BJP Protest: ತಾಕತ್‌ ಇದ್ದರೆ ನನ್ನ, ಬಿ.ಎಸ್.‌ ಯಡಿಯೂರಪ್ಪ ಅವರನ್ನು ಬಂಧಿಸಿ: ಸರ್ಕಾರಕ್ಕೆ ಆರ್. ಅಶೋಕ್‌ ಸವಾಲು - Vistara News

ಕರ್ನಾಟಕ

BJP Protest: ತಾಕತ್‌ ಇದ್ದರೆ ನನ್ನ, ಬಿ.ಎಸ್.‌ ಯಡಿಯೂರಪ್ಪ ಅವರನ್ನು ಬಂಧಿಸಿ: ಸರ್ಕಾರಕ್ಕೆ ಆರ್. ಅಶೋಕ್‌ ಸವಾಲು

BJP Protest: ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಮುಂಭಾಗ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.‌ ರವಿಕುಮಾರ್, ಸಂಸದ ಪಿ.ಸಿ. ಮೋಹನ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ವಶಕ್ಕೆ ಪಡೆದರು.

VISTARANEWS.COM


on

BJP protest against arrest of kara sevaks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದೆ ನಡೆದಿದ್ದ ಕರ ಸೇವಕರ (Kara Sevaks) ಪ್ರತಿಭಟನೆ ಕೇಸ್‌ ಅನ್ನು ರೀಓಪನ್‌ (Case Reopen) ಮಾಡಿ ಬಂಧನ ಮಾಡಿರುವ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಹಿನ್ನೆಲೆಯಲ್ಲಿ ನಾನು ಕರಸೇವಕ ನನ್ನನ್ನು ಬಂಧಿಸಿ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಮುಂಭಾಗ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok), ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.‌ ರವಿಕುಮಾರ್ (N Ravikumar), ಸಂಸದ ಪಿ.ಸಿ. ಮೋಹನ್ (MP PC Mohan) ನೇತೃತ್ವದಲ್ಲಿ ಭಾರಿ ಪ್ರತಿಭಟನೆ (BJP Protest) ನಡೆಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಮಮಂದಿರ ಹೋರಾಟದಲ್ಲಿ ನಾನು ಭಾಗಿಯಾಗಿದ್ದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕರಾಳ ಛಾಯೆ ಮೂಡಿಸಿದೆ. ರಾಮ ಭಕ್ತರನ್ನು ಹುಡುಕಿ ಹುಡುಕಿ ಅರೆಸ್ಟ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಕರ ಸೇವಕರು ಎಲ್ಲೆಲ್ಲಿ ಇದ್ದಾರೋ ಅವರನ್ನು ಹುಡುಕಿ ಜೈಲಿಗೆ ಹಾಕಿ ಎಂದಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಂಡಿದೆ. ಆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆಯಿಂದ ನೀಚತನಕ್ಕೆ ಇಳಿದಿದ್ದೀರಾ ಎಂದು ಪ್ರಶ್ನೆ ಮಾಡಿದರು.

R Ashok protest against arrest of kara sevaks

ತಾಕತ್ತು, ಧೈರ್ಯ ಇದ್ದರೆ ನನ್ನನ್ನು ಬಂಧಿಸಿ

ನಾನೂ ಕರ ಸೇವಕ. ತಾಕತ್ತು, ಧೈರ್ಯ ಇದ್ದರೆ ನನ್ನನ್ನು ಬಂಧಿಸಿ. ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಕೂಡಾ ಹೋರಾಟದಲ್ಲಿ ಭಾಗಿಯಾದವರು. ನಿಮಗೆ ಬಂಧಿಸಲು ತಾಕತ್ತು ಇದೆಯೇನ್ರೀ? ಕಾಂಗ್ರೆಸ್‌ನವರೇ ನಿಮಗೆ ನಾಚಿಕೆ ಆಗಲ್ವೇನ್ರೀ? ನಿಮ್ಮ ಎಲ್ಲ ಜೈಲುಗಳನ್ನು ಓಪನ್ ಮಾಡಿ ನಮ್ಮನ್ನೆಲ್ಲ ಅರೆಸ್ಟ್ ಮಾಡಿ ನೋಡೋಣ. ಕಾಂಗ್ರೆಸ್‌ನ ಕಾಮಾಲೆ ಕಣ್ಣಿಗೆ ಏನೂ ಕಾಣಿಸುವುದಿಲ್ಲ. ಒಂದು ಟೀಮ್ ಮಾಡಿಕೊಂಡು ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಜೈಲಿಗೆ ಹೋಗಿದ್ದರಲ್ಲವೇ ಅವರಿಗೆ ಏನು ಶಿಕ್ಷೆ ಕೊಡಬೇಕು? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಶಾಸಕ ಸುರೇಶ್‌ ಕುಮಾರ್‌ ಪ್ರತಿಭಟನೆ

ರಾಜಾಜಿನಗರ ಪೊಲೀಸ್‌ ಠಾಣೆ ಎದುರು ಶಾಸಕ ಸುರೇಶ್‌ ಕುಮಾರ್‌ ಪ್ರತಿಭಟನೆ ನಡೆಸಿದ್ದಾರೆ. “ನಾನು ಕರಸೇವಕ ನನ್ನನ್ನು ಬಂಧಿಸಿ” ಪ್ಲೆಕಾರ್ಡ್‌ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಹಿಂದು ವಿರೋಧಿ ಸರ್ಕಾರವಾಗಿದೆ. ಕರ್ನಾಟಕದಲ್ಲಿ ಹಿಂದುಗಳಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ನಾನು ಸಹ ಕರಸೇವಕನಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಸವಾಲು ಹಾಕಿದ್ದಾರೆ.

ಗುರುವಾರ (ಜ. 4) ಸುನಿಲ್ ಕುಮಾರ್ ಬೆಂಗಳೂರಿನ ಸದಾಶಿವ ನಗರದ ಠಾಣೆಯ ಬಳಿ ಪ್ರತಿಭಟನೆ ಮಾಡಿದ್ದರು. ಮಾಜಿ ಸಚಿವ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬಿಜೆಪಿ ರಾಜ್ಯಾದ್ಯಂತ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ. ಅಲ್ಲದೆ, ಈಗಾಗಲೇ ಬಂಧನಕ್ಕೊಳಗಾಗಿರುವ ಆರೋಪಿ ಶ್ರೀಕಾಂತ್‌ರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಏನಿದು ಪ್ರಕರಣ?

ಕರಸೇವೆಗೂ ಮುನ್ನ ಅಂದರೆ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿಯೂ ಗಲಾಟೆಗಳು ನಡೆದಿದ್ದವು. ಈ ವೇಳೆ ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Ram Janmabhoomi Case reopened after 31 years Search for Ayodhya activists in Hubballi

ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದು ಕಾರ್ಯಕರ್ತರು ಆ ವೇಳೆ ಕೆಲ ಕಾಲ ತಲೆಮರೆಸಿಕೊಂಡಿದ್ದರು. ಬಳಿಕ ಪ್ರಕರಣವು ಯಾವುದೇ ವಿಚಾರಣೆ ಕಾಣದೆ ಹಾಗೇ ಉಳಿದಿತ್ತು. ಪ್ರಕರಣ ತಿಳಿಯಾದಾಗ ಎಂದಿನಂತೆ ಎಲ್ಲರೂ ಮನೆಯಲ್ಲಿದ್ದರು.

30 ವರ್ಷದ ಹಳೇ ಕೇಸ್?

ಪ್ರಕರಣ ದಾಖಲಾದಾಗ ಆರೋಪಿತರು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ಈಗ 31 ವರ್ಷಗಳ ಹಳೇ ಪ್ರಕರಣಕ್ಕೆ ಹುಬ್ಬಳ್ಳಿ ಪೊಲೀಸರು ಜೀವ ಕೊಟ್ಟಿದ್ದಾರೆ. ಹೀಗಾಗಿ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ. 31 ವರ್ಷದ ಬಳಿಕ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.

Ayodhya activists in Hubballi

ಇದನ್ನೂ ಓದಿ: N Ravikumar: ಮಂಗಳೂರು ಮೀನು ಮಾರುಕಟ್ಟೆಗೆ ಎನ್.‌ ರವಿಕುಮಾರ್‌ ಭೇಟಿ; ಸಮಸ್ಯೆ ಹೇಳಿಕೊಂಡ ಮಹಿಳಾ ಮೀನುಗಾರರು

ಉಳಿದ ಆರೋಪಿಗಳಿಗೆ ಹುಡುಕಾಟ

ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ಪೊಲೀಸರು ಒಪ್ಪಿಸಿದ್ದರು. ಇನ್ನುಳಿದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ. ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿ ಹುಡುಕಾಟಕ್ಕೆ‌ ಪೊಲೀಸರು ಮುಂದಾಗಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ರಾಮ ಜನ್ಮಭೂಮಿ (Ram Janmabhoomi) ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿರುವ ಹೊತ್ತಿನಲ್ಲಿ ರಾಜ್ಯದಲ್ಲಿ ಈಗ ಕರಸೇವಕರ ಬಂಧನಕ್ಕೆ ಮುಂದಾಗಿರುವ ಪ್ರಕರಣವು ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Self Harming : ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಮನನೊಂದು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ.

VISTARANEWS.COM


on

By

Self Harming
Koo

ವಿಜಯನಗರ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ (Self Harming ) ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.

ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದರು.

ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮನ ಸಾವಿಗೆ ಯಾರು ಕಾರಣರಲ್ಲ ಎಂದು ಡೆತ್‌ನೋಟ್‌ ಸಿಕ್ಕಿದೆ.

ಸದ್ಯ ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಕೂಡ್ಲಿಗಿ ಶವಾಗಾರಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

ಮುಂಬೈ: ಪುಣೆ ಪೋರ್ಶ್‌ ಕಾರು ಹಿಟ್‌ ಆಂಡ್‌ ರನ್‌ ಕೇಸ್‌(Hit and Run Case) ಮಾಸುವ ಮುನ್ನವೇ ಮುಂಬೈನಲ್ಲೂ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ಮೀನು ತರಲೆಂದು ಮನೆಯಿಂದ ಹೊರಗೆ ಬಂದಿದ್ದ ದಂಪತಿಗೆ ಬಿಎಂಡಬ್ಲ್ಯೂ ಕಾರು(BMW Car) ಡಿಕ್ಕಿ ಹೊಡೆದಿದೆ. ಇನ್ನು ಕುಡಿದು ಕಾರು ಓಡಿಸಿದ ಚಾಲಕ ಘಟನೆ ಬಳಿಕ ಕಾರು ಸಮೇತ ಎಸ್ಕೇಪ್‌ ಆಗಿದ್ದಾನೆ. ಮುಂಬೈಯ ವರ್ಲಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ.

ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಶಿವಸೇನೆ ನಾಯಕನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌

ಇನ್ನು ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಾರನ್ನು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಪಾಲ್ಗರ್‌ ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ ಎಂಬುದು ಬಯಲಾಗಿದೆ. ರಾಜೇಶ್‌ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ. ಮಿಹಿರ್‌ ಮತ್ತು ಆತನ ಕಾರಿನ ಚಾಲಕ ಕಾರಿನಲ್ಲಿದ್ದರು ಎನ್ನಲಾಗಿದೆ.

ಮಿಹಿರ್‌ ನಾಪತ್ತೆ, ಪೊಲೀಸರ ಹುಡುಕಾಟ

ಇನ್ನು ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಸಿಎಂ ಪ್ರತಿಕ್ರಿಯೆ

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Land Dispute: ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

VISTARANEWS.COM


on

Land Dispute
Koo

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್‌ಕೆಇಐ) ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಜೆಸಿಬಿ ಸಮೇತ 93 ವರ್ಷ ಹಳೆಯ ಶಾಲೆಯ ಆವರಣಕ್ಕೆ ನುಗ್ಗಿ ಗೋಡೆಯನ್ನು (Land Dispute) ಕೆಡವಿದ್ದರಿಂದ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮರಿಯಾ ಎಲಿಜಬೆತ್, ಮೊಹಮ್ಮದ್ ಜಬಿ ಮತ್ತು ಜೆರಾರ್ಡ್ ಸ್ಟೀಫನ್ ಹ್ಯಾರಿ ಆರೋಪಿಗಳು. ಜುಲೈ 5ರಂದು ಸಂಜೆ ಘಟನೆ ನಡೆದಿದೆ. ಹ್ಯಾರಿ, ಎಲಿಜಬೆತ್ ಮತ್ತು ಜಬಿ, ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎಲಿಜಬೆತ್ ಮತ್ತು ಶಾಲಾ ಆಡಳಿತದ ನಡುವೆ 25 ವರ್ಷಗಳಿಂದ ಆಸ್ತಿ ವಿವಾದವಿದೆ ಎನ್ನಲಾಗಿದ್ದು, ಇದರಿಂದ ಘಟನೆ ನಡೆದಿದೆ ಎನ್ನಲಾಗಿದೆ. ಶಾಲಾ ಕ್ಯಾಂಪಸ್‌ನ ಒಂದು ಭಾಗ ತನಗೆ ಸೇರಿದೆ ಎಂದು ಎಲಿಜಬೆತ್ ಹೇಳಿದ್ದಾರೆ. ಆದರೆ ಶಾಲೆ ಆಡಳಿತ ಮಂಡಳಿ ಮಾತ್ರ ಕಾರ್ಪೊರೇಷನ್‌ನಿಂದ 10 ಎಕರೆ ಆಸ್ತಿಯನ್ನು ತಾವು ಖರೀದಿಸಿದ್ದೆವು ಎಂದು ಹೇಳುತ್ತಿದೆ.

ಈ ಬಗ್ಗೆ ಶಾಲೆಯ ಸಹಾಯಕ ಕಾರ್ಯದರ್ಶಿ ಅನುರಾಧಾ ಕೆ.ಪಿ ಅವರು ಪ್ರತಿಕ್ರಿಯಿಸಿ, ಶಾಲೆಯ ಆಡಳಿತ ಮಂಡಳಿಯು ಆಸ್ತಿಯ ಯಾವುದೇ ಹಕ್ಕುಗಳ ವಿರುದ್ಧ 2023ರಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದೆ. ಕೋರ್ಟ್‌ ತಡೆಯಾಜ್ಞೆ ನಡುವೆಯೂ ಎಲಿಜಬೆತ್ ಮತ್ತು ಅವರ ಗುಂಪು ಕ್ಯಾಂಪಸ್‌ ಅತಿಕ್ರಮಣ ಮಾಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಶಾಕಿಂಗ್‌ ಘಟನೆ! ಬುದ್ಧಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

Viral News

ಗುವಾಹಟಿ: ಈಗಿನ ಕಾಲ ಹೇಗಿದೆ ಅಂದ್ರೆ ಸಂಬಂಧಗಳು ನಿಧಾನವಾಗಿ ಮರೆಯಾಗಿ ಎಲ್ಲರೂ ಯಾಂತ್ರಿಕವಾಗಿ ಬದುಕುತ್ತಿರುವ ಹಂತಕ್ಕೆ ತಲುಪಿದ್ದೇವೆ. ಈ ಯಾಂತ್ರಿಕ ಜೀವನದಲ್ಲಿ ಅಪ್ಪ-ಅಮ್ಮ, ಗುರು-ಶಿಷ್ಯ ಹೀಗೆ ಇಂತಹ ಸಂಬಂಧಗಳ ಮೇಲೆ ಭಾವನಾತ್ಮಕ ಬಂಧವೇ ಇಲ್ಲದಂತಾಗಿದೆ. ಅದಕ್ಕೆ ಉದಾಹರಣೆ ಎನ್ನುವಂತೆ ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು(Stabbed) ಕೊಂದಿದ್ದಾನೆ. ಬುದ್ಧಿ ಹೇಳಿದ ಶಿಕ್ಷಕನಿಗೆ ತಿಳಿಗೇಡಿ ವಿದ್ಯಾರ್ಥಿ ಯಮನಾಗಿ ಎದುರುನಿಂತು ಪ್ರಾಣವನ್ನೇ ತೆಗೆದಿದ್ದಾನೆ(Viral News).

ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು.ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ನಿನ್ನೆ ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.

ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು. ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ.

ಇದನ್ನೂ ಓದಿ:Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ನಿನ್ನೆ ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಹೇಳಿದ್ದರು ಎನ್ನಲಾಗಿದೆ. ಇನ್ನು ಆರೋಪಿ ವಿದ್ಯಾರ್ಥಿ ತರಗತಿ ಮುಗಿಸಿ ಮನೆಗೆ ತೆರಳಿದ್ದ. ಇದಾದ ಕೆಲವೇ ಹೊತ್ತಲ್ಲಿ ಮತ್ತೆ ತರಗತಿಗೆ ಬಂದಿದ್ದಾನೆ. ಅವನು ತರಗತಿಗೆ ಪ್ರವೇಶಿಸಿದಾಗ, ಶಿಕ್ಷಕನು ಅವನನ್ನು ಮತ್ತೆ ಬೈಯಲು ಶುರು ಮಾಡಿದ್ದ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಹಪಾಠಿ ಹೇಳಿಕೊಂಡಿದ್ದಾನೆ.

Continue Reading

ರಾಯಚೂರು

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದ ಗ್ರಾಮಸ್ಥರು ಪಶು ಇಲಾಖೆಯ ಆಂಬ್ಯುಲೆನ್ಸ್‌ಗೆ ಹಾಕಿದ್ದಾರೆ. ಕಣ್ಮುಂದೆ ಇದ್ದ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ವಿಫಲರಾದರೂ, ರೊಚ್ಚಿಗೆದ್ದ ಗ್ರಾಮಸ್ಥರು ಚಿರತೆಯನ್ನು ಕೊಂದಿದ್ದಾರೆ.

VISTARANEWS.COM


on

By

leopard attack
Koo

ರಾಯಚೂರು: ಜಮೀನಿಗೆ ತೆರಳುತ್ತಿದ್ದ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಹಿಡಿದು ಗ್ರಾಮಸ್ಥರು ಹೊಡೆದು ಕೊಂದಿದ್ದಾರೆ. ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿತ್ತು.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ವೇಳೆ ಚಿರತೆ ಸೆರೆ ಸಿಗದ ಹಿನ್ನೆಲೆಯಲ್ಲೇ ಅಖಾಡಕ್ಕೆ ಇಳಿದ ಗ್ರಾಮಸ್ಥರೇ ಚಿರತೆ ಮೇಲೆ ದಾಳಿ ಮಾಡಿದ್ದರು. ಅರಣ್ಯ ಅಧಿಕಾರಿಗಳ ಎದುರೇ ಚಿರತೆಯನ್ನು ಕೊಂದು ಹಾಕಿದ್ದರು. ಇತ್ತ ಸ್ಥಳದಲ್ಲಿ ಸೇರಿದ್ದ ಸಾವಿರಾರು ಜನರನ್ನು ನಿಯಂತ್ರಿಸಲು ಆಗದೆ ಪೊಲೀಸರು ಹರಸಾಹಸ ಪಟ್ಟರು. ಮಾತ್ರವಲ್ಲದೇ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು.

ಚಿರತೆಯನ್ನು ಕೊಂದು ಪಶು ಆಂಬ್ಯುಲೆನ್ಸ್‌ಗೆ ತಂದು ಹಾಕಿದರು. ಅರಣ್ಯ ಹಾಗೂ ಪೊಲೀಸರ ಅಧಿಕಾರಿ ಮುಂದೆಯೇ ಚಿರತೆ ಬಲಿಯಾಯಿತು. ಚಿರತೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಅಸಹಾಯಕರಾಗಿದ್ದರು. ಸಂಜೆಯಾಗುತ್ತಿದ್ದಂತೆ ರೊಚ್ಚಿಗೆದ್ದ ಜನರು ಚಿರತೆಯನ್ನು ಕೊಂದಿದ್ದಾರೆ. ಸದ್ಯ ದೇವದುರ್ಗ ತಾಲೂಕು ಪಶು ಆಸ್ಪತ್ರೆಯಲ್ಲಿ ಚಿರತೆ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಚಿರತೆ ದಾಳಿಗೆ ಮೂವರು ಗಂಭೀರ

ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಜು.7ರ ಮುಂಜಾನೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿತ್ತು.

Leopard attack three in Raichur

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದರು. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಗಂಭೀರ ಗಾಯಗೊಂಡಿದ್ದ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿತ್ತು. ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿತ್ತು. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದರು. ಆದರೆ ಯಾವಾಗ ಕಣ್ಮುಂದೆ ಇದ್ದ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ವಿಫಲರಾದರೂ, ರೊಚ್ಚಿಗೆದ್ದ ಗ್ರಾಮಸ್ಥರು ಚಿರತೆಯನ್ನು ಹೊಡೆದು ಕೊಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Bomb Threat: ಗೆಳೆಯ ಬೆಂಗಳೂರಿನಿಂದ ಮುಂಬೈಗೆ ಹೋಗೋದನ್ನು ತಡೆಯುವ ಉದ್ದೇಶದಿಂದ ಯುವತಿ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು, ಆದರೆ, ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

bomb threat
Koo

ಬೆಂಗಳೂರು: ತನ್ನನ್ನು ಬಾಯ್‌ ಫ್ರೆಂಡ್‌ ಬಿಟ್ಟು ಹೋಗಬಾರದು ಎಂದು ಯುವತಿಯೊಬ್ಬಳು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ (hoax bomb threat call) ಕರೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಸಿ ಬಾಂಬ್ ಕರೆ (Bomb Threat) ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಯುವತಿ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾಳೆ.

ಪುಣೆ ಮೂಲದ ಇಂದ್ರ ರಾಜ್ವಾರ್ (29) ಆರೋಪಿ ಯುವತಿ. ಈಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಈಕೆಯ ಗೆಳೆಯ ಮೀರ್ ರಾಜಾ ಮೆಹ್ದಿ ಎಂಬಾತ ಬೆಂಗಳೂರಿನಿಂದ ಮುಂಬೈಗೆ ತೆರಳಲು ಏರ್‌ಪೋರ್ಟ್‌ಗೆ ಹೋಗಿದ್ದ. ಆದರೆ, ಆತ ತನ್ನನ್ನು ಬಿಟ್ಟು ಹೋಗಬಾರದು ಎಂದು ಯುವತಿ ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು. ಗೆಳೆಯನನ್ನು ತಡೆಯುವ ಉದ್ದೇಶದಿಂದ ಯುವತಿ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು, ಆದರೆ, ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

ವ್ಯಕ್ತಿಯೊಬ್ಬರ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದರಿಂದ ಸಿಬ್ಬಂದಿ ತಕ್ಷಣವೇ ಅಲರ್ಟ್‌ ಆಗಿ, ಮೀರ್ ರಾಜಾ ಮೆಹ್ದಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಆದರೆ ಯಾವುದೇ ಸ್ಫೋಟಕಗಳು ಕಂಡುಬರದ ಹಿನ್ನೆಲೆಯಲ್ಲಿ ಹುಸಿ ಬಾಂಬ್‌ ಬೆದರಿಕೆ ಬಂದಿದೆ ಎನ್ನುವುದು ತಿಳಿದುಬಂದಿದೆ.

ತನ್ನ ಗೆಳೆಯ ಮುಂಬೈ ವಿಮಾನ ಹತ್ತುವುದನ್ನು ತಡೆಯುವುದು ಆಕೆಯ ಉದ್ದೇಶವಾಗಿತ್ತು. ಆದರೆ, ಅದು ಉಲ್ಟಾ ಹೊಡೆದಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಜೂನ್ 26 ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏರ್‌ಪೋರ್ಟ್‌ನಲ್ಲಿ ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್‌ ಕರೆ ಮಾಡಿದ್ದ ಯುವತಿ ಇಂದ್ರ ರಾಜ್ವಾರ್ ಕೂಡ ಅಲ್ಲೇ ಇದ್ದದ್ದು ಕಂಡುಬಂದಿದೆ. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯುವತಿ ಮತ್ತು ಯುವಕ ಇಬ್ಬರೂ ಮುಂಬೈಗೆ ಪ್ರಯಾಣಿಸಲು ಆಗಮಿಸಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ಪ್ರತ್ಯೇಕವಾಗಿ ಟಿಕೆಟ್‌ ಕೂಡ ಬುಕ್‌ ಮಾಡಿದ್ದರು.

ಇದನ್ನೂ ಓದಿ | Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಯುವತಿ ಮತ್ತು ಮೆಹ್ದಿ ನಡುವೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು. ಹೀಗಾಗಿ ಮುಂಬೈಗೆ ಹೋಗುತ್ತಿದ್ದ ಯುವಕನನ್ನು ತಡೆಯಲು ಯುವತಿ ಏರ್‌ಪೋರ್ಟ್‌ ಸಹಾಯವಾಣಿಗೆ ಹುಸಿ ಬಾಂಬ್‌ ಕರೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Self Harming
ವಿಜಯನಗರ6 mins ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ10 mins ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ27 mins ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 202437 mins ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ39 mins ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Yogi Adityanath
ದೇಶ45 mins ago

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

leopard attack
ರಾಯಚೂರು49 mins ago

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Viral Video
ವೈರಲ್ ನ್ಯೂಸ್58 mins ago

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

bomb threat
ಕರ್ನಾಟಕ59 mins ago

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Puri Jagannath Yatra
ಧಾರ್ಮಿಕ1 hour ago

Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ1 hour ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ2 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ12 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌