Yash Birthday: ಯಶ್‌ಗೆ ಅಡ್ವಾನ್ಸ್‌ ಬರ್ತ್‌ಡೇ ವಿಶ್ ಮಾಡಿದ ಶಿವಣ್ಣ; ಫ್ಯಾನ್ಸ್‌ ಫುಲ್‌ ಖುಷ್‌! - Vistara News

South Cinema

Yash Birthday: ಯಶ್‌ಗೆ ಅಡ್ವಾನ್ಸ್‌ ಬರ್ತ್‌ಡೇ ವಿಶ್ ಮಾಡಿದ ಶಿವಣ್ಣ; ಫ್ಯಾನ್ಸ್‌ ಫುಲ್‌ ಖುಷ್‌!

Yash Birthday: ನೆಚ್ಚಿನ ನಟನನ್ನು ನೋಡುವ ಕಾತುರದಲ್ಲಿದ್ದ ಅಭಿಮಾನಿಗಳಿಗೆ ರಾಕಿ ಭಾಯ್‌ಮೊನ್ನೆಯಷ್ಟೇ ಪತ್ರ ಬರೆದಿದ್ದರು. ನೂತನ ಚಿತ್ರಕ್ಕೆ (Yash 19 Movie Update) ಸಂಬಂಧಪಟ್ಟಂತೆ ಅನಿವಾರ್ಯವಾಗಿ ತಾವು ಈ ಬಾರಿಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಾರಣ ಹೇಳಿದ್ದರು.

VISTARANEWS.COM


on

Yash Birthday CDP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ಭರವಸೆಯ ನಟ ಎಂಬ ಖ್ಯಾತಿಯನ್ನು ಪಡೆದಿರುವ ಪ್ಯಾನ್‌ ಇಂಡಿಯಾ ಸಿನಿಮಾ ನಾಯಕ, ರಾಕಿಂಗ್‌ ಸ್ಟಾರ್‌ ಯಶ್‌ (Rocking Star Yash) ಅವರಿಗೆ ಜನವರಿ 8ಕ್ಕೆ ಹುಟ್ಟುಹಬ್ಬದ ಸಂಭ್ರಮ. ಆದರೆ ಯಶ್‌ ಈ ಬಾರಿ ಅಭಿಮಾನಿಗಳ ಜತೆ ಜನುಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಇಡೀ ಸ್ಯಾಂಡಲ್‌ವುಡ್ ನಟ ಯಶ್ ಸಪೋರ್ಟ್‌ಗೆ ನಿಂತಿದೆ. ಶಿವರಾಜ್‌ಕುಮಾರ್ ಯಶ್ ಹುಟ್ಟುಹಬ್ಬಕ್ಕೆ ‘ಸಿಡಿಪಿ’ ಕಾಮನ್ ʻಡಿಪಿ’ಯನ್ನು ರಿಲೀಸ್ ಮಾಡಿದ್ದಾರೆ. ಈ ಮೂಲಕ ಅಡ್ವಾನ್ಸ್‌ ಆಗಿ ಬರ್ತ್‌ಡೇ ವಿಶ್ ಮಾಡಿದ್ದಾರೆ.

ನೆಚ್ಚಿನ ನಟನನ್ನು ನೋಡುವ ಕಾತುರದಲ್ಲಿದ್ದ ಅಭಿಮಾನಿಗಳಿಗೆ ರಾಕಿ ಭಾಯ್‌ಮೊನ್ನೆಯಷ್ಟೇ ಪತ್ರ ಬರೆದಿದ್ದರು. ನೂತನ ಚಿತ್ರಕ್ಕೆ (Yash 19 Movie Update) ಸಂಬಂಧಪಟ್ಟಂತೆ ಅನಿವಾರ್ಯವಾಗಿ ತಾವು ಈ ಬಾರಿಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಾರಣ ಹೇಳಿದ್ದರು. ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ತಮಗೆ ಗಿಫ್ಟ್‌ ಎಂದು ಬರೆದುಕೊಂಡಿದ್ದರು ಟಾಕ್ಸಿಕ್‌ ಸಿನಿಮಾದ (Toxic movie) ಪ್ರಯುಕ್ತ ಬ್ಯುಸಿಯಾಗಿರುವುದಾಗಿ ಹೇಳಿದ್ದರು.

ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಯಶ್ ಅವರ ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹುಟ್ಟುಹಬ್ಬಕ್ಕೂ ಮೊದಲೇ ರಾಕಿಂಗ್ ಸ್ಟಾರ್‌ಗೆ ಸೆಂಚುರಿ ಸ್ಟಾರ್ ಗಿಫ್ಟ್ ನೀಡಿದ್ದಾರೆ. “ಯಶ್ ಹಾಗೂ ಅವರ ಎಲ್ಲಾ ಅಭಿಮಾನಿಗಳಿಗೂ ಶುಭಾಶಯಗಳು! CDP ತುಂಬಾ ಚೆನ್ನಾಗಿದೆ”ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಶಿವಣ್ಣ.

ಇದನ್ನೂ ಓದಿ: Yash Birthday: ಈ ಹುಟ್ಟುಹಬ್ಬಕ್ಕೂ ಇರಲ್ಲ ಯಶ್‌! ಪತ್ರ ಬರೆದ ರಾಕಿ ಭಾಯ್‌; ಅಭಿಮಾನಿಗಳಿಗೆ ಭಾರಿ ನಿರಾಸೆ

ಯಶ್‌ ಟಾಕ್ಸಿಕ್‌’ ಸಿನಿಮಾ ಅನೌನ್ಸ್‌ ಮಾಡಿದ್ದಾಗಿನಿಂದ (Yash 19 Movie Update) ಹೊಸ ಹೊಸ ಅಪ್‌ಡೇಟ್‌ಗಳು ಬರುತ್ತಲೇ ಇವೆ. ಯಶ್ ಕನ್ನಡ ಸಿನಿಮಾವನ್ನು ಗ್ಲೋಬಲ್ ಲೆವೆಲ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನೊಂದು ಇಂಟ್ರೆಸ್ಟಿಂಗ್ ವಿಷಯ ಅಂದರೆ, ‘ಟಾಕ್ಸಿಕ್’ ಸಿನಿಮಾವನ್ನು ಕೇವಲ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಅಷ್ಟೇ ನಿರ್ಮಾಣ ಮಾಡುತ್ತಿಲ್ಲ. ಕೆವಿನ್‌ ಸಂಸ್ಥೆಯ ವೆಂಕಟ್ ಕೆ. ನಾರಾಯಣ್ ಜತೆ ಯಶ್ ತಮ್ಮ ʻಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ʼ ಮೂಲಕ ಕೈ ಜೋಡಿಸಿದ್ದಾರೆ. ಹಾಗೇ ಚಿತ್ರದಲ್ಲಿ ಮಲಯಾಳಂ ಸ್ಟಾರ್‌ ನಟರೊಬ್ಬರು ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುಳಿವೂ ಕೂಡ ವೈರಲ್‌ ಆಗುತ್ತಿದೆ.

ಯಶ್ ಅವರ ಈ ಸಿನಿಮಾ ಬಜೆಟ್ ಬರೋಬ್ಬರಿ 170 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಈ ಬಗ್ಗೆ ಕೆವಿಎನ್ ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಇದರ ಜತೆಗೆ ಇನ್ನೊಂದು ಸುದ್ದಿ ಸಖತ್‌ ವೈರಲ್‌ ಆಗಿದೆ. ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಪೂರಕವಾಗಿ, ನಟ ತಮ್ಮ ಇನ್‌ಸ್ಟಾದಲ್ಲಿ ಫಸ್ಟ್‌ ಲುಕ್‌ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಜೋಕರ್‌ ಪಾತ್ರದಲ್ಲಿ ಏನಾದರೂ ಟೊವಿನೋ ಥಾಮಸ್ ಕಾಣಿಸಿಕೊಳ್ಳಲಿದ್ದಾರಾ ಎಂದು ಕಮೆಂಟ್‌ ಮಾಡಿದ್ದಾರೆ. ಜೋಕರ್ ಝಲಕ್‌ನ ಮಾತ್ರ ಟೊವಿನೋ ಥಾಮಸ್ ಹಂಚಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

ಭಾರತ, ಮಲೇಷ್ಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಯುಕೆ, ಯೂರೋಪ್ ಸೇರಿದಂತೆ ಹಲವೆಡೆ ಟೈಟಲ್ ರಿವೀಲ್ ಆಗಿದೆ. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಕೂಡ ಕನ್ಫರ್ಮ್ ಆಗಿದೆ. ಗೀತು ಮೋಹನ್​ದಾಸ್​ ಕಲ್ಪನೆಯ ಕತೆಗೆ ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. 2025ರ ಏಪ್ರಿಲ್‌ 10ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್‌ ಆಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

Kanguva Release Date: ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

VISTARANEWS.COM


on

Kanguva Release Date announce and clshes with dhruva sarja Martin
Koo

ಬೆಂಗಳೂರು: ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

Continue Reading

ಟಾಲಿವುಡ್

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Actor Darshan: ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ. 2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan incident Naga Shaurya support
Koo

ಬೆಂಗಳೂರು: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ.

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

South Cinema

Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Kalki 2898 AD: ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ.

VISTARANEWS.COM


on

Kalki 2898 AD Nag Ashwin Torn Slippers Dedication Behind
Koo

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD (Kalki 2898 AD:), ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ. ಈ ಚಿತ್ರದ ಜರ್ನಿ ಹೇಗಿತ್ತು ಎಂಬುದನ್ನು ಒಂದೇ ಒಂದು ಫೋಟೋ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ವಿವರಿಸಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ.

ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ನಾಗ್ ಅಶ್ವಿನ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ. ‘ಇದು ತುಂಬಾನೇ ದೀರ್ಘ ರಸ್ತೆ’ ಎಂದು ಬರೆದುಕೊಂಡಿದ್ದಾರೆ. ಈ ಚಪ್ಪಲಿ ಒಂದಷ್ಟು ಕಡೆಗಳಲ್ಲಿ ಹರಿದು ಹೋಗಿದೆ. ಈ ಮೂಲಕ ತಮ್ಮ ಶ್ರಮದ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಈ ಫೋಟೊ ಶೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅನೇಕರು ನಾಗ್ ಅಶ್ವಿನ್ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಟಾಲಿವುಡ್

Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

Kalki 2898 AD: ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Kalki 2898 AD Box Office Day Prabhas Film Indian Opener Earns 180 Crore
Koo

ಬೆಂಗಳೂರು: ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ (Kalki 2898 AD) ಮತ್ತು ಕಮಲ್ ಹಾಸನ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಸಿನಿಮಾ ಭಾರತದಲ್ಲಿ 95 ಕೋಟಿ ರೂಪಾಯಿ ಬಾಚಿಕೊಂಡಿದೆ. ಗ್ರಾಸ್ ಕಲೆಕ್ಷನ್ ಲೆಕ್ಕಾಚಾರ ಕೊಟ್ಟರೆ 115 ಕೋಟಿ ರೂಪಾಯಿ ಆಗುತ್ತದೆ.

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

ಲ್ಕಿಯ ಆಗಮನವು ಹಿಂದೂಗಳಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಈತ ಕಲಿಯುಗದ ಅಂತ್ಯದಲ್ಲಿ ಕಾಣಿಸಿಕೊಳ್ಳುತ್ತಾನೆ ಎಂದೇ ಭಾವಿಸಲಾಗಿದೆ. ಕಲಿಯುಗ ವಂಚನೆ, ಪಾಪ ಮತ್ತು ಅನೈತಿಕತೆಯಿಂದ ತುಂಬಿರುವ ಯುಗವಾಗಿದೆ. ಇದೀಗ ತೆರೆಗೆ ಬಂದಿರುವ ‘ಕಲ್ಕಿ 2898 ಎಡಿ’ ಈ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ತೆಲುಗು ಸೂಪರ್‌ಸ್ಟಾರ್ ಪ್ರಭಾಸ್, ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ತಮಿಳಿನ ಹಿರಿಯ ನಟ ಕಮಲ್ ಹಾಸನ್ ಒಳಗೊಂಡ ಈ ಚಿತ್ರದಲ್ಲಿ ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಅದ್ಭುತವಾಗಿ ನಿರ್ಮಿಸಲಾಗಿದೆ. ನಾಗ್ ಅಶ್ವಿನ್ ನಿರ್ದೇಶನದ ಬಹುತೇಕ ಎಲ್ಲಾ ಪ್ರಮುಖ ಪಾತ್ರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಗುರುತಿಸಬಹುದು. ಟ್ರೇಲರ್‌ನಲ್ಲಿ ಭವಿಷ್ಯ ನುಡಿದ ಕಲ್ಕಿಯ ಗುರುತಿನ ಬಗ್ಗೆ ಅಶ್ವಿನ್ ಯಾವುದೇ ಸುಳಿವು ನೀಡಲಿಲ್ಲ.

Continue Reading
Advertisement
UGC NET Exam
ದೇಶ3 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ3 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ3 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ5 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ5 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ5 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ6 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ6 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ6 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌