IND vs SA: ಹರಿಣ ಪಡೆಯ ಬೌಲಿಂಗ್​ ಎದುರಿಸಲು ವಿಶೇಷ ಅಭ್ಯಾಸ ನಡೆಸಿದ ಕೊಹ್ಲಿ - Vistara News

ಕ್ರಿಕೆಟ್

IND vs SA: ಹರಿಣ ಪಡೆಯ ಬೌಲಿಂಗ್​ ಎದುರಿಸಲು ವಿಶೇಷ ಅಭ್ಯಾಸ ನಡೆಸಿದ ಕೊಹ್ಲಿ

ಈಗಾಗಲೇ ಮೊದಲ ಪಂದ್ಯ ಸೋತಿರುವ ಭಾರತ ಅಂತಿಮ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಡ್ರಾ ಮಾಡಿಕೊಳ್ಳಲು ನೆಟ್ಸ್​ನಲ್ಲಿ ಬಾರಿ ಕಸರತ್ತು ಮಾಡುತ್ತಿದೆ.

VISTARANEWS.COM


on

virat kohli net practice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ(IND vs SA) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ(South Africa vs India, 2nd Test) ನಾಳೆ(ಬುಧವಾರ)ಯಿಂದ ಆರಂಭಗೊಳ್ಳಲಿದೆ. ಈಗಾಗಲೇ ಮೊದಲ ಪಂದ್ಯ ಸೋತಿರುವ ಭಾರತ ಅಂತಿಮ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಡ್ರಾ ಮಾಡಿಕೊಳ್ಳಲು ನೆಟ್ಸ್​ನಲ್ಲಿ ಬಾರಿ ಕಸರತ್ತು ಮಾಡುತ್ತಿದೆ. ವೇಗಿ ನಾಂಡ್ರೆ ಬರ್ಗರ್‌ ಅವರನ್ನು ಎದುರಿಸುವ ನಿಟ್ಟಿನಲ್ಲಿ ವಿರಾಟ್‌ ಕೊಹ್ಲಿ ಅವರು ‘ನೆಟ್ ಪ್ರ್ಯಾಕ್ಟಿಸ್​’ ವೇಳೆ ಹೆಚ್ಚಿನ ಗಮನಹರಿಸಿದ್ದಾರೆ. ಎಡಗೈ ಬೌಲರ್​ ಎದುರಿಸುವ ನಿಟ್ಟಿನಲ್ಲಿ ಆಫ್ರಿಕಾದ ಸ್ಥಳೀಯ ನೆಟ್ ಬೌಲರ್​ಗಳನ್ನು ಅಭ್ಯಾಸದ ಅವಧಿಯಲ್ಲಿ ಬಳಸಿಕೊಂಡಿದ್ದಾರೆ.

ವಿರಾಟ್​ ಕೊಹ್ಲಿ ನೆಟ್ಸ್‌ನಲ್ಲಿ ಹೆಚ್ಚಿನ ಬ್ಯಾಟಿಂಗ್​ ಅಭ್ಯಾಸ ನಡೆಸುವ ಮೂಲಕ ಹರಿಣ ಪಡೆಯ ಬೌಲರ್​ಗಳನ್ನು ಕಟ್ಟಿಹಾಕುವ ಪಣ ತೊಟ್ಟಿದ್ದಾರೆ. ಕೊಹ್ಲಿ ಜತೆ ಶ್ರೇಯಸ್ ಅಯ್ಯರ್​ ಕೂಡ ಹೆಚ್ಚುವರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ. ಉಭಯ ಆಟಗಾರರು ಒಂದು ಗಂಟೆಗೂ ಹೆಚ್ಚಿನ ಸಮಯ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ. ಮೊದಲು ಬೌಲರ್‌ಗಳನ್ನು ಎದುರಿಸಿದರು. ಬಳಿಕ ಸುಮಾರು 25 ನಿಮಿಷಗಳ ಕಾಲ ತೀವ್ರ ಗತಿಯ ಥ್ರೊ ಡೌನ್‌ಗಳನ್ನು ಎದುರಿಸಿದ್ದಾರೆ.

ಸ್ಥಳೀಯ ನೆಟ್​ ಬೌಲರ್​ಗಳೊಂದಿಗೆ ಅಭ್ಯಾಸ ನಡೆಸಿದ ಬಳಿಕ ವಿರಾಟ್​ ಕೊಹ್ಲಿ ಈ ಬೌಲರ್​ಗಳೊಂದಿಗೆ ಫೋಟೊ ತೆಗಿಸಿಕೊಂಡಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸೆಂಚುರಿಯನ್​ನಲ್ಲಿ ನಡೆದಿದ್ದ ಮೊದಲ ಟೆಸ್ಟ್​ನಲ್ಲಿ ಭಾರತೀಯ ಬ್ಯಾಟರ್​ಗಳು ಬೌನ್ಸಿ ಎಸೆತಗಳನ್ನು ಎದುರಿಸಿ ನಿಲ್ಲುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದರು. ದ್ವಿತೀಯ ಪಂದ್ಯದಲ್ಲಿ ಹೀಗಾಗ ಬಾರದು ಎನ್ನುವು ನಿಟ್ಟಿನಲ್ಲಿ ಎಲ್ಲ ಬ್ಯಾಟರ್​ಗಳು ಬೌನ್ಸಿ ಎಸೆತಗಳ ಅಭ್ಯಾಸ ನಡೆಸಿದ್ದಾರೆ.

ಇದನ್ನೂ ಓದಿ Team India : ಬೌಲಿಂಗ್ ಬಲ ಹೆಚ್ಚಳಕ್ಕೆ ತಂತ್ರ ಹೇಳಿಕೊಟ್ಟ ಮಾಜಿ ಕೋಚ್​

ಜಡೇಜಾ ಫಿಟ್​

ರವೀಂದ್ರ ಜಡೇಜಾ ಸಂಪೂರ್ಣವಾಗಿ ಫಿಟ್​ ಆಗಿದ್ದು ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯುವು ಬಹುತೇಕ ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಅಲ್ಲದೆ ಅವರು ನೆಟ್ಸ್​ನಲ್ಲಿಯೂ ಅಭ್ಯಾಸ ನಡೆಸಿದ್ದಾರೆ. ಮೊದಲ ಪಂದ್ಯದಲ್ಲಿ ಜಡೇಜಾ ಅನುಪಸ್ಥಿತಿಯಲ್ಲಿ ರವಿಚಂದ್ರ ಅಶ್ವಿನ್​ ಅವಕಾಶ ಪಡೆದಿದ್ದರು. ಆದರೆ ಅವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. 2 ಇನಿಂಗ್ಸ್​ ಸೇರಿ ಕಢವಲ ಒಂದು ವಿಕೆಟ್​ ಮಾತ್ರ ಕಬಳಿಸಿದ್ದರು. ಬ್ಯಾಟಿಂಗ್​ನಲ್ಲಿಯೂ ಶೂನ್ಯ ಮತ್ತು 8 ರನ್​ ಗಳಿಸಿದ್ದರು.

ಜಡೇಜಾ ದ್ವಿತೀಯ ಪಂದ್ಯಕ್ಕೆ ಮರಳಿದರೆ ಆಗ ಅಶ್ವಿನ್​ ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಜಡೇಜಾ ಸ್ಪಿನ್​ ಜತೆಗೆ ಬ್ಯಾಟಿಂಗ್​ ಕೂಡ ಮಾಡಬಲ್ಲರು. ಇದು ತಂಡಕ್ಕೆ ಹೆಚ್ಚು ಪ್ಲಸ್​ ಪಾಯಿಂಟ್​ ಆಗಲಿದೆ. ಈ ವರ್ಷದಲ್ಲಿ ಜಡೇಜಾ ಭಾರತ ತಂಡದ ಪರ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾದಲ್ಲಿಯೂ ಶ್ರೇಷ್ಠ ನಿರ್ವಹಣೆ ತೋರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

Team India: ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಯಾವುದೇ ವಿಶ್ವಕಪ್​ ಟೂರ್ನಿಯಲ್ಲಿ ಫೋಟೋಶೂಟ್‌ಗೆ ಮಾತ್ರ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಆ ಬಳಿಕ ಐಸಿಸಿ ವರ್ಷದ ಲಾಂಛನದೊಂದಿಗೆ ನಕಲಿ ಬೆಳ್ಳಿಯ ಟ್ರೋಫಿಯನ್ನು ವಿನ್ಯಾಸಗೊಳಿಸುತ್ತದೆ ಮತ್ತು ಇದರನ್ನು ವಿಜೇತ ತಂಡಕ್ಕೆ ನೀಡಲಾಗುತ್ತದೆ. ಮೂಲ ಟ್ರೋಫಿ ಐಸಿಸಿ ಬಳಿಯೇ ಇರುತ್ತದೆ.

VISTARANEWS.COM


on

Team India
Koo

ಬೆಂಗಳೂರು: 17 ವರ್ಷಗಳ ಬಳಿಕ ಭಾರತ ತಂಡ(Team India) 2ನೇ ಬಾರಿಗೆ ಟಿ20 ವಿಶ್ವಕಪ್(t20 world cup) ಟ್ರೋಫಿ​ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಈ ಸಾಧನೆ ಮಾಡಿದ ಆಟಗಾರರಿಗೆ ಈಗಾಗಲೇ ತವರಿನಲ್ಲಿ ಅಭೂತಪೂರ್ವ ಸ್ವಾಗತ ಕೂಡ ಲಭಿಸಿದೆ. ಆದರೆ, ಭಾರತ ತಂಡದ ಬಳಿ ಇರುವುದು ಮೂಲ ಟಿ20 ವಿಶ್ವಕಪ್​ ಟ್ರೋಫಿ(t20 world cup trophy) ಅಲ್ಲ ಇದು ಡುಪ್ಲಿಕೇಟ್ ಟ್ರೋಫಿ ಎಂದು ತಿಳಿದು ಅಭಿಮಾನಿಗಳು ಶಾಕ್ ಆಗಿದ್ದಾರೆ.

ಹೌದು, ಟೀಮ್​ ಇಂಡಿಯಾ ಭಾರತಕ್ಕೆ ತಂದಿರುವುದು ಡುಪ್ಲಿಕೇಟ್ ಟಿ20 ವಿಶ್ವಕಪ್​ ಟ್ರೋಫಿ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಯಾವುದೇ ವಿಶ್ವಕಪ್​ ಟೂರ್ನಿಯಲ್ಲಿ ಫೋಟೋಶೂಟ್‌ಗೆ ಮಾತ್ರ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಆ ಬಳಿಕ ಐಸಿಸಿ ವರ್ಷದ ಲಾಂಛನದೊಂದಿಗೆ ನಕಲಿ ಬೆಳ್ಳಿಯ ಟ್ರೋಫಿಯನ್ನು ವಿನ್ಯಾಸಗೊಳಿಸುತ್ತದೆ ಮತ್ತು ಇದರನ್ನು ವಿಜೇತ ತಂಡಕ್ಕೆ ನೀಡಲಾಗುತ್ತದೆ. ಮೂಲ ಟ್ರೋಫಿ ಐಸಿಸಿ ಬಳಿಯೇ ಇರುತ್ತದೆ.

ಇದನ್ನೂ ಓದಿ Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

ಅಸಲಿ ಟ್ರೋಫಿ ದುಬೈನಲ್ಲಿರುವ ಐಸಿಸಿ ಕೇಂದ್ರ ಕಚೇರಿಯಲ್ಲಿದೆ. ಫೋಟೋಶೂಟ್​ ನಡೆಸಿದ ಬಳಿಕ ಮೂಲ ಟ್ರೋಫಿಯನ್ನು ಕೇಂದ್ರ ಕಚೇರಿಗೆ ನೀಡಲಾಗುತ್ತದೆ. ಯಾವುದೇ ತಂಡ ಕಪ್ ಗೆದ್ದರೂ ಅದನ್ನು ಸಂಭ್ರಮಾಚರಣೆ ಮತ್ತು ಫೋಟೋ ಸೆಷನ್​ವರೆಗೂ ಮಾತ್ರ ಪ್ರಸ್ತುತಪಡಿಸಲಾಗುತ್ತದೆ. ಅದರ ನಂತರ, ಗೆದ್ದವರು ನಕಲಿ ಟ್ರೋಫಿಯೊಂದಿಗೆ ತವರಿಗೆ ಹಿಂದಿರುಗುತ್ತಾರೆ. ಚಾಂಪಿಯನ್​ ಎನಿಸಿಕೊಂಡಿರುವ ಭಾರತದ ಬಳಿ ಇರುವುದು ಡುಪ್ಲಿಕೇಟ್ ಟ್ರೋಫಿ ಎಂದು ತಿಳಿದ ಅಭಿಮಾನಿಗಳು ನಕಲಿ ಟ್ರೋಫಿಗಾಗಿ ಇಷ್ಟೊಂದು ಹೋರಾಡಬೇಕಿತ್ತಾ ಎಂದು ಪ್ರಶ್ನಿಸುತ್ತಿದ್ದಾರೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರೀಡೆ

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Viral Video: ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ

VISTARANEWS.COM


on

viral video
Koo

ಮುಂಬಯಿ: ಟಿ20 ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು. ಮಳೆಯನ್ನು ಲೆಕ್ಕಿಸದೇ ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಕಿಕ್ಕಿರಿದ ಜನಸಂದಣಿಯ ನಡುವೆಯೂ ಆ್ಯಂಬುಲೆನ್ಸ್​ಗೆ(ambulance) ಟೀಮ್‌ ಇಂಡಿಯಾ(Team India) ಅಭಿಮಾನಿಗಳು ದಾರಿ ಮಾಡಿಕೊಡುವ ಮೂಲಕ ಮಾನವೀಯತೆ ತೋರಿ ಎಲ್ಲರ ಮನಗೆದ್ದಿದ್ದಾರೆ.

ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ನೆಟ್ಟಿಗರು ಈ ವಿಡಿಯೊಗೆ ಕಮೆಂಟ್​ ಮಾಡಿದ್ದು, ಟೀಮ್​ ಇಂಡಿಯಾ ಅಭಿಮಾನಿಗಳಿಗೆ ದೊಡ್ಡ ಚಪ್ಪಾಳೆ ನೀಡಬೇಕು ಎಂದಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಇದನ್ನೂ ಓದಿ Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದರು. ಜತೆಗೆ ನೃತ್ಯ ಕೂಡ ಮಾಡಿ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಒಟ್ಟಾರೆ ಆಟಗಾರರು ಮತ್ತು ಮುಂಬೈ ಜನತೆ ನಿನ್ನೆ ಸಂತಸ ಅಲೆಯಲ್ಲಿ ತೇಲಾಡಿತ್ತು.

Continue Reading

ಕ್ರೀಡೆ

Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

Team India: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

VISTARANEWS.COM


on

Team India
Koo

ಮುಂಬಯಿ: ವಿಶ್ವ ವಿಜೇತ ಟೀಮ್​ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದಾರೆ. ಈ ವಿಡಿಯೊವನ್ನು ಭಾರತದ ಮ್ಯೂಸಿಕ್‌ ಲೆಜೆಂಡ್‌ ಎ.ಆರ್. ರೆಹಮಾನ್ ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆಯಿಂದಲೇ ಜಮಾಯಿಸಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ಕ್ರಿಕೆಟ್​ ಅಭಿಮಾನಿಗಳು ರೋಹಿತ್​ ಶರ್ಮಾ, ವಿರಾಟ್ ಕೊಹ್ಲಿ ಪರ ಜಯಘೋಷ ಕೂಗಿದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜನ ಸಾಗರ ಮಧ್ಯೆ ಅರಬ್ಬಿ ಸಮುದ್ರ ಕೂಡ ಕೆಲ ಕಾಲ ಸ್ಥಬ್ಧವಾಗಿತ್ತು.

2007 ರ ಟಿ 20 ವಿಶ್ವಕಪ್‌ನ ವಿಜಯೋತ್ಸವದ ಮೆರವಣಿಗೆ, 2011 ರಲ್ಲಿ ಭಾರತದ ಏಕದಿನ ವಿಶ್ವಕಪ್ ವಿಜಯೋತ್ಸವ ನಡೆಸಿದ 13 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯನ್ನು ಮುಂಬೈ ನಗರ ಹೊಸ ಉತ್ಸವವಾಗಿ ಆಚರಿಸಿತು.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಂಬೈಗೆ ಆಗಮಿಸಿದ ಭಾರತ ತಂಡದ ಆಟಗಾರರು ಮರೀನಾ ಡ್ರೈವ್‌ ಬಳಿ ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಇದನ್ನೂ ಓದಿ Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Team India : ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

VISTARANEWS.COM


on

Team India
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ರಲ್ಲಿ (Team India) ಟೀಮ್ ಇಂಡಿಯಾದ ಟ್ರೋಫಿ ಗೆದ್ದ ಸಂಭ್ರಮವನ್ನು ಆಚರಿಸಲು ಕ್ರಿಕೆಟ್ ಅಭಿಮಾನಿಗಳು ಮುಂಬೈನಲ್ಲಿ ಜಮಾಯಿಸಿದ್ದರು. ಅಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣವು ಗದ್ದಲ ಮತ್ತು ಉತ್ಸಾಹದಿಂದ ತುಂಬಿತ್ತು. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 125 ಕೋಟಿ ರೂ.ಗಳ ಬಹುಮಾನವು ದೊರೆಯಿತು. ಈ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಪ್ರಮುಖ ಆಟಗಾರರು ವೇದಿಕೆಯಲ್ಲಿದ್ದು, ಅದ್ಯಮ ಉತ್ಸಹದಲ್ಲಿದ್ದ ಪ್ರೇಕ್ಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು. ಅಭಿಮಾನಿಗಳ ಬೃಹತ್​​ ಸಂಖ್ಯೆಯು ಯಶಸ್ಸನ್ನು ಹೆಚ್ಚಿಸಿತು. ಅಪಾರ ಜನಸಂದಣಿಯಿಂದಾಗಿ ಟೀಮ್ ಇಂಡಿಯಾ ಬಸ್ ಬೀದಿಗಳಲ್ಲಿ ಸಂಚರಿಸಲು ಕಷ್ಟವಾಯಿತು. ಇದು ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣ ಉಂಟು ಮಾಡಿತು.

ಇದನ್ನೂ ಓದಿ: India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

“ಮುಂಬೈ ಎಂದಿಗೂ ನಿರಾಶೆ ಮಾಡುವುದಿಲ್ಲ.. ನಮಗೆ ಆದರದ ಸ್ವಾಗತ ದೊರೆಯಿತು. ತಂಡದ ಪರವಾಗಿ, ನಾವು ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ನಾನು ತುಂಬಾ ಸಂತೋಷ ಮತ್ತು ನಿರಾಳನಾಗಿದ್ದೇನೆ ಎದು ರೋಹಿತ್​ ಶರ್ಮಾ ಹೇಳಿದರು. ಇದೇ ವೇಳೆ ಅವರು ಟಿ 20 ವಿಶ್ವಕಪ್​​ನ ಅಂತಿಮ ಓವರ್​ನಲ್ಲಿ ನಿರ್ಣಾಯಕ ಪ್ರದರ್ಶನಕ್ಕಾಗಿ ಭಾರತೀಯ ನಾಯಕ ತಮ್ಮ ಉಪನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಶ್ಲಾಘಿಸಿದರು. “ಕೊನೆಯ ಓವರ್ ಎಸೆದು ತಂಡವನ್ನು ಕಾಪಾಡಿದ ಹಾರ್ದಿಕ್ಗೆ ಹ್ಯಾಟ್ಸ್ ಆಫ್. ನಿಮಗೆ ಎಷ್ಟು ರನ್​ಗಳ ಅಗತ್ಯವಿದ್ದರೂ, ಆ ಓವರ್ ಎಸೆಯಲು ಯಾವಾಗಲೂ ತುಂಬಾ ಒತ್ತಡವಿರುತ್ತದೆ. ಅವರಿಗೆ ಹ್ಯಾಟ್ಸ್ ಆಫ್” ಎಂದು ನಾಯಕ ಹೇಳಿದರು. ಇದೇ ವೇಳೆ ಹಾರ್ದಿಕ್! ಹಾರ್ದಿಕ್!” ಜನಸಮೂಹದಿಂದ. ಪಾಂಡ್ಯ ಮುಗುಳ್ನಗೆ ಮತ್ತು ಅಲೆಯೊಂದಿಗೆ ಚಪ್ಪಾಳೆಯನ್ನು ಒಪ್ಪಿಕೊಂಡರು. ಭಾವಪರವಶರಾದ ಹಾರ್ದಿಕ್ ಎದ್ದು ನಿಂತು ಅಭಿಮಾನಿಗಳನ್ನು ಸ್ವಾಗತಿಸಿದರು. ಇದು ವಾಂಖೆಡೆಯಲ್ಲಿ ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣವನ್ನು ಹೆಚ್ಚಿಸಿತು.

ವಿರಾಟ್ ಕೊಹ್ಲಿ ಕೂಡ ಪ್ರೇಕ್ಷಕರಿಗೆ ಹಾಗೂ ಸಹ ಆಟಗಾರರಿಗೆ ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ. “ರೋಹಿತ್ ಮತ್ತು ನಾನು ನಾವು ಇದನ್ನು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದೇವೆ. ನಾವು ಯಾವಾಗಲೂ ವಿಶ್ವಕಪ್ ಗೆಲ್ಲಲು ಬಯಸಿದ್ದೆವು. ಟ್ರೋಫಿಯನ್ನು ವಾಂಖೆಡೆಗೆ ಮರಳಿ ತರುವುದು ಬಹಳ ವಿಶೇಷವಾದ ಭಾವನೆ. ನಾವು ಕಳೆದ 15 ವರ್ಷಗಳಿಂದ ಆಡುತ್ತಿದ್ದೇವೆ ಮತ್ತು ರೋಹಿತ್ ತುಂಬಾ ಭಾವುಕನಾಗಿರುವುದನ್ನು ನಾನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ಅವನು ಅಳುತ್ತಿದ್ದನು, ನಾನು ಅಳುತ್ತಿದ್ದೆ, ನಮ್ಮಿಬ್ಬರ ನಡುವಿನ ಆ ಅಪ್ಪುಗೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಭಾರತದ ಶ್ರೇಷ್ಠ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿದ ಕೊಹ್ಲಿ, “ಜಸ್ಪ್ರೀತ್ ಬುಮ್ರಾ ಇದೀಗ ವಿಶ್ವದ ಎಂಟನೇ ಅದ್ಭುತ ಎಂದು ಹೇಳಿದರು. ಮುಂಬೈನ ಪ್ರೇಕ್ಷಕರು ಬೌಲರ್​​ನ ಅಸಾಧಾರಣ ಕೊಡುಗೆಗಳನ್ನು ಸಂಭ್ರಮಿಸಿದರು.

ವಾಂಖೆಡೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಅಪ್ರತಿಮ ಜೋಡಿ ಕೊಹ್ಲಿ ಮತ್ತು ರೋಹಿತ್ ಮೈದಾನದಲ್ಲಿ ನೃತ್ಯ ಮಾಡಿದರು. ಇದು ಅಭಿಮಾನಿಗಳ ಸಂತೋಷಕ್ಕೆ ಕಾರಣವಾಯಿತು. ವಿಜಯೋತ್ಸವದ ಮೆರವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಜಸ್ಪ್ರೀತ್ ಬುಮ್ರಾ, “ನಾನು ಇಂದು ನೋಡಿದ್ದನ್ನು ನಾನು ಹಿಂದೆಂದೂ ನೋಡಿಲ್ಲ ಎಂದು ಹೇಳಿದರು.

Continue Reading
Advertisement
Self Harming in bengaluru
ಬೆಂಗಳೂರು6 mins ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

salary hike cm siddaramaiah
ಪ್ರಮುಖ ಸುದ್ದಿ8 mins ago

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Chaithra J Achar Kittale Roopanthara Raj B Shetty out
ಸ್ಯಾಂಡಲ್ ವುಡ್28 mins ago

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

UK Election
ವಿದೇಶ30 mins ago

UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Team India
ಕ್ರೀಡೆ45 mins ago

Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

Actor Darshan very simple person Yamuna Srinidhi
ಸ್ಯಾಂಡಲ್ ವುಡ್57 mins ago

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Job Alert
ಉದ್ಯೋಗ1 hour ago

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

UK Election
ವಿದೇಶ1 hour ago

UK Election: ಬ್ರಿಟನ್‌ನಲ್ಲಿ ಲೇಬರ್‌ ಪಾರ್ಟಿಗೆ ಗದ್ದುಗೆ ಖಚಿತ- ಪ್ರಧಾನಿ ಪಟ್ಟಕೇರಲಿರುವ ಕೀರ್‌ ಸ್ಟಾರ್ಮರ್‌ ಹಿನ್ನೆಲೆ ಏನು?

IAS Transfer
ಪ್ರಮುಖ ಸುದ್ದಿ1 hour ago

IAS Transfer: ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ, ಯಾರ್ಯಾರು ಎಲ್ಲಿಗೆ?

viral video
ಕ್ರೀಡೆ1 hour ago

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ4 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ18 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ19 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ21 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ21 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ23 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ24 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌