ಇಸ್ರೇಲ್‌ ಪ್ರಧಾನಿಯ ಕೊಂದೇ ತೀರುವೆ ಎಂದಿದ್ದ ಹಮಾಸ್‌ ಉಗ್ರನ ಹತ್ಯೆ; ಬೀದಿ ಹೆಣವಾದ ಅರೌರಿ - Vistara News

ಪ್ರಮುಖ ಸುದ್ದಿ

ಇಸ್ರೇಲ್‌ ಪ್ರಧಾನಿಯ ಕೊಂದೇ ತೀರುವೆ ಎಂದಿದ್ದ ಹಮಾಸ್‌ ಉಗ್ರನ ಹತ್ಯೆ; ಬೀದಿ ಹೆಣವಾದ ಅರೌರಿ

ಲೆಬನಾನ್‌ನ ಬೀರತ್‌ ನಗರದ ಮೇಲೆ ಇಸ್ರೇಲ್‌ ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಹಮಾಸ್‌ ಉಗ್ರ ಸಲೇಹ್‌ ಅರೌರಿಯನ್ನು ಹತ್ಯೆ ಮಾಡಲಾಗಿದೆ. ಇದು ಈಗ ಹಮಾಸ್‌ ಉಗ್ರ ಸಂಘಟನೆ ಜತೆಗೆ ಲೆಬನಾನ್‌ನ ಹೆಜ್ಬೊಲ್ಲಾ ಉಗ್ರ ಸಂಘಟನೆಗೂ ಪೆಟ್ಟು ಬಿದ್ದಂತಾಗಿದೆ.

VISTARANEWS.COM


on

Saleh Arouri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀರತ್:‌ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ್ದಕ್ಕೆ ಇಸ್ರೇಲ್‌ ನಡೆಸುತ್ತಿರುವ ಪ್ರತಿದಾಳಿ (Israel Palestine War) ಮುಂದುವರಿದಿದೆ. ಅದರಲ್ಲೂ, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು ಕೊಂದೇ ತೀರುತ್ತೇನೆ ಎಂದು ಗುಟುರು ಹಾಕಿದ್ದ ಹಮಾಸ್‌ ಉಗ್ರ ಸಂಘಟನೆಯ ಡೆಪ್ಯುಟಿ ಮುಖ್ಯಸ್ಥ ಸಲೇಹ್‌ (Saleh Arouri) ಅರೌರಿಯು ಹತ್ಯೆಗೀಡಾಗಿದ್ದಾನೆ. ಲೆಬನಾನ್‌ನ ಬೀರತ್‌ ನಗರದಲ್ಲಿ ಸಂಭವಿಸಿದ ಸ್ಫೊಟದಲ್ಲಿ ಸಲೇಹ್‌ ಅರೌರಿಯು ಹತನಾಗಿದ್ದಾನೆ ಎಂದು ಹೆಜ್ಬೊಲ್ಲಾ (Hezbollah) ಉಗ್ರ ಸಂಘಟನೆ ತಿಳಿಸಿದೆ.

“ಇಸ್ರೇಲ್‌ ನಡೆಸಿದ ಡ್ರೋನ್‌ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇವರಲ್ಲಿ ಅಲೇಹ್‌ ಅರೌರಿ ಕೂಡ ಒಬ್ಬನಾಗಿದ್ದಾನೆ. ಇದರೊಂದಿಗೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸುವ ಮೂಲಕ ಪ್ರಾಬಲ್ಯ ಸಾಧಿಸಲು ಯತ್ನಿಸುತ್ತಿದೆ. ಇದರಿಂದ ಪರಿಸ್ಥಿತಿ ಬಿಗಡಾಯಿಸಿದರೆ ಅದಕ್ಕೆ ಇಸ್ರೇಲ್‌ ಹೊಣೆಯಾಗುತ್ತದೆ” ಎಂದು ಹೆಜ್ಬೊಲ್ಲಾ ಉಗ್ರ ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಹಮಾಸ್‌ ಕೂಡ ಈ ಕುರಿತು ಪ್ರತಿಕ್ರಿಯಿಸಿದ್ದು, ವೈರಿಗಳ ವಿರುದ್ಧ ಹೋರಾಡುವಲ್ಲಿ ನಮಗೆ ಮತ್ತೊಂದು ಹಿನ್ನಡೆಯಾಗಿದೆ ಎಂದು ಹೇಳಿದೆ.

ಸಲೇಹ್‌ ಅರೌರಿ ಹಿನ್ನೆಲೆ ಏನು?

57 ವರ್ಷದ ಸಲೇಹ್‌ ಅರೌರಿಯು ಹಮಾಸ್‌ನ ಪ್ರಮುಖ ಉಗ್ರನಾಗಿದ್ದಾನೆ. ಹಮಾಸ್‌ ಉಗ್ರ ಸಂಘಟನೆಯ ರಾಜಕೀಯ ವಿಭಾಗದ ಉಪ ಮುಖ್ಯಸ್ಥನಾಗಿದ್ದಾನೆ. ಅಲ್ಲದೆ, ಹಮಾಸ್‌ನ ಮಿಲಿಟರಿ ವಿಭಾಗವಾದ ಖಸಮ್‌ ಬ್ರಿಗೇಡ್ಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿದ್ದಾನೆ. ಈತನು ಹತ್ತಾರು ಉಗ್ರ ಚಟುವಟಿಕೆಗಳಲ್ಲಿ ಪಾಲ್ಗೊಂಡ ಕಾರಣ 2015ರಲ್ಲಿ ಅಮೆರಿಕವು ಜಾಗತಿಕ ಉಗ್ರ ಎಂದು ಘೋಷಿಸಿದೆ. ಇಸ್ರೇಲ್‌ ಮೇಲೆ ಕೆಂಡ ಕಾರುತ್ತಿದ್ದ ಈತನು ಬೆಂಜಮಿನ್‌ ನೆತನ್ಯಾಹು ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ, “ನಾನು ಹುತಾತ್ಮನಾಗಲು ಬಯಸುತ್ತೇನೆ. ನಾನು ತುಂಬ ವರ್ಷ ಬದುಕಿದ್ದೇನೆ ಎಂಬುದಾಗಿ ಅನಿಸುತ್ತಿದೆ” ಎಂದು ಇತ್ತೀಚೆಗಷ್ಟೇ ಹೇಳಿದ್ದ. ಈಗ ಆತ ಬೀದಿ ಹೆಣವಾಗಿದ್ದಾನೆ.

ಇದನ್ನೂ ಓದಿ: ʼಅವನೇಕೆ ನನ್ನನ್ನು ರೇಪ್‌ ಮಾಡಲಿಲ್ಲ ಎಂದರೆ…ʼ ಹಾರರ್‌ ಸ್ಟೋರಿ ಬಿಚ್ಚಿಟ್ಟ ಹಮಾಸ್‌ ಒತ್ತೆಯಾಳು

ಸರ್ಜಿಕಲ್‌ ಸ್ಟ್ರೈಕ್‌ ಎಂದ ಇಸ್ರೇಲ್‌

ಲೆಬನಾನ್‌ನಲ್ಲಿ ಸಲೇಹ್‌ ಅರೌರಿಯನ್ನು ಹತ್ಯೆ ಮಾಡಿರುವ ಕುರಿತು ಇಸ್ರೇಲ್‌ ಯಾವುದೇ ಅಧಿಕೃತ ಹೇಳಿಕೆ ಹೊರಡಿಸಿಲ್ಲ. ಆದರೂ, ಇಸ್ರೇಲ್‌ ವಕ್ತಾರರು ಇಸ್ರೇಲ್‌ ದಾಳಿ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಷ್ಟಕ್ಕೂ, “ಇದು ಸಲೇಹ್‌ ಅರೌರಿಯನ್ನು ಹತ್ಯೆಗೈಯಲು ಮಾಡಿರುವ ಸರ್ಜಿಕಲ್‌ ಸ್ಟ್ರೈಕ್‌ (ನಿರ್ದಿಷ್ಟ ದಾಳಿ) ಆಗಿದೆಯೇ ಹೊರತು, ಲೆಬನಾನ್‌ ಮೇಲೆ ದಾಳಿ ಮಾಡುವ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದಾರೆ. ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ಮಾಡಿದ ದಾಳಿಗೆ ಇದುವರೆಗೆ 1,400 ಜನ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದ ಮೇಲೆ ಇಸ್ರೇಲ್‌ ಸೇನೆ ನಡೆಸಿದ ಪ್ರತಿದಾಳಿಗೆ 21,500 ಮಂದಿ ಹತರಾಗಿದ್ದಾರೆ.‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: 2.5 ಲಕ್ಷ ಜನ ಭೋಲೆ ಬಾಬಾ ಪಾದ ಮುಟ್ಟಲು ಓಡಿ ಹೋಗಿದಕ್ಕೇ ಕಾಲ್ತುಳಿತ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 2.5 ಲಕ್ಷ ಜನ ಭಾಗಿಯಾಗಿದ್ದು, ಸತ್ಸಂಗದ ಬಳಿಕ ಎಲ್ಲರೂ ಭೋಲೆ ಬಾಬಾನ ಪಾದ ಮುಟ್ಟಲು ಓಡಿಹೋಗಿದ್ದೇ ಕಾಲ್ತುಳಿತ ಉಂಟಾಗಲು ಕಾರಣ ಎಂದು ತಿಳಿದುಬಂದಿದೆ.

ಕಾಲ್ತುಳಿತದ ಕುರಿತು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. “ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಸೇರಿದ್ದರು. ಸತ್ಸಂಗ ಮುಗಿದ ಬಳಿಕ ಇನ್ನೇನು ಭೋಲೆ ಬಾಬಾ ಹೊರಡುವವರಿದ್ದರು. ಇದೇ ವೇಳೆ ಲಕ್ಷಾಂತರ ಜನ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ, ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣವಾಗಿದೆ” ಎಂಬುದಾಗಿ ಹೇಳಿದ್ದಾರೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ; ಸ್ಥಳದಲ್ಲೇ ಸಾವು

Continue Reading

Latest

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

Viral Video: ಮಕ್ಕಳು ತಪ್ಪು ಮಾಡಿದಾಗ ಮುಂದೆ ಆ ತಪ್ಪು ಮರುಕಳಿಸಬಾರದು ಎಂದು ಪೋಷಕರು ಒಂದೇಟು ಹೊಡೆಯುವುದು ಸಾಮಾನ್ಯ. ನಾವು ಹಡೆದಿದ್ದೇವೆ, ಸಾಕಿದ್ದೇವೆ ಎಂದು ಮಕ್ಕಳನ್ನು ಹೀನಾಯಮಾನವಾಗಿ ದಂಡಿಸುವುದು ಕೂಡ ಅಪರಾಧ. ಶಿಕ್ಷಿಸುವ ಹಕ್ಕಿದೆ ಎಂದು ಮಗುವಿನ ಮೇಲೆ ದರ್ಪ ತೋರಿಸಿದರೆ ಅವರ ಎಳೆ ಮನಸ್ಸಿನ ಮೇಲೆ ಬರೆ ಎಳೆದ ಹಾಗೇ ಆಗುತ್ತೆ. ಇಲ್ಲೊಬ್ಬ ಮಹಿಳೆ ಮಕ್ಕಳು ಬೇಡಿಕೊಳ್ಳುತ್ತಿದ್ದರೂ, ಮನುಷ್ಯತ್ವವೇ ಇಲ್ಲದ ಹಾಗೇ ಬೆಲ್ಟ್‌ನಿಂದ ಥಳಿಸಿದ್ದಾಳೆ.ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo

ಮುಂಬೈ: ಪೋಷಕರಿಗೆ ತಮ್ಮ ಮಕ್ಕಳನ್ನು ಸರಿದಾರಿಗೆ ನಡೆಸುವ ಜವಾಬ್ದಾರಿ ಇರುತ್ತದೆ. ಯಾಕೆಂದರೆ ಮಕ್ಕಳು ಮುಂದೆ ಏನೇ ತಪ್ಪು ಮಾಡಿದರೂ ಅದಕ್ಕೆ ತಂದೆ ತಾಯಿಯೇ ಹೊಣೆಗಾರರಾಗುತ್ತಾರೆ. ಹಾಗಾಗಿ ಅವರು ಮಕ್ಕಳನ್ನು ಪ್ರೀತಿಸುವ ಜೊತೆಗೆ ಅವರಿಗೆ ಶಿಕ್ಷೆ ನೀಡುವ ಹಕ್ಕನ್ನು ಹೊಂದಿರುತ್ತಾರೆ. ಅಂದ ಮಾತ್ರಕ್ಕೆ ಪೋಷಕರು ಮಕ್ಕಳಿಗೆ ಸಾಯುವ ರೀತಿ ಶಿಕ್ಷೆ ವಿಧಿಸಬಾರದು. ಇದನ್ನು ಕಾನೂನಿನಲ್ಲಿ ಸರಿ ಎಂದು ಹೇಳುವುದಿಲ್ಲ. ಆದರೆ ಇಲ್ಲೊಬ್ಬ ಮಹಿಳೆ ತನ್ನ ಮಕ್ಕಳಿಗೆ ಬೆಲ್ಟ್‌ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಗೋರೆಗಾಂವ್ (ಪೂರ್ವ) ನ ನಿರ್ಲಾನ್ ಪಾರ್ಸಿ ಪಂಚಾಯತ್ ಕಾಂಪ್ಲೆಕ್ಸ್‌ನ ಕಾಲೋನಿಯಲ್ಲಿ ಮಹಿಳೆಯೊಬ್ಬಳು ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಬಾಂಬೆ ಹೈಕೋರ್ಟ್‌ ಮಾಜಿ ನ್ಯಾಯಾಧೀಶ ಶಾರುಖ್ ಕಥಾವಾಲಾ ತಾಯಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಂಬೈ ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವನ್ನು ಒತ್ತಾಯಿಸಿದ್ದಾರೆ.

ವಿಡಿಯೊದಲ್ಲಿ ಮಹಿಳೆ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುವುದು ಮತ್ತು ಹೆದರಿಸುವುದು ಕಂಡುಬರುತ್ತದೆ. ಮಕ್ಕಳು ಭಯಭೀತರಾಗಿದ್ದು, ತಮ್ಮನ್ನು ಬಿಡುವಂತೆ ಬೇಡಿಕೊಳ್ಳುವುದನ್ನು ಕಾಣಬಹುದು. ಆದರೂ, ತಾಯಿ ಅಸಹಾಯಕ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವುದು ಕಾಣಿಸುತ್ತದೆ. ಆದರೆ ಈ ವಿಡಿಯೊ ಆಕೆಯ ಪತಿ ಮಾಡಿರುವುದಾಗಿ ತಿಳಿದುಬಂದಿದೆ. ಆದರೆ ಪತಿ ತನ್ನ ಮಕ್ಕಳನ್ನು ರಕ್ಷಿಸಲು ಯಾಕೆ ಮುಂದೆ ಬಂದಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ.

ಇದನ್ನೂ ಓದಿ:  ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಈ ವೀಡಿಯೊ ವೈರಲ್ ಆದ ನಂತರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಅಲ್ಲದೇ ಮಾಜಿ ನ್ಯಾಯಾಧೀಶರು ವಿಡಿಯೊಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ ಹಾಗಾಗಿ ಪೊಲೀಸರು ಮತ್ತು ಮಕ್ಕಳ ಹಕ್ಕು ಆಯೋಗ ಮಧ್ಯಪ್ರವೇಶ ಮಾಡುವಂತೆ ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರು ಸಂಬಂಧಪಟ್ಟ ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪೊಲೀಸರು ಕುಟುಂಬಕ್ಕೂ ಭೇಟಿ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಪ್ರಮುಖ ಸುದ್ದಿ

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

Sudha Murthy: ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

VISTARANEWS.COM


on

sudha murthy pm narendra modi
Koo

ಹೊಸದಿಲ್ಲಿ: ರಾಜ್ಯಸಭೆಯಲ್ಲಿ (Rajya Sabha) ನೂತನ ಸಂಸದೆ ಸುಧಾ ಮೂರ್ತಿ (Sudha Murthy) ಅವರು ಮಾಡಿದ ಚೊಚ್ಚಲ ಭಾಷಣ (Speech) ಸಂಸದರ ಮೆಚ್ಚುಗೆಗೆ ಪಾತ್ರವಾಯಿತು. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಶ್ಲಾಘನೆ ವ್ಯಕ್ತಪಡಿಸಿದರು.

ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು. ತಮ್ಮ ತಂದೆಯ ಮಾತನ್ನು ಉಲ್ಲೇಖಿಸಿದ ಅವರು, ʼತಾಯಿ ಸತ್ತಾಗ ಅದನ್ನು ಆಸ್ಪತ್ರೆಯಲ್ಲಿ ಒಂದು ಸಾವು ಎಂದು ಪರಿಗಣಿಸಲಾಗುತ್ತದೆ. ಆದರೆ ಒಂದು ಕುಟುಂಬ ತಾಯಿಯನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತದೆ. ಹೀಗಾಗಿ ಮಹಿಳೆಯ ಆರೋಗ್ಯ ಅತ್ಯಂತ ಮುಖ್ಯʼ ಎಂದು ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರ ಪ್ರಾಯೋಜಿತ ಲಸಿಕೆ ಕಾರ್ಯಕ್ರಮಕ್ಕಾಗಿ ಸುಧಾ ಮೂರ್ತಿ ಒತ್ತಾಯಿಸಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಸರ್ವಿಕಲ್‌ ಗರ್ಭಕಂಠದ ಲಸಿಕೆ ಅಭಿಯಾನವನ್ನು ನಾವು ಉತ್ತೇಜಿಸಬೇಕು. ಅದರಿಂದ ಗರ್ಭಕೊರಳಿನ ಕ್ಯಾನ್ಸರ್ ತಪ್ಪಿಸಬಹುದು. ನಮ್ಮ ಪ್ರಯೋಜನಕ್ಕಾಗಿ ನಾವು ಲಸಿಕೆಯನ್ನು ಉತ್ತೇಜಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ” ಎಂದು ಅವರು ರಾಜ್ಯಸಭೆಯಲ್ಲಿ ತಮ್ಮ ಮೊದಲ ಭಾಷಣದಲ್ಲಿ ಹೇಳಿದರು.

“ಸರ್ಕಾರವು ಕೋವಿಡ್ ಸಮಯದಲ್ಲಿ ಬೃಹತ್‌ ವ್ಯಾಕ್ಸಿನೇಷನ್ ಅಭಿಯಾನವನ್ನು ನಿರ್ವಹಿಸಿದೆ. ಹೀಗೆಯೇ 9-14 ವರ್ಷ ವಯಸ್ಸಿನ ಹುಡುಗಿಯರಿಗೆ ಗರ್ಭಕಂಠದ ಲಸಿಕೆಯನ್ನು ನೀಡುವುದು ಕಷ್ಟಕರವಲ್ಲ. ಇದರ ಗುಣಮಟ್ಟ ತುಂಬಾ ಚೆನ್ನಾಗಿದೆ. ಇವತ್ತು ಅದರ ಬೆಲೆ ಸುಮಾರು ₹1,400 ಇದೆ. ಸರ್ಕಾರ ಮಧ್ಯಸ್ಥಿಕೆ ವಹಿಸಿದರೆ ₹700-800ಕ್ಕೆ ತರಬಹುದು. ನಮ್ಮಲ್ಲಿ ಇಷ್ಟು ದೊಡ್ಡ ಜನಸಂಖ್ಯೆಯಿರುವುದರಂದ ಭವಿಷ್ಯದಲ್ಲಿ ನಮ್ಮ ಸ್ತ್ರೀಯರಿಗೆ ಇದು ಪ್ರಯೋಜನಕಾರಿಯಾಗಿದೆ. ಗರ್ಭಕಂಠದ ಲಸಿಕೆಯನ್ನು ಪಶ್ಚಿಮದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕಳೆದ 20 ವರ್ಷಗಳಿಂದ ಇದನ್ನು ಬಳಸಲಾಗುತ್ತಿದೆ” ಎಂದು ಅವರು ತಮ್ಮ 13 ನಿಮಿಷಗಳ ಭಾಷಣದಲ್ಲಿ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು (President Draupadi Murmu) ಅವರು ಸುಧಾ ಮೂರ್ತಿಯವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

“ಮಹಿಳೆಯರ ಆರೋಗ್ಯದ ಬಗ್ಗೆ ವಿವರವಾಗಿ ಮಾತನಾಡಿದ್ದಕ್ಕಾಗಿ ನಾನು ಸುಧಾ ಮೂರ್ತಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಪಿಎಂ ಮೋದಿ ಹೇಳಿದರು. ತಾಯಂದಿರ ಕುರಿತು ಮೂರ್ತಿ ಅವರ “ಭಾವನಾತ್ಮಕ” ಹೇಳಿಕೆಯನ್ನು ಉಲ್ಲೇಖಿಸಿ, ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರವು ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಆದ್ಯತೆಯ ವಲಯವಾಗಿ ಕೇಂದ್ರೀಕರಿಸಿದೆ ಎಂದು ಹೇಳಿದರು.

ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಮಾಡಿದ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ಮೋದಿ, “ನಮ್ಮ ದೇಶದ ಮಹಿಳೆಯರು ನಾವು ನಿರ್ಮಿಸಿದ ಶೌಚಾಲಯಗಳಿಂದ ಪ್ರಯೋಜನ ಪಡೆದಿದ್ದಾರೆ. ಸ್ಯಾನಿಟರಿ ಪ್ಯಾಡ್‌ಗಳನ್ನು ಅವರಿಗೆ ಒದಗಿಸಲಾಗಿದೆ. ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ನೀಡಲಾಗುವ ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading

ಕರ್ನಾಟಕ

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Physical Abuse: ಕೂಲಿ ಕೆಲಸ ಮಾಡುವವರ ಮಗಳಾದ ಬಾಲಕಿಯನ್ನು ರೈಲ್ವೆ ಸ್ಟೇಷನ್ ಪಾರ್ಕಿಂಗ್‌ನಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

bangalore murder case

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Hathras Stampede
ದೇಶ12 mins ago

Hathras Stampede: 2.5 ಲಕ್ಷ ಜನ ಭೋಲೆ ಬಾಬಾ ಪಾದ ಮುಟ್ಟಲು ಓಡಿ ಹೋಗಿದಕ್ಕೇ ಕಾಲ್ತುಳಿತ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

BJP Protest
ಕರ್ನಾಟಕ14 mins ago

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

Narendra Modi
ದೇಶ20 mins ago

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Viral Video
Latest41 mins ago

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

sudha murthy pm narendra modi
ಪ್ರಮುಖ ಸುದ್ದಿ49 mins ago

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

James Anderson
ಕ್ರೀಡೆ54 mins ago

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

Mangalore News
ಕರ್ನಾಟಕ1 hour ago

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Parliament Sessions
ದೇಶ1 hour ago

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Physical Abuse
ಕರ್ನಾಟಕ2 hours ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ2 hours ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ20 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌