KPTCL Recruitment: ಜ.3ಕ್ಕೆ ಕೆಪಿಟಿಸಿಎಲ್‌ ಕಿರಿಯ ಸಿವಿಲ್‌ ಎಂಜಿನಿಯರ್‌ ಅಂತಿಮ ಆಯ್ಕೆಪಟ್ಟಿ ಪ್ರಕಟ - Vistara News

ಉದ್ಯೋಗ

KPTCL Recruitment: ಜ.3ಕ್ಕೆ ಕೆಪಿಟಿಸಿಎಲ್‌ ಕಿರಿಯ ಸಿವಿಲ್‌ ಎಂಜಿನಿಯರ್‌ ಅಂತಿಮ ಆಯ್ಕೆಪಟ್ಟಿ ಪ್ರಕಟ

KPTCL Recruitment: ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳಲ್ಲಿನ ವಿವಿಧ ಎಂಜಿನಿಯರ್‌ ಹುದ್ದೆಗಳ ಆಯ್ಕೆಪಟ್ಟಿ ಬಿಡುಗಡೆಯ ವೇಳಾಪಟ್ಟಿಯನ್ನು ಕೆಪಿಟಿಸಿಎಲ್‌ ಪ್ರಕಟಿಸಿದೆ.

VISTARANEWS.COM


on

KPTCL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಪಿಟಿಸಿಎಲ್‌ ಎಂಜಿನಿಯರ್‌ ಹುದ್ದೆಗಳಿಗೆ‌ (KPTCL Recruitment) ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ನೇಮಕಾತಿ ವಿಳಂಬಕ್ಕೆ ಆಕ್ರೋಶ ಹೊರಹಾಕಿದ್ದ ಉದ್ಯೋಗಾಕಾಂಕ್ಷಿಗಳು, ಹಲವು ಬಾರಿ ಪ್ರತಿಭಟನೆ ನಡೆಸಿ ನೇಮಕಾತಿ ಪ್ರಕ್ರಿಯೆ ಶೀಘ್ರ ಮುಗಿಸುವಂತೆ ಒತ್ತಾಯಿಸಿದ್ದರು. ಇದೀಗ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳಲ್ಲಿ ಖಾಲಿ ಇರುವ ವಿವಿಧ ಪದವೃಂದದ ಸಹಾಯಕ ಎಂಜಿನಿಯರ್(ವಿದ್ಯುತ್), ಸಹಾಯಕ ಎಂಜಿನಿಯರ್(ಸಿವಿಲ್), ಕಿರಿಯ ಎಂಜಿನಿಯರ್ (ವಿದ್ಯುತ್), ಕಿರಿಯ ಎಂಜಿನಿಯರ್(ಸಿವಿಲ್) ಹಾಗೂ ಕಿರಿಯ ಸಹಾಯಕ ಹುದ್ದೆ ಸೇರಿ ಒಟ್ಟು 1492 ಹುದ್ದೆಗಳ ನೇಮಕಾತಿಗಾಗಿ 2022ರ ಫೆಬ್ರವರಿ 1 ರಂದು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು.

ಆಯ್ಕೆ ಪಟ್ಟಿ ಪ್ರಕಟಣೆಯ ವೇಳಾಪಟ್ಟಿ

ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ ಹಾಗೂ ಕಿರಿಯ ಎಂಜಿನಿಯರ್(ಸಿವಿಲ್) ಹುದ್ದೆಯ ತಾತ್ಕಾಲಿಕ ಅಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು ಜನವರಿ 3 ರಂದು ಪ್ರಕಟಿಸಲಾಗುತ್ತದೆ.

ಎಇ‌ (ವಿದ್ಯುತ್); 2 ವಾರಗಳಲ್ಲಿ ತಾತ್ಕಾಲಿಕ ಪಟ್ಟಿ

ಸಹಾಯಕ ಎಂಜಿನಿಯರ್ (ವಿ) (ASSISTANT ENGINEER (ELEC)) ಹುದ್ದೆಗೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ಕಲ್ಯಾಣ ಕರ್ನಾಟಕ ಕೋಟಾದ ಅಭ್ಯರ್ಥಿಗಳಿಂದ ಜ. 3 ರಂದು ಹೊಸದಾಗಿ ಇಚ್ಛಿತಾ ಪತ್ರಗಳನ್ನು ಪಡೆಯುವ ಪ್ರಕ್ರಿಯೆಯನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನು ಎರಡು ವಾರಗಳಲ್ಲಿ ಪ್ರಕಟಿಸಲಾಗುವುದು.

ಸಹಾಯಕ ಎಂಜಿನಿಯ‌ರ್(ವಿ) (Assistant Engineer (Elec)) ಹಾಗೂ ಕಿರಿಯ ಎಂಜಿನಿಯರ್(ವಿ) (Junior Engineer (Elec)) ಎರಡೂ ಹುದ್ದೆಗಳಿಗೆ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಆಯ್ಕೆ ಪಟ್ಟಿಯಲ್ಲಿ ಅರ್ಹತೆ ಪಡೆದಿರುವುದರಿಂದ, ಸಹಾಯಕ ಎಂಜಿನಿಯ‌ರ್(ವಿ) ಹುದ್ದೆಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ನಂತರ, ಕಿರಿಯ ಇಂಜಿನಿಯ‌ರ್(ವಿ) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

3 ವಾರಗಳಲ್ಲಿ ಕಿರಿಯ ಸಹಾಯಕರ ತಾತ್ಕಾಲಿಕ ಪಟ್ಟಿ

ಕಿರಿಯ ಸಹಾಯಕ (Junior Assistant) ಹುದ್ದೆಗೆ ಸಂಬಂಧಿಸಿದಂತೆ, ವಿಶೇಷಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯನ್ನು ನಡೆಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನು ಮೂರು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ಆಯ್ಕೆ ಪ್ರಕ್ರಿಯೆ ಹೇಗೆ ನಡೆದಿದೆ?

ಕೆಪಿಟಿಸಿಎಲ್‌ ವಿವಿಧ ಎಂಜಿನಿಯರ್‌ ಹುದ್ದೆಗಳಿಗೆ ಆಯ್ಕೆಯನ್ನು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜ್ಯೇಷ್ಠತೆಯ ಆಧಾರದ ಮೇಲೆ ಮಾಡಲಾಗುತ್ತಿದೆ. ಆಪ್ಟಿಟ್ಯೂಡ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಆಪ್ಟಿಟ್ಯೂಡ್ ಪರೀಕ್ಷೆಯನ್ನು ಪ್ರಾಧಿಕಾರವು ಪೂರ್ಣಗೊಳಿಸಿ, ಫೆಬ್ರವರಿ-2023ರಲ್ಲಿ ಅರ್ಹ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ಮಧ್ಯೆ, ಕೆಲವು ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಮೀಸಲಾತಿ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊರಡಿಸಲಾದ ಸರ್ಕಾರದ ದಿನಾಂಕ: 01.02.2023ರ ಸುತ್ತೋಲೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಇಂಜಿನಿಯ‌ರ್(ವಿ) ಹುದ್ದೆಗೆ ಪ್ರಕಟಿಸಲಾದ ದಿನಾಂಕ: 04.02.2023 ರ ಅಂಕಪಟ್ಟಿಯನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದರು.

ಇದನ್ನೂ ಓದಿ | Yuva Nidhi Scheme: ಯುವನಿಧಿ ನೋಂದಣಿ ಜೋರು; ನೀವಿನ್ನೂ ಮಾಡಿಲ್ವಾ? ಹಾಗಿದ್ರೆ ಈ ವಿಡಿಯೊ ನೋಡಿ!

ಈ ಕಾರಣದಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾರು 8 ತಿಂಗಳಗಳ ಕಾಲ ವಿಳಂಬವಾಗಿದೆ. ಸದರಿ ದಾವೆಗಳನ್ನು ನ್ಯಾಯಾಲಯವು, 2023ರ ಆ.22ರಂದು ಇತ್ಯರ್ಥಗೊಳಿಸಿ, ಕಲ್ಯಾಣ-ಕರ್ನಾಟಕ ಮೀಸಲಾತಿ ಕೋರಿ ಮಿಕ್ಕುಳಿದ ವೃಂದದಲ್ಲಿ ಆಯ್ಕೆಗೆ ಅರ್ಹರಿರುವ ಅಭ್ಯರ್ಥಿಗಳಿಂದ ಅವರು ಸ್ಥಳೀಯ ವೃಂದಕ್ಕೆ ಆಯ್ಕೆಯಾಗಲು ಇಚ್ಚಿಸಿದಲ್ಲಿ, ಅಂತಹ ಅಭ್ಯರ್ಥಿಗಳಿಂದ ಇಚಿತಾ ಪತ್ರವನ್ನು ಪಡೆಯುವಂತೆ ನಿರ್ದೇಶಿಸಿದೆ. ಹಾಗೂ ಸಹಾಯಕ ಎಂಜಿನಿಯ‌ರ್(ವಿ) ಹುದ್ದೆಗೆ 2023ರ ಜ. 3 ರಂದು ಪ್ರಕಟಿಸಿದ ಅಂಕಪಟ್ಟಿಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಆದೇಶಿಸಿದೆ. ಸದರಿ ರಿಟ್ ಅರ್ಜಿಗಳು ಇತ್ಯರ್ಥಗೊಂಡ ನಂತರ ನ್ಯಾಯಾಲಯದ ಆದೇಶದನ್ವಯ ಯಾವುದೇ ಕಾಲವಿಳಂಬವಿಲ್ಲದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿದೆ ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Alert: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ (Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು (KSRTC Recruitment 2024). ಈ ಕುರಿತಾದ ವಿವರ ಇಲ್ಲಿದೆ (Job Alert).

ಎಲ್ಲೆಲ್ಲಿ?

ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ. ಆಯಾ ಬಸ್‌ ಡಿಪೋಗಳು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಅಲ್ಲದೆ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ. ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ಇದನ್ನು ಗಮನಿಸಿ

ಹೊರಗುತ್ತಿಗೆ ನೇಮಕಾತಿ ಇದಾಗಿರುವುದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ: ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

UPSC 2024 : ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

VISTARANEWS.COM


on

UPSC 2024
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ನೇ( UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್​) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್​ಸಿ ಸಿಎಸ್ಇ 2024 ರ ಪರೀಕ್ಷೆಗೆ ಹಾಜರಾಗಿವು ಅಭ್ಯರ್ಥಿಗಳು upsc.gov.in ಮತ್ತು upsconline.nic.in ವೆಬ್​ಸೈಟ್​ಗೆ ಪ್ರವೇಶ ಮಾಡಿ ಫಲಿತಾಂಶಗಳನ್ನು ಡೌನ್ಲೋಡ್ ಮಾಡಬಹದು. ಸಾಮಾನ್ಯ ಪರೀಕ್ಷೆಯನ್ನು ಜೂನ್ 16 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ 1 ಮತ್ತು ಪರೀಕ್ಷೆ 2 ಎಂದು ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಒಟ್ಟು 400 ಅಂಕಗಳನ್ನು ಹೊಂದಿತ್ತು. ಪ್ರಶ್ನೆ ಪತ್ರಿಕೆಯು ಆಬ್ಜೆಕ್ಟಿವ್​ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 4 ಆಯ್ಕೆಗಳನ್ನು ಹೊಂದಿತ್ತು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

ಕಳೆದ ವರ್ಷದ ಟ್ರೆಂಡ್ ಪ್ರಕಾರ, ಪರೀಕ್ಷೆಯನ್ನು ಮೇ 26 ರಂದು ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಜೂನ್ 12 ರಂದು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಇತರ ಉನ್ನತ ಸೇವೆಗಳಲ್ಲಿ ಪ್ರಮುಖ ಹುದ್ದೆಗಳಿಗೆ ಸ್ಪರ್ಧಿಸುವ ಲಕ್ಷಾಂತರ ನಾಗರಿಕ ಸೇವಾ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುಪಿಎಸ್ಸಿ ಸಿಎಸ್ಇ ಕಟ್-ಆಫ್ ನಿರ್ಣಾಯಕವಾಗಿದೆ. 2023 ರಲ್ಲಿ ಸಾಮಾನ್ಯ ವರ್ಗಕ್ಕೆ ಯುಪಿಎಸ್ಸಿ ಪ್ರಿಲಿಮ್ಸ್ ಕಟ್-ಆಫ್ 75.41 ರಷ್ಟಿತ್ತು.

ಈ ಬಾರಿಯ ಫಲಿತಾಂಶಗಳನ್ನು ಈ ರೀತಿ ಡೌನ್​ಲೋಡ್ ಮಾಡಿಕೊಳ್ಳಿ


  • ಮೊದಲಿಗೆ, ಯುಪಿಎಸ್ಸಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
  • “ಸಲ್ಲಿಸು” ಆಯ್ಕೆಯನ್ನು ಆರಿಸಿದರೆ ಫಲಿತಾಂಶಗಳು ಕಾಣುತ್ತದೆ
  • ಡೌನ್ ಲೋಡ್ ಮಾಡಿ ಮತ್ತು ನಿಮ್ಮ ಭವಿಷ್ಯದ ಅಗತ್ಯಗಳಿಗಾಗಿ ಕಾಪಿಯನ್ನು ಸೇವ್ ಮಾಡಿಟ್ಟುಕೊಳ್ಳಿ.

2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್​ಸೈಟ್​ನಲ್ಲಿ ಪೋಸ್ಟ್​​ ಮಾಡಲಾಗುತ್ತದೆ.

Continue Reading

ಉದ್ಯೋಗ

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Job Alert: ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment 2024). ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ (Job Alert).

ಹುದ್ದೆಗಳ ವಿವರ

ಜೂನಿಯರ್ ಮ್ಯಾನೇಜರ್ (ಮೈನಿಂಗ್‌)- 46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)- 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಕಂಪನಿ ಸೆಕ್ರೆಟರಿ) 2 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಪದವಿ
ಜೂನಿಯರ್ ಮ್ಯಾನೇಜರ್ (ಫೈನಾನ್ಸ್)- 1 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ
ಜೂನಿಯರ್ ಮ್ಯಾನೇಜರ್ (ಎಚ್ಆರ್) 1 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ, ಎಂಬಿಎ

ವಯೋಮಿತಿ

ಗರಿಷ್ಠ ವಯೋಮಿತಿ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ / ಇಡಬ್ಲ್ಯುಎಸ್‌) ವಿಭಾಗದ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯುಡಿ (ಒಬಿಸಿ) ವಿಭಾಗದ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ವಿಭಾಗದ ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ. – 1,20,000 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

Hindustan Copper Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.hindustancopper.com/RecruitmentNew/CandidateLogin/113).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ; ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

VISTARANEWS.COM


on

Job alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading
Advertisement
Stock Market
ವಾಣಿಜ್ಯ14 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ26 mins ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ28 mins ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್34 mins ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ59 mins ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Amarnath Tragedy
Latest60 mins ago

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Kalki 2898 AD Box Office Collection Day Deepika Padukone's Film
ಟಾಲಿವುಡ್1 hour ago

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

dengue fever Dinesh Gundu Rao
ಪ್ರಮುಖ ಸುದ್ದಿ1 hour ago

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Suryakumar Yadav Catch
ಕ್ರೀಡೆ1 hour ago

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Encounter in UP
ದೇಶ2 hours ago

Encounter in UP: ಯೋಗಿನಾಡಲ್ಲಿ ಮತ್ತೋರ್ವ ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌