ವಿನೇಶ್‌,ಬಜರಂಗ್‌, ಸಾಕ್ಷಿ ಹೋರಾಟ ನಕಲಿ; ಜಂತರ್​ ಮಂತರ್​ನಲ್ಲಿ ಯುವ ಕುಸ್ತಿ ಪಟುಗಳಿಂದ ಪ್ರತಿಭಟನೆ - Vistara News

ಕ್ರೀಡೆ

ವಿನೇಶ್‌,ಬಜರಂಗ್‌, ಸಾಕ್ಷಿ ಹೋರಾಟ ನಕಲಿ; ಜಂತರ್​ ಮಂತರ್​ನಲ್ಲಿ ಯುವ ಕುಸ್ತಿ ಪಟುಗಳಿಂದ ಪ್ರತಿಭಟನೆ

ವಿನೇಶ್‌ ಫೋಗಟ್‌(Vinesh Phogat), ಸಾಕ್ಷಿ ಮಲಿಕ್(Sakshi Malik) ಮತ್ತು​ ಬಜರಂಗ್‌ ಪೂನಿಯ(Bajrang Punia) ವಿರುದ್ಧ ಯುವ ಕುಸ್ತಿ ಪಟುಗಳು ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

VISTARANEWS.COM


on

Young wrestlers protests
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ತೀವ್ರ ಪ್ರತಿಭಟನೆ ನಡೆಸಿ, ಬಳಿಕ ನೂತನ ಕುಸ್ತಿ ಪೆಡರೇಶನ್ ಆಯ್ಕೆ ವಿಚಾರದಲ್ಲಿಯೂ ಕ್ಯಾತೆ ತೆಗೆದು ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯನ್ನು ವಾಪಸ್​ ಮಾಡಿರುವ ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌(Vinesh Phogat), ಸಾಕ್ಷಿ ಮಲಿಕ್(Sakshi Malik) ಮತ್ತು​ ಬಜರಂಗ್‌ ಪೂನಿಯ(Bajrang Punia) ವಿರುದ್ಧ ಕೆಲವು ರಾಜ್ಯಗಳ ಕುಸ್ತಿಪಟುಗಳು ತಿರುಗಿಬಿದ್ದಿದ್ದಾರೆ. ಜತೆಗೆ ಈ ಮೂವರು ನಕಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಹೊರಿಸಿದ್ದಾರೆ. ಇದಲ್ಲದೆ 100ಕ್ಕೂ ಅಧಿಕ ಯುವ ಕುಸ್ತಿ ಪಟುಗಳು(Young wrestlers protests) ಈ ಮೂವರು ಕುಸ್ತಿಪಟುಗಳ ವಿರುದ್ಧ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಏಷ್ಯಾಡ್‌ ಮತ್ತು ಕಾಮನ್​ವೆಲ್ತ್ ಗೇಮ್ಸ್‌ ಪದಕ ವಿಜೇತ ಮಹಿಳಾ ಕುಸ್ತಿಪಟುವೊಬ್ಬರು ಈ ಆರೋಪ ಮಾಡಿದ್ದು, ಮೂವರು ಕುಸ್ತಿಪಟುಗಳು ನಕಲಿ ಪ್ರತಿಭಟನೆ ನಡೆಸುವ ಮೂಲಕ ದೇಶದ ಕುಸ್ತಿ ವ್ಯವಸ್ಥೆಯನ್ನು ಹಾಳು ಮಾಡಲು ಯತ್ನಿ ಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೂವರು ಕುಸ್ತಿಪಟುಗಳು ಮಾಡುತ್ತಿರುವ ನಾಟಕೀಯ ಪ್ರತಿಭಟನೆಯಿಂದಾಗಿ ಅದೆಷ್ಟೋ ಕುಸ್ತಿಪಟುಗಳಿಗೆ ಹಿನ್ನೆಡೆಯಾಗಿದೆ. ದೇಶದಲ್ಲಿ ಯಾವುದೇ ಕುಸ್ತಿ ಚಟುವಟಿಕೆ ನಡೆಯುತ್ತಿಲ್ಲ. ಹೀಗಾಗಿ ವಿಶ್ವ ಕುಸ್ತಿ ಒಕ್ಕೂಟ ದೇಶದ ಕುಸ್ತಿಯನ್ನು ಕಾಪಾಡಲು ಮುಂದಾಗಬೇಕೆಂದು ಎಂದು ಹೆಸರು ಹೇಳಬಯಸದ ಮಹಿಳಾ ಕುಸ್ತಿಪಟುವೊಬ್ಬರು ಆಗ್ರಹಿಸಿದ್ದಾರೆ.

ಯುವ ಕುಸ್ತಿಪಟುಗಳಿಂದ ಪ್ರತಿಭಟನೆ

ವಿನೇಶ್‌ ಫೋಗಟ್‌(Vinesh Phogat), ಸಾಕ್ಷಿ ಮಲಿಕ್(Sakshi Malik) ಮತ್ತು​ ಬಜರಂಗ್‌ ಪೂನಿಯ(Bajrang Punia) ವಿರುದ್ಧ ಯುವ ಕುಸ್ತಿಪಟುಗಳು ನವದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂವರಿಂದಾಗಿ ಹಲವು ಕುಸ್ತಿಪಟುಗಳ ಭವಿಷ್ಯಕ್ಕೆ ಕುತ್ತು ಬಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬ್ರಿಜ್​ ಭೂಷಣ್​ ಅವರ ಆಪ್ತರಾಗಿರುವ ಸಂಜಯ್​ ಸಿಂಗ್​ ಭಾರತೀಯ ಕುಸ್ತಿ ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಸಾಕ್ಷಿ ಮಲಿಕ್​ ಅವರು ಸುದ್ದಿಗೋಷ್ಠಿ ನಡೆಸಿ ಕಣ್ಣೀರು ಸುರಿಸುತ್ತಲೇ ಕುಸ್ತಿಗೆ ವಿದಾಯ ಹೇಳಿದ್ದರು. ಬಜರಂಗ್​ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ನವದೆಹಲಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು.

ವಿನೇಶ್​ ಫೋಗಟ್​ ಕೂಡ ಬಜರಂಗ್​ ಪೂನಿಯ ಅವರಂತೆ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ವಾಪಸ್​ ಮಾಡುವುದಾಗಿ ಘೋಷಿಸಿ ಮೋದಿಗೆ ಪತ್ರ ಬರೆದು ಬಳಿಕ ಈ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. ವಿನೇಶ್ ಅವರಿಗೆ 2020ರಲ್ಲಿ ಖೇಲ್‌ ರತ್ನ , 2016 ರಲ್ಲಿ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಬ್ರಿಜ್​ಭೂಷಣ್​ ವಿರುದ್ಧ ಹೋರಾಟ

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

David Wiese Retirement: ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

VISTARANEWS.COM


on

David Wiese Retirement
Koo

ನ್ಯೂಯಾರ್ಕ್​: ನಮೀಬಿಯಾ(Namibia allrounder David Wiese) ತಂಡದ ಅನುಭವಿ ಆಟಗಾರ ಡೇವಿಡ್ ವೈಸ್(David Wiese) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ(David Wiese Retirement) ಹೇಳಿದ್ದಾರೆ. ಶನಿವಾರ ರಾತ್ರಿ ನಡೆದ ಇಂಗ್ಲೆಂಡ್​ ವಿರುದ್ಧದ ಟಿ20 ವಿಶ್ವಕಪ್​ನ ಅಂತಿಮ ಲೀಗ್​ ಪಂದ್ಯದಲ್ಲಿ ಆಡಿದ ಬಳಿಕ ಡೇವಿಡ್ ವೈಸ್ ತಮ್ಮ ನಿವೃತ್ತಿ ಘೋಷಿಸಿದರು.

ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

ಆಲ್​ರೌಂಡರ್​ ಆಗಿರುವ ವೈಸ್​ ಅವರು ನಮೀಬಿಯಾ ಪರ 34 ಟಿ20 ಪಂದ್ಯಗಳನ್ನು ಆಡಿ 532 ರನ್ ಗಳಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು 35 ವಿಕೆಟ್​ ಕಿತ್ತಿದ್ದಾರೆ. ಒಂಬತ್ತು ಏಕದಿನ ಪಂದ್ಯಗಳನ್ನು ಆಡಿ 228 ರನ್ ಗಳಿಸಿದ್ದಾರೆ. ಆರು ವಿಕೆಟ್​ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ತಂಡದ ಪರ ಆಡಿ ಒಟ್ಟಾರೆಯಾಗಿ, ಅವರು 54 ಟಿ20 ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

“ನನಗೆ ಈಗ 39 ವರ್ಷ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇನ್ನು ಮುಂದುವರಿಯಲು ಇದು ಸೂಕ್ತ ಸಯಯವಲ್ಲ ಎಂದು ತಿಳಿದಿದೆ. ಹೀಗಾಗಿ ನಾನು ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿದ್ದೇನೆ. 2 ದೇಶಗಳನ್ನು ಪ್ರತಿನಿಧಿಸಲು ನನಗೆ ಅವಕಾಶ ಮಾಡಿಕೊಟ್ಟ ಎಲ್ಲ ಸಿಬ್ಬಂದಿ ಮತ್ತು ಸಹ ಆಟಗಾರರಿಗೆ ಧನ್ಯವಾದಗಳು” ಎಂದು ವೈಸ್ ಹೇಳಿದರು.

ಪಂದ್ಯ ಗೆದ್ದ ಇಂಗ್ಲೆಂಡ್​


ಶನಿವಾರ ರಾತ್ರಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಇಂಗ್ಲೆಂಡ್​ ತಂಡ ನಮೀಬಿಯಾ ವಿರುದ್ಧ ಡಕ್​ವರ್ತ್​ ಲೂಯಿಸ್​ ನಿಯಮದನ್ವಯ 41 ರನ್​ ಅಂತರದಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 10 ಓವರ್ ಗಳಲ್ಲಿ 122 ರನ್ ಗಳಿಸಿದರೆ, ನಮೀಬಿಯಾ ತಂಡವು 84 ರನ್ ಮಾತ್ರ ಗಳಿಸಿ ಸೋಲು ಕಂಡಿತು. ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸ್ಕಾಟ್ಲೆಂಡ್​ ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದ ಪರಿಣಾಮ ಇಂಗ್ಲೆಂಡ್​ ಸೂಪರ್​-8 ಹಂತಕ್ಕೇರಿತು.

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading

ಕ್ರೀಡೆ

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

INDW vs SAW: ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು.

VISTARANEWS.COM


on

INDW vs SAW
Koo

ಬೆಂಗಳೂರು: ಆತಿಥೇಯ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ(INDW vs SAW) ಮಹಿಳಾ ಕ್ರಿಕೆಟ್​​ ಸರಣಿಗೆ ಇಂದು(ಭಾನುವಾರ) ಚಾಲನೆ ಸಿಗಲಿದೆ. ಏಕದಿನ ಪಂದ್ಯ ಆಡುವ ಮೂಲಕ ಸರಣಿ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ. ಪಂದ್ಯಕ್ಕೆ ಮಳೆ ಭೀತಿ ಕೂಡ ಎದುರಾಗಿದೆ.

ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ತಂಡ ವರ್ಷಾರಂಭದಲ್ಲಿ ಆಸ್ಟ್ರೇಲಿಯಾ ಎದುರಿನ ಏಕದಿನ ಹಾಗೂ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ತೋರುವ ಮೂಲಕ ಸೋಲು ಕಂಡಿತ್ತು. ಇದೇ ವರ್ಷ ಟಿ20 ವಿಶ್ವಕಪ್​ ಟೂರ್ನಿಯೂ ಇರುವ ಕಾರಣ ಭಾರತ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಬೇಕಿದೆ. ಜತೆಗೆ ಯುವ ಆಟಗಾರ್ತಿಯರು ಸಿಕ್ಕ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕಿದೆ.

ಉಪನಾಯಕಿ ಸ್ಮೃತಿ ಮಂಧನಾ-ಶಫಾಲಿ ವರ್ಮ ಜೋಡಿ ಕಳೆದ ಕೆಲ ವರ್ಷಗಳಿಂದ ನಿರೀಕ್ಷಿತ ಆರಂಭ ಒದಗಿಸುತ್ತಿಲ್ಲ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. ಇವರಿಗೆ ಇಂದಿನ ಪಂದ್ಯದಲ್ಲಿ ಸ್ಥಾನ ಸಿಗುವುದು ಅನುಮಾನ. ಶಫಾಲಿ ಬ್ಯಾಟಿಂಗ್​ ವೈಫಲ್ಯ ಕಂಡರೆ ಮುಂದಿನ ಪಂದ್ಯದಲ್ಲಿ ಇವರು ಬೆಂಚ್​ ಕಾಯಬೇಕಾದೀತು. ಆಗ ಇವರ ಸ್ಥಾನದಲ್ಲಿ ಪ್ರಿಯಾ ಆಡಬಹುದು.

ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು. ನಾಯಕಿ ಹರ್ಮನ್​ಪ್ರೀತ್​ ತಮ್ಮ ಬ್ಯಾಟಿಂಗ್​ ವೈಫಲ್ಯದಿಂದ ಹೊರಬರಬೇಕಿದೆ. ಇತ್ತೀಚೆಗೆ ಆಡಿದ ಎಲ್ಲ ಸರಣಿಯಲ್ಲೂ ಅವರು ರನ್​ ಬರ ಎದುರಿಸಿದ್ದರು. ಕರ್ನಾಟಕದ ಶ್ರೇಯಾಂಕಾ ಪಾಟೀಲ್‌ ಮೇಲೆ ಭಾರೀ ಭರವಸೆ ಇಡಲಾಗಿದೆ. ಅವರಿಗೆ ಇದು ತವರಿನ ಮೈದಾನವೂ ಹೌದು.

ಇದನ್ನೂ ಓದಿ INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

ಕೆಲ ದಿನಗಳ ಹಿಂದೆ ಪಂದ್ಯ ಸಿದ್ಧತೆ ಬಗ್ಗೆ ಕನ್ನಡದಲ್ಲೇ ಮಾತನಾಡಿದ್ದ ಶ್ರೇಯಾಂಕ, ‘ಎಲ್ಲರಿಗೂ ನಮಸ್ಕಾರ, ನಾವು ಬೆಂಗಳೂರಿನಲ್ಲಿದ್ದೇವೆ. ಇಲ್ಲಿನ ವಾತಾವರಣ ತುಂಬಾ ಹಿತ ನೀಡಿದೆ. ಮೊದಲ ಅಭ್ಯಾಸ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲರು ತುಂಬಾ ಎನರ್ಜಿಯಿಂದ ಅಭ್ಯಾಸ ನಡೆಸಿದೆವು. ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಕಾತರಗೊಂಡಿದ್ದೇವೆ. ಇಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯಾವಳಿಯ ವೇಳೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ಸ್ಟೇಡಿಯಂ ತುಂಬಿ ಹೋಗಿತ್ತು. ಇದೀಗ ಏಕದಿನ ಸರಣಿಗೂ ಅದೇ ರೀತಿ ಸ್ಟೇಡಿಯಂಗೆ ಬಂದು ಟೀಮ್​ ಇಂಡಿಯಾಕ್ಕೆ ಸಪೋರ್ಟ್​ ಮಾಡಿ’ ಎಂದು ಕೇಳಿಕೊಂಡಿದ್ದರು.

ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ ಅಮೋಘ ಫಾರ್ಮ್ ನಲ್ಲಿದ್ದಾರೆ. ಕಳೆದ 5 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಬಾರಿಸಿದ ಸಾಧನೆ ಮಾಡಿದ್ದರು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರದಂತೆ ಭಾರತೀಯ ಬೌಲರ್​ಗಳು ನೋಡಿಕೊಳ್ಳಬೇಕು. ಮರಿಜಾನ್‌ ಕಾಪ್‌, ಅಯಬೊಂಗಾ ಖಾಕಾ, ನಾಡಿನ್‌ ಡಿ ಕ್ಲರ್ಕ್‌ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಈ ಬಾರಿಯ ಡಬ್ಲ್ಯುಪಿಎಲ್​ ಟೂರ್ನಿಯಲ್ಲೂ ಇವರೆಲ್ಲ ಶ್ರೇಷ್ಠ ಪ್ರದರ್ಶನ ತೋರಿದ್ದರು. ಬೆಂಗಳೂರಿನಲ್ಲಿ ಆಡಿದ ಅನುಭವ ಕೂಡ ಇವರಿಗಿದೆ. ಹೀಗಾಗಿ ಇವರಿಗೆ ಇಲ್ಲಿನ ಪಿಚ್​ಗೆ ಹೊಂದಿಕೊಳ್ಳಲು ಅಷ್ಟು ಕಷ್ಟವಾಗದು. ಒಟ್ಟಾರೆ ಪಂದ್ಯವನ್ನು ಜಿದ್ದಾಜಿದ್ದಿನಿಂದ ನಿರೀಕ್ಷಿಸಬಹುದು.

Continue Reading

ಕ್ರೀಡೆ

Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

Euro 2024: ಇಂದು(ಭಾನುವಾರ) ನಡೆದ ಬಿ ಗ್ರೂಪ್​ನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಟಲಿ ತಂಡ ಅಲ್ಬೇನಿಯಾ ವಿರುದ್ಧ 2-1 ಅಂತರದಿಂದ ಗೆದ್ದು ಯುರೋ 2024 ಅಭಿಯಾನವನ್ನು ಪ್ರಾರಂಭಿಸಿದೆ.

VISTARANEWS.COM


on

Euro 2024
Koo

ಬರ್ಲಿನ್‌: ಶನಿವಾರ ರಾತ್ರಿ ನಡೆದ ಯುರೋ ಕಪ್(Euro 2024)​ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ತೋರಿದ ಸ್ಪೇನ್(Spain) ತಂಡ ಕ್ರೊವೇಷಿಯಾವನ್ನು(Croatia) 3-0 ಗೋಲ್​ಗಳಿಂದ ಮಣಿಸಿದೆ. ಬರ್ಲಿನ್​ನಲ್ಲಿ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಸ್ಪೇನ್ ಪರ ಅಲ್ವೆರೊ ಮೊರಾಟ (29ನೇ ನಿಮಿಷ), ಫ್ಯಾಬಿಯಾನ್ ರುಯೆಜ್ (32ನೇ ನಿಮಿಷ), ಡ್ಯಾನಿ ಕಾರ್ವಜಲ್ (45+22ನೇ ನಿಮಿಷ) ತಲಾ ಒಂದು ಗೋಲು ಸಿಡಿಸಿದರು. ಇವರ ಆರ್ಭಟದ ಮುಂದೆ ಕ್ರೊವೇಷಿಯಾಕ್ಕೆ ಕನಿಷ್ಠ ಒಂದು ಗೋಲು ಬಾರಿಸಲು ಸಾಧ್ಯವಾಗಲಿಲ್ಲ.

ಮೊದಲ ಅವಧಿಯಲ್ಲೇ ಮುನ್ನಡೆ ಸಾಧಿಸಿದ ಸ್ಪೇನ್ ಪಂದ್ಯದುದಕ್ಕೂ ಮೇಲುಗೈ ಸಾಧಿಸಿತು. ಎರಡನೇ ಅವಧಿಯಲ್ಲಿ ಎಚ್ಚೆತ್ತ ಕ್ರೊವೇಷಿಯಾ ಗೋಲು ಗಳಿಸಲು ಶತ ಪ್ರಯತ್ನ ಪಟ್ಟರೂ ಕೂಡ ಸ್ಪೇನ್ ರಕ್ಷಣಾ ಕೋಟೆಯನ್ನು ಭೀದಿಸುವಲ್ಲಿ ಯಶಸ್ಸು ಕಾಣಲಿಲ್ಲ. ಖ್ಯಾತ ರಿಯಲ್ ಮ್ಯಾಡ್ರಿಡ್ ತಂಡದ ಮಿಡ್‌ಫೀಲ್ಡರ್‌ ಮಾಡ್ರಿಕ್, ಮಾಟಿಯೊ ಕೊವಾಸಿಕ್ ಮತ್ತು ಮಾರ್ಸೆಲೊ ಬ್ರಾಝೊವಿಕ್ ಅವರನ್ನೊಳಗೊಂಡ ಕ್ರೊವೇಷಿಯಾ ಒಂದೂ ಗೋಲು ಬಾರಿಸಲಾಗದೆ ಹೀನಾಯ ಸೋಲು ಕಂಡಿತು. ಈ ಗೆಲುವಿನೊಂದಿಗೆ ಸ್ಪೇನ್​ ತಂಡ ಮತ್ತೆ ಕ್ರೊವೇಷಿಯಾ ವಿರುದ್ಧ ತನ್ನ ಪ್ರಾಬಲ್ಯ ಮುಂದುವರಿಸಿದೆ. ಯುರೋ 2020ರ ಕೂಟದ 16ರ ಘಟ್ಟದ ಪಂದ್ಯದಲ್ಲಿ ಸ್ಪೇನ್‌ ಹೆಚ್ಚುವರಿ ಅವಧಿಯ ಆಟದಲ್ಲಿ ಕ್ರೊವೇಷಿಯಾ ಮೇಲೆ ಜಯಗಳಿಸಿತ್ತು. 

ದಿನದ ಮತ್ತೊಂದು ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್ ಕೂಡ ಹಂಗೇರಿ ವಿರುದ್ಧ 3-1 ಗೋಲು ಅಂತರದಿಂದ ಗೆದ್ದು ತನ್ನ ಅಭಿಯಾನವನ್ನು ಪ್ರಾರಂಭಿಸಿದೆ. ಸದ್ಯ ‘ಎ’ ವಿಭಾಗದಲ್ಲಿರು ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದೆ.

ಇದನ್ನೂ ಓದಿ Euro 2024 : ಸ್ಕಾಟ್ಲೆಂಡ್​ ವಿರುದ್ಧ ಜರ್ಮನಿಗೆ 5-1 ಗೋಲ್​ಗಳ ಭರ್ಜರಿ ವಿಜಯ

ಇಂದು(ಭಾನುವಾರ) ನಡೆದ ಬಿ ಗ್ರೂಪ್​ನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಟಲಿ ತಂಡ ಅಲ್ಬೇನಿಯಾ ವಿರುದ್ಧ 2-1 ಅಂತರದಿಂದ ಗೆದ್ದು ಯುರೋ 2024 ಅಭಿಯಾನವನ್ನು ಪ್ರಾರಂಭಿಸಿತು. ಅಲ್ಬೇನಿಯಾದ ನೆದಿಮ್ ಬಜ್ರ್ಮಿ ಇಟಲಿ ವಿರುದ್ಧದ ಘರ್ಷಣೆಯಲ್ಲಿ ಯುರೋಪಿಯನ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಂತ ವೇಗದ ಗೋಲು ಗಳಿಸಿದರು. 2004 ರಂದು ಗ್ರೀಸ್ ವಿರುದ್ಧ 65 ಸೆಕೆಂಡುಗಳ ನಂತರ ಗೋಲು ಗಳಿಸಿದ ರಷ್ಯಾದ ಡಿಮಿಟ್ರಿ ಕಿರಿಚೆಂಕೊ ಅವರ ಹಿಂದಿನ ದಾಖಲೆಯನ್ನು ಮುರಿದರು.

Continue Reading
Advertisement
David Wiese Retirement
ಕ್ರೀಡೆ15 mins ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್22 mins ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ23 mins ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ24 mins ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್27 mins ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ34 mins ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

SCO vs AUS
ಕ್ರೀಡೆ1 hour ago

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

Darshan Arrested vinish write special message for darshan fathers day
ಸ್ಯಾಂಡಲ್ ವುಡ್1 hour ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ2 hours ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್2 hours ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ21 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌