ದಾವೂದ್‌ ಇಬ್ರಾಹಿಂ ಆಸ್ತಿ 2 ಕೋಟಿ ರೂ.ಗೆ ಹರಾಜು; ಖರೀದಿಸಿದ ಧೈರ್ಯವಂತ ಯಾರು? - Vistara News

ದೇಶ

ದಾವೂದ್‌ ಇಬ್ರಾಹಿಂ ಆಸ್ತಿ 2 ಕೋಟಿ ರೂ.ಗೆ ಹರಾಜು; ಖರೀದಿಸಿದ ಧೈರ್ಯವಂತ ಯಾರು?

ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಪೂರ್ವಜರಿಗೆ ಸೇರಿದ್ದ ಎರಡು ಆಸ್ತಿಗಳನ್ನು ಮುಂಬೈನಲ್ಲಿ ಹರಾಜು ಮಾಡಲಾಗಿದೆ. ದೆಹಲಿ ಮೂಲದ ವಕೀಲರೊಬ್ಬರು ಎರಡು ಕೋಟಿ ರೂ. ಕೊಟ್ಟು ಆಸ್ತಿ ಖರೀದಿಸುವ ಧೈರ್ಯ ಮಾಡಿದ್ದಾರೆ.

VISTARANEWS.COM


on

Dawood Ibrahim
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್‌ ವಾಂಟೆಡ್‌ ಉಗ್ರ ದಾವೂದ್‌ ಇಬ್ರಾಹಿಂ (Dawood Ibrahim) ಆಸ್ತಿಯನ್ನು ಶುಕ್ರವಾರ (ಜನವರಿ 5) ಹರಾಜು (Auction) ಮಾಡಲಾಗಿದೆ. ರತ್ನಗಿರಿ ಜಿಲ್ಲೆಯ ಖೇದ್‌ ತಾಲೂಕಿನ ಖೇದ್‌ ಗ್ರಾಮದಲ್ಲಿರುವ ಎರಡು ಕೃಷಿ ಜಮೀನುಗಳನ್ನು ಹರಾಜು ಮಾಡಲಾಗಿದೆ. ಸುಮಾರು 171 ಚದರ ಮೀಟರ್‌ ಇರುವ ಭೂಮಿಗೆ 15,440 ರೂ. ಮೂಲ ಬೆಲೆ ನಿಗದಿಪಡಿಸಲಾಗಿತ್ತು. ಆದರೆ ಇದು 2 ಕೋಟಿ ರೂ.ಗೆ ಮಾರಾಟವಾಗಿದೆ. ಮತ್ತೊಂದು ನಿವೇಶನವು 3.28 ಲಕ್ಷ ರೂ.ಗೆ ಮಾರಾಟವಾಗಿದೆ.

ಖರೀದಿ ಮಾಡಿದ ಧೈರ್ಯವಂತ ಯಾರು?

ಭಾರತದಿಂದ ಪರಾರಿಯಾಗಿ ವರ್ಷಗಳೇ ಕಳೆದರೂ ದೇಶದಲ್ಲಿ ದಾವೂದ್‌ ಇಬ್ರಾಹಿಂ ಎಂದರೆ ಭಯಪಡುವವರು ಇದ್ದಾರೆ. ಇದೇ ಕಾರಣಕ್ಕಾಗಿಯೇ ಮಹಾರಾಷ್ಟ್ರದಲ್ಲಿರುವ ದಾವೂದ್‌ ಇಬ್ರಾಹಿಂ ಆಸ್ತಿಯನ್ನು ಖರೀದಿಸಲು ಹೆಚ್ಚಿನ ಜನ ಮುಂದೆ ಬರುವುದಿಲ್ಲ. ಆದರೆ, ದೆಹಲಿ ಮೂಲದ ವಕೀಲ ಅಜಯ್‌ ಶ್ರೀವಾಸ್ತವ್‌ ಎಂಬುವರು ಮೂಲ ಬೆಲೆಗಿಂತ 300 ಪಟ್ಟು ಹೆಚ್ಚು ಬೆಲೆಗೆ ದಾವೂದ್‌ ಇಬ್ರಾಹಿಂ ಆಸ್ತಿಯನ್ನು ಖರೀದಿಸಿದ್ದಾರೆ. ಆ ಮೂಲಕ ಭೂಗತ ಪಾತಕಿಯ ಆಸ್ತಿಯನ್ನು ಖರೀದಿಸಿದ ಧೈರ್ಯವಂತ ಎನಿಸಿದ್ದಾರೆ. ನಾಲ್ಕು ಆಸ್ತಿಗಳಲ್ಲಿ ಎರಡು ಆಸ್ತಿಗಳನ್ನು ಖರೀದಿಸಲು ಯಾರೂ ಮುಂದೆ ಬಂದಿಲ್ಲ ಎಂದು ತಿಳಿದುಬಂದಿದೆ. ಸ್ಮಗ್ಲರ್ಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಮ್ಯಾನಿಪುಲೇಟರ್ಸ್‌ ಆ್ಯಕ್ಟ್‌ 1976 ಅಡಿಯಲ್ಲಿ ದಾವೂದ್‌ ಇಬ್ರಾಹಿಂನ ಈ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಇಷ್ಟು ದುಡ್ಡು ಕೊಟ್ಟು ಖರೀದಿಸಿದ್ದೇಕೆ?

ಸಂಖ್ಯಾಶಾಸ್ತ್ರದ ಪ್ರಕಾರ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ದಾವೂದ್‌ ಇಬ್ರಾಹಿಂ ಆಸ್ತಿಯನ್ನು ಎರಡು ಕೋಟಿ ರೂ. ಕೊಟ್ಟು ಖರೀದಿಸಿದ್ದೇನೆ ಎಂದು ಅಜಯ್‌ ಶ್ರೀವಾಸ್ತವ್‌ ಹೇಳಿದ್ದಾರೆ. “ನನ್ನ ಜನ್ಮದಿನಾಂಕ, ಪ್ಲಾಟ್‌ ಸರ್ವೇ ನಂಬರ್‌ ಹಾಗೂ ನಾನು ನೀಡಲು ಮುಂದಾಗಿರುವ ಬೆಲೆಯು ಸಂಖ್ಯಾಶಾಸ್ತ್ರದ ಪ್ರಕಾರ ನನಗೆ ಅನುಕೂಲಕರವಾಗಿದೆ. ಹಾಗಾಗಿ, ಇಷ್ಟೊಂದು ಮೊತ್ತ ಕೊಟ್ಟು ಖರೀದಿಸಿದ್ದೇನೆ” ಎಂದು ಹೇಳಿದ್ದಾರೆ. 2020ರಲ್ಲಿಯೂ ದಾವೂದ್‌ ಇಬ್ರಾಹಿಂನ ಮನೆಯನ್ನು ಅಜಯ್‌ ಶ್ರೀವಾಸ್ತವ್‌ ಖರೀದಿಸಿದ್ದರು.

1993ರ ಮುಂಬೈ ಸ್ಫೋಟದಿಂದ ಹಿಡಿದು 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಸೇರಿದಂತೆ ಹಲವು ಘೋರ ಅಪರಾಧಗಳ ಮಾಸ್ಟರ್ ಮೈಂಡ್ ಈತ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳ ಸಾಗಣೆ, ನಕಲಿ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲೂ ಭಾಗಿಯಾಗಿದ್ದ. ದಾವೂದ್ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, ಭಾರತ ಮತ್ತು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿವೆ. ಇಂಟರ್‌ಪೋಲ್‌ನ ರೆಡ್ ನೋಟಿಸ್ ಪಟ್ಟಿಯಲ್ಲಿಯೂ ಆತನ ಹೆಸರಿದ್ದು, ದಾವೂದ್‌ ತಲೆಗೆ 25 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಘೋಷಿಸಲಾಗಿದೆ.

ಇದನ್ನೂ ಓದಿ: Dawood Ibrahim: ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ; ಭಾರತದಲ್ಲಿ ಈತನ ಪಾತಕ ಕೃತ್ಯಗಳೇನು?

ದಾವೂದ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತಯ್ಬಾ (Lashkar-e-Taiba)ದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ ಅನೇಕ ನಕಲಿ ಪಾಸ್‌ಪೋರ್ಟ್‌ ಹೊಂದಿದ್ದಾನೆ ಮತ್ತು ಪದೇಪದೆ ತನ್ನ ವಾಸಸ್ಥಳವನ್ನು ಬದಲಾಯಿಸುತ್ತಾನೆ ಎಂದು ಊಹಿಸಲಾಗಿದೆ. ಈತ ಪಾಕಿಸ್ತಾನದ ಕರಾಚಿಯಲ್ಲಿ ಶೇಖ್ ದಾವೂದ್ ಹಸನ್ ಎಂಬ ಹೆಸರಿನಲ್ಲಿ ವಾಸಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದಷ್ಟೇ ದಾವೂದ್‌ ಇಬ್ರಾಹಿಂಗೆ ವಿಷಪ್ರಾಶನ ಮಾಡಿಸಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading

ವಾಣಿಜ್ಯ

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

ಫೋರ್ಬ್ಸ್‌ನ ವಿಶ್ವ ಬಿಲಿಯನೇರ್‌ಗಳ ಪಟ್ಟಿಯಲ್ಲಿ (Forbes World Billionaires List) ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಲೋರಿಯಲ್ ಉತ್ತರಾಧಿಕಾರಿ ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ ಸ್ಥಾನ ಪಡೆದಿದ್ದಾರೆ. ಉಳಿದ ಒಂಬತ್ತು ಮಂದಿ ಯಾರು ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತೇ?

VISTARANEWS.COM


on

By

Forbes World Billionaires List
Koo

ಫೋರ್ಬ್ಸ್‌ನ ವಿಶ್ವ ಬಿಲಿಯನೇರ್‌ಗಳ ಪಟ್ಟಿಯಲ್ಲಿ (Forbes World Billionaires List) ಅತ್ಯಂತ ಸಣ್ಣ ಪಾಲನ್ನು ಮಹಿಳೆಯರು (womens) ಪಡೆದಿದ್ದಾರೆ. ಈ ವರ್ಷ 2,781 ಬಿಲಿಯನೇರ್‌ಗಳಲ್ಲಿ (Billionaires) 369 ಅಂದರೆ ಶೇ. 13.3ರಷ್ಟು ಮಹಿಳೆಯರು ಬಿಲಿಯನೇರ್ ಗಳಾಗಿ (Women Billionaires) ಗುರುತಿಸಿಕೊಂಡಿದ್ದಾರೆ. 2023 ರಲ್ಲಿ 337 ರಿಂದ ಮಹಿಳೆಯರು ಈ ಪಟ್ಟಿಯಲ್ಲಿದ್ದರು. ಇವರ ಒಟ್ಟು ಆಸ್ತಿ ಮೌಲ್ಯ ಸುಮಾರು 1.8 ಲಕ್ಷ ಕೋಟಿ ಡಾಲರ್.. ಕಳೆದ ವರ್ಷಕ್ಕಿಂತ ಈ ಬಾರಿ ಸುಮಾರು 240 ಶತಕೋಟಿ ಡಾಲರ್ ಹೆಚ್ಚಾಗಿದೆ.

ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಲೋರಿಯಲ್ ಉತ್ತರಾಧಿಕಾರಿ ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ (Françoise Bettencourt Meyers) ಸ್ಥಾನ ಪಡೆದಿದ್ದಾರೆ. ಆಕೆಯ ಸಂಪತ್ತು ಕಳೆದ 12 ತಿಂಗಳುಗಳಲ್ಲಿ 19 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ. ಆಕೆಯ ನಿವ್ವಳ ಮೌಲ್ಯ 99.5 ಶತಕೋಟಿ ಡಾಲರ್ ಆಗಿದೆ. 100 ಶತಕೋಟಿ ಡಾಲರ್ ಕ್ಲಬ್‌ನ ಪ್ರವೇಶಸಿದ ಮೊದಲ ಮಹಿಳೆ ಎಂಬ ಖ್ಯಾತಿ ಇವರದಾಗಿದೆ.

ಎರಡು ದಶಕಗಳಿಗೂ ಹೆಚ್ಚು ಕಾಲ ಬೆಟೆನ್‌ಕೋರ್ಟ್ ನಂ. 1 ಸ್ಥಾನದಲ್ಲಿದ್ದಾರೆ. 2006 ರಿಂದ 2017 ರವರೆಗೆ ಆರು ವರ್ಷಗಳ ಕಾಲ ಪ್ರಶಸ್ತಿಯನ್ನು ಹೊಂದಿದ್ದ ಅವರ ತಾಯಿ ಲಿಲಿಯಾನ್ ಬೆಟೆನ್‌ಕೋರ್ಟ್ ಅವರ ಮರಣದ ಎರಡು ವರ್ಷಗಳ ಅನಂತರ 2019 ರಲ್ಲಿ ಬೆಟೆನ್‌ಕೋರ್ಟ್ ಮೇಯರ್ಸ್ ಮೊದಲ ಸ್ಥಾನವನ್ನು ಪಡೆದರು.

ವಾಲ್‌ಮಾರ್ಟ್ ಸಂಸ್ಥಾಪಕ ಸ್ಯಾಮ್ ವಾಲ್ಟನ್ ಅವರ ಏಕೈಕ ಪುತ್ರಿ ಆಲಿಸ್ ವಾಲ್ಟನ್ ಎರಡನೆಯ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಿಕೊಂಡಿದ್ದಾರೆ. 2018 ಮತ್ತು 2020 ರಲ್ಲಿ ಇವರು ಮೊದಲ ಸ್ಥಾನದಲ್ಲಿದ್ದರು.
ವಿಶ್ವದ 10 ಶ್ರೀಮಂತ ಮಹಿಳೆಯರಲ್ಲಿ ಒಂಬತ್ತು ಮಂದಿ ತಮ್ಮ ಆಸ್ತಿಯನ್ನು ತಂದೆ, ಗಂಡ ಅಥವಾ ತಾಯಿಯಿಂದ ಪಡೆದಿದ್ದಾರೆ. ವಿಚ್ಛೇದನದ ಬಳಿಕ ತಮ್ಮ ಅದೃಷ್ಟವನ್ನು ಬದಲಾಯಿಸಿಕೊಂಡ ಟಾಪ್ 10 ರಲ್ಲಿ ಸ್ಥಾನ ಪಡೆದಿರುವುದು ಮೆಕೆಂಜಿ ಸ್ಕಾಟ್ ಮಾತ್ರ.

35.6 ಶತಕೋಟಿ ಡಾಲರ್ ಮೌಲ್ಯದ ಜೆಫ್ ಬೆಜೋಸ್ ಅವರ ಮಾಜಿ ಪತ್ನಿ ಸ್ಕಾಟ್ ಅವರ ಮೌಲ್ಯ ಕಳೆದ ವರ್ಷದಿಂದ 11.2 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ. ಇವರು ಇತ್ತೀಚೆಗೆ 300 ಕ್ಕೂ ಹೆಚ್ಚು ಲಾಭೋದ್ದೇಶವಿಲ್ಲದವರಿಗೆ 640 ದಶಲಕ್ಷ ಡಾಲರ್ ದೇಣಿಗೆ ನೀಡಿದ್ದಾರೆ. ಇವರು ಇಷ್ಟೊಂದು ದಾನ ಮಾಡುವುದಲ್ಲದೇ ಇದ್ದರೆ ಒಟ್ಟು 69 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿರುತ್ತಿದ್ದರು. ಈ ಬಾರಿ ಇವರು ಐದನೇ ಸ್ಥಾನದಲ್ಲಿದ್ದಾರೆ.

ಟಾಪ್ 10ರಲ್ಲಿ ಇರುವವವರು


ಅಬಿಗೈಲ್ ಜಾನ್ಸನ್

ಇವರ ನಿವ್ವಳ ಮೌಲ್ಯ 29 ಶತಕೋಟಿ ಡಾಲರ್. ವಯಸ್ಸು 62. ಫಿಡೆಲಿಟಿ ಇನ್ವೆಸ್ಟ್‌ಮೆಂಟ್ಸ್ ನಲ್ಲಿ ಸಿಇಒ ಸ್ಥಾನದಲ್ಲಿರುವ ಇವರು . ಅಮೆರಿಕದವರಾದ ಇವರು ಈ ವರ್ಷ ಟಾಪ್ 10ನೇ ಶ್ರೀಮಂತ ಮಹಿಳೆಯಾಗಿದ್ದಾರೆ. ತಂದೆಯ ಬಳಿಕ ಇವರಿಗೆ ಈ ಅಧಿಕಾರ ಸಿಕ್ಕಿತ್ತು.

ಗಿನಾ ರೈನ್ಹಾರ್ಟ್

ಇವರ ನಿವ್ವಳ ಮೌಲ್ಯ 30.8 ಶತಕೋಟಿ ಡಾಲರ್. ವಯಸ್ಸು 70. ಆಸ್ಟ್ರೇಲಿಯಾದವರಾದ ಇವರು ಆಸ್ಟ್ರೇಲಿಯನ್ ಮ್ಯಾಗ್ನೆಟ್ ಗಣಿಗಾರಿಕೆ ಮತ್ತು ಕೃಷಿ ಕಂಪನಿ ಹ್ಯಾನ್ಕಾಕ್ ಪ್ರಾಸ್ಪೆಕ್ಟಿಂಗ್ ಗ್ರೂಪ್ ಅಧ್ಯಕ್ಷರಾಗಿದ್ದಾರೆ. ತಂದೆಯ ಬಳಿಕ ಇವರಿಗೆ ಈ ಸ್ಥಾನ ಪ್ರಾಪ್ತವಾಗಿದೆ. ಇವರು ವಿಶ್ವದ 9ನೇ ಶ್ರೀಮಂತ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ.

ಮಿರಿಯಮ್ ಅಡೆಲ್ಸನ್ ಮತ್ತು ಕುಟುಂಬ

ಎಂಟನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 32 ಶತಕೋಟಿ ಡಾಲರ್. ವಯಸ್ಸು 78. ಅಡೆಲ್ಸನ್ ಮತ್ತು ಅವರ ಕುಟುಂಬವು ವಿಶ್ವದ ಅತಿದೊಡ್ಡ ಕ್ಯಾಸಿನೊ ನಿರ್ವಾಹಕರಲ್ಲಿ ಒಂದಾದ ಲಾಸ್ ವೇಗಾಸ್ ಸ್ಯಾಂಡ್ಸ್‌ನ ಅರ್ಧಕ್ಕಿಂತ ಹೆಚ್ಚು ಮಾಲೀಕತ್ವವನ್ನು ಹೊಂದಿದೆ. ಪತಿಯ ಮರಣದ ಬಳಿಕ ಮಿರಿಯಮ್ ಪಾಲನ್ನು ಪಡೆದರು.

ರಾಫೆಲಾ ಅಪೊಂಟೆ-ಡಯಮಂಟ್

ಏಳನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 33.1 ಶತಕೋಟಿ ಡಾಲರ್. ವಯಸ್ಸು 79. ಸ್ವಿಟ್ಜರ್ಲೆಂಡ್ ನವರಾದ ಇವರು ಎಂಎಸ್ ಸಿ ಯ ಸಹಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಪತಿಯಿಂದ ಶೇ. 50ರಷ್ಟು ಪಾಲು ಪಡೆದರು. ಎಂಎಸ್ ಸಿಯ ಕಂಪನಿಯಲ್ಲಿ ರಾಫೆಲಾ ವಿಶ್ವದ ಅತಿದೊಡ್ಡ ಹಡಗುಗಳನ್ನು ಅಲಂಕರಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.


ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಆರನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 33.5 ಶತಕೋಟಿ ಡಾಲರ್. ವಯಸ್ಸು 74. ಉಕ್ಕು ಉದ್ಯಮದಲ್ಲಿರುವ ಇವರು ಭಾರತದ ಪೌರತ್ವವನ್ನು ಪಡೆದಿದ್ದಾರೆ. ಜಿಂದಾಲ್ ಗ್ರೂಪ್‌ನ ಅಧ್ಯಕ್ಷೆರಾಗಿರುವ ಈ ಇವರು ಓಂ ಪ್ರಕಾಶ್ ಜಿಂದಾಲ್ ಅವರ ಪತ್ನಿ. ಭಾರತದ ಅತ್ಯಂತ ಶ್ರೀಮಂತ ಮಹಿಳೆ. ಜಿಂದಾಲ್ ಗ್ರೂಪ್ ಉಕ್ಕು, ವಿದ್ಯುತ್, ಸಿಮೆಂಟ್ ಮತ್ತು ಮೂಲಸೌಕರ್ಯ ಒದಗಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ.

ಮ್ಯಾಕೆಂಜಿ ಸ್ಕಾಟ್

ಐದನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 35.6 ಶತಕೋಟಿ ಡಾಲರ್. ವಯಸ್ಸು 53. ಯು.ಎಸ್. ನವರಾದ ಇವರು 2019 ರಲ್ಲಿ ಜೆಫ್ ಬೆಜೋಸ್ ಅವರ ವಿಚ್ಛೇದನದ ಬಳಿಕ ಅಮೆಜಾನ್‌ ನಲ್ಲಿ ಶೇ. 4ರಷ್ಟು ಪಾಲನ್ನು ಪಡೆದರು.

ಜಾಕ್ವೆಲಿನ್ ಮಾರ್ಸ್

ನಾಲ್ಕನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 38.5 ಶತಕೋಟಿ ಡಾಲರ್. ವಯಸ್ಸು: 84. ಯುಎಸ್ ನವರಾದ ಇವರು ಕ್ಯಾಂಡಿ, ಸಾಕುಪ್ರಾಣಿಗಳ ಆಹಾರದಿಂದ ಆದಾಯ ಗಳಿಸುತ್ತಿದ್ದಾರೆ.
Mars Inc ನ ಉತ್ತರಾಧಿಕಾರಿ ಜಾಕ್ವೆಲಿನ್ ಮಾರ್ಸ್ ತನ್ನ ಸಹೋದರ ಜಾನ್ ಮಾರ್ಸ್ ಮತ್ತು ಇನ್ನೋರ್ವ ದಿವಂಗತ ಸಹೋದರ ಫಾರೆಸ್ಟ್ ಜೂನಿಯರ್ ಅವರ ನಾಲ್ಕು ಹೆಣ್ಣುಮಕ್ಕಳೊಂದಿಗೆ ಈ ಉದ್ಯಮ ನಡೆಸುತ್ತಿದ್ದಾರೆ. ಇವರ ಕಂಪೆನಿಯು M&Ms, Snickers, Ben’s Original ಮತ್ತು Pedigree ನಂತಹ ಸಾಂಪ್ರದಾಯಿಕ ಬ್ರ್ಯಾಂಡ್‌ಗಳನ್ನು ಹೊಂದಿದೆ. ಇದನ್ನು ಆಕೆಯ ಅಜ್ಜ ಫ್ರಾಂಕ್ ಸಿ. ಮಾರ್ಸ್ ಸ್ಥಾಪಿಸಿದ್ದರು.

ಜೂಲಿಯಾ ಕೋಚ್ ಮತ್ತು ಕುಟುಂಬ

ಮೂರನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 64.3 ಶತಕೋಟಿ ಡಾಲರ್. ವಯಸ್ಸು: 61. ಅಮೆರಿಕದವರಾದ ಇವರು ಎರಡನೇ ಸ್ಥಾನದಿಂದ ಮೂರನೇ ಸ್ಥಾನ ಕ್ಕೆ ಇಳಿದಿದ್ದಾರೆ. ಜೂಲಿಯಾ ತನ್ನ ಮೂವರು ಮಕ್ಕಳೊಂದಿಗೆ ಕೋಚ್ ಇಂಡಸ್ಟ್ರೀಸ್‌ನಲ್ಲಿ ಶೇ. 42ರಷ್ಟು ಪಾಲನ್ನು ಹೊಂದಿದ್ದಾರೆ. ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನ ಟ್ರಸ್ಟಿಯಾಗಿರುವ ಇವರು ತೈಲ ಸಂಸ್ಕರಣೆ ಮತ್ತು ಪೇಪರ್ ಟವೆಲ್‌ಗಳವರೆಗಿನ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Forbes India: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಖ್ಯಾತ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ

ಆಲಿಸ್ ವಾಲ್ಟನ್

ಎರಡನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 72.3 ಶತಕೋಟಿ ಡಾಲರ್. ವಯಸ್ಸು 74. ಅಮೆರಿಕದವರಾದ ಇವರು ವಾಲ್‌ಮಾರ್ಟ್‌ನ ಉದ್ಯಮದಲ್ಲಿದ್ದಾರೆ. ಅಮೆರಿಕದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಿಕೊಂಡಿರುವ ಇವರು ವಾಲ್ಮಾರ್ಟ್ ಸಂಸ್ಥಾಪಕ ಸ್ಯಾಮ್ ವಾಲ್ಟನ್ ಅವರ ಏಕೈಕ ಪುತ್ರಿ.


ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ ಮತ್ತು ಕುಟುಂಬ

ಫೋರ್ಬ್ ಪಟ್ಟಿಯಲ್ಲಿ ಮೊದಲನೇ ಸ್ಥಾನ ಗಳಿಸಿರುವ ಇವರ ನಿವ್ವಳ ಮೌಲ್ಯ 99.5 ಶತಕೋಟಿ ಡಾಲರ್. ವಯಸ್ಸು 70. ಫ್ರಾನ್ಸ್ ನವರಾದ ಇವರು ಲೋರಿಯಲ್ ಸಂಸ್ಥಾಪಕರ ಮೊಮ್ಮಗಳು. ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Continue Reading

ದೇಶ

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Delhi Temperature: ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ತಾಪಮಾನ ಹೆಚ್ಚಾದ ಕಾರಣ ಜನ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Delhi Temperature
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಇರುವುದೇ ಹಾಗೆ. ಮಳೆ ಬಂದರೆ ಅತಿಯಾದ ಮಳೆ, ಚಳಿಗಾಲದಲ್ಲಿ ವಿಪರೀತ ಚಳಿ ಹಾಗೂ ಬೇಸಿಗೆಯಲ್ಲಿ ವಿಪರೀತ ಬಿಸಿಲು. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಮಂಗೇಶ್‌ಪುರದಲ್ಲಿ (Mungeshpur) ಬುಧವಾರ (ಮೇ 29) ಮಧ್ಯಾಹ್ನ 2.30ರ ಸುಮಾರಿಗೆ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ (Delhi Temperature) ದಾಖಲಾಗಿದ್ದು, ದೇಶದ ಇತಿಹಾಸದಲ್ಲಿಯೇ ಗರಿಷ್ಠ ತಾಪಮಾನ ಇದಾಗಿದೆ ಎಂದು ತಿಳಿದುಬಂದಿದೆ. ಚುರುಗುಡುವ ಬಿಸಿಲು, ಮನೆಯಲ್ಲಿ ಕೂತರೂ ಬೆವರುವ ಪರಿಸ್ಥಿತಿ ಎದುರಾದ ಕಾರಣ ರಾಜಧಾನಿ ಜನ ಪರಿತಪಿಸುವಂತಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯತ್ತ ಉಷ್ಣಮಾರುತ ಅಪ್ಪಳಿಸುತ್ತಿದೆ. ಮಳೆಯೂ ಇಲ್ಲದ ಕಾರಣ ಬಿಸಿಲು ಮತ್ತಷ್ಟು ಜೋರಾಗಿದೆ. ನಿರೀಕ್ಷೆಗಿಂತ ಬರೋಬ್ಬರಿ 9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಾಗಿರುವುದು ಜನ ಹೈರಾಣಾಗುವಂತೆ ಮಾಡಿದೆ. ದೆಹಲಿಯಲ್ಲಿ 2002ರಲ್ಲಿ 49.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಆದರೀಗ, ತಾಪಮಾನವು 50 ಡಿಗ್ರಿ ಸೆಲ್ಸಿಯಸ್‌ ದಾಟಿರುವುದು ಜನರಿಗೆ ಚಿಂತೆಯಾಗಿದೆ. ತಾಪಮಾನದ ಕುರಿತು ದೆಹಲಿಯ ಹವಾಮಾನ ಇಲಾಖೆಯ ಕಚೇರಿಯು ಮಾಹಿತಿ ನೀಡಿದೆ.

ವಿದ್ಯುತ್‌ ಬೇಡಿಕೆಯಲ್ಲೂ ದಾಖಲೆ

ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ವಿದ್ಯುತ್‌ ಪೂರೈಕೆ ಕಂಪನಿಗಳ ಪ್ರಕಾರ ದೆಹಲಿಗೆ ನಿತ್ಯ 8,200 ಮೆಗಾ ವ್ಯಾಟ್‌ ವಿದ್ಯುತ್ ಬೇಕಾಗುತ್ತಿತ್ತು. ಆದರೆ, ತಾಪಮಾನ ಜಾಸ್ತಿಯಾದ ಕಾರಣ ಪ್ರತಿಯೊಂದು ಮನೆಯಲ್ಲೂ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿ ಬಳಸುತ್ತಿರುವ ಕಾರಣ ವಿದ್ಯುತ್‌ ಬೇಡಿಕೆಯೂ ದಾಖಲೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ನಜಾಫ್‌ಗಢ, ಮಂಗೇಶ್‌ಪುರ ಹಾಗೂ ನರೇಲಾದಲ್ಲಿ ಗುರುವಾರ 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಕನಿಷ್ಠ ಎಂಬಂತಾಗಿದೆ. ಇದರಿಂದಾಗಿ ಬಹುತೇಕ ನಗರಗಳಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಇನ್ನು ಹೆಚ್ಚು ಮರುಭೂಮಿ ಹೊಂದಿರುವ ರಾಜಸ್ಥಾನದ ಫಲೋಡಿಯಲ್ಲಿ ಗರಿಷ್ಠ 51 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಂಗಾಳ ಕೊಲ್ಲಿಯಿಂದ ತಂಪು ಗಾಳಿ ಬೀಸುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ತಾಪಮಾನ ನಿಯಮಿತವಾಗಿದೆ ಎಂದು ತಿಳಿದುಬಂದಿದೆ.

ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿ

ಗರಿಷ್ಠ ತಾಪಮಾನ ದಾಖಲಾಗುತ್ತಿರುವ ಕಾರಣ ದೆಹಲಿಯಲ್ಲಿ ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿಯಾಗುತ್ತಿವೆ ಎಂಬುದಾಗಿ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. “ಪ್ರತಿದಿನ ಅಗ್ನಿ ಅವಘಡಗಳ ಕುರಿತು ಸರಾಸರಿ 200ಕ್ಕೂ ಅಧಿಕ ಕರೆಗಳು ಬರುತ್ತಿವೆ. ಇದು ಕಳೆದ 10 ವರ್ಷಗಳಲ್ಲೇ ಗರಿಷ್ಠವಾಗಿದೆ. ಇನ್ನೂ ಒಂದು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೂ ಕರೆಗಳ ಸಂಖ್ಯೆ 250 ದಾಟಬಹುದು. ಹಾಗಾಗಿ, ದೆಹಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಯನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ” ಎಂದು ದೆಹಲಿ ಫೈರ್‌ ಡಿಪಾರ್ಟ್‌ಮೆಂಟ್‌ ನಿರ್ದೇಶಕ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Continue Reading

ವೈರಲ್ ನ್ಯೂಸ್

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Viral News: ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ಸದ್ಯ ವೈರಲ್‌ ಆಗಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಮೊಸಳೆ- ಈ ಹೆಸರು ಕೇಳಿದರೆ ಸಾಕು ದೈತ್ಯ ದೇಹ, ಚೂಪಾದ ಹಲ್ಲು, ಸದಾ ಬೇಟೆಯಾಡಲು ಹೊಂಚು ಹಾಕುತ್ತಿರುವ ದೃಶ್ಯವೇ ಕಣ್ಣ ಮುಂದೆ ಬರುತ್ತದೆ. ಮೃಗಾಲಯದಲ್ಲಿ ದೂರದಿಂದ ಮೊಸಳೆಯನ್ನು ನೋಡಿ ಅದರ ಅಗಾಧ ಶಕ್ತಿಗೆ ಬೆರಗಾಗುತ್ತೇವೆ. ಅದು ಬಿಟ್ಟು ಕೋಟಿ ರೂ. ಕೊಡುತ್ತೇವೆ ಎಂದರೆ ಯಾರೂ ಮೊಸಳೆ ಸಮೀಪಕ್ಕೆ ಸುಳಿಯುವ ದುಸ್ಸಾಹಸ ಮಾಡುವುದಿಲ್ಲ. ಹೀಗಿರುವಾಗ ನಗರದ ಮಧ್ಯೆ ದೈತ್ಯ ದೇಹಿ ಮೊಸಳೆ ಕಂಡು ಬಂದರೆ ಏನಾಗಬೇಡ? ಹೌದು, ಇಂತಹದ್ದೊಂದು ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ನೋಡಿ ನೆಟ್ಟಿಗರು ರೋಮಾಂಚನಗೊಂಡಿದ್ದಾರೆ (Viral News).

ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಅದು ನರೋರಾ ಘಾಟ್‌ನ ನರೋರಾ ಬ್ಯಾರೇಜ್. ಕಾಲುವೆ ಸುತ್ತಲೂ ಕಬ್ಬಿಣದ ಸರಳುಗಳ ಗೇಟ್‌ ಅಳವಡಿಸಲಾಗಿದೆ. ಹೇಗೋ ಗೇಟ್‌ ದಾಟಿ ಈಚೆ ಬಂದ ಮೊಸಳೆಯೊಂದು ಸಿಮೆಂಟ್‌ ನೆಲದ ಮೇಲೆ ಒದ್ದಾಡುತ್ತಿರುವುದನ್ನು ತೋರಿಸುವ ಮೂಲಕ ದೃಶ್ಯ ಆರಂಭವಾಗುತ್ತದೆ. ನೀರಿಗೆ ಹೋಗಲು ಆ ಗೇಟ್‌ ದಾಟಲು ಮೊಸಳೆ ಪ್ರಯತ್ನಿಸುತ್ತದೆ. ಸರಳು ಹತ್ತಿ ಇನ್ನೇನು ಆಚೆ ಜಿಗಿಯಬೇಕು ಎನ್ನುವಷ್ಟರಲ್ಲಿ ನಿಯಂತ್ರಣ ತಪ್ಪಿ ದೈತ್ಯ ದೇಹದೊಂದಿಗೆ ದೊಪ್ಪೆಂದು ಸಿಮೆಂಟ್‌ ನೆಲಕ್ಕೆ ಬೀಳುತ್ತದೆ. ಮತ್ತೂ ಕೂಡ ಅದು ತನ್ನ ಪ್ರಯತ್ನವನ್ನು ಬಿಡುವುದಿಲ್ಲ. ಗೇಟ್‌ ಆಚೆ ಹಾರಲು ಯತ್ನಿಸುತ್ತದೆ. ಅಲ್ಲೇ ಸಮೀಪದಲ್ಲಿರುವ ಅಧಿಕಾರಿಯೊಬ್ಬರು ದೊಣ್ಣೆ ಹಿಡಿದು ಮೊಸಳೆ ಜನರತ್ತ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಇದಿಷ್ಟು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಅದನ್ನು ಸುರಕ್ಷಿತವಾಗಿ ನೀರಿಗೆ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ಹೇಗಿತ್ತು?

ಈ ಮೊಸಳೆಯನ್ನು ನೀರಿಗೆ ಸಾಗಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹರ ಸಾಹಸವನ್ನೇ ಪಡಬೇಕಾಯಿತು. ಆರಂಭದಲ್ಲಿ ಅದರ ತಲೆಯನ್ನು ಬಟ್ಟೆಯಿಂದ ಮುಚ್ಚಿ ಅದರ ಕಾಲುಗಳನ್ನು ಹಗ್ಗದಿಂದ ಕಟ್ಟಲಾಯಿತು. ಬಳಿಕ ನಾಲ್ವರು ಅರಣ್ಯ ಅಧಿಕಾರಿಗಳು ಮೊಸಳೆಯ ತಲೆ ಮತ್ತು ಮುಂಭಾಗದ ಕಾಲುಗಳನ್ನು ಬಿಗಿದಿರುವ ಹಗ್ಗಗಳನ್ನು ಹಿಡಿದರು. ಈ ವೇಳೆ ಇನ್ನೊಬ್ಬ ಅಧಿಕಾರಿ ಅದರ ಹಿಂದಿನ ಕಾಲುಗಳಿಗೆ ಹಗ್ಗವನ್ನು ಸುತ್ತಿದರು. ಇಬ್ಬರು ಮೊಸಳೆಯ ಬಾಲವನ್ನು ಎತ್ತಿಕೊಂಡರು. ಹೀಗೆ ಕೆಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸುರಕ್ಷಿತವಾಗಿ ನೀರಿಗೆ ಬಿಡಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹುಲಿ-ಮೊಸಳೆ ಮಧ್ಯೆ ರಣ ರೋಚಕ ಕದನ; ಕೊನೆಯಲ್ಲಿ ಗೆದ್ದವರು ಯಾರು?

ಹಲವರು ವಿಡಿಯೊ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಪ ಮೊಸಳೆ ಹಸಿದಿರಬೇಕು. ಆಹಾರ ಅರಸಿಕೊಂಡು ಬಂದಿದೆ ಎಂದು ಹಲವರು ಕರುಣೆ ತೋರಿದ್ದಾರೆ. ಇನ್ನು ಕೆಲವರು ಇದು ಫೇಕ್‌ ವಿಡಿಯೊ, ಕೃತಕ ಬುದ್ಧಿಮತ್ತೆ ಬಳಸಿ ತಯಾರಿಸಲಾಗಿದೆ ಎಂದೂ ಹೇಳಿದ್ದಾರೆ. ಅದೇನೇ ಇರಲಿ ಇಷ್ಟು ದೈತ್ಯ ದೇಹಿ ಮೊಸಳೆ, ಅದರ ಸಾಹಸವನ್ನು ನೋಡಿ ಹಲವರು ರೋಮಾಂಚನಗೊಂಡಿದ್ದು ಸುಳ್ಳಲ್ಲ.

Continue Reading
Advertisement
Belagavi Tour
ಪ್ರವಾಸ3 seconds ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ13 mins ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ16 mins ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ22 mins ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

MLC Election North East Graduate Constituency Election 2024 total 24 183 graduate voters in the district
ಬಳ್ಳಾರಿ22 mins ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

Uttara Kannada DC Gangubai Manakar spoke in Vote counting training program at Kumta
ಉತ್ತರ ಕನ್ನಡ24 mins ago

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

LinkedIns Tips for Graduates in the Job Search
ಕರ್ನಾಟಕ27 mins ago

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

Star Fashion
ಫ್ಯಾಷನ್33 mins ago

Star Fashion: ಏನಿದು ನಟಿ ಶ್ರೀ ಲೀಲಾ ಧರಿಸಿ ಮಿಂಚಿದ್ದ ಘರಾರ ಡ್ರೆಸ್?

bitcoin scam
ಪ್ರಮುಖ ಸುದ್ದಿ43 mins ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ1 hour ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌