70 ಕಡೆ ಹೊಸ ಇಂದಿರಾ ಕ್ಯಾಂಟೀನ್‌

ಈಗಾಗಲೇ ಅನುಮತಿ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೆ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೆ ಸ್ಥಳ ಗುರುತಿಸಬೇಕು. ಹೊಸ ಮೆನು ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಸಿಎಂ ಹೇಳಿದರು.

15ನೇ ಹಣಕಾಸು ಆಯೋಗ

15ನೇ ಹಣಕಾಸು ಆಯೋಗದ ಅನುದಾನದಲ್ಲಿ 33,803 ಕಾಮಗಾರಿಗಳು ಮಂಜೂರಾಗಿದ್ದು, 23,714 ಕಾಮಗಾರಿಗಳು ಪೂರ್ಣಗೊಂಡಿವೆ. ಯೋಜನೆಯಡಿ ಇದುವರೆಗೆ 2799 ಕೋಟಿ ರೂ. ಬಿಡುಗಡೆಯಾಗಿದ್ದು, 1883 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್‌ ಕರೆದು, ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಿ

ಕಳೆದ ವರ್ಷದ 224 ಕೋಟಿ ರೂ. ಆಸ್ತಿ ತೆರಿಗೆ ವಸೂಲಾತಿಗೆ ಬಾಕಿಯಿದೆ. ಹಳೆ ಬಾಕಿಯನ್ನು ಸಂಪೂರ್ಣವಾಗಿ ವಸೂಲು ಮಾಡಬೇಕು. ಪ್ರಸ್ತುತ ವರ್ಷದ ಜೂನ್‌ ಅಂತ್ಯದವರೆಗೆ 806 ಕೋಟಿ ರೂ. ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು, 1053 ಕೋಟಿ ರೂ. ವಸೂಲಾತಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ಅಭಿಯಾನದ ರೀತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿಯನ್ನು ಕೈಗೊಳ್ಳಬೇಕು ಎಂದರು.

ಎಸ್.ಎಫ್.ಸಿ. ಮುಕ್ತನಿಧಿ ಯೋಜನೆಯಡಿ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಶೇ.24.01 ಅನುದಾನ ಕಡ್ಡಾಯವಾಗಿ ವೆಚ್ಚ ಮಾಡುವುದನ್ನು ಖಾತ್ರಿಪಡಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆ

ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎದುರಾಗುವ ತಾಂತ್ರಿಕ ತೊಂದರೆಗಳನ್ನು ಎರಡು ತಿಂಗಳ ಒಳಗಾಗಿ ಬಗೆಹರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಇನ್ನಿತರ ತೊಡಕುಗಳನ್ನು ಆದಷ್ಟು ಬೇಗನೆ ನಿವಾರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಮೀನು ಹಸ್ತಾಂತರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಕಾರಣದಿಂದ ಯೋಜನೆ ಅನುಷ್ಠಾನ ವಿಳಂಬವಾಗಬಾರದು. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಸಿಎಂ ಹೇಳಿದರು.

ಇದನ್ನೂ ಓದಿ | NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

ಸಣ್ಣ ನೀರಾವರಿ ಇಲಾಖೆ

ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ 28751 ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. 10931 ಕೆರೆಗಳಲ್ಲಿ ಒತ್ತುವರಿಯನ್ನು ಗುರುತಿಸಲಾಗಿದ್ದು, 6065 ಕೆರೆಗಳ ಒತ್ತುವರಿ ತೆರವು ಪೂರ್ಣಗೊಳಿಸಲಾಗಿದೆ. ಇನ್ನೂ 4787 ಕೆರೆಗಳ ಒತ್ತುವರಿ ತೆರವಿಗೆ ಬಾಕಿಯಿದ್ದು, ಆದಷ್ಟು ಬೇಗನೆ ಅಳತೆ ಕಾರ್ಯ ಪೂರ್ಣಗೊಳಿಸಿ ತೆರವು ಕಾರ್ಯ ಪೂರ್ಣಗೊಳಿಸಬೇಕು. ಪದೇ ಪದೇ ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಈಗಾಗಲೇ ಹಲವು ಕೆರೆಗಳು ಕಣ್ಮರೆಯಾಗಿದ್ದು, ಉಳಿದಿರುವ ಕೆರೆಗಳನ್ನು ಉಳಿಸದೇ ಇದ್ದರೆ, ಅಂತರ್ಜಲ ಮಟ್ಟವನ್ನು ಕಾಪಾಡಲು ಸಾಧ್ಯವಿಲ್ಲ ಎಂದರು.

Continue Reading
Advertisement
Sequins Lehenga Trend
ಫ್ಯಾಷನ್44 seconds ago

Sequins Lehenga Trend: ಅಂಬಾನಿ ಮಗನ ಮದುವೆ ಎಫೆಕ್ಟ್‌; ಸಿಕ್ವಿನ್ಸ್ ಲೆಹೆಂಗಾಗಳಿಗೆ ಡಿಮ್ಯಾಂಡ್‌!

Viral News
Latest21 mins ago

Viral News: ಎಮ್ಮೆಗಾಗಿ ಮಾಲೀಕರ ಕಿತ್ತಾಟ; ಮಾಲೀಕನ ಹುಡುಕಲು ಎಮ್ಮೆಯ ಮೊರೆ ಹೋದ ಪೊಲೀಸರು!

Ambedkar's portrait
ಪ್ರಮುಖ ಸುದ್ದಿ41 mins ago

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

PM Modi Russia Visit
ದೇಶ41 mins ago

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Viral Video
ಕ್ರಿಕೆಟ್44 mins ago

Viral Video: ಲಂಡನ್​ನ ಇಸ್ಕಾನ್​ ಮಂದಿರದ ಸಂಕೀರ್ತನೆಯಲ್ಲಿ ಪಾಲ್ಗೊಂಡ ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ

Ambani Family's Jewels
ಫ್ಯಾಷನ್1 hour ago

Ambani Family’s Jewels: ನೀತಾ ಅಂಬಾನಿಯ ನೆಕ್‌ಲೆಸ್‌ ಬೆಲೆ 500 ಕೋಟಿ ರೂ! ಅಂಬಾನಿ ಮಹಿಳೆಯರ ಬಳಿ ಎಂಥೆಂಥ ಆಭರಣಗಳಿವೆ ನೋಡಿ!

Self Harming
ಪ್ರಮುಖ ಸುದ್ದಿ1 hour ago

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Terrorists Attack
ದೇಶ2 hours ago

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Tamil Nadu violence
ದೇಶ2 hours ago

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Rain Effect
ಮಳೆ2 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ2 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ6 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು8 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ23 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌