Lok Sabha Election 2024: ಕಾಂಗ್ರೆಸ್‌ನ ಈ 10 ಸಚಿವರು ಲೋಕಸಭಾ ಕಣಕ್ಕೆ? ಹೈಕಮಾಂಡ್‌ ಪಟ್ಟು, ಮಂತ್ರಿಗಳ ಇಕ್ಕಟ್ಟು - Vistara News

ಕರ್ನಾಟಕ

Lok Sabha Election 2024: ಕಾಂಗ್ರೆಸ್‌ನ ಈ 10 ಸಚಿವರು ಲೋಕಸಭಾ ಕಣಕ್ಕೆ? ಹೈಕಮಾಂಡ್‌ ಪಟ್ಟು, ಮಂತ್ರಿಗಳ ಇಕ್ಕಟ್ಟು

Lok Sabha Election 2024: ಶತಾಯಗತಾಯ ಅತಿ ಹೆಚ್ಚು ಸೀಟ್‌ಗಳನ್ನು ಪಡೆಯಬೇಕು ಎಂಬ ಗುರಿಯನ್ನು ಹಾಕಿಕೊಂಡಿರುವ ಕಾಂಗ್ರೆಸ್‌ ದಿಲ್ಲಿ ನಾಯಕರು, ಇದಕ್ಕಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಲೆಕ್ಕಾಚಾರದಲ್ಲಿ ಇದ್ದಾರೆ. ಆದರೆ, ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಕೊರತೆ ಎದುರಾಗಿದೆ.

VISTARANEWS.COM


on

These 10 Congress Ministers To Contest Lok Sabha Election 2024 new parliament building
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸುತ್ತಿದೆ. ಈ ಸಂಬಂಧ ಗುರುವಾರ (ಜ. 4) ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿದೆ. ಪ್ರಮುಖವಾಗಿ ನಿಗಮ – ಮಂಡಳಿಗಳ ನೇಮಕ ಹಾಗೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಹೈಕಮಾಂಡ್‌ ಬುಲಾವ್‌ ಮೇರೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅಲ್ಲಿಗೆ ತೆರಳಿದ್ದಾರೆ. ಇನ್ನು ರಾಜ್ಯ ನಾಯಕರ ನಿರಾಸಕ್ತಿ ನಡುವೆಯೂ 10ಕ್ಕೂ ಹೆಚ್ಚು ಸಚಿವರನ್ನು ಲೋಕಸಭಾ ಕಣಕ್ಕೆ ಇಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಆಸಕ್ತಿ ತೋರಿದೆ ಎಂಬ ವಿಷಯ ಗೊತ್ತಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈಗಾಗಲೇ ರಾಜ್ಯ ಘಟಕದ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಜಿಲ್ಲಾ ಘಟಕಗಳಿಂದ ಮಾಹಿತಿ ಪಡೆದು ಪಟ್ಟಿ ಸಿದ್ಧಪಡಿಸಿದ್ದಾರೆ. ಆದರೆ, ಈ ಪಟ್ಟಿ ಬಗ್ಗೆ ಹೈಕಮಾಂಡ್ ನಾಯಕರಿಗೆ ಅಷ್ಟಾಗಿ ಮನಸ್ಸಿಲ್ಲ. ಶತಾಯಗತಾಯ ಅತಿ ಹೆಚ್ಚು ಸೀಟ್‌ಗಳನ್ನು ಪಡೆಯಬೇಕು ಎಂಬ ಗುರಿಯನ್ನು ಹಾಕಿಕೊಂಡಿರುವ ಕಾಂಗ್ರೆಸ್‌ ದಿಲ್ಲಿ ನಾಯಕರು, ಇದಕ್ಕಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಲೆಕ್ಕಾಚಾರದಲ್ಲಿ ಇದ್ದಾರೆ. ಆದರೆ, ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಕೊರತೆ ಎದುರಾಗಿದೆ.

ಆ ಕ್ಷೇತ್ರಗಳು ಯಾವುವು?

  • ಬೆಳಗಾವಿ
  • ಬೀದರ್
  • ವಿಜಯಪುರ
  • ಬಳ್ಳಾರಿ
  • ತುಮಕೂರು
  • ಮೈಸೂರು
  • ಚಾಮರಾಜನಗರ
  • ಮಂಡ್ಯ
  • ಬೆಂಗಳೂರು ಉತ್ತರ.
  • ಬೆಂಗಳೂರು ದಕ್ಷಿಣ
  • ಬೆಂಗಳೂರು ಕೇಂದ್ರ
  • ಚಿಕ್ಕಮಗಳೂರು ಉಡುಪಿ
  • ಉತ್ತರ ಕನ್ನಡ
  • ದಕ್ಷಿಣ ಕನ್ನಡ

ಹೈಕಮಾಂಡ್ ಲಿಸ್ಟ್‌ನಲ್ಲಿ ಇರುವ ಸಚಿವರು?

  • ಮಹದೇವಪ್ಪ
  • ಜಮೀರ್ ಅಹಮದ್
  • ರಾಮಲಿಂಗಾರೆಡ್ಡಿ
  • ಕೃಷ್ಣಬೈರೇಗೌಡ
  • ಕೆ.ಎಚ್.‌ ಮುನಿಯಪ್ಪ
  • ಕೆ.ಎನ್.‌ ರಾಜಣ್ಣ
  • ನಾಗೇಂದ್ರ
  • ಈಶ್ವರ್ ಖಂಡ್ರೆ
  • ಸತೀಶ್ ಜಾರಕಿಹೊಳಿ
  • ಲಕ್ಷ್ಮೀ ಹೆಬ್ಬಾಳ್ಕರ್

ಇವರಿಗೆ ಇಲ್ಲ ಆಸಕ್ತಿ!

ಆದರೆ, ಸಚಿವರಿಗೆ ಲೋಕಸಭಾ ಚುನಾವಣೆ ಕಣಕ್ಕೆ ಇಳಿಯಲು ಅಷ್ಟಾಗಿ ಆಸಕ್ತಿ ಇಲ್ಲ ಎನ್ನಲಾಗಿದೆ. ಜತೆಗೆ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಅವರಿಗೂ ಈ ಬಗ್ಗೆ ಅಷ್ಟಾಗಿ ಆಸಕ್ತಿ ಇಲ್ಲ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ಸೋತರೆ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತದೆ ಎಂಬ ಕಾರಣವನ್ನೂ ಹಲವರು ನೀಡುತ್ತಿದ್ದಾರೆ.

ಹಿಂದೇಟಿಗೆ ಕಾರಣವೇನು?

ಲೋಕಸಭಾ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕಿಳಿಸಲು ಹೈಕಮಾಂಡ್‌ ಪ್ಲಾನ್ ಮಾಡಿದೆಯಾದರೂ ಸ್ಪರ್ಧೆಗೆ ಹಲವು ಸಚಿವರು ನಿರಾಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್‌ ನಿರ್ಧಾರವನ್ನು ಈಗಾಗಲೇ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಆದರೆ, ತಾವು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ನಾವು ಸೋತರೆ ವಿರೋಧ ಪಕ್ಷಗಳಿಗೆ ಆಹಾರವಾಗಬೇಕು ಎಂಬ ಕಾರಣವನ್ನು ಇಡುತ್ತಿದ್ದಾರೆ. ಹೀಗಾಗಿ ನೀವು ಪರ್ಯಾಯ ಅಭ್ಯರ್ಥಿಯನ್ನು ಹುಡುಕಿ ಕಣಕ್ಕಿಳಿಸುವುದೇ ಸೂಕ್ತ ಎಂದು ಹೇಳುತ್ತಿದ್ದಾರೆ.

ಕುಟುಂಬ ವರ್ಗಕ್ಕೆ ನೀಡಲು ಮನವಿ

ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಹೋದ್ಯೋಗಿಗಳ ಬೆಂಬಲಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಬೇಡ. ಇದು ವಿಪಕ್ಷಗಳಿಗೆ ಅಸ್ತ್ರವಾಗಲಿದೆ ಎಂದು ಹೇಳಿದ್ದಾರೆನ್ನಲಾಗಿದೆ.

ಇದನ್ನೂ ಓದಿ: Karnataka Weather : ಗುಡುಗು ಮಿಂಚು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

ಇನ್ನು ನಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಬೇರೆ ಸಂದೇಶ ರವಾನೆಯಾಗಲಿದೆ. ಫಲಿತಾಂಶ ವ್ಯತಿರಿಕ್ತವಾಗಿ ಬಂದಲ್ಲಿ ಇಲಾಖೆಯ ಮೇಲಿನ ಹಿಡಿತ ತಪ್ಪುತ್ತದೆ. ನಮ್ಮ ಸ್ಪರ್ಧೆ ಬದಲಿಗೆ ಕುಟುಂಬ ವರ್ಗಕ್ಕೆ ಇಲ್ಲವೇ, ನಾವು ಸೂಚಿಸಿದವರಿಗೆ ಟಿಕೆಟ್ ನೀಡಬೇಕು ಎಂದು ಮಂತ್ರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Suraj Revanna Case: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse)ದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna Case) ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಪ್ರತಿ ದೂರು

ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೋದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದಾರೆ.

Continue Reading

ಕರ್ನಾಟಕ

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Suraj Revanna Case: ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ. ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse) ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ತನ್ನ ಮೇಲೆ ಸೂರಜ್‌ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಶನಿವಾರ ತಡರಾತ್ರಿ 2 ಗಂಟೆಗೆ ಹೊಳೆನರಸೀಪುರ ಪೊಲೀಸರು ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಂತ್ರಸ್ತನ ಮನವಿ ಮೇರೆಗೆ ಹಾಸನದ ಬದಲು ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಸಂತ್ರಸ್ತ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನ ಎನ್ನುವ ಬಗ್ಗೆ ವೈದ್ಯರು ಪರೀಕ್ಷೆ ಮಾಡಲಿದ್ದಾರೆ. ಬಿಪಿ, ಶುಗರ್, ಇಸಿಜಿ, ದೇಹದ ಮೇಲೆ ಕಚ್ಚಿರುವ ಕಲೆಗಳ ಬಗ್ಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಯಲಿದೆ.

ತೀವ್ರ ವಿಚಾರಣೆ

ಪ್ರಕರಣದ ಸಂಬಂಧ ಇತ್ತ ಹಾಸನದಲ್ಲಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಳಿಕ ಹಾಸನ ನಗರದ ಸೆನ್ ಠಾಣೆಯಲ್ಲೇ ಸೂರಜ್‌ಗೆ ಮಲಗಲು ವ್ಯವಸ್ಥೆ ಮಾಡಲಾಯಿತು. ಇಂದು ಕೂಡ ವಿಚಾರಣೆ ಮುಂದುವರಿಯಲಿದೆ.

ಬಂಧನ ಸಾಧ್ಯತೆ

ಸೂರಜ್‌ ವಿರುದ್ಧ ಕೇಳಿ ಬಂದ ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತನ ವಿರುದ್ಧ ಸೂರಜ್‌ ಆಪ್ತ ದಾಖಲಿಸಿದ ಬ್ಲ್ಯಾಕ್‌ಮೇಲ್‌ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಸೂರಜ್ ವಿರುದ್ಧ ದೂರು ನೀಡಿರುವ ಸಂತ್ರಸ್ತನ ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಬಂಧನ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸೂರಜ್ ಬಂಧನವಾದರೆ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Suraj Revanna Case: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದ ಸೂರಜ್‌ ರೇವಣ್ಣ

ಏನಿದು ಪ್ರಕರಣ?

ಲೋಕಸಭಾ ಚುನಾವಣಾ ವೇಳೆ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನಾಗಿದ್ದ ಸಂತ್ರಸ್ತನನ್ನು ಪರಿಚಯ ಮಾಡಿಕೊಂಡು ಎಂಎಲ್‌ಸಿ ಸೂರಜ್‌ ಫೋನ್‌ ನಂಬರ್‌ ಪಡೆದುಕೊಂಡಿದ್ದರು. ಬಳಿಕ ಮನೆಗೆ ಕರೆಸಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತ ಹೇಳಿಕೆ ನೀಡಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Theft Case: ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ.

VISTARANEWS.COM


on

Mangalya chain was stolen by pretending to be a police in Shira
Koo

ಶಿರಾ: ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು (Theft Case) ಪರಾರಿಯಾಗಿರುವ ಘಟನೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಶುಕ್ರವಾರ ನಡೆದಿದೆ.

ತಾಲೂಕಿನ ಕಡವಿಗೆರೆ ಗ್ರಾಮದ ಅಶ್ವತ್ಥಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಗಳನ್ನು ತೆಗೆದುಕೊಂಡು ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗ ಹೋಗುತ್ತಿರುವ ವೇಳೆ ಪೊಲೀಸರು ಎಂದು ಹೇಳಿಕೊಂಡ ಇಬ್ಬರು ಅಪರಿಚಿತರು ಗಮನ ಬೇರೆಡೆಗೆ ಸೆಳೆದು ಅಶ್ವತ್ಥಮ್ಮ ಅವರ ಬಂಗಾರದ ಸರ ತೆಗೆಸಿ, ಪೇಪರ್ ಕವರ್‌ನಲ್ಲಿ ಹಾಕುವಂತೆ ತಿಳಿಸಿದ್ದರು. ಬಳಿಕ ಆ ಕವರನ್ನು ಅಶ್ವಥಮ್ಮ ಅವರ ಬ್ಯಾಗ್‌ನಲ್ಲಿರಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Murder Case: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ

ಅಲ್ಲಿಂದ ಸ್ವಲ್ಪ ದೂರ ತೆರಳಿದ್ದ ಅಶ್ವತ್ಥಮ್ಮ, ಬಳಿಕ ಬ್ಯಾಗ್‌ನಲ್ಲಿದ್ದ ಪೇಪರ್ ಕವರ್ ತೆಗೆದು ನೋಡಿದಾಗ ಆಘಾತ ಕಾದಿತ್ತು. ಪೇಪರ್ ಕವರ್‌ನಲ್ಲಿ ಚಿನ್ನದ ಮಾಂಗಲ್ಯ ಸರ ಇರಲಿಲ್ಲ. ಇದನ್ನು ಗಮನಿಸಿದ ತಕ್ಷಣವೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಬಂದು ನೋಡಿದಾಗ ವಂಚಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಅಶ್ವಥಮ್ಮ ನೀಡಿದ ದೂರಿನ ಮೇರೆಗೆ ಶಿರಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Share Market Scam
ಕ್ರೈಂ8 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ10 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ23 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ30 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ46 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್53 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ3 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌