Vastu Tips: ಮನೆಯ ವಾಸ್ತು ದೋಷಗಳನ್ನು ಹೀಗೆ ಹೋಗಲಾಡಿಸಿ - Vistara News

ಲೈಫ್‌ಸ್ಟೈಲ್

Vastu Tips: ಮನೆಯ ವಾಸ್ತು ದೋಷಗಳನ್ನು ಹೀಗೆ ಹೋಗಲಾಡಿಸಿ

Vastu Tips: ಕೆಲವೊಮ್ಮೆ ಮನೆಯಲ್ಲಿ ಆಗಾಗ ಕಂಡು ಬರುವ ಸಮಸ್ಯೆಗಳು ಮತ್ತು ಕುಟುಂಬ ಸದಸ್ಯರ ನಡುವೆ ವೈಮನಸ್ಸು ಮೂಡಲು ವಾಸ್ತು ದೋಷ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತು ದೋಷ ನಿವಾರಣೆಗೆ ಸರಳ ಮಾರ್ಗಗಳ ಪರಿಚಯ ಇಲ್ಲಿದೆ.

VISTARANEWS.COM


on

home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ಬದುಕಿನ ಮೇಲೆ ವಾಸ್ತು ಬಹಳ ಗಾಢವಾದ ಪರಿಣಾಮ ಬೀರುತ್ತದೆ. ಅದರಲ್ಲೂ ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸಿದರೆ ಕೆಲವೊಂದು ಸಮಸ್ಯೆಗಳಿಂದ ಮುಕ್ತರಾಗಿ, ನೆಮ್ಮದಿಯ ಜೀವನವನ್ನು ಕಂಡುಕೊಳ್ಳಬಹುದು. ಆದರೆ ಕೆಲವೊಮ್ಮೆ ನಮಗೆ ತಿಳಿದೋ ತಿಳಿಯದೆಯೋ ವಾಸ್ತು ಶಾಸ್ತ್ರದ ಕೆಲವೊಂದು ನಿಯಮವನ್ನು ಮುರಿದಿರುತ್ತೇವೆ. ಇದರ ಪರಿಣಾಮವಾಗಿ ಕೆಲವೊಂದು ಸಮಸ್ಯೆ ನಮ್ಮನ್ನು ಬಿಟ್ಟೂ ಬಿಡದೆ ಕಾಡುತ್ತದೆ. ಇಂದಿನ ವಾಸ್ತು ಟಿಪ್ಸ್‌(Vastu Tips)ನಲ್ಲಿ ಇಂತಹ ವಾಸ್ತು ದೋಷಗಳನ್ನು ಹೇಗೆ ನಿವಾರಿಸಿಕೊಳ್ಳಬಹುದು ಎನ್ನುವುದನ್ನು ನೋಡೋಣ.

ಉಪ್ಪನ್ನು ಹೀಗೆ ಬಳಸಿ

ವಾಸ್ತು ಶಾಸ್ತ್ರದಲ್ಲಿ ಸಮುದ್ರದ ಉಪ್ಪಿಗೆ ಪ್ರಮುಖ ಸ್ಥಾನವಿದೆ. ಹೀಗಾಗಿ ಇದನ್ನು ವಾಸ್ತು ದೋಷ ನಿವಾರಣೆಗೆ ಬಳಸಲಾಗುತ್ತದೆ. ಕಲ್ಲುಪ್ಪನ್ನು ಒಂದು ತಟ್ಟೆಯಲ್ಲಿ ಹಾಕಿ ಮನೆಯೊಳಗೆ ಇಟ್ಟು ಬಿಡಿ. ದಿನ ಬಿಟ್ಟು ದಿನ ಈ ಉಪ್ಪನ್ನು ಬದಲಾಯಿಸುವುದನ್ನು ಮರೆಯಬೇಡಿ. ಇದು ಮನೆಯಿಂದ ಎಲ್ಲ ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಇದರ ಜತೆಗೆ ನೀವು ನೆಲವನ್ನು ಸ್ವಚ್ಛಗೊಳಿಸಲು ಬಳಸುವ ನೀರಿನಲ್ಲಿ ಒಂದು ಚಿಟಿಕೆ ಸಮುದ್ರದ ಉಪ್ಪನ್ನು ಸಹ ಬೆರೆಸಬಹುದು.

ಕನ್ನಡಿ ಹೀಗಿರಲಿ

ಸರಿಯಾದ ಸ್ಥಳದಲ್ಲಿ ಕನ್ನಡಿಗಳನ್ನು ಇರಿಸುವುದರಿಂದಲೂ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಬಹುದು. ಗಮನಿಸಿ ಕನ್ನಡಿಯನ್ನು ಎಂದಿಗೂ ಮುಖ್ಯ ಬಾಗಿಲಿನ ಎದುರು ಇಡಬೇಡಿ. ಮಾತ್ರವಲ್ಲ ಮಲಗುವ ಕೋಣೆಯಲ್ಲಿರುವ ಕನ್ನಡಿ ಹಾಸಿಗೆಯನ್ನು ಪ್ರತಿಬಿಂಬಿಸುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಅಲ್ಲದೆ ಕನ್ನಡಿಯನ್ನು ಉತ್ತರ ಅಥವಾ ಪೂರ್ವ ಗೋಡೆಗಳ ಮೇಲೆ ಅಳವಡಿಸಿ. ಎಲ್ಲ ಕನ್ನಡಿಗಳು ನೆಲದಿಂದ ಕನಿಷ್ಠ 4ರಿಂದ 5 ಅಡಿ ಎತ್ತರದಲ್ಲಿರುವುದು ಮುಖ್ಯ.

ಕರ್ಪೂರದಿಂದ ದೋಷ ನಿವಾರಣೆ

ದೇವರ ಪೂಜೆಗೆ ಬಳಸುವ ಕರ್ಪೂರವನ್ನು ಮನೆಯ ವಾಸ್ತು ದೋಷ ನಿವಾರಣೆಗೂ ಉಪಯೋಗಿಸಬಹುದು. ನೀವು ಅಂದುಕೊಂಡ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದಾದರೆ ಅದು ಖಂಡಿತವಾಗಿಯೂ ವಾಸ್ತು ದೋಷದ ಪರಿಣಾಮವೇ. ಇದಕ್ಕಾಗಿ ನೀವು ಮನೆಯ ಒಳಗೆ ತೆರೆದ ಸ್ಥಳದಲ್ಲಿ ಎರಡು ಕರ್ಪೂರದ ಹರಳುಗಳನ್ನು ಇರಿಸಿ ಮತ್ತು ಅವು ಕುಗ್ಗಿದಾಗ ಬದಲಿಸಿ.

ಪಿರಮಿಡ್‌ ತಂತ್ರ

ವಾಸ್ತು ದೋಷ ಪರಿಹಾರವಾಗಿ ಪಿರಮಿಡ್ ಯಂತ್ರದ ಬಳಕೆ ಇತ್ತೀಚಿನ ದಿನಗಳಲ್ಲಿ ಜನಪ್ರಿಯವಾಗುತ್ತಿದೆ. ಕಲ್ಲು, ಲೋಹ, ಗಾಜು ಅಥವಾ ಕಾರ್ಡ್ ಬೋರ್ಡ್ ಬಳಸಿ ತಯಾರಿಸಲಾಗುವ ಸಣ್ಣ ಪಿರಮಿಡ್ ಆಕಾರವನ್ನು ಮನೆಯಲ್ಲಿ ಇರಿಸಬಹುದು. ನಕಾರಾತ್ಮಕ ಶಕ್ತಿಯಿಂದ ಮುಕ್ತಿ ಪಡೆಯಲು ಈ ಪಿರಮಿಡ್ ಯಂತ್ರವನ್ನು ಮನೆಯ ಪ್ರವೇಶದ್ವಾರದಲ್ಲಿ ಇರಿಸಬೇಕು.

ವಿಂಡ್ ಚೈಮ್ಸ್ ಅಲಂಕಾರಕ್ಕಾಗಿ ಮಾತ್ರವಲ್ಲ…

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ವಿಂಡ್ ಚೈಮ್‌ಗಳನ್ನು ಅಲಂಕಾರಕ್ಕಾಗಿ ಬಳಸಲಾಗುತ್ತದೆ. ಇದನ್ನು ಮನೆಯ ಸೌಂದರ್ಯ ಹೆಚ್ಚಿಸಲು ಬಳಸುವ ಜತೆಗೆ ವಾಸ್ತು ದೋಷದಿಂದ ಮುಕ್ತರಾಗಲೂ ಉಪಯೋಗಿಸಬಹುದಾಗಿದೆ. ನೀವು 6 ಅಥವಾ 8 ಟೊಳ್ಳಾದ ರಾಡ್‌ಗಳನ್ನು ಹೊಂದಿರುವ ವಿಂಡ್ ಚೈಮ್‌ಗಳನ್ನು ತೂಗು ಹಾಕಿದರೆ ಮನೆಯೊಳಗೆ ಧನಾತ್ಮಕ ಶಕ್ತ ಹೆಚ್ಚುತ್ತದೆ.

ಹಾರ್ಸ್‌ ಶೂ ಪ್ರಯೋಜನ ಗೊತ್ತೆ?

ವಾಸ್ತು ಶಾಸ್ತ್ರದ ಪ್ರಕಾರ ಹಾರ್ಸ್‌ ಶೂ ಅನ್ನು ಮನೆಯೊಳಗೆ ಅದೃಷ್ಟವನ್ನು ತರಬಲ್ಲ ಅತ್ಯಂತ ಪ್ರಮುಖ ವಸ್ತು ಎಂದು ಪರಿಗಣಿಸಲಾಗುತ್ತದೆ. ಇದು ಅದೃಷ್ಟ ಮತ್ತು ಸಂಪತ್ತನ್ನು ಆಕರ್ಷಿಸುತ್ತದೆ. ನೀವು ಅದರ ತುದಿಗಳನ್ನು ಮೇಲ್ಮುವಾಗಿ ನಿಲ್ಲುವಂತೆ ತೂಗು ಹಾಕಬೇಕು. ಇದರಿಂದ ಹಾದುಹೋಗುವ ಎಲ್ಲ ಉತ್ತಮ ಶಕ್ತಿಗಳನ್ನು ಆಕರ್ಷಿಸಬಹುದಾಗಿದೆ. ಮುಖ್ಯ ದ್ವಾರವು ಇದಕ್ಕೆ ಸೂಕ್ತವಾದ ಸ್ಥಳ. ಹಾರ್ಸ್‌ ಶೂ ಅನ್ನು ತಲೆಕೆಳಗಾಗಿ ನೇತು ಹಾಕಿದರೆ ಅದು ಮನೆಯಿಂದ ಅದೃಷ್ಟವನ್ನು ಹೊರಹಾಕುತ್ತದೆ ಎಂದು ತಜ್ಞರು ಎಚ್ಚರಿಸುತ್ತಾರೆ.

ಮನೆಯ ಬಣ್ಣ ಗಮನಿಸಿ

ಗೋಡೆಯ ಬಣ್ಣ ಯಾವಾಗಲೂ ಮನೆಯ ಮೇಲೆ, ಸದಸ್ಯರ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಕೆಲವು ಬಣ್ಣಗಳು ಸಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತವೆ. ಗುಲಾಬಿ, ನೀಲಿ ಮತ್ತು ಹಸುರು ಬಣ್ಣಗಳು ಲಿವಿಂಗ್ ಮತ್ತು ಮಾಸ್ಟರ್ ಬೆಡ್ ರೂಮ್‌ಗೆ ಸೂಕ್ತವಾಗಿದ್ದರೆ, ಹಳದಿ ಮತ್ತು ಕಿತ್ತಳೆ ಬಣ್ಣಗಳು ಮಕ್ಕಳ ಕೋಣೆಗಳಿಗೆ ಉತ್ತಮ ಆಯ್ಕೆ. ಹೀಗಾಗಿ ಮನೆಗೆ ಪೇಂಟ್ ಬಳಿಯುವ ಮುನ್ನ ಈ ಅಂಶಗಳತ್ತ ಗಮನ ಹರಿಸಿ.

ಕುಟುಂಬಸ್ಥರ ಫೋಟೊದ ಸ್ಥಾನ ಎಲ್ಲಿ?

ವಾಸ್ತು ಶಾಸ್ತ್ರದ ಪ್ರಕಾರ ಲಿವಿಂಗ್ ರೂಮ್‌ನಲ್ಲಿ ನಿಮ್ಮ ಕುಟುಂಬಸ್ಥರ ಫೋಟೋಗಳನ್ನು ಅಳವಡಿಸುವುದು ಬಹಳ ಮುಖ್ಯ. ನಿಮ್ಮ ನೆಚ್ಚಿನ ಕುಟುಂಬ ಫೋಟೊ, ಕೆಲವು ಟ್ರೆಂಡಿ ಫ್ರೇಮ್‌ಗಳೊಂದಿಗೆ ಲಿವಿಂಗ್‌ ರೂಮ್‌ ಅನ್ನು ಅಲಂಕರಿಸಿ.

ಅಕ್ವೇರಿಯಮ್‌ ಎಲ್ಲಿರಬೇಕು?

ವಾಸ್ತು ಪ್ರಕಾರ ಮೀನು ಮತ್ತು ಅಕ್ವೇರಿಯಂಗಳು ಸಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತವೆ. ಹೀಗಾಗಿ ವಾಸ್ತು ದೋಷದ ಲಕ್ಷಣ ಕಂಡು ಬಂದರೆ ಮನೆಗೆ ಅಕ್ವೇರಿಯಂ ತನ್ನಿ. ಇದನ್ನು ನಿಮ್ಮ ಲಿವಿಂಗ್ ರೂಮ್‌ನ ಈಶಾನ್ಯ ಭಾಗದಲ್ಲಿ ಇರಿಸಲು ಮರೆಯದಿರಿ.

ಇದನ್ನೂ ಓದಿ: Vastu Tips: ಮನೆಯ ಪ್ರವೇಶದ್ವಾರದ ವಿಚಾರದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

ಒಂದು ಕಪ್ ಎಳನೀರಿನಲ್ಲಿ ಎಷ್ಟು ಪೋಷ್ಟಿಕಾಂಶ ಇದೆ ಗೊತ್ತೇ? ಎಳನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬುದು ತಿಳಿದಿದೆಯೇ ? ಹೆಚ್ಚು ಎಳನೀರು ಸೇವನೆ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬಿರುವುದು ಎನ್ನುವ ಕುರಿತು ಮಾಹಿತಿ (Nutrition Alert) ಇಲ್ಲಿದೆ.

VISTARANEWS.COM


on

By

Nutrition Alert
Koo

ವ್ಯಾಯಾಮದ ಬಳಿಕ ಸುಸ್ತಾಗಿದ್ದೀರಾ, ಕೂಡಲೇ ರಿಫ್ರೆಶ್ (refreshing beverage) ಆಗಬೇಕು ಎಂದುಕೊಂಡು ಅತ್ಯಧಿಕ ಪೌಷ್ಠಿಕಾಂಶವುಳ್ಳ (Nutrition Alert) ನೈಸರ್ಗಿಕವಾದ ದಾರಿಯನ್ನು ಹುಡುಕುತ್ತಿರುವಾಗ ನೆನಪಿಗೆ ಬರುವುದು ತೆಂಗಿನ ನೀರು (coconut water). ಎಳೆಯ ಹಸಿರು ತೆಂಗಿನಕಾಯಿಗಳಿಂದ ಪಡೆದ ಈ ಪಾನೀಯವು ಇತ್ತೀಚಿನ ವರ್ಷಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ.

ರುಚಿಕರವಾದ ತೆಂಗಿನ ನೀರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಲೆಕ್ಟ್ರೋಲೈಟ್‌ಗಳನ್ನು ಮರುಪೂರಣಗೊಳಿಸುವುದರಿಂದ ಹಿಡಿದು ಜೀರ್ಣಕ್ರಿಯೆಗೆ ಸಹಾಯ ಮಾಡುವವರೆಗೆ ಈ ನೈಸರ್ಗಿಕ ಮೂಲವು ದೇಹಕ್ಕೆ ಬೇಕಾದ ಎಲ್ಲ ಶಕ್ತಿಯನ್ನು ತುಂಬಿಸುವ ಮೂಲವಾಗಿದೆ. ಬೇಸಿಗೆಯ ತಿಂಗಳುಗಳಲ್ಲಿ ತೇವಾಂಶವನ್ನು ಉಳಿಸಿಕೊಳ್ಳಲು ತೆಂಗಿನ ನೀರು ಅತ್ಯುತ್ತಮ ಆಯ್ಕೆಯಾಗಿದೆ. ತೆಂಗಿನ ನೀರಿನಲ್ಲಿರುವ ಎಲೆಕ್ಟ್ರೋಲೈಟ್ ಅಂಶವು ಬೆವರುವಿಕೆಯ ಮೂಲಕ ಕಳೆದುಹೋದದ್ದನ್ನು ಪುನಃ ತುಂಬಲು ಸಹಾಯ ಮಾಡುತ್ತದೆ. ಇದು ಹೊರಾಂಗಣ ಚಟುವಟಿಕೆಗಳ ಅನಂತರ ಅಥವಾ ಬಿಸಿ ವಾತಾವರಣದಲ್ಲಿ ವ್ಯಾಯಾಮದ ಬಳಿಕ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಎಳನೀರಿನಲ್ಲಿರುವ ಪೌಷ್ಟಿಕಾಂಶ ಏನೇನು?

240 ಮಿಲಿ (ಒಂದು ಕಪ್) ಎಳನೀರಿನಲ್ಲಿ ಕ್ಯಾಲೋರಿಗಳು ಸುಮಾರು 45 ಕೆ.ಕೆ.ಎಲ್, ಕಾರ್ಬೋಹೈಡ್ರೇಟ್ ಗಳು ಸುಮಾರು 9 ಗ್ರಾಂ, ಸಕ್ಕರೆಗಳು ಪ್ರಾಥಮಿಕವಾಗಿ ಗ್ಲೂಕೋಸ್, ಫ್ರಕ್ಟೋಸ್ ಮತ್ತು ಸುಕ್ರೋಸ್ ಪ್ರೋಟೀನ್ 1 ಗ್ರಾಂಗಿಂತ ಕಡಿಮೆ, ಕೊಬ್ಬು ಅತ್ಯಲ್ಪ, ಸಾಮಾನ್ಯವಾಗಿ 1 ಗ್ರಾಂಗಿಂತ ಕಡಿಮೆ ಸೋಡಿಯಂ ಸುಮಾರು 45 ಮಿಗ್ರಾಂ, ಪೊಟ್ಯಾಸಿಯಮ್ ಸರಿಸುಮಾರು 600 ಮಿಗ್ರಾಂ ಅನ್ನು ಒಳಗೊಂಡಿದೆ. ಸೂಕ್ಷ್ಮ ಪೋಷಕಾಂಶಗಳು, ಸಣ್ಣ ಪ್ರಮಾಣದ ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ ಮತ್ತು ವಿಟಮಿನ್ ಸಿ ಅನ್ನು ಎಳನೀರು ಹೊಂದಿರುತ್ತದೆ.

ಎಳನೀರಿನಿಂದ ಆರೋಗ್ಯ ಪ್ರಯೋಜನಗಳು ಹಲವು. ಎಳನೀರು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ:

ಹೈಡ್ರೇಶನ್ ಮಾಡುತ್ತದೆ:

ಎಳನೀರು ದೇಹದಲ್ಲಿ ನೀರಿನ ಅಂಶ ಇರುವಂತೆ ಮಾಡುತ್ತದೆ. ಇದು ವ್ಯಾಯಾಮದ ನಂತರ ಅಥವಾ ಬಿಸಿ ವಾತಾವರಣದಲ್ಲಿ ನಿರ್ಜಲೀಕರಣ ದೂರ ಮಾಡುತ್ತದೆ.

ದೇಹಕ್ಕೆ ಚೈತನ್ಯ

ಎಳನೀರಿನಲ್ಲಿರುವ ಪೊಟ್ಯಾಸಿಯಮ್ ಅಂಶವು ಬೆವರಿನ ಮೂಲಕ ಕಳೆದುಹೋದ ಚೈತನ್ಯವನ್ನು ಪುನಃ ತುಂಬಲು ಸಹಾಯ ಮಾಡುತ್ತದೆ. ಸ್ನಾಯುಗಳಿಗೆ ಶಕ್ತಿ ತುಂಬುತ್ತದೆ ಮತ್ತು ಸೆಳೆತವನ್ನು ತಡೆಯುತ್ತದೆ.

ರಕ್ತದೊತ್ತಡ ನಿಯಂತ್ರಣ

ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪೊಟ್ಯಾಸಿಯಮ್ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಅಧಿಕ ರಕ್ತದೊತ್ತಡದ ಅಪಾಯವನ್ನು ಸಂಭಾವ್ಯವಾಗಿ ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ

ಕೆಲವು ಅಧ್ಯಯನಗಳು ತೆಂಗಿನ ನೀರಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುವ ಮೂಲಕ ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯನ್ನು ಕಡಿಮೆ ಮಾಡುವ ಮೂಲಕ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಗುಣಲಕ್ಷಣಗಳು

ತೆಂಗಿನ ನೀರಿನಲ್ಲಿ ವಿಟಮಿನ್ ಸಿ ನಂತಹ ಉತ್ಕರ್ಷಣ ನಿರೋಧಕಗಳಿವೆ. ಇದು ಸ್ವತಂತ್ರ ರಾಡಿಕಲ್ ಗಳನ್ನು ತಟಸ್ಥಗೊಳಿಸಲು ಮತ್ತು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಧುಮೇಹಿಗಳು ಎಳನೀರು ಸೇವಿಸಬಹುದೇ?

ಅನೇಕ ಹಣ್ಣಿನ ರಸಗಳಿಗೆ ಹೋಲಿಸಿದರೆ ತೆಂಗಿನ ನೀರಿನಲ್ಲಿ ಸಕ್ಕರೆಯ ಅಂಶ ಗಮನಾರ್ಹವಾಗಿ ಕಡಿಮೆಯಿದ್ದರೂ ಇದು ಇನ್ನೂ ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ. ಅದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಆದಾಗ್ಯೂ, ಅದರ ಗ್ಲೈಸೆಮಿಕ್ ಇಂಡೆಕ್ಸ್ (GI) ಹೆಚ್ಚಿನ ಹಣ್ಣಿನ ರಸಗಳು ಮತ್ತು ಸೋಡಾಗಳಿಗಿಂತ ಕಡಿಮೆಯಾಗಿದೆ. ಅಂದರೆ ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ನಿಧಾನಗತಿಯ ಏರಿಕೆಗೆ ಕಾರಣವಾಗುತ್ತದೆ. ಎಳನೀರು ಸೇವಿಸುವ ಮಧುಮೇಹಿಗಳು ತಮ್ಮ ಸೇವನೆಯನ್ನು ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು.


ಗರ್ಭಿಣಿಯರಿಗೆ ಇದು ಪ್ರಯೋಜನಕಾರಿಯೇ?

ತೆಂಗಿನ ನೀರು ಅದರ ನಮ್ಮನ್ನು ಹೈಡ್ರೇಟ್ ಮಾಡುವುದರಿಂದ ಮತ್ತು ಇದು ಅನೇಕ ಪೌಷ್ಟಿಕಾಂಶಗಳನ್ನು ಹೊಂದಿರುವುದರಿಂದ ಗರ್ಭಿಣಿಯರಿಗೆ ಪ್ರಯೋಜನಕಾರಿಯಾಗಿದೆ.

ಗರ್ಭಾವಸ್ಥೆಯಲ್ಲಿ, ಹೈಡ್ರೀಕರಿಸಿದ ಸ್ಥಿತಿಯಲ್ಲಿರುವುದು ತಾಯಿಯ ಆರೋಗ್ಯ ಮತ್ತು ಮಗುವಿನ ಬೆಳವಣಿಗೆ ಎರಡಕ್ಕೂ ಮುಖ್ಯವಾಗಿದೆ. ತೆಂಗಿನ ನೀರಿನಲ್ಲಿರುವ ಎಲೆಕ್ಟ್ರೋಲೈಟ್‌ಗಳು ನಿರ್ಜಲೀಕರಣವನ್ನು ತಡೆಗಟ್ಟಲು ಮತ್ತು ವಾಕರಿಕೆ ಮತ್ತು ಮಲಬದ್ಧತೆಯಂತಹ ಸಾಮಾನ್ಯ ಗರ್ಭಧಾರಣೆಯ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ ಅದರ ನೈಸರ್ಗಿಕ ಮಾಧುರ್ಯವು ಸಕ್ಕರೆ ಪಾನೀಯಗಳ ಕಡುಬಯಕೆಗಳನ್ನು ಪೂರೈಸುತ್ತದೆ, ಆರೋಗ್ಯಕರ ಪ್ರಯೋಜನವನ್ನು ಒದಗಿಸುತ್ತದೆ.

ಇದನ್ನೂ ಓದಿ: Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು

ಅಲರ್ಜಿಗಳು

ತೆಂಗಿನಕಾಯಿಂದಾಗುವ ಅಲರ್ಜಿಗಳು ವಿರಳವಾಗಿದ್ದರೂ, ಅಲರ್ಜಿಯನ್ನು ಹೊಂದಿರುವ ವ್ಯಕ್ತಿಗಳು ಎಚ್ಚರ ವಹಿಸಬೇಕು. ತೆಂಗಿನ ಉತ್ಪನ್ನಗಳನ್ನು ಸೇವಿಸುವ ಮೊದಲು ಇದರ ಬಗ್ಗೆ ಗಮನ ಹರಿಸಬೇಕು. ಬಹುತೇಕ ಜನರಿಗೆ ಎಳನೀರು ಸೇವನೆಯಿಂದ ಯಾವುದೇ ಅಲರ್ಜಿ ಆಗುವುದಿಲ್ಲ.

ಸಕ್ಕರೆ ಅಂಶ

ತೆಂಗಿನ ನೀರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿದ್ದರೂ ಇದು ಪ್ಯಾಕೆಟ್ ಜ್ಯೂಸ್ ಗಳಿಗಿಂತ ಕಡಿಮೆ ಸಕ್ಕರೆ ಅಂಶವನ್ನು ಹೊಂದಿದೆ. ಆದಾಗ್ಯೂ, ಮಧುಮೇಹಿಗಳು ಈ ಬಗ್ಗೆ ಎಚ್ಚರಿಕೆ ವಹಿಸಿದರೆ ಒಳ್ಳೆಯದು.

ಅತಿಯಾದ ಬಳಕೆ

ಅಧಿಕ ಪ್ರಮಾಣದಲ್ಲಿ ತೆಂಗಿನ ನೀರನ್ನು ಕುಡಿಯುವುದರಿಂದ ಹೆಚ್ಚು ಪೊಟ್ಯಾಸಿಯಮ್ ಸಂಗ್ರಹವಾಗುತ್ತದೆ. ಇದು ಹೈಪರ್‌ಕೆಲೆಮಿಯಾಕ್ಕೆ ಕಾರಣವಾಗಬಹುದು. ಹೈಪರ್‌ಕಲೇಮಿಯಾದ ಲಕ್ಷಣಗಳು ಸ್ನಾಯು ದೌರ್ಬಲ್ಯ, ಅನಿಯಮಿತ ಹೃದಯ ಬಡಿತ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಹೃದಯ ಸ್ತಂಭನಕ್ಕೆ ಕಾರಣವಾಗಿರುವುದರಿಂದ ಮಿತವಾಗಿ ಸೇವಿಸುವುದು ಒಳ್ಳೆಯದು.

Continue Reading

ಫ್ಯಾಷನ್

Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

ಬಾಲಿವುಡ್‌ ನಟ ಹಾಗೂ ಮಾಡೆಲ್‌ ಪ್ರತೀಕ್‌ ಬಬ್ಬರ್‌ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ (Cannes Star Fashion) ತಾಯಿ ಹಿರಿಯ ನಟಿ ಸ್ಮಿತಾ ಪಾಟೀಲ್‌ ಅವರಿಗೆ ಟ್ರಿಬ್ಯೂಟ್‌ ಅರ್ಪಿಸುವ ಸಲುವಾಗಿ ಬ್ಲ್ಯಾಕ್‌ ಕ್ರಾಪ್‌ ಟುಕ್ಸೆಡೊನಲ್ಲಿ, ಕತ್ತಿಗೆ ಸ್ಕಾರ್ಫ್ ಧರಿಸಿ ಕಾಣಿಸಿಕೊಂಡರು. ಅವರ ಈ ಔಟ್ಫಿಟ್‌ ಸ್ಟೈಲಿಂಗ್‌ ಮಾಡಿರುವ ಮೆನ್ಸ್ ಸ್ಟೈಲಿಸ್ಟ್ ರಾಹುಲ್‌ ಈ ಬಗ್ಗೆ ವಿವರಿಸಿದ್ದಾರೆ.

VISTARANEWS.COM


on

Cannes Star Fashion
ಚಿತ್ರಗಳು: ಪ್ರತೀಕ್‌ ಬಬ್ಬರ್‌, ಬಾಲಿವುಡ್‌ ನಟ, ಮಾಡೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಬಾಲಿವುಡ್‌ ನಟ ಹಾಗೂ ಮಾಡೆಲ್‌ ಪ್ರತೀಕ್‌ ಬಬ್ಬರ್‌ (Prateek Babbar) ಬ್ಲ್ಯಾಕ್‌ ಕ್ರಾಪ್‌ ಟುಕ್ಸೆಡೊ/ಸೂಟ್‌ನಲ್ಲಿ, ಕತ್ತಿಗೆ ಸ್ಕಾರ್ಫ್ ಧರಿಸಿ, ರೆಡ್‌ ಕಾರ್ಪೆಟ್‌ ವಾಕ್‌ ಮಾಡಿದ್ದಾರೆ. ಪ್ರತೀಕ್‌ಗೆ ಪ್ರಶಂಸೆ: ಕಾನ್ ಫಿಲ್ಮ್‌ ಫೆಸ್ಟಿವಲ್‌ (Cannes Star Fashion) ಈ ಬಾರಿ ವಾಕ್‌ ಮಾಡಿದ ಭಾರತೀಯ ನಟರ ಪೈಕಿ ಪ್ರತೀಕ್‌, ಅತಿ ಹೆಚ್ಚು ಹ್ಯಾಂಡ್‌ಸಮ್‌ ಆಗಿ ಕಾಣಿಸಿಕೊಂಡಿದ್ದಾರೆ ಎನ್ನುತ್ತಿದ್ದಾರೆ ಫ್ಯಾಷನ್‌ ವಿಮರ್ಶಕರು. ಯಂಗ್‌ & ಎನರ್ಜಿಟಿಕ್‌ ಆಗಿರುವ ಪ್ರತೀಕ್‌ ಈ ಜನರೇಷನ್‌ನ ಹುಡುಗರನ್ನು ಪ್ರತಿಬಿಂಬಿಸಿದ್ದಾರೆ. ತೀರಾ ಸೀರಿಯಸ್‌ ಆಗಿಯೂ ಕಾಣಿಸದೇ, ತೀರಾ ಫಂಕಿಯಾಗಿಯೂ ಕಾಣಿಸದೇ, ಜಂಟಲ್‌ಮೆನ್‌ ಲುಕ್‌ನಲ್ಲಿ ಆಗಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ ಎಂದು ವಿಶ್ಲೇಶಿಸಿದ್ದಾರೆ.

ತಾಯಿ ಸ್ಮಿತಾ ಪಾಟೀಲ್‌ಗೆ ಅರ್ಪಣೆ

ಅಂದಹಾಗೆ, ಪ್ರತೀಕ್‌ ಬಬ್ಬರ್‌ ಅವರು ಇದೇ ಮೊತ್ತ ಮೊದಲ ಬಾರಿಗೆ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ವಾಕ್‌ ಮಾಡಿದ್ದಾರೆ. ಮೊದಲ ಬಾರಿಯಲ್ಲೆ ಎಲ್ಲರ ಗಮನ ಸೆಳೆದಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ತಾಯಿ ನಟಿ ಸ್ಮಿತಾ ಪಾಟೀಲ್‌ ಅವರಿಗೆ ಟ್ರಿಬ್ಯೂಟ್‌ ಅರ್ಪಿಸುವ ಸಲುವಾಗಿ ಬ್ಲ್ಯಾಕ್‌ ಕ್ರಾಪ್‌ ಟುಕ್ಸೆಡೊ ಅಂದರೇ, ಸೂಟ್‌ ಜೊತೆಗೆ ಕತ್ತಿಗೆ ಸ್ಕಾರ್ಫ್ ಧರಿಸಿ ಕಾಣಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ ಅವರ ಸ್ಟೈಲಿಸ್ಟ್ ರಾಹುಲ್‌ ವಿಜಯ್‌. ಅವರು ಹೇಳುವಂತೆ, ಫಿಲ್ಮ್ ಫೆಡರೇಷನ್‌ ಆಫ್‌ ಇಂಡಿಯಾ, ಈ ಬಾರಿ ಮತ್ತೊಮ್ಮೆ ಸ್ಕ್ರೀನ್‌ ಮಾಡಿದ ಸ್ಮಿತಾ ಪಾಟೀಲ್‌ ಅವರ ಹಳೆಯ ಚಿತ್ರ ಮನ್ನತ್‌ ಶೋಗಾಗಿ ಪುತ್ರ ಪ್ರತೀಕ್‌ ಈ ಕಾನ್‌ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡಿದ್ದರು. ಇವರೊಂದಿಗೆ ಹಿರಿಯ ನಟ-ನಟಿಯರಾದ, ನಾಸಿರುದ್ದೀನ್‌ ಶಾ ಹಾಗೂ ನಟಿ ರತ್ನಾ ಪಾಠಕ್‌ ಕೂಡ ಸಿನಿಮಾದ ಸ್ಕ್ರೀನಿಂಗ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಪ್ರತೀಕ್‌ ಬ್ಲ್ಯಾಕ್‌ ಕ್ರಾಪ್‌ ಟುಕ್ಸೆಡೊ

ರೋಹಿತ್‌ ಗಾಂಧಿ & ರಾಹುಲ್‌ ಖನ್ನಾ ಜಂಟಿಯಾಗಿ ಡಿಸೈನ್‌ ಮಾಡಿರುವ ಈ ಕಸ್ಟಮೈಸ್ಡ್ ಟುಕ್ಸೆಡೊ ಅಥವಾ ಬ್ಲ್ಯಾಕ್‌ ಸೂಟ್‌, ಪ್ರತೀಕ್‌ ಅವರಿಗೆ ಸಖತ್‌ ಹ್ಯಾಂಡ್‌ಸಮ್‌ ಆಗಿ ಬಿಂಬಿಸಿದೆ. ಇನ್ನು, ಬೋ ಅಥವಾ ಟೈ ಬದಲು ಅವರು ಧರಿಸಿರುವ ವಿಂಟೇಜ್‌ ಸ್ಕಾರ್ಫ್ ಅವರ ಲುಕ್ಕನ್ನು ಮತ್ತಷ್ಟು ಡಿಫರೆಂಟ್‌ ಆಗಿಸಿದೆ. ಇತರರಿಗಿಂತ ವಿಭಿನ್ನವಾಗಿಸಿದೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

ಇದನ್ನೂ ಓದಿ: Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

ಪ್ರತೀಕ್‌ ಮೊದಲ ಕಾನ್‌ ವಾಕ್‌

“ಇದು ನನ್ನ ಮೊದಲ ಅಂತಾರಾಷ್ಟ್ರೀಯ ಮಟ್ಟದ ರೆಡ್‌ ಕಾರ್ಪೆಟ್‌ ವಾಕ್‌. ಹಾಗಾಗಿ ನಾನು ಆಕರ್ಷಕವಾಗಿ ಕಾಣಿಸುವುದರೊಂದಿಗೆ ನನ್ನ ತಾಯಿಗೆ ಟ್ರಿಬ್ಯೂಟ್‌ ಕೂಡ ಸಲ್ಲಿಸಬೇಕಿತ್ತು. ಹಾಗಾಗಿ ಕತ್ತಿಗೆ ವಿಂಟೇಜ್‌ ಸ್ಕಾರ್ಫ್‌ ಧರಿಸಿ, ಕಾಣಿಸಿಕೊಂಡೆ. ಇದು ಎಲ್ಲರಿಗೂ ಇಷ್ಟವಾಯಿತು” ಎಂದು ಪ್ರತೀಕ್‌ ಮಾಧ್ಯಮದವರೆದುರು ಸಂತಸ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ, ಈ ಬಾರಿಯ ಕಾನ್‌ ಫೆಸ್ಟಿವಲ್‌ ಮೂಲಕ ಭಾರತೀಯ ಮೆನ್ಸ್ ಫ್ಯಾಷನ್‌ನಲ್ಲಿ ಪ್ರತೀಕ್‌ ಕ್ರಾಪ್‌ ಟುಕ್ಸೆಡೊ ಟ್ರೆಂಡ್‌ ಹುಟ್ಟು ಹಾಕಿದ್ದಾರೆ ಎಂದು ವಿಮರ್ಶಿಸಿದ್ದಾರೆ ಫ್ಯಾಷನಿಸ್ಟ್‌ಗಳು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ಫ್ಯಾಷನ್

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ (Star Fashion) ಆರಾಧನಾಗೆ ಇದೀಗ ಬಿಗ್‌ ಬ್ಲ್ಯಾಕ್‌ ಜುಮ್ಕಾಗಳ ಮೇಲೆ ಲವ್‌ ಆಗಿದೆ. ಇಂಡೋ-ವೆಸ್ಟರ್ನ್‌ ಲುಕ್‌ಗೆ ಸಾಥ್‌ ನೀಡಿದೆ. ಟ್ರೆಂಡಿಯಾಗಿರುವ ಇವನ್ನು ಹುಡುಗಿಯರು ಅವರಂತೆ ಕಾಣಲು ಹೇಗೆಲ್ಲಾ ಧರಿಸಬಹುದು? ಎಂಬುದರ ಬಗ್ಗೆ ಜ್ಯುವೆಲ್‌ ಸ್ಟೈಲಿಸ್ಟ್‌ಗಳು ಒಂದಿಷ್ಟು ಟಿಪ್ಸ್‌ ನೀಡಿದ್ದಾರೆ.

VISTARANEWS.COM


on

Star Fashion
ಚಿತ್ರಗಳು: ಆರಾಧನಾ, ಸ್ಯಾಂಡಲ್‌ವುಡ್‌ ನಟಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ (Star Fashion) ಆರಾಧನಾಗೆ ಇದೀಗ ಬಿಗ್‌ ಬ್ಲ್ಯಾಕ್‌ ಜುಮ್ಕಾಗಳ ಮೇಲೆ ಲವ್‌ ಆಗಿದೆ. ಹೌದು, ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ನ ಸೂಪರ್‌ ಸ್ಟಾರ್‌ ಆಗಿದ್ದ, ಮಾಲಾಶ್ರೀ ಮಗಳಾದ ನಟಿ ಆರಾಧನಾ, ಈಗಷ್ಟೇ ನಟ ದರ್ಶನ್‌ ಅವರೊಂದಿಗೆ ‘ಕಾಟೇರ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಾನಾ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಮಾಡೆಲ್‌ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಆಗಾಗ ಒಂದಲ್ಲ ಒಂದು ಹೊಸ ಫ್ಯಾಷನ್‌ ಹಾಗೂ ಸ್ಟೈಲ್‌ ಸ್ಟೇಟ್‌ಮೆಂಟ್‌ಗಳ ಮೂಲಕ ಈ ಜನರೇಷನ್‌ ಹುಡುಗಿಯರನ್ನು ಸೆಳೆಯುತ್ತಿದ್ದಾರೆ.

Star Fashion

ಆರಾಧನಾ ಜುಮ್ಕಾ ಪ್ರೇಮ

ಅಂದಹಾಗೆ, ನಟಿ ಆರಾಧನಾ ಇದೀಗ ಬ್ಲ್ಯಾಕ್‌ ಔಟ್‌ಫಿಟ್‌ ಜೊತೆ ಬ್ಲ್ಯಾಕ್‌ ಬಿಗ್‌ ಜುಮ್ಕಾ ಧರಿಸಿ ಕಾಣಿಸಿಕೊಂಡಿರುವುದು ಅವರಿಗೆ ಬಾಲಿವುಡ್‌ ಫೀಲ್‌ ನೀಡಿದೆ. ಚಿತ್ರದೊಂದಿಗೆ ಅವರು ಹಾಕಿಕೊಂಡಿರುವ ಜುಮ್ಕಾ ಹಿಂದಿ ಹಾಡು ಅವರ ಜುಮ್ಕಾ ಮೇಲಿನ ಪ್ರೇಮವನ್ನು ಹೈಲೈಟ್‌ ಮಾಡಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಇಂಡೋ-ವೆಸ್ಟರ್ನ್‌ ಲುಕ್‌

ಬ್ಲ್ಯಾಕ್‌ ಮೆಟಲ್‌ನ ಬಿಗ್‌ ಜುಮ್ಕಾಗಳು ಎಲ್ಲಾ ಬ್ಲ್ಯಾಕ್‌ ಹಾಗೂ ಡಾರ್ಕ್‌ ಶೇಡ್‌ಗೆ ಮ್ಯಾಚ್‌ ಆಗುತ್ತವೆ. ಹೆಚ್ಚು ಮಿಕ್ಸ್‌ ಮ್ಯಾಚ್‌ ಮಾಡುವ ಅಗತ್ಯವಿಲ್ಲ ಎನ್ನುವ ಜ್ಯುವೆಲ್‌ ಡಿಸೈನರ್‌ಗಳು, ಆರಾಧನಾ ಅವರಿಗೆ ಈ ಜುಮ್ಕಾಗಳು ಸಖತ್‌ ಆಗಿ ಮ್ಯಾಚ್‌ ಆಗಿವೆ. ಅವರ ವೆಸ್ಟರ್ನ್‌ ಸ್ಟೈಲ್‌ಗೆ ಸಾಥ್‌ ನೀಡಿವೆ. ಜುಮ್ಕಾಗಳು ವೆಸ್ಟರ್ನ್‌ ಸ್ಟೈಲ್‌ಸ್ಟೇಟ್ಮೆಂಟ್‌ಗೆ ಮ್ಯಾಚ್‌ ಮಾಡಿರುವುದು ಅವರಿಗೆ ಇಂಡೋ-ವೆಸ್ಟರ್ನ್‌ ಲುಕ್‌ಗೆ ಸಾಥ್‌ ನೀಡಿವೆ ಎನ್ನುತ್ತಾರೆ ಅವರು.
ಇನ್ನು ಅವರ ಬಾರ್ಡಟ್‌ ಡ್ರೆಸ್‌ ಇವನ್ನು ಮತ್ತಷ್ಟು ಹೈಲೈಟ್‌ ಮಾಡಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ಬಿಗ್‌ ಬ್ಲ್ಯಾಕ್‌ ಮೆಟಲ್‌ನ ಕಾಕ್ಟೈಲ್‌ ಫಿಂಗರ್‌ರಿಂಗ್‌ ಕೂಡ ಕಂಪ್ಲೀಟ್‌ ಮಾರ್ಡನ್‌ ಟಚ್‌ ನೀಡಿದೆ. ಇನ್ನು, ಅವರ ಹನ್‌ ಹೇರ್‌ಸ್ಟೈಲ್‌ ಹಾಗೂ ನೆಕ್‌ಲೇಸ್‌ ಇಲ್ಲದ ಖಾಲಿ ಕತ್ತನ್ನು ಮತ್ತಷ್ಟು ಆಕರ್ಷಕವಾಗಿಸಿದೆ. ಇವೆಲ್ಲದರ ಜೊತೆಗೆ ತಿಳಿಯಾದ ಮೇಕಪ್‌, ಕಾಜಲ್‌ ಹಚ್ಚಿದ ಕಂಗಳು ಸಿಂಪಲ್‌ ಲುಕ್‌ ಈ ಜನರೇಷನ್‌ ಹುಡುಗಿಯರಿಗೆ ಪ್ರಿಯವಾಗುವಂತಿದೆ ಎನ್ನುವ ಫ್ಯಾಷನ್‌ ವಿಮರ್ಶಕರಾದ ರಿಚಾ ಪ್ರಕಾರ, ಇದು ಯಂಗ್‌ ಹುಡುಗಿಯರ ಸ್ಟೈಲಿಶ್‌ ಲುಕ್‌ಗೆ ಮಾದರಿಯಾಗುವಂತಿದೆ ಎನ್ನುತ್ತಾರೆ.

Star Fashion

ತಾರೆಯರ ಮುಗಿಯದ ಬಿಗ್‌ ಜುಮ್ಕಾ ಲವ್‌

ಬಿಗ್‌ ಜುಮ್ಕಾಗಳು ಅದರಲ್ಲೂ, ಬ್ಲ್ಯಾಕ್‌ ಹಾಗೂ ವೈಟ್‌ ಮೆಟಲ್‌ನ ಜುಮ್ಕಾಗಳು ಸದಾ ಸಿನಿ ತಾರೆಯರ ಫೇವರೇಟ್‌ ಲಿಸ್ಟ್‌ನಲ್ಲಿವೆ. ಸಿನಿಮಾಗಳಲ್ಲಿ ಅಥವಾ ಸೀರಿಯಲ್‌ಗಳಲ್ಲಿ ಸೀರೆಯೊಂದಿಗೆ ಅಥವಾ ಎಥ್ನಿಕ್‌ ಉಡುಪುಗಳೊಂದಿಗೆ ನಾಯಕಿಯರು ಧರಿಸುವ ಈ ಬಿಗ್‌ ಜುಮ್ಕಾಗಳು, ಹುಡುಗಿಯರನ್ನು ಮಾತ್ರವಲ್ಲ, ಮಧ್ಯ ವಯಸ್ಕ ಮಹಿಳೆಯರನ್ನು ಸೆಳೆದು ಟ್ರೆಂಡಿಯಾಗಿವೆ. ಬಾಲಿವುಡ್‌ನ ನಟಿ ಸಾರಾ ಅಲಿ ಖಾನ್‌, ಶ್ರದ್ಧಾ ಕಪೂರ್‌, ಸೋನಂ ಕಪೂರ್‌, ಜಾನ್ಹವಿ ಸೇರಿದಂತೆ ಸಾಕಷ್ಟು ಬಾಲಿವುಡ್‌ ನಟಿಯರನ್ನು ಸವಾರಿ ಮಾಡಿವೆ. ಬರಬರುತ್ತಾ ಸ್ಯಾಂಡಲ್‌ವುಡ್‌ ನಟಿಯರನ್ನು ಸೆಳೆದಿವೆ. ಇವೆಲ್ಲದರ ಪರಿಣಾಮ, ಎವರ್‌ಗ್ರೀನ್‌ ಮೆಟಲ್‌ ಜ್ಯುವೆಲ್‌ ಟ್ರೆಂಡ್‌ಗೆ ಸೇರಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

ಇದನ್ನೂ ಓದಿ: Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

ಬಿಗ್‌ ಬ್ಲ್ಯಾಕ್‌ ಜುಮ್ಕಾ ಧರಿಸಲು ಬಯಸುವ ಹುಡುಗಿಯರಿಗೆ 5 ಟಿಪ್ಸ್‌

  • ನಿಮ್ಮ ಮುಖದ ಆಕಾರಕ್ಕೆ ಹೊಂದುವ ಡಿಸೈನ್‌ ಧರಿಸಿ.
  • ಈ ಜುಮ್ಕಾ ಧರಿಸಿದಾಗ ಕತ್ತಿಗೆ ಭಾರಿ ವಿನ್ಯಾಸದ ನೆಕ್‌ಪೀಸನ್ನು ಧರಿಸಬೇಡಿ.
  • ಬ್ಲ್ಯಾಕ್‌ ಬಿಗ್‌ ಜುಮ್ಕಾಗಳು ಎಲ್ಲಾ ಉಡುಪಿಗೂ ಮ್ಯಾಚ್‌ ಆಗುತ್ತವೆ.
  • ಹೇರ್‌ಸ್ಟೈಲ್‌ ಕಟ್ಟಿದಂತಿರಲಿ. ಜುಮ್ಕಾಗಳು ಹೈಲೈಟಾಗುತ್ತವೆ.
  • ಧರಿಸುವ ಉಡುಪಿನ ನೆಕ್‌ಲೈನ್‌ ಅಗಲವಾಗಿದ್ದಷ್ಟು ಜುಮ್ಕಾಗಳು ಎದ್ದು ಕಾಣುತ್ತವೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ದೇಶ

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Covaxin Safety: ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ ಎಂದು ಐಸಿಎಂಆರ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Covaxin Safety
Koo

ನವದೆಹಲಿ: ಬ್ರಿಟನ್‌ನಲ್ಲಿ ಅಸ್ಟ್ರಾಜೆನಿನಾ ಕೊರೊನಾ ನಿರೋಧಕ ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಸ್ವತಃ ಕಂಪನಿಯೇ ಒಪ್ಪಿಕೊಂಡ ಬಳಿಕ ಭಾರತದಲ್ಲೂ ಕೊರೊನಾ ನಿರೋಧಕ ಲಸಿಕೆಯ ಸುರಕ್ಷತೆಗೆ ಬಗ್ಗೆ ಚರ್ಚೆಯಾಗುತ್ತಿದೆ. ಅದರಲ್ಲೂ, ದೇಶೀಯವಾಗಿ ಭಾರತ್‌ ಬಯೋಟೆಕ್‌ (Bharat Biotech) ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್‌ ಅಡ್ಡಪರಿಣಾಮಗಳ ಕುರಿತು ಬನಾರಸ್‌ ಹಿಂದು ವಿವಿ (BHU) ವರದಿ ಬಿಡುಗಡೆ ಮಾಡಿದೆ. ಕೊವ್ಯಾಕ್ಸಿನ್‌ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಬಿಎಚ್‌ಯು ಪ್ರಕಟಿಸಿದ ವರದಿಗೆ ಈಗ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಆಕ್ರೋಶ ವ್ಯಕ್ತಪಡಿಸಿದೆ.

ಐಸಿಎಂಆರ್‌ ಮಹಾ ನಿರ್ದೇಶಕ ರಾಜೀವ್‌ ಬಾಹ್ಲ್‌ ಅವರು ಬಿಎಚ್‌ಯು ಅಧ್ಯಯನ ವರದಿಯನ್ನು ನಿರಾಕರಿಸಿದ್ದಾರೆ. “ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ. ಸಂಶೋಧನೆಗೆ ಬಳಸಿರುವ ಅಂಕಿ-ಅಂಶಗಳನ್ನು ಸರಿಯಾಗಿ ಅವಲೋಕನ ಮಾಡಿಲ್ಲ” ಎಂಬುದಾಗಿ ರಾಜೀವ್‌ ಬಾಹ್ಲ್‌ ಹೇಳಿದ್ದಾರೆ.

“ಲಸಿಕೆಯ ಅಡ್ಡ ಪರಿಣಾಮ, ಲಸಿಕೆಯ ಸುರಕ್ಷತೆ ಬಗ್ಗೆ ಅಧ್ಯಯನ ಮಾಡಲು ತುಂಬ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಬಿಎಚ್‌ಯು ಇಂತಹ ಮಾನದಂಡಗಳನ್ನು ಅನುಸರಿಸುವುದು ಬಿಡಿ, ಅಧ್ಯಯನ ಮಾಡುವ ತಜ್ಞರಿಗೆ ತಾಂತ್ರಿಕ ಹಾಗೂ ಹಣಕಾಸು ನೆರವು ಕೂಡ ಒದಗಿಸಿಲ್ಲ. ಹಾಗಾಗಿ, ಲಸಿಕೆಯ ಸುರಕ್ಷತೆಯ ಬಗ್ಗೆ ಬನಾರಸ್‌ ಹಿಂದು ವಿವಿ ಮಾಡಿದ ಸಂಶೋಧನಾ ವರದಿಯು ವೈಜ್ಞಾನಿಕತೆಯ ಆಧಾರದ ಮೇಲಿಲ್ಲ” ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್‌ ಲಸಿಕೆ ಪಡೆದ ಸುಮಾರು 926 ಜನರನ್ನು ಸಂಪರ್ಕಿಸಿ ಲಸಿಕೆಯ ಸುರಕ್ಷತೆ, ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ವರದಿ ತಯಾರಿಸಿದೆ. ಲಸಿಕೆ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದವರಿಗೆ ಪಾರ್ಶ್ವವಾಯು, ನರಗಳಿಗೆ ಸಂಬಂಧಿಸಿದ ಕಾಯಿಲೆ, ಕೆಮ್ಮು, ಮೂಗು ಸೋರುವಿಕೆ, ಗಂಟಲು ಕೆರೆತ, ಉಸಿರಾಟ ಸಮಸ್ಯೆ ಸೇರಿ ಹಲವು ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ” ಎಂಬುದಾಗಿ ವರದಿ ತಿಳಿಸಿತ್ತು.

ಭಾರತ್‌ ಬಯೋಟೆಕ್‌ ಹೇಳುವುದೇನು?

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ. ಹಾಗಾಗಿ, ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿ ತಿಳಿಸಿದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Continue Reading
Advertisement
Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ2 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20243 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ3 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ3 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ3 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ4 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ4 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ5 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ5 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌